Author: kannadanewsnow57

ನವದೆಹಲಿ : ಪ್ಯಾನ್ ಕಾರ್ಡ್ (ಪ್ಯಾನ್ ಕಾರ್ಡ್ ನ್ಯೂ ರೂಲ್)ಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹೊಸ ನಿಯಮವನ್ನು ದೇಶಾದ್ಯಂತ ಜಾರಿಗೆ ತಂದಿದ್ದು, ಇದನ್ನು ಪಾಲಿಸದಿದ್ದಲ್ಲಿ ಭಾರಿ ನಷ್ಟವಾಗಲಿದೆ. PAN ಕಾರ್ಡ್ ಹೊಂದಿರುವವರು ಭವಿಷ್ಯದ ಸಮಸ್ಯೆಗಳನ್ನು ತಪ್ಪಿಸಲು ಇತ್ತೀಚಿನ ಮಾರ್ಗಸೂಚಿಗಳ ಪ್ರಕಾರ ತಮ್ಮ ಕಾರ್ಡ್ ಅನ್ನು ನವೀಕರಿಸಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಆಧಾರ್ ಕಾರ್ಡ್‌ನಂತೆ, ಪ್ಯಾನ್ ಕಾರ್ಡ್ ಕೂಡ ಭಾರತೀಯ ನಾಗರಿಕರಿಗೆ ಅತ್ಯಗತ್ಯ ದಾಖಲೆಯಾಗಿದೆ. ಶಾಶ್ವತ ಖಾತೆ ಸಂಖ್ಯೆ ಪ್ಯಾನ್ ಕಾರ್ಡ್ ವಿಶೇಷ ವಹಿವಾಟುಗಳು, ಹಣಕಾಸು ಮತ್ತು ಕಾನೂನು ಪ್ರಕ್ರಿಯೆಗಳಿಗೆ ಅಗತ್ಯವಿರುವ ದಾಖಲೆಯಾಗಿದೆ. ಪ್ಯಾನ್ ಕಾರ್ಡ್ ನಿಯಮಗಳಲ್ಲಿ ಸರ್ಕಾರ ಹಲವು ಬದಲಾವಣೆಗಳನ್ನು ಮಾಡಿದೆ. ಪ್ಯಾನ್ ಕಾರ್ಡ್ ಹೊಂದಿರುವವರು ಈ ಬಗ್ಗೆ ತಿಳಿದಿರಬೇಕು. ಆದಾಯ ತೆರಿಗೆ ಇಲಾಖೆ ಇದೀಗ ಪಾನ್ ಕಾರ್ಡ್‌ಗೆ ಸಂಬಂಧಿಸಿದಂತೆ ಹೊಸ ನಿಯಮಾವಳಿಯನ್ನು ಹೊರಡಿಸಿದೆ. ಪ್ರತಿಯೊಬ್ಬರೂ ಅನುಸರಿಸಬೇಕಾದ ಬಹಳ ಮುಖ್ಯವಾದ ನಿಯಮವಾಗಿದೆ. ಏನಿದು ಹೊಸ ನಿಯಮ? ಪ್ಯಾನ್ ಕಾರ್ಡ್ ಹೊಂದಿರುವವರು ಆಧಾರ್ ಕಾರ್ಡ್‌ನೊಂದಿಗೆ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಇದನ್ನು ಮಾಡಲು ವಿಫಲವಾದರೆ PAN…

Read More

ಚೆನ್ನೈ : ತಮಿಳುನಾಡಿನ ರಾಮನಾಥಪುರಂ ಬಳಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಐವರು ಅಯ್ಯಪ್ಪ ಭಕ್ತರು ಸಾವನ್ನಪ್ಪಿರುವ ಘಟನೆ ನಡೆದಿದೆ. ಕೀಳಕ್ಕರೈ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡ ಏಳು ಜನರನ್ನು ಚಿಕಿತ್ಸೆಗಾಗಿ ರಾಮನಾಥಪುರಂ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಮಾಹಿತಿ ಪಡೆದ ತಕ್ಷಣ ಆಗಮಿಸಿದ ಕೀಳಕ್ಕರೈ ಪೊಲೀಸರು ಕ್ಷಿಪ್ರವಾಗಿ ಕಾರ್ಯಾಚರಣೆ ನಡೆಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಅಪಘಾತವು ಅತಿವೇಗದಿಂದ ಸಂಭವಿಸಿದೆಯೇ ಅಥವಾ ಚಾಲಕನ ನಿದ್ರೆಯಲ್ಲಿತ್ತು ಎಂಬುದನ್ನು ನಿರ್ಧರಿಸಲು ಪೊಲೀಸರು ಪ್ರಾಥಮಿಕ ತನಿಖೆಯನ್ನು ಪ್ರಾರಂಭಿಸಿದ್ದಾರೆ. ಅಪಘಾತದಲ್ಲಿ ಎರಡೂ ಕಾರುಗಳ ಮುಂಭಾಗವು ನಜ್ಜುಗುಜ್ಜಾಗಿದೆ. ಈ ಮಧ್ಯೆ, ಮೃತರ ಶವಗಳನ್ನು ಗುರುತಿಸುವ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತಕ್ಕೀಡಾದ ಒಂದು ಕಾರು ಆಂಧ್ರಪ್ರದೇಶಕ್ಕೆ ಸೇರಿದ್ದು ಎಂದು ತಿಳಿದುಬಂದಿದೆ. ಅದರಲ್ಲಿ ಅಯ್ಯಪ್ಪ ಭಕ್ತರು ಪ್ರಯಾಣಿಸುತ್ತಿದ್ದರು. ಈ ಮಧ್ಯೆ, ಮತ್ತೊಂದು ಕಾರು ಏರ್ವಾಡಿ ಕಡೆಗೆ ಹೋಗುತ್ತಿತ್ತು. ಈ ವೇಳೆ ಕೀಳಕ್ಕರೈ ಬಳಿ ಅಪಘಾತ ಸಂಭವಿಸಿದೆ.

Read More

ನವದೆಹಲಿ :ಯಾವುದೇ ಖಾಸಗಿ ಚಟುವಟಿಕೆಯಲ್ಲಿ ತೊಡಗಿಲ್ಲದಿದ್ದರೆ ಮಹಿಳೆಯ ಅನುಮತಿಯಿಲ್ಲದೆ ಅವರ ಫೋಟೋ ತೆಗೆಯುವುದು ಅಪರಾಧವಲ್ಲ ಎಂದು ಸುಪ್ರೀಂ ಕೋರ್ಟ್ ಇತ್ತೀಚೆಗೆ ತೀರ್ಪು ನೀಡಿದೆ. ಯಾವುದೇ ಖಾಸಗಿ ಚಟುವಟಿಕೆಯಲ್ಲಿ ತೊಡಗಿಲ್ಲದಿರುವಾಗ ಮಹಿಳೆಯ ಫೋಟೋ ತೆಗೆಯುವುದು ಮತ್ತು ಅವರ ಒಪ್ಪಿಗೆಯಿಲ್ಲದೆ ಮೊಬೈಲ್ ಫೋನ್‌ನಲ್ಲಿ ಅವರ ವೀಡಿಯೊ ರೆಕಾರ್ಡ್ ಮಾಡುವುದು ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 354 ಸಿ ಅಡಿಯಲ್ಲಿ ಲೈಂಗಿಕ ದೌರ್ಜನ್ಯವೆಂದು ಪರಿಗಣಿಸಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಅಂತಹ ಒಂದು ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎನ್. ಕೋಟೀಶ್ವರ್ ಸಿಂಗ್ ಮತ್ತು ಮನಮೋಹನ್ ಅವರ ಪೀಠವು ದೂರುದಾರರ ಫೋಟೋಗಳನ್ನು ತೆಗೆದುಕೊಂಡು ಅವರ ಮೊಬೈಲ್ ಫೋನ್‌ನಲ್ಲಿ ವೀಡಿಯೊ ರೆಕಾರ್ಡ್ ಮಾಡುವ ಮೂಲಕ ಬೆದರಿಕೆ ಹಾಕಿದ ಆರೋಪ ಹೊತ್ತಿದ್ದ ಆರೋಪಿಯನ್ನು ಖುಲಾಸೆಗೊಳಿಸಿತು. ಆರೋಪಿಯು ತನ್ನ ಗೌಪ್ಯತೆಗೆ ಧಕ್ಕೆ ತಂದಿದ್ದಾನೆ ಮತ್ತು ತನ್ನ ನಮ್ರತೆಯನ್ನು ಕೆರಳಿಸಿದನೆಂದು ಮಹಿಳೆ ಹೇಳಿಕೊಂಡಿದ್ದಾಳೆ. ಮಾರ್ಚ್ 19, 2020 ರಂದು ದೂರುದಾರರು ಆರೋಪಿಯ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಐಪಿಸಿಯ ಸೆಕ್ಷನ್ 341,…

Read More

ಬೆಂಗಳೂರು : ರಾಜ್ಯದ ಆಸ್ತಿ ಮಾಲೀಕರೇ ಗಮನಿಸಿ, ಪೌತಿ ಖಾತೆ ಸೇರಿದಂತೆ ವಿವಿಧ ಖಾತೆ ಬದಲಾವಣೆಗೆ ಬೇಕಾಗುವ ಸಮಯ ಎಷ್ಟು? ಈ ಕುರಿತಂತೆ ಇಲ್ಲಿದೆ ಸಂಪೂರ್ಣ ಮಾಹಿತಿ. ಸಾರ್ವಜನಿಕರು ಆನ್ ಲೈನ್ ಮೂಲಕ, ನಾಡಕಛೇರಿಗಳಲ್ಲಿ ಹಾಗೂ ತಾಲ್ಲೂಕ ಭೂಮಿ ಕೇಂದ್ರಗಳಲ್ಲಿ ಪೌತಿ ವಾರಸಾ/ವಿಲ್/ಮೈನರ್ ಗಾರ್ಡಿಯನ್ ಖಾತೆ ಬದಲಾವಣೆಗಳಿಗಾಗಿ ಅರ್ಜಿ ಸಲಿ ಸುತ್ತಾಗೆ ಅರ್ಜಿ ಸಲ್ಲಿಸಿದ ನಂತರ ಭೂಮಿ ಆಪರೇಟರ್ ಲಾಗಿನ್ ನ ಹೊಸ ವಹಿವಾಟು ಸೇರ್ಪಡೆ ಆಯ್ಕೆಗೆ ಸ್ವೀಕೃತಗೊಳ್ಳುತ್ತವೆ. ನಂತರ ಭೂಮಿ ಆಪರೇಟರ್ ಲಾಗಿನ್ ನಲ್ಲಿ ವಹಿವಾಟು ಸಂಬಂಧ ಡೇಟಾ ನಮೂದು ಮಾಡಿ ಚೆಕಿ ಸ್ಟ್ ತಯಾರಿಸಲಾಗುತ್ತದೆ. ವಹಿವಾಟು ಅನುಮೋದನೆಗೆ ಭೂಮಿ ಶಿರಸ್ತೇದಾರರ ಲಾಗಿನ್ ಗೆ ಸ್ವೀಕೃತವಾಗಿತ್ತವೆ. ಸರ್ಕಾರಿ ಮಾಲೀಕತ್ವದ ಯಾವುದಾದರು ಸರ್ವೇ ನಂಬರ್ ಇದ್ದಲ್ಲಿ ವಹಿವಾಟು ಅನುಮೋದನೆಗೆ ತಹಶೀಲ್ದಾರ್ ಲಾಗಿನ್ ಗೆ ಸ್ವೀಕೃತವಾಗುತ್ತವೆ. ತಹಶೀಲ್ದಾರ್/ ಶಿರಸ್ತೇದಾರ್ ರವರ ವಹಿವಾಟು ಅನುಮೋದನೆ ನಂತರ ಭೂಮಿ ಆಪರೇಟರ್ ಲಾಗಿನ್ ನೋಟಿಸ್ ಮುದ್ರಣಕ್ಕಾಗಿ ಸ್ವೀಕೃತವಾಗುತ್ತವೆ. ನಂತರ ರಾಜಸ್ವ ನಿರಿಕ್ಷಕರ ಲಾಗಿನ್ ಗೆ ಕಡತ ಸ್ವೀಕೃತಿಗಾಗಿ…

Read More

ಧಾರವಾಡ : ಭೀಕರ ರಸ್ತೆ ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಮೃತಪಟ್ಟ ಪ್ರಕರಣ ಮಾಸುವ ಮುನ್ನ ಮತ್ತೊಂದು ದುರಂತ ಸಂಭವಿಸಿದ್ದು, ಕಾರು ಅಪಘಾತದಲ್ಲಿ ಲೋಕಾಯುಕ್ತ ಇನ್ಸ್ ಪೆಕ್ಟರ್ ಸಜೀವ ದಹನವಾಗಿದ್ದಾರೆ. ಧಾರವಾಡ ಜಿಲ್ಲೆ ಅಣ್ಣಿಗೇರಿ ಪಟ್ಟಣದ ಹೊರ ವಲಯದಲ್ಲಿ ಕಾರು ಡಿವೈಡರ್ ಗೆ ಡಿಕ್ಕಿಯಾಗಿ ನಡುರಸ್ತೆಯಲ್ಲಿ ಹೊತ್ತಿ ಉರಿದ ಪರಿಣಾಮ ಲೋಕಾಯುಕ್ತ ಇನ್ಸ್ ಪೆಕ್ಟರ್ ಸಜೀವ ದಹನವಾಗಿದ್ದಾರೆ. ಹಾವೇರಿ ಲೋಕಾಯುಕ್ತ ಇನ್ಸ್ ಪೆಕ್ಟರ್ ಪಂಚಾಕ್ಷರಿ ಸಾಲಿಮಠ ಮೃತಪಟ್ಟವರು. ನಿನ್ನೆ i20 ಕಾರ್ ನಲ್ಲಿ ಗದಗ ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿಯಾಗಿದೆ. ಈ ವೇಳೆ ಬೆಂಕಿ ಹೊತ್ತಿಕೊಂಡಿದೆ. ಕ್ಷಣಾರ್ಧದಲ್ಲಿ ಬೆಂಕಿ ವ್ಯಾಪಿಸಿದ್ದರಿಂದ ಪಂಚಾಕ್ಷರಿ ಅವರಿಗೆ ಕಾರು ಲಾಕ್ ತೆಗೆದು ಹೊರಬರಲು ಸಾಧ್ಯವಾಗಿಲ್ಲ. ಪರಿಣಾಮ ಅವರು ಕಾರಿನೊಳಗೆ ಸುಟ್ಟು ಕರಕಲಾಗಿದ್ದಾರೆ. ಸ್ಥಳಕ್ಕೆ ಅಣ್ಣಿಗೇರಿ ಠಾಣೆ ಪೋಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸಿದ್ದಾರೆ.

Read More

ಹಾಸನ : ಸರ್ಕಾರ ಮಾಡಿರುವ ಉತ್ತಮ ಕೆಲಸಗಳು ಜನರಿಗೆ ಕಾಣಬೇಕು ಈ ನಿಟ್ಟಿನಲ್ಲಿ ಇಂದು ಹಾಸನದಲ್ಲಿ ಹಾಸನ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ವತಿಯಿಂದ ಸರ್ಕಾರಿ ಸೇವೆಗಳ ಸಮರ್ಪಣಾ ಸಮಾವೇಶ ಆಯೋಜಿಸಲಾಗಿದೆ. 50 ಸಾವಿರ ಕ್ಕೂ ಹೆಚ್ಚು ಕುಟುಂಬಗಳ ಸಂಭ್ರಮದ ಕ್ಷಣ ಇದಾಗಿದ್ದು, ಕಂದಾಯ ಇಲಾಖೆ ದರಖಾಸ್ತು ಪೋಡಿ, ಪೌತಿಖಾತೆ, ಕಂದಾಯ ಗ್ರಾಮ 94 ಸಿ ಹಕ್ಕು ಪತ್ರಗಳ ವಿತರಣೆ ಮತ್ತು ವಿವಿಧ ಇಲಾಖೆಗಳ ಫಲಾನುಭವಿಗಳಿಗೆ ಸವಲತ್ತು ಸಮರ್ಪಣೆ ನಡೆಯಲಿದೆ. ಕಳೆದ ಒಂದು ವರ್ಷದಲ್ಲಿ ಆದಂತಹ ಕೆಲಸಗಳನ್ನು ಜನರಿಗೆ ಸಮರ್ಪಣೆ ಮಾಡಲಾಗುತ್ತಿದೆ ಎಂದ ಅವರು ಕಂದಾಯ ಇಲಾಖೆ ಗಣನೀಯವಾಗಿ ಪ್ರಗತಿ ಸಾಧಿಸಿದೆ ಎಂದ ಅವರು 14 ವರ್ಷದಲ್ಲಿ 2444 ರೈರಿಗೆ ಪೋಡಿ ದುರಸ್ತು ಮಾಡಿಕೊಂಡಲಾಗಿದೆ ಆದರೆ 2025ರ ಜನವರಿಯಿಂದ ಇಲ್ಲಿಯವರೆಗೆ 21,631 ಜಮೀನುಗಳನ್ನು ಅಳತೆ ಮಾಡಲಾಗಿದೆ ಇದರಲ್ಲಿ 10 ಸಾವಿರ ಆರ್.ಟಿ.ಸಿ ಆಗಿದೆ ಉಳಿದವು ಕೂಡ ಮುಂದಿನ ದಿನಗಳಲ್ಲಿ ಆರ್.ಟಿ,ಸಿ ಮಾಡಲಾಗುವುದು. ಪೌತಿ ಖಾತೆ ಆಂದೋಲನ ವೇದಿಕೆಯ ಕಾರ್ಯಕ್ರಮ 11 ಗಂಟೆಗೆ…

Read More

ಬೆಂಗಳೂರು : ನಿವೃತ್ತ ಪೊಲೀಸ್ ಅಧಿಕಾರಿ/ಸಿಬ್ಬಂದಿ ರವರುಗಳಿಗೆ ನಿವೃತ್ತ ಆರೋಗ್ಯ ಯೋಜನೆಯಡಿಯಲ್ಲಿ ಆಸ್ಪತ್ರೆಯನ್ನು ಸೇರ್ಪಡೆಗೊಳಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ನಿವೃತ್ತ ಪೊಲೀಸ್ ಅಧಿಕಾರಿ/ಸಿಬ್ಬಂದಿಗಳಿಗೆ ಆರೋಗ್ಯ ಯೋಜನೆಯನ್ನು ಜಾರಿಗೆ ತರಲಾಗಿರುತ್ತದೆ, ನಿವೃತ್ತ ಪೊಲೀಸ್ ಅಧಿಕಾರಿ/ಸಿಬ್ಬಂದಿ ಮತ್ತು ಅವರ ಪತಿ/ಪತ್ನಿ ರವರಿಗೆ ಚಿಕಿತ್ಸೆ ಒದಗಿಸುವ ಸಂಬಂಧ ಈ ಕೆಳಕಂಡ ಆಸ್ಪತ್ರೆಯನ್ನು ನಿವೃತ್ತ ಪೊಲೀಸ್ ಆರೋಗ್ಯ ಯೋಜನೆಯಡಿಯಲ್ಲಿ ಸೇರ್ಪಡೆಗೊಳಿಸಲಾಗಿದೆ. ನಯನ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, ದಾವಣಗೆರೆ. ಆರೋಗ್ಯ ಭಾಗ್ಯ ಯೋಜನೆಯಡಿಯಲ್ಲಿ ಸೇವಾನಿರತ ಪೊಲೀಸ್ ಅಧಿಕಾರಿ/ಸಿಬ್ಬಂದಿ ಮತ್ತು ಅವರ ಅವಲಂಬಿತ ಕುಟುಂಬದವರಿಗೆ ಸಿ.ಜಿ.ಹೆಚ್.ಎಸ್ ದರದಲ್ಲಿ ಚಿಕಿತ್ಸೆ ಒದಗಿಸಲು ಒಪ್ಪಿದ್ದು, ಅದೇ ರೀತಿ ನಿವೃತ್ತ ಪೊಲೀಸ್ ಅಧಿಕಾರಿ/ಸಿಬ್ಬಂದಿ ಮತ್ತು ಅವರ ಪತಿ/ಪತ್ನಿ ರವರಿಗೆ ಚಿಕಿತ್ಸೆ ಒದಗಿಸುವ ಬಗ್ಗೆ ಸಾಮಾನ್ಯ ವೈದ್ಯಕೀಯ ಚಿಕಿತ್ಸೆ ಪ್ರಕ್ರಿಯೆಗೆ ಗರಿಷ್ಠ ಮಿತಿ ಒಂದು ವರ್ಷಕ್ಕೆ ರೂ.1.50 ಲಕ್ಷ, ವಿಶೇಷ ಹಾಗೂ ಸಂಕೀರ್ಣ ಶಸ್ತ್ರ ಚಿಕಿತ್ಸೆಗಳಲ್ಲಿ (ಇಂಪ್ಲಾಂಟ್, ಸ್ಟಂಟ್ ಸೇರಿ) ಹೆಚ್ಚಿನ ರೂ.1.50 ಲಕ್ಷ (ಒಟ್ಟಾಗಿ…

Read More

ಕರ್ನಾಟಕ ಅರ್ಹತಾ ಪರೀಕ್ಷೆ 2025ರ ಅರ್ಹತಾ ಪರೀಕ್ಷೆಯು ಡಿಸೆಂಬರ್ 07, 2025 ರಂದು ನಡೆಯಲಿದ್ದು, ಪರೀಕ್ಷೆಯು ಎರಡು ಅವಧಿಯಲ್ಲಿ ನಡೆಯುತ್ತದೆ ಬೆಳಿಗ್ಗೆ 9. 30 ರಿಂದ 12 ಗಂಟೆವರೆಗೆ ಮತ್ತು ಮದ್ಯಾಹ್ನದ 2 ರಿಂದ 4.30 ರ ವರೆಗೆ ಪರೀಕ್ಷೆಯು ನಡೆಯುತ್ತದೆ. ಪರೀಕ್ಷಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚನೆ ನೀಡಲಾಗಿದೆ. ಶಿಕ್ಷಕರ ಅರ್ಹತಾ ಪರೀಕ್ಷೆಯು ಉದ್ಯೋಗ ಪಡೆಯುದಕ್ಕಾಗಿ ಅರ್ಹತಾ ಪರೀಕ್ಷೆಯಾಗಿದೆ. ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಯಾವುದೇ ರೀತಿಯ ನಕಲು ಹಾಗೂ ಮೊಬೈಲ್, ಬ್ಲೂಟೂತ್, ಸ್ಮಾರ್ಟ್ ವಾಚ್ ಸೇರಿದಂತೆ ಅತ್ಯಾಧುನಿಕ ತಾಂತ್ರಿಕ ಸಾಧನ ಸಲಕರಣೆಗಳನ್ನು ಪರೀಕ್ಷಾ ಕೊಠಡಿಗೆ ತರದಂತೆ ಮತ್ತು ಬಳಸದಂತೆ ಮುಂಜಾಗೃತೆ ವಹಿಸಬೇಕೆಂದು ತಿಳಿಸಲಾಗಿದೆ. ಪರೀಕ್ಷೆಗಾಗಿ ಸೂಕ್ತ ಭದ್ರಯೆ ಇರುವಂತೆ ಹಾಗೂ ನಿಗಧಿತ ಅವಧಿಗೆ ಪರೀಕ್ಷೆಗಳನ್ನು ಆರಂಭಿಸಿ, ನಿಗಧಿತ ಸಮಯಕ್ಕೆ ಮುಕ್ತಾಯಗೊಳಿಸಬೇಕು. ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಗೊಂದಲ, ಒತ್ತಡಗಳಾಗದಂತೆ ಪರೀಕ್ಷಾ ಪೂರ್ವದಲ್ಲಿಯೆ ಪರೀಕ್ಷಾ ನಿಯಮಗಳನ್ನು ತಿಳಿಸಬೇಕು. ಪರೀಕ್ಷೆಗಳು ಸುಸೂತ್ರವಾಗಿ ಮತ್ತು ಶಾಂತಿಯುತವಾಗಿ ಜರುಗುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ತಿಳಿಸಲಾಗಿದೆ. ಟಿಇಟಿ ಪರೀಕ್ಷೆಗೆ ಹಾಜರಾಗುವಂತ…

Read More

ಸಾಮಾನ್ಯವಾಗಿ, ನಾವು ಹೊಸ ಸ್ಮಾರ್ಟ್‌ಫೋನ್ ಖರೀದಿಸುವಾಗ, ಅದು ಹಲವು ವರ್ಷಗಳ ಕಾಲ ಬಾಳಿಕೆ ಬರುತ್ತದೆ ಎಂದು ನಾವು ಭಾವಿಸುತ್ತೇವೆ. ಆದರೆ ಪ್ರತಿಯೊಂದು ಫೋನ್‌ಗೂ ಅವಧಿ ಮುಗಿಯುವ ದಿನಾಂಕವಿದೆ ಎಂದು ನಿಮಗೆ ತಿಳಿದಿದೆಯೇ? ಹೌದು, ಯಾವುದೇ ಎಲೆಕ್ಟ್ರಾನಿಕ್ ಸಾಧನಕ್ಕೂ ನಿಗದಿತ ಜೀವಿತಾವಧಿ ಇರುವಂತೆ, ನಿಮ್ಮ ಫೋನ್‌ಗೂ ಸಹ ಜೀವಿತಾವಧಿ ಇರುತ್ತದೆ. ಒಂದೇ ವ್ಯತ್ಯಾಸವೆಂದರೆ ದಿನಾಂಕವನ್ನು ಪೆಟ್ಟಿಗೆಯ ಮೇಲೆ ಬರೆಯಲಾಗಿಲ್ಲ; ಅದನ್ನು ಅರ್ಥಮಾಡಿಕೊಳ್ಳಲು ಮತ್ತು ಲೆಕ್ಕಾಚಾರ ಮಾಡಲು ಕೆಲವು ಮಾರ್ಗಗಳಿವೆ. ಫೋನ್‌ನ ಮುಕ್ತಾಯ ದಿನಾಂಕದ ಅರ್ಥವೇನು? ಫೋನ್‌ನ ಮುಕ್ತಾಯ ದಿನಾಂಕ ಎಂದರೆ ಅದು ಇದ್ದಕ್ಕಿದ್ದಂತೆ ಕೆಲಸ ಮಾಡುವುದನ್ನು ನಿಲ್ಲಿಸುತ್ತದೆ ಎಂದಲ್ಲ. ವಾಸ್ತವವಾಗಿ, ಇದು ನಿಮ್ಮ ಫೋನ್ ಅತ್ಯುತ್ತಮ ಕಾರ್ಯಕ್ಷಮತೆ, ಭದ್ರತಾ ನವೀಕರಣಗಳು ಮತ್ತು ಸಾಫ್ಟ್‌ವೇರ್ ಬೆಂಬಲವನ್ನು ಒದಗಿಸುವ ಅವಧಿಯನ್ನು ಸೂಚಿಸುತ್ತದೆ. ಇದರ ನಂತರ, ಫೋನ್ ಕ್ರಮೇಣ ನಿಧಾನಗೊಳ್ಳುತ್ತದೆ, ಬ್ಯಾಟರಿ ಬಾಳಿಕೆ ಕಡಿಮೆಯಾಗುತ್ತದೆ ಮತ್ತು ಸಿಸ್ಟಮ್ ಭದ್ರತೆ ದುರ್ಬಲವಾಗುತ್ತದೆ. ಫೋನ್‌ನ ಸರಾಸರಿ ಜೀವಿತಾವಧಿ ಎಷ್ಟು? ಸ್ಮಾರ್ಟ್‌ಫೋನ್‌ಗಳನ್ನು ಸಾಮಾನ್ಯವಾಗಿ 3 ರಿಂದ 5 ವರ್ಷಗಳ ನಡುವೆ ಪರಿಗಣಿಸಲಾಗುತ್ತದೆ.…

Read More

ಶಿವಮೊಗ್ಗ : ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ ಬೆಳೆಗಾರರಿಗೆ ಉಂಟಾಗುವ ಬೆಳೆ ನಷ್ಟಕ್ಕೆ ಆರ್ಥಿಕ ಭದ್ರತೆ ನೀಡುವ ಹವಾಮಾನಾಧಾರಿತ ಬೆಳೆ ವಿಮಾ ಯೋಜನೆಯಡಿ ವಿವಿಧ ಕಾರಣಗಳಿಂದಾಗಿ ಸಂತ್ರಸ್ಥರಿಗೆ ಪರಿಹಾರ ಧನ ನೀಡುವಲ್ಲಿ ನ್ಯೂನತೆಗಳುಂಟಾಗಿರುವುದು ಗಮನಕ್ಕೆ ಬಂದಿದ್ದು, ಅದನ್ನು ಸರಿಪಡಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಂದ ವರದಿ ಪಡೆದು ತ್ವರಿತ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರು ಹೇಳಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ತೋಟಗಾರಿಕೆ ಮತ್ತು ಕೃಷಿ ಇಲಾಖೆಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ನಂತರ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿ, ಮಳೆಮಾಪಕ ಕೇಂದ್ರಗಳ ಮೂಲಕ ಸಂಗ್ರಹಿಸಿದ ಹವಾಮಾನ ದತ್ತಾಂಶಗಳನ್ನು ಆಧರಿಸಿ ವಿಮಾ ಪರಿಹಾರವನ್ನು ಲೆಕ್ಕಾಚಾರ ಮಾಡಲಾಗುತ್ತದೆ. ಆದರೆ, ಜಿಲ್ಲೆಯಲ್ಲಿರುವ 280ಮಳೆ ಮಾಪನ ಕೇಂದ್ರಗಳಲ್ಲಿ ಕೆಲವು ದುರಸ್ತಿಯಲ್ಲಿದ್ದು, ಸರಿಯಾದ ಮಳೆಮಾಪನ ವರದಿ ಹಾಗೂ ದತ್ತಾಂಶ ದೊರೆಯದಿರುವ ಪ್ರದೇಶಗಳಲ್ಲಿನ ರೈತರ ಬೆಳೆಹಾನಿಯ…

Read More