Author: kannadanewsnow57

ತೆಲಂಗಾಣ : ದೇಶದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಕೃತ್ಯ ನಡೆದಿದ್ದು, ಪ್ರೀತಿಸಿ ಮದುವೆಯಾಗಿದ್ದ ಹೆಂಡತಿಯನ್ನು ಪಾಪಿ ಪತಿಯೊಬ್ಬ ಮನಸೋ ಇಚ್ಛೆ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ತೆಲಂಗಾಣದ ವಿಕಾರಾಬಾದ್ ಜಿಲ್ಲೆಯ ತಂದೂರ್ ಪಟ್ಟಣದ ಸಾಯಿಪುರ ಕಾಲೋನಿಯಲ್ಲಿ ಪ್ರೇಮ ವಿವಾಹವಾಗಿದ್ದ ತನ್ನ ಪತ್ನಿ ಅನುಷಾ (22) ಮೇಲೆ ಪರಮೇಶ್ ಕುಮಾರ್ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ. ಕೌಟುಂಬಿಕ ಕಲಹ ಮತ್ತು ಪೋಷಕರ ವಿರೋಧದ ನಡುವೆ ನಡೆದ ಈ ಕ್ರೂರ ಘಟನೆಯ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸಾಯಿಪುರ ಕಾಲೋನಿಯಲ್ಲಿ ವಾಸಿಸುವ ಪರಮೇಶ್ ಕುಮಾರ್ ಮತ್ತು ಅನುಷಾ 8 ತಿಂಗಳ ಹಿಂದೆ ವಿವಾಹವಾಗಿದ್ದಾರೆ. ಪರಮೇಶ್ ಕುಟುಂಬ ಈ ಪ್ರೇಮ ವಿವಾಹವನ್ನು ವಿರೋಧಿಸಿದ್ದರಿಂದ ಗ್ರಾಮದಲ್ಲಿ ಆಗಾಗ್ಗೆ ಸಣ್ಣಪುಟ್ಟ ಜಗಳಗಳು ಸಂಭವಿಸುತ್ತವೆ ಎಂದು ಸ್ಥಳೀಯರು ಹೇಳುತ್ತಾರೆ. ಎರಡು ದಿನಗಳ ಹಿಂದೆ, ಮನೆಯಲ್ಲಿ ಮತ್ತೊಂದು ಸಣ್ಣ ಜಗಳ ನಡೆದಿದ್ದು, ಅನುಷಾ ತನ್ನ ತವರು ಮನೆಗೆ ಮರಳಿದ್ದಾಳೆ. ಈ ವಿಷಯ ತಿಳಿದ ಪರಮೇಶ್ ಅನುಷಾಳ ಪೋಷಕರನ್ನು…

Read More

ಬೆಳಗಾವಿ : ಪಡಿತರ ಚೀಟಿಯಲ್ಲಿ ಅರ್ಹರ ಹೆಸರು ಡಿಲೀಟ್ ಆಗಿದ್ದರೆ ತಕ್ಷಣವೇ 45 ದಿನದೊಳಗಾಗಿ ಅಗತ್ಯ ದಾಖಲೆಗಳೊಂದಿಗೆ ಸಂಬಂಧಪಟ್ಟ ತಾಲ್ಲೂಕಿನ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದಲ್ಲಿ ಸದರಿ ಮನವಿಯನ್ನು ಪರಿಶೀಲಿಸಿ ಆದ್ಯತಾ ಪಡಿತರ ಚೀಟಿ ಹೊಂದಲು ನಿಯಮಾನುಸಾರ ಅರ್ಹರಿದ್ದಲ್ಲಿ ಅಂತಹವರ ಆದ್ಯತಾ ಪಡಿತರ ಚೀಟಿಯನ್ನು (PHH) ಮರುಸ್ಥಾಪಿಸಲು ಕ್ರಮವಹಿಸಲಾಗುತ್ತದೆ. ಮಾನದಂಡಗಳ ಆಧಾರದ ಮೇಲೆ ಅನರ್ಹವೆಂದು ಕಂಡುಬAದ ಆದ್ಯತಾ ಪಡಿತರ ಚೀಟಿಗಳನ್ನು ((PHH) ) ಆದ್ಯತೇತರ ಪಡಿತರ ಚೀಟಿಗಳನ್ನಾಗಿ (NPHH) ಪರಿವರ್ತಿಸಲು ಕ್ರಮವಹಿಸಲಾಗುತ್ತಿದೆ. ಈ ರೀತಿ ತಾತ್ಕಾಲಿಕವಾಗಿ ಆದ್ಯತೇತರ ಪಡಿತರ ಚೀಟಿಯನ್ನಾಗಿ (NPHH) ಪರಿವರ್ತಿಸಲಾದ ಪಡಿತರ ಚೀಟಿದಾರರು ಆದ್ಯತಾ ಪಡಿತರ ಚೀಟಿ ಹೊಂದಲು PHH) ಅರ್ಹರಾಗಿದ್ದಲ್ಲಿ 45 ದಿನದೊಳಗಾಗಿ ಅಗತ್ಯ ದಾಖಲೆಗಳೊಂದಿಗೆ ಸಂಬAಧಪಟ ತಾಲ್ಲೂಕಿನ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದಲ್ಲಿ ಸದರಿ ಮನವಿಯನ್ನು ಪರಿಶೀಲಿಸಿ ಆದ್ಯತಾ ಪಡಿತರ ಚೀಟಿ ಹೊಂದಲು ನಿಯಮಾನುಸಾರ ಅರ್ಹರಿದ್ದಲ್ಲಿ ಅಂತಹವರ ಆದ್ಯತಾ ಪಡಿತರ ಚೀಟಿಯನ್ನು (PHH) ಮರುಸ್ಥಾಪಿಸಲು ಕ್ರಮವಹಿಸಲಾಗುತ್ತದೆ. ಅದರಂತೆ ಒಂದು ವೇಳೆ ಅರ್ಹ ಫಲಾನುಭವಿಯ ಆದ್ಯತಾ ಪಡಿತರ ಚೀಟಿಯನ್ನು ರದ್ದು…

Read More

ಇತ್ತೀಚಿನ ದಿನಗಳಲ್ಲಿ, ಮಾರುಕಟ್ಟೆಯಲ್ಲಿ ವಿವಿಧ ಆಹಾರ ಪದಾರ್ಥಗಳನ್ನು ಕಲಬೆರಕೆ ಮಾಡಲಾಗುತ್ತಿದೆ. ಇದು ನಮ್ಮ ಆರೋಗ್ಯಕ್ಕೆ ದೊಡ್ಡ ಬೆದರಿಕೆಯಾಗುತ್ತಿದೆ. ಆಹಾರ ಪದಾರ್ಥಗಳ ಕಲಬೆರಕೆಯು ಗಂಭೀರ ಕಾಯಿಲೆಗಳ ಅಪಾಯವನ್ನು ಗಮನಾರ್ಹವಾಗಿ ಹೆಚ್ಚಿಸುತ್ತದೆ. ನಮ್ಮೆಲ್ಲರ ಮನೆಗಳಲ್ಲಿ ಅಡುಗೆ ಎಣ್ಣೆಯನ್ನು ಬಳಸಲಾಗುತ್ತದೆ. ಇತ್ತೀಚಿನ ದಿನಗಳಲ್ಲಿ, ಮಾರುಕಟ್ಟೆಯಲ್ಲಿ ಅಡುಗೆ ಎಣ್ಣೆಯನ್ನು ಸಹ ಕಲಬೆರಕೆ ಮಾಡಲಾಗುತ್ತಿದೆ. ಕಲಬೆರಕೆ ಎಣ್ಣೆಯನ್ನು ಸೇವಿಸುವುದು ನಿಮ್ಮ ಆರೋಗ್ಯಕ್ಕೆ ತುಂಬಾ ಹಾನಿಕಾರಕವಾಗಿದೆ. ಆದ್ದರಿಂದ, ಎಣ್ಣೆಯಲ್ಲಿ ಕಲಬೆರಕೆಯನ್ನು ಪತ್ತೆಹಚ್ಚಲು ನಿಮಗೆ ಸಹಾಯ ಮಾಡುವ ಕೆಲವು ವಿಷಯಗಳನ್ನು ತಿಳಿದುಕೊಳ್ಳುವುದು ಬಹಳ ಮುಖ್ಯ. ಎಣ್ಣೆ ಕಲಬೆರಕೆಯಾಗಿದೆಯೇ ಅಥವಾ ಇಲ್ಲವೇ ಎಂಬುದನ್ನು ಸುಲಭವಾಗಿ ನಿರ್ಧರಿಸಲು ನಿಮಗೆ ಸಹಾಯ ಮಾಡುವ ಕೆಲವು ಸರಳ ಮನೆಮದ್ದುಗಳಿವೆ. ಕಾಗದದ ಪರೀಕ್ಷೆಯನ್ನು ಬಳಸಿಕೊಂಡು ನೀವು ಎಣ್ಣೆಯ ಶುದ್ಧತೆಯನ್ನು ಸಹ ನಿರ್ಧರಿಸಬಹುದು. ಬಿಳಿ ಕಾಗದದ ತುಂಡನ್ನು ತೆಗೆದುಕೊಂಡು ಅದರ ಮೇಲೆ ಕೆಲವು ಹನಿ ಎಣ್ಣೆಯನ್ನು ಹಾಕಿ. ಕಾಗದದ ಮೇಲೆ ಗಾಢ ಹಳದಿ ಅಥವಾ ಕಂದು ಬಣ್ಣದ ಕಲೆ ಉಳಿದಿದ್ದರೆ, ಅದು ಕಲಬೆರಕೆಯನ್ನು ಸೂಚಿಸುತ್ತದೆ. ಎಣ್ಣೆ ಶುದ್ಧವಾಗಿದ್ದರೆ, ಅದು ಕಾಗದದ…

Read More

ಕಲಬುರಗಿ : ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಬಿಜೆಪಿ ಕಾರ್ಯಕರ್ತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಹೌದು, ಕಲ್ಬುರ್ಗಿಯಲ್ಲಿ ಬಿಜೆಪಿ ಕಾರ್ಯಕರ್ತೆ ಜ್ಯೋತಿ ಪಾಟೀಲ್ ಮೈ ಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರ್ಗಿ ತಾಲೂಕಿನ ನಂದಿಕೂರ ಗ್ರಾಮದ ಬಳಿ ನಿನ್ನೆ ರಾತ್ರಿ ನಡೆದಿದೆ. ನಂದಿಕೂರ ಗ್ರಾಮದಲ್ಲಿ ಮಲ್ಲಿನಾಥ ಬಿರಾದಾರ್ ಮನೆಯಲ್ಲಿ ಜ್ಯೋತಿ ಪಾಟೀಲ್ ಆತ್ಮಹತ್ಯೆ ಶರಣಾಗಿದ್ದಾರೆ.ಬಿಜೆಪಿ ಕಾರ್ಯಕರ್ತನಾಗಿರುವ ನಂದಿಕೂರ್ ಗ್ರಾಮದ ಮಲ್ಲಿನಾಥ್ ಮನೆಯಲ್ಲಿ ಇಲ್ಲದ ವೇಳೆ ಜ್ಯೋತಿ ಪಾಟೀಲ್ ಬಾಗಿಲು ಬಡಿದು ಎಬ್ಬಿಸಿದ್ದಾರೆ. ಮಲ್ಲಿನಾಥ ಬಿರಾದರ್ ಪತ್ನಿ, ಮೂವರು ಮಕ್ಕಳು ಮನೆಯಲ್ಲಿ ವಾಸವಿದ್ದರು. ಬಾಗಿಲು ತೆರೆದ ತಕ್ಷಣ ಜ್ಯೋತಿ ಪಾಟೀಲ್ ಬೆಂಕಿ ಹಚ್ಚಿಕೊಂಡಿದ್ದಾರೆ ಜ್ಯೋತಿ ಪಾಟೀಲ್ ಕಲಬುರ್ಗಿಯ ಬ್ರಹ್ಮಪುರ ಬಡಾವಣೆಯ ನಿವಾಸಿ ಎಂದು ತಿಳಿದುಬಂದಿದೆ. ಘಟನೆ ಕುರಿತು ಫರತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಸಿರಿಯಾದಲ್ಲಿ ಇಸ್ಲಾಮಿಕ್ ಸ್ಟೇಟ್ (IS) ಭಯೋತ್ಪಾದಕ ಸಂಘಟನೆಯ ವಿರುದ್ಧ ಅಮೆರಿಕವು ಪ್ರಮುಖ ಮತ್ತು ನಿರ್ಣಾಯಕ ಮಿಲಿಟರಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಈ ದಾಳಿಯು ಅಮೆರಿಕದ ಸೈನಿಕರು ಮತ್ತು ಒಬ್ಬ ಅಮೇರಿಕನ್ ನಾಗರಿಕನ ಪ್ರಾಣವನ್ನು ಬಲಿ ಪಡೆದ ಮಾರಕ ದಾಳಿಯ ನಂತರ ಈ ಕ್ರಮ ಕೈಗೊಳ್ಳಲಾಗಿದೆ.  ಈ ದಾಳಿಯ ನಂತರ, ಡೊನಾಲ್ಡ್ ಟ್ರಂಪ್ ಆಡಳಿತವು ತನ್ನ ನಾಗರಿಕರ ಹತ್ಯೆಗೆ ಅಮೆರಿಕವು ಪ್ರತಿಕ್ರಿಯಿಸುತ್ತದೆ ಎಂದು ಸ್ಪಷ್ಟಪಡಿಸಿತು. ಇದಕ್ಕೆ ಪ್ರತಿಕ್ರಿಯೆಯಾಗಿ, ಶುಕ್ರವಾರ, ಯುಎಸ್ ಮಿಲಿಟರಿ ಸಿರಿಯಾದಲ್ಲಿ ಐಎಸ್ ಗುರಿಗಳ ಮೇಲೆ ವ್ಯಾಪಕವಾದ ವೈಮಾನಿಕ ದಾಳಿಗಳನ್ನು ನಡೆಸಿತು. ಇದು ಹೊಸ ಯುದ್ಧದ ಆರಂಭವಲ್ಲ, ಬದಲಾಗಿ ತನ್ನ ನಾಗರಿಕರು ಮತ್ತು ಸೈನಿಕರ ಸಾವಿಗೆ ಪ್ರತೀಕಾರದ ಕ್ರಮ ಎಂದು ಅಮೆರಿಕ ನಿಸ್ಸಂದಿಗ್ಧವಾಗಿ ಹೇಳಿದೆ. ಯುಎಸ್ ರಕ್ಷಣಾ ಅಧಿಕಾರಿಗಳ ಪ್ರಕಾರ, ಸುಮಾರು ಒಂದು ವಾರದ ಹಿಂದೆ, ಐಎಸ್-ಸಂಯೋಜಿತ ಭಯೋತ್ಪಾದಕರು ಸಿರಿಯನ್ ಮರುಭೂಮಿಯಲ್ಲಿ ಹೊಂಚುದಾಳಿ ನಡೆಸಿ ಇಬ್ಬರು ಯುಎಸ್ ಸೈನಿಕರು ಮತ್ತು ಒಬ್ಬ ಅಮೇರಿಕನ್ ನಾಗರಿಕ ಇಂಟರ್ಪ್ರಿಟರ್ ಅನ್ನು ಕೊಂದರು. ಈ ಘಟನೆ ವಾಷಿಂಗ್ಟನ್‌ಗೆ…

Read More

ಇಸ್ಲಾಮಾಬಾದ್ : ತೋಷಖಾನಾ ಭ್ರಷ್ಟಾಚಾರ ಪ್ರಕರಣದಲ್ಲಿ ಇಮ್ರಾನ್ ಖಾನ್ ಮತ್ತು ಅವರ ಮಾಜಿ ಪತ್ನಿ ಬುಶ್ರಾ ಬೀಬಿಗೆ ಪಾಕಿಸ್ತಾನ ನ್ಯಾಯಾಲಯ 17 ವರ್ಷ ಜೈಲು ಶಿಕ್ಷೆ ವಿಧಿಸಿದೆ. ತೋಷಖಾನಾ ಭ್ರಷ್ಟಾಚಾರ ಪ್ರಕರಣದಲ್ಲಿ ಪಾಕಿಸ್ತಾನದ ನ್ಯಾಯಾಲಯ ಶನಿವಾರ ಜೈಲು ಶಿಕ್ಷೆ ವಿಧಿಸಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ತೋಷಖಾನಾ 2.0 ಪ್ರಕರಣ ಎಂದೂ ಕರೆಯಲ್ಪಡುವ ಈ ಪ್ರಕರಣವು ಖಾನ್ ಮತ್ತು ಬೀಬಿ ವಿರುದ್ಧದ ಭ್ರಷ್ಟಾಚಾರದ ಆರೋಪಗಳನ್ನು ಒಳಗೊಂಡಿದೆ, ನಿರ್ದಿಷ್ಟವಾಗಿ ವಿದೇಶಿ ಗಣ್ಯರಿಂದ ಉಡುಗೊರೆಗಳನ್ನು ಮಾರಾಟ ಮಾಡುವ ಆರೋಪಗಳಿಗೆ ಸಂಬಂಧಿಸಿದಂತೆ. ದಂಪತಿಗಳು 2021 ರಲ್ಲಿ ಸೌದಿ ಸರ್ಕಾರದಿಂದ ಆ ಉಡುಗೊರೆಗಳನ್ನು ಪಡೆದಿದ್ದರು.

Read More

ಕಲಬುರಗಿ : ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಬಿಜೆಪಿ ಕಾರ್ಯಕರ್ತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಹೌದು, ಕಲ್ಬುರ್ಗಿಯಲ್ಲಿ ಬಿಜೆಪಿ ಕಾರ್ಯಕರ್ತೆ ಜ್ಯೋತಿ ಪಾಟೀಲ್ ಮೈ ಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರ್ಗಿ ತಾಲೂಕಿನ ನಂದಿಕೂರ ಗ್ರಾಮದ ಬಳಿ ನಿನ್ನೆ ರಾತ್ರಿ ನಡೆದಿದೆ. ನಂದಿಕೂರ ಗ್ರಾಮದಲ್ಲಿ ಮಲ್ಲಿನಾಥ ಬಿರಾದಾರ್ ಮನೆಯಲ್ಲಿ ಜ್ಯೋತಿ ಪಾಟೀಲ್ ಆತ್ಮಹತ್ಯೆ ಶರಣಾಗಿದ್ದಾರೆ.ಬಿಜೆಪಿ ಕಾರ್ಯಕರ್ತನಾಗಿರುವ ನಂದಿಕೂರ್ ಗ್ರಾಮದ ಮಲ್ಲಿನಾಥ್ ಮನೆಯಲ್ಲಿ ಇಲ್ಲದ ವೇಳೆ ಜ್ಯೋತಿ ಪಾಟೀಲ್ ಬಾಗಿಲು ಬಡಿದು ಎಬ್ಬಿಸಿದ್ದಾರೆ. ಮಲ್ಲಿನಾಥ ಬಿರಾದರ್ ಪತ್ನಿ, ಮೂವರು ಮಕ್ಕಳು ಮನೆಯಲ್ಲಿ ವಾಸವಿದ್ದರು. ಬಾಗಿಲು ತೆರೆದ ತಕ್ಷಣ ಜ್ಯೋತಿ ಪಾಟೀಲ್ ಬೆಂಕಿ ಹಚ್ಚಿಕೊಂಡಿದ್ದಾರೆ ಜ್ಯೋತಿ ಪಾಟೀಲ್ ಕಲಬುರ್ಗಿಯ ಬ್ರಹ್ಮಪುರ ಬಡಾವಣೆಯ ನಿವಾಸಿ ಎಂದು ತಿಳಿದುಬಂದಿದೆ. ಘಟನೆ ಕುರಿತು ಫರತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ರಾಜ್ಯ ಸರ್ಕಾರವು ಜಾತಿ ಗಣತಿ ಸಮೀಕ್ಷೆ ನಡೆಸಿದ್ದ ಗಣತಿದಾರರಿಗೆ ಸಿಹಿಸುದ್ದಿ ನೀಡಿದ್ದು, ಹಿಂದುಳಿದ ವರ್ಗಗಳ ಆಯೋಗದ ಮಾರ್ಗದರ್ಶನದಲ್ಲಿ ಇತ್ತೀಚೆಗೆ ನಡೆಸಲಾಗಿದ್ದ ಜಾತಿ ಆಧಾರಿತ ಸಮೀಕ್ಷೆಯಲ್ಲಿ ಭಾಗವಹಿಸಿದ ಸಮೀಕ್ಷಾದಾರರು ಹಾಗೂ ಗಣತಿದಾರರಿಗೆ ಗೌರವಧನ ಬಿಡುಗಡೆ ಮಾಡಿ ಆದೇಶ ಹೊರಡಿಸಲಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಜಿಬಿಎ ವ್ಯಾಪ್ತಿಯ ಐದು ಪಾಲಿಕೆಗಳಿಗೆ ಒಟ್ಟು ₹23,87,47,200 ರೂ.,ಗಳ ಅನುದಾನ ಬಿಡುಗಡೆ ಮಾಡಲಾಗಿದೆ. ಈ ನಿಟ್ಟಿನಲ್ಲಿ ಗಣತಿದಾರರಿಗೆ ಸಹಾಯಧನದ ಜತೆ ಪ್ರಮಾಣ ಪತ್ರ ಕಡ್ಡಾಯಗೊಳಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಿರುವ ಸಮೀಕ್ಷೆದಾರರಿಗೆ ಉಲ್ಲೇಖ-01ರ ಸರ್ಕಾರದ ಆದೇಶದಂತೆ ಎರಡು ಕಂತುಗಳಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರೂ.23,87,47,200/-ಗಳನ್ನು ಬಿಡುಗಡೆ ಮಾಡಲಾಗಿರುತ್ತದೆ. ಸದರಿ ಮೊತ್ತವನ್ನು ಐದು ನಗರ ಪಾಲಿಕೆಗಳಿಗೆ ಬಿಡುಗಡೆ ಮಾಡಿ, ಗಣತಿದಾರರಿಗೆ ಗೌರವಧನ ಪಾವತಿಸಲು ಡುವಂತೆ ಉಲ್ಲೇಖ(1) ರಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಆದೇಶ ಹೊರಡಿಸಲಾಗಿರುತ್ತದೆ. ಅದರಂತೆ ಗ್ರೇಟ‌ರ್ ಬೆಂಗಳೂರು ಪ್ರಾಧಿಕಾರಕ್ಕೆ ಬಿಡುಗಡೆ…

Read More

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS) ಪ್ರೊಬೇಷನರಿ ಆಫೀಸರ್ (PO) / ಆಫೀಸರ್ ಸ್ಕೇಲ್-I ನೇಮಕಾತಿ ಪರೀಕ್ಷೆ 2025 ರ ಫಲಿತಾಂಶಗಳನ್ನು ಬಿಡುಗಡೆ ಮಾಡಿದೆ. IBPS CRP RRBs-XIV ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಈಗ ಅಧಿಕೃತ ವೆಬ್‌ಸೈಟ್ ibps.in ಗೆ ಭೇಟಿ ನೀಡುವ ಮೂಲಕ ತಮ್ಮ ಫಲಿತಾಂಶಗಳನ್ನು ಡೌನ್‌ಲೋಡ್ ಮಾಡಬಹುದು. ಅಭ್ಯರ್ಥಿಗಳು ಡಿಸೆಂಬರ್ 26, 2025 ರವರೆಗೆ ತಮ್ಮ ಫಲಿತಾಂಶಗಳನ್ನು ಆನ್‌ಲೈನ್‌ನಲ್ಲಿ ಪರಿಶೀಲಿಸಬಹುದು ಮತ್ತು ಡೌನ್‌ಲೋಡ್ ಮಾಡಬಹುದು. ಫಲಿತಾಂಶಗಳನ್ನು ಪರಿಶೀಲಿಸಲು ರೋಲ್ ಸಂಖ್ಯೆ ಅಥವಾ ನೋಂದಣಿ ಸಂಖ್ಯೆ ಮತ್ತು ಪಾಸ್‌ವರ್ಡ್/ಜನ್ಮ ದಿನಾಂಕದ ಅಗತ್ಯವಿದೆ. IBPS RRB PO ಪರೀಕ್ಷೆ 2025 ಯಾವಾಗ ನಡೆಯಿತು? IBPS RRB ಆಫೀಸರ್ ಸ್ಕೇಲ್-I ಪ್ರಿಲಿಮ್ಸ್ ಪರೀಕ್ಷೆಯನ್ನು ನವೆಂಬರ್ 22 ಮತ್ತು 23, 2025 ರಂದು ನಡೆಸಲಾಯಿತು. ಯಶಸ್ವಿ ಅಭ್ಯರ್ಥಿಗಳು ಈಗ ಮುಂದಿನ ಹಂತವಾದ ಮುಖ್ಯ ಪರೀಕ್ಷೆಗೆ ಹಾಜರಾಗುತ್ತಾರೆ. IBPS RRB PO ಮುಖ್ಯ ಪರೀಕ್ಷೆ ದಿನಾಂಕ 2025 ವಿಭಾಗೀಯ ಮತ್ತು ಒಟ್ಟಾರೆ ಕಟ್-ಆಫ್…

Read More

ಬೆಂಗಳೂರು : ಬೆಂಗಳೂರಲ್ಲಿ ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಬಂಧನದ ಭೀತಿ ಎದುರಾಗಿದ್ದು ಸಿಐಡಿ ಅಧಿಕಾರಿಗಳು ಇದೀಗ ಬೈರತಿ ಬಸವರಾಜ್ ಅವರಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಈ ಒಂದು ಪ್ರಕರಣದಲ್ಲಿ ಭೈರತಿ ಬಸವರಾಜ ಪತ್ತೆಗಾಗಿ ಅಧಿಕಾರಿಗಳು ಮೂರು ತಂಡಗಳನ್ನು ರಚಿಸಿದ್ದಾರೆ. ಗೋವಾ ಮಹಾರಾಷ್ಟ್ರದಲ್ಲಿ ಎರಡು ತಂಡಗಳಿಂದ ಈಗಾಗಲೇ ಹುಡುಕಾಟ ನಡೆಸಲಾಗುತ್ತಿದ್ದು ಇನ್ನೂ ನಿನ್ನೆ ಬೆಳಗಾವಿ ಅಧಿವೇಶನ ಮುಗಿದ ಬಳಿಕ ಭೈರತಿ ಬಸವರಾಜ್ ಯಾವ ರಸ್ತೆಯ ಮೂಲಕ ತೆರಳಿದ್ದಾರೆ ಎನ್ನುವುದರ ಕುರಿತು ಸಿಐಡಿ ಅಧಿಕಾರಿಗಳು ತೀವ್ರ ಶೋಧ ನಡೆಸಿದ್ದಾರೆ. ಇನ್ನು ಬಂಧನದ ಭೀತಿಯಿಂದ ಭೈರತಿ ಬಸವರಾಜ್ ಮೊಬೈಲ್ ಸ್ವಿಚ್ ಆಫ್ ಆಗಿದೆ ಬಸವರಾಜ್ ಜೊತೆಗೆ ಫೋನ್ ಸಂಪರ್ಕದಲ್ಲಿರುವವರ ಬಗ್ಗೆ ಕೂಡ ಮಾಹಿತಿ ಕಲೆ ಹಾಕಲಾಗುತ್ತಿದೆ. ಬೆಳಗಾವಿಯಿಂದ ಎಲ್ಲಿಗೆ ಹೋಗಿದ್ದಾರೆ ಎನ್ನುವ ಮಾಹಿತಿ ಹಾಗೂ ಟೋಲ್ ಗಳ ಬಳಿಯ ಸಿಸಿ ಕ್ಯಾಮೆರಾ ಗಳನ್ನು ಕೂಡ ಪರಿಶೀಲನೆ ಮಾಡಲಾಗುತ್ತಿದೆ. ಬೆಳಗಾವಿಯಿಂದ ಹೊರ ಹೋಗುವ ಟೋಲ್…

Read More