Author: kannadanewsnow57

ಹಾಸನ : ಸರ್ಕಾರ ಮಾಡಿರುವ ಉತ್ತಮ ಕೆಲಸಗಳು ಜನರಿಗೆ ಕಾಣಬೇಕು ಈ ನಿಟ್ಟಿನಲ್ಲಿ ಡಿ.6 ರಂದು ಹಾಸನದಲ್ಲಿ ಆಯೋಜನೆ ಮಾಡಿರುವ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಗೊಳಿಸಲು ಅಚ್ಚುಕಟ್ಟಾಗಿ ಕರ್ತವ್ಯ ನಿರ್ವಹಣೆ ಮಾಡುವುದರ ಮೂಲಕ ಸಹಕರಿಸುವಂತೆ ಕಂದಾಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣಬೈರೇಗೌಡ ಅವರು ಅಧಿಕಾರಿಗಳಿಗೆ ತಿಳಿಸಿದ್ದಾರೆ. ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ ನಡೆದ ಮುಖ್ಯಮಂತ್ರಿ ಅವರು ಡಿ.6 ರಂದು ಹಾಸನಕ್ಕೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ, ಫಲಾನುಭವಿಗಳಿಗೆ ಸವಲತ್ತು ವಿತರಣೆ ಕಾರ್ಯಕ್ರಮದಲ್ಲಿ ಮಾನ್ಯ ಮುಖ್ಯಮಂತ್ರಿಯವರು ಹಾಗೂ ಉಪ ಮುಖ್ಯಮಂತ್ರಿಯವರು ಭಾಗವಹಿಸಲಿರುವರು ಇದೊಂದು ಸರ್ಕಾರಿ ಕಾರ್ಯಕ್ರಮ ಜಿಲ್ಲಾಡಳಿತದೊಂದಿಗೆ ವಿವಿಧ ಇಲಾಖೆಗಳು ಒಳಗೊಂಡAತೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.  ಕಳೆದ ಒಂದು ವರ್ಷದಲ್ಲಿ ಆದಂತಹ ಕೆಲಸಗಳನ್ನು ಜನರಿಗೆ ಸಮರ್ಪಣೆ ಮಾಡಲಾಗುತ್ತಿದೆ ಎಂದ ಅವರು ಕಂದಾಯ ಇಲಾಖೆ ಗಣನೀಯವಾಗಿ ಪ್ರಗತಿ ಸಾಧಿಸಿದೆ ಎಂದ ಅವರು 14 ವರ್ಷದಲ್ಲಿ 2444 ರೈರಿಗೆ ಪೋಡಿ ದುರಸ್ತು ಮಾಡಿಕೊಂಡಲಾಗಿದೆ…

Read More

ಬೆಂಗಳೂರು: ರಾಜ್ಯದಲ್ಲಿ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಮೂಲಕ ವಿವಾಹ ನೋಂದಣಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸೋ ಪ್ರಕ್ರಿಯೆ ಜಾಲ್ತಿಯಲ್ಲಿದೆ. ಇದು ಕೆಲವರಿಗೆ ತಿಳಿದಿದ್ದರೇ, ಮತ್ತೆ ಕೆಲವರಿಗೆ ತಿಳಿದಿಲ್ಲ. ನೀವು ಮ್ಯಾರೇಜ್ ಸರ್ಟಿಫಿಕೇಟ್ ಗೆ ಅರ್ಜಿ ಸಲ್ಲಿಸಬೇಕು ಅನ್ನೋ ಯೋಚನೆಯಲ್ಲಿದ್ದರೇ, ಜಸ್ಟ್ ಮನೆಯಲ್ಲೇ ಕುಳಿತು, ಆನ್ ಲೈನ್ ಮೂಲಕ ನಾವು ಹೇಳುವಂತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ. ರಾಜ್ಯ ಸರ್ಕಾರದಿಂದ ವಿವಾಹ ನೋಂದಣಿಯ ಆನ್ ಲೈನ್ ಪ್ರಕ್ರಿಯೆಯನ್ನು ಜಾರಿಗೊಳಿಸಲಾಗಿದೆ. ಆಪ್ ಲೈನ್ ಜೊತೆಗೆ, ನೀವು ರಾಜ್ಯದ ಯಾವುದೇ ಮೂಲೆಯಲ್ಲಿದ್ದರೂ, ಎಲ್ಲೇ ಮದುವೆಯಾಗಿದ್ದರೂ ಮ್ಯಾರೇಜ್ ಸರ್ಟಿಫಿಕೇಟ್ ಪಡೆಯಲು ಆನ್ ಲೈನ್ ಮೂಲಕ ಅರ್ಜಿಯನ್ನು ಕುಳಿತಲ್ಲಿಯೇ ಸಲ್ಲಿಸಬಹುದಾಗಿದೆ. ಆದರೇ ಇದಕ್ಕಾಗಿ ಕೆಲ ದಾಖಲೆಗಳನ್ನು ಸಲ್ಲಿಸುವುದು ಕಡ್ಡಾಯವಾಗಿದೆ. ಮ್ಯಾರೇಜ್ ಸರ್ಟಿಫಿಕೇಟ್ ಪಡೆಯಲು ಈ ದಾಖಲೆಗಳು ಕಡ್ಡಾಯ ಮದುವೆ ಲಗ್ನ ಪತ್ರಿಕೆ ದಂಪತಿಗಳ ಒಂದು ಪೋಟೋ ಪತಿಯ ಆಧಾರ್ ಕಾರ್ಡ್ ಪತ್ನಿಯ ಆಧಾರ್ ಕಾರ್ಡ್ ಮೂವರು ಸಾಕ್ಷಿದಾರರ ಆಧಾರ್ ಕಾರ್ಡ್ ಈ ಮೇಲ್ಕಂಡ ದಾಖಲೆಗಳನ್ನು ಪಿಡಿಎಫ್ ಮಾಡಿ,…

Read More

ಬೆಂಗಳೂರು : ದಿತ್ವ ಚಂಡಮಾರುತದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ 2-3 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಿತ್ವಾ ಚಂಡಮಾರುತದ ಪ್ರಭಾವದಿಂದ ತಮಿಳುನಾಡು, ಆಂಧ್ರಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ತಮಿಳುನಾಡು ಹಾಗೂ ಆಂಧ್ರದಗಡಿಗೆ ಹೊಂದಿಕೊಂಡಿರುವ ರಾಜ್ಯದ ಭೂ ಪ್ರದೇಶದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ ಎರಡ್ಮೂರು ದಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ರಾಮನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಹಾಸನ, ಕೊಡಗು, ಮಂಡ್ಯ, ತುಮಕೂರು, ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Read More

ಬೆಂಗಳೂರು : ರಾಜ್ಯದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು ಮುಂದಿನ ಶೈಕ್ಷಣಿಕ ಸಾಲಿನಿಂದ ಪಠ್ಯ ಪುಸ್ತಕಗಳ ಜೊತೆಗೆ ನೋಟ್ ಬುಕ್ ಗಳನ್ನು ಉಚಿತವಾಗಿ ವಿತರಿಸಲು ಸಿದ್ಧತೆ ನಡೆಸಿದೆ. ಹೌದು, ರಾಜ್ಯದ ಎಲ್ಲಾ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಮುಂಬರುವ ಶೈಕ್ಷಣಿಕ ಸಾಲಿನಿಂದ ಪಠ್ಯ-ಪುಸ್ತಕಗಳ ಜೊತೆಗೆ ನೋಟ್‌ ಬುಕ್‌ ಗಳನ್ನು ಉಚಿತವಾಗಿ ವಿತರಿಸುವುದಾಗಿ ಮುಖ್ಯಮಂತ್ರಿ ಅವರು ಘೋಷಿಸಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ 46 ಸಾವಿರ ಸರ್ಕಾರಿ ಶಾಲೆಗಳಲ್ಲಿ 1ರಿಂದ 10ನೇ ತರಗತಿವರೆಗಿನ ಸುಮಾರು 38 ಲಕ್ಷ ಮಕ್ಕಳಿಗೆ ನೋಟ್ ಬುಕ್ ವಿತರಿಸಲು ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದೆ. ಈ ಯೋಜನೆಗೆ ಅಂದಾಜು 24 ಕೋಟಿ ರು. ಅನುದಾನ ಬೇಕಾಗುತ್ತದೆ. ಕರ್ನಾಟಕ ಪಠ್ಯಪುಸ್ತಕ ಸೊಸೈಟಿ (ಕೆಟಿಬಿಎಸ್) ಮೂಲಕವೂ ನೋಟ್‌ಬುಕ್‌ಗಳನ್ನು ಪೂರೈಸಲಾಗುವುದು. ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಶೂ, ಸಾಕ್ಸ್, ರಾಗಿ ಮಾಲ್ಟ್ ಮಿಶ್ರಿತ ಹಾಲು, ಮಧ್ಯಾಹ್ನದ ಬಿಸಿಯೂಟ ನೀಡಲಾಗುತ್ತಿದೆ. ಆದರೂ, ಮಕ್ಕಳ ದಾಖಲಾತಿ ಮಾತ್ರ ವರ್ಷದಿಂದ ವರ್ಷಕ್ಕೆ…

Read More

ಬೆಂಗಳೂರು: ರೈತರಿಂದ ಪ್ರತಿ ಕ್ವಿಂಟಲ್‌ಗೆ 2400 ರೂ. ದರದಲ್ಲಿ ಮೆಕ್ಕೆಜೋಳ ಖರೀದಿಸಲು ರಾಜ್ಯ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಮೆಕ್ಕೆ ಜೋಳ ಸೇರಿ ಧಾನ್ಯ ಆಧಾರಿತ ಎಥೆನಾಲ್ ಉತ್ಪಾದಿಸುವ ಡಿಸ್ಟಿಲರಿಗಳುನಾಫೆಡ್ ಬದಲಿಗೆ ಕರ್ನಾಟಕ ರಾಜ್ಯ ಸಹಕಾರಮಾರಾಟ ಮಹಾಮಂಡಳ (ಕೆಎಸ್‌ಸಿಎಂಎಫ್) ಮೂಲಕ ರೈತರಿಂದ ಪ್ರತಿ ಕ್ವಿಂಟಲ್‌ಗೆ 2400 ರೂ. ದರದಲ್ಲಿ ಮೆಕ್ಕೆಜೋಳ ಖರೀದಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮಾರುಕಟ್ಟೆಯಲ್ಲಿ 1600 ರೂ.ಗಳಿಂದ 1900 ರೂ. ಪ್ರತಿ ಕ್ವಿಂಟಲ್‌ಗೆ ಧಾರಣೆ ಇದೆ. ಹೀಗಾಗಿ 2639ಗೆ ಖರೀದಿಸಿದರೆ ಸಮಸ್ಯೆಯಾಗುತ್ತದೆಂದು ಡಿಸ್ಟಿಲರಿ ಮಾಲೀಕರು ಸರ್ಕಾರಕ್ಕೆ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ 2400 ರೂ.ಗೆ ಖರೀದಿಸಲು ಅವಕಾಶ ಕಲ್ಪಿಸಿದೆ.

Read More

ನವದೆಹಲಿ: ಸಂಸತ್ತಿನ ಚಳಿಗಾಲ ಅಧಿವೇಶನ ಸೋಮವಾರದಿಂದ ಶುರುವಾಗಲಿದೆ. ಸರ್ಕಾರ 10 ಮಸೂದೆ ಅಂಗೀಕಾರಕ್ಕೆ ಸಜ್ಜಾಗಿದೆ. ಆದರೆ, ವಿಪಕ್ಷಗಳು ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ, ಮತಕಳವು ವಿಚಾರ ಪ್ರಸ್ತಾಪಿಸಿ ಗದ್ದಲ ನಡೆಸುವ ಸಾಧ್ಯತೆ ಇದೆ. ಪ್ರಮುಖ ವಿಷಯಗಳ ಚರ್ಚೆ ಬಿಹಾರ ವಿಧಾನಸಭಾ ಚುನಾವಣೆಗಳ ನಂತರ ಈ ಅಧಿವೇಶನ ನಡೆಯುತ್ತಿದ್ದು, ಇದು ವಿಶೇಷವಾಗಿ ಮಹತ್ವದ್ದಾಗಿದೆ. ಈ ಅವಧಿಯಲ್ಲಿ ವಿರೋಧ ಪಕ್ಷವು ಹಲವಾರು ವಿವಾದಾತ್ಮಕ ವಿಷಯಗಳನ್ನು ಎತ್ತುವ ನಿರೀಕ್ಷೆಯಿದೆ. ಇವುಗಳಲ್ಲಿ ರಾಷ್ಟ್ರವ್ಯಾಪಿ ವಿಶೇಷ ತೀವ್ರ ಪರಿಷ್ಕರಣೆ (SIR) ಮತ್ತು ಹರಿಯಾಣ ಮತ್ತು ಮಹಾರಾಷ್ಟ್ರದಲ್ಲಿ ಮತ ವಂಚನೆಯ ಆರೋಪಗಳು ಸೇರಿವೆ, ಇದು ಬಿಸಿ ಚರ್ಚೆಗಳಿಗೆ ಕಾರಣವಾಗಬಹುದು. ಅಧ್ಯಕ್ಷ ಮುರ್ಮು ಅವರು ಅಧಿವೇಶನದ ವೇಳಾಪಟ್ಟಿಗಾಗಿ ಸರ್ಕಾರದ ಪ್ರಸ್ತಾವನೆಯನ್ನು ಅನುಮೋದಿಸಿದ್ದಾರೆ ಎಂದು ಕಿರಣ್ ರಿಜಿಜು X ನಲ್ಲಿ ಹಂಚಿಕೊಂಡರು. ರಚನಾತ್ಮಕ ಮತ್ತು ಅರ್ಥಪೂರ್ಣವಾದ ಅಧಿವೇಶನಕ್ಕಾಗಿ ಅವರು ತಮ್ಮ ನಿರೀಕ್ಷೆಯನ್ನು ಒತ್ತಿ ಹೇಳಿದರು. ರಾಜಕೀಯ ವಾತಾವರಣ ಮತ್ತು ಇತ್ತೀಚಿನ ಘಟನೆಗಳನ್ನು ಗಮನಿಸಿದರೆ ಮುಂಬರುವ ಚರ್ಚೆಗಳು ತೀವ್ರವಾಗಿರಬಹುದು. ನಿರೀಕ್ಷಿತ ಚರ್ಚೆಗಳು ಈ ಅಧಿವೇಶನದ…

Read More

ಬೆಂಗಳೂರು : ರಾಜ್ಯದಲ್ಲಿ MNRE ಮತ್ತು KREDL ಸಹಯೋಗದೊಂದಿಗೆ ರೈತರ ಜಮೀನಿನ ಕೊಳವೆ/ತೆರದ ಬಾವಿಗಳಿಗೆ ಸೋಲಾರ್ ಪಂಪ್-ಸೆಟ್ ಗಳನ್ನು ಅಳವಡಿಸಲು ರೈತರಿಂದ ಅರ್ಜಿಗಳನ್ನು ಆನ್‌ಲೈನ್ ಮುಖಾಂತರ, www.souramitra.com ವೆಬ್‌ಸೈಟ್ ನಲ್ಲಿ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ. ಸದರಿ ಪೋರ್ಟಲ್ ಮುಖಾಂತರ ಸೋಲಾರ್ ಪಂಪ್‌-ಸೆಟ್‌ಗಳ www.souramitra.com ನಲ್ಲಿ ಅರ್ಜಿ ನೋಂದಾಯಿಸಿಕೊಂಡು ವೆಂಡರ್ /ಏಜೆನ್ಸಿ ಯನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ರೈತಬಾಂಧವರಿಗೆ ತಿಳಿಯಪಡಿಸುವುದೇನೆಂದರೆ, PM-KUSUM Component-B ಯೋಜನೆಗೆ ಸಂಬಂಧಿಸಿದಂತೆ, www.kredi.karnataka.gov.in ವೆಬ್‌ಸೈಟ್‌ನಲ್ಲಿ ಹೊರಡಿಸಿದ ಪ್ರಕಟಣೆ/ಮಾಹಿತಿಗಳನ್ನು ಮಾತ್ರ ಪರಿಗಣಿಸಲು ಕೋರಲಾಗಿದೆ. ಸೌರ ಪಂಪ್ ಸೆಟ್ ನೋಂದಣಿ ಹಾಗೂ ಪಾವತಿಗೆ ಸಂಬಂಧಿಸಿದಂತೆ www.souramitra.com ನಲ್ಲಿ ಹಾಗೂ KREDL ನ ಸಹಾಯವಾಣಿ ಸಂಖ್ಯೆ: 080-22202100 & 8095132100 ಮುಖಾಂತರ ಮಾತ್ರವೇ ಮಾಹಿತಿ ಪಡೆದುಕೊಳ್ಳಲು ಕೋರಲಾಗಿದೆ ಹಾಗೂ ಸದರಿ ನೋಂದಣಿ ಪ್ರಕ್ರಿಯೆಯಲ್ಲಿ ಸ್ವೀಕೃತವಾಗುವ ಒಟಿಪಿಗಳನ್ನು ಯಾರೊಂದಿಗೂ ಹಂಚಿಕೊಳ್ಳದೇ ತಾವೇ ನೋಂದಾಯಿಸಿಕೊಳ್ಳಲು ಕೋರಲಾಗಿದೆ.

Read More

ಬೆಂಗಳೂರು : ರಾಜ್ಯದ ರೈತರಿಗೆ ಕಂದಾಯ ಇಲಾಖೆ ಸಿಹಿಸುದ್ದಿ ನೀಡಿದ್ದು, ಇನ್ಮುಂದೆ ಪಹಣಿ, ಆಕಾರಬಂದ್, ಪೋಡಿ ನಕ್ಷೆ, ಮ್ಯುಟೇಶನ್ ಹೀಗೆ ನಾಲ್ಕು ದಾಖಲೆಯನ್ನೂ ಒಂದೇ ಹಾಳೆಯಲ್ಲಿ ಒದಗಿಸುವ ವ್ಯವಸ್ಥೆ ಜಾರಿಗೊಳಿಸಲು ಸಿದ್ಧತೆ ಮಾಡಿಕೊಂಡಿದೆ. ಹೌದು, ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನ ಪಡೆದುಕೊಳ್ಳಲು ಮತ್ತು ಭೂ ವ್ಯವಹಾರಗಳಿಗೆ ಪೋಡಿ ನಕ್ಷೆ, ಆಕಾರಬಂದ್, ಮ್ಯುಟೇಶನ್ ದಾಖಲೆ ಅಗತ್ಯ.ಹೀಗಾಗಿ ಕಂದಾಯ ಇಲಾಖೆಯು ಪಹಣಿ ಪುಟದ ಹಿಂಬದಿಯಲ್ಲಿಯೇ ಆಕಾರಬಂದ್, ಪೋಡಿ ನಕ್ಷೆ, ಮ್ಯುಟೇಶನ್ ದಾಖಲೆಯನ್ನು ಮುದ್ರಿಸಿಕೊಡುವ ವ್ಯವಸ್ಥೆ ರೂಪಿಸಲಾಗಿದೆ. ಒಂದು ಪಹಣಿಗೆ ಈಗ 25 ಶುಲ್ಕ ವಿಧಿಸಲಾಗುತ್ತಿದೆ. ಯಾವುದೇ ಹೆಚ್ಚಿನ ಶುಲ್ಕವಿಲ್ಲದೆ ನಾಲ್ಕೂ ದಾಖಲೆಪತ್ರಗಳನ್ನು ನೀಡಲಾಗುತ್ತದೆ. ಇದರಿಂದ ರೈತರು ಮಧ್ಯವರ್ತಿಗಳ ಹಾವಳಿಯಿಂದ ದಾಖಲೆ ಪತ್ರಗಳನ್ನು ಪಡೆದುಕೊಳ್ಳುವಲ್ಲಿ ಆಗುತ್ತಿರುವ ವಿಳಂಬದಿಂದ ಪಾರಾಗಲಿದ್ದಾರೆ, ಡಿಸೆಂಬರ್ನಿಂದಲೇ ಈ ವ್ಯವಸ್ಥೆಯನ್ನು ಜಾರಿಗೆ ಬರುವ ಸಾಧ್ಯತೆ ಇದೆ.

Read More

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಅನುದಾನಿತ ಮತ್ತು ಅನುದಾನರಹಿತ ಶಿಕ್ಷಣ ಸಂಸ್ಥೆಗಳಲ್ಲಿ ಬೀದಿ ನಾಯಿಗಳ ಉಪಟಳವನ್ನು ತಡೆಗಟ್ಟಲು ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮಾನ್ಯ ಸರ್ವೋಚ್ಛ ನ್ಯಾಯಾಲಯವು ಸ್ವಯಂ ಪ್ರೇರಿತ ರಿಟ್ ಅರ್ಜಿ ಸಂಖ್ಯೆ: 5/2025ರ ದಿನಾಂಕ: 07.11.2025ರ ತೀರ್ಪಿನಲ್ಲಿ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಬೀದಿ ನಾಯಿಗಳ ಉಪಟಳವನ್ನು ತಡೆಗಟ್ಟಲು ನಿರ್ದೇಶನ ನೀಡಿರುತ್ತದೆ. ಈ ಸಂಬಂಧ ಉಲ್ಲೇಖಿತ (2) ರ ಸುತ್ತೋಲೆಯಲ್ಲಿ ರಾಜ್ಯದ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ಬೀದಿ ನಾಯಿಗಳ ಉಪಟಳವನ್ನು ತಟೆಗಟ್ಟುವ ನಿಟ್ಟಿನಲ್ಲಿ ಅನುಸರಿಬೇಕಾದ ಕ್ರಮಗಳ ಬಗ್ಗೆ ಸೂಚನೆಗಳನ್ನು ನೀಡಲಾಗಿದೆ. ಉಲ್ಲೇಖಿತ ಆದೇಶಗಳಂತೆ, ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಅನುದಾನಿತ ಮತ್ತು ಅನುದಾನರಹಿತ ಶಿಕ್ಷಣ ಸಂಸ್ಥೆಗಳಲ್ಲಿ ಬೀದಿ ನಾಯಿಗಳ ಉಪಟಳವನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ಕೆಳಕಂಡಂತೆ ಕ್ರಮವಹಿಸಲು ತಿಳಿಸಿದೆ. 1. ಎಲ್ಲಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿನ ನಾಯಿಗಳ ಸಂಖ್ಯೆಯನ್ನು ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ತಕ್ಷಣ…

Read More

ನವದೆಹಲಿ :ಡಿಸೆಂಬರ್ ತಿಂಗಳು ಆರಂಭವಾಗುತ್ತಿದ್ದಂತೆ ಆಧಾರ್ ಕಾರ್ಡ್‌ಗಳಿಂದ ಎಲ್‌ಪಿಜಿಯವರೆಗೆ ದೇಶದಲ್ಲಿ ಪ್ರಮುಖ ಬದಲಾವಣೆಗಳು ಸಂಭವಿಸಲಿವೆ. ಡಿಸೆಂಬರ್ 1, 2025 ರಿಂದ ಜಾರಿಗೆ ಬರುವ ಈ ಬದಲಾವಣೆಗಳು ನಿಮ್ಮ ಜೇಬಿನ ಮೇಲೆ ಪರಿಣಾಮ ಬೀರಬಹುದು. ಡಿಸೆಂಬರ್ 1 ರಿಂದ ಬದಲಾಗಲಿವೆ ಈ 8 ಪ್ರಮುಖ ನಿಯಮಗಳು 1 ಆಧಾರ್ ಕಾರ್ಡ್‌ ಗೆ ಪ್ರಮುಖ ಬದಲಾವಣೆಗಳು ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಆಧಾರ್ ಕಾರ್ಡ್‌ಗೆ ಪ್ರಮುಖ ಬದಲಾವಣೆಗಳನ್ನು ಪರಿಗಣಿಸುತ್ತಿದೆ. ಇದು ಹೊಂದಿರುವವರ ಫೋಟೋ ಮತ್ತು ಕ್ಯೂಆರ್ ಕೋಡ್ ಅನ್ನು ಮಾತ್ರ ಪ್ರದರ್ಶಿಸುತ್ತದೆ. ನಿಮ್ಮ ಹೆಸರು, ವಿಳಾಸ ಮತ್ತು 12-ಅಂಕಿಯ ಆಧಾರ್ ಸಂಖ್ಯೆಯಂತಹ ವೈಯಕ್ತಿಕ ವಿವರಗಳನ್ನು ಆಧಾರ್ ಕಾರ್ಡ್‌ನಿಂದ ತೆಗೆದುಹಾಕಲಾಗುತ್ತದೆ. ಯುಐಡಿಎಐ ಸಿಇಒ ಭುವನೇಶ್ ಕುಮಾರ್ ಅವರ ಪ್ರಕಾರ, ಡೇಟಾ ದುರುಪಯೋಗವನ್ನು ತಡೆಗಟ್ಟಲು ಮತ್ತು ಹೋಟೆಲ್‌ಗಳು, ಈವೆಂಟ್ ಆಯೋಜಕರು ಮತ್ತು ಇತರ ಸಂಸ್ಥೆಗಳು ಬಳಸುವ ಅಕ್ರಮ ಆಫ್‌ಲೈನ್ ಪರಿಶೀಲನಾ ವಿಧಾನಗಳನ್ನು ತಡೆಯಲು ಡಿಸೆಂಬರ್ 2025 ರಲ್ಲಿ ಹೊಸ ನಿಯಮಗಳನ್ನು ಪರಿಚಯಿಸಲು ಭಾರತೀಯ ವಿಶಿಷ್ಟ ಗುರುತಿನ…

Read More