Author: kannadanewsnow57

ಮಿರ್ಜಾಪುರ: ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಹಾಡಹಗಲೇ ವಕೀಲರೊಬ್ಬರನ್ನು ಗುಂಡಿಕ್ಕಿ ಕೊಲ್ಲಲಾದ ಭೀಕರ ಘಟನೆ ನಡೆದಿದೆ. ಇಬ್ಬರು ದುಷ್ಕರ್ಮಿಗಳು ಬೈಕ್‌ನಲ್ಲಿ ಬಂದು ಈ ಕೃತ್ಯ ಎಸಗಿದ್ದು, ಹತ್ಯೆಯ ನಂತರ ಅವರು ತಪ್ಪಿಸಿಕೊಳ್ಳಲು ಯತ್ನಿಸಿದಾಗ ನಡೆದ ಘಟನೆಗಳು ಸದ್ಯ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿವೆ. ನಡೆದಿದ್ದೇನು? ಈ ಘಟನೆಯು ಕತ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಕತ್ವಾರು ಕಾ ಪುರಾ ಎಂಬ ಪ್ರದೇಶದಲ್ಲಿ ನಡೆದಿದೆ. ಮೃತರನ್ನು ವಕೀಲ ರಾಜೀವ್ ಸಿಂಗ್ ಎಂದು ಗುರುತಿಸಲಾಗಿದೆ. ರಾಜೀವ್ ಸಿಂಗ್ ಅವರು ಶನಿವಾರ ಬೆಳಿಗ್ಗೆ ಎಂದಿನಂತೆ ವಕಿಂಗ್‌ ಮಾಡುತ್ತಿದ್ದಾಗ, ಬೈಕ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಅವರ ಬಳಿ ಗಾಡಿ ನಿಲ್ಲಿಸಿದ್ದಾರೆ. ಒಬ್ಬ ವ್ಯಕ್ತಿ ಬೈಕ್ ಮೇಲೆಯೇ ಕುಳಿತಿದ್ದರೆ, ಮತ್ತೊಬ್ಬ ವ್ಯಕ್ತಿ ನಾಡಬಂದೂಕಿನೊಂದಿಗೆ ರಾಜೀವ್ ಅವರತ್ತ ನುಗ್ಗಿದ್ದಾನೆ. ಇದನ್ನು ಗಮನಿಸಿ ರಾಜೀವ್ ಸಿಂಗ್ ಅವರು ಪ್ರತಿರೋಧ ತೋರಲು ಯತ್ನಿಸಿದರೂ, ದುಷ್ಕರ್ಮಿ ಅತಿ ಸಮೀಪದಿಂದ ಗುಂಡು ಹಾರಿಸಿದ್ದಾನೆ. ಗುಂಡೇಟು ತಗುಲಿದ ರಾಜೀವ್ ಸಿಂಗ್ ಅವರು ಸ್ಥಳದಲ್ಲೇ ರಕ್ತದ ಮಡುವಿನಲ್ಲಿ ಕುಸಿದು ಬಿದ್ದು…

Read More

ಸಾಮಾನ್ಯವಾಗಿ ದಿನವಿಡೀ ಕೆಲಸ ಮಾಡಿ ದಣಿದಾಗ ಒಂದು ಒಳ್ಳೆಯ ನಿದ್ದೆ ಮಾಡಿದರೆ ಮರುದಿನ ಬೆಳಗ್ಗೆ ಉತ್ಸಾಹದಿಂದ ಇರಬೇಕು. ಆದರೆ, ರಾತ್ರಿಯಿಡೀ ಚೆನ್ನಾಗಿ ನಿದ್ದೆ ಮಾಡಿದರೂ ಸಹ ಬೆಳಗ್ಗೆ ಎದ್ದಾಗ ಅತಿಯಾದ ಸುಸ್ತು, ಆಲಸ್ಯ ಅಥವಾ ನಿಶ್ಯಕ್ತಿ ಕಾಡುತ್ತಿದ್ದರೆ ಅದನ್ನು ನಿರ್ಲಕ್ಷಿಸಬೇಡಿ ಎಂದು ಆರೋಗ್ಯ ತಜ್ಞರು ಎಚ್ಚರಿಸುತ್ತಿದ್ದಾರೆ. ಹೀಗಾಗಲು ಪ್ರಮುಖ ಕಾರಣಗಳೇನು? ಕೇವಲ ನಿದ್ದೆಯ ಪ್ರಮಾಣವಷ್ಟೇ ಅಲ್ಲದೆ, ಅದರ ಗುಣಮಟ್ಟವೂ ಮುಖ್ಯವಾಗಿರುತ್ತದೆ. ಈ ಕೆಳಗಿನ ಕಾರಣಗಳಿಂದಾಗಿ ನೀವು ನಿದ್ದೆ ಮಾಡಿದರೂ ಆಯಾಸ ಅನುಭವಿಸಬಹುದು: ಅಪೂರ್ಣ ನಿದ್ದೆ (Sleep Apnea): ನಿದ್ದೆಯಲ್ಲಿ ಉಸಿರಾಟಕ್ಕೆ ತೊಂದರೆಯಾಗುವುದು ಅಥವಾ ಗೊರಕೆ ಹೊಡೆಯುವುದರಿಂದ ಗಾಢ ನಿದ್ದೆಗೆ ಭಂಗ ಬರುತ್ತದೆ. ಇದು ದೇಹಕ್ಕೆ ಬೇಕಾದ ವಿಶ್ರಾಂತಿಯನ್ನು ನೀಡುವುದಿಲ್ಲ. ರಕ್ತಹೀನತೆ (Anemia): ದೇಹದಲ್ಲಿ ಕಬ್ಬಿಣದ ಅಂಶ ಕಡಿಮೆಯಾದಾಗ ಆಮ್ಲಜನಕದ ಪೂರೈಕೆ ಕಡಿಮೆಯಾಗಿ ಅತಿಯಾದ ಸುಸ್ತು ಕಾಣಿಸಿಕೊಳ್ಳುತ್ತದೆ. ಮಾನಸಿಕ ಒತ್ತಡ ಮತ್ತು ಆತಂಕ: ಮನಸ್ಸು ಅತಿಯಾಗಿ ಯೋಚಿಸುತ್ತಿದ್ದರೆ ಮೆದುಳು ವಿಶ್ರಾಂತಿ ಪಡೆಯುವುದಿಲ್ಲ, ಇದರಿಂದ ಎದ್ದ ನಂತರವೂ ದಣಿವು ಹಾಗೆಯೇ ಇರುತ್ತದೆ. ಪೌಷ್ಟಿಕಾಂಶದ ಕೊರತೆ:…

Read More

ಬೆಂಗಳೂರು: ರಾಜ್ಯದಲ್ಲಿ ಸಂಚರಿಸುವ ವಿವಿಧ ವರ್ಗದ ವಾಹನಗಳ ಮೇಲೆ ಹೆಚ್ಚಿನ ತೆರಿಗೆ ವಿಧಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಈ ಸಂಬಂಧ ‘ಕರ್ನಾಟಕ ಮೋಟಾರು ವಾಹನಗಳ ತೆರಿಗೆ (ತಿದ್ದುಪಡಿ) ಕಾಯ್ದೆ, 2026’ಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಗಿದೆ. 2026ರ ಏಪ್ರಿಲ್ 9ರಂದು ರಾಜ್ಯಪಾಲರ ಒಪ್ಪಿಗೆ ಪಡೆದಿರುವ ಈ ಹೊಸ ಕಾಯ್ದೆಯು ಈಗ ಜಾರಿಗೆ ಬಂದಿದೆ. ಈ ತಿದ್ದುಪಡಿಯ ಅನ್ವಯ, ಕಮರ್ಷಿಯಲ್ ಟ್ರಾಕ್ಟರ್ಗಳು, ಲಕ್ಸುರಿ ಬಸ್ಗಳು ಮತ್ತು ಎಲೆಕ್ಟ್ರಿಕ್ ವಾಹನಗಳೂ ಸೇರಿದಂತೆ ಹಲವು ವಿಧದ ವಾಹನಗಳ ಜೀವಿತಾವಧಿ ತೆರಿಗೆ (Lifetime Tax) ದರಗಳಲ್ಲಿ ಬದಲಾವಣೆಯಾಗಿದೆ. ಮುಖ್ಯಾಂಶಗಳು: ಲಕ್ಸುರಿ ಮತ್ತು ಸ್ಲೀಪರ್ ಬಸ್ ತೆರಿಗೆ: 12ಕ್ಕಿಂತ ಹೆಚ್ಚು ಪ್ರಯಾಣಿಕರ ಸಾಮರ್ಥ್ಯ ಹೊಂದಿರುವ ಲಕ್ಸುರಿ ಬಸ್ಗಳಿಗೆ ಪ್ರತಿ ಪ್ರಯಾಣಿಕನಿಗೆ 2,500 ರೂ. ಹಾಗೂ ಸ್ಲೀಪರ್ ಕೋಚ್ ಬಸ್ಗಳಿಗೆ ಪ್ರತಿ ಸೀಟಿಗೆ 3,000 ರೂ. ತೆರಿಗೆ ನಿಗದಿಪಡಿಸಲಾಗಿದೆ. ವಾಣಿಜ್ಯ ಟ್ರಾಕ್ಟರ್ ಟ್ರೈಲರ್ಗಳು: ಹೊಸದಾಗಿ ನೋಂದಣಿಯಾಗುವ ವಾಣಿಜ್ಯ ಟ್ರಾಕ್ಟರ್ ಟ್ರೈಲರ್ಗಳಿಗೆ ವಾಹನದ ಒಟ್ಟು ಬೆಲೆಯ 10% ರಷ್ಟು ಜೀವಿತಾವಧಿ ತೆರಿಗೆಯನ್ನು ನಿಗದಿಪಡಿಸಲಾಗಿದೆ.…

Read More

ಹೆಚ್ಚುತ್ತಿರುವ ಅಡುಗೆ ಅನಿಲದ (LPG) ಬೆಲೆಯಿಂದ ಕಂಗಾಲಾಗಿರುವ ಜನಸಾಮಾನ್ಯರಿಗೆ ಭಾರತೀಯ ಕ್ಲೀನ್-ಟೆಕ್ ಸ್ಟಾರ್ಟ್‌ಅಪ್ ‘ಗ್ರೀನ್‌ವೈಸ್’ (Greenwise) ಸಿಹಿ ಸುದ್ದಿಯೊಂದನ್ನು ನೀಡಿದೆ. ನೀರನ್ನೇ ಇಂಧನವನ್ನಾಗಿ ಬಳಸಿ ಅಡುಗೆ ಮಾಡುವ ಅದ್ಭುತ ತಂತ್ರಜ್ಞಾನವನ್ನು ಈ ಸಂಸ್ಥೆ ಪರಿಚಯಿಸಿದೆ. ಹೇಗೆ ಕೆಲಸ ಮಾಡುತ್ತದೆ ಈ ತಂತ್ರಜ್ಞಾನ? ಈ ಹೈಡ್ರೋಜನ್ ಸ್ಟವ್ ಎಲೆಕ್ಟ್ರೋಲಿಸಿಸ್ (Electrolysis) ಪ್ರಕ್ರಿಯೆಯ ಮೂಲಕ ಕಾರ್ಯನಿರ್ವಹಿಸುತ್ತದೆ. ಇದು ನೀರಿನ ಅಣುಗಳನ್ನು ಹೈಡ್ರೋಜನ್ ಮತ್ತು ಆಕ್ಸಿಜನ್ ಆಗಿ ವಿಭಜಿಸುತ್ತದೆ. ಹೀಗೆ ಬಿಡುಗಡೆಯಾದ ಹೈಡ್ರೋಜನ್ ಉರಿಯುವ ಮೂಲಕ ಅಡುಗೆಗೆ ಶಾಖವನ್ನು ನೀಡುತ್ತದೆ. ವಿಶೇಷತೆಗಳೇನು? ಪರಿಸರ ಸ್ನೇಹಿ: ಈ ಸ್ಟವ್‌ನಿಂದ ಯಾವುದೇ ಹಾನಿಕಾರಕ ಹೊಗೆ ಅಥವಾ ಕಾರ್ಬನ್ ಬಿಡುಗಡೆಯಾಗುವುದಿಲ್ಲ. ಬದಲಾಗಿ, ಇದು ವಾತಾವರಣಕ್ಕೆ ಆಕ್ಸಿಜನ್ (ಆಮ್ಲಜನಕ) ಬಿಡುಗಡೆ ಮಾಡುವ ಮೂಲಕ ಅಡುಗೆ ಮನೆಯ ಗಾಳಿಯನ್ನು ಶುದ್ಧೀಕರಿಸುತ್ತದೆ. ಕಡಿಮೆ ವೆಚ್ಚ: ಕೇವಲ 100 ಮಿ.ಲೀ. ಡಿಸ್ಟಿಲ್ಡ್ ವಾಟರ್ ಮತ್ತು 1 ಯೂನಿಟ್ ವಿದ್ಯುತ್ ಬಳಸಿಕೊಂಡು ಸತತ 6 ಗಂಟೆಗಳ ಕಾಲ ಅಡುಗೆ ಮಾಡಬಹುದು ಎಂದು ಕಂಪನಿ ತಿಳಿಸಿದೆ. ವಿದ್ಯುತ್ ಉಳಿತಾಯ:…

Read More

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪ ಏರುತ್ತಲೇ ಸಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಕರ್ನಾಟಕದ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ತೀವ್ರ ಬಿಸಿಗಾಳಿ (Heat wave) ಆರಂಭವಾಗಿದ್ದು, ಹವಾಮಾನ ಇಲಾಖೆಯು ಮುನ್ನೆಚ್ಚರಿಕೆ ನೀಡಿದೆ. ಸಿಲಿಕಾನ್ ಸಿಟಿಯಲ್ಲಿ ಗರಿಷ್ಠ ಉಷ್ಣಾಂಶ 35°C ದಾಟಿದ್ದು, ಮಲೆನಾಡಿನ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದ್ದರೂ ಸೆಖೆ ಕಡಿಮೆಯಾಗಿಲ್ಲ. ಕಲ್ಯಾಣ ಕರ್ನಾಟಕದಲ್ಲಿ ದಗಿ ದಗಿ: ಬಿಸಿಲನಾಡು ಎಂದು ಕರೆಯಲ್ಪಡುವ ಕಲ್ಯಾಣ ಕರ್ನಾಟಕ ಭಾಗದಲ್ಲಿ ತಾಪಮಾನ 38°C ದಾಟಿದೆ. ಅದರಲ್ಲೂ ಕಲಬುರಗಿಯಲ್ಲಿ 40°C ದಾಖಲಾಗುವ ಮೂಲಕ ಅತಿ ಹೆಚ್ಚು ಉಷ್ಣಾಂಶವಿರುವ ಜಿಲ್ಲೆಯಾಗಿದೆ. ಕರಾವಳಿ ಭಾಗ: ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 35°C ಹಾಗೂ ಕನಿಷ್ಠ ಉಷ್ಣಾಂಶ 26°C ದಾಟಿದೆ. ಜಿಲ್ಲಾವಾರು ಪರಿಸ್ಥಿತಿ: ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಅತ್ಯಂತ ಶುಷ್ಕ ವಾತಾವರಣವಿದೆ. ದಕ್ಷಿಣ ಒಳನಾಡಿನ…

Read More

ನವದೆಹಲಿ: ಚುನಾವಣೆಯಲ್ಲಿ ಮತ ಚಲಾಯಿಸುವುದು ಮತ್ತು ಸ್ಪರ್ಧಿಸುವುದು ನಾಗರಿಕರ ಮೂಲಭೂತ ಹಕ್ಕುಗಳಲ್ಲ, ಬದಲಿಗೆ ಅವು ಕೇವಲ ಕಾನೂನುಬದ್ಧ ಹಕ್ಕುಗಳಾಗಿವೆ (Statutory Rights) ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಈ ಮೂಲಕ ರಾಜಸ್ಥಾನ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ​ರಾಜಸ್ಥಾನದ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಒಕ್ಕೂಟಗಳ ಚುನಾವಣೆಗೆ ಸಂಬಂಧಿಸಿದಂತೆ ಈ ವಿವಾದ ಉಂಟಾಗಿತ್ತು. ಚುನಾವಣೆಗೆ ಸ್ಪರ್ಧಿಸಲು ಕನಿಷ್ಠ ಇಂತಿಷ್ಟೇ ಪ್ರಮಾಣದ ಹಾಲು ಪೂರೈಕೆ ಮಾಡಿರಬೇಕು ಎಂಬ ನಿಯಮವನ್ನು ರಾಜಸ್ಥಾನ ಹೈಕೋರ್ಟ್ ರದ್ದುಗೊಳಿಸಿತ್ತು. ಇದನ್ನು ಪ್ರಶ್ನಿಸಿ ಸಲ್ಲಿಸಲಾದ ಮೇಲ್ಮನವಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಮತ್ತು ನ್ಯಾಯಮೂರ್ತಿ ಆರ್. ಮಹದೇವನ್ ಅವರಿದ್ದ ಪೀಠವು ಈ ಮಹತ್ವದ ಸ್ಪಷ್ಟನೆ ನೀಡಿದೆ. ಮತದಾನದ ಹಕ್ಕು ಮತ್ತು ಚುನಾವಣೆಗೆ ಸ್ಪರ್ಧಿಸುವ ಹಕ್ಕು ಸಂವಿಧಾನದ 3ನೇ ಭಾಗದಲ್ಲಿರುವ ಮೂಲಭೂತ ಹಕ್ಕುಗಳ ಅಡಿಯಲ್ಲಿ ಬರುವುದಿಲ್ಲ. ಇವು ಕಾನೂನಿನ ಮೂಲಕ ನೀಡಲ್ಪಟ್ಟ ಹಕ್ಕುಗಳಾಗಿದ್ದು, ಕಾನೂನು ವಿಧಿಸುವ ನಿಬಂಧನೆಗಳಿಗೆ ಒಳಪಟ್ಟಿರುತ್ತವೆ. ಚುನಾವಣೆಗೆ ಸ್ಪರ್ಧಿಸಲು…

Read More

ಕತಿಹಾರ್ (ಬಿಹಾರ): ಬಿಹಾರದ ಕತಿಹಾರ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-31ರಲ್ಲಿ ಶನಿವಾರ ಸಂಜೆ ನಡೆದ ಭೀಕರ ಸರಣಿ ಅಪಘಾತದಲ್ಲಿ ಕನಿಷ್ಠ 13 ಜನರು ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತ ನಡೆದಿದ್ದು ಹೇಗೆ? ಕತಿಹಾರ್ ಜಿಲ್ಲೆಯ ಕೊಡಹಾ ಬ್ಲಾಕ್ನ ಬಸ್ಘರಾ ಚೌಕ್ ಬಳಿ ಈ ದುರ್ಘಟನೆ ಸಂಭವಿಸಿದೆ. ವೇಗವಾಗಿ ಬಂದ ಖಾಸಗಿ ಬಸ್, ಟ್ರಕ್ ಮತ್ತು ಪಿಕಪ್ ವ್ಯಾನ್ ನಡುವೆ ಪರಸ್ಪರ ಡಿಕ್ಕಿಯಾಗಿದೆ. ಅಪಘಾತದ ತೀವ್ರತೆ ಎಷ್ಟಿತ್ತೆಂದರೆ ವಾಹನಗಳು ಸಂಪೂರ್ಣವಾಗಿ ನುಜ್ಜುಗುಜ್ಜಾಗಿವೆ. ಪಿಕಪ್ ವ್ಯಾನ್ನಲ್ಲಿದ್ದ ಪ್ರಯಾಣಿಕರು ಪಕ್ಕದ ಪೂರ್ಣಿಯಾ ಜಿಲ್ಲೆಯಿಂದ ಬರುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಮೃತರ ಸಂಖ್ಯೆ ಏರಿಕೆ: ಪ್ರಾಥಮಿಕ ವರದಿಗಳ ಪ್ರಕಾರ ಏಳು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಆದರೆ ಆಸ್ಪತ್ರೆಗೆ ದಾಖಲಾದವರ ಪೈಕಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಗಾಯಾಳುಗಳನ್ನು ಪೂರ್ಣಿಯಾದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಮೃತರ ಕುಟುಂಬಕ್ಕೆ ಪರಿಹಾರ: ಈ ಘಟನೆಗೆ ಬಿಹಾರದ ಮುಖ್ಯಮಂತ್ರಿ…

Read More

ಬೆಂಗಳೂರು: ರಾಜ್ಯದ ಸರ್ಕಾರಿ ಮತ್ತು ಕಾನೂನು ಕಾಲೇಜುಗಳಲ್ಲಿ ಈ ಬಾರಿಯೂ ಕಳೆದ ವರ್ಷದ ಶುಲ್ಕವನ್ನೇ ಮುಂದುವರಿಸಲು ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಈ ವರ್ಷ ಯಾವುದೇ ರೀತಿಯ ಶುಲ್ಕ ಹೆಚ್ಚಳ ಇರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಸಂಖ್ಯೆ ಕುಸಿಯುತ್ತಿರುವ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳಿಗೆ ಹೊರೆಯಾಗದಂತೆ ಶುಲ್ಕದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಸರ್ಕಾರ ಈ ನಿರ್ಧಾರ ಮಾಡಿದೆ. ಕಾಲೇಜು ಅಭಿವೃದ್ಧಿ ಶುಲ್ಕ, ಶಿಕ್ಷಕರ ಕಲ್ಯಾಣ ನಿಧಿ, ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿ, ಸ್ಕೌಟ್ಸ್ ಮತ್ತು ಗೈಡ್ಸ್, ರೆಡ್‌ಕ್ರಾಸ್ ಹಾಗೂ ಎನ್‌ಎಸ್‌ಎಸ್ ಸೇರಿದಂತೆ ವಿವಿಧ ಶುಲ್ಕಗಳ ಸಂಗ್ರಹಣೆಯಲ್ಲಿ ಸರ್ಕಾರಿ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಲು ಸೂಚಿಸಲಾಗಿದೆ. ಚಿತ್ರಕಲಾ ಕಾಲೇಜುಗಳಲ್ಲಿ ಬದಲಾವಣೆ ಚಿತ್ರಕಲಾ ಕಾಲೇಜುಗಳ ಪರೀಕ್ಷಾ ಶುಲ್ಕವನ್ನು 1,000 ರೂ. ಗಳಿಗೆ ನಿಗದಿಪಡಿಸಲಾಗಿದೆ. ಪ್ರವೇಶಾತಿ ಶುಲ್ಕವನ್ನು 200 ರೂ. ಬದಲಿಗೆ 500 ರೂ. ಗಳಿಗೆ ಹೆಚ್ಚಿಸಲು ಸೂಚಿಸಲಾಗಿದೆ. ಈ ಮೊತ್ತವನ್ನು ನೇರವಾಗಿ ಕನ್ನಡ ವಿಶ್ವವಿದ್ಯಾಲಯಕ್ಕೆ ಪಾವತಿಸಬೇಕಾಗುತ್ತದೆ. ಅಭಿವೃದ್ಧಿಗೆ ಬಳಕೆ: ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಂದ ಸಂಗ್ರಹಿಸುವ…

Read More

ಇಸ್ಲಾಮಾಬಾದ್ : ಇರಾನ್ ಮತ್ತು ಅಮೆರಿಕ ನಡುವಿನ ಉನ್ನತ ಮಟ್ಟದ ರಾಜತಾಂತ್ರಿಕ ಮಾತುಕತೆಗಳು ಯಾವುದೇ ಅಂತಿಮ ತೀರ್ಮಾನವಿಲ್ಲದೆ ಅಂತ್ಯಗೊಂಡಿವೆ. ಈ ಕುರಿತು ಮಾಹಿತಿ ನೀಡಿರುವ ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ (JD Vance), ಎರಡೂ ದೇಶಗಳ ನಡುವೆ ಒಮ್ಮತ ಮೂಡದ ಕಾರಣ ಸಂಧಾನ ಮಾತುಕತೆ ವಿಫಲವಾಗಿದೆ ಎಂದು ಖಚಿತಪಡಿಸಿದ್ದಾರೆ. ಗಂಟೆಗಳ ಕಾಲ ನಡೆದ ಸುದೀರ್ಘ ಚರ್ಚೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡೂ ದೇಶಗಳಿಗೆ ಸಮ್ಮತವಾಗುವಂತಹ “ತೃಪ್ತಿದಾಯಕ ಒಪ್ಪಂದಕ್ಕೆ” ಬರಲು ಸಾಧ್ಯವಾಗಲಿಲ್ಲ. ಅಮೆರಿಕ ಮುಂದಿಟ್ಟಿದ್ದ ಪ್ರಮುಖ ನಿಯಮ ಮತ್ತು ನಿಬಂಧನೆಗಳನ್ನು ಇರಾನ್ ಒಪ್ಪಿಕೊಳ್ಳಲು ನಿರಾಕರಿಸಿದೆ. ಬಿಕ್ಕಟ್ಟು ಮುಂದುವರಿಕೆ: “ಇರಾನ್ ಕಡೆಯಿಂದ ಒಪ್ಪಿಗೆ ಸಿಗದ ಕಾರಣ ಸದ್ಯಕ್ಕೆ ಯಾವುದೇ ಒಪ್ಪಂದ ಏರ್ಪಟ್ಟಿಲ್ಲ” ಎಂದು ವ್ಯಾನ್ಸ್ ತಿಳಿಸಿದ್ದು, ಈ ಮೂಲಕ ಸಂಧಾನ ಪ್ರಕ್ರಿಯೆಯಲ್ಲಿ ಸೃಷ್ಟಿಯಾಗಿರುವ ಬಿಕ್ಕಟ್ಟನ್ನು ಸ್ಪಷ್ಟಪಡಿಸಿದ್ದಾರೆ. ಬೆಳವಣಿಗೆಯು ಜಾಗತಿಕ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದು, ಮುಂಬರುವ ದಿನಗಳಲ್ಲಿ ಅಮೆರಿಕದ ಮುಂದಿನ ನಡೆಯೇನು ಎಂಬುದು ಕಾದುನೋಡಬೇಕಿದೆ.

Read More

ಬೆಂಗಳೂರು: ರಾಜ್ಯದಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳ (ಪೋಕ್ಸೋ) ತನಿಖೆಯಲ್ಲಿ ಆಗುತ್ತಿರುವ ವಿಳಂಬಕ್ಕೆ ಕಡಿವಾಣ ಹಾಕಲು ಪೋಲಿಸ್ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಇನ್ಮುಂದೆ ಎಲ್ಲಾ ಪೋಕ್ಸೋ ಪ್ರಕರಣಗಳ ತನಿಖೆಯನ್ನು ಎರಡು ತಿಂಗಳೊಳಗೆ ಪೂರ್ಣಗೊಳಿಸಿ ಅಂತಿಮ ವರದಿ ಸಲ್ಲಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ರಾಜ್ಯದ ಎಲ್ಲಾ ವಲಯ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ ದಾಖಲಾಗುವ ಪೋಕ್ಸೋ ಪ್ರಕರಣಗಳ ತನಿಖೆಯನ್ನು ತನಿಖಾಧಿಕಾರಿಗಳು (IO) ಗರಿಷ್ಠ 2 ತಿಂಗಳೊಳಗೆ ಮುಗಿಸಬೇಕು. ಹೊಸ ಕಾಯ್ದೆಯ ಅನ್ವಯ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) ಸೆಕ್ಷನ್ 173ರ ಅನ್ವಯ, ಮಾಹಿತಿ ದಾಖಲಾದ ದಿನಾಂಕದಿಂದ ಎರಡು ತಿಂಗಳೊಳಗೆ ತನಿಖೆ ಪೂರ್ಣಗೊಳಿಸತಕ್ಕದ್ದು.BNSS ಸೆಕ್ಷನ್ 176(3) ರ ಪ್ರಕಾರ, 7 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಜೈಲು ಶಿಕ್ಷೆಯಾಗುವ ಅಪರಾಧಗಳಲ್ಲಿ ವಿಧಿವಿಜ್ಞಾನ (Forensic) ತಜ್ಞರ ತಂಡವು ಅಪರಾಧ ನಡೆದ ಸ್ಥಳಕ್ಕೆ ಭೇಟಿ ನೀಡಿ ಸಾಕ್ಷ್ಯ ಸಂಗ್ರಹಿಸುವುದು ಕಡ್ಡಾಯವಾಗಿದೆ. ತಂತ್ರಜ್ಞಾನದ ಬಳಕೆ: ತನಿಖೆಯ ಪ್ರಕ್ರಿಯೆಯನ್ನು ಮೊಬೈಲ್ ಅಥವಾ ಇತರ ಎಲೆಕ್ಟ್ರಾನಿಕ್ ಸಾಧನಗಳ ಮೂಲಕ ವಿಡಿಯೋ ಚಿತ್ರೀಕರಣ…

Read More