Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು: ರಾಜ್ಯದ ರೈತರಿಗೆ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು, ರೈತರ ಜಮೀನುಗಳ ಪೌತಿ ಖಾತೆ ಮಾಡುವ ಪ್ರಕ್ರಿಯೆಯನ್ನು ಮತ್ತಷ್ಟು ಸರಳೀಕರಿಸಿದ್ದು, ‘ಇ-ಪೌತಿ’ ತಂತ್ರಾಂಶದ ಮೂಲಕ ಆಂದೋಲನ ರೂಪದಲ್ಲಿ ಜಾರಿಗೆ ತರಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ವಿಧಾನ ಪರಿಷತ್ನಲ್ಲಿ ಪಿ.ಎಚ್ .ಪೂಜಾರ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಕೃಷ್ಣ ಬೈರೇಗೌಡ, ರಾಜ್ಯದಲ್ಲಿ ಹೊಸ ನಿಯಮದಂತೆ ಮರಣ ಹೊಂದಿದ ಖಾತೆದಾರರ ವಾರಸುದಾರರನ್ನು ಪತ್ತೆಹಚ್ಚಲು ಆಧಾರ್, ಇ-ಕೆವೈಸಿ ಮತ್ತು ವಂಶವೃಕ್ಷ ಕಡ್ಡಾಯಗೊಳಿಸಲಾಗಿದೆ ಎಂದರು. ಗ್ರಾಮ ಆಡಳಿತಾಧಿಕಾರಿಗಳು ಸ್ವಯಂಪ್ರೇರಿತರಾಗಿ ರೈತರ ಮನೆ ಬಾಗಿಲಿಗೆ ತೆರಳಿ ದಾಖಲೆಗಳನ್ನು ಸಂಗ್ರಹಿಸಿ, ಮೊಬೈಲ್ ಆ್ಯಪ್ ಮೂಲಕ ಸ್ಥಳದಲ್ಲೇ ಅರ್ಜಿಗಳನ್ನು ವಿಲೇವಾರಿ ಮಾಡುವಂತೆ ಸೂಚಿಸಲಾಗಿದೆ. ಪಹಣಿಗಳಿಗೆ ಆಧಾರ್ ಜೋಡಣೆ ಅಭಿಯಾನದ ಮೂಲಕ ಮೃತ ಮಾಲೀಕರ ಜಮೀನು ಗುರುತಿಸಿ, ಅಂತಹ ಭೂಮಿ ವಾರಸುದಾರರಿಗೆ ಹಕ್ಕು ಬದಲಾವಣೆ ಮಾಡಿಕೊಡಲಾಗುತ್ತಿದೆ ಎಂದು ಮಾಹಿತಿ ನೀಡಿದರು. ಮರಣ ಪ್ರಮಾಣಪತ್ರ ಅಥವಾ ಕೋರ್ಟ್ ಆದೇಶ ಪಡೆಯಲು ಅಡೆತಡೆಗಳಿದ್ದ ಸಂದರ್ಭದಲ್ಲಿ, ವಾರಸುದಾರರ ಅಫಿಡವಿಟ್ ಹಾಗೂ ಗ್ರಾಮ ಆಡಳಿತಾಧಿಕಾರಿ…
ನಿಮ್ಮ ಬ್ಯಾಂಕಿಂಗ್ ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಕಾಯ್ದುಕೊಳ್ಳದಿದ್ದರೆ, ಬ್ಯಾಂಕ್ ನಿರ್ವಹಣೆ ಮಾಡದ ಹಿನ್ನಲೆ ದಂಡ ವಿಧಿಸಬಹುದು. ಈ ನಿಯಮವು ದೇಶದ ಎಲ್ಲಾ ಪ್ರಮುಖ ಬ್ಯಾಂಕ್ಗಳಿಗೆ ಅನ್ವಯಿಸುತ್ತದೆ. ಆದ್ದರಿಂದ, ಅನಗತ್ಯ ಶುಲ್ಕಗಳನ್ನು ತಪ್ಪಿಸಲು ನಿಮ್ಮ ಉಳಿತಾಯ ಖಾತೆಯಲ್ಲಿ ಅಗತ್ಯವಿರುವ ಕನಿಷ್ಠ ಬ್ಯಾಲೆನ್ಸ್ ಅನ್ನು ಕಾಯ್ದುಕೊಳ್ಳುವುದು ಮುಖ್ಯವಾಗಿದೆ. ಬ್ಯಾಂಕಿಂಗ್ ನಿಯಮಗಳ ಪ್ರಕಾರ, ಕನಿಷ್ಠ ಬ್ಯಾಲೆನ್ಸ್ ಮಿತಿ ಬ್ಯಾಂಕಿನಿಂದ ಬ್ಯಾಂಕ್ಗೆ ಬದಲಾಗುತ್ತದೆ, ಮತ್ತು ಇದು ನಗರ, ಪಟ್ಟಣ ಮತ್ತು ಗ್ರಾಮೀಣ ಪ್ರದೇಶದಿಂದ ಬದಲಾಗುತ್ತದೆ. ಪ್ರಮುಖ ಬ್ಯಾಂಕ್ಗಳ ನಿಯಮಗಳನ್ನು ವಿವರವಾಗಿ ಅನ್ವೇಷಿಸೋಣ. 1. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದೇಶದ ಅತಿದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್, SBI, ತನ್ನ ಉಳಿತಾಯ ಖಾತೆಗಳಿಗೆ ವಿಭಿನ್ನ ಕನಿಷ್ಠ ಬ್ಯಾಲೆನ್ಸ್ ಅವಶ್ಯಕತೆಗಳನ್ನು ಹೊಂದಿದೆ. ಮೆಟ್ರೋ ನಗರಗಳು: ₹3000 ನಗರ ಪ್ರದೇಶಗಳು: ₹2000 ಗ್ರಾಮೀಣ ಶಾಖೆಗಳು: ₹1000 SBI ಪ್ರಕಾರ, ಖಾತೆದಾರರು ತಮ್ಮ ಖಾತೆಯಲ್ಲಿ ಈ ಕನಿಷ್ಠ ಬ್ಯಾಲೆನ್ಸ್ಗಿಂತ ಕಡಿಮೆ ಉಳಿಸಿಕೊಂಡರೆ, ಬ್ಯಾಂಕ್ ₹50 ರಿಂದ ₹200 ವರೆಗೆ ದಂಡ ವಿಧಿಸಬಹುದು.…
ಹಾವೇರಿ : ತಾಲೂಕಾಡಳಿತದ ಎಡವಟ್ಟನಿಂದ ಹೆಂಡತಿಯ ಮರಣ ಪತ್ರಕ್ಕೆ ಅರ್ಜಿ ಹಾಕಿದ ಗಂಡನಿಗೆ ಆತನ ಮರಣಪತ್ರ ಕೊಟ್ಟಿರುವ ಘಟನೆ ನಡೆದಿದೆ. ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಶಿರಗಂಬಿ ಗ್ರಾಮದ ಮಲ್ಲಮ್ಮ ಎಂಬ ಮಹಿಳೆ ಆ.12, 2021ರಂದು ಮರಣ ಹೊಂದಿದ್ದರು. ಪತ್ನಿ ಮರಣ ಪ್ರಮಾಣ ಪತ್ರಕ್ಕೆ ಆಕೆಯ ಗಂಡ ಟೋಪನಗೌಡ ಗುಬ್ಬಿ ಎಂಬುವರು ರಟ್ಟಿಹಳ್ಳಿ ತಾಲೂಕು ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ಅಧಿಕಾರಿಗಳು ಪತ್ನಿ ಮರಣ ಪ್ರಮಾಣ ಪತ್ರದ ಬದಲು ಅರ್ಜಿದಾರನೇ ಮೃತಪಟ್ಟಿರುವುದಾಗಿ ಪ್ರಮಾಣ ಪತ್ರ ನೀಡಿದ್ದಾರೆ. ಕಳೆದ 5 ವರ್ಷಗಳಿಂದ ಟೋಪನಗೌಡ ಸರ್ಕಾರಿ ಸೌಲಭ್ಯದಿಂದ ವಂಚಿತರಾಗಿದ್ದಾರೆ. 5 ವರ್ಷಗಳ ಹಿಂದೆಯೇ ಮರು ಅರ್ಜಿ ಸಲ್ಲಿಸಿದರೂ ದಾಖಲಾತಿಯಲ್ಲಿ ಹೆಸರು ತೆಗೆಯದೇ ನಿರ್ಲಕ್ಷ್ಯ ವಹಿಸಿದ್ದಾರೆ.
ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಭಾರತದಲ್ಲಿ FASTag ವ್ಯವಸ್ಥೆಯನ್ನು ಮತ್ತಷ್ಟು ಸರಳಗೊಳಿಸಲು ಪ್ರಮುಖ ನಿರ್ಧಾರವನ್ನು ತೆಗೆದುಕೊಂಡಿದೆ. ಫೆಬ್ರವರಿ 1, 2026 ರಿಂದ ಕಾರುಗಳು, ಜೀಪ್ಗಳು ಮತ್ತು ವ್ಯಾನ್ಗಳಿಗೆ ನೀಡಲಾಗುವ ಹೊಸ FASTag ಗಳಿಗೆ KYV ಪರಿಶೀಲನಾ ಪ್ರಕ್ರಿಯೆಯು ಇನ್ನು ಮುಂದೆ ಅನ್ವಯಿಸುವುದಿಲ್ಲ ಎಂದು ಸರ್ಕಾರ ಘೋಷಿಸಿದೆ. FASTag ವಿತರಣೆ ಮತ್ತು ಬಳಕೆಯಲ್ಲಿನ ವಿಳಂಬ, ಪುನರಾವರ್ತಿತ ದಾಖಲೆ ವಿನಂತಿಗಳ ತೊಂದರೆ ಮತ್ತು ಬಳಕೆದಾರರ ದೂರುಗಳನ್ನು ಕಡಿಮೆ ಮಾಡುವ ಗುರಿಯನ್ನು ಈ ಬದಲಾವಣೆ ಹೊಂದಿದೆ. ಹಿಂದೆ, FASTag ವಿತರಣೆಯ ನಂತರ KYV ವಾಹನವನ್ನು ಪರಿಶೀಲಿಸಬೇಕಾಗಿತ್ತು. ಈ ಪ್ರಕ್ರಿಯೆಯು ಮಾನ್ಯ ದಾಖಲೆಗಳನ್ನು ಹೊಂದಿದ್ದರೂ ಸಹ, ಚಾಲಕರು RC ದಾಖಲೆಗಳನ್ನು ಪದೇ ಪದೇ ಅಪ್ಲೋಡ್ ಮಾಡುವುದು, ಫೋಟೋಗಳನ್ನು ಕಳುಹಿಸುವುದು ಮತ್ತು ಟ್ಯಾಗ್ ಅನ್ನು ಮರು ಪರಿಶೀಲಿಸುವುದು ಅಗತ್ಯವಾಗಿತ್ತು. ಇದು FASTag ಸಕ್ರಿಯಗೊಳಿಸುವಿಕೆಯನ್ನು ವಿಳಂಬಗೊಳಿಸಿತು ಮತ್ತು ಬಳಕೆದಾರರಿಗೆ ಅನಗತ್ಯ ಅನಾನುಕೂಲತೆಯನ್ನು ಉಂಟುಮಾಡಿತು. ಹೊಸ ನಿಯಮಗಳ ಅಡಿಯಲ್ಲಿ, NHAI ಈ ಜವಾಬ್ದಾರಿಯನ್ನು ಸಂಪೂರ್ಣವಾಗಿ ಬ್ಯಾಂಕುಗಳಿಗೆ ವರ್ಗಾಯಿಸಿದೆ. FASTag ನೀಡುವ…
ಕೇಂದ್ರ ಪುರಸ್ಕೃತ ಯೋಜನೆ ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್-ಧನ್ (ಪಿಎಂ-ಎಸ್ವೈಎಂ) ಯೋಜನೆಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕೇಂದ್ರ ಸರ್ಕಾರವು ಚಂದಾದಾರರು ಪಾವತಿಸುವ ವಂತಿಕೆಗೆ ಸಮಾನಾಂತರ ವಂತಿಕೆಯನ್ನು ಪಿಂಚಣಿಖಾತೆಗೆ ಪಾವತಿಸುತ್ತದೆ. ಫಲಾನುವಿಯ ವಯಸ್ಸು 60 ವರ್ಷ ಪೂರ್ಣಗೊಂಡ ನಂತರ ತಿಂಗಳಿಗೆ 3,000/-ಗಳ ಖಚಿತ ಕನಿಷ್ಠ ಮಾಸಿಕ ಪಿಂಚಣಿಯನ್ನು ಪಡೆಯಲು ಅರ್ಹರಾಗುತ್ತಾರೆ. ಮಹಾನಗರಪಾಲಿಕೆ ವ್ಯಾಪ್ತಿಯ ನೊಂದಾಯಿತ ಡೇ-ನಲ್ಮ್ ಯೋಜನೆಯ ಉಪಘಟಕಗಳಾದ ಅರ್ಹ ಸ್ವ-ಸಹಾಯ ಸಂಘದ ಸದಸ್ಯರು ಹಾಗೂ ಪಿ ಎಂ ಸ್ವ-ನಿಧಿ ಯೋಜನೆಯ ಬೀದಿ ಬದಿ ವ್ಯಾಪಾರಿಗಳು ಹಾಗೂ ಅವರ ಕುಟುಂಬಸ್ಥರು 8 ರಿಂದ 40 ವಯಸ್ಸಿನ ಒಳಗಿರುವ ಮತ್ತು ಅವರ ಮಾಸಿಕ 15,000/-ಅವರು ಆದಾಯ ಅಥವಾ ಅದಕ್ಕಿಂತ ಕಡಿಮೆ ಇರಬೇಕು. ತೆರಿಗೆ, ಬಿಎಸ್ಐ, ಪಿ.ಎಸ್, ಎನ್.ಪಿ.ಎಸ್. ಯೋಜನೆಯ ವ್ಯಾಪ್ತಿಗೆ ಒಳಪಟ್ಟಿರಬಾರದು ಅಂತಹ ಫಲಾನುಭವಿಗಳು ಅಗತ್ಯ ದಾಖಲೆಗಳಾದ ಆರಂಭಿಕ ವಂತಿಕೆ ಮೊತ್ತ, ಆಧಾರ್ ಕಾರ್ಡ್, ಖಾತೆ ಹೊಂದಿರುವ ಬ್ಯಾಂಕಿನ ಐ.ಎಫ್.ಎಸ್.ಸಿ. ಕೋಡ್ ವಿವರವಿರುವ, ಮತ್ತು ತಮ್ಮ ನಾಮ ನಿರ್ದೇಶಿತ ಸದಸ್ಯರ ನೊಂದಾಯಿತ ಆಧಾರ್…
ಶಿವಮೊಗ್ಗ : ವನ್ಯಜೀವಿ ಸಂರಕ್ಷಣೆ, ಅರಣ್ಯ ಸಂಪತ್ತು ರಕ್ಷಣೆ ಮತ್ತು ಜನರ ಅಭಿವೃದ್ದಿಯ ನಿಟ್ಟಿನಲ್ಲಿ ರಾಜ್ಯ ಸರ್ಕಾರ ತನ್ನ ತೀರ್ಮಾನಗಳನ್ನು ಕೈಗೊಳ್ಳುತ್ತಿದ್ದು ಶೆಟ್ಟಿಹಳ್ಳಿ ಅಭಯಾರಣ್ಯ ಡಿನೋಟಿಫಿಕೇಷನ್ ಮತ್ತು ಶರಾವತಿ ಸಂತ್ರಸ್ತರಿಗೆ ಪರಿಹಾರ ಕುರಿತಾದ ತೀರ್ಮಾನಗಳು ಅಂತಿಮ ಘಟ್ಟ ತಲುಪಿವೆ ಎಂದು ಅರಣ್ಯ ಜೀವಶಾಸ್ತ್ರ ಮತ್ತು ಪರಿಸರ ಸಚಿವರಾದ ಈಶ್ವರ್ ಬಿ ಖಂಡ್ರೆ ತಿಳಿಸಿದರು. ಬುಧವಾರ ತ್ಯಾವರೆಕೊಪ್ಪದ ಸಿಂಹಧಾಮದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶೆಟ್ಟಿಹಳ್ಳಿ ವನ್ಯಜೀವಿ ಧಾಮ ಡಿ-ನೋಟಿಫಿಕೇಷನ್ ಪ್ರಸ್ತಾವನೆಯು ಸುಮಾರು 2016 ರಿಂದ ಬಾಕಿ ಇದ್ದು ಈಗ ಅಂತಿಮ ಘಟ್ಟಕ್ಕೆ ಬಂದಿದೆ. ಹಿಂದೆ 1974 ರಲ್ಲಿ ನೋಟಿಫಿಕೇಷನ್ ಮಾಡಿದ ಸಂದರ್ಭದಲ್ಲಿ 395 ಚ.ಕೀ ಪ್ರದೇಶ ಸೇರ್ಪಡೆ ಮಾಡಿದ್ದರು. ಆದರೆ ಅದರಲ್ಲಿ ಬಸ್ ಸ್ಟಾö್ಯಂಡ್, ಎಫ್ಸಿಐ ಗೋಡಾನ್, ಎಪಿಎಂಸಿ, ಸರ್ಕಾರಿ ಕಚೇರಿಗಳು, ಜನವಸತಿ ಪ್ರದೇಶ ಸೇರ್ಪಡೆಗೊಂಡಿದ್ದು ಇದೆಲ್ಲವನ್ನೂ ಪರಿಶೀಲನೆ ಮಾಡಿ, ಅಧಿಕಾರಿಗಳು ಸಮೀಕ್ಷೆಗಳನ್ನು ಮಾಡಿದ್ದಾರೆ. ಈ ಕುರಿತು ಹಲವಾರು ಸಭೆಗಳನ್ನು ಮಾಡಲಾಗಿದೆ. ಅರಣ್ಯ ಸಂಪತ್ತು ಸಂರಕ್ಷಣೆ ಮಾಡಬೇಕು. ಜೀವನ ಮತ್ತು ಜೀವನೋಪಾಯ…
ಬೆಂಗಳೂರು: ಜಮೀನು ಖರೀದಿಸುವವರಿಗೆ ಇದೀಗ ಕಂದಾಯ ಇಲಾಖೆ ಸಿಹಿಸುದ್ದಿ ನೀಡಿದ್ದು, ನೀವು ಖರೀದಿಸುವ ಜಮೀನಿನ ಕುರಿತು ಮಾಹಿತಿ ನೀಡುವ ದಿಶಾಂಕ್’ ಆ್ಯಪ್’ ಅನ್ನು ಬಿಡುಗಡೆ ಮಾಡಿದ್ದು, ಇದರ ಮೂಲಕ ಜಮೀನಿನ ಸಂಪೂರ್ಣ ಮಾಹಿತಿ ಪಡೆಯಬಹುದು. ಏನಿದು `ದಿಶಾಂಕ್’ ಆ್ಯಪ್? ಹೇಗೆ ಕೆಲಸ ಮಾಡುತ್ತೆ.? ರಾಜ್ಯದ ಕಂದಾಯ ಇಲಾಖೆಯಲ್ಲಿ ಲಭ್ಯವಿರುವ 1960ರ ಸರ್ವೆ ನಕಾಶೆಗಳ ಆಧಾರದಲ್ಲಿ ದಿಶಾಂಕ್ ಆ್ಯಪ್ ಅಭಿವೃದ್ಧಿಪಡಿಸಲಾಗಿದೆ. ಈ ಆ್ಯಪ್ನ ಲ್ಲಿರುವ ನಕಾಶೆಯನ್ನು ನೋಡಿ ಆಸ್ತಿಯ ಕುರಿತ ಮೂಲ ವಿವರಗಳನ್ನು ತಿಳಿದುಕೊಳ್ಳಬಹುದಾಗಿದೆ. ದಿಶಾಂಕ್ ಆ್ಯಪ್ ಬೆಂಗಳೂರು ಸೇರಿದಂತೆ ರಾಜ್ಯದ 30 ಜಿಲ್ಲೆಯಗಳ ಪ್ರತಿ ಭೂ ಭಾಗದ ಮಾಹಿತಿಯನ್ನು ಹೊಂದಿದೆ. ಯಾವ ಮಾಹಿತಿ ಸಿಗುತ್ತೆ? ಕಂದಾಯ ಇಲಾಖೆಯಲ್ಲಿ ಲಭ್ಯವಿರುವ 1960ರ ಸರ್ವೆ ನಕಾಶೆಗಳ ಆಧಾರದಲ್ಲಿ ದಿಶಾಂಕ್ ಆ್ಯಪ್ ಅಭಿವೃದ್ಧಿಪಡಿಸಲಾಗಿದೆ. ಈ ಆ್ಯಪ್ನಇಲ್ಲಿರುವ ನಕಾಶೆಯನ್ನು ನೋಡಿ ಆಸ್ತಿಯ ಕುರಿತ ಮೂಲ ವಿವರಗಳನ್ನು ತಿಳಿದುಕೊಳ್ಳಬಹುದಾಗಿದೆ. ಯಾವುದಾದರೂ ಆಸ್ತಿಯ ನಿಖರವಾದ ಸರ್ವೆ ನಂಬರ್ ಹುಡುಕಲು ಹಾಗೂ ಆ ಭೂಮಿಯ ಬಗ್ಗೆ ವಿವರಗಳನ್ನು ಪಡೆಯಲು ದಿಶಾಂಕ್ ಆ್ಯಪ್…
ಬೆಂಗಳೂರು : ರಾಜ್ಯ ಗ್ರಾಮೀಣ ಪ್ರದೇಶದ ಆಸ್ತಿಗಳಿಗೆ ಇ-ಖಾತಾ ಸಮಸ್ಯೆಯನ್ನು 15-20 ದಿನಗಳಲ್ಲಿ ಬಗೆಹರಿಸಿ ಇ-ಖಾತಾ ವಿತರಿಸುವುದಾಗಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ ನೀಡಿದ್ದಾರೆ. ಬಿಜೆಪಿಯ ಕಿರಣ್ ಕುಮಾರ್ ಕೊಡ್ಲಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು,ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಗ್ರಾಮೀಣ ಭಾಗದ ಆಸ್ತಿಗಳನ್ನು ಡಿಜಿಟಲೀಕರಣ ಮಾಡಿ ಸಾರ್ವಜನಿಕರಿಗೆ ಸುಲಭವಾಗಿ ಇ-ಖಾತಾ ಸೌಲಭ್ಯ ದೊರಕುವಂತೆ ಮಾಡಬೇಕು ಎಂಬ ಉದ್ದೇಶದಿಂದ ಇ-ಸ್ವತ್ತು ಅಭಿಯಾನದಡಿ ಇ-ಸ್ವತ್ತು ತಂತ್ರಾಂಶ 2.0 ಅನ್ನು ಆರಂಭಿಸಿದೆ. ಈ ನೂತನ ಇ-ಸ್ವತ್ತು ತಂತ್ರಾಂಶ 2.0 ಅನ್ನು ಕಳೆದ ಡಿಸೆಂಬರ್ ನಲ್ಲಿ ಪ್ರಾರಂಭಿಸಲಾಗಿದೆ. ಕಳೆದ ಎರಡು ತಿಂಗಳುಗಳಲ್ಲಿ ಇ-ಸ್ವತ್ತು ತಂತ್ರಾಂಶ 1.0 & 2.0 ನಲ್ಲಿ 44,508 ಅರ್ಜಿಗಳ ಸ್ವೀಕೃತ ಮಾಡಲಾಗಿದೆ. ಅದರಲ್ಲಿ 7,978 ಅರ್ಜಿಗಳನ್ನು ಅನುಮೋದನೆ ಮಾಡಲಾಗಿದೆ. ಈ ತಂತ್ರಾಂಶದಲ್ಲಿ ಲೋಪಗಳನ್ನು ಬರುತ್ತಿದ್ದು, ಶೀಘ್ರದಲ್ಲಿಯೇ ಸರಿಪಡಿಸಲಾಗುವುದು. ನಾವು ಯಾವುದೇ ತಂತ್ರಾಂಶವನ್ನು ಅನುಷ್ಠಾನಕ್ಕೆ ತರಬೇಕು ಎಂದರೆ ಅದಕ್ಕಾಗಿ ನಾವು ಕೇಂದ್ರ ಸರ್ಕಾರದ ರಾಷ್ಟ್ರೀಯ ಮಾಹಿತಿ ಕೇಂದ್ರ (ಎನ್ಐಸಿ) ತಂಡಕ್ಕೆ…
ಬೆಂಗಳೂರು : ಬೆಂಗಳೂರಿನಲ್ಲಿ ನಟ ಮಯೂರ್ ಪಟೇಲ್ ನಿಂದ ಸರಣಿ ಅಪಘಾತ ನಡೆದಿದ್ದು, ಕುಡಿದ ಮತ್ತಿನಲ್ಲಿ ನಿಂತಿದ್ದ ಕಾರುಗಳಿಗೆ ಡಿಕ್ಕಿ ಹೊಡೆದಿದ್ದಾರೆ. ನಟ ಮಯೂರ್ ಪಟೇಲ್ ಕುಡಿದ ಮತ್ತಿನಲ್ಲಿ ರಾತ್ರಿ ತನ್ನ ಫಾರ್ಚೂನರ್ ಕಾರು ಚಲಾಯಿಸಿದ್ದು, ನಿಂತಿದ್ದ ಕಾರುಗಳಿಗೆ ಡಿಕ್ಕಿ ಹೊಡೆದಿದ್ದಾರೆ. ಬೆಂಗಳೂರಿನ ದಮ್ಮಲೂರಿನ ಸಿಗ್ನಲ್ ಬಳಿ ನಿಂತಿದ್ದ ಕಾರುಗಳಿಗೆ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿ ಹೊಡೆದ ರಭಸಕ್ಕೆ ಮೂರು ಕಾರುಗಳು ಜಖಂ ಆಗಿದ್ದು, ಈ ವೇಳೆ ಕಂಟ್ರೋಲ್ ರೂಮ್ ಗೆ ಚಾಲಕರು ಕರೆ ಮಾಡಿದ್ದಾರೆ. ಬಳಿಕ ಪೊಲೀಸರು ನಟ ಮಯೂರ್ ಪಟೇಲ್ ರನ್ನು ಠಾಣೆಗೆ ಕರೆದೊಯ್ದಿದ್ದಾರೆ. ಕಾರು ಮಾಲೀಕ ಶ್ರೀನಿವಾಸ್ ಈ ಬಗ್ಗೆ ದೂರು ನೀಡಿದ್ದು, ನಟ ಮಯೂರ್ ಪಟೇಲ್ ವಿರುದ್ಧ ಹಲಸೂರು ಸಂಚಾರಿ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಬೆಂಗಳೂರು : ರಾಜ್ಯ ಸರ್ಕಾರದ ಅನುದಾನಕ್ಕೆ ಒಳಪಟ್ಟ ಶಾಲಾ ಶಿಕ್ಷಕರಿಗೆ ಹೈಕೋರ್ಟ್ ಸಿಹಿಸುದ್ದಿ ನೀಡಿದ್ದು, ಅನುದಾನಿತ ಶಾಲೆಯು ಸರ್ಕಾರದ ಅನುದಾನಕ್ಕೆ ಒಳಪಟ್ಟ ದಿನದಿಂದಲೇ ಪೂರ್ವಾನ್ವಯವಾಗುವಂತೆ ಶಿಕ್ಷಕರಿಗೆ ವೇತನ ಸೌಲಭ್ಯ ನೀಡಬೇಕು ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ರಾಜ್ಯ ಸರ್ಕಾರ 2011ರಲ್ಲಿ ಹೊರಡಿಸಿದ್ದ ಆದೇಶದ ಅನ್ವಯ ಅರ್ಜಿದಾರ ಶಿಕ್ಷಕರು ಶಾಲೆಯು ಅನುದಾನಕ್ಕೆ ಒಳಪಟ್ಟ ದಿನದಿಂದಲೇ ವೇತನಕ್ಕೆ ಅರ್ಹರಿದ್ದಾರೆ ಎಂದು ತೀರ್ಪು ನೀಡಿದೆ. ಪ್ರಕರಣದ ಹಿನ್ನೆಲೆ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಕೆಂಪವಾಡ ಗಜಾನನ ಎಜುಕೇಶನಲ್ ಸೊಸೈಟಿ ನ್ಯೂ ಹೈಸ್ಕೂಲ್ನ ಕನ್ನಡ ಶಿಕ್ಷಕರಾಗಿ ರಾಜೇಶ್ ಎಂ. ಕೋಷ್ಟಿ ಎಂಬುವರು 2007ರಲ್ಲಿ ನೇಮಕಗೊಂಡಿದ್ದರು. ಆ ಶಾಲೆಯು 2009ರಲ್ಲಿ ಸರ್ಕಾರದ ಅನುದಾನ ವ್ಯಾಪ್ತಿಗೆ ಸೇರಿತು. ಆದರೆ, ಅರ್ಜಿದಾರ ಶಿಕ್ಷಕರಿಗೆ ಪೂರ್ವಾನ್ವಯವಾಗುವಂತೆ ವೇತನ ಸೌಲಭ್ಯ ನೀಡಲು ಸರ್ಕಾರ ನಿರಾಕರಿಸಿತು. ಇದನ್ನು ಪ್ರಶ್ನಿಸಿ ಹೈಕೋರ್ಟ್ಗೆ ರಾಜೇಶ್ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ಹೈಕೋರ್ಟ್ನ ಧಾರವಾಡ ಪೀಠದಲ್ಲಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಎಸ್. ಹೇಮಲತಾ ಅವರಿದ್ದ ಏಕಸದಸ್ಯ ನ್ಯಾಯಪೀಠ, ಸರ್ಕಾರದ ಆದೇಶ…














