Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಕರ್ನಾಟಕ ರಾಜ್ಯ ಸರ್ಕಾರವು ಪ್ರಸ್ತುತ 43 ವಲಯಗಳ ಅಸಂಘಟಿತ ಕಾರ್ಮಿಕರನ್ನು ಗುರುತಿಸಿದ್ದು, 2017-18ನೇ ಸಾಲಿನಲ್ಲಿ “ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆ”ಯನ್ನು ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ಮೂಲಕ ಅನುಷ್ಠಾನಗೊಳಿಸುತ್ತಿದೆ. ಸದರಿ ಯೋಜನೆಯಡಿ ಈ ಕೆಳಕಂಡ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. (ಅ) ಸ್ಮಾರ್ಟ್ ಕಾರ್ಡ್ ಸೌಲಭ್ಯ: * 2017-18ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ, 5 ಅಸಂಘಟಿತ ವಲಯಗಳಾದ “ಹಮಾಲರು, ಚಿಂದಿ ಆಯುವವರು, ಗೃಹ ಕಾರ್ಮಿಕರು, ಟೈಲರ್ಗಳು ಹಾಗೂ ಮೆಕ್ಯಾನಿಕ್” ಕಾರ್ಮಿಕರನ್ನು ಏಕ ಶೀರ್ಷಿಕೆ ಮತ್ತು ಏಕ ಚಿಹ್ನೆಯಡಿ ನೋಂದಾಯಿಸಿ ಸ್ಮಾರ್ಟ್ ಕಾರ್ಡ್ ನೀಡಲಾಗುತ್ತಿದೆ. ← 2018-19ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ, 6 ಅಸಂಘಟಿತ ವಲಯಗಳಾದ “ಅಗಸರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಕ್ಷೌರಿಕರು ಹಾಗೂ ಭಟ್ಟಿ ಕಾರ್ಮಿಕ”ರನ್ನೂ ಸಹ ನೋಂದಾಯಿಸಿ ಸ್ಮಾರ್ಟ್ ಕಾರ್ಡ್ ನೀಡಲಾಗುತ್ತಿದೆ. ಷರತ್ತುಗಳು: ಈ ಯೋಜನೆಯು ಕರ್ನಾಟಕ ರಾಜ್ಯಕ್ಕೆ ಮಾತ್ರ ಅನ್ವಯಿಸುತ್ತದೆ. ವಯೋಮಿತಿ 18 ರಿಂದ 60 ವರ್ಷಗಳು. ಪ್ರಸ್ತುತ ಮೇಲ್ಕಂಡ 11 ವರ್ಗಗಳ…
ನವದೆಹಲಿ : ವಿಶ್ವ ಆರೋಗ್ಯ ಸಂಸ್ಥೆ (WHO) ಮೊದಲ ಬಾರಿಗೆ ಬೊಜ್ಜಿನ ದೀರ್ಘಕಾಲೀನ ಚಿಕಿತ್ಸೆಗಾಗಿ ತನ್ನ ಶಿಫಾರಸುಗಳಲ್ಲಿ GLP-1 ಚಿಕಿತ್ಸೆಯನ್ನು ಸೇರಿಸಿದೆ. ಈ ಕ್ರಮವನ್ನು ಜಾಗತಿಕವಾಗಿ ವೈದ್ಯಕೀಯ ವಿಧಾನಗಳಲ್ಲಿ ಪ್ರಮುಖ ಬದಲಾವಣೆ ಎಂದು ಪರಿಗಣಿಸಲಾಗಿದೆ. ಬೊಜ್ಜು ಪ್ರಪಂಚದಾದ್ಯಂತ ಒಂದು ಶತಕೋಟಿಗೂ ಹೆಚ್ಚು ಜನರ ಮೇಲೆ ಪರಿಣಾಮ ಬೀರುತ್ತದೆ ಮತ್ತು WHO ಸುರಕ್ಷಿತ ಚಿಕಿತ್ಸಾ ಆಯ್ಕೆಗಳನ್ನು ವಿಸ್ತರಿಸುವ ಗುರಿಯನ್ನು ಹೊಂದಿದೆ, ಜೊತೆಗೆ ಈ ಪ್ರದೇಶದಲ್ಲಿ ವೆಚ್ಚ ಮತ್ತು ಸಮಾನ ಪ್ರವೇಶದ ಸವಾಲುಗಳನ್ನು ಎತ್ತಿ ತೋರಿಸುತ್ತದೆ. ಮಾರ್ಗಸೂಚಿಗಳು ಎರಡು ಶಿಫಾರಸುಗಳನ್ನು ಒಳಗೊಂಡಿವೆ WHO ಮಾರ್ಗಸೂಚಿಗಳು ಎರಡು ಶಿಫಾರಸುಗಳನ್ನು ಒಳಗೊಂಡಿವೆ. ಮೊದಲನೆಯದಾಗಿ, ವಯಸ್ಕ ಬೊಜ್ಜು ರೋಗಿಗಳು (ಗರ್ಭಿಣಿ ಮಹಿಳೆಯರನ್ನು ಹೊರತುಪಡಿಸಿ) ದೀರ್ಘಕಾಲೀನ ಬೊಜ್ಜು ನಿರ್ವಹಣೆಗಾಗಿ GLP-1 ಔಷಧಿಗಳನ್ನು ಬಳಸಬಹುದು. ಎರಡನೆಯದಾಗಿ, ಈ ಚಿಕಿತ್ಸೆಯನ್ನು ಸಮತೋಲಿತ ಆಹಾರ ಮತ್ತು ನಿಯಮಿತ ದೈಹಿಕ ಚಟುವಟಿಕೆಯೊಂದಿಗೆ ಸಂಯೋಜಿಸಬೇಕು. ಬೊಜ್ಜುತನವು ಸಮಗ್ರ ಆರೈಕೆಯ ಅಗತ್ಯವಿರುವ ಜೀವಿತಾವಧಿಯ ಸ್ಥಿತಿಯಾಗಿದೆ ಮತ್ತು ಔಷಧಿ ಮಾತ್ರ ಈ ಜಾಗತಿಕ ಸಮಸ್ಯೆಗೆ ಪರಿಹಾರವಲ್ಲ ಎಂದು ಸಂಸ್ಥೆ ಹೇಳುತ್ತದೆ.…
ಬೆಂಗಳೂರು : ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಂಗಳವಾರ ಸಂಚಾರ ಮಾಡಬೇಕಿದ್ದ ಮತ್ತು ಬುಧವಾರ ಹೊರಡಲಿರುವ ಸುಮಾರು 58 ವಿಮಾನಗಳು ವಿಳಂಬವಾಗಿ ಸಂಚರಿಸುತ್ತಿವೆ ಎಂದು ವಿಮಾನ ಟ್ರ್ಯಾಕಿಂಗ್ ವೆಬ್ಸೈಟ್ ಸ್ಕೈಸ್ಕ್ಯಾನರ್ ತಿಳಿಸಿದೆ. ವಿಮಾನಯಾನ ಸಂಸ್ಥೆಗಳ ಕಾರ್ಯಾಚರಣೆಯನ್ನು ನಿರ್ವಹಿಸುವ ‘ಥರ್ಡ್ ಪಾರ್ಟಿ ಸಿಸ್ಟಂ’ನಲ್ಲಿ ಉಂಟಾದ ಅಡಚಣೆಯಿಂದಾಗಿ ಚೆಕ್-ಇನ್ ಮೇಲೆ ಪರಿಣಾಮವಾಗುತ್ತಿದೆ. ಇದರ ಪರಿಣಾಮವಾಗಿ ಏರ್ ಇಂಡಿಯಾ ಸೇರಿದಂತೆ ಹಲವಾರು ಏರ್ಲೈನ್ಸ್ಗಳ ಕಾರ್ಯಾಚರಣೆಯಲ್ಲಿ ವಿಳಂಬವಾಗುತ್ತಿದೆ. ತಡರಾತ್ರಿಯಿಂದ 70 ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಿದೆ. ತಡರಾತ್ರಿಯಿಂದ 22 ವಿಮಾನಗಳ ಹಾರಾಟ ರದ್ದು ಮಾಡಲಾಗಿದ್ದು, 50ಕ್ಕೂ ಅಧಿಕ ವಿಮಾನಗಳ ಹಾರಾಟದ ಸಮಯವನ್ನು ಬದಲಾವಣೆ ಮಾಡಲಾಗಿದೆ. ಬೆಂಗಳೂರಿನಿಂದ ಟೇಕಾಫ್ ಆಗಬೇಕಿದ್ದ ಕೆಲವು ವಿಮಾನಗಳು ರದ್ದಾಗಿವೆ. ಸಾಫ್ಟ್ವೇರ್ ತಾಂತ್ರಿಕ ಸಮಸ್ಯೆ ಕಾರಣದಿಂದ ವಿಮಾನಗಳ ಹಾರಾಟದಲ್ಲಿ ವಿಳಂಬವಾಗಿದೆ. ತಡರಾತ್ರಿಯಿಂದ 22 ವಿಮಾನಗಳ ಪ್ರಯಾಣ ರದ್ದು ಮಾಡಲಾಗಿದೆ. ಕೊಲ್ಕತ್ತಾ, ದೆಹಲಿ, ಮುಂಬೈ, ಚೆನ್ನೈ, ವಾರಣಾಸಿ ಮೊದಲಾದ ಕಡೆ ಹಾರಾಟ ನಡೆಸಬೇಕಿದ್ದ 50ಕ್ಕೂ ಅಧಿಕ ವಿಮಾನಗಳ ಸಮಯ ಬದಲಾವಣೆಯಾಗಿದೆ. https://twitter.com/airindia/status/1995890624017695134?s=20
ಬೆಂಗಳೂರು : ಕರ್ನಾಟಕದ ಶಾಲಾ ಶಿಕ್ಷಣ ಇಲಾಖೆಯು ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) 2025 ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ sts.karnataka.gov.in ನಲ್ಲಿ ಪ್ರವೇಶ ಪತ್ರವನ್ನು ಪರಿಶೀಲಿಸಬಹುದು ಮತ್ತು ಡೌನ್ಲೋಡ್ ಮಾಡಬಹುದು. ಪರೀಕ್ಷೆಯು ಡಿಸೆಂಬರ್ 7, 2025 ರಂದು ನಡೆಯಲಿದೆ. ಬೆಳಿಗ್ಗೆ 9:30 ರಿಂದ ಮಧ್ಯಾಹ್ನ 12 ರವರೆಗೆ ಮತ್ತು ಮಧ್ಯಾಹ್ನ 2 ರಿಂದ ಸಂಜೆ 4:30 ರವರೆಗೆ ಎರಡು ಪತ್ರಿಕೆಗಳು ನಡೆಯಲಿವೆ. KARTET 2025 ಪರೀಕ್ಷೆ: ಪ್ರವೇಶ ಪತ್ರ/ ಕರೆ ಪತ್ರವನ್ನು ಡೌನ್ಲೋಡ್ ಮಾಡುವುದು ಹೇಗೆ? sts.karnataka.gov.in ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ. ಮುಖಪುಟದಲ್ಲಿ, KARTET 2025 ಪ್ರವೇಶ ಪತ್ರವನ್ನು ಕ್ಲಿಕ್ ಮಾಡಿ. ನಿಮ್ಮ ಲಾಗಿನ್ ರುಜುವಾತುಗಳನ್ನು ನಮೂದಿಸಿ. ನಿಮ್ಮ ಪ್ರವೇಶ ಪತ್ರವನ್ನು ಪರದೆಯ ಮೇಲೆ ಪ್ರದರ್ಶಿಸಲಾಗುತ್ತದೆ. ಭವಿಷ್ಯದ ಉಲ್ಲೇಖಕ್ಕಾಗಿ ಅದನ್ನು ಡೌನ್ಲೋಡ್ ಮಾಡಿ ಮತ್ತು ಉಳಿಸಿ. ಡೌನ್ಲೋಡ್ ಲಿಂಕ್ – “ಕರ್ನಾಟಕ ಟಿಇಟಿ ಪ್ರವೇಶ ಪತ್ರ 2025 ಡೌನ್ಲೋಡ್ ಲಿಂಕ್”.…
ಶಿವಮೊಗ್ಗ : ರಾಜ್ಯದಲ್ಲಿ ಹೃದಯಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಮದುವೆಯಾದ ಮರುದಿನವೇ ಕುಸಿದು ಬಿದ್ದು ನವ ವರ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಹೊಳೆಹೊನ್ನೂರು ಸಮೀಪದ ಹನುಮಂತಾಪುರದ ಯುವಕ ಮದುವೆಯಾದ ಮರುದಿನವೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ರಮೇಶ್(30) ಮೃತಪಟ್ಟವರು. ಭಾನುವಾರ ಹರಪನಹಳ್ಳಿ ಸಮೀಪದ ಬಂಡ್ರಿಯ ಯುವತಿಯನ್ನು ರಮೇಶ್ ಮದುವೆಯಾಗಿದ್ದರು. ವಧುವಿನ ಮನೆಗೆ ನವ ದಂಪತಿ ತೆರಳಿದ್ದಾರೆ. ದೇವರ ಕೋಣೆಗೆ ಹೋಗಿ ಕೈಮುಗಿದು ಹೊರ ಬರುತ್ತಿದ್ದಂತೆ ರಮೇಶ್ ಹೃದಯಾಘಾತದಿಂದ ಕುಸಿತು ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಅವರು ಮೃತಪಟ್ಟಿದ್ದಾರೆ.
ಸಿದ್ದಾಪುರ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಿದ್ದಾಪುರದ ಬಳಿಯ ಬಾಗಲಕೋಟೆ-ವಿಜಯಪುರ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಬ್ಬಿನ ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರೆಲ್ಲಾ ಜಮಖಂಡಿ ತಾಲೂಕಿನ ಸಿದ್ದಾಪುರದವರು ಎನ್ನಲಾಗಿದೆ. ಮೃತರನ್ನು ವಿಶ್ವನಾಥ ಕಂಬಾರ(17), ಗಣೇಶ ಅರಳಿಮಟ್ಟಿ(20), ಪ್ರವೀಣ್ ಶೇಡಬಾಳ(22), ಪ್ರಜ್ವಲ್ ಶೇಡಬಾಳ(17) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಜಮಖಂಡಿ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು : ಗ್ರಾಮ ಪಂಚಾಯತಿಗಳ ಸ್ವಂತ ಸಂಪನ್ಮೂಲ ಹೆಚ್ಚಿಸುವ ಉದ್ದೇಶದೊಂದಿಗೆ ಅಕ್ರಮ ಲೇಔಟ್ಗಳ ನಿವೇಶನಗಳಿಗೆ ಇ-ಖಾತಾ ನೀಡಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಭಿವೃದ್ಧಿಪಡಿಸಿರುವ ಇ-ಸ್ವತ್ತು 2.0 ತಂತ್ರಾಂಶಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಗ್ರಾಮಠಾಣಗಳ ಹೊರಗೆ ಭೂಪರಿವರ್ತನೆ ಮಾಡಿಸದೆ, ಮನೆ ನಿರ್ಮಿಸಿಕೊಂಡು ನೆಲೆಸಿರುವ ಜನರಿಗೆ ಕುಡಿಯುವ ನೀರು, ಬೀದಿ ದೀಪ, ನೀಡಲಾಗಿದೆ. ರಸ್ತೆ, ಚರಂಡಿ ಇತ್ಯಾದಿ ನಾಗರಿಕ ಸೌಲಭ್ಯಗಳನ್ನು ಇದರಿಂದಾಗಿ ಗ್ರಾಮ ಪಂಚಾಯತಿಗಳಿಗೆ ಆರ್ಥಿಕವಾಗಿ ಹೊರೆಯಾಗುತ್ತಿದೆ. ಈ ಕಾರಣದಿಂದಾಗಿ ರಾಜ್ಯ ಸರ್ಕಾರ ಕರ್ನಾಟಕ ಗ್ರಾಮ ಸ್ವರಾಜ್ ಹಾಗೂ ಪಂಚಾಯತ್ರಾಜ್ ಅಧಿನಿಯಮ-1993 ಪ್ರಕರಣ 199ಕ್ಕೆ ತಿದ್ದುಪಡಿ ತಂದು ಪ್ರಕರಣ 199ಬಿ ಮತ್ತು 199ಸಿ ಸೇರಿಸಿ ಏ.7ರಂದು ಅಧಿಸೂಚನೆ ಹೊರಡಿಸಿದೆ. ಇದರನ್ವಯ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ರಾಜ್ (ಗ್ರಾಮ ಪಂಚಾಯತಿಗಳ ತೆರಿಗೆ, ದರ ಮತ್ತು ಶುಲ್ಕ) ನಿಯಮ-2025ನ್ನು ರೂಪಿಸಿದೆ. ಹೊಸ ಆಸ್ತಿಗಳ ತೆರಿಗೆ ವ್ಯಾಪ್ತಿಗೆ ಕ್ರಮಗಳು, ತೆರಿಗೆ ನಿರ್ಧರಣಾ ವಿಧಾನಗಳ ಬಗ್ಗೆ ನಿಯಮಗಳಲ್ಲಿ ತಿಳಿಸಲಾಗಿದೆ. ಪಂಚಾಯತಿ ವ್ಯಾಪ್ತಿಯಲ್ಲಿ ಹೊಸ ಬಡಾವಣೆಗಳ ಅನುಮೋದನೆಗೆ…
ಹೈದರಾಬಾದ್: ಹಿಂದುಗಳಲ್ಲಿ ಕುಡುಕರಿಗೊಬ್ಬ ದೇವರಿದ್ದಾನೆ. ಒಬ್ಬರು ಅವಿವಾಹಿತರಿಗಾದರೆ, ಇನ್ನೊಬ್ಬರು ಕೋಳಿ ಬಲಿ ಕೊಡಲು, ಮತ್ತೊಬ್ಬರು ಸಾರಾಯಿ ಕುಡಿಯಲು’ ಎಂದು ತೆಲಂಗಾಣ ಸಿಎಂ ರೇವಂತ್ ರೆಡ್ಡಿ ವಿವಾದಿತ ಹೇಳಿಕೆ ನೀಡಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ರೇವಂತ್ ರೆಡ್ಡಿ, ಹಿಂದುಗಳಲ್ಲಿ 3 ಕೋಟಿ ದೇವರುಗಳು ಏಕಿದ್ದಾರೆ? ಹಿಂದುಗಳು ಎಷ್ಟು ದೇವರನ್ನು ನಂಬುತ್ತಾರೆ? 3 ಕೋಟಿ ದೇವರುಗಳಿವೆಯೇ? ಇಷ್ಟೊಂದು ಏಕೆ ಅಸ್ತಿತ್ವದಲ್ಲಿವೆ? ಅವಿವಾಹಿತರಿಗೆ ಒಬ್ಬ ದೇವರು ಹನುಮಾನ್. ಎರಡು ಮದುವೆಯಾಗುವವರಿಗೆ ಇನ್ನೊಬ್ಬ ದೇವರು, ಮದ್ಯಪಾನ ಮಾಡುವವರಿಗೊಬ್ಬ, ಕೋಳಿ ಬಲಿಗೆ ಒಬ್ಬ, ಬೇಳೆ ಮತ್ತು ಅನ್ನಕ್ಕೆ ಒಬ್ಬ ದೇವರಿನಿದ್ದಾನೆ. ಪ್ರತಿಯೊಂದು ಗುಂಪಿಗೂ ತನ್ನದೇ ಆದ ದೇವರಿದ್ದಾನೆ.. ಈ ರೀತಿ ವಿಭಿನ್ನ ಮನಸ್ಥಿತಿಯವರು ಇದ್ರೂ ಕಾಂಗ್ರೆಸ್ ಎಲ್ಲರನ್ನೂ ಒಟ್ಟಾಗಿ ಕರೆದೊಯ್ಯುತ್ತದೆ’ ಎಂದು ಹೇಳಿದ್ದಾರೆ. ಇನ್ನು ಸಿಎಂ ರೇವಂತ್ ರೆಡ್ಡಿ ಹೇಳಿಕೆಯಿಂದ ಹಿಂದೂಗಳಿಗೆ ಅವಮಾನವಾಗಿದೆ. ಅವರು ತಕ್ಷಣ ಕ್ಷಮೆ ಯಾಚಿಸಬೇಕು ಎಂದು ಬಿಜೆಪಿ ಹಾಗೂ ಬಿಆರ್ಎಸ್ ಆಗ್ರಹಿಸಿವೆ.
ಬೆಂಗಳೂರು : ಗ್ರಾಮ ಪಂಚಾಯತಿಗಳ ಸ್ವಂತ ಸಂಪನ್ಮೂಲ ಹೆಚ್ಚಿಸುವ ಉದ್ದೇಶದೊಂದಿಗೆ ಅಕ್ರಮ ಲೇಔಟ್ಗಳ ನಿವೇಶನಗಳಿಗೆ ಇ-ಖಾತಾ ನೀಡಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಭಿವೃದ್ಧಿಪಡಿಸಿರುವ ಇ-ಸ್ವತ್ತು 2.0 ತಂತ್ರಾಂಶಕ್ಕೆ ಸಿಎಂ ಸಿದ್ದರಾಮಯ್ಯ ಅವರು ಸೋಮವಾರ ಚಾಲನೆ ನೀಡಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು 2023-24ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರ ಹಾಗೂ ಗ್ರಾಮೀಣ ಪ್ರದೇಶದ ಜನರ ಆಸ್ತಿಗಳಿಗೆ ಇ-ಖಾತಾ ವಿತರಿಸುವ ಮೂಲಕ ಅವುಗಳನ್ನು ಸುರಕ್ಷಿತಗೊಳಿಸುವ ಇ-ಸ್ವತ್ತು 2.0 ತಂತ್ರಾಂಶಕ್ಕೆ ಚಾಲನೆ ನೀಡಿದ್ದಾರೆ. ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್. ಶಾಸಕ, ರಿಜ್ವಾನ್ ಅರ್ಷದ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಸ್ಥಳೀಯವಾಗಿ ಸಂಪನ್ಮೂಲಗಳನ್ನು ಸೃಷ್ಟಿಸಿಕೊಂಡು ಆರ್ಥಿಕ ಸ್ವಾವಲಂಬನೆ ಸಾಧಿಸುವುದರ ಜೊತೆಗೆ, ಗ್ರಾಮೀಣರ ಜೀವನಮಟ್ಟ ಸುಧಾರಿಸುವಂತೆ ಗಮನಾರ್ಹ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿರುವ ಪಂಚಾಯತಿಗಳಿಗೆ ಗಾಂಧಿ ಗ್ರಾಮ ಪುರಸ್ಕಾರ ಪ್ರಧಾನ ಮಾಡಲಾಗಿದೆ. ಇದೇ ವೇಳೆ, ಗ್ರಾಮೀಣ ಭಾಗದಲ್ಲಿ ಗ್ರಾಮ ಪಂಚಾಯತಿಗಳ ತೆರಿಗೆ ವ್ಯಾಪ್ತಿಯಿಂದ ಹೊರಗಿರುವ, ಸೂಕ್ತ ಖಾತಾ ಭದ್ರತೆ ದೊರಕದ…
ಕೆ.ಆರ್ದ.ಪೇಟೆ : ರಾಜ್ಯದಲ್ಲಿ ಸಂಕ್ರಾಂತಿ ನಂತರ ಮುಖ್ಯಮಂತ್ರಿ ಬದಲಾವಣೆ ನಡೆಯುವುದು ಖಚಿತ ಎಂದು ಕೋಡಿಮಠದ ಶಿವರಾತ್ರಿ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ಸಂಕ್ರಾಂತಿ ನಂತರ ರಾಜ್ಯ ರಾಜಕಾರಣದಲ್ಲಿ ಮಹತ್ತರ ಬದಲಾವಣೆಗಳಾಗಲಿದ್ದು, ಮಕರ ಸಂಕ್ರಾಂತಿ ನಂತರ ನಾಯಕತ್ವದ ಗುದ್ದಾಟವು ಬಗೆಹರಿಯಲಿದೆ, ಮುಖ್ಯಮಂತ್ರಿ ಬದಲಾವಣೆ ನಡೆಯುವುದು ಖಚಿತ ಎಂದು ಹೇಳಿದ್ದಾರೆ. ರಾಷ್ಟ್ರ ರಾಜಕಾರಣದಲ್ಲಿಯೂ ಕೂಡ ಯುಗಾದಿ ನಂತರ ಸಮಸ್ಯೆ ಎದುರಾಗಲಿವೆ, ಶಿವನ ಮುಡಿಯ ಮೇಲಿರುವ ಮಲ್ಲಿಗೆ ಶಿವನ ಪಾದಕ್ಕೆ ರಾಜಕಾರಣದ ಗೊಂದಲವು ಬೀಳಲೇಬೇಕು. ಮಕರ ಸಂಕ್ರಾಂತಿ ಬಳಿಕ ಸಂಪೂರ್ಣವಾಗಿ ಬಗೆಹರಿಯಲಿದ್ದು, ಸುಖಾಂತ್ಯವಾಗಲಿದೆ ಎಂದು ಹೇಳಿದ್ದಾರೆ.














