Author: kannadanewsnow57

ನವದೆಹಲಿ : ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (ಬಿಎಸ್ಎನ್ಎಲ್).. ದೇಶಾದ್ಯಂತ ವಿವಿಧ ಶಾಖೆಗಳಲ್ಲಿ ಸೀನಿಯರ್ ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಅಧಿಸೂಚನೆಯನ್ನು ಹೊರಡಿಸಿದೆ. ಈ ಅಧಿಸೂಚನೆಯ ಅಡಿಯಲ್ಲಿ ಒಟ್ಟು 120 ಸೀನಿಯರ್ ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಒಟ್ಟು ಹುದ್ದೆಗಳಲ್ಲಿ, 95 ಸೀನಿಯರ್ ಎಕ್ಸಿಕ್ಯುಟಿವ್ ಟ್ರೈನಿ (ಟೆಲಿಕಾಂ) ಹುದ್ದೆಗಳು ಮತ್ತು 25 ಸೀನಿಯರ್ ಎಕ್ಸಿಕ್ಯುಟಿವ್ ಟ್ರೈನಿ (ಹಣಕಾಸು) ಹುದ್ದೆಗಳಿವೆ. ಪದವಿ ಅರ್ಹತೆ ಹೊಂದಿರುವವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳನ್ನು ಬಿಎಸ್ಎನ್ಎಲ್ನ ಟೆಲಿಕಾಂ ಮತ್ತು ಹಣಕಾಸು ಇಲಾಖೆಗಳಲ್ಲಿ ಭರ್ತಿ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಟೆಲಿಕಾಂ ಕಾರ್ಯಾಚರಣೆ ಹುದ್ದೆಗಳಿಗೆ ಕನಿಷ್ಠ 60 ಪ್ರತಿಶತ ಅಂಕಗಳೊಂದಿಗೆ ಎಲೆಕ್ಟ್ರಾನಿಕ್ಸ್ ಮತ್ತು ದೂರಸಂಪರ್ಕ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ವಿಜ್ಞಾನ, ಮಾಹಿತಿ ತಂತ್ರಜ್ಞಾನ, ಎಲೆಕ್ಟ್ರಿಕಲ್, ಇನ್ಸ್ಟ್ರುಮೆಂಟೇಶನ್ನಲ್ಲಿ ಬಿಇ, ಬಿಟೆಕ್ ಅಥವಾ ತತ್ಸಮಾನ ಎಂಜಿನಿಯರಿಂಗ್ ಪದವಿಯನ್ನು ಹೊಂದಿರಬೇಕು. ಸಿಎ, ಸಿಎಂಎ ಪದವಿಯಲ್ಲಿ ಉತ್ತೀರ್ಣರಾದವರು ಹಣಕಾಸು ಹುದ್ದೆಗಳಿಗೂ ಅರ್ಜಿ ಸಲ್ಲಿಸಬಹುದು.…

Read More

ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯದ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕಿಯರು, ಮಹಿಳಾ ನೌಕರರಿಗೆ ಸಿಹಿಸುದ್ದಿ ನೀಡಿದ್ದು, ಶಿಶುಪಾಲನಾ ರಜೆ ಸೌಲಭ್ಯ ಕಲ್ಪಿಸಿ ಮಹತ್ವದ ಆದೇಶ ಹೊರಡಿಸಿದೆ. ಈ ಕುರಿತು ಶಾಲಾ ಶಿಕ್ಷಣ ಇಲಾಖೆಯ ಪ್ರಾಥಮಿಕ ಶಿಕ್ಷಣದ ನಿರ್ದೇಶಕರು ಆದೇಶ ಹೊರಡಿಸಿದ್ದು, ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕಿಯರಿಗೆ ನೌಕರರಿಗೆ ಶಿಶುಪಾಲನ ರಜೆ ಸೌಲಭ್ಯವನ್ನು ಅಡಳಿತಾತ್ಮಕವಾಗಿ ಹಾಗೂ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆಯಾಗದಂತೆ ರಜೆ ಸೌಲಭ್ಯವನ್ನು ವಿಸ್ತರಿಸಲು ಪರ್ಯಾಯ ವ್ಯವಸ್ಥೆಯನ್ನು ಸಂಬಂಧಿಸಿದ ಆಯಾ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯವರೇ ಸ್ವಂತ ಸಂಪನ್ಮೂಲದಿಂದಲೇ ಒದಗಿಸಿಕೊಂಡು ಅನುದಾನಿತ ಪ್ರಾಥಮಿಕ ಶಾಲಾ ಮಹಿಳಾ ಶಿಕ್ಷಕಿಯರು/ನೌಕರರಿಗೆ ಶಿಶುಪಾಲನಾ ರಜೆ ಮಂಜೂರು ಮಾಡಲು ನಿರ್ದೇಶಿಸಲಾಗಿರುತ್ತದೆ ಎಂದಿದ್ದಾರೆ. ಅದರಂತೆ ಆಡಳಿತಾತ್ಮಕವಾಗಿ ಹಾಗೂ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಹೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಯನ್ನು ಸಂಬಂಧಿಸಿದ ಆಯಾ ಶಿಕ್ಷಣ ಸಂಸ್ಥೆಯ ಆಡಳಿತ ದುಂಡಳಿಯವರೇ ಸ್ವಂತ ಸಂಪನ್ಮೂಲದಿಂದಲೇ ಒದಗಿಸಿಕೊಂಡು, ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕಿಯರಿಗೆ/ನೌಕರರಿಗೆ ಶಿಶುಪಾಲನಾ ರಜೆ ಸೌಲಭ್ಯವನ್ನು ಒದಗಿಸಲು ಅಗತ್ಯ ಶ್ರಮವಹಿಸಲು ಸೂಚಿಸಿದ್ದಾರೆ. ವರದಿ; ವಸಂತ ಬಿ ಈಶ್ವರಗೆರೆ..,…

Read More

ರುದ್ರಾಕ್ಷಿಯು ಶಿವನೊಂದಿಗೆ ಬಹಳ ಆಳವಾದ ಸಂಬಂಧವನ್ನು ಹೊಂದಿದೆ. ಶಿವ ಪುರಾಣ ಮತ್ತು ಸ್ಕಂದ ಪುರಾಣಗಳಲ್ಲಿ ರುದ್ರಾಕ್ಷಿಯ ಬಗ್ಗೆ ವಿವರವಾಗಿ ವಿವರಿಸಲಾಗಿದೆ. ರುದ್ರಾಕ್ಷಿ ಧರಿಸುವ ಜನರು ಕೆಲವು ನಿಯಮಗಳನ್ನು ಪಾಲಿಸಬೇಕು. ಇದನ್ನು ಧರಿಸುವುದರಿಂದ ತುಂಬಾ ಪ್ರಯೋಜನಕಾರಿ. ಆದರೆ ಜನರ ಮನಸ್ಸಿನಲ್ಲಿ ಈ ಪ್ರಶ್ನೆ ಹೆಚ್ಚಾಗಿ ಉದ್ಭವಿಸುತ್ತದೆ.. ಶಿವನಿಗೆ ಪ್ರಿಯವಾದ ಈ ರುದ್ರಾಕ್ಷಿ ಯಾವಾಗ ಮತ್ತು ಹೇಗೆ ಹುಟ್ಟಿಕೊಂಡಿತು? ರುದ್ರಾಕ್ಷಿಯ ಮೂಲ ಯಾವುದು? ಇದನ್ನು ಧರಿಸುವುದರಿಂದಾಗುವ ಪ್ರಯೋಜನಗಳ ಬಗ್ಗೆ ತಿಳಿದುಕೊಳ್ಳೋಣ. ರುದ್ರಾಕ್ಷ ಹೇಗೆ ಹುಟ್ಟಿಕೊಂಡಿತು ಪುರಾಣದ ಪ್ರಕಾರ, ಪ್ರಾಚೀನ ಕಾಲದಲ್ಲಿ ತ್ರಿಪುರಾಸುರ ಎಂಬ ರಾಕ್ಷಸನಿದ್ದನು. ಅವನು ಭೂಮಿಯ ಮೇಲೆ ಭಯವನ್ನು ಸೃಷ್ಟಿಸಿದನು. ಇದಲ್ಲದೆ, ತ್ರಿಪುರಾಸುರನು ದೇವತೆಗಳಿಗೂ ಬಹಳಷ್ಟು ತೊಂದರೆಗಳನ್ನುಂಟುಮಾಡಿದನು. ದೇವತೆಗಳ ಎಲ್ಲಾ ಪ್ರಯತ್ನಗಳ ಹೊರತಾಗಿಯೂ, ಅವರು ತ್ರಿಪುರಾಸುರನನ್ನು ಸೋಲಿಸಲು ಸಾಧ್ಯವಾಗಲಿಲ್ಲ. ಕೊನೆಗೆ ಎಲ್ಲಾ ದೇವತೆಗಳು ಶಿವನ ಬಳಿಗೆ ಹೋಗಿ ಆಶ್ರಯ ಪಡೆದರು. ದೇವತೆಗಳು ಶಿವನ ಬಳಿಗೆ ಬಂದಾಗ, ಶಿವನು ಯೋಗ ಭಂಗಿಯಲ್ಲಿ ಧ್ಯಾನದಲ್ಲಿ ಮಗ್ನನಾಗಿದ್ದನು. ಆ ಮಹಾನ್ ದೇವರ ತಪಸ್ಸು ಪೂರ್ಣಗೊಂಡ ನಂತರ, ಅವನ…

Read More

ಬೆಂಗಳೂರು : ಸ್ಯಾಂಡಲ್ ವುಡ್ ನಟ ಧ್ರುವ ಸರ್ಜಾ ವಿರುದ್ಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹೌದು, ಮನೋಜ್ ಎಂಬಾತ ಬನಶಂಕರಿ ಪೊಲೀಸ್ ಠಾಣೆಗೆ ನಟ ಧ್ರುವ ಸರ್ಜಾ ವಿರುದ್ಧ ದೂರು ನೀಡಿದ್ದಾರೆ.  ನಟ ಧ್ರುವ ಸರ್ಜಾರ, ಮ್ಯಾನೇಜರ್, ಚಾಲಕ, ಫ್ಯಾನ್ಸ್ ವಿರುದ್ದ ದೂರು ದಾಖಲಿಸಿದ್ದಾರೆ. ಧ್ರುವ ಸರ್ಜಾ ರನ್ನು ನೋಡಲು ದಿನನಿತ್ಯ ಅಭಿಮಾನಿಗಳು ಬರುವುದರಿಂದ ನಮಗೆ ಸಾಕಷ್ಟು ತೊಂದರೆಗಳಾಗುತ್ತಿದೆ, ಧ್ರುವ ಸರ್ಜಾ ಅಭಿಮಾನಿಗಳು ಮನೆ ಮುಂದೆ ಪ್ರತಿನಿತ್ಯ ಬೈಕ್ ಗಳನ್ನ ಅಡ್ಡಲಾಗಿ ಪಾರ್ಕ್ ಮಾಡುತ್ತಾರೆ. ಬೈಕ್ ತೆಗೆಯುವಂತೆ ಅದೆಷ್ಟೇ ಮನವಿ ಮಾಡಿದರೂ ಕೂಡ ಕೇಳುವುದಿಲ್ಲ. ಪ್ರತಿನಿತ್ಯ ಮನೆಯ ಮುಂದೆ ಧೂಮಪಾನ ಮಾಡುತ್ತಾರೆ, ಮನೆಯ ಗೋಡೆಯ ಮೇಲೆ ಉಗಿಯುತ್ತಾರೆ, ಕಿರುಚಾಟ ನಡೆಸುತ್ತಾ ಇರುತ್ತಾರೆ ಇದರಿಂದ ನೆಮ್ಮದಿ ಇಲ್ಲದಂತಾಗಿದೆ ಎಂದು ಎಂದು ಪಕ್ಕದ ಮನೆಯ ಮನೋಜ್ ಎಂಬುವವರು ದೂರು ನೀಡಿದ್ದು, ದೂರಿನನ್ವಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Read More

ಹಾಸನ : ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಿಸಿಲೆಘಾಟ್ ನಲ್ಲಿ ಮದುವೆಗೆ ಹೊರಟಿದ್ದ ವ್ಯಾನ್ ಉರುಳಿ ಬಿದ್ದ ಪರಿಣಾಮ 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ವನಗೂರು ಗ್ರಾಮದಿಂದ ಕುಕ್ಕೆಸುಬ್ರಹ್ಮಣ್ಯಕ್ಕೆ ವ್ಯಾನ್ ಹೊರಟಿತ್ತು. ರಾಜ್ಯ ಹೆದ್ದಾರಿಯ 20 ಅಡಿ ಎತ್ತರದಿಂದ ವ್ಯಾನ್ ಉರುಳಿಬಿದ್ದಿದ್ದು, 20 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸಕಲೇಶಪುರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಯಳಸೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Read More

ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ದಿ ನಿಗಮ(ನಿ)ವತಿಯಿಂದ 2025-26ನೇ ಸಾಲಿನ ಕ್ರಿಶ್ಚಿಯನ್ ಜನಾಂಗದವರಿಗೆ ಶ್ರಮ ಶಕ್ತಿ ಯೋಜನೆ, ವೃತ್ತಿ ಪ್ರೋತ್ಸಾಹ ಯೋಜನೆ, ಶ್ರಮಶಕ್ತಿ ವಿಶೇಷ ಮಹಿಳಾ ಯೋಜನೆ, ಗಂಗಾ ಕಲ್ಯಾಣ ಯೋಜನೆಗೆ ಸಾಲ ಮತ್ತು ಸಹಾಯಧನ ಹಾಗೂ ವ್ಯಾಪಾರ ಮತ್ತು ಉದ್ಯಮಗಳಿಗೆ ನೇರ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನೆ, ಮಹಿಳಾ ಸ್ವ ಸಹಾಯ ಸಂಘ ಗುಂಪುಗಳಿಗೆ ಸಹಾಯಧನವನ್ನು ನೀಡಲಾಗುತ್ತದೆ. ಸಾಲ ಹಾಗೂ ಸಹಾಯಧನವನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ನಿಗಮದ ವೆಬ್ಸೈಟ್: https://kccdclonline.karnataka.gov.in/ ಮೂಲಕ ಆನ್ಲೈನ್ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ “ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ), ಮೌಲಾನಾ ಅಜಾದ್ ಭವನ, ಗ್ರಾಮಾಂತರ ಪೋಲೀಸ್ ಠಾಣೆ ಹತ್ತಿರ, ಎಫ್ಎಂಸಿ ಕಾಲೇಜು ರಸ್ತೆ, ಮಡಿಕೇರಿ ಇಲ್ಲಿಗೆ ಭೇಟಿ ನೀಡಬಹುದು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ನವೆಂಬರ್, 26 ಕೊನೆಯ ದಿನವಾಗಿದೆ. ಕಚೇರಿಯಿಂದ ಸಂಪರ್ಕಿಸುವ ಮೊದಲು ಸಲ್ಲಿಸಿರುವ ಅರ್ಜಿ ಹಾಗೂ ದಾಖಲಾತಿಗಳನ್ನು ಜಿಲ್ಲಾ…

Read More

ಬೆಂಗಳೂರು : 60 ವರ್ಷ ದಾಟಿದ ಕಾರ್ಮಿಕರು ಮಾಸಿಕ ಪಿಂಚಣಿಯನ್ನು ಮಂಡಳಿಯಿಂದ ಪಡೆಯಬಹುದು. ಅರ್ಜಿಯೊಂದಿಗೆ ಮಂಡಳಿ ನಿಗದಿಪಡಿಸಿರುವ ಪೂರಕ ದಾಖಲಾತಿಗಳನ್ನು ಸಲ್ಲಿಸಬೇಕು. ಪಿಂಚಣಿ ಸೌಲಭ್ಯ ಮಂಡಳಿಯಿಂದ ನೋಂದಾಯಿತ ಕಾರ್ಮಿಕರಿಗೆ ಮಾಸಿಕ ಪಿಂಚಣಿ ಸೌಲಭ್ಯ ನೀಡಲಾಗುತ್ತದೆ. 60 ವರ್ಷ ಪೂರ್ಣಗೊಳ್ಳುವ ಪೂರ್ವ, ಕನಿಷ್ಠ 3 ವರ್ಷ ನಿರಂತರವಾಗಿ ಮಂಡಳಿಯ ಸದಸ್ಯತ್ವವನ್ನು ನವೀಕರಿಸಿ ಫಲಾನುಭವಿಯಾಗಿ ಮುಂದುವರೆದಿರಬೇಕು ಅರ್ಜಿಯೊಂದಿಗೆ ಸಲ್ಲಿಸಬೇಕಾದ ಪೂರಕ ದಾಖಲಾತಿಗಳು ಮಂಡಳಿಯಿಂದ ನೀಡಿರುವ ಗುರುತಿನ ಚೀಟಿ ಫಲಾನುಭವಿಯ ಬ್ಯಾಂಕ್ ಪಾಸ್ ಬುಕ್ ಪ್ರತಿ ಜೀವಿತ ಪ್ರಮಾಣಪತ್ರ ( ಜೀವಿತ ಅವಧಿಯವರೆಗೆ ಪ್ರತಿ ವರ್ಷ ಸಲ್ಲಿಸುವುದು ) ರೇಷನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಪ್ರತಿ ಉದ್ಯೋಗ ದೃಢೀಕರಣ ಪತ್ರ ಮತ್ತು ಸ್ವಯಂ ದೃಢೀಕರಣ ಪತ್ರ

Read More

ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಕ್ಯಾಚ್ ತೆಗೆದುಕೊಳ್ಳುವಾಗ ಬಿದ್ದು ಗಾಯಗೊಂಡ ಶ್ರೇಯಸ್ ಅಯ್ಯರ್ ಕನಿಷ್ಠ ಎರಡು ತಿಂಗಳು ಕ್ರಿಕೆಟ್ನಿಂದ ಹೊರಗುಳಿಯಲಿದ್ದಾರೆ. ಅಕ್ಟೋಬರ್ 25 ರಂದು ಸಿಡ್ನಿಯಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಏಕದಿನ ಪಂದ್ಯದಲ್ಲಿ ಆಂತರಿಕ ಗಾಯದಿಂದ ಬಳಲುತ್ತಿರುವ ಶ್ರೇಯಸ್ ಅಯ್ಯರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವರದಿಯ ಪ್ರಕಾರ, ಅಯ್ಯರ್ ಮತ್ತೆ ಆಟಕ್ಕೆ ಮರಳಲು ಎಂಟು ವಾರಗಳು ತೆಗೆದುಕೊಳ್ಳಬಹುದು. ಅವರು ಎರಡು ತಿಂಗಳ ಕಾಲ ಸ್ಪರ್ಧಾತ್ಮಕ ಕ್ರಿಕೆಟ್ನಿಂದ ಹೊರಗುಳಿಯಬಹುದು. ಇದರರ್ಥ ಅವರು ನವೆಂಬರ್-ಡಿಸೆಂಬರ್ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ತವರಿನಲ್ಲಿ ನಡೆಯಲಿರುವ ಏಕದಿನ ಸರಣಿಯಿಂದ ಹೊರಗುಳಿದಿದ್ದಾರೆ. ಜನವರಿ 11 ರಿಂದ ಪ್ರಾರಂಭವಾಗುವ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಅವರು ಭಾಗವಹಿಸುವುದು ಅನಿಶ್ಚಿತವಾಗಿದೆ ಏಕೆಂದರೆ ಅವರಿಗೆ ಪಂದ್ಯ ಅಭ್ಯಾಸಕ್ಕೆ ಅವಕಾಶವಿರುವುದಿಲ್ಲ. ಭಾರತದ ಏಕದಿನ ತಂಡದ ಉಪನಾಯಕ ಸ್ಥಿರವಾಗಿ ಸುಧಾರಿಸುತ್ತಿದ್ದಾರೆ ಎಂಬುದು ಸಮಾಧಾನಕರ ಸಂಗತಿ. ಶ್ರೇಯಸ್ ಅವರ ಗುಲ್ಮಕ್ಕೆ ಗಾಯವಾದ ನಂತರ ಆಂತರಿಕ ರಕ್ತಸ್ರಾವವನ್ನು ನಿಲ್ಲಿಸಲು ಇಂಟರ್ವೆನ್ಷನಲ್ ಟ್ರಾನ್ಸ್-ಕ್ಯಾತಿಟರ್…

Read More

ಬೆಂಗಳೂರು : ಅನಾರೋಗ್ಯದ ಹಿನ್ನೆಲೆಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜ್ಯಪಾಲ `ಥಾವರ್ ಚಂದ್ ಗೆಹ್ಲೋಟ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Read More

ಬೆಂಗಳೂರು : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಚಿವ ಮಧು ಬಂಗಾರಪ್ಪ ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ಶೀಘ್ರವೇ 32 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಯಲಿದೆ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ 51 ಸಾವಿರ ಶಿಕ್ಷಕರ ಕೊರತೆ ಇದ್ದು, ಸದ್ಯ 13 ಸಾವಿರ ಶಿಕ್ಷಕರ ನೇಮಕಾತಿ ಆಗಿದೆ. ಶೀಘ್ರವೇ 32 ಸಾವಿರ ಶಿಕ್ಷಕರ ನೇಮಕಾತಿ ಅಧಿಸೂಚನೆ ಹೊರಡಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ರಾಜ್ಯದಲ್ಲಿ 1 ನೇ ತರಗತಿ ಮಕ್ಕಳಿಗೆ ಗಣಕ ಯಂತ್ರ ತರಬೇತಿ ನೀಡಲಿದ್ದೇವೆ . ವಿಶೇಷವಾಗಿ ಗ್ರಾಮೀಣ ಭಾಗದ ಮಕ್ಕಳಿಗೆ ಇದರಿಂದ ಸಹಾಯ ಆಗಬೇಕು ಹೇಳಿದರು.

Read More