Author: kannadanewsnow57

ಭಟ್ಕಳ : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಬಸ್ ನಿಲ್ದಾಣದಲ್ಲಿ ಕುಸಿದು ಬಿದ್ದು ಬಸ್ ಚಾಲಕರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.  ಚಾಲಕ ಹೃದಯಾಘಾತದಿಂದ ಕುಸಿದುಬಿದ್ದು ಸಾವನ್ನಪ್ಪಿದ ದಾರುಣ ಘಟನೆ ಭಟ್ಕಳದಲ್ಲಿ ನಡೆದಿದೆ. ಮಣ್ಣುಳಿ ಗ್ರಾಮದ ಚಂದ್ರಶೇಖರ ಸುಬ್ಬಣ್ಣ ಪೂಜಾರಿ (64) ಮೃತ ಚಾಲಕ. ಸೋಮವಾರ ಬೆಳಿಗ್ಗೆ ಸುಮಾರು 5 ಗಂಟೆಗೆ ಮನೆಯಿಂದ ಹೊರಟ ಚಂದ್ರಶೇಖರ, ಪೆಟ್ರೋಲ್ ಬಂಕ್ ಹತ್ತಿರ ನಿಲ್ಲಿಸಿದ್ದ ಬಸ್ಸನ್ನು ಚಲಾಯಿಸಿಕೊಂಡು ಬಂದು ಭಟ್ಕಳ ಬಸ್ ನಿಲ್ದಾಣದ ಎದುರಿನ ಖಾಸಗಿ ಬಸ್ ನಿಲುಗಡೆ ಸ್ಥಳದಲ್ಲಿ ಬಸ್ಸನ್ನು ನಿಲ್ಲಿಸಿದರು. ಪ್ರಯಾಣಿಕರಿಗೆ ಕಾಯುತ್ತಾ ನಿಂತಿದ್ದ ವೇಳೆ ಏಕಾಏಕಿ ಹೃದಯಾಘಾತದಿಂದ ಕುಸಿದು ಬಿದ್ದು ತಕ್ಷಣವೇ ಮೃತಪಟ್ಟಿದ್ದಾರೆ.

Read More

ನವದೆಹಲಿ : ಮಕ್ಕಳೊಂದಿಗೆ ಸ್ವಲ್ಪ ಅಸಭ್ಯವಾಗಿ ವರ್ತಿಸಿದರೂ ಅದನ್ನು ಅತ್ಯಾಚಾರವೆಂದು ಪರಿಗಣಿಸಬೇಕು ಎಂದು ಬಾಂಬೆ ಹೈಕೋರ್ಟ್‌ನ ನಾಗ್ಪುರ ಪೀಠವು ಮಹತ್ವದ ತೀರ್ಪು ನೀಡಿದೆ. 38 ವರ್ಷದ ಆರೋಪಿಯ ಅರ್ಜಿಯನ್ನು ತಿರಸ್ಕರಿಸಿದ ನ್ಯಾಯಾಲಯವು, 5 ಮತ್ತು 6 ವರ್ಷದ ಬಾಲಕಿಯರೊಂದಿಗೆ ಅವನು ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಹೇಳಿದೆ.ಹಾಗಾಗಿ, ಇದು ಪೋಕ್ಸೊ ಪ್ರಕರಣವಾಗಿದೆ. ಆರೋಪಿಯ 10 ವರ್ಷಗಳ ಜೈಲು ಶಿಕ್ಷೆಯನ್ನು ನ್ಯಾಯಾಲಯ ಎತ್ತಿಹಿಡಿದಿದೆ. ಆರೋಪಿಯು ವೃತ್ತಿಯಲ್ಲಿ ಚಾಲಕನಾಗಿದ್ದು, ವಾರ್ಧಾ ಜಿಲ್ಲೆಯ ಹಿಂಗನ್‌ಘಾಟ್ ನಿವಾಸಿಯಾಗಿದ್ದಾನೆ. ತೀರ್ಪು ನೀಡುವಾಗ, ನ್ಯಾಯಮೂರ್ತಿ ನಿವೇದಿತಾ ಮೆಹ್ತಾ ಅವರು ಬಲಿಪಶುವನ್ನು ಲೈಂಗಿಕ ಉದ್ದೇಶದಿಂದ ಸ್ಪರ್ಶಿಸುವುದು ಅಥವಾ ಅವಳೊಂದಿಗೆ ಲೈಂಗಿಕ ಸಂಬಂಧ ಹೊಂದಲು ಪ್ರಯತ್ನಿಸುವುದು ಅತ್ಯಾಚಾರ ಎಂದು ಹೇಳಿದ್ದಾರೆ. ವರದಿಗಳ ಪ್ರಕಾರ, ಆರೋಪಿಯು ಹುಡುಗಿಯರನ್ನು ಪೇರಲ ಹಣ್ಣುಗಳಿಂದ ಆಮಿಷವೊಡ್ಡಿದನು ಮತ್ತು ನಂತರ ಅವರಿಗೆ ಅಶ್ಲೀಲ ವೀಡಿಯೊಗಳನ್ನು ತೋರಿಸಿದನು. ಅವನು ಅವರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲು ಪ್ರಯತ್ನಿಸಿದನು. ಪೋಕ್ಸೊ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (2) (i) ಮತ್ತು…

Read More

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಈ ವಾರಾಂತ್ಯದವರೆಗೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಹಾಗೂ ಹಳೇ ಮೈಸೂರು ಭಾಗದ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಇಂದು, ನಾಳೆ ಭಾರೀ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳಲ್ಲೂ ಗುರುವಾರದಿಂದ (ಅ.23) ಉತ್ತಮ ಮಳೆಯಾಗಲಿದೆ. ಕೆಲವೆಡೆ ರಭಸದ ಮಳೆಯ ಜತೆಗೆ ವೇಗದ ಗಾಳಿಯೂ ಬೀಸಲಿದೆ. ಅ.28ರವರೆಗೂ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ 1 ವಾರ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಹವಾಮಾನ ಇಲಾಖೇ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಹೀಗಾಗಿ ರಾಜ್ಯದಲ್ಲಿ ಅಕ್ಟೋಬರ್ 25 ರವರಗೆ ಮಳೆ ಸುರಿಯುವ ಸಾಧ್ಯತೆಯಿದೆ. ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಸಂಜೆ ನಂತರ ಗುಡುಗು ಸಹಿತ ಮಳೆ ಸಾಧ್ಯತೆ ಇದ್ದು ಗಂಟೆಗೆ 30-40ಕಿ.ಮೀ ವೇಗದಲ್ಲಿ ಗಾಳಿ ಸಹಿತ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇನ್ನು ದಕ್ಷಿಣ, ಉತ್ತದ…

Read More

ವಿಜಯಪುರ: ಖ್ಯಾತ ಹಿಂದುಸ್ತಾನಿ ಗಾಯಕ ಸಂಜೀವ ಜಹಾಗೀರದಾರ (65) ಮಹಾರಾಷ್ಟ್ರದ ಪುಣೆಯಲ್ಲಿ ನಿಧನರಾಗಿದ್ದಾರೆ. ಅವಿಭಜಿತ ವಿಜಯಪುರ ಜಿಲ್ಲೆ ಇಳಕಲ್ಲ ಸಮೀಪದ ಬಲಕುಂದಿ ಗ್ರಾಮದವರು. ಸಂಗೀತ ಪರಂಪರೆಯಲ್ಲಿ ಬೆಳೆದಿದ್ದ ಅವರಿಗೆ ವಿಜಯಪುರದ ಖ್ಯಾತ ಸಂಗೀತ ಶಿಕ್ಷಕ ದಿ. ಕೇಶವರಾವ ಥಿಟೆ ಅವರಲ್ಲಿ ಪ್ರಾಥಮಿಕ ಹಂತದಲ್ಲಿ ಸಂಗೀತ ಕಲಿಕೆ ನಡೆಯಿತು. ಇಂಜಿನಿಯರಿಂಗ್ ಪದವಿ ಶಿಕ್ಷಣ ಪೂರೈಸಿದ ಬಳಿಕ ಪಂಡಿತ ಭೀಮಸೇನ ಜೋಶಿ ಅವರ ಮನೆಯಲ್ಲಿ 12 ವರ್ಷ ಇದ್ದು, ಗುರುಶಿಷ್ಯ ಪರಂಪರೆ ಮುಂದುವರೆಸಿದರು. ದೇಶದ ವಿವಿಧೆಡೆ ಕಾರ್ಯಕ್ರಮ ನೀಡಿದ್ದರು.

Read More

ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿಯ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಸಂಸ್ಕೃತ, ವೇದ ಅಧ್ಯಯನ ಪಾಠಶಾಲೆಯಲ್ಲಿ ಓರ್ವ ವಿದ್ಯಾರ್ಥಿಯನ್ನು, ಅದೇ ಶಾಲೆಯ ಶಿಕ್ಷಕ ವೀರೇಶ್ ಹಿರೇಮಠ ಎಂಬವವರು ಥಳಿಸಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಕುರಿತಂತೆ, ಸಂಬಂಧಿಸಿದ ತಹಸಿಲ್ದಾರ್ ಹಾಗೂ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನದ ಕಾರ್ಯನಿವಾಹಕ ಅಧಿಕಾರಿ ಅವರಿಂದ ಮಾಹಿತಿ ಪಡೆದು, ಆರೋಪಿತ ಶಿಕ್ಷಕನನ್ನು ಅಮಾನತುಗೊಳಿಸಿದ್ದು, ಆತನ ವಿರುದ್ಧ ನಾಯಕನಹಟ್ಟಿಯ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿ, ಬಂಧನ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ತಿಳಿಸಿದ್ದಾರೆ. ಶಾಲೆಗಳಲ್ಲಿ ಶೈಕ್ಷಣಿಕ ಬೋಧನೆಯ ಜೊತೆಗೆ, ಶಾಲೆಯ ಅವಧಿಯ ಬಳಿಕ, ಸಂಸ್ಕøತ, ವೇದ ಅಧ್ಯಯನ ಕೈಗೊಳ್ಳಲು ಬಯಸುವ ಮಕ್ಕಳಿಗೆ, ಅವರು ತಮ್ಮ ಶಾಲೆಯ ಪಾಠಗಳ ಜೊತೆಗೆ ಸಂಸ್ಕøತ, ವೇದ ಅಧ್ಯಯನ ಕೈಗೊಳ್ಳಲು ಊಟ, ವಸತಿಯೊಂದಿಗೆ ನಾಯಕನಹಟ್ಟಿಯ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನದ ಅಧೀನದ ಕೊಠಡಿಗಳಲ್ಲಿ ಅವಕಾಶ ಮಾಡಿಕೊಡಲಾಗಿರುತ್ತದೆ. ಈ ರೀತಿ ಸಂಸ್ಕøತ ವೇದ ಅಧ್ಯಯನಕ್ಕೆಂದು ಸೇರಿಕೊಂಡಿದ್ದ ವಿದ್ಯಾರ್ಥಿಗಳ ಪೈಕಿ, ಓರ್ವ…

Read More

ಮಧ್ಯರಾತ್ರಿಯಲ್ಲಿ ಕಾಶ್ಮೀರದಿಂದ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದವರೆಗೆ ಪ್ರಬಲವಾದ ಭೂಕಂಪವೊಂದು ಭೂಮಿಯನ್ನು ನಡುಗಿಸಿತು. ರಿಕ್ಟರ್ ಮಾಪಕದಲ್ಲಿ 6.1 ತೀವ್ರತೆಯ ಭೂಕಂಪವು ಇಡೀ ಪ್ರದೇಶದಾದ್ಯಂತ ಆಘಾತ ತರಂಗಗಳನ್ನು ಉಂಟುಮಾಡಿತು. ಕಂಪನಗಳು ಎಷ್ಟು ಪ್ರಬಲವಾಗಿತ್ತೆಂದರೆ ಜನರು ತಮ್ಮ ಮನೆಗಳಿಂದ ಹೊರಗೆ ಓಡಿಬಂದರು, ಅನೇಕ ಪ್ರದೇಶಗಳಲ್ಲಿ ಭಯಭೀತರಾಗಿದ್ದರು. ಈ ಭೂಕಂಪದ ಕೇಂದ್ರಬಿಂದು ಅಫ್ಘಾನಿಸ್ತಾನದಲ್ಲಿತ್ತು ಮತ್ತು ಜಮ್ಮು ಮತ್ತು ಕಾಶ್ಮೀರದ ಶ್ರೀನಗರ, ಜಮ್ಮು ಮತ್ತು ಬಾರಾಮುಲ್ಲಾದಂತಹ ಪ್ರದೇಶಗಳಲ್ಲಿ ಕಂಪನಗಳು ಕಂಡುಬಂದವು. ಇಸ್ಲಾಮಾಬಾದ್, ಲಾಹೋರ್ ಮತ್ತು ಪೇಶಾವರ್ ಸೇರಿದಂತೆ ಹಲವಾರು ಪಾಕಿಸ್ತಾನಿ ನಗರಗಳಲ್ಲಿಯೂ ಕಂಪನಗಳು ಕಂಡುಬಂದವು. ಅಫ್ಘಾನಿಸ್ತಾನದ ಕಾಬೂಲ್ ಮತ್ತು ಜಲಾಲಾಬಾದ್ನಂತಹ ಪ್ರದೇಶಗಳಲ್ಲಿ ಪರಿಸ್ಥಿತಿ ಇನ್ನಷ್ಟು ತೀವ್ರವಾಗಿತ್ತು, ಅಲ್ಲಿ ಜನರು ಕಟ್ಟಡಗಳನ್ನು ತೊರೆದು ಬೀದಿಗಳಲ್ಲಿ ಆಶ್ರಯ ಪಡೆದರು. ಆರಂಭಿಕ ವರದಿಗಳ ಪ್ರಕಾರ, ಯಾವುದೇ ಸಾವುನೋವುಗಳ ವರದಿಯಾಗಿಲ್ಲ, ಆದರೆ ಕಟ್ಟಡಗಳಲ್ಲಿ ಬಿರುಕುಗಳು ಮತ್ತು ಅನೇಕ ಪ್ರದೇಶಗಳಲ್ಲಿ ವಿದ್ಯುತ್ ಕಡಿತಗೊಂಡಿರುವುದು ವರದಿಯಾಗಿದೆ. ‘6.1 ತೀವ್ರತೆಯ ಭೂಕಂಪವು ತುಂಬಾ ಪ್ರಬಲವಾಗಿದೆ, ಆದರೆ ಅದರ ಹೆಚ್ಚಿನ ಆಳದಿಂದಾಗಿ, ಮೇಲ್ಮೈ ಮೇಲೆ ಅದರ ಪ್ರಭಾವ ಸೀಮಿತವಾಗಿತ್ತು’ ಎಂದು…

Read More

ಬೆಂಗಳೂರು: ನಗರದಲ್ಲಿ ದೀಪಾವಳಿ ವೇಳೆ ಪಟಾಕಿ ಸಿಡಿತದಿಂದ ಅವಘಡ ಸಂಭವಿಸಿದೆ. ಪಟಾಕಿ ಸಿಡಿದು ಮಕ್ಕಳು ಸೇರಿದಂತೆ ಒಟ್ಟು 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ದೀಪಾವಳಿ ಆಚರಣೆ ವೇಳೆ ಪಟಾಕಿ ಸಿಡಿದು ಬೆಂಗಳೂರಿನಲ್ಲೇ 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಒಟ್ಟಾರೆ ಕಳೆದ ಎರಡು ದಿನಗಳಲ್ಲಿ ನೂರಕ್ಕೂ ಅಧಿಕ ಮಂದಿ ನಗರದ ವಿವಿಧ ಕಣ್ಣಿನ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ. ಮಂಗಳವಾರ ಮಿಂಟೊ ಆಸ್ಪತ್ರೆಗೆ 13 ಮಂದಿ ದಾಖಲಾಗಿದ್ದು, ಈ ಪೈಕಿ 6 ಮಕ್ಕಳಿದ್ದಾರೆ. ಇಬ್ಬರು ಒಳರೋಗಿಗಳಾಗಿ ದಾಖಲಾಗಿದ್ದಾರೆ. ನಾರಾಯಣ ನೇತ್ರಾಲಯದಲ್ಲಿ 27 ಮಕ್ಕಳು ಸೇರಿ 46 ಮಂದಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಶಂಕರ ಆಸ್ಪತ್ರೆಯಲ್ಲಿ 13, ಅಗರ್‌ವಾಲ್ ಆಸ್ಪತ್ರೆಗೆ ಮೂವರು ದಾಖಲಾಗಿದ್ದಾರೆ ಎಂದು ವರದಿಯಾಗಿದೆ.

Read More

ಬೆಂಗಳೂರು : ಗ್ರಾಮಪಂಚಾಯಿತಿಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಎಲ್ಲ ನೌಕರರಿಗೂ ಪ್ರತಿ ತಿಂಗಳು 5ನೇ ತಾರೀಕಿನೊಳಗೆ ವೇತನ ನೀಡುವಂತೆ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ. ಗ್ರಾಮ ಪಂಚಾಯಿತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳ ವೇತನವನ್ನು ನಿಯಮಿತವಾಗಿ ಪಾವತಿಸುವುದು ಆದ್ಯತೆಯ ವಿಷಯವಾಗಿರುತ್ತದೆ. ಪ್ರಸ್ತುತ ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿ ಸಿಬ್ಬಂದಿ ವರ್ಗದ ಮಾದರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ದಿನಾಂಕ:01.03.2018ರಿಂದ ಜಾರಿಗೆ ಬರುವಂತೆ ಸರ್ಕಾರದ ನಿಧಿಯಿಂದಲೇ ವೇತನ ಪಾವತಿಸಲು ಕ್ರಮವಹಿಸಲಾಗುತ್ತಿದ್ದು, ಅಗತ್ಯವಿರುವ ಅನುದಾನವನ್ನು ಸಂಬಂಧಿಸಿದ ಗ್ರಾಮ ಪಂಚಾಯಿತಿಗಳ ಇ.ಎಫ್.ಎಂ.ಎಸ್ ಖಾತೆಗಳಿಗೆ ಸರ್ಕಾರದಿಂದಲೇ ಬಿಡುಗಡೆ ಗೊಳಿಸಲಾಗುತ್ತಿದೆ. ಆದಾಗ್ಯೂ ಗ್ರಾಮ ಪಂಚಾಯಿತಿ ನೌಕರರಿಗೆ ವೇತನ ಪಾವತಿಸಲು ವಿಳಂಬ ಮಾಡುತ್ತಿರುವ ಮತ್ತು ವೇತನ ಪಾವತಿ ಮಾಡದೇ ಇರುವ ಕುರಿತಾಗಿ ಸರ್ಕಾರದಲ್ಲಿ ಹಲವಾರು ದೂರುಗಳು ಸ್ವೀಕೃತಗೊಳ್ಳುತ್ತಿವೆ. ಗ್ರಾಮ ಪಂಚಾಯಿತಿಗಳಲ್ಲಿ ಅನುದಾನ ಲಭ್ಯವಿದ್ದರೂ ಸಹ ನಿಯಮಿತವಾಗಿ ಮತ್ತು ಸಮಯಕ್ಕೆ ಸರಿಯಾಗಿ ಸಿಬ್ಬಂದಿಗಳ ವೇತನ ಪಾವತಿಸದೇ ಇರುವುದು ಸರ್ಕಾರದ ಗಮನಕ್ಕೆ ಬಂದಿದ್ದು, ಈ ವಿಷಯವನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ. ಆದ್ದರಿಂದ ಪ್ರಸ್ತುತ ಅವಧಿಯವರೆಗೆ ವೇತನ ಪಾವತಿಗೆ ಬಾಕಿಯಿರುವ…

Read More

ನವದೆಹಲಿ : ಉಸಿರಾಟವೇ ಒಂದು ರೋಗವಾಗಿ ಮಾರ್ಪಟ್ಟಿರುವ ಬಿಕ್ಕಟ್ಟಿನತ್ತ ಜಗತ್ತು ನಿಧಾನವಾಗಿ ಸಾಗುತ್ತಿದೆ. ಇತ್ತೀಚಿನ ಸ್ಟೇಟ್ ಆಫ್ ಗ್ಲೋಬಲ್ ಏರ್ 2024 ವರದಿಯು ಈಗ ಜಾಗತಿಕವಾಗಿ ಪ್ರತಿ ಎಂಟನೇ ಸಾವಿಗೆ ವಾಯು ಮಾಲಿನ್ಯವೇ ಕಾರಣ ಎಂದು ಬಹಿರಂಗಪಡಿಸುತ್ತದೆ.  2021 ರಲ್ಲಿ, ವಿಷಕಾರಿ ಗಾಳಿಯೇ 8.1 ಮಿಲಿಯನ್ ಜನರನ್ನು ಬಲಿ ತೆಗೆದುಕೊಂಡಿತು. ಇದರರ್ಥ ಗಾಳಿಯು ತಂಬಾಕಿಗಿಂತ ಹೆಚ್ಚಿನ ಸಾವುಗಳಿಗೆ ಕಾರಣವಾಗಿದೆ. ಅದೇ ವರ್ಷದಲ್ಲಿ, ತಂಬಾಕು 7.5 ರಿಂದ 7.6 ಮಿಲಿಯನ್ ಸಾವುಗಳಿಗೆ ಕಾರಣವಾಗಿದೆ. ಇದರರ್ಥ ನಾವು ಪ್ರತಿ ಕ್ಷಣ ಉಸಿರಾಡುವ ಗಾಳಿಯು ಈಗ ಸಾವಿನ ಅತ್ಯಂತ ಅಪಾಯಕಾರಿ ಮೂಲವಾಗಿದೆ. ವಿಶ್ವಾದ್ಯಂತದ ಎಲ್ಲಾ ಸಾವುಗಳಲ್ಲಿ 12% ಕಳಪೆ ಗಾಳಿಯ ಗುಣಮಟ್ಟದಿಂದಲೇ ಉಂಟಾಗುತ್ತವೆ ಎಂದು ವರದಿ ಹೇಳುತ್ತದೆ. ಹೋಲಿಸಿದರೆ, ಅಧಿಕ ರಕ್ತದೊತ್ತಡವು ಪ್ರತಿ ವರ್ಷ ಸುಮಾರು 10 ಮಿಲಿಯನ್ ಜನರನ್ನು ಕೊಲ್ಲುತ್ತದೆ, ಅಂದರೆ ವಾಯು ಮಾಲಿನ್ಯವು ಈಗ ಆ ಮಟ್ಟವನ್ನು ತಲುಪಿದೆ. ರಾಜಧಾನಿ ದೆಹಲಿಯಂತಹ ನಗರಗಳಲ್ಲಿ ಪರಿಸ್ಥಿತಿ ಇನ್ನೂ ಭೀಕರವಾಗಿದೆ. ವಾಯು ಗುಣಮಟ್ಟ ಸೂಚ್ಯಂಕ (AQI)…

Read More

ಬೆಂಗಳೂರು : ಒಂದು ವಾರದಲ್ಲಿ ರಸ್ತೆ ಗುಂಡಿಗಳನ್ನೆಲ್ಲಾ ಮುಚ್ಚಿ ಒಂದು ಲೇಯರ್ ಟಾರ್ ಹಾಕಬೇಕು ಎಂದು ಗ್ರೇಟರ್ ಬೆಂಗಳೂರು ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಗಾಂಧಿನಗರ ವಿಧಾನಸಭಾ ಕ್ಷೇತ್ರದ ಚಿಕ್ಕಪೇಟೆಯ ಆಧುನೀಕರಣ ಮತ್ತು ಗಾಂಧಿನಗರ ಕ್ಷೇತ್ರದ ರಸ್ತೆಗಳ ವೈಟ್ ಟಾಪಿಂಗ್ ಕಾಮಗಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು. ದಿನೇಶ್ ಗುಂಡೂರಾವ್ ಅವರು ಕ್ಷೇತ್ರದ ಅಭಿವೃದ್ಧಿ ಬಗ್ಗೆ ಮಾತ್ರ ಶ್ರಮಿಸುವ ಜನಮುಖಿ ಶಾಸಕರು. ಇವರಿಗೆ ಉತ್ತಮ ಅವಕಾಶಗಳಿವೆ. ಮುಂದಿನ ಚುನಾವಣೆಯಲ್ಲಿ ಹೆಚ್ಚಿನ ಬಹುಮತದಿಂದ ಗೆಲ್ಲಿಸಲೇಬೇಕು. ಕೆಂಪೇಗೌಡರ ಕಾಲದಲ್ಲಿ ಪೇಟೆ ಬೀದಿಯಾಗಿದ್ದ ಇಲ್ಲಿನ‌ ಪೇಟೆಗಳು ಈಗಲೂ ಆ ಕಾಲದ ಸ್ವಭಾವವನ್ನೇ ಹೊಂದಿವೆ. ನಾವೊಮ್ಮೆ ಇಲ್ಲಿನ ರಸ್ತೆಗಳ ಅಗಲೀಕರಣದ ಬಗ್ಗೆ ಚಿಂತಿಸಿದ್ದೆವು. ಆದರೆ ದಿನೇಶ್ ಗುಂಡೂರಾವ್ ಅವರು ಒಪ್ಪಲಿಲ್ಲ. ನಮ್ಮ ಜನಗಳಿಗೆ ಸಮಸ್ಯೆ ಆಗುತ್ತದೆ ಸರ್ ಎಂದು ಸ್ಪಷ್ಟವಾಗಿ ನಿರಾಕರಿಸಿ, ರಸ್ತೆ ಅಗಲೀಕರಣ ಮಾಡದೆ, ರಸ್ತೆಗಳ ಆಧುನೀಕರಣ ಮತ್ತು ಚಿಕ್ಕಪೇಟೆಯ ಅಭಿವೃದ್ಧಿಗೆ ಯೋಜನೆ ರೂಪಿಸಿ…

Read More