Author: kannadanewsnow57

ಬೆಳಗಾವಿ : ರಾಜ್ಯದ ಎಲ್ಲಾ ಪಡಿತರ ಚೀಟಿದಾರರು ತಪ್ಪದೇ ಕಡ್ಡಾಯವಾಗಿ ತಮ್ಮ ಕಾರ್ಡನ್ನು ಇ-ಕೆವೈಸಿ ಮಾಡಿಸಬೇಕು ಎಂದು ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದ್ದಾರೆ. ಅಧಿಕಾರಿಗಳು ಮತ್ತು ನ್ಯಾಯಬೆಲೆ ಅಂಗಡಿಗಳ ಮಾಲೀಕರ ಸಂಘದ ಅಧ್ಯಕ್ಷರೊಂದಿಗೆ ಸುವರ್ಣ ವಿಧಾನಸೌಧದ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ಪಡಿತರ ಫಲಾನುಭವಿಗಳು ಕಡ್ಡಾಯವಾಗಿ ತಮ್ಮ ಕಾರ್ಡನ್ನು ಇ-ಕೆವೈಸಿ ಮಾಡಿಸಬೇಕು. ಅರ್ಹರು ಒಂದು ವೇಳೆ ಪರಿಷ್ಕರಣೆ ವೇಳೆ ಎಪಿಎಲ್ಗೆ ಬದಲಾಗಿದ್ದಲ್ಲಿ, ಸಂಬಂಧಪಟ್ಟ ತಾಲ್ಲೂಕಿನ ತಹಶೀಲ್ದಾರರ ಕಚೇರಿಗೆ ಭೇಟಿ ಮಾಡಿ ಮನವಿ ಸಲ್ಲಿಸಬೇಕು. ಅದನ್ನು ಪರಿಶೀಲನೆ ಮಾಡಿ ಪುನಃ ಬಿಪಿಎಲ್ಗೆ ವರ್ಗಾಯಿಸಲಾಗುತ್ತದೆ ಎಂದು ತಿಳಿಸಿದ್ದಾರೆ. 3 ಲಕ್ಷದ 96 ಸಾವಿರ ಪಡಿತರ ಕಾರ್ಡುಗಳನ್ನು ಒಂದು ತಿಂಗ ಳೊಳಗೆ ಪರಿಷ್ಕರಣೆ ಮಾಡಿ, ನೂತನ ಕಾರ್ಡ್ ನೀಡಲು ಕ್ರಮ ವಹಿಸಬೇಕು. ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಈ ವರ್ಷ ಪ್ರತಿ ಕ್ವಿಂಟಲ್ ರಾಗಿಗೆ 4,886 ರೂ. ಬೆಲೆಯಂತೆ ಖರೀದಿಸಲಾಗುತ್ತಿದೆ. ಈಗಾಗಲೇ 6 ಲಕ್ಷ ಮೆಟ್ರಿಕ್ ಟನ್ ರಾಗಿ ಖರೀದಿಗೆ ರೈತರು ನೋಂದಣಿ ಮಾಡಿಕೊಂಡಿದ್ದಾರೆ.…

Read More

ಢಾಕಾ: ಬಾಂಗ್ಲಾದೇಶದಲ್ಲಿ ವಿಪಕ್ಷ ನಾಯಕ ಉಸ್ಮಾನ್ ಹಾದಿ ಹತ್ಯೆ ಬಳಿಕ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಸ್ಟಾರ್ ಹೋಟೆಲ್, ಕಟ್ಟಡಗಳ ಮೇಲೆ ಪ್ರತಿಭಟನಾಕಾರು ದಾಳಿ ನಡೆಸಿದ್ದಾರೆ. ಕಳೆದ ವರ್ಷ ಬಾಂಗ್ಲಾದೇಶದಲ್ಲಿ ಮಾಜಿ ಪ್ರಧಾನಿ ಶೇಖ್ ಹಸೀನಾ ವಿರುದ್ಧ ಹಿಂಸಾತ್ಮಕ ದಂಗೆಯನ್ನು ಹುಟ್ಟುಹಾಕಿದ್ದ ವಿರೋಧ ಪಕ್ಷದ ನಾಯಕ ಓಸ್ಮಾನ್ ಹಾದಿ ಗುರುವಾರ ಸಿಂಗಾಪುರದಲ್ಲಿ ನಿಧನರಾದರು. ಯುವ ನಾಯಕ ಉಸ್ಮಾನ್ ಹಾದಿ ಅವರ ಮರಣದ ನಂತರ, ಗುರುವಾರ ತಡರಾತ್ರಿ ಬಾಂಗ್ಲಾದೇಶದಲ್ಲಿ ಹಿಂಸಾಚಾರ ಭುಗಿಲೆದ್ದಿತು, ಪ್ರತಿಭಟನಾಕಾರರು ಹಿಂಸಾತ್ಮಕವಾಗಿ ಮಾರ್ಪಟ್ಟರು. ಹಾದಿ ಅವರ ಮರಣದ ನಂತರ, ಇಂಕ್ವಿಲಾಬ್ ಮಂಚ್‌ನ ಪ್ರತಿಭಟನಾಕಾರರು ಬಾಂಗ್ಲಾದೇಶದ ಪತ್ರಿಕೆಗಳಾದ ಪ್ರೋಥೋಮ್ ಅಲೋ ಮತ್ತು ಢಾಕಾದಲ್ಲಿ ಡೈಲಿ ಸ್ಟಾರ್‌ನ ಕಟ್ಟಡಗಳ ಮೇಲೆ ದಾಳಿ ಮಾಡಿ ಧ್ವಂಸಗೊಳಿಸಿದರು. ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ದೊಡ್ಡ, ಹಿಂಸಾತ್ಮಕ ಪ್ರತಿಭಟನೆಗಳು ಸಹ ನಡೆಯುತ್ತಿವೆ. ಕಳೆದ ವಾರ ಉಸ್ಮಾನ್ ಹಾದಿಗೆ ಗುಂಡು ಹಾರಿಸಲಾಯಿತು ಮತ್ತು ಆರು ದಿನಗಳ ಕಾಲ ಜೀವನ್ಮರಣ ಹೋರಾಟದ ನಂತರ ಸಿಂಗಾಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗ ಗುರುವಾರ ನಿಧನರಾದರು. ಫೆಬ್ರವರಿ…

Read More

ಬೆಂಗಳೂರು : 2025-26ನೇ ಶೈಕ್ಷಣಿಕ ಸಾಲಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ ವಿಭಾಗದ 07 ಜಿಲ್ಲೆಗಳ 1345 ಸರ್ಕಾರಿ ಪ್ರೌಢಶಾಲೆಗಳಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಗಾಗಿ ‘ಪರಿಹಾರ ಬೋಧನೆ” ತರಗತಿಗಳನ್ನು ಹಮ್ಮಿಕೊಳ್ಳಲು ಆಡಳಿತಾತ್ಮಕ ಅನುಮೋದನೆ ಹಾಗೂ ಅನುದಾನ ಬಿಡುಗಡೆ ಮಾಡುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲೆ ಓದಲಾದ ಪ್ರಸ್ತಾವನೆಯಲ್ಲಿ ಕಳೆದ ಹಲವು ವರ್ಷಗಳಿಂದ ಕಲ್ಯಾಣ ಕರ್ನಾಟಕ ಪ್ರದೇಶದ 07 ಜಿಲ್ಲೆಗಳ ಫಲಿತಾಂಶ ರಾಜ್ಯದ ಇತರೆ ಜಿಲ್ಲೆಗಳಿಗಿಂತ ಕಡಿಮೆಯಾಗಿರುವುದು ಗಮನಿಸಬಹುದು. ಪ್ರಸಕ್ತ ಸಾಲಿನ ಫಲಿತಾಂಶ ಉತ್ತಮ ಪಡಿಸಲು ಇಲಾಖೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಅವುಗಳನ್ನು ಜಾರಿಮಾಡುವುದರ ಜೊತೆಗೆ ಕೆಕೆಆರ್ಡಿಬಿ (ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ) ವತಿಯಿಂದ ಫಲಿತಾಂಶ ಸುಧಾರಣೆಗಾಗಿಯೇ ದೊರೆಯುವ ಅನುದಾನ ಬಳಸಿಕೊಳ್ಳಲು ಕ್ರಿಯಾಯೋಜನೆ ರೂಪಿಸಲಾಗಿದ್ದು, ಅನುಮೋದನೆಗಾಗಿ ಸಲ್ಲಿಸಿರುತ್ತಾರೆ. ಕಲಬುರಗಿ ವಿಭಾಗದ ಎಲ್ಲಾ 1345 ಸರ್ಕಾರಿ ಪ್ರೌಢ ಶಾಲೆಗಳಿದ್ದು, ಈ ಎಲ್ಲಾ ಪ್ರೌಢ ಶಾಲೆಗಳಲ್ಲಿನ 10ನೇ ತರಗತಿ ವಿದ್ಯಾರ್ಥಿಗಳಿಗೆ ಬೆಳಿಗ್ಗೆ ಮತ್ತು ಸಾಯಂಕಾಲ ವಿಶೇಷ ತರಗತಿಗಳನ್ನು ನಡೆಸಿ, ಪರಿಹಾರ ಬೋಧನೆ…

Read More

ಬೆಂಗಳೂರು : ವಿದ್ಯಾರ್ಥಿನಿಲಯಗಳ ನಿರ್ವಹಣೆಯಲ್ಲಿ ನಿಲಯ ಮೇಲ್ವಿಚಾರಕರ ಪಾತ್ರ ಮುಖ್ಯವಾಗಿದ್ದು, ನಿಲಯದ ಸಮರ್ಪಕ / ಅಸಮರ್ಪಕ ನಿರ್ವಹಣೆಗೆ ನಿಲಯ ಮೇಲ್ವಿಚಾರಕರೇ ಬಹಳಮಟ್ಟಿಗೆ ಕಾರಣರಾಗಿರುತ್ತಾರೆ. ಅದ್ದರಿಂದ ಈ ಕೆಳಕಂಡ ಕರ್ತವ್ಯಗಳನ್ನು ನಿರ್ವಹಿಸುವುದು. ನಿಲಯಾರ್ಥಿಗಳ ಮೇಲ್ವಿಚಾರಣೆ:– ವಿದ್ಯಾರ್ಥಿನಿಲಯಕ್ಕೆ ಪ್ರವೇಶ ಪಡೆದ ಎಲ್ಲಾ ವಿದ್ಯಾರ್ಥಿಗಳು (ದಸರಾ ಹಾಗೂ ಇನ್ನಿತರ ದೀರ್ಘಕಾಲದ ರಜೆ ಅವಧಿಯನ್ನು ಹೊರತುಪಡಿಸಿ) ನಿಲಯದಲ್ಲಿ ವಾಸ್ತವ್ಯವಿದ್ದು, ದಿನನಿತ್ಯ ಹಾಜರಾಗುತ್ತಿರುವರೇ ಎಂಬ ಸಂಪೂರ್ಣ ಬಗ್ಗೆ ಮೇಲ್ವಿಚಾರಣೆ ಕಾಲೇಜಿಗೆ ಶಾಲೆಗೆ /ಮಾಡುವ ಜವಾಬ್ದಾರಿ ನಿಲಯಮೇಲ್ವಿಚಾರಕದ್ದಾಗಿರುತ್ತದೆ. ಗೈರು ಹಾಜರಾದಂತಹ, ಅನುಮತಿ ಇಲ್ಲದೇ ಕೇಂದ್ರಸ್ಥಾನ ಬಿಟ್ಟು ಊರಿಗೆ ఎల్లా ತರಗತಿಗಳಿಗೆ ಹೋಗುವಂತಹ, ನಿಲಯದಲ್ಲಿ ವಾಸ್ತವ್ಯವಿದ್ದು, ಶಾಲೆಗೆ ಅಥವಾ ಶಾಲೆಯ ಹಾಜರಾಗದಂತಹ ವಿದ್ಯಾರ್ಥಿಗಳ ಪಾಲಕರನ್ನು ವಿದ್ಯಾರ್ಥಿನಿಲಯಕ್ಕೆ ಕರೆಸಿ ಇಂತಹ ಸ್ವಭಾವ ನಡತೆಯನ್ನು ಮುಂದುವರೆಸಿದಲ್ಲಿ ಅಂತಹ ವಿದ್ಯಾರ್ಥಿಗಳನ್ನು ನಿಲಯದಿಂದ ಹೊರಹಾಕಲು ಮೇಲಾಧಿಕಾರಿಗಳಿಗೆ ವರದಿಮಾಡಲಾಗುವುದೆಂದು ಎಚ್ಚರಿಕೆ ನೀಡುವುದು. ಇಂತಹ ಎಚ್ಚರಿಕೆಯಿಂದಲೂ ಸುಧಾರಿಸದೇ ಇರುವಂತಹ ವಿದ್ಯಾರ್ಥಿಗಳನ್ನು ನಿಲಯದಿಂದ ತೆಗೆದುಹಾಕುವ ಕ್ರಮವನ್ನು ಕೈಗೊಳ್ಳತಕ್ಕದ್ದು. ಅಲ್ಲದೇ, ನಿಲಯಾರ್ಥಿಗಳ ವಾಸ್ತವ್ಯ, ಅವರಿಗೆ ಉತ್ತಮ / ಪೌಷ್ಠಿಕ ಆಹಾರ ನೀಡಿಕೆ, ಅವರ…

Read More

ಬೆಳಗಾವಿ : ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಕ್ಕೆ ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರ ದೊರಕಿತು. ಯಾವುದೇ ವ್ಯಕ್ತಿ, ಕುಟುಂಬ ಅಥವಾ ಕುಟುಂಬದ ಸದಸರನ್ನು ಸಾಮಾಜಿಕವಾಗಿ ಬಹಿಷ್ಕರಿಸಿದರೆ ಅಪರಾಧವೆಂದ ಪರಿಗಣಿಸಿ 3 ವರ್ಷದವರೆಗೆ ಜೈಲು ಶಿಕ್ಷೆ, 1 ಲಕ್ಷ ರು. ದಂಡ ವಿಧಿಸಲು ಅವಕಾಶ ಕಲ್ಪಿಸಲು ರೂಪಿಸಿರುವ ‘ಕರ್ನಾಟಕ ಸಾಮಾಜಿಕ ಬಹಿ ಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿ ಹಾರ) ವಿಧೇಯಕ- 2025’ವು ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಲು ಅವ ಕಾಶ ಕಲ್ಪಿಸುವ ತಿದ್ದುಪಡಿವಿಧಾನ ಸಭೆಯಲ್ಲಿ ಸರ್ವಾನುಮತದಿಂದ ಅಂಗೀಕಾರಗೊಂಡಿದೆ. ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ಗುರುವಾರದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ.ಮಹದೇಪ್ಪನವರು ಸಭೆಯ ಅಂಗೀಕಾರ ಕೋರಿ ವಿಧೇಯಕವನ್ನು ಪರ್ಯಾಲೋಚನೆಗೆ ತಂದರು. ಅಸಂವಿಧಾನಿಕ ಆಚರಣೆಗಳಾದ ಜಾತಿ ಪಂಚಾಯಿತಿಗಳು ಹೇರುವ ಸಾಮಾಜಿಕ ಬಹಿಷ್ಕಾರ, ಕಿರುಕುಳ, ವಿವಿಧ ರೀತಿಯ ಶಿಕ್ಷೆಗಳನ್ನು ತಡೆಗಟ್ಟಿ ಸಾಮಾಜಿಕ ಬಹಿಷ್ಕಾರ ಪದ್ದತಿಯನ್ನು ಸಮಾಜದಿಂದ ನಿರ್ಮೂಲನೆ ಮಾಡುವುದಕ್ಕಾಗಿ ಕರ್ನಾಟಕ ಸಾಮಾಜಿಕ…

Read More

ಬೆಳಗಾವಿ : ಮೊಟ್ಟೆಯಿಂದ ಅನಾರೋಗ್ಯ ಉಂಟಾಗುತ್ತದೆ ಎಂಬುದು ಸುಳ್ಳು. ಮೊಟ್ಟೆ ಪೌಷ್ಟಿಕಾಂಶಯುಕ್ತವಾಗಿದ್ದು, ಇದು ಆರೋಗ್ಯಕ್ಕೆ ಒಳ್ಳೆಯದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂ ರಾವ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಸಚಿವ ದಿನೇಶ್ ಗುಂಡೂರಾವ್, ನಾಡಿನ ಸಮಸ್ತ ಜನರೇ, ಕಳೆದ ನಾಲ್ಕೈದು ದಿನಗಳ ಹಿಂದಿದ್ದ ನಿಮ್ಮೆಲ್ಲರ ಆತಂಕವನ್ನು ದೂರ ಮಾಡುವಂತಹ ವರದಿ ಬಂದಿದೆ. ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶಗಳಿಲ್ಲ ಎಂಬುದು ದೃಢಪಟ್ಟಿದೆ ಎಂದು ತಿಳಿಸಿದ್ದಾರೆ. ಮೊಟ್ಟೆಯಲ್ಲಿ ಕ್ಯಾನ್ಸರ್‌ ಉಂಟುಮಾಡುವ ಅಂಶಗಳಿವೆ ಎಂಬ ಚರ್ಚೆ-ವದಂತಿ ಬಂದ ಹಿನ್ನೆಲೆಯಲ್ಲಿ ಹಲವು ಮೊಟ್ಟೆಗಳನ್ನು ಪ್ರಯೋಗಾಲಯದಲ್ಲಿ ತಪಾಸಣೆ ನಡೆಸಲು ನಿರ್ದೇಶನ ನೀಡಲಾಗಿತ್ತು. ಅದರಂತೆ ಅಂತಿಮವಾಗಿ ಎಲ್ಲರಿಗೂ ಸಮಾಧಾನ ತರುವಂತಹ ವರದಿ ಬಂದಿದೆ ಎಂದು ಹೇಳಿದ್ದಾರೆ. ಮೊಟ್ಟೆಯಲ್ಲಿ ಯಾವುದೇ ರೀತಿಯ ಹಾನಿಕಾರಕ ಅಂಶಗಳು ಇರುವ ಸಾಧ್ಯತೆಯಿಲ್ಲ ಎಂದು ವದಂತಿ ಕೇಳಿ ಬಂದಾಗಲೇ ಹೇಳಿದ್ದೆ, ಪ್ರಯೋಗಾಲಯದಲ್ಲಿ ನಡೆಸಿದ ಪರೀಕ್ಷಾ ವೇಳೆ ಕೂಡ ಅದು ಸಾಭೀತಾಗಿದೆ. ಹಾಗಾಗಿ ಯಾವುದೇ ರೀತಿಯ ಸಮಸ್ಯೆ ಆಗುವುದಿಲ್ಲ ಎಂಬ ಭರವಸೆಯಿದೆ. ನಾಗರೀಕರು ನಿರ್ಭೀತಿಯಿಂದ ಮೊಟ್ಟೆಗಳ…

Read More

ಅಮರಿಕಾ : ಅಮೆರಿಕಾದಲ್ಲಿ ಮತ್ತೊಂದು ವಿಮಾನ ದುರಂತ ಸಂಭವಿಸಿದ್ದು, ಉತ್ತರ ಕೆರೊಲಿನಾದ ಇರೆಡೆಲ್ ಕೌಂಟಿಯಲ್ಲಿ ವಿಮಾನ ಅಪಘಾತಕ್ಕೀಡಾಗಿ ಹಲವಾರು ಜನರು ಸಾವನ್ನಪ್ಪಿದ್ದಾರೆ. ವಿಮಾನ ಘಟನೆ”ಯನ್ನು ಮೊದಲು ಸ್ಟೇಟ್ಸ್‌ವಿಲ್ಲೆ ಪ್ರಾದೇಶಿಕ ವಿಮಾನ ನಿಲ್ದಾಣ ವರದಿ ಮಾಡಿದೆ, ಅದು ಫೇಸ್‌ಬುಕ್ ಪೋಸ್ಟ್‌ನಲ್ಲಿ, “ಸುಮಾರು ಬೆಳಿಗ್ಗೆ 10:15 ಕ್ಕೆ, ವಿಮಾನವು ಇಳಿಯುವಾಗ ಅಪಘಾತಕ್ಕೀಡಾಯಿತು. ಫೆಡರಲ್ ವಿಮಾನಯಾನ ಆಡಳಿತ (FAA) ಮಾರ್ಗದಲ್ಲಿದೆ ಮತ್ತು ಘಟನೆಯ ಬಗ್ಗೆ ತನಿಖೆ ನಡೆಸುತ್ತದೆ” ಎಂದು ಹೇಳಿದೆ. ವಿಮಾನವು ವಿಮಾನ ನಿಲ್ದಾಣದಿಂದ ಹೊರಟು ತಕ್ಷಣವೇ ಹಿಂದಕ್ಕೆ ತಿರುಗಿ ಬೆಂಕಿ ಹೊತ್ತಿಕೊಳ್ಳುವ ಮೊದಲು ಇಳಿಯಲು ಪ್ರಯತ್ನಿಸಿತು ಎಂದು ಸ್ಥಳೀಯ ಮಾಧ್ಯಮ ಸಂಸ್ಥೆ WCNC ವರದಿ ಮಾಡಿದೆ, ಅಪಘಾತ ಹೇಗೆ ಸಂಭವಿಸಿತು ಎಂಬುದರ ಕುರಿತು ಸ್ವಲ್ಪ ಬೆಳಕು ಚೆಲ್ಲುತ್ತದೆ. ರಾಷ್ಟ್ರೀಯ ಸಾರಿಗೆ ಸುರಕ್ಷತಾ ಮಂಡಳಿ ಮತ್ತು ಫೆಡರಲ್ ವಿಮಾನಯಾನ ಆಡಳಿತ (FAA) ತನಿಖೆ ಪ್ರಸ್ತುತ ನಡೆಯುತ್ತಿದೆ ಮತ್ತು ದಿನ ಕಳೆದಂತೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ. https://twitter.com/RT_com/status/2001699034180821046?s=20

Read More

ಬೆಳಗಾವಿ : ರಾಜ್ಯದಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳ ಆಧಾರದ ಮೇಲೆ ಸುಮಾರು 13 ಲಕ್ಷ ಕಾರ್ಡುಗಳು ಅನರ್ಹವಾಗಿವೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದರು. ಅಧಿಕಾರಿಗಳು ಮತ್ತು ನ್ಯಾಯಬೆಲೆ ಅಂಗಡಿಗಳ ಮಾಲೀಕರ ಸಂಘದ ಅಧ್ಯಕ್ಷರೊಂದಿಗೆ ಸುವರ್ಣ ವಿಧಾನಸೌಧದ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ಪಡಿತರ ಫಲಾನುಭವಿಗಳು ಕಡ್ಡಾಯವಾಗಿ ತಮ್ಮ ಕಾರ್ಡನ್ನು ಇ-ಕೆವೈಸಿ ಮಾಡಿಸಬೇಕು. ಅರ್ಹರು ಒಂದು ವೇಳೆ ಪರಿಷ್ಕರಣೆ ವೇಳೆ ಎಪಿಎಲ್ಗೆ ಬದಲಾಗಿದ್ದಲ್ಲಿ, ಸಂಬಂಧಪಟ್ಟ ತಾಲ್ಲೂಕಿನ ತಹಶೀಲ್ದಾರರ ಕಚೇರಿಗೆ ಭೇಟಿ ಮಾಡಿ ಮನವಿ ಸಲ್ಲಿಸಬೇಕು. ಅದನ್ನು ಪರಿಶೀಲನೆ ಮಾಡಿ ಪುನಃ ಬಿಪಿಎಲ್ಗೆ ವರ್ಗಾಯಿಸಲಾಗುತ್ತದೆ ಎಂದು ತಿಳಿಸಿದ್ದಾರೆ. 3 ಲಕ್ಷದ 96 ಸಾವಿರ ಪಡಿತರ ಕಾರ್ಡುಗಳನ್ನು ಒಂದು ತಿಂಗಳೊಳಗೆ ಪರಿಷ್ಕರಣೆ ಮಾಡಿ, ನೂತನ ಕಾರ್ಡ್ ನೀಡಲು ಕ್ರಮ ವಹಿಸಬೇಕು. ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಈ ವರ್ಷ ಪ್ರತಿ ಕ್ವಿಂಟಲ್ ರಾಗಿಗೆ 4,886 ರೂ. ಬೆಲೆಯಂತೆ ಖರೀದಿಸಲಾಗುತ್ತಿದೆ. ಈಗಾಗಲೇ 6 ಲಕ್ಷ ಮೆಟ್ರಿಕ್…

Read More

ಬೆಂಗಳೂರು : ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ ಅಡಿಯಲ್ಲಿ ಕೈಗೊಳ್ಳಬಹುದಾದಂತಹ ಕಾಮಗಾರಿಗಳ ಪಟ್ಟಿ ಇಲ್ಲಿದೆ. 1. ಪ್ರಾಥಮಿಕ, ಮಾಧ್ಯಮಿಕ ಮತ್ತು ಪ್ರೌಢ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳು: ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ, ಮಾಧ್ಯಮಿಕ ಮತ್ತು ಪ್ರೌಢ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಿಗೆ ಈ ಕೆಳಕಂಡ ಸೌಲಭ್ಯಗಳನ್ನು ಒದಗಿಸಬಹುದಾಗಿದೆ. 1) ಶಾಲಾ ಕೊಠಡಿಗಳ ನಿರ್ಮಾಣ 2) ಕಾಂಪೌಂಡ್ ಗೋಡೆಗಳ ನಿರ್ಮಾಣ 3) ಆಟದ ಮೈದಾನಗಳ ಅಭಿವೃದ್ಧಿ 4) ಮೂಲಭೂತ ಸೌಕರ್ಯಗಳನ್ನೊಳಗೊಂಡ ಸುಸಜ್ಜಿತ ಗ್ರಂಥಾಲಯಗಳ ನಿರ್ಮಾಣ 5) ಸುಸಜ್ಜಿತ ಪ್ರಯೋಗಾಲಯಗಳ ನಿರ್ಮಾಣ 6) ಬಯಲು ರಂಗಮಂದಿರಗಳ ನಿರ್ಮಾಣ 7) ಸೈಕಲ್ ಸ್ಟ್ಯಾಂಡ್‌ಗಳ ನಿರ್ಮಾಣ 8) ಶಾಲೆಗಳ ಹತ್ತಿರ ಶಿಕ್ಷಕರಿಗೆ ವಸತಿ ಗೃಹಗಳ ನಿರ್ಮಾಣ 9) RO ಮಾದರಿಯ ಕುಡಿಯುವ ನೀರಿನ ಸೌಲಭ್ಯ ಒದಗಿಸುವುದು. 10) ಗಣಕಯಂತ್ರ ಮತ್ತು ಪ್ರಿಂಟರ್ ಇತ್ಯಾದಿಗಳನ್ನು ಒದಗಿಸುವುದು. 11) ಬೋಧನೋಪಕರಣಗಳು ಹಾಗೂ ಆಟೋಪಕರಣಗಳನ್ನು ಒದಗಿಸುವುದು. 2. ಉನ್ನತ ಶಿಕ್ಷಣ ಸರ್ಕಾರಿ ಕಾಲೇಜುಗಳು, ಸರ್ಕಾರಿ ಕೈಗಾರಿಕಾ ತರಬೇತಿ…

Read More

ಬೆಂಗಳೂರು : ಆರೋಗ್ಯ ಇಲಾಖೆಯು ರಾಜ್ಯಾದ್ಯಂತ ಇದೇ ಭಾನುವಾರ (ಡಿ.21) ಪಲ್ಸ್ ಪೋಲಿಯೊ ಕಾರ್ಯಕ್ರಮ ಹಮ್ಮಿಕೊಂಡಿದ್ದು, 5 ವರ್ಷದೊಳಗಿನ 62.40 ಲಕ್ಷ ಮಕ್ಕಳನ್ನು ತಲುಪುವ ಗುರಿ ಹಾಕಿಕೊಂಡಿದೆ. ಪೋಲಿಯೊ ಹನಿ ವಿತರಣೆಗೆ 33,258 ಬೂತ್ಗಳನ್ನು ಗುರುತಿಸಲಾಗಿದೆ. 1,030 ಸಂಚಾರಿ ತಂಡಗಳು ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ ಸೇರಿದಂತೆ ವಿವಿಧ ಸಾರ್ವಜನಿಕ ಪ್ರದೇಶಗಳಲ್ಲಿ ಲಸಿಕೆ ವಿತರಿಸಲಿವೆ. 2,096 ಟ್ರಾನ್ಸಿಟ್ ತಂಡಗಳನ್ನೂ ರಚಿಸಲಾಗಿದೆ. ಈ ಕಾರ್ಯಕ್ರಮಕ್ಕೆ 1.13 ಲಕ್ಷ ಕಾರ್ಯಕರ್ತರನ್ನು ಬಳಸಿಕೊಳ್ಳಲಾಗುತ್ತಿದೆ. 7,322 ಮೇಲ್ವಿಚಾರಕರನ್ನು ನೇಮಿಸಲಾಗಿದೆ. ಐದು ವರ್ಷದೊಳಗಿನ ಎಲ್ಲ ಮಕ್ಕಳು ಲಸಿಕೆ ಪಡೆದುಕೊಳ್ಳಬೇಕು. ಈ ಮೂಲಕ ಪೋಲಿಯೊ ವಿರುದ್ಧದ ಹೋರಾಟದಲ್ಲಿ ವಿಜಯ ಸಾಧಿಸುವುದನ್ನು ಮುಂದುವರಿಸಲು ಕೈಜೋಡಿಸಬೇಕು. ರಾಜ್ಯದ ಎಲ್ಲ ಆಸ್ಪತ್ರೆಗಳು, ಗ್ರಾಮೀಣ ಪ್ರದೇಶ, ಗುಡ್ಡಗಾಡು ಪ್ರದೇಶ ಸೇರಿದಂತೆ ವಿವಿಧೆಡೆ ಲಸಿಕೆ ಹಾಕಲು ವ್ಯವಸ್ಥೆ ಮಾಡಲಾಗಿದೆ. ಪೋಲಿಯೊ ಹನಿ ಸಂಪೂರ್ಣ ಸುರಕ್ಷಿತವಾಗಿದ್ದು, ಯಾವುದೇ ವದಂತಿಗಳಿಗೆ ಕಿವಿಗೊಡಬಾರದು. ಹತ್ತಿರದ ಲಸಿಕಾ ಕೇಂದ್ರ ಪತ್ತೆಗೆ ‘Nearby Vaccination centre Karnataka’ ಆ್ಯಪ್ ಇನ್ಸ್ಟಾಲ್ ಮಾಡಿಕೊಂಡು, ಕೇಂದ್ರ ಹುಡುಕಬಹುದು…

Read More