Subscribe to Updates
Get the latest creative news from FooBar about art, design and business.
Author: kannadanewsnow57
BREAKING : ರಾಜ್ಯ `ಸರ್ಕಾರಿ ನೌಕರರಿಗೆ’ ಗುಡ್ ನ್ಯೂಸ್ : ಅ.1ರಿಂದ `ಆರೋಗ್ಯ ಸಂಜೀವಿನಿ’ ಯೋಜನೆ ಜಾರಿಗೆ ಸರ್ಕಾರ ಆದೇಶ
ಬೆಂಗಳೂರು : ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು ರಾಜ್ಯ ಸರ್ಕಾರದಿಂದ ರೂಪಿಸಲಾಗಿರುವ ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ’ (KASS) ಯನ್ನು ಅಕ್ಟೋಬರ್ 01, 2025 ರಿಂದ ಜಾರಿಗೆ ತರುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಅವಲಂಬಿತ ಕುಟುಂಬದ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು ರಾಜ್ಯ ಸರ್ಕಾರದಿಂದ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು (KASS) ಅನುಷ್ಠಾನಗೊಳಿಸುವ ಸಂಬಂಧ ಮೇಲೆ ಕ್ರ.ಸಂ.(1) ರಿಂದ (6) ರಲ್ಲಿ ಓದಲಾದ ಸರ್ಕಾರದ ಆದೇಶ: ಸುತ್ತೋಲೆಗಳಲ್ಲಿ ಕೆಲವು ಕಾರ್ಯನೀತಿ ಸೂಚನೆಗಳನ್ನು ನೀಡಲಾಗಿದೆ. ಯೋಜನೆಯಡಿ ಸರ್ಕಾರಿ ನೌಕರರ ನೋಂದಾವಣೆ, ಮಾಸಿಕ ವಂತಿಕೆ ಮತ್ತು ಯೋಜನೆಗೆ ಒಳಪಡಲು/ ಒಳಪಡದೇ ಇರಲು, ಆಯ್ಕೆ ವ್ಯಕ್ತಪಡಿಸುವುದು ಮುಂತಾದ ಅಂಶಗಳ ಕುರಿತು ಮೇಲೆ ಓದಲಾದ (6) ರ ದಿನಾಂಕ: 19.04.2025 ರ ಸುತ್ತೋಲೆಯಲ್ಲಿ ಕೆಲವು ಸೂಚನೆಗಳನ್ನು ನೀಡಲಾಗಿದೆ. ಯೋಜನೆಗೆ ಒಳಪಡಲು…
ನವದೆಹಲಿ : ಇಬ್ಬರು ವಯಸ್ಕರು ಪರಸ್ಪರ ಒಪ್ಪಿಗೆಯ ಲೈಂಗಿಕ ಸಂಬಂಧ ಹೊಂದಿದ್ದರೆ ಮತ್ತು ನಂತರ ಯಾವುದೇ ಕಾರಣಕ್ಕಾಗಿ ಮದುವೆಯಾಗಲು ಸಾಧ್ಯವಾಗದಿದ್ದರೆ, ಅದನ್ನು ಅತ್ಯಾಚಾರವೆಂದು ಪರಿಗಣಿಸಲಾಗುವುದಿಲ್ಲ ಎಂದು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಇದೇ ರೀತಿಯ ಪ್ರಕರಣದಲ್ಲಿ ಯುವಕನ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ಪ್ರಕರಣವನ್ನು ನ್ಯಾಯಾಲಯ ವಜಾಗೊಳಿಸಿತು. ವಿವಾಹದ ಸುಳ್ಳು ಭರವಸೆ ನೀಡಿದ ನಂತರ ತನ್ನ ನಿಶ್ಚಿತಾರ್ಥದ ವ್ಯಕ್ತಿ ತನ್ನೊಂದಿಗೆ ಲೈಂಗಿಕ ಸಂಬಂಧ ಹೊಂದಿದ್ದಾನೆ ಎಂದು ಮಹಿಳೆಯೊಬ್ಬರು ಆರೋಪಿಸಿದರು. ಇಬ್ಬರೂ ನಿಶ್ಚಿತಾರ್ಥ ಮಾಡಿಕೊಂಡಿದ್ದರು ಮತ್ತು ನವೆಂಬರ್ 2024 ರಲ್ಲಿ ಮದುವೆಯಾಗಲು ನಿರ್ಧರಿಸಲಾಗಿತ್ತು. ಮದುವೆಗೆ ಮೊದಲು ಎರಡು ಕುಟುಂಬಗಳ ನಡುವೆ ಕೆಲವು ಭಿನ್ನಾಭಿಪ್ರಾಯಗಳು ಹುಟ್ಟಿಕೊಂಡವು, ಇದು ಮದುವೆಯನ್ನು ರದ್ದುಗೊಳಿಸಲು ಕಾರಣವಾಯಿತು. ಇದರ ನಂತರ, ಮಹಿಳೆ ಯುವಕನ ವಿರುದ್ಧ ಅತ್ಯಾಚಾರ ಪ್ರಕರಣವನ್ನು ದಾಖಲಿಸಿದರು. ನ್ಯಾಯಮೂರ್ತಿ ಕೀರ್ತಿ ಸಿಂಗ್ ಅವರ ಪೀಠವು ಪ್ರಕರಣವನ್ನು ಆಲಿಸಿತು ಮತ್ತು ಇಬ್ಬರೂ ವಿದ್ಯಾವಂತರು ಮತ್ತು ಪ್ರಬುದ್ಧ ವಯಸ್ಕರು ಎಂದು ಕಂಡುಕೊಂಡಿತು. ಅವರ ಸಂಬಂಧವು ಒಪ್ಪಿಗೆಯಿಂದ ಕೂಡಿತ್ತು. ಮದುವೆ…
ಮೈಸೂರು : ದಸರಾ ಉತ್ಸವ ಮತ್ತು ನಮ್ಮ ಸಾಂಸ್ಕೃತಿಕ ಹಿರಿಮೆಯ ಪರಿಚಯ ಇಲ್ಲದವರು ಬಾನು ಮುಷ್ತಾಕ್ ಅವರಿಗೆ ವಿರೋಧಿಸಿದ್ದರು. ಇತಿಹಾಸ ತಿರುಚಿ, ಸ್ವಾರ್ಥ ರಾಜಕೀಯ ಮಾಡುವುದು ಅಕ್ಷಮ್ಯ ಅಪರಾಧ. ರಾಜಕಾರಣ ಮಾಡುವುದಿದ್ದರೆ ಚುನಾವಣೆಯಲ್ಲಿ ಮಾಡೋಣ. ನಾಡ ಹಬ್ಬದ ವಿಚಾರದಲ್ಲಿ ಕೆಳ ಮಟ್ಟದ ರಾಜಕಾರಣ ಮಾಡುವುದು ಕ್ಷುಲ್ಲಕ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ, ನಾಡಹಬ್ಬ ಐತಿಹಾಸಿಕ ದಸರಾ ಉದ್ಘಾಟನೆ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಮಾತನಾಡಿದ ಸಿಎಂ ಸಿದ್ದರಾಮಯ್ಯ,ನಾಡಿನ ಬಹುಸಂಖ್ಯಾತ ಸಮುದಾಯ ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟಿಸಿರುವುದನ್ನು ಸ್ವಾಗತಿಸಿದೆ. ಇದು ಹೆಮ್ಮೆಯ ಸಂಗತಿ. ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಪುರಸ್ಕೃತರಾದ ಬಾನು ಮುಷ್ತಾಕ್ ಅವರು ದಸರಾ ಉದ್ಘಾಟಿಸಿರುವುದು ಸೂಕ್ತವಾಗಿದೆ. ಬಾನು ಮುಷ್ತಾಕ್ ಮುಸ್ಲಿಂ ಮಹಿಳೆ ಎನ್ನುವುದಕ್ಕಿಂತ ಮಾನವೀಯ ಮೌಲ್ಯ ಪಾಲಿಸುವ ಮನುಷ್ಯರು. ನಾವು ಮನುಷ್ಯರು ಪರಸ್ಪರ ಪ್ರೀತಿಯಿಂದ ಬಾಳಬೇಕು. ದ್ವೇಷ ಮನುಷ್ಯತ್ವದ ವಿರೋಧಿ. ಆದ್ದರಿಂದ ದ್ವೇಷವನ್ನು ಆಚರಿಸುವವರು ಮನುಷ್ಯತ್ವದ ವಿರೋಧಿಗಳು. ಸಂವಿಧಾನದ ಮೌಲ್ಯಗಳಾದ ಸಹಿಷ್ಣುತೆ ಪಾಲಿಸುವವರು ಮಾತ್ರ…
ಕರಾಚಿ : ಖೈಬರ್ ಪಖ್ತುಂಖ್ವಾ ಗ್ರಾಮದ ಮೇಲೆ ಪಾಕಿಸ್ತಾನ ವಾಯುಪಡೆ ನಡೆಸಿದ ವೈಮಾನಿಕ ದಾಳಿಯಲ್ಲಿ 8 ಬಾಂಬ್ಗಳು ಬಿದ್ದಿದ್ದು, 30 ಮಂದಿ ಸಾವನ್ನಪ್ಪಿದ್ದಾರೆ. ಸೋಮವಾರ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಪಾಕಿಸ್ತಾನ ವಾಯುಪಡೆ ನಡೆಸಿದ ವೈಮಾನಿಕ ದಾಳಿಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 30 ಜನರು ಸಾವನ್ನಪ್ಪಿದ್ದಾರೆ. ತಿರಾ ಕಣಿವೆಯಲ್ಲಿರುವ ಮಾಟ್ರೆ ದಾರಾ ಗ್ರಾಮದ ಮೇಲೆ ಪಾಕಿಸ್ತಾನದ ಯುದ್ಧ ವಿಮಾನಗಳು ಎಂಟು LS-6 ಬಾಂಬ್ಗಳನ್ನು ಬೀಳಿಸಿ ಭಾರಿ ಹತ್ಯಾಕಾಂಡಕ್ಕೆ ಕಾರಣವಾದ ಘಟನೆ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಸಂಭವಿಸಿದೆ. ಸ್ಥಳೀಯ ಮಾಧ್ಯಮಗಳು ವರದಿ ಮಾಡಿರುವ ಪ್ರಕಾರ, ಅನೇಕ ಜನರು ಗಾಯಗೊಂಡಿದ್ದಾರೆ, ಆದರೆ ಅವರ ಪರಿಸ್ಥಿತಿ ಇನ್ನೂ ಸ್ಪಷ್ಟವಾಗಿಲ್ಲ. ಘಟನೆ ನಡೆದ ಸ್ಥಳದ ಗೊಂದಲದ ಚಿತ್ರಗಳು ಮತ್ತು ವೀಡಿಯೊಗಳು ಮಕ್ಕಳೂ ಸೇರಿದಂತೆ ಶವಗಳು ಸುತ್ತಲೂ ಬಿದ್ದಿರುವುದನ್ನು ತೋರಿಸಿವೆ. ರಕ್ಷಣಾ ತಂಡಗಳು ಅವಶೇಷಗಳ ಅಡಿಯಲ್ಲಿ ಶವಗಳನ್ನು ಹುಡುಕುವಲ್ಲಿ ನಿರತವಾಗಿದ್ದವು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಭಯವನ್ನು ಹೆಚ್ಚಿಸಿದೆ. ಖೈಬರ್ ಪಖ್ತುಂಖ್ವಾದಲ್ಲಿ ಈ ಹಿಂದೆ…
ಮೈಸೂರು : ಮೈಸೂರು ದಸರಾ, ನಾಡಿನ ನಾಡಿ, ಸಂಸ್ಕೃತಿಯ ಉತ್ಸವ, ಎಲ್ಲರನ್ನೂ ಒಗ್ಗೂಡಿಸುವ ಸಮನ್ವಯದ ಮೇಳವಾಗಿದೆ ಎಂದು ಸಾಹಿತಿ ಹಾಗೂ 2025ರ ಅಂತರಾಷ್ಟ್ರೀಯ ಬೂಕರ್ ಬಹುಮಾನ ವಿಜೇತರಾದ ಶ್ರೀಮತಿ ಬಾನು ಮುಷ್ತಾಕ್ ಅವರು ತಿಳಿಸಿದರು. ಅವರು ಇಂದು ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ಅಗ್ರಪೂಜೆಯೊಂದಿಗೆ ಪ್ರಾರಂಭವಾದ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಮೈಸೂರು ದಸರಾದ ಪವಿತ್ರದ ಕ್ಷಣದಲ್ಲಿ ಚಾಮುಂಡಿ ತಾಯಯ ಕೃಪೆಯ ನೆರಳಿನಲ್ಲಿ, ಈ ವೇದಿಕೆಯಿಂದ ನಿಮ್ಮೆದುರು ನಿಲ್ಲುವ ಅವಕಾಶ ದೊರೆತಿರುವುದು ನನ್ನ ಜೀವನದ ಅತ್ಯಂತ ಗೌರವದ ಘಳಿಕೆ. ದಸರಾ ಎಂದರೆ ಕೇವಲಹಬ್ಬವಲ್ಲ, ಇದು ನಾಡಿನ ನಾಡಿ, ಸಂಸ್ಕೃತಿಯ ಉತ್ಸವ, ಎಲ್ಲರನ್ನೂ ಒಗ್ಗೂಡಿಸುವ ಸಮನ್ವಯದ ಮೇಳ. ಈ ನೆಲದಲ್ಲಿ ಹುಟ್ಟಿದ ಪ್ರತಿಯೊಂದು ಜೀವಕ್ಕೂ ಈ ಮಣ್ಣಿನ ಬಾರಿಸುದಾರಿಕೆ, ಸ್ಪಂದನೆ ಮತ್ತು ನೆನಪುಗಳಿವೆ ಎಂದರು. ಸರ್ವ ಜನಾಂಗದ ಶಾಂತಿಯ ತೋಟ’-ಈ ನೆಲದ ಸಂಸ್ಕೃತಿ ಮೈಸೂರು ಅರಸರ ಸಂಸ್ಕೃತಿಯ ಪರಂಪರೆಯಿಂದ ಹಿಡಿದು,ಕನ್ನಡ ಭಾಷೆಯ ಅಂತರಾಳದ ಹೃದಯಸ್ಪಂದನದವರೆಗೆ ಈ ಹಬ್ಬವು ನಮಗೆ ಸ್ಮರಿಸುತ್ತದೆ.…
ಹೈದರಾಬಾದ್: ಮೆಡ್ಚಲ್ ಜಿಲ್ಲೆಯ ಮೆಡಿಪಲ್ಲಿ ವ್ಯಾಪ್ತಿಯ ನರಪಲ್ಲಿಯಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತನ ಆತ್ಮಹತ್ಯೆಗೆ ರ್ಯಾ ಗಿಂಗ್ ಕಾರಣ ಎಂದು ಸ್ನೇಹಿತರು ಆರೋಪಿಸುತ್ತಿದ್ದಾರೆ. ಆದಿಲಾಬಾದ್ ಜಿಲ್ಲೆಯ ಉಟ್ನೂರಿನ ಜಾಧವ್ ಸಾಯಿ ತೇಜ (19) ನರಪಲ್ಲಿಯಲ್ಲಿರುವ ಖಾಸಗಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಬಿ.ಟೆಕ್ ಎರಡನೇ ವರ್ಷ ಓದುತ್ತಿದ್ದ. ಅಲ್ಲಿನ ಹಾಸ್ಟೆಲ್ನಲ್ಲಿ ವಾಸಿಸುತ್ತಿದ್ದ. ಇತ್ತೀಚೆಗೆ ಹಿರಿಯ ವಿದ್ಯಾರ್ಥಿಗಳೊಂದಿಗೆ ಜಗಳವಾಡಿದ್ದ. ಇದರಿಂದ ಮನನೊಂದ ಸಾಯಿ ತೇಜ ತನ್ನ ಹಾಸ್ಟೆಲ್ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಾಹಿತಿ ಪಡೆದ ನಂತರ, ಮೆಡಿಪಲ್ಲಿ ಪೊಲೀಸರು ಸ್ಥಳಕ್ಕೆ ತಲುಪಿ ಶವವನ್ನು ಗಾಂಧಿ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ. ಸಾಯಿ ತೇಜ ಅವರನ್ನು ಹಿರಿಯ ವಿದ್ಯಾರ್ಥಿಗಳು ರ್ಯಾಗಿಂಗ್ ಮಾಡಿದ್ದರು. ನಂತರ, ಹಿರಿಯ ವಿದ್ಯಾರ್ಥಿಗಳು ಸಾಯಿ ತೇಜ ಅವರನ್ನು ಬಾರ್ಗೆ ಕರೆದೊಯ್ದು ಸುಮಾರು ₹10,000 ಬಿಲ್ ವಿಧಿಸಿದರು. ಸಂಪೂರ್ಣ ಬಿಲ್ ಪಾವತಿಸಲು ಒತ್ತಡ ಹೇರಿದ ಸಾಯಿ ತೇಜ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ…
ಬೆಂಗಳೂರು : ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಗೆ ಈವರೆಗೆ 1 ಲಕ್ಷ ಕೋಟಿ ರೂ. ಖರ್ಚು ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ದಸರಾ ಮಹೋತ್ಸವದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, 500 ಕೋಟಿಗೂ ಹೆಚ್ಚು ಮಹಿಳೆಯರು ಶಕ್ತಿ ಯೋಜನೆಯಡಿ ಪ್ರಯಾಣ ಮಾಡಿದ್ದಾರೆ. ಈ ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲಲ್ಲ.ಇದನ್ನು ವಿರೋಧ ಮಾಡಿದವರು ಇದನ್ನು ಒಪ್ಪಿಕೊಂಡಿದ್ದಾರೆ ಎಂದರು. ಸಿಎಂ ಸಿದ್ದರಾಮಯ್ಯ ಭಾಷಣದ ಮುಖ್ಯಾಂಶಗಳು ಹೀಗಿದೆ ಬಾನು ಮುಷ್ತಾಕ್ ಅವರು ಹುಟ್ಟಿನಿಂದ ಮುಸ್ಲಿಂ ಮಹಿಳೆ ಆಗಿರಬಹುದು ಆದರೆ ಅವರು ಕೂಡ ಮನುಷ್ಯರೇ. ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕೆ ಹೊರತು, ಧರ್ಮದ ಆಧಾರದ ಮೇಲೆ ಜಾತಿಯ ಆಧಾರದ ಮೇಲೆ ದ್ವೇಷಿಸಬಾರದು ನಾವೆಲ್ಲರೂ ಮನುಷರು ನಾವೆಲ್ಲ ಪರಸ್ಪರ ಪ್ರೀತಿಯಿಂದ ಇರಬೇಕೆ ಹೊರತು ದ್ವೇಷದಿಂದ ಇರಬಾರದು ಅದು ಮನುಷ್ಯತ್ವದ ಲಕ್ಷಣ ಅಲ್ಲ. ಲ್ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ನಾವು ಮನುಷ್ಯತ್ವ ಒಪ್ಪಿಕೊಳ್ಳುವುದಾದರೆ ಈ ನಾಡಿನ ಯಾವುದೇ ಧರ್ಮ ಯಾವುದೇ ಜಾತಿ ಯಾವುದೇ ವರ್ಗಕ್ಕೆ ಸೇರಿರತಕ್ಕಂತಹವರು ಕೂಡ ಇಂತಹ…
ಬೆಂಗಳೂರು : ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಗೆ ಈವರೆಗೆ 1 ಲಕ್ಷ ಕೋಟಿ ರೂ. ಖರ್ಚು ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ದಸರಾ ಮಹೋತ್ಸವದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, 500 ಕೋಟಿಗೂ ಹೆಚ್ಚು ಮಹಿಳೆಯರು ಶಕ್ತಿ ಯೋಜನೆಯಡಿ ಪ್ರಯಾಣ ಮಾಡಿದ್ದಾರೆ. ಈ ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲಲ್ಲ.ಇದನ್ನು ವಿರೋಧ ಮಾಡಿದವರು ಇದನ್ನು ಒಪ್ಪಿಕೊಂಡಿದ್ದಾರೆ ಎಂದರು. ನಾವು ಮನುಷ್ಯತ್ವ ಒಪ್ಪಿಕೊಳ್ಳುವುದಾದರೆ ಈ ನಾಡಿನ ಯಾವುದೇ ಧರ್ಮ ಯಾವುದೇ ಜಾತಿ ಯಾವುದೇ ವರ್ಗಕ್ಕೆ ಸೇರಿರತಕ್ಕಂತಹವರು ಕೂಡ ಇಂತಹ ಪ್ರಮುಖವಾದಂತಹ ನಾಡ ಹಬ್ಬಗಳ ಉದ್ಘಾಟನೆಯನ್ನು ಮಾಡುವುದನ್ನು ಸ್ವಾಗತ ಮಾಡಬೇಕು ಈ ನಾಡಿನ ಬಹುಸಂಖ್ಯಾತ ಜನರು ಭಾನು ಮುಷ್ತಾಕ್ ಅವರು ದಸರಾ ಉದ್ಘಾಟನೆ ಮಾಡುವುದನ್ನು ಒಪ್ಪಿಕೊಂಡಿದ್ದಾರೆ ಎಂದರು. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹೇಳುತ್ತಿದ್ದರು ಯಾರಿಗೆ ಇತಿಹಾಸ ಗೊತ್ತಿರಲ್ಲ, ಅವರ್ಯಾರು ಭವಿಷ್ಯ ನಿರ್ಮಾಣ ಮಾಡಲು ಸಾಧ್ಯವಿಲ್ಲ ಅಂತ ಹೇಳುತ್ತಿದ್ದರು ಹಾಗಾಗಿ ಪ್ರತಿಯೊಬ್ಬರೂ ಇತಿಹಾಸವನ್ನು ತಿಳಿದುಕೊಳ್ಳಬೇಕು. ಅದಕ್ಕೋಸ್ಕರನೇ ಸಂವಿಧಾನ ತಿಳಿದುಕೊಳ್ಳಲಿ ಎನ್ನುವ ಕಾರಣದಿಂದ ನಾನು ಎಚ್…
ಮೈಸೂರು : ಇಂದು ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಾಹಿತಿ ಬಾನು ಮುಷ್ತಾಕ್ ಅವರು ಚಾಲನೆ ನೀಡಲಿದ್ದು, ಅದಕ್ಕೂ ಮುನ್ನ ಇಂದು ನಾಡದೇವತೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಬಾನು ಮುಷ್ತಾಕ್ ಅವರು ವಿಶೇಷ ಪೂಜೆ ಸಲ್ಲಿಸಿದ್ದಾರೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವ ಇಂದು ಆರಂಭವಾಗಲಿದೆ. ಬೆಳಗ್ಗೆ 10.10 ರಿಂದ 10.40ರೊಳಗೆ ಸಲ್ಲುವ ಶುಭವೃಶ್ಚಿಕ ಲಗ್ನದಲ್ಲಿ ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ಬುಕರ್ ಪ್ರಶಸ್ತಿ ಪುರಸ್ಕೃತ ಸಾಹಿತಿ ಬಾನು ಮುಸ್ತಾಕ್ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಮೈಸೂರು ರೇಷ್ಮೆ ಸೀರೆ, ಮೈಸೂರು ಮಲ್ಲಿಗೆ ಮುಡಿದು ದಸರಾ ಉದ್ಘಾಟನೆ ಬಾನು ಮುಷ್ತಾಕ್ ಬಂದಿದ್ದರು. ತಾಯಿ ಚಾಮುಂಡೇಶ್ವರಿ ಪೂಜೆ ವೇಳೆ ಅವರು ಭಾವುಕರಾಗಿದ್ದು, ಕಣ್ಣಂಚಲಿ ಬಂದ ಕಣ್ಣೀರನ್ನು ಒರೆಸಿಕೊಂಡಿದ್ದಾರೆ. ಬಳಿಕ ಭಾಷಣದಲ್ಲಿ ಮಾತನಾಡಿದ ಅವರು, ಚಾಮುಂಡಿ ಸನ್ನಿಧಿ ಬಳಿ ಕರೆದೊಯ್ಯುವುದಾಗಿ ನನ್ನ ಸ್ನೇಹಿತೆ ಒಬ್ಬರು ಹೇಳಿದ್ದರು.ಈಗ ಸರ್ಕಾರ ನನ್ನನ್ನು ದಸರಾ ಉದ್ಘಾಟನೆಗೆ ಅಹ್ವಾನಿಸಿದದ ಬಳಿಕ ಬೇಕಾದಷ್ಟು ಏರುಪೇರು ಹಾಗೂ ಸನ್ನಿವೇಶಗಳು ನಡೆದರೂ ಕೂಡ, ತಾಯಿ ಚಾಮುಂಡಿ…
ದಾವಣಗೆರೆ : ಮಕ್ಕಳಿಗೆ ಸರಿಯಾದ ಶಿಕ್ಷಣ ನೀಡಿದಾಗ ದೇಶ ವಿವಿಧ ರಂಗಗಳಲ್ಲಿ ಮುಂದುವರೆಯಲು ಸಾಧ್ಯ ಈ ನಿಟ್ಟಿನಲ್ಲಿ 13 ಸಾವಿರ ಶಿಕ್ಷಕರ ನೇಮಕಾತಿಗೆ ಕ್ರಮವಹಿಸಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು. ಅವರು ಸೆ.20 ಚನ್ನಗಿರಿಯ ಆಂಜನೇಯಸ್ವಾಮಿ ಸಮುದಾಯ ಭವನದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಮತ್ತು ಗುರುಭವನ ನಿರ್ಮಾಣದ ಶಂಕುಸ್ಥಾಪನೆ ನೆರವೇರಿಸಿ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಭವಿಷ್ಯಕ್ಕಾಗಿ ಮುಂದಿನ ಪೀಳಿಗೆಗೆ ನಾವು ಏನಾದರೂ ಕೊಡುಗೆ ನೀಡಬೇಕಾಗಿದ್ದರೆ ಅದು ಶಿಕ್ಷಣ ವಾಗಿವಾಗಿರಬೇಕು. ಈ ನಿಟ್ಟಿನಲ್ಲಿ ಶಿಕ್ಷಣವೇ ನಿರ್ಣಾಯಕವಾಗಿದ್ದು ಇದಕ್ಕಾಗಿ ಶಿಕ್ಷಕರು ಪ್ರಾಮಾಣಿಕೆ ಸೇವೆ ಸಲಿಸುತ್ತಿದ್ದಾರೆ. ಶಿಕ್ಷಣ ಎನ್ನುವುದು ನಿರಂತರ ಇದಕ್ಕೆ ಯಾವುದೇ ಅಂತಿಮ ಇರುವುದಿಲ್ಲ ಎಂದರು. ವಲಸೆ ಹೋಗಿ ಗಂಡ, ಹೆಂಡತಿ ಇಬ್ಬರೂ ದುಡಿಯುತ್ತಿದ್ದರೆ ಮಕ್ಕಳು ಅಲ್ಲೆ ಆಟ ಆಡುತ್ತಿದ್ದರು. ಇದನ್ನು ಮನಗಂಡ ಮುಖ್ಯಮಂತ್ರಿ ದಿವಗಂತ ಬಂಗಾರಪ್ಪ ಅವರು ಅಂಗನವಾಡಿಗಳನ್ನು ತೆರೆದರು. ಇದರಿಂದ ಶಿಕ್ಷಣ…






