Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು: ನಗರದಲ್ಲಿ ಹೊಸ ವರ್ಷಾಚರಣೆಯ ಹಿನ್ನಲೆಯಲ್ಲಿ ಡಿಸೆಂಬರ್.31ರಂದು ಹಲವು ರಸ್ತೆಗಳಲ್ಲಿ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ಜೊತೆಗೆ ಪಾರ್ಕಿಂಕ್ ಮಾಡುವುದಕ್ಕೂ ನಿರ್ಬಂಧ ವಿಧಿಸಲಾಗಿದೆ. ಈ ಕುರಿತಂತೆ ಬೆಂಗಳೂರು ನಗರ ಸಂಚಾರ ಪೊಲೀಸರು ಮಾಹಿತಿ ಹಂಚಿಕೊಂಡಿದ್ದು, ಡಿಸೆಂಬರ್.31ರ ರಾತ್ರಿ 8 ರಿಂದ ಮಧ್ಯರಾತ್ರಿ 2ರವರೆಗೆ ಈ ಕೆಳಕಂಡ ರಸ್ತೆಗಳಲ್ಲಿ ವಾಹನ ಸಂಚಾರ ಮತ್ತು ಪಾರ್ಕಿಂಗ್ ನಿಷೇಧಿಸಲಾಗುತ್ತಿದೆ ಅಂತ ತಿಳಿಸಿದೆ. ಎಂಜಿ ರಸ್ತೆಯ ಅನಿಲ್ ಕುಂಬ್ಳೆ ವೃತ್ತದಿಂದ ಮೆಯೋ ಹಾಲ್ ಬಳಿಯ ರೆಸಿಡೆನ್ಸಿ ರಸ್ತೆಯ ಜಂಕ್ಷನ್ ವರೆಗೆ ವಾಹನ ಸಂಚಾರ, ಪಾರ್ಕಿಂಗ್ ನಿಷೇಧಿಸಲಾಗಿದೆ. ಬ್ರಿಗೇಡ್ ರಸ್ತೆಯ ಕಾವೇರಿ ಎಂಪೋರಿಯಂ ಜಂಕ್ಷನ್ ನಿಂದ ಅಪೇರಾ ಜಂಕ್ಷನ್ ವರೆಗೆ ನಿರ್ಬಂಧಿಸಲಾಗಿದೆ. ಚರ್ಚ್ ಸ್ಟ್ರೀಟ್ ನ ಬ್ರಿಗೇಡ್ ರಸ್ತೆ ಜಂಕ್ಷನ್ ನಿಂದ ಹಳೇ ಮದ್ರಾಸ್ ಬ್ಯಾಂಕ್ ರಸ್ತೆ ಅಂದರೆ ಎಸ್ಐಬಿಐ ವೃತ್ತದವರೆಗೆ ನಿಷೇಧವಿದೆ. ರೆಸ್ಟ್ ಹೌಸ್ ರಸ್ತೆಯ ಮ್ಯೂಸಿಯಂ ರಸ್ತೆ ಜಂಕ್ಷನ್ ನಿಂದ ಬ್ರಿಗೇಡ್ ರಸ್ತೆ ಜಂಕ್ಷನ್ ವರೆಗೂ ವಾಹನಗಳ ಸಂಚಾರ, ಪಾರ್ಕಿಂಕ್ ನಿಷೇಧಿಸಲಾಗಿದೆ. ರೆಸಿಡೆನ್ಸಿ ಕ್ರಾಸ್ ರಸ್ತೆಯಿಂದ ರೆಸಿಡೆನ್ಸಿ…
ಬೆಂಗಳೂರು : 2024-25ನೇ ಸಾಲಿಗಾಗಿ ಶಿಕ್ಷಕರ ಮಕ್ಕಳಿಗೆ ಪ್ರತಿಭಾವಂತ ವಿದ್ಯಾರ್ಥಿ ವೇತನ ಮಂಜೂರು ಮಾಡಲು ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 2024-25 ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ವತಿಯಿಂದ ಹೆಚ್ಚು ಪಡೆದ ಶಿಕ್ಷಕರುಗಳ/ ಎಸ್ ಎಸ್ ಎಲ್ ಸಿಯಿಂದ ಸ್ನಾತಕೋತ್ತರದವರೆಗೆ ಉಪನ್ಯಾಸಕರು/ಪ್ರಾಂಶುಪಾಲರು/ ನಿವೃತ್ತ ಶಿಕ್ಷಕರು/ ನಿವೃತ್ತ ಉಪನ್ಯಾಸಕರು/ಪ್ರಾಂಶುಪಾಲರ ಮಕ್ಕಳಿಗೆ ಪ್ರತಿಭಾವಂತ ವಿದ್ಯಾರ್ಥಿ ವೇತನವನ್ನು ಮಂಜೂರು ಮಾಡುವ ಸಲುವಾಗಿ ONLINE ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪ್ರತಿಭಾವಂತ ವಿದ್ಯಾರ್ಥಿ ವೇತನಕ್ಕಾಗಿ ಬರುವ ಭೌತಿಕ ಅರ್ಜಿಗಳನ್ನು ಈ ಕಛೇರಿಯಲ್ಲಿ ಪರಿಗಣಿಸಲಾಗುವುದಿಲ್ಲ. ನಿಧಿಗಳ ಕಛೇರಿಯಿಂದ ಈಗಾಗಲೆ ಆನ್ಲೈನ್ನಲ್ಲಿ ಅಜೀವ ಸದಸ್ಯತ್ವದ ಹೊಸ ನೋಂದಣಿ ಸಂಖ್ಯೆ ಪಡೆದ ಶಿಕ್ಷಕರು/ ಉಪನ್ಯಾಸಕರು/ಪ್ರಾಂಶುಪಾಲರು/ ನಿವೃತ್ತಿ ಹೊಂದಿರುವ ಶಿಕ್ಷಕರು/ಉಪನ್ಯಾಸಕರು/ಪ್ರಾಂಶುಪಾಲರು ಮಾತ್ರ ತಮ್ಮ ಮಗುವಿನ ವಿವರಗಳನ್ನು ಸಂಬಂಧಿಸಿದ ONLINE PORTAL ನಲ್ಲಿ ಗಣಕೀಕರಿಸುವಂತೆ ಈ ಮೂಲಕ ಸೂಚಿಸಿದೆ. 2023-24ನೇ ಶೈಕ್ಷಣಿಕ ಸಾಲಿನಲ್ಲಿ ನಡೆದ ಎಸ್.ಎಸ್.ಎಲ್.ಸಿ. ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿರುತ್ತದೆ. (CBSE / ICSE ವಿದ್ಯಾರ್ಥಿಗಳಿಗೆ ಅವಕಾಶವಿರುವುದಿಲ್ಲ) 2023-24ನೇ ಶೈಕ್ಷಣಿಕ…
ಬೆಂಗಳೂರು: ಹೊಸ ವರ್ಷಾಚರಣೆಯ ಹಿನ್ನಲೆಯಲ್ಲಿ ಡಿಸೆಂಬರ್.31ರ ಇಂದು ರಾತ್ರಿ 11ರಿಂದ ಬೆಂಗಳೂರು ನಗರದ ಎಲ್ಲಾ ಮೇಲ್ಸೇತುವೆಗಳಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಈ ಕುರಿತಂತೆ ಬೆಂಗಳೂರು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಎಂಎನ್ ಅನುಚೇತ್ ಅವರು ಹೊಸ ವರ್ಷಾಚರಣೆ ನಿಮಿತ್ತ ಬೆಂಗಳಊರು ನಗರದ ಎಲ್ಲಾ ಮೇಲ್ಸೇತುವೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಿರುವುದಾಗಿ ತಿಳಿಸಿದ್ದಾರೆ. ಹೊಸ ವರ್ಷಾಚರಣೆ ವೇಳೆ ಸಾರ್ವಜನಿಕರು ಒಟ್ಟಾಗಿ ಸೇರುವುದರಿಂದ ಅಪಘಾತಗಳು ಸೇರಿ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಡಿಸೆಂಬರ್.31ರಂದು ರಾತ್ರಿ 11ರಿಂದ ಜನವರಿ 1ರ ಬೆಳಿಗ್ಗೆ 6ರವರೆಗೆ ಬೆಂಗಳೂರು ನಗರದ ಎಲ್ಲಾ ಮೇಲ್ಸೇತುವೆಗಳಲ್ಲಿ ಎಲ್ಲಾ ರೀತಿಯ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ ಎಂದಿದ್ದಾರೆ. https://twitter.com/KarnatakaVarthe/status/1873714126117347463?ref_src=twsrc%5Etfw%7Ctwcamp%5Etweetembed%7Ctwterm%5E1873714126117347463%7Ctwgr%5E3c32693ae5a6734fa04f7d301731b151bb6bc629%7Ctwcon%5Es1_&ref_url=https%3A%2F%2Fkannadanewsnow.com%2Fkannada%2Fvehicular-movement-will-be-banned-on-all-flyovers-in-bengaluru-from-11-pm-on-december-31%2F
ಧಾರವಾಡ : 2024 ರ ಲೋಕಸಭಾ ಚುನಾವಣೆ ಮತ್ತು ಜೊತೆಯಲ್ಲಿ ನೆಡೆದ 4 ರಾಜ್ಯಗಳ ವಿಧಾನಸಭಾ ಚುನಾವಣೆಗಳ ಸಂಕ್ಷಿಪ್ತ ದತ್ತಾಂಶವನ್ನು ಆಯೋಗ ಬಿಡುಗಡೆ ಮಾಡಿದ್ದು, ವಿಶ್ವಾದ್ಯಂತ ಶಿಕ್ಷಣ ತಜ್ಞರು, ಸಂಶೋಧಕರು, ಚುನಾವಣಾ ವೀಕ್ಷಕರು ಸೇರಿದಂತೆ ಮತದಾರರಿಗೆ ಇದು ಅನುಕೂಲವಾಗಬಲ್ಲದು ಎಂದು ಆಯೋಗ ತಿಳಿಸಿದೆ. ಭಾರತದ ಚುನಾವಣಾ ಆಯೋಗವು 2024 ರ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ 42 ಅಂಕಿ ಅಂಶಗಳ ವರದಿಗಳು ಮತ್ತು ಆಂಧ್ರಪ್ರದೇಶ, ಅರುಣಾಚಲ ಪ್ರದೇಶ, ಒಡಿಶಾ ಮತ್ತು ಸಿಕ್ಕಿಂ ಸೇರಿ ನಾಲ್ಕು ರಾಜ್ಯಗಳಲ್ಲಿ ಏಕಕಾಲದಲ್ಲಿ ನಡೆದ ವಿಧಾನಸಭಾ ಚುನಾವಣೆಗಳಿಗೆ ಸಂಬಂಧಿಸಿದಂತೆ 14 ಅಂಕಿಅಂಶಗಳ ವರದಿಗಳ ಸಮಗ್ರ ದತ್ತಾಂಶಗಳನ್ನು ಬಿಡುಗಡೆ ಮಾಡಿದೆ. ಆಯೋಗದ ಈ ಸ್ವಯಂ ಪ್ರೇರಿತ ಕಾರ್ಯವು ಭಾರತದ ಚುನಾವಣಾ ವ್ಯವಸ್ಥೆಯ ಆಧಾರವಾಗಿರುವ ಸಾರ್ವಜನಿಕ ನಂಬಿಕೆಯನ್ನು ಹೆಚ್ಚಿಸುವ ಉದ್ದೇಶವನ್ನು ಹೊಂದಿದ್ದು, ವ್ಯಾಪಕವಾದ, ಸವಿವರವಾದ ದತ್ತಾಂಶ ಬಿಡುಗಡೆಯು, ಶೈಕ್ಷಣಿಕ, ಸಂಶೋಧನೆ ಮತ್ತು ಸಾರ್ವಜನಿಕರು ಸೇರಿದಂತೆ ಎಲ್ಲಾ ಪಾಲುದಾರರಿಗೆ ಚುನಾವಣೆಗೆ ಸಂಬಂಧಿಸಿದ ದತ್ತಾಂಶದ ಪ್ರತಿ ವಿವರಗಳನ್ನು ಬಹಿರಂಗಪಡಿಸುವಿಕೆಯ ಮೂಲಕ ಹೆಚ್ಚಿನ ಪಾರದರ್ಶಕತೆ ಕಾಪಾಡಿಕೊಳ್ಳುವುದು…
ಬೆಂಗಳೂರು: ಕರ್ನಾಟಕದ ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಗೆ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆಯಿಂದ ಪ್ರಕಟಿಸಲಾಗಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಮಾಹಿತಿ ನೀಡಿದ್ದು, 2024-25ನೇ ಸಾಲಿನಲ್ಲಿ ನಡೆಯುವ ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಜನವರಿ 17, 2025ರಿಂದ ಪರೀಕ್ಷೆ ಆರಂಭಗೊಂಡು, ಜ.29ರವರೆಗೆ ನಡೆಯಲಿದೆ ಎಂದಿದೆ. ಹೀಗಿದೆ ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೇಳಾಪಟ್ಟಿ ದಿನಾಂಕ 17-01-2025ರಂದು ಕನ್ನಡ ದಿನಾಂಕ 20-01-2025ರಂದು ಇತಿಹಾಸ, ಭೌತ ಶಾಸ್ತ್ರ, ಸಂಖ್ಯಾಶಾಸ್ತ್ರ ದಿನಾಂಕ 21-01-2025ರಂದು ವಾಣಿಜ್ಯ ಶಾಸ್ತ್ರ, ಗಣಿತಶಾಸ್ತ್ರ ದಿನಾಂಕ 22-01-2025ರಂದು ಆಂಗ್ಲ ಭಾಷೆ ದಿನಾಂಕ 23-01-2025ರಂದು ರಾಜ್ಯ ಶಾಸ್ತ್ರ, ಎಲೆಕ್ಟ್ರಾನಿಕ್ಸ್, ಗಣಕ ವಿಜ್ಞಾನ ದಿನಾಂಕ 24-01-2025ರಂದು ಲೆಕ್ಕ ಶಾಸ್ತ್ರ, ಐಚ್ಛಿಕ ಕನ್ನಡ ದಿನಾಂಕ 27-01-2025ರಂದು ಅರ್ಥ ಶಾಸ್ತ್ರ, ರಾಸಾಯನ ಶಾಸ್ತ್ರ ದಿನಾಂಕ 28-01-2025ರಂದು ಸಮಾಜ ಶಾಸ್ತ್ರ, ಜೀವ ಶಾಸ್ತ್ರ, ಬೇಸಿಕ್ ಮ್ಯಾತ್ಸ್, ಭೂಗೋಳ ಶಾಸ್ತ್ರ ದಿನಾಂಕ 29-01-2025ರಂದು ಹಿಂದಿ, ತಮಿಳು, ತೆಲುಗು, ಉರ್ದು, ಸಂಸ್ಕೃತ,…
ನವದೆಹಲಿ : ಕೇಂದ್ರ ಸರ್ಕಾರವು ಪ್ರತಿ ವರ್ಷವೂ ರಜೆಯ ಕ್ಯಾಲೆಂಡರ್ ಅನ್ನು ಸರ್ಕಾರ ಬಿಡುಗಡೆ ಮಾಡುತ್ತದೆ. ಕೇಂದ್ರ ಸರ್ಕಾರವು ಮುಂದಿನ ವರ್ಷ 2025 ರ ಸಾರ್ವಜನಿಕ ರಜಾದಿನಗಳನ್ನು ಘೋಷಿಸಿದೆ. ಎಲ್ಲಾ ಕೇಂದ್ರ ಸರ್ಕಾರದ ಇಲಾಖೆಗಳಿಗೂ ಒಂದೇ ಕ್ಯಾಲೆಂಡರ್ ಅನ್ವಯಿಸುತ್ತದೆ. ಗೆಜೆಟೆಡ್ ರಜಾದಿನಗಳು ಮೂಲಭೂತವಾಗಿ ಸಾರ್ವಜನಿಕ ರಜಾದಿನಗಳಾಗಿವೆ. ಆದಾಗ್ಯೂ, ನಿರ್ಬಂಧಿತ ರಜೆ ನಿಯಮಗಳೊಂದಿಗೆ ಬರುತ್ತದೆ. ಸಂಸ್ಥೆ ಮತ್ತು ರಾಜ್ಯದಿಂದ ಅವು ಬದಲಾಗುತ್ತವೆ ಎಂಬುದನ್ನು ಸಹ ಗಮನಿಸಿ. ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿ ಸಚಿವಾಲಯವು 17 ಗೆಜೆಟೆಡ್ ಮತ್ತು 34 ಐಚ್ಛಿಕ ರಜಾದಿನಗಳನ್ನು ಘೋಷಿಸುವ ಸುತ್ತೋಲೆಯನ್ನು ಪ್ರಕಟಿಸಿದೆ. ಈ ರಜಾದಿನಗಳು ದೇಶದ ಎಲ್ಲಾ ಕೇಂದ್ರ ಸರ್ಕಾರಿ ಸ್ವಾಮ್ಯದ ಉದ್ಯಮಗಳ ಉದ್ಯೋಗಿಗಳಿಗೆ ಅನ್ವಯಿಸುತ್ತವೆ. ಈ ಪಟ್ಟಿಯ ಪ್ರಕಾರ.. ಮುಂದಿನ ವರ್ಷ 2025 ರಲ್ಲಿ ಯಾವ ತಿಂಗಳಲ್ಲಿ ಎಷ್ಟು ದಿನ ರಜೆಗಳಿವೆ ಎಂಬುದರ ಸಂಪೂರ್ಣ ಪಟ್ಟಿ ಇಲ್ಲಿದೆ. ಕೇಂದ್ರ ಸರ್ಕಾರದ `ಸಾರ್ವತ್ರಿಕ ರಜೆ’ ದಿನಗಳ ಪಟ್ಟಿ ಇಲ್ಲಿದೆ ☛ ಜನವರಿ 26 (ಭಾನುವಾರ)- ಗಣರಾಜ್ಯೋತ್ಸವ ☛…
ನವದೆಹಲಿ : ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಭರ್ಜರಿ ಸುದ್ದಿಯೊಂದು ಸಿಕ್ಕಿದ್ದು, ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್ಎಸ್ಸಿ) 2025-26ರ ಅಧಿವೇಶನಕ್ಕಾಗಿ ತನ್ನ ಪರೀಕ್ಷಾ ಕ್ಯಾಲೆಂಡರ್ ಅನ್ನು ಬಿಡುಗಡೆ ಮಾಡಿದೆ. 2025 ರಲ್ಲಿ ಪೋಲಿಸ್ ಇಲಾಖೆ ಸೇರಿದಂತೆ SSC CGL, CHSL, MTS, JE ಸೇರಿ ಹಲವು ಹುದ್ದೆಗಳ ನೇಮಕಾತಿ ಮಾಡಲಿದೆ. ಸದ್ಯ ಸ್ಟಾಫ್ ಸೆಲಕ್ಷನ್ ಕಮಿಷನ್ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಸರ್ಕಾರಿ ಉದ್ಯೋಗಗಳಿಗೆ ತಯಾರಿ ನಡೆಸುತ್ತಿರುವ ಯುವಕರು ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ssc.gov.in ನ ಅಧಿಕೃತ ವೆಬ್ಸೈಟ್ಗೆ ಲಾಗ್ ಇನ್ ಮಾಡುವ ಮೂಲಕ SSC ಪರೀಕ್ಷೆಯ ಕ್ಯಾಲೆಂಡರ್ 2025 ಅನ್ನು ಡೌನ್ಲೋಡ್ ಮಾಡಬಹುದು, ವರ್ಷಕ್ಕೆ ವೇಳಾಪಟ್ಟಿಯನ್ನು ಮಾಡಿ ಮತ್ತು ಪರೀಕ್ಷೆಗೆ ತಯಾರಿ ಆರಂಭಿಸಬಹುದು. ಪರೀಕ್ಷೆಗಳು ಯಾವಾಗ ನಡೆಯಲಿದೆ ಎಂದು ತಿಳಿದುಕೊಳ್ಳಿ ಪೊಲೀಸ್ ಇಲಾಖೆಯಲ್ಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಮಾಧ್ಯಮ ವರದಿಗಳ ಪ್ರಕಾರ, ಪೊಲೀಸ್ ಇಲಾಖೆಯಲ್ಲಿ ಕಾನ್ಸ್ಟೇಬಲ್ ನೇಮಕಾತಿಗಾಗಿ ಅಧಿಸೂಚನೆಯನ್ನು 2 ಸೆಪ್ಟೆಂಬರ್ 2025 ರಂದು ಬಿಡುಗಡೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸಲು…
ನವದೆಹಲಿ : ಸರ್ಕಾರಿ ಉದ್ಯೋಗಗಳಲ್ಲಿ ಅನುಕಂಪದ ನೇಮಕಾತಿ ಕುರಿತು ಮಧ್ಯಪ್ರದೇಶ ಹೈಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ದಾಖಲೆಗಳಲ್ಲಿ ಹೆಸರಿಸಲಾದ ವ್ಯಕ್ತಿ ಮಾತ್ರ ಅನುಕಂಪದ ನೇಮಕಾತಿಗೆ ಅಧಿಕಾರಿಯಲ್ಲ ಎಂದು ತಿಳಿಸಿದೆ. ಮಧ್ಯಪ್ರದೇಶ ಹೈಕೋರ್ಟ್ ನ ನ್ಯಾಯಮೂರ್ತಿ ಸುಬೋಧ್ ಅಭ್ಯಂಕರ್ ಅವರ ವಿಭಾಗೀಯ ಪೀಠವು ಸಾರ್ವಜನಿಕ ಆರೋಗ್ಯ ಎಂಜಿನಿಯರಿಂಗ್ ಇಲಾಖೆಯಲ್ಲಿ (ಪಿಎಚ್ಇ) ಅನುಕಂಪದ ನೇಮಕಾತಿಗೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯ ಮೇಲೆ ಈ ನಿರ್ಧಾರವನ್ನು ನೀಡಿದೆ. ಮೃತ ಉದ್ಯೋಗಿಯ ಇತರ ಕುಟುಂಬ ಸದಸ್ಯರು ಸಹಾನುಭೂತಿಯ ನೇಮಕಾತಿಯ ಹಕ್ಕನ್ನು ಹೊಂದಿರಬಹುದು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ, ಅವರ ಹಕ್ಕು ಸಮರ್ಥನೆಯಾಗಿದೆ. ತಂದೆ ದಾಖಲೆಗಳಲ್ಲಿ ಇನ್ನೊಬ್ಬ ವ್ಯಕ್ತಿಯನ್ನು ನಾಮನಿರ್ದೇಶನ ಮಾಡಿದ್ದಾರೆ, ಅರ್ಜಿದಾರರ ಹಕ್ಕು ತಿರಸ್ಕರಿಸಲಾಗಿದೆ. ತನ್ನ ತಂದೆ ಹೀರಾಲಾಲ್ ಕೊಚಕ್ ಪಿಎಚ್ಇ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದು, ಕರೋನಾ ಸೋಂಕಿನಿಂದ ಸಾವನ್ನಪ್ಪಿದ್ದಾನೆ ಎಂದು ಪ್ರವೀಣ್ ಕೊಚಕ್ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅನುಕಂಪದ ನೇಮಕಾತಿಗಾಗಿ ಪ್ರವೀಣ್ ಅರ್ಜಿ ಸಲ್ಲಿಸಿದ್ದರು, ಆದರೆ ಇಲಾಖೆ ದಾಖಲೆಗಳಲ್ಲಿ ಅವರ ತಂದೆ ಹೆಸರಿಲ್ಲ ಎಂದು ಅವರ ಅರ್ಜಿಯನ್ನು ಇಲಾಖೆ…
ಬೆಂಗಳೂರು : 2024-25ನೇ ಸಾಲಿಗೆ ಸಹಕಾರಿಗಳಿಗಾಗಿ ಯಶಸ್ಸಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು ಜಾರಿಗೊಳಿಸಲು ಹಾಗೂ ಹೊಸ ಸದಸ್ಯರನ್ನು ನೋಂದಾಯಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದ್ದು, ಹೊಸ ಸದಸ್ಯರ ನೋಂದಣಿಗೆ ಡಿಸೆಂಬರ್ 31 ರವರೆಗೆ ಅವಕಾಶ ನೀಡಲಾಗಿದೆ. ಆದೇಶದಲ್ಲಿ ಏನಿದೆ.? ಮೇಲೆ ಓದಲಾದ ಕ್ರ.ಸಂ. (1) ರ ಸರ್ಕಾರದ ಆದೇಶದಲ್ಲಿ 2023-24ನೇ ಸಾಲಿಗೆ ಸಹಕಾರಿಗಳಿಗಾಗಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು ಸಹಕಾರ ಇಲಾಖೆಯಿಂದ ಜಾರಿಗೊಳಿಸಲು ಹಾಗೂ ಸದಸ್ಯರನ್ನು ನೋಂದಾಯಿಸಲು ಮಾರ್ಗಸೂಚಿಗಳೊಂದಿಗೆ ಆದೇಶ ಹೊರಡಿಸಲಾಗಿತ್ತು. ಮೇಲೆ ಓದಲಾದ ಕ್ರ.ಸಂ. (2) ರ ಸಹಕಾರ ಸಂಘಗಳ ನಿಬಂಧಕರ ಪ್ರಸ್ತಾವನೆಯಲ್ಲಿ ಯಶಸ್ವಿನಿ ಯೋಜನೆಯು ಸಹಕಾರ ಸಂಘಗಳ ಸದಸ್ಯರ ಅನುಕೂಲಕ್ಕಾಗಿ ಸರ್ಕಾರವು ಜಾರಿಗೊಳಿಸಿರುವ ಒಂದು ಪ್ರತಿಷ್ಠಿತ (Flagship) ವಿಶಿಷ್ಟ ಯೋಜನೆಯಾಗಿದ್ದು, ಇದರಲ್ಲಿ ಯಶಸ್ವಿನಿ ಪ್ರೋಟೋಕಾಲ್ನಂತೆ ನಿಗದಿ ಪಡಿಸಿರುವ ಚಿಕಿತ್ಸೆಗಳ ಪ್ಯಾಕೇಜಿನ ದರದ ಮಿತಿಗೊಳಪಟ್ಟು ಫಲಾನುಭವಿ ಮತ್ತು ಅವರ ಕುಟುಂಬಕ್ಕೆ ವಾರ್ಷಿಕ ಗರಿಷ್ಠ ರೂ.5.00 ಲಕ್ಷ ವೈದ್ಯಕೀಯ ಚಿಕಿತ್ಸಾ ವೆಚ್ಚದ ಮಿತಿಯೊಂದಿಗೆ ನೆಟ್ವರ್ಕ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು…
ನವದೆಹಲಿ : ಮುಸ್ಲಿಂ ಯುವಕರನ್ನು ಭಯೋತ್ಪಾದಕ ಚಟುವಟಿಕೆಗಳಿಗೆ ನಿಧಿ ಸಂಗ್ರಹಿಸಿದ್ದಕ್ಕಾಗಿ ಬಾಂಗ್ಲಾದೇಶದ ಉಗ್ರನಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ನ್ಯಾಯಾಲಯವು ಏಳು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ. ದರೋಡೆ, ಸಂಚು, ನಿಧಿ ಸಂಗ್ರಹ ಮತ್ತು ಮದ್ದುಗುಂಡುಗಳ ಸಂಗ್ರಹಕ್ಕೆ ಸಂಬಂಧಿಸಿದ ಅಪರಾಧಗಳಿಗೆ ಸಂಬಂಧಿಸಿದಂತೆ ಜಹಿದುಲ್ ಇಸ್ಲಾಂ ಅಲಿಯಾಸ್ ಕೌಸರ್ಗೆ 57,000 ರೂಪಾಯಿ ದಂಡ ವಿಧಿಸಲಾಗಿದೆ ಎಂದು ಎನ್ಐಎ ಸೋಮವಾರ ಹೇಳಿಕೆಯಲ್ಲಿ ತಿಳಿಸಿದೆ. ಈ ಶಿಕ್ಷೆಯೊಂದಿಗೆ, ಈ ಪ್ರಕರಣಗಳಲ್ಲಿ ಒಟ್ಟು 11 ಆರೋಪಿಗಳು ತಪ್ಪಿತಸ್ಥರು ಎಂದು ಘೋಷಿಸಲಾಗಿದೆ ಎಂದು ಹೇಳಿಕೆಯಲ್ಲಿ ಸೇರಿಸಲಾಗಿದೆ. ಎನ್ಐಎ ತನಿಖೆಯ ಪ್ರಕಾರ, ಭಾರತದಲ್ಲಿ ಜಮಾತ್-ಉಲ್-ಮುಜಾಹಿದ್ದೀನ್ ಬಾಂಗ್ಲಾದೇಶ (ಜೆಎಂಬಿ) ಅಮೀರ್ ಆಗಿ ಸೇವೆ ಸಲ್ಲಿಸಿದ ಜಹಿದುಲ್, ತಲೆಮರೆಸಿಕೊಂಡಿದ್ದ ಜೆಎಂಬಿ ನಾಯಕ ಸಲಾವುದ್ದೀನ್ ಸಲೇಹಿನ್ ಜೊತೆಗೆ ಬಾಂಗ್ಲಾದೇಶದಲ್ಲಿ ಕಸ್ಟಡಿಯಿಂದ ತಪ್ಪಿಸಿಕೊಂಡು 2014 ರಲ್ಲಿ ಅಕ್ರಮವಾಗಿ ಭಾರತಕ್ಕೆ ದಾಟಿ, ಅಲ್ಲಿ ಸಿಲುಕಿಕೊಂಡಿದ್ದ. ತಲೆಮರೆಸಿಕೊಂಡ ಸಮಯದಲ್ಲಿ, ಜಾಹಿದುಲ್ ಮತ್ತು ಅವನ ಸಹಚರರು ಅಕ್ಟೋಬರ್ 2014 ರ ಬುರ್ದ್ವಾನ್ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿದ್ದರು. ಅಕ್ಟೋಬರ್ 2,…