Author: kannadanewsnow57

ತೆಹ್ರಾನ್: ಇರಾನ್‌ನ ಸುಪ್ರೀಂ ಲೀಡರ್ ಆಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯ ಬೆನ್ನಲ್ಲೇ, ಇರಾನ್ ಮತ್ತು ಇಸ್ರೇಲ್-ಅಮೆರಿಕ ನಡುವಿನ ಸಂಘರ್ಷ ತಾರಕಕ್ಕೇರಿದೆ. ಈ ಘಟನೆಯ ಪ್ರತೀಕಾರವಾಗಿ ಇರಾನ್‌ನ ಪವಿತ್ರ ನಗರವಾದ ‘ಕೊಮ್’ನಲ್ಲಿರುವ ಪ್ರಸಿದ್ಧ ಜಮ್ಕಾರನ್ ಮಸೀದಿಯ ಗುಮ್ಮಟದ ಮೇಲೆ ಕೆಂಪು ಬಾವುಟ ಹಾರಿಸಲಾಗಿದೆ. ಏನಿದು ಕೆಂಪು ಬಾವುಟದ ಅರ್ಥ? ಇರಾನ್ ಸಂಪ್ರದಾಯದಲ್ಲಿ ಮಸೀದಿಯ ಮೇಲೆ ಕೆಂಪು ಬಾವುಟ ಹಾರಿಸುವುದು ಅತ್ಯಂತ ಗಂಭೀರ ಸಂಕೇತವಾಗಿದೆ. ಇದನ್ನು “ಪ್ರತೀಕಾರದ ಸಂಕೇತ” (Flag of Revenge) ಎಂದು ಕರೆಯಲಾಗುತ್ತದೆ. ಅನ್ಯಾಯವಾಗಿ ಹತ್ಯೆಯಾದವರ ರಕ್ತಕ್ಕೆ ನ್ಯಾಯ ಸಿಗುವವರೆಗೆ ಮತ್ತು ಅದರ ಸೇಡು ತೀರಿಸಿಕೊಳ್ಳುವವರೆಗೆ ಈ ಬಾವುಟವನ್ನು ಇಳಿಸುವುದಿಲ್ಲ. ಈ ನಡೆ ಮಧ್ಯಪ್ರಾಚ್ಯದಲ್ಲಿ ಮತ್ತೊಂದು ಮಹಾಯುದ್ಧದ ಮುನ್ಸೂಚನೆಯೇ ಎಂಬ ಆತಂಕ ಸೃಷ್ಟಿಸಿದೆ. ಹತ್ಯೆ ನಡೆದಿದ್ದು ಹೇಗೆ? ಕಳೆದ ಶನಿವಾರ ಇರಾನ್ ರಾಜಧಾನಿ ತೆಹ್ರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ನಡೆಸಿದ ವೈಮಾನಿಕ ದಾಳಿಯಲ್ಲಿ ಖಮೇನಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಭಾನುವಾರ ಇರಾನ್ ಸರ್ಕಾರಿ ಮಾಧ್ಯಮಗಳು ಈ ಸುದ್ದಿಯನ್ನು…

Read More

ಮಾಸ್ಕೋ: ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ದಾಳಿಯ ನಂತರ ಜಾಗತಿಕ ರಾಜಕೀಯದಲ್ಲಿ ಸಂಚಲನ ಸೃಷ್ಟಿಯಾಗಿದೆ. ಈ ಬೆನ್ನಲ್ಲೇ ರಷ್ಯಾ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ತಕ್ಷಣವೇ ಯುದ್ಧ ನಿಲ್ಲಿಸುವಂತೆ ಮತ್ತು ರಾಜತಾಂತ್ರಿಕತೆಯ ಮೂಲಕ ಸಮಸ್ಯೆಯನ್ನು ಬಗೆಹರಿಸಿಕೊಳ್ಳುವಂತೆ ಸೂಚಿಸಿದೆ. ಈ ದಾಳಿಯ ಬೆನ್ನಲ್ಲೇ ಇರಾನ್ ಕೂಡ ತಿರುಗೇಟು ನೀಡಿದ್ದು, ಇಸ್ರೇಲ್ ಮತ್ತು ನೆರೆಯ ರಾಷ್ಟ್ರಗಳಲ್ಲಿರುವ ಅಮೆರಿಕದ ನೆಲೆಗಳ ಮೇಲೆ ದಾಳಿ ನಡೆಸಿದೆ. ಇಸ್ರೇಲ್-ಅಮೆರಿಕ ಜಂಟಿಯಾಗಿ ನಡೆಸಿದ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ ಎಂಬ ಸುದ್ದಿ ಇಡೀ ಮಧ್ಯಪ್ರಾಚ್ಯದಲ್ಲಿ ಕಿಚ್ಚು ಹಚ್ಚಿದೆ. ರಷ್ಯಾದಿಂದ ತೀವ್ರ ಆಕ್ರೋಶ (ಪುಟಿನ್ ಹೇಳಿಕೆ) ರಷ್ಯಾದ ವಿದೇಶಾಂಗ ಸಚಿವಾಲಯವು ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, “ನಾವು ತಕ್ಷಣದ ಉದ್ವಿಗ್ನತೆಯನ್ನು ಕಡಿಮೆ ಮಾಡಲು, ಹಗೆತನವನ್ನು ಕೊನೆಗೊಳಿಸಲು ಮತ್ತು ವಿಶ್ವಸಂಸ್ಥೆಯ ಚಾರ್ಟರ್ ಹಾಗೂ ಪರಮಾಣು ಶಸ್ತ್ರಾಸ್ತ್ರಗಳ ತಡೆ ಒಪ್ಪಂದದ (NPT) ಆಧಾರದ ಮೇಲೆ ರಾಜಕೀಯ ಪ್ರಕ್ರಿಯೆಗೆ ಮರಳಲು ಕರೆ ನೀಡುತ್ತೇವೆ” ಎಂದು ತಿಳಿಸಿದೆ. ಅಮೆರಿಕ…

Read More

ನವದೆಹಲಿ: ಮಧ್ಯಪ್ರಾಚ್ಯ ದೇಶಗಳಲ್ಲಿ ಉಂಟಾಗಿರುವ ಯುದ್ಧದಂತಹ ಪರಿಸ್ಥಿತಿ ಮತ್ತು ಭದ್ರತಾ ಕಾರಣಗಳಿಂದಾಗಿ, ಏರ್ ಇಂಡಿಯಾ ಸಂಸ್ಥೆಯು ಯುನೈಟೆಡ್ ಅರಬ್ ಎಮಿರೇಟ್ಸ್ (UAE), ಸೌದಿ ಅರೇಬಿಯಾ, ಇಸ್ರೇಲ್ ಮತ್ತು ಕತಾರ್ ದೇಶಗಳಿಗೆ ತನ್ನ ವಿಮಾನ ಹಾರಾಟದ ಸ್ಥಗಿತವನ್ನು ಮಾರ್ಚ್ 2, 2026 ರ ಮಧ್ಯರಾತ್ರಿಯವರೆಗೆ ವಿಸ್ತರಿಸಿದೆ. ಪಶ್ಚಿಮ ಏಷ್ಯಾದ ಆಕಾಶಮಾರ್ಗದಲ್ಲಿ ಎದುರಾಗಿರುವ ಅನಿಶ್ಚಿತತೆಯಿಂದಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಇದು ಕೇವಲ ಮಧ್ಯಪ್ರಾಚ್ಯಕ್ಕೆ ಮಾತ್ರವಲ್ಲದೆ ಯುರೋಪ್ ಮಾರ್ಗಗಳ ಮೇಲೂ ಪರಿಣಾಮ ಬೀರಿದೆ. https://twitter.com/airindia/status/2028139301981295100?s=20

Read More

ಬಳ್ಳಾರಿ : ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಪ್ರಚಲಿತದಲ್ಲಿರುವ ಅಸ್ಥಿರ ಪರಿಸ್ಥಿತಿಯಿಂದಾಗಿ ಅಂತರಾಷ್ಟ್ರೀಯ ವಿಮಾನಯಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯ ಸಾರ್ವಜನಿಕರ ಹಿತದೃಷ್ಟಿಯಿಂದ ಜಿಲ್ಲಾಡಳಿತವು ಈ ಕೆಳಗಿನ ಮಾಹಿತಿಯನ್ನು ಹಂಚಿಕೊಂಡಿದೆ. ವೈಮಾನಿಕ ನಿರ್ಬಂಧ ಮತ್ತು ಪ್ರಚಲಿತ ಸ್ಥಿತಿ ಇರಾನ್, ಇಸ್ರೇಲ್, ಲೆಬನಾನ್, ಸೌದಿ ಅರೇಬಿಯಾ ಸೇರಿದಂತೆ ಒಟ್ಟು 11 ದೇಶಗಳ ವೈಮಾನಿಕ ಮಾರ್ಗಗಳನ್ನು (Airspace) ಮಾರ್ಚ್ 2ರವರೆಗೆ ಮುಚ್ಚಲಾಗಿದೆ. ಈ ಅನಿರೀಕ್ಷಿತ ಅಡಚಣೆಯಿಂದಾಗಿ ಹಾಗೂ ಕರ್ನಾಟಕದ ಅನೇಕ ಪ್ರಯಾಣಿಕರು ಯುಎಇ (ದುಬೈ) ಸೇರಿದಂತೆ ವಿವಿಧ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಸಿಲುಕಿಕೊಂಡಿದ್ದಾರೆ. ಜಿಲ್ಲಾಡಳಿತದ ಕ್ರಮಗಳು : ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರ ನಿರ್ದೇಶನದಂತೆ, ರಾಜ್ಯ ಮತ್ತು ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರ 24×7 ಕಾರ್ಯನಿರ್ವಹಿಸುತ್ತಿವೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ಭಾರತೀಯ ರಾಯಭಾರಿ ಕಚೇರಿಗಳು ನೀಡುವ ಸೂಚನೆಗಳನ್ನು ಜಿಲ್ಲಾಡಳಿತವು ನಿರಂತರವಾಗಿ ಗಮನಿಸುತ್ತಿದೆ. ಸಹಾಯವಾಣಿ ಸಂಖ್ಯೆಗಳಿಗೆ ಬಳ್ಳಾರಿ ಜಿಲ್ಲೆಯ ನಿವಾಸಿಗಳು ಅಥವಾ ಅವರ ಸಂಬಂಧಿಕರು ಹೆಚ್ಚಿನ ಮಾಹಿತಿಗಾಗಿ ಮತ್ತು ಸಹಾಯಕ್ಕಾಗಿ ಸಂಪರ್ಕಿಸಬಹುದು: ಬಳ್ಳಾರಿ…

Read More

ಬೆಂಗಳೂರು : ಈ ಬಾರಿಯ ಬೇಸಿಗೆಯು ಸಾಮಾನ್ಯಕ್ಕಿಂತ ಹೆಚ್ಚು ಕಠಿಣವಾಗಿರಲಿದ್ದು, ತೀವ್ರವಾದ ಬಿಸಿಗಾಳಿ ಬೀಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಈ ಕುರಿತು ಇಲಾಖೆಯ ಮಹಾನಿರ್ದೇಶಕರಾದ ಮೃತ್ಯುಂಜಯ ಮಹಾಪಾತ್ರ ಅವರು ಮಾಹಿತಿ ನೀಡಿದ್ದು, ಬೇಸಿಗೆಯ ಮೊದಲ ತಿಂಗಳಾದ ಮಾರ್ಚ್‌ನಲ್ಲಿಯೇ ದೇಶದ ಬಹುತೇಕ ಭಾಗಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಿರಲಿದೆ.ಮಾರ್ಚ್ ಮತ್ತು ಮೇ ತಿಂಗಳ ಅವಧಿಯಲ್ಲಿ ವಾಡಿಕೆಗಿಂತ ಅತಿ ಹೆಚ್ಚಿನ ಉಷ್ಣಾಂಶ ದಾಖಲಾಗುವ ಸಾಧ್ಯತೆಯಿದೆ ಎಂದು ಶನಿವಾರ ಬಿಡುಗಡೆ ಮಾಡಿದ ಮುನ್ಸೂಚನೆಯಲ್ಲಿ ತಿಳಿಸಲಾಗಿದೆ. ಕೇವಲ ತಾಪಮಾನ ಏರಿಕೆ ಮಾತ್ರವಲ್ಲದೆ, ಈ ವರ್ಷ ಬಿಸಿಗಾಳಿಯ (Heatwave) ಪ್ರಭಾವವೂ ಹೆಚ್ಚಿರಲಿದೆ. ಕಳೆದ ಫೆಬ್ರವರಿ ತಿಂಗಳಿನಲ್ಲಿ ಕನಿಷ್ಠ ಮತ್ತು ಗರಿಷ್ಠ ತಾಪಮಾನಗಳೆರಡೂ ವಾಡಿಕೆಗಿಂತ ಹೆಚ್ಚಾಗಿದ್ದವು. ಇದು 1901 ರಿಂದೀಚೆಗೆ ದಾಖಲಾದ ಅಂಕಿಅಂಶಗಳ ಆಧಾರದ ಮೇಲೆ ಗಮನಾರ್ಹ ಏರಿಕೆಯಾಗಿದೆ ಎಂದು ಇಲಾಖೆ ತಿಳಿಸಿದೆ. ಸಾರ್ವಜನಿಕರು ಬಿಸಿಲಿನ ತಾಪಮಾನದಿಂದ ಹೇಗೆ ರಕ್ಷಿಸಿಕೊಳ್ಳಬೇಕು ಮತ್ತು ಬಿಸಿಲಿನ ಬೇಗೆಯಿಂದ ಮನುಷ್ಯ ಶಾಖಾಘಾತಕ್ಕೊಳಗಾದಾಗ ಕೈಗೊಳ್ಳಬೇಕಾದ ಕ್ರಮಗಳ ಇಲ್ಲಿದೆ ಸಂಪೂರ್ಣ…

Read More

ಬೆಂಗಳೂರು: ಯುಗಾದಿ ಹಬ್ಬಕ್ಕೂ ಮುನ್ನವೇ ಅಂದರೆ ಮಾರ್ಚ್ 3ರಂದು ‘ಕೇತುಗ್ರಸ್ತ ರಕ್ತ ಚಂದ್ರಗ್ರಹಣ’ ಸಂಭವಿಸಲಿದೆ. ಈ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ಪುಣ್ಯಕ್ಷೇತ್ರಗಳ ಪೂಜೆ ಮತ್ತು ದರ್ಶನದ ಸಮಯದಲ್ಲಿ ಮಹತ್ತರ ಬದಲಾವಣೆಗಳನ್ನು ಮಾಡಲಾಗಿದೆ. ಬಹುತೇಕ ದೇವಾಲಯಗಳಲ್ಲಿ ಗ್ರಹಣ ಕಾಲದಲ್ಲಿ ದರ್ಶನ ಸ್ಥಗಿತಗೊಳಿಸಿ, ಶುದ್ಧೀಕರಣದ ನಂತರವಷ್ಟೇ ಭಕ್ತರಿಗೆ ಅವಕಾಶ ನೀಡಲು ನಿರ್ಧರಿಸಲಾಗಿದೆ. ಬೆಂಗಳೂರಿನ ಪ್ರಮುಖ ದೇವಾಲಯಗಳ ವಿವರ: ಬನಶಂಕರಿ ದೇವಾಲಯ: ಗ್ರಹಣದ ಹಿನ್ನೆಲೆಯಲ್ಲಿ ಯಾವುದೇ ವಿಶೇಷ ಪೂಜೆಗಳಿರುವುದಿಲ್ಲ. ಸಂಜೆ 7 ಗಂಟೆಯ ನಂತರವಷ್ಟೇ ನಿತ್ಯ ಪೂಜೆಗಳು ಪುನಾರಂಭಗೊಳ್ಳಲಿವೆ. ಗವಿಗಂಗಾಧರೇಶ್ವರ ದೇವಾಲಯ: ಬೆಳಿಗ್ಗೆ 9 ಗಂಟೆಗೆ ದೇಗುಲದ ಬಾಗಿಲು ಮುಚ್ಚಲಾಗುವುದು. ಸಂಜೆ 7.45ರ ನಂತರ ದರ್ಶನಕ್ಕೆ ಅವಕಾಶವಿದ್ದು, ಮಾರ್ಚ್ 4ರಂದು ‘ಗ್ರಹಣ ಶಾಂತಿ ಹೋಮ’ ನಡೆಯಲಿದೆ. ಕಾಡುಮಲ್ಲೇಶ್ವರ ದೇವಾಲಯ: ಬೆಳಿಗ್ಗೆ 11 ಗಂಟೆಗೆ ಬಾಗಿಲು ಮುಚ್ಚಲಿದ್ದು, ರಾತ್ರಿ 7.30ಕ್ಕೆ ಪುನಃ ತೆರೆಯಲಾಗುವುದು. ಮರುದಿನ ನವಗ್ರಹ ಶಾಂತಿ ಹೋಮ ಆಯೋಜಿಸಲಾಗಿದೆ. ದೊಡ್ಡ ಗಣಪತಿ ದೇವಾಲಯ: ಗ್ರಹಣ ಮೋಕ್ಷವಾದ ನಂತರ ಅಂದರೆ ರಾತ್ರಿ 7.45ಕ್ಕೆ…

Read More

ಜೆರುಸಲೇಮ್: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಮತ್ತಷ್ಟು ಏರಿಕೆಯಾಗಿದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ ಕಠಿಣ ಎಚ್ಚರಿಕೆಯ ಹೊರತಾಗಿಯೂ ಇರಾನ್ ಇಂದು ಇಸ್ರೇಲ್ ಮೇಲೆ ಕ್ಷಿಪಣಿಗಳ ಮಳೆಗರೆದಿದೆ. ಇಸ್ರೇಲ್‌ನ ರಾಜಧಾನಿ ಜೆರುಸಲೇಮ್ ಸೇರಿದಂತೆ ಪ್ರಮುಖ ನಗರಗಳನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆದಿದೆ ಎಂದು ವರದಿಯಾಗಿದೆ. ಇರಾನ್ ಸೈನ್ಯವು ಇಸ್ರೇಲ್‌ನ ಆಯಕಟ್ಟಿನ ಪ್ರದೇಶಗಳು ಮತ್ತು ಪ್ರಮುಖ ನಗರಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಈ ಆಕಸ್ಮಿಕ ದಾಳಿಯಲ್ಲಿ ಕನಿಷ್ಠ ಆರು ಜನರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಟ್ರಂಪ್ ಎಚ್ಚರಿಕೆ ದಾಳಿಗೂ ಮುನ್ನವಷ್ಟೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ಗೆ ಕಠಿಣ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದರು. ಆದರೆ ಆ ಎಚ್ಚರಿಕೆಯನ್ನು ಲೆಕ್ಕಿಸದೆ ಇರಾನ್ ಈ ಸಾಹಸಕ್ಕೆ ಕೈಹಾಕಿದೆ. ಇಸ್ರೇಲ್‌ನ ‘ಐರನ್ ಡೋಮ್’ ರಕ್ಷಣಾ ವ್ಯವಸ್ಥೆಯು ಹಲವು ಕ್ಷಿಪಣಿಗಳನ್ನು ಆಕಾಶದಲ್ಲೇ ಹೊಡೆದುರುಳಿಸಿದೆ ಎಂದು ಮೂಲಗಳು ತಿಳಿಸಿವೆ. ಸದ್ಯ ಇಸ್ರೇಲ್ ಅದಕ್ಕೆ ಪ್ರತಿದಾಳಿ ನಡೆಸುವ ಸಿದ್ಧತೆಯಲ್ಲಿದ್ದು, ಯುದ್ಧದ…

Read More

ಬೆಂಗಳೂರು: ಬಾನಂಗಳದಲ್ಲಿ ಈ ಬಾರಿ ಹೋಳಿ ಹಬ್ಬದ ಸಂಭ್ರಮದ ನಡುವೆಯೇ ಅಪರೂಪದ ಖಗೋಳ ವಿದ್ಯಮಾನವೊಂದು ಜರುಗಲಿದೆ. ಮಾರ್ಚ್ 3ರಂದು ‘ರಕ್ತ ಚಂದ್ರಗ್ರಹಣ’ (Blood Moon) ಸಂಭವಿಸಲಿದ್ದು, ಚಂದಿರ ಕೆಂಬಣ್ಣದಲ್ಲಿ ಕಂಗೊಳಿಸಲಿದ್ದಾನೆ. ಪಾಲ್ಗುಣ ಮಾಸದ ಹುಣ್ಣಿಮೆಯ ದಿನದಂದೇ ಈ ಗ್ರಹಣ ಸಂಭವಿಸುತ್ತಿರುವುದು ವಿಶೇಷ. ಭಾರತದಾದ್ಯಂತ ಈ ದೃಶ್ಯ ಗೋಚರಿಸಲಿದ್ದು, ಕರ್ನಾಟಕದ ಜನರಿಗೂ ಸುಮಾರು 25 ನಿಮಿಷಗಳ ಕಾಲ ಈ ಕೆಂಪು ಚಂದಿರನನ್ನು ನೋಡುವ ಅವಕಾಶ ಸಿಗಲಿದೆ. ಗ್ರಹಣದ ಸಮಯ ಎಷ್ಟು? ಭಾರತೀಯ ಕಾಲಮಾನದ ಪ್ರಕಾರ ಮಾರ್ಚ್ 3ರಂದು ಗ್ರಹಣದ ಪ್ರಕ್ರಿಯೆ ಹೀಗಿರಲಿದೆ: ಗ್ರಹಣ ಆರಂಭ: ಮಧ್ಯಾಹ್ನ 3:20ಕ್ಕೆ ಗ್ರಹಣ ಅಂತ್ಯ: ಸಂಜೆ 6:47ಕ್ಕೆ ಕರ್ನಾಟಕದಲ್ಲಿ ಗೋಚರತೆ: ಸರಿಸುಮಾರು 25 ನಿಮಿಷಗಳ ಕಾಲ ಗ್ರಹಣದ ಪ್ರಭಾವ ದೃಶ್ಯಮಾನವಾಗಲಿದೆ. ಗ್ರಹಣದ ಅವಧಿಯಲ್ಲಿ ಪಾಲಿಸಬೇಕಾದ ನಿಯಮಗಳು ಗ್ರಹಣದ ಸಮಯವನ್ನು ‘ಸೂತಕ ಕಾಲ’ ಎಂದು ಪರಿಗಣಿಸಲಾಗುತ್ತದೆ. ಈ ಅವಧಿಯಲ್ಲಿ ಧಾರ್ಮಿಕ ನಂಬಿಕೆಗಳ ಪ್ರಕಾರ ಕೆಲವು ಮುನ್ನೆಚ್ಚರಿಕೆಗಳನ್ನು ವಹಿಸುವುದು ಉತ್ತಮ ಎನ್ನಲಾಗುತ್ತದೆ. ಏನು ಮಾಡಬೇಕು? ಶುದ್ಧೀಕರಣ: ಗ್ರಹಣ ಆರಂಭಕ್ಕೆ ಮೊದಲು…

Read More

ಬೆಂಗಳೂರು: ರಾಜ್ಯದ ಸರ್ಕಾರಿ ನೌಕರರ ದೀರ್ಘಕಾಲದ ಬೇಡಿಕೆಯಾದ ಹಳೆಯ ಪಿಂಚಣಿ ಯೋಜನೆ (OPS) ಮರು ಜಾರಿಗೆ ಸಂಬಂಧಿಸಿದಂತೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ. ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ಬೆಂಗಳೂರಿನಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಶೈಕ್ಷಣಿಕ ಮಹಾಸಮ್ಮೇಳನ ಹಾಗೂ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಿಎಂ ಸಿದ್ದರಾಮಯ್ಯ, ಶಿಕ್ಷಕರು ದೇಶದ ಭವಿಷ್ಯವನ್ನು ರೂಪಿಸುವವರು. ದೇಶಕ್ಕೆ ಸ್ವಾತಂತ್ರ್ಯ ಬಂದಾಗ 12 ರಿಂದ 15% ರಷ್ಟಿದ್ದ ಸಾಕ್ಷರತೆ ಪ್ರಮಾಣ ಪ್ರಸ್ತುತ 74% ತಲುಪಿದೆ. ಶಿಕ್ಷಣ ಕ್ಷೇತ್ರವನ್ನು ಅವಲೋಕಿಸಿದಾಗ ಗುಣಮಟ್ಟದ, ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವ ಶಿಕ್ಷಣ ದೊರಕುತ್ತಿದೆಯೇ ಎನ್ನುವ ಪ್ರಶ್ನೆ ಮೂಡುತ್ತದೆ. ಇದು ಶಿಕ್ಷಕರ ತಪ್ಪಲ್ಲ, ಪಟ್ಟಭದ್ರ ವ್ಯವಸ್ಥೆಯ ಪರಿಣಾಮವಾಗಿ ಜಾತಿ ಎನ್ನುವುದು ಸಮಾಜದಲ್ಲಿ ಭದ್ರವಾಗಿ ನೆಲೆಯೂರಿರುವುದರಿಂದ ಶಿಕ್ಷಣದಲ್ಲಿ ನಿರೀಕ್ಷಿಸಿದಷ್ಟು ಬದಲಾವಣೆ ಮಾಡಲು ಸಾಧ್ಯವಾಗಿಲ್ಲ ಎಂದರು. ಸಂವಿಧಾನವು ಒಬ್ಬ ವ್ಯಕ್ತಿ ಜವಾಬ್ದಾರಿಯುತವಾಗಿ ವಿಕಾಸವಾಗಲು ವೈಜ್ಞಾನಿಕ, ವೈಚಾರಿಕ ಶಿಕ್ಷಣ ದೊರೆಯಬೇಕೆಂದು…

Read More

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯ್ತಿಗಳಲ್ಲಿ ಗ್ರಾಮೀಣ ಜನತೆಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ವಿವಿಧ ಸೇವೆಗಳನ್ನು ಒದಗಿಸಲಾಗುತ್ತಿದೆ. ಆ ಮೂಲಕ ಗ್ರಾಮೀಣ ಜನರು ತಾಲ್ಲೂಕು, ಜಿಲ್ಲಾ ಮಟ್ಟಕ್ಕೆ ಅಲೆಯುವುದನ್ನು ಸರ್ಕಾರ ತಪ್ಪಿಸಿದೆ. ಹಾಗಾದ್ರೇ ಸಾರ್ವಜನಿಕರಿಗೆ ಉಪಯುಕ್ತ ಮಾಹಿತಿ ಎನ್ನುವಂತೆ ರಾಜ್ಯದ ಗ್ರಾಮ ಪಂಚಾಯ್ತಿಗಳಲ್ಲಿ ಸಿಗುವಂತ ಸೇವೆಗಳ ಸಂಪೂರ್ಣ ಮಾಹಿತಿ ಮುಂದಿದೆ ಓದಿ ತಿಳಿದುಕೊಳ್ಳಿ. ಬಾಪೂಜಿ ಸೇವಾ ಕೇಂದ್ರ (ಬಿ.ಎಸ್.ಕೆ.)(bsk.karnataka.gov.in) ಗ್ರಾಮೀಣ ಜನತೆಗೆ ತಮ್ಮ ಸಾಮಾಜಿಕ, ಶೈಕ್ಷಣಿಕ, ವಾಣಿಜ್ಯ ಹಾಗೂ ಕೃಷಿ ಚಟುವಟಿಕೆಗಳಗಾಗಿ ವಿವಿಧ ಇಲಾಖೆಗಳಿಂದ ಹಲವಾರು ದಾಖಲೆಗಳು ಬೇಕಾಗುತ್ತವೆ. ಇವುಗಳನ್ನು ತ್ವರಿತವಾಗಿ ಒಂದೇ ಸೂರಿನಡಿ ಪಡೆದುಕೊಳ್ಳಲು ಅನುಕೂಲವಾಗುವಂತೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸ್ಥಾಪಿಸಿರುವ ಕೇಂದ್ರವೇ ‘ಬಾಪೂಜಿ ಸೇವಾ ಕೇಂದ್ರ’. ಪಂಚತಂತ್ರ, ನಾಡಕಛೇರಿ ತಂತ್ರಾಂಶ ಹಾಗೂ ಭೂಮಿ ತಂತ್ರಾಂಶಗಳನ್ನು ಸಮ್ಮಿಲನಗೊಳಸಿ ಗ್ರಾಮ ಪಂಚಾಯಿತಿಗಳು ಈ ಸೇವೆಯನ್ನು ನೀಡುತ್ತಿವೆ. ಈಗ ನೀಡುತ್ತಿರುವ 19 ಸೇವೆಗಳ ಜೊತೆಗೆ ಕಂದಾಯ ಇಲಾಖೆಯಿಂದ ಪಹಣಿ ಪತ್ರ ಒಳಗೊಂಡಂತೆ 40 ಸೇವೆಗಳನ್ನು ಒಂದೇ ಸೂರಿನಡಿ ಒದಗಿಸಲಾಗುತ್ತದೆ.ಇದರಿಂದ ಸಾರ್ವಜನಿಕರು ತಮ್ಮ ದಾಖಲೆಗಳಗಾಗಿ ಕಛೇರಿಯಿಂದ…

Read More