Author: kannadanewsnow57

ದಾವಣಗೆರೆ : ಮಕ್ಕಳನ್ನು ಒಂಟಿಯಾಗಿ ಬಿಡುವ ಪೋಷಕರೇ ಎಚ್ಚರ, ನೀರು ತುಂಬಿದ ಪಾತ್ರೆಯಲ್ಲಿ ಮುಳುಗಿ 2 ವರ್ಷದ ಮಗು ಮೃತಪಟ್ಟ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ನಿಬಗೂರು ಗೊಲ್ಲರಹಟ್ಟಿ ಗ್ರಾಮದಲ್ಲಿ ಮಂಗಳವಾರ ಈ ಘಟನೆ ನಡೆದಿದೆ. ಮನೆ ಹಿತ್ತಲಿನ ಬಚ್ಚಲ ಕೋಣೆಯಲ್ಲಿರುವ ನೀರು ತುಂಬಿದ ಪಾತ್ರೆಯಲ್ಲಿ ಮುಳುಗಿ ಎರಡು ವರ್ಷದ ಮಗು ಮೃತಪಟ್ಟಿದೆ. ರಾಜೇಶ್ವರಿ ಮಂಜುನಾಥ್ ದಂಪತಿಯ ಮೂರನೇ ಮಗು ವೇದಾ ಮೃತ ಹೆಣ್ಣುಮಗು. ಮನೆಯ ಹಿತ್ತಲಿನಲ್ಲಿ ಇರಿಸಿದ್ದ ನೀರಿನ ಪಾತ್ರೆಯಲ್ಲಿ ಆಟವಾಡುತ್ತಾ ಮಗು ಬಿದ್ದು ಮೃತಪಟ್ಟಿದೆ.

Read More

ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯ ಸೂಕ್ಷ್ಮ ನೀರಾವರಿ ಘಟಕ ಕಾರ್ಯಕ್ರಮದಡಿ ಎಲ್ಲ ವರ್ಗದ ರೈತರಿಗೆ ಶೇ. 90 ರ ಸಹಾಯಧನದಡಿ ತುಂತುರು ನೀರಾವರಿ (ಸ್ಪಿಂಕ್ಲರ್) ಘಟಕವನ್ನು ವಿತರಿಸಲಾಗುತ್ತಿದ್ದು, ಪ್ರಸ್ತುತ ಸಾಲಿನಲ್ಲಿ ಕಾರ್ಯಕ್ರಮ ನಿಗಧಿಯಾಗಿದೆ. ವಿಶೇಷವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಘಟಕದಡಿ ಅನುದಾನ ಲಭ್ಯವಿದ್ದು, ಅರ್ಹ ರೈತ ಫಲಾನುಭವಿಗಳು ಅರ್ಜಿ ಸಲ್ಲಿಸಿದ ಕೂಡಲೇ ಸಹಾಯಧನ ಬಿಡುಗಡೆ ಮಾಡಲಾಗುವುದು. ಆದ್ದರಿಂದ ತುಂತುರು ನೀರಾವರಿ (ಸ್ಪಿಂಕ್ಲರ್) ಘಟಕವನ್ನು ಪಡೆದುಕೊಳ್ಳಲು ಇಚ್ಛಿಯಿಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಫಲಾನುಭವಿಗಳು ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ, ಅರ್ಜಿ ಸಲ್ಲಿಸಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರುಗಳಾದ ಧಾರವಾಡ ರಾಜಶೇಖರ ಅನಗೌಡರ (8277931282), ಹುಬ್ಬಳ್ಳಿ ಮಂಜುಳಾ ತೆಂಬದ (8277931288), ಕಲಘಟಗಿ ಅಮರ ನಾಯ್ಕರ (8277931291), ಕುಂದಗೋಳ ಭಾರತಿ ಮೆಣಸಿನಕಾಯಿ (9071449976), ನವಲಗುಂದ ರವೀಂದ್ರಗೌಡ ಪಾಟೀಲ (8277931295) ಸಂಪರ್ಕಿಸಬಹುದು ಎಂದು ಜಂಟಿ…

Read More

ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ಕರಡು ಮತದಾರರ ಪಟ್ಟಿಯನ್ನು ನವಂಬರ್ 25, 2025 ರಂದು ಪ್ರಕಟಿಸಲಾಗಿದೆ. ಪ್ರಕಟಿತ ಕರಡು ಮತದಾರರ ಪಟ್ಟಿಯಲ್ಲಿ 43,573 ಪುರುಷರು ಮತ್ತು 30,743 ಮಹಿಳೆಯರು ಸೇರಿ ಒಟ್ಟು 74,316 ಮತದಾರರಿದ್ದಾರೆ ಎಂದು ಪಶ್ಚಿಮ ಪದವೀಧರರ ಮತಕ್ಷೇತ್ರದ ಮತದಾರರ ನೋಂದಣಿ ಅಧಿಕಾರಿಗಳು ಆಗಿರುವ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತೆ ಜಾನಕಿ ಕೆ.ಎಂ. ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಪ್ರಕಟಿತ ಕರಡು ಮತದಾರರ ಪಟ್ಟಿಯು ಮತದಾರರ ನೋಂದಣಿ ಅಧಿಕಾರಿಗಳಾದ ಬೆಳಗಾವಿ ವಿಭಾಗ ಪ್ರಾದೇಶಿಕ ಆಯುಕ್ತರು ಹಾಗೂ ಸಹಾಯಕ ಮತದಾರರ ನೋಂದಣಾಧಿಕಾರಿಗಳಾದ ಜಿಲ್ಲಾಧಿಕಾರಿಗಳು ಧಾರವಾಡ, ಜಿಲ್ಲಾಧಿಕಾರಿಗಳು ಗದಗ, ಜಿಲ್ಲಾಧಿಕಾರಿಗಳು ಹಾವೇರಿ ಮತ್ತು ಜಿಲ್ಲಾಧಿಕಾರಿಗಳು ಉತ್ತರಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿಗಳಲ್ಲಿ ಹಾಗೂ ಅವರ ವ್ಯಾಪ್ತಿಯಲ್ಲಿ ಬರುವ ಎಲ್ಲ ನಿಯೋಜಿತ ಅಧಿಕಾರಿಗಳ ಕಚೇರಿಗಳಲ್ಲಿ ಲಭ್ಯವಿರುತ್ತದೆ ಎಂದು ಅವರು ತಿಳಿಸಿದ್ದಾರೆ. ಪ್ರಕಟಿತ ಕರಡು ಮತದಾರರ ಪಟ್ಟಿಯು ಬೆಂಗಳೂರು ಚುನಾವಣಾಧಿಕಾರಿ ಅವರ ವೆಬ್ಸೈಧಟ್ www.ceokarnatake.kar.nic.in ನಲ್ಲಿ ಹಾಗೂ ಬೆಳಗಾವಿ ಪ್ರಾದೇಶಿಕ ಕಾರ್ಯಾಲಯದ ವೆಬ್ಸೈೈಟ್…

Read More

ಚಿತ್ರದುರ್ಗ : ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಮುರುಘಾ ಶ್ರೀ ವಿರುದ್ಧ ದಾಖಲಾಗಿರುವ ಮೊದಲ ಪೋಕ್ಸೊ ಪ್ರಕರಣದ ವಿಚಾರಣೆ ಪೂರ್ಣಗೊಂಡಿದ್ದು, ಇಲ್ಲಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸಿವಿಲ್‌ ಕೋರ್ಟ್‌ ಇಂದು ಅಂತಿಮ ತೀರ್ಪು ಪ್ರಕಟಿಸಲಿದೆ. ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಿಂದ ಇಂದು ತೀರ್ಪು ಪ್ರಕಟಿಸಲಿದ್ದು, ನ್ಯಾಯಮೂರ್ತಿ ಗಂಗಾಧರಪ್ಪ ಚೆನ್ನಬಸಪ್ಪ ಹಡಪದ ತೀರ್ಪು ಪ್ರಕಟಿಸಲಿದ್ದಾರೆ. ಬೆಳಗ್ಗೆ 11:30 ಬೆಳಗ್ಗೆ ಸ್ವಾಮೀಜಿ ವಿರುದ್ಧದ ಮೊದಲ ಪೋಕ್ಸೊ ಪ್ರಕರಣದ ತೀರ್ಪು ಇಂದು ಪ್ರಕಟವಾಗಲಿದೆ. ಆರೋಪ ಸಾಬೀತಾದರೆ ಕನಿಷ್ಠ 20 ವರ್ಷ ಶಿಕ್ಷೆಯಾಗುವ ಸಾಧ್ಯತೆ ಇದೆ. ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ನಜ್ಯ ಎಸಗಿದ ಆರೋಪ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿ ಪ್ರಕರಣದ ವಾದ-ಪ್ರತಿವಾದವು ಪೂರ್ಣಗೊಂಡಿದೆ. ಶರಣರ ವಿರುದ್ಧದ ಎರಡು ಪೋಕ್ಸೊ ಪ್ರಕರಣಗಳ ಪೈಕಿ ಮೊದಲ ಪ್ರಕರಣದ ಸಂಬಂಧ ಸುದೀರ್ಘ ವಿಚಾರಣೆ ನಡೆದಿದೆ. ವಿಚಾರಣೆ ವೇಳೆ ಸಂತ್ರಸ್ತೆಯ ಪರ ಅಂತಿಮ ವಾದ ಮಂಡಿಸಲಾಗಿದ್ದು, ವಾದ ಆಲಿಸಿದ ನ್ಯಾಯಾಲಯ…

Read More

ಮುಂಬೈ : ಪೋಷಕರನ್ನು ನೋಡಿಕೊಳ್ಳದ ಮಕ್ಕಳಿಗೆ ಕೋರ್ಟ್ ಬಿಗ್ ಶಾಕ್ ನೀಡಿದ್ದು,  ಮಹಾರಾಷ್ಟ್ರದ ಜುನ್ನರ್‌ನ ಜಿಲ್ಲಾ ನ್ಯಾಯಾಲಯವು ವೃದ್ಧ ತಂದೆ ತಾಯಿಯನ್ನು ನೋಡಿಕೊಳ್ಳದ ಪುತ್ರನಿಗೆ 3 ತಿಂಗಳು ಜೈಲುಶಿಕ್ಷೆ ಹಾಗೂ 5,000 ರು. ದಂಡ ವಿಧಿಸಿ ಆದೇಶ ಹೊರಡಿಸಿದೆ. ಮಕ್ಕಳು ವೃದ್ಧ ತಂದೆ ತಾಯಿಯರನ್ನು ನೋಡಿಕೊಳ್ಳದೆ ಬೀದಿಗೆ ಬಿಡುವ ಅಮಾನವೀಯ ಘಟನೆಗಳು ಹೆಚ್ಚುತ್ತಿರುವ ನಡುವೆಯೇ ಕೋರ್ಟ್ ಆದೇಶ ಹೊರಡಿಸಿದೆ. ಇಬ್ಬರೂ ಮಕ್ಕಳು ತಮ್ಮ ಕೃಷಿಭೂಮಿಯನ್ನು ವಶಪಡಿಸಿ ಕೊಂಡಿದ್ದಾರೆ. ಮೂಲಭೂತ ಆವಶ್ಯಕತೆಗಳನ್ನೂ ಒದಗಿಸದೆ ಮನೆಯಿಂದ ಹೊರಹಾಕಲು ಮುಂದಾಗಿದ್ದಾರೆ. ಚಿಕ್ಕ ಮಗ ನಮ್ಮನ್ನು ನೋಡಿಕೊಳ್ಳುತ್ತೇನೆ ಎಂದು ಮಾತು ಕೊಟ್ಟಿದ್ದರಿಂದ 51 ಗುಂಟೆ ಜಾಗವನ್ನು ಅವನ ಹೆಸರಿಗೆ ಮಾಡಿದ್ದೆವು. ಆದರೆ ಆತನೂ ಹೊರದಬ್ಬಿದ್ದಲ್ಲದೆ, ಹಣವನ್ನೂ ಪೀಕಿದ್ದಾನೆ’ ಎಂದು 70 ವರ್ಷದ ದಂಪತಿ 2023ರ ಮೇ 13ರಂದು ದೂರು ನೀಡಿದ್ದರು. ವಿಚಾರಣೆ ವೇಳೆ ಕಿರಿಮಗನ ನಡವಳಿಕೆ ಆಕ್ಷೇಪಾರ್ಹ ಎಂಬುದು ಸಾಬೀತಾಗಿದೆ. ಆತನನು ಬಂಧಿಸಲಾಗಿದ್ದು, ಪುತ್ರನಿಗೆ 3 ತಿಂಗಳು ಜೈಲುವಾಸ ಹಾಗೂ 5,000 ರು. ದಂಡ ವಿಧಿಸಿ ಕೋರ್ಟ್…

Read More

ರಾಜ್ಯ ಸರಕಾರಿ ನೌಕರರಿಗೆ ಕರ್ನಾಟಕ ಸರಕಾರದ ವಿಮಾ ಇಲಾಖೆಯಲ್ಲಿ ವಿಮೆ ಹೊಂದಿರುವ ವಿಮೆದಾರರಿಗೆ ಅಂದರೆ ದಿನಾಂಕ:1-4-2022 ರಿಂದ 31-3-2024 ರ ಅವಧಿಯಲ್ಲಿ ಚಾಲ್ತಿಯಲ್ಲಿರುವ, ಮ್ಯಾಚುರಿಟಿ (ಫಲಪ್ರದ) ಆಗಿರುವ ಸುಮಾರು 2,243 ವಿಮೆಗಳಿಗೆ ರೂ.1000 ಗಳಿಗೆ ರೂ.80 ರಂತೆ ಲಾಭಾಂಶ (ಬೊನಸ್) ನೀಡಲಾಗುತ್ತಿದ್ದು, ಬರುವ ಡಿಸೆಂಬರ್ 15 ರೊಳಗೆ ನೇರವಾಗಿ ವಿಮೆದಾರರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತದೆ ಎಂದು ಧಾರವಾಡ ಜಿಲ್ಲಾ ವಿಮಾ ಅಧಿಕಾರಿ ಜಗನ್ನಾಥ. ಸಿ.ಕಠಾರೆ ಅವರು ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು, ನಿಯಮಾನುಸಾರ ವಿಮೆದಾರರಿಗೆ ಬೋನಸ್ ಜಮೆ ಮಾಡುವ ಕಾರ್ಯ ಪ್ರಗತಿಯಲ್ಲಿದೆ. ಜಿಲ್ಲೆಯಲ್ಲಿ ಜರುಗಿದ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಕೆಜಿಐಡಿ ಸಿಬ್ಬಂದಿಗಳನ್ನು ನೇಮಿಸಿದ್ದರಿಂದ ವಿಳಂಬವಾಗಿದ್ದು, ಈಗ ಪ್ರತಿ ದಿನ ಹಂತ ಹಂತವಾಗಿ ಖಜಾನೆ ಮೂಲಕ ವಿಮೆದಾರರಿಗೆ ಬೋನಸ್ ಜಮೆ ಆಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ಈಗಾಗಲೇ ಜಿಲ್ಲೆಯ ವಿಮಾದಾರ 2,243 ಸರಕಾರಿ ನೌಕರರ ಪೈಕಿ ಸುಮಾರು 600 ಜನರ ಖಾತೆಗೆ ಬೋನಸ್ ಪಾವತಿ…

Read More

ನವದೆಹಲಿ :ಡಿಸೆಂಬರ್ ತಿಂಗಳು ಆರಂಭವಾಗುತ್ತಿದ್ದಂತೆ ಆಧಾರ್ ಕಾರ್ಡ್‌ಗಳಿಂದ ಎಲ್‌ಪಿಜಿಯವರೆಗೆ ದೇಶದಲ್ಲಿ ಪ್ರಮುಖ ಬದಲಾವಣೆಗಳು ಸಂಭವಿಸಲಿವೆ. ಡಿಸೆಂಬರ್ 1, 2025 ರಿಂದ ಜಾರಿಗೆ ಬರುವ ಈ ಬದಲಾವಣೆಗಳು ನಿಮ್ಮ ಜೇಬಿನ ಮೇಲೆ ಪರಿಣಾಮ ಬೀರಬಹುದು. ಡಿಸೆಂಬರ್ 1 ರಿಂದ ಬದಲಾಗಲಿವೆ ಈ 8 ಪ್ರಮುಖ ನಿಯಮಗಳು 1 ಆಧಾರ್ ಕಾರ್ಡ್‌ ಗೆ ಪ್ರಮುಖ ಬದಲಾವಣೆಗಳು ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಆಧಾರ್ ಕಾರ್ಡ್‌ಗೆ ಪ್ರಮುಖ ಬದಲಾವಣೆಗಳನ್ನು ಪರಿಗಣಿಸುತ್ತಿದೆ. ಇದು ಹೊಂದಿರುವವರ ಫೋಟೋ ಮತ್ತು ಕ್ಯೂಆರ್ ಕೋಡ್ ಅನ್ನು ಮಾತ್ರ ಪ್ರದರ್ಶಿಸುತ್ತದೆ. ನಿಮ್ಮ ಹೆಸರು, ವಿಳಾಸ ಮತ್ತು 12-ಅಂಕಿಯ ಆಧಾರ್ ಸಂಖ್ಯೆಯಂತಹ ವೈಯಕ್ತಿಕ ವಿವರಗಳನ್ನು ಆಧಾರ್ ಕಾರ್ಡ್‌ನಿಂದ ತೆಗೆದುಹಾಕಲಾಗುತ್ತದೆ. ಯುಐಡಿಎಐ ಸಿಇಒ ಭುವನೇಶ್ ಕುಮಾರ್ ಅವರ ಪ್ರಕಾರ, ಡೇಟಾ ದುರುಪಯೋಗವನ್ನು ತಡೆಗಟ್ಟಲು ಮತ್ತು ಹೋಟೆಲ್‌ಗಳು, ಈವೆಂಟ್ ಆಯೋಜಕರು ಮತ್ತು ಇತರ ಸಂಸ್ಥೆಗಳು ಬಳಸುವ ಅಕ್ರಮ ಆಫ್‌ಲೈನ್ ಪರಿಶೀಲನಾ ವಿಧಾನಗಳನ್ನು ತಡೆಯಲು ಡಿಸೆಂಬರ್ 2025 ರಲ್ಲಿ ಹೊಸ ನಿಯಮಗಳನ್ನು ಪರಿಚಯಿಸಲು ಭಾರತೀಯ ವಿಶಿಷ್ಟ ಗುರುತಿನ…

Read More

ಆದಾಯ ತೆರಿಗೆ ಕಾಯ್ದೆಯಡಿಯಲ್ಲಿ, ವ್ಯಕ್ತಿಗಳು, ಕುಟುಂಬಗಳು ಮತ್ತು ವಿದೇಶದಲ್ಲಿರುವ ಭಾರತೀಯರು ತಮ್ಮ ತೆರಿಗೆ ಹೊರೆಯನ್ನು ಕಡಿಮೆ ಮಾಡಿಕೊಳ್ಳಲು ಹಲವು ವಿನಾಯಿತಿಗಳಿವೆ. ಆದಾಗ್ಯೂ, ಈ ವಿನಾಯಿತಿಗಳನ್ನು ಸರಿಯಾಗಿ ಪಡೆಯಲು, ಪೂರಕ ದಾಖಲೆಗಳನ್ನು ಒದಗಿಸುವುದು ಬಹಳ ಮುಖ್ಯ. ಆದಾಗ್ಯೂ, ಚಾರ್ಟರ್ಡ್ ಅಕೌಂಟೆಂಟ್ ಆಶಿಶ್ ನೀರಜ್ ಅವರು ಆದಾಯ ತೆರಿಗೆ ಕಾಯ್ದೆಯಡಿಯಲ್ಲಿ 10 ರೀತಿಯ ಆದಾಯವು ತೆರಿಗೆ ಮುಕ್ತವಾಗಿದೆ ಎಂದು ಹೇಳುತ್ತಾರೆ. ಇವುಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈಗ ತಿಳಿದುಕೊಳ್ಳೋಣ.. 1. ಕೃಷಿ ಆದಾಯ – ವಿಭಾಗ 10(1) ಕೃಷಿ ಭೂಮಿಯಿಂದ ಪಡೆದ ಆದಾಯ, ಆ ಭೂಮಿಯಲ್ಲಿರುವ ವಸತಿ ಮನೆ ಅಥವಾ ಅಂಗಡಿ ಕೊಠಡಿಯಂತಹ ಕಟ್ಟಡಗಳಿಂದ ಬಾಡಿಗೆ ರೂಪದಲ್ಲಿ ಬರುವ ಆದಾಯವು ತೆರಿಗೆಯಿಂದ ವಿನಾಯಿತಿಗೆ ಸಂಪೂರ್ಣವಾಗಿ ಅರ್ಹವಾಗಿದೆ. 2. ಕುಟುಂಬದಿಂದ ಪಡೆದ ಆದಾಯ – ವಿಭಾಗ 10(2) ಹಿಂದೂ ಅವಿಭಜಿತ ಕುಟುಂಬದ (HUF) ಸದಸ್ಯರು ಆ ಮೊತ್ತ ಅಥವಾ ಯಾವುದೇ ಆಸ್ತಿಯಾಗಿದ್ದರೂ, ಆದಾಯದಿಂದ ಪಡೆದ ಪಾಲು ತೆರಿಗೆಯಿಂದ ವಿನಾಯಿತಿಗೆ ಅರ್ಹವಾಗಿದೆ. 3. ರಜೆ ಪ್ರಯಾಣ ರಿಯಾಯಿತಿ…

Read More

ಬಾಗಲಕೋಟೆ: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಅಂಗನವಾಡಿ ಕೇಂದ್ರವೊಂದರಲ್ಲಿ ಸಹಾಯಕಿಯ ಪುತ್ರನೇ ಐದು ವರ್ಷದ ಪುಟ್ಟ ಮಗುವಿನ ಮೇಲೆ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಕೆರೂರು ಪೊಲೀಸ್ ಠಾಣಾ ವ್ಯಾಪ್ತಿಯ ಅಂಗನವಾಡಿ ಕೇಂದ್ರವೊಂದರಲ್ಲಿ ಸಹಾಯಕಿಯ ಪುತ್ರನೇ ಐದು ವರ್ಷದ ಪುಟ್ಟ ಮಗುವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ. ಬಾದಾಮಿಯ ಮಕ್ಕಳ ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಿಡಿಪಿಒ ದಸ್ತಗೀರಸಾಬ್‌ ಮುಲ್ಲಾ ಕೊಟ್ಟ ದೂರಿನನ್ವಯ ಆರೋಪಿಯನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ. ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ಶಿಲ್ಪಾ ಕುಲಕರ್ಣಿ ಆಗಮಿಸಿ ಪೊಲೀಸ್ ಠಾಣೆ ಆವರಣದಲ್ಲಿ ಮಗುವನ್ನು ಕೂಡಿಸಿಕೊಂಡು ಸಾರ್ವಜನಿಕರ ಎದುರು ಆಪ್ತ ಸಮಾಲೋಚನೆ ನಡೆಸಿದ್ದು, ಜನರ ಆಕ್ರೋಶಕ್ಕೆ ಕಾರಣವಾಗಿದೆ.

Read More

ಬೆಳಗಾವಿ : ಅತ್ಯಂತ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಭೀಕರ ಕಾರು ಅಪಘಾತದಲ್ಲಿ ಮೃತಪಟ್ಟಿದ್ದು, ಇಂದು ರಾಮದುರ್ಗದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕ, ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಮಂಗಳವಾರ  ಅಪಘಾತದಲ್ಲಿ ಮೃತಪಟ್ಟಿದ್ದು, ಇಂದು ಬೆಳಗಾವಿ ಜಿಲ್ಲೆ ರಾಮದುರ್ಗದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಅಪಘಾತದಲ್ಲಿ ಮಹಾಂತೇಶ್ ಬೀಳಗಿ ಸೇರಿದಂತೆ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಮಹಾಂತೇಶ್ ಸೋದರರಾದ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಮೃತರು. ಸಂಬಂಧಿಕರ ವಿವಾಹ ಕಾರ್ಯಕ್ರಮಕ್ಕೆಂದು ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಜೇವರ್ಗಿ ಬೈಪಾಸ್ ಬಳಿ ಗೌನಳ್ಳಿ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ತಮ್ಮ ಅಧಿಕಾರಾವಧಿಯಲ್ಲಿ ಒಂದೇ ಒಂದು ರೂಪಾಯಿಗೂ ಲಂಚಕ್ಕೆ ಬೇಡಿಕೆ ಇಡದಂತ ಪ್ರಾಮಾಣಿಕ ವ್ಯಕ್ತಿಯಾಗಿದ್ದರು ಎಂಬುದು ಅವರನ್ನು ಬಲ್ಲವರ ಮಾತು. ಇದಕ್ಕೊಂದು ಕಾರಣವಿದೆ. ಜೊತೆ ಜೊತೆಗೆ ಅವರು ಐಎಎಸ್ ಅಧಿಕಾರಿಯಾದ ಹಿಂದೆ ಮನಕಲಕುವ ಕತೆ ಇದೆ. ಅದೇನು ಅಂತ ಮುಂದೆ ಓದಿ. ಇದು ಮಹಾಂತೇಶ್ ಬೀಳಗಿ ಐಎಎಸ್…

Read More