Author: kannadanewsnow57

ಚಿತ್ರದುರ್ಗ : ಮುಂದಿನ ತಿಂಗಳು ಕೌನ್ಸಿಲಿಂಗ್ ಮೂಲಕ ರಾಜ್ಯದ ಎಲ್ಲಾ ತಾಲ್ಲೂಕು ಆಸ್ಪತ್ರೆಗಳಲ್ಲಿ ತಲಾ ಇಬ್ಬರು ಹೆರಿಗೆ, ಮಕ್ಕಳ ಹಾಗೂ ಅರವಳಿಕೆ ತಜ್ಞರನ್ನು ನೇಮಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಈ ಮೂಲಕ ತಾಲ್ಲೂಕು ಆಸ್ಪತ್ರೆಗಳಲ್ಲಿ 24 ಗಂಟೆಯೂ ವೈದ್ಯರ ಸೇವೆ ದೊರಕುವಂತೆ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ನೂತನ ಆಸ್ಪತ್ರೆ ನಿರ್ಮಾಣ ಸಂಬಂಧವಾಗಿ ಶುಕ್ರವಾರ ಮೊಳಕಾಲ್ಮೂರಿನ ತಾಲ್ಲೂಕು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ಮೊಳಕಾಲ್ಮೂರು ಪಟ್ಟಣದಲ್ಲಿ 200 ಹಾಸಿಗೆಗಳ ಆಧುನಿಕವಾದ ಸುಸಜ್ಜಿತ ಆಸ್ಪತ್ರೆ ನಿರ್ಮಾಣಕ್ಕೆ ಸರ್ಕಾರ ಈಗಾಗಲೇ ಅನುಮೋದನೆ ನೀಡಿದೆ. ಇದಕ್ಕಾಗಿ 100 ಕೋಟಿ ರೂ. ಅನುದಾನ ಮೀಸಲು ಇರಿಸಲಾಗಿದೆ. ಈಗಿರುವ ಆಸ್ಪತ್ರೆ ಆವರಣದಲ್ಲಿಯೇ ನೂತನ ಆಸ್ಪತ್ರೆ ನಿರ್ಮಿಸಬೇಕೆ? ಅಥವಾ ಪಟ್ಟಣದ ಹೊರ ವಲಯದಲ್ಲಿ ಗುರುತಿಸಲಾಗಿರುವ 5 ಎಕರೆ ಜಾಗದಲ್ಲಿ ನಿರ್ಮಿಸಬೇಕೆ ಎಂಬುದನ್ನು ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಪಟ್ಟಣದಲ್ಲಿ ಸುಸಜ್ಜಿತ ಆಸ್ಪತ್ರೆ…

Read More

ನವದೆಹಲಿ : ರೈಲ್ವೆ ನೇಮಕಾತಿ ಮಂಡಳಿ (RRB) ನಿರುದ್ಯೋಗಿಗಳಿಗೆ ಶುಭ ಸುದ್ದಿ ಪ್ರಕಟಿಸಿದೆ. ತಾಂತ್ರಿಕೇತರ ಜನಪ್ರಿಯ ವರ್ಗದಲ್ಲಿ (NTPC) 8,850 ಹುದ್ದೆಗಳನ್ನ ಭರ್ತಿ ಮಾಡಲು ಅಧಿಕೃತವಾಗಿ ಅಧಿಸೂಚನೆ ಹೊರಡಿಸಿದೆ. ಈ ಪ್ರಕ್ರಿಯೆಯ ಮೂಲಕ, ಭಾರತೀಯ ರೈಲ್ವೆಯಲ್ಲಿ ವಿವಿಧ ಪದವಿ ಮತ್ತು ಪದವಿಪೂರ್ವ ಹಂತದ ಉದ್ಯೋಗಗಳಿಗೆ ನೇಮಕಾತಿ ಮಾಡಲಾಗುತ್ತದೆ. ಮಧ್ಯಂತರ ಮತ್ತು ಪದವಿ ಪಡೆದವರು ಈ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಅವಕಾಶವನ್ನ ಬಳಸಿಕೊಳ್ಳಬಹುದು. ಏತನ್ಮಧ್ಯೆ, ಈ ಅಧಿಸೂಚನೆಯಲ್ಲಿ ಆಲ್ ಸ್ಟೇಷನ್ ಮಾಸ್ಟರ್, ಗೂಡ್ಸ್ ರೈಲು ವ್ಯವಸ್ಥಾಪಕ, ಸಂಚಾರ ಸಹಾಯಕ (ಮೆಟ್ರೋ ರೈಲ್ವೆ), ಮುಖ್ಯ ವಾಣಿಜ್ಯ ಕಮ್ ಟಿಕೆಟ್ ಮೇಲ್ವಿಚಾರಕ, ಜೂನಿಯರ್ ಅಕೌಂಟ್ಸ್ ಅಸಿಸ್ಟೆಂಟ್-ಕಮ್-ಟೈಪಿಸ್ಟ್, ಸೀನಿಯರ್ ಕ್ಲರ್ಕ್-ಕಮ್-ಟೈಪಿಸ್ಟ್, ಜೂನಿಯರ್ ಕ್ಲರ್ಕ್-ಕಮ್-ಟೈಪಿಸ್ಟ್, ಅಕೌಂಟ್ಸ್ ಕ್ಲರ್ಕ್-ಕಮ್-ಟೈಪಿಸ್ಟ್, ರೈಲು ಕ್ಲರ್ಕ್, ಕಮರ್ಷಿಯಲ್ ಕಮ್ ಟಿಕೆಟ್ ಕ್ಲರ್ಕ್ ಮುಂತಾದ ವಿವಿಧ ಹುದ್ದೆಗಳು ಸೇರಿವೆ. ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಅಕ್ಟೋಬರ್ 21 ರಿಂದ ಪ್ರಾರಂಭವಾಗಲಿದ್ದು, ನವೆಂಬರ್ 20 ರಂದು ಕೊನೆಯ ದಿನಾಂಕವಾಗಲಿದೆ. ಒಟ್ಟು ಹುದ್ದೆಗಳು…

Read More

ಬೆಂಗಳೂರು : ರಾಜ್ಯ ಸರ್ಕಾರವು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಕೃಷಿ ತೆರಿಗೆಗೆ ಒಳಪಡದ ಎಲ್ಲಾ ವಸತಿ, ವಸತಿಯೇತರ, ವಾಣಿಜ್ಯ, ವಾಣಿಜೈತರ ಕಟ್ಟಡ, ನಿವೇಶನ, ರೆಸಾರ್ಟ್, ಹೋಮ್ ಸ್ಟೇ ಸೇರಿ ಇತರೆ ಆಸ್ತಿಗಳನ್ನು ಗುರುತಿಸಿ ನಿಯಮ ಬದ್ಧವಾಗಿ ತೆರಿಗೆ ಮತ್ತು ಶುಲ್ಕಗಳ ವಸೂಲಿಗೆ ತಂದಿರುವ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ರಾಜ್ (ಗ್ರಾಪಂಗಳ ತೆರಿಗೆ, ದರ ಮತ್ತು ಫೀಸು ಗಳು) ನಿಯಮ 2025ಅನ್ನು ಪ್ರಕಟಿಸಿದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993 (1993ರ ಪ್ರಕರಣ ಕರ್ನಾಟಕ ಅಧಿನಿಯಮ ಸಂಖ್ಯೆ 14)ರ ಪ್ರಕರಣ 66, 67, 70, 97, 1992, 1990, 1992, 200, 201 ಮತ್ತು 202ನೇ ಪ್ರಕರಣಗಳೊಂದಿಗೆ ಓದಿಕೊಂಡಂತೆ ಪ್ರಕರಣ 311ರ ಮೂಲಕ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯಿತಿಗಳ ತೆರಿಗೆ, ದರ ಮತ್ತು ಫೀಜುಗಳು) ನಿಯಮಗಳು, 2025ರ ថថថ ថ៨ ៥ :RDPR…

Read More

ಬೆಂಗಳೂರು : ರಾಜ್ಯಾದ್ಯಂತ ಶುಕ್ರವಾರದ ವೇಳೆಗೆ ಶೇ.95.20 ಕುಟುಂಬಗಳ ಸಮೀಕ್ಷೆ ಪೂರ್ಣಗೊಂಡಿದೆ. ಆದರೆ, ಶೇ.85.72 ರಷ್ಟು ಜನರ ಗಣತಿಯ ಅಂಕಿ-ಅಂಶ ಮಾತ್ರ ಲಭ್ಯವಾಗಿರುವ ಹಿನ್ನೆಲೆಯಲ್ಲಿ ಭಾನುವಾರವೂ ಸಮೀಕ್ಷೆ ಮುಂದುವರೆಸಲು ನಿರ್ಧರಿಸಲಾಗಿದೆ. ಪೂರ್ವ ನಿಗದಿಯಂತೆ ಅ.18 ರ ಇಂದು ಸಮೀಕ್ಷೆ ಪೂರ್ಣಗೊಳ್ಳಬೇಕು. ಆದರೆ, ನಿರೀಕ್ಷಿತ ಪ್ರಮಾಣದಲ್ಲಿ ಜನಸಂಖ್ಯೆಯ ಗಣತಿ ಆಗಿಲ್ಲ. ಹೀಗಾಗಿ ಅ.19 ರಂದು ಭಾನುವಾರವೂ ಸಮೀಕ್ಷೆ ಮುಂದುವರೆಸಲು ತಿಳಿಸಿದ್ದು, ಭಾನುವಾರ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಗತಿ ಪರಿಶೀಲನೆ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಸಮೀಕ್ಷೆಯನ್ನು ಮುಂದುವರೆಸಬೇಕೇ ಅಥವಾ ಮುಕ್ತಾಯಗೊಳಿಸಬೇಕೇ ಎಂಬ ಕುರಿತು ನಿರ್ಧಾರವಾಗಲಿದೆ. ರಾಜ್ಯಾದ್ಯಂತ ಒಟ್ಟು 1,48,14, 286 ಕುಟುಂಬಗಳ ಸಮೀಕ್ಷೆ ಗುರಿ ನೀಡಲಾಗಿತ್ತು. ಈ ಪೈಕಿ ಶುಕ್ರವಾರ 1.62 ಲಕ್ಷ ಕುಟುಂಬಗಳ ಸಮೀಕ್ಷೆ ಪೂರ್ಣ ಗೊಂಡಿದ್ದು, ಒಟ್ಟು 1.41 ಕೋಟಿ ಕುಟುಂಬಗಳ ಸಮೀಕ್ಷೆಪೂರ್ಣಗೊಂಡಿದೆ. ರಾಜ್ಯದ ಜನತೆಯ ಸಾಮಾಜಿಕ ಮತ್ತು ಶೈಕ್ಷಣಿಕ ಹಾಗೂ ಆರ್ಥಿಕ ಪರಿಸ್ಥಿತಿ ಕುರಿತು ಮಾಹಿತಿ ಸಂಗ್ರಹಿಸಲಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯು ಅತ್ಯಂತ ಮಹತ್ವದ್ದಾಗಿದೆ. ಸಂಗ್ರಹವಾಗುವ…

Read More

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದ ಸದಸ್ಯರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಿ ಸರ್ಕಾರ ಆದೇಶ ಹೊರಡಿಸಲಾಗಿದೆ. ಪತಿ-ಪತ್ನಿ ಸರ್ಕಾರಿ ನೌಕರರಾಗಿದ್ದಲ್ಲಿ ಒಬ್ಬರು ಮಾತ್ರ ವೇತನದಲ್ಲಿ ವಂತಿಕೆಯನ್ನು ನೀಡುವುದು, ರಾಜ್ಯ ಸರ್ಕಾರದ ಅಧಿಕಾರಿ/ನೌಕರರ ತಂದೆ-ತಾಯಿ ಪಿಂಚಣಿದಾರರಾಗಿದ್ದಲ್ಲಿ ಅವರ ಮಾಸಿಕ ಆದಾಯ ಮಿತಿಯನ್ನು ರೂ.17000 ಗಳಿಂದ ರೂ. 27000 ಸಾವಿರಗಳಿಗೆ ಹೆಚ್ಚಳ ಮಾಡಿದೆ. ವಿವಾಹಿತ ಮಹಿಳಾ ನೌಕರರ ತಂದೆ-ತಾಯಿಯೂ ಸಹ ಈ ಯೋಜನೆಯ ವ್ಯಾಪ್ತಿಗೆ ಒಳಪಡಲಿದ್ದಾರೆ. ಆರೋಗ್ಯ ಸಂಜೀವಿನಿ ಯೋಜನೆಯಡಿಯಲ್ಲಿ ನೋಂದಾಯಿತವಾಗಿರುವ ಆಸ್ಪತ್ರೆಗಳು, ಚಿಕಿತ್ಸಾ ಸೌಲಭ್ಯಗಳು ಮತ್ತು ಇತರೆ ಉಪಯುಕ್ತ ಮಾಹಿತಿಯ ಕೈಪಿಡಿ

Read More

ಬೆಂಗಳೂರು : ರಾಜ್ಯದ ಜನತೆಗೆ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯದ ಮಹಾನಗರ ಪಾಲಿಕೆಗಳು, ನಗರಸಭೆ ಹಾಗೂ ಪುರಸಭೆಗಳ ವ್ಯಾಪ್ತಿಯಲ್ಲಿ 1,200 ಚದರಡಿ ವಿಸ್ತೀರ್ಣದವರೆಗಿನ ನಿವೇಶನಗಳಲ್ಲಿ ನಕ್ಷೆ ಮಂಜೂರಾತಿ ಪಡೆದು ನಿರ್ಮಿಸಿರುವ ನೆಲ ಮತ್ತು 2 ಅಂತಸ್ತು, ಸ್ಟೀಲ್ಸ್ ಮತ್ತು 3 ಅಂತಸ್ತಿನ ವಸತಿ ಕಟ್ಟಡಗಳಿಗೆ ಸ್ವಾಧೀನಾನುಭವ ಪತ್ರ (OC)ದಿಂದ ವಿನಾಯಿತಿ ನೀಡಲು ಸಚಿವ ಸಂಪುಟ ನಿರ್ಧಾರ ಮಾಡಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಇತರೆ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ ವ್ಯಾಪ್ತಿಯಲ್ಲಿ 1,200 ಚದರಡಿ ವಿಸ್ತೀರ್ಣದ ವಸತಿ ಕಟ್ಟಡಗಳಿಗೆ ಸ್ವಾಧೀನಾನುಭವ ಪತ್ರದಿಂದ (ಒಸಿ) ವಿನಾಯಿತಿ ನೀಡುವ ಬಗ್ಗೆ ಚರ್ಚಿಸಲಾಗಿದ್ದು, ಮಹಾನಗರ ಪಾಲಿಕೆ, ನಗರಸಭೆ, ಪುರಸಭೆಗಳ ವ್ಯಾಪ್ತಿಯಲ್ಲಿ 1,200 ಚದರಡಿವರೆಗಿನ ವಿಸ್ತೀರ್ಣದ ನಿವೇಶನಗಳಲ್ಲಿ ನಕ್ಷೆ ಮಂಜೂರಾತಿ ಪಡೆದು ನಿರ್ಮಿಸಿರುವ ನೆಲ ಮತ್ತು ಎರಡಂತಸ್ತು, ಸ್ಟಿಲ್ಟ್ ಮತ್ತು ಮೂರಂತಸ್ತಿನ ವಸತಿ ಕಟ್ಟಡಗಳಿಗೆ ಮಾತ್ರ ಸ್ವಾಧೀನಾನುಭವ ಪತ್ರದಿಂದ ವಿನಾಯಿತಿ ನೀಡಲು ಸಂಪುಟ ನಿರ್ಧಾರ ಮಾಡಿದೆ. ಗ್ರೇಟರ್ ಬೆಂಗಳೂರು…

Read More

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ಪದೋನ್ನತಿಗೆ ತರಬೇತಿ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ಹೌದು, ರಾಜ್ಯ ಸರ್ಕಾರದ ಗ್ರೂಪ್ ಎ, ಬಿ ಮತ್ತು ಸಿ ವೃಂದ ನೌಕರರ ಪದನ್ನೋತಿಗೆ ತರಬೇತಿ ಕಡ್ಡಾಯಗೊಳಿಸುವ ನಿಯಮಾವಳಿಗಳ ಕರಡು ಪ್ರಕಟಿಸಲಾಗಿದೆ. ಆಕ್ಷೇಪಣೆ, ಸಲಹೆ ಹಾಗೂ ಅಭಿಪ್ರಾಯಗಳನ್ನು ಸಲ್ಲಿಸಲು ನೌಕರರಿಗೆ 15 ದಿನಗಳ ಕಾಲಾವಕಾಶ ನೀಡಿದೆ. ‘ಕರ್ನಾಟಕ ರಾಜ್ಯ ನಾಗರಿಕ ಸೇವೆಗಳ ನಿಯಮಗಳು- 2025 ರ ಪ್ರಕಾರ, ಗ್ರೂಪ್ ಎ, ಬಿ ಮತ್ತು ಸಿ ವೃಂದದ ನೌಕರರ ಬಡ್ತಿಯ ಹಿಂದಿನ ವರ್ಷದಲ್ಲಿ ಕನಿಷ್ಠ 10 ದಿನಗಳ ಖುದ್ದು ತರಬೇತಿ ಕಡ್ಡಾಯವಾಗಿದೆ. ಆನ್ಲೈನ್ ಕಲಿಕಾ ವೇದಿಕೆಯನ್ನು ಪ್ರತಿ ವರ್ಷ ಕನಿಷ್ಠ ಸಂಖ್ಯೆಯ ಅಂಕಗಳನ್ನು ಗಳಿಸಬೇಕು. ಆಫ್ಲೈನ್ ತರಬೇತಿಗೆ ಅರ್ಜಿ ಸಲ್ಲಿಸಿದ್ದರೆ ಅವರನ್ನು ಅವರ ವೃಂದ ಜೇಷ್ಠತೆ ಕ್ರಮದಲ್ಲಿ ತರಬೇತಿಗೆ ಕಳುಹಿಸಬೇಕೆಂದು ಇಲಾಖೆಗಳಿಗೆ ಸೂಚನೆ ನೀಡಲಾಗಿದೆ.

Read More

ಬೆಂಗಳೂರು : ರಾಜ್ಯದ ಪಡಿತರ ಚೀಟಿದಾರರೇ ಎಚ್ಚರ, ಆಹಾರ ಧಾನ್ಯವನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಅಂತಹ ಪಡಿತರ ಚೀಟಿ ರದ್ದುಪಡಿಸಲು ಕ್ರಮ ವಹಿಸಲಾಗುವುದು. ಹೌದು, ಪಡಿತರ ಚೀಟಿದಾರರು ತಮಗೆ ಹಂಚಿಕೆ ಮಾಡಿದ ಆಹಾರ ಧಾನ್ಯವನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಅಂತಹ ಪಡಿತರ ಚೀಟಿ ರದ್ದುಪಡಿಸಲು ಕ್ರಮ ವಹಿಸಲಾಗುವುದು. ಸಾರ್ವಜನಿಕ ವಿತರಣಾ ಪದ್ಧತಿಯಡಿ ಬಿಪಿಎಲ್, ಅಂತ್ಯೋದಯ ಪಡಿತರ ಚೀಟಿ ಫಲಾನುಭವಿಗಳಿಗೆ ಅಕ್ಟೋಬರ್ ಮಾಹೆಯಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ಅನ್ವಯ ಪಡಿತರ ಧಾನ್ಯ ಬಿಡುಗಡೆ ಮಾಡಲಾಗಿದೆ. ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿಗೆ 35 ಕೆಜಿ ಅಕ್ಕಿ ಹಾಗೂ ಪಿ.ಹೆಚ್.ಹೆಚ್. ಪ್ರತಿ ಫಲಾನುಭವಿಗೆ 5 ಕೆಜಿ ಅಕ್ಕಿ ಮತ್ತು ರಾಜ್ಯ ಸರ್ಕಾರದ ವತಿಯಿಂದ ಪ್ರತಿ ಸದಸ್ಯರಿಗೆ ಹೆಚ್ಚುವರಿಯಾಗಿ 5 ಕೆಜಿ ಅಕ್ಕಿ ವಿತರಿಸಲಾಗುತ್ತಿದೆ. ಅಕ್ಟೋಬರ್ ತಿಂಗಳ ಕೊನೆಯವರೆಗೆ ಪ್ರತಿದಿನ ಬೆಳಿಗ್ಗೆ ಎಂಟರಿಂದ ರಾತ್ರಿ ಎಂಟು ಗಂಟೆಯವರೆಗೆ ನ್ಯಾಯಬೆಲೆ ಅಂಗಡಿಗಳನ್ನು ತೆರೆದು ಸರಿಯಾದ ಪ್ರಮಾಣದಲ್ಲಿ ಪಡಿತರ ವಿತರಿಸಬೇಕು. ಒಂದು ವೇಳೆ ಲೋಪ ದೋಷ ಕಂಡು…

Read More

ದೀಪಾವಳಿ ಹಬ್ಬವನ್ನು ಅಕ್ಟೋಬರ್ 20 ರಂದು ಸಡಗರದಿಂದ ಆಚರಿಸಲಾಗುತ್ತಿದ್ದು, ಹಬ್ಬದ ಸಂದರ್ಭದಲ್ಲಿ ಸಿಡಿಸುವ ಪಟಾಕಿಗಳು ಶಬ್ದ ಮಾಲಿನ್ಯ ಮತ್ತು ವಾಯು ಮಾಲಿನ್ಯ ಉಂಟು ಮಾಡಿ ಪರಿಸರಕ್ಕೆ ಹಾನಿ ಮಾಡುತ್ತಿದೆ. ಜೊತೆಗೆ ಜನರ ಆರೋಗ್ಯವನ್ನು ಹದಗೆಡಿಸುತ್ತಿದೆ. ಮತ್ತು ಪ್ರಾಣಿ-ಪಕ್ಷಿಗಳ ಕಲರವಕ್ಕೆ ಘಾಸಿ ಉಂಟುಮಾಡುತ್ತಿದೆ. ಆದ್ದರಿಂದ ದೀಪಾವಳಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಸರಳ ರೀತಿಯಲ್ಲಿ ಮಾಲಿನ್ಯ ರಹಿತವಾಗಿ ಮತ್ತು ಭಕ್ತಿ ಪೂರ್ವಕವಾಗಿ ಆಚರಿಸಲು ಮನವಿ ಮಾಡಲಾಗಿದೆ. ಮಾರಾಟ ಹಾಗೂ ಸಾರ್ವಜನಿಕರು ಹಸಿರು ಪಟಾಕಿ ಗುರುತಿಸುವಿಕೆ ಕ್ರಮಗಳು : ಪಟಾಕಿ ಬಾಕ್ಸ್ಗನಳ ಮೇಲೆ ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್ (ಸಿಎಸ್ಐರಆರ್) ಮತ್ತು ನ್ಯಾಷನಲ್ ಎನ್ವಿರಾನ್ಮೆಂ್ಟಲ್ ಇಂಜಿನಿಯರಿಂಗ್ ರಿಸರ್ಚ್ ಇನ್ಸಿಟಿಟ್ಯೂಟ್ (ಎನ್ಇುಇಆರ್ಐರ) ಇವರ ಲೋಗೋ ಹಾಗೂ ನೊಂದಾಯಿತ ಸಂಖ್ಯೆಯೊಂದಿಗೆ ಮುದ್ರಿತವಾಗಿರಬೇಕು. ಅಧಿಕೃತ ಮಾರಾಟಗಾರರು ಸಂಬಂಧಪಟ್ಟ ಇಲಾಖೆ, ಪ್ರಾಧಿಕಾರದಿಂದ ನೀಡುವ ಪರವಾನಗಿಯಲ್ಲಿ ನಿಗದಿಪಡಿಸಿರುವ ದಿನಾಂಕ ಮತ್ತು ಸ್ಥಳಗಳಲ್ಲಿ ಮಾತ್ರ ತಾತ್ಕಾಲಿಕ ಪಟಾಕಿ ಅಂಗಡಿಗಳನ್ನು ಇಡಬೇಕು. ನಿಷೇಧಿತ ಪಟಾಕಿಗಳ ಮಾರಾಟ ಕಂಡುಬಂದಲ್ಲಿ ಅಂತಹ ಪಟಾಕಿಗಳನ್ನು ವಶಪಡಿಸಿಕೊಳ್ಳಲಾಗುವುದು ಮತ್ತು…

Read More

ಬೆಂಗಳೂರು : ರಾಜ್ಯ ಸರ್ಕಾರವು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಕೃಷಿ ತೆರಿಗೆಗೆ ಒಳಪಡದ ಎಲ್ಲಾ ವಸತಿ, ವಸತಿಯೇತರ, ವಾಣಿಜ್ಯ, ವಾಣಿಜೈತರ ಕಟ್ಟಡ, ನಿವೇಶನ, ರೆಸಾರ್ಟ್, ಹೋಮ್ ಸ್ಟೇ ಸೇರಿ ಇತರೆ ಆಸ್ತಿಗಳನ್ನು ಗುರುತಿಸಿ ನಿಯಮ ಬದ್ಧವಾಗಿ ತೆರಿಗೆ ಮತ್ತು ಶುಲ್ಕಗಳ ವಸೂಲಿಗೆ ತಂದಿರುವ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ರಾಜ್ (ಗ್ರಾಪಂಗಳ ತೆರಿಗೆ, ದರ ಮತ್ತು ಫೀಸು ಗಳು) ನಿಯಮ 2025ಅನ್ನು ಪ್ರಕಟಿಸಿದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993 (1993ರ ಪ್ರಕರಣ ಕರ್ನಾಟಕ ಅಧಿನಿಯಮ ಸಂಖ್ಯೆ 14)ರ ಪ್ರಕರಣ 66, 67, 70, 97, 1992, 1990, 1992, 200, 201 ಮತ್ತು 202ನೇ ಪ್ರಕರಣಗಳೊಂದಿಗೆ ಓದಿಕೊಂಡಂತೆ ಪ್ರಕರಣ 311ರ ಮೂಲಕ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯಿತಿಗಳ ತೆರಿಗೆ, ದರ ಮತ್ತು ಫೀಜುಗಳು) ನಿಯಮಗಳು, 2025ರ ថថថ ថ៨ ៥ :RDPR…

Read More