Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಭಾರತೀಯ ಖಗೋಳ ಭೌತಶಾಸ್ತ್ರ ಸಂಸ್ಥೆ (ಇಂಡಿಯನ್ ಇನ್ಸಿಟ್ಯೂಟ್ ಆಫ್ ಆಸ್ಟ್ರೋ ಫಿಸಿಕ್ಸ್ – ಐಐಎ) ರಾಜ್ಯಾದ್ಯಂತ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನಿರ್ವಹಿಸುತ್ತಿರುವ ಗ್ರಾಮೀಣ ಗ್ರಂಥಾಲಯಗಳಾದ ಅರಿವು ಕೇಂದ್ರಗಳ ಮೂಲಕ ಖಗೋಳ ವಿಜ್ಞಾನವನ್ನು ಉತ್ತೇಜಿಸಲು ತಿಳುವಳಿಕೆ ಒಪ್ಪಂದಕ್ಕೆ ಸಹಿ ಹಾಕಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ರಾಜ್ಯದಲ್ಲಿ ಸುಮಾರು 6000 ಅರಿವು ಕೇಂದ್ರಗಳನ್ನು ನಿರ್ವಹಿಸುತ್ತಿದ್ದು, ಇವು ಪ್ರಾಥಮಿಕವಾಗಿ ಗ್ರಾಮೀಣ ಪ್ರದೇಶಗಳಲ್ಲಿದ್ದು ಇವುಗಳನ್ನು ಗ್ರಂಥಾಲಯ ಮೇಲ್ವಿಚಾರಕರು ನಿರ್ವಹಿಸುತ್ತಿದ್ದಾರೆ. ಖಗೋಳ ಭೌತಶಾಸ್ತ್ರ ಸಂಸ್ಥೆಯೊಂದಿಗೆ ಮಾಡಿಕೊಂಡಿರುವ ಒಡಂಬಡಿಕೆಯಂತೆ ಖಗೋಳ ವಿಜ್ಞಾನದಲ್ಲಿ ಅರಿವು ಮತ್ತು ಆಸಕ್ತಿಯನ್ನು ಉತ್ತೇಜಿಸಲು ಗ್ರಾಮೀಣಾಭಿವೃದ್ಧಿ ಇಲಾಖೆಯೊಂದಿಗೆ ಸಂಸ್ಥೆ ವಿವಿಧ ಕಾರ್ಯಕ್ರಮಗಳನ್ನು ಹಾಕಿಕೊಳ್ಳಲಿದೆ ಹಾಗೂ ಅರಿವು ಕೇಂದ್ರಗಳು ಸೇವೆ ಸಲ್ಲಿಸುವ ಪ್ರದೇಶಗಳ ಸಮುದಾಯಗಳಲ್ಲಿ ವಿಜ್ಞಾನ ಸಾಕ್ಷರತೆ ಮತ್ತು ವೈಜ್ಞಾನಿಕ ಮನೋಭಾವವನ್ನು ಉತ್ತೇಜಿಸುತ್ತದೆ. ಮೇಲ್ವಿಚಾರಕರ ತರಬೇತಿ ಮತ್ತು ಮಾರ್ಗದರ್ಶನ, ಕನ್ನಡದಲ್ಲಿ ಖಗೋಳ ವಿಜ್ಞಾನ ಸಂಪನ್ಮೂಲಗಳ ರಚನೆ ಮತ್ತು ಆಕಾಶಕಾಯಗಳ ಘಟನೆಗಳ ಸುತ್ತ ಸಾರ್ವಜನಿಕ…
ಬೆಂಗಳೂರು : ಸಿಪಿಐ(ಎಂ) ನಾಯಕ ಮತ್ತು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷರಾದ ಜಿ.ಸಿ.ಬಯ್ಯಾರೆಡ್ಡಿ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಆತ್ಮೀಯ ಸ್ನೇಹಿತರಾಗಿದ್ದ ಬಯ್ಯಾರೆಡ್ಡಿಯವರು ಭೇಟಿಯಾದಾಗೆಲ್ಲ ದೇಶದ ರೈತರು ಮತ್ತು ಕಾರ್ಮಿಕರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಮಾತನಾಡುತ್ತಿದ್ದರು. ಈ ಸಮುದಾಯಗಳಿಗೆ ನ್ಯಾಯ ಕೊಡಿಸಲು ತಮ್ಮ ಬದುಕನ್ನು ಅರ್ಪಿಸಿಕೊಂಡಿದ್ದ ಬಯ್ಯಾರೆಡ್ಡಿಯವರು ಒಬ್ಬ ದಣಿವರಿಯದೆ ಇದ್ದ ಜನಪರ ಹೋರಾಟಗಾರ. ಅವರ ಕುಟುಂಬ ವರ್ಗ ಮತ್ತು ಹಿತೈಷಿಗಳ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಹೇಳಿದ್ದಾರೆ. https://twitter.com/siddaramaiah/status/1875377199030923290?ref_src=twsrc%5Egoogle%7Ctwcamp%5Eserp%7Ctwgr%5Etweet
ಬೆಂಗಳೂರು : ಭಾರೀ ಮಳೆಯಿಂದಾಗಿ ತ್ತರಿಸಿರುವ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಾಮಾನ ಕುಸಿತವಾಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಚಳಿ ಹೆಚ್ಚಳವಾಗಿದೆ. ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 2 ದಿನಗಳ ಕಾಲ ಶೀತಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಬೀದರ್, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಶೀತಗಾಳಿ ಬೀಸಲಿದೆ. ಉತ್ತರ ಕರ್ನಾಟಕ ಭಾಗದ ಒಂದೆರೆಡುಕಡೆಗಳಲ್ಲಿ ದಟ್ಟವಾದ ಮಂಜು ಆವರಿಸಲುದೆ. ದಕ್ಷಿಣ ಒಳನಾಡಿನಲ್ಲಿಯೂ ಮಂಜು ಕವಿದ ವಾತಾವರಣವಿರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ವಿಜಯಪುರದಲ್ಲಿ ಗರಿಷ್ಠ 30 ಹಾಗೂ ಕನಿಷ್ಠ 16, ಕಲಬುರಗಿ ಗರಿಷ್ಠ 31 ಹಾಗೂ ಕನಿಷ್ಠ 14 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಶಿವಮೊಗ್ಗದಲ್ಲಿ ಗರಿಷ್ಠ 28, ಕನಿಷ್ಠ 15, ಮೈಸೂರು ಗರಿಷ್ಥ 28 ಕನಿಷ್ಠ 16, ಬೆಳಗಾವಿ ಗರಿಷ್ಠ29, ಕನಿಷ್ಠ 16…
ಬೆಂಗಳೂರು : ಪ್ರಧಾನ ಮಂತ್ರಿ ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ 2022-23 ರಿಂದ 2024-25 ನೇ ಸಾಲಿನವರೆಗೆ ವಿವಿಧ ಘಟಕಗಳಿಗೆ ಸಹಾಯಧನ ನೀಡಲು ಮೀನುಗಾರಿಕಾ ಇಲಾಖೆ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ. ಸಹಾಯಧನ ಘಟಕಗಳ ಉಪಯೋಜನೆಗಳನ್ನು ಪಡೆಯಲು ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಶೇ.40 ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಮಹಿಳಾ ಫಲಾನುಭವಿಗಳಿಗೆ ಶೇ.60 ರಷ್ಟು ಸಹಾಯಧನ ನೀಡಲಾಗುತ್ತದೆ. ಮೀನು ಕೃಷಿಕೊಳಗಳ ನಿರ್ಮಾಣ ಒಟ್ಟು 4.90 ಹೆಕ್ಟೇರ್ಗೆ ಸಾಮಾನ್ಯ 3.10 ಹೆಕ್ಟೇರ್ ಮತ್ತು ಪರಿಶಿಷ್ಟ ಜಾತಿಗೆ 1.80 ಹೆಕ್ಟೇರ್ ನೀಡಲಿದ್ದು, ಮೀನುಕೃಷಿ ಕೊಳ ನಿರ್ಮಾಣ ಮಾಡಿ ಮೀನು ಕೃಷಿ ಕೈಗೊಂಡವರಿಗೆ ಹೂಡಿಕೆಗಳ ವೆಚ್ಚದ ಮೇಲೆ ಒಟ್ಟು 8.60 ಹೆಕ್ಟೇರ್ಗೆ ಸಾಮಾನ್ಯ 4.80 ಹೆಕ್ಟೇರ್, ಸಾಮಾನ್ಯ ಮಹಿಳೆ 1.80 ಹೆಕ್ಟೇರ್, ಪರಿಶಿಷ್ಟ ಜಾತಿ 1.00 ಹೆಕ್ಟೇರ್ ಮತ್ತು ಪರಿಶಿಷ್ಟ ಪಂಗಡ 1.00 ಹೆಕ್ಟೇರ್, ಯಾಂತ್ರೀಕೃತ ದೋಣಿ ಹಾಗೂ ಸಾಂಪ್ರದಾಯಿಕ ಮೀನುಗಾರರಿಗೆ-ಎಫ್ಆರ್ಪಿ ಬದಲಿ ದೋಣಿ ನಿರ್ಮಾಣದ 1 ಘಟಕಕ್ಕೆ ಸಾಮಾನ್ಯ-01, ಜೊತೆಗೆ ಮೀನುಮರಿ ಪಾಲನಾ…
ಸಿಡ್ನಿ: ಸಿಡ್ನಿಯ ಎಸ್ಸಿಜಿಯಲ್ಲಿ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟ್ರೋಫಿಯ ಐದನೇ ಮತ್ತು ಅಂತಿಮ ಟೆಸ್ಟ್ನ 2 ನೇ ದಿನದಂದು ಭಾರತಕ್ಕೆ ಬಿಗ್ ಶಾಕ್ ಎದುರಾಗಿದ್ದು, ಗಾಯಗೊಂಡ ನಾಯಕ ಜಸ್ಪ್ರೀತ್ ಬುಮ್ರಾ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಬುಮ್ರಾ ಮೈದಾನದಿಂದ ಹೊರನಡೆದಿದ್ದರಿಂದ ವಿರಾಟ್ ಕೊಹ್ಲಿ ನಾಯಕತ್ವದ ಜವಾಬ್ದಾರಿಗಳನ್ನು ವಹಿಸಿಕೊಂಡರು. ಬುಮ್ರಾ ಅವರ ಗಾಯದ ವ್ಯಾಪ್ತಿ ಅಥವಾ ಸ್ವರೂಪವು ಅನಿಶ್ಚಿತವಾಗಿ ಉಳಿದಿದೆ, ಆದರೆ ವಿಶ್ವದ ನಂ.1 ವೇಗದ ಬೌಲರ್ ಸ್ಕ್ಯಾನ್ಗಾಗಿ ಭಾರತೀಯ ತಂಡದ ವೈದ್ಯರೊಂದಿಗೆ ಮೈದಾನವನ್ನು ತೊರೆದಿದ್ದಾರೆ. ಸ್ಟಾರ್ ಸ್ಪೋರ್ಟ್ಸ್ನಲ್ಲಿ ಪ್ರಸಾರವಾದ ದೃಶ್ಯಗಳಲ್ಲಿ ಬುಮ್ರಾ ಕಾರಿನಲ್ಲಿ ಮೈದಾನದಿಂದ ಹೊರಡುವುದನ್ನು ತೋರಿಸಲಾಗಿದೆ. ಅವರನ್ನು ಹತ್ತಿರದ ನಗರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಬುಮ್ರಾ ಶನಿವಾರ ಊಟದ ಸಮಯದಲ್ಲಿ ಮೊದಲ ಬಾರಿಗೆ ಮೈದಾನವನ್ನು ತೊರೆದರು ಮತ್ತು ನಂತರ ವಿರಾಮದ ನಂತರ ಒಂದು ಓವರ್ ಎಸೆಯಲು ಮರಳಿದರು. ಆದರೆ ಅವರು ಮತ್ತೆ ಮೈದಾನವನ್ನು ತೊರೆದರು. ಅವರ ಬದಲಿಗೆ ಬದಲಿ ಫೀಲ್ಡರ್ ಅಭಿಮನ್ಯು ಈಶ್ವರನ್ ಸ್ಥಾನ ಪಡೆದಿದ್ದಾರೆ.
ಮುಂಬೈ : ಇಂದಿನ ಡಿಜಿಟಲ್ ಯುಗದಲ್ಲಿ ತಂತ್ರಜ್ಞಾನ ಮುಂದುವರೆದಂತೆ ವಂಚಕರ ತಂತ್ರಗಾರಿಕೆಯೂ ಹೆಚ್ಚುತ್ತಿದೆ. ಹೊಸ ವಂಚನೆಗಳು ಆತಂಕಕಾರಿ ಪ್ರಮಾಣದಲ್ಲಿ ಹೊರಹೊಮ್ಮುತ್ತಿವೆ, ಅಪರಾಧಿಗಳು ಆಧುನಿಕ ತಂತ್ರಜ್ಞಾನವನ್ನು ಜಾಣತನದಿಂದ ದುರ್ಬಳಕೆ ಮಾಡಿಕೊಳ್ಳುತ್ತಾರೆ ಮತ್ತು ಅನುಮಾನಾಸ್ಪದ ವ್ಯಕ್ತಿಗಳನ್ನು ಮೋಸಗೊಳಿಸುತ್ತಿದ್ದಾರೆ. ಈ ಪಟ್ಟಿಗೆ ಸೇರಿಸುವ ಸುದ್ದಿ ವಂಚನೆಗಳಲ್ಲಿ ಒಂದು ವಾಟ್ಸಾಪ್ ಇ-ಚಲನ್ ಹಗರಣ. ಜನರನ್ನು ಡಿಜಿಟಲ್ ರೀತಿಯಲ್ಲಿ ಲೂಟಿ ಮಾಡುವ ವಾಟ್ಸಾಪ್ ಇ-ಚಲನ್ ಹಗರಣದ ಬಗ್ಗೆ ತಿಳಿದುಕೊಳ್ಳಿ. ಈ ವಂಚನೆಗಳು ಹೆಚ್ಚುತ್ತಲೇ ಇರುವುದರಿಂದ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ (MeitY), ತನ್ನ ಮಾಹಿತಿ ಭದ್ರತಾ ಜಾಗೃತಿ (ISEA) ಕಾರ್ಯಕ್ರಮದ ಮೂಲಕ ಹೆಚ್ಚುತ್ತಿರುವ ನಕಲಿ ಟ್ರಾಫಿಕ್ ಇ-ಚಲನ್ ಹಗರಣದ ಬಗ್ಗೆ ಎಚ್ಚರಿಕೆಯನ್ನು ನೀಡಿದೆ, ಸಾರ್ವಜನಿಕರಿಗೆ ಜಾಗರೂಕರಾಗಿರಲು ಸಲಹೆ ನೀಡಿದೆ. WhatsApp E-Challan ಹಗರಣ ಎಂದರೇನು? ವಾಟ್ಸಾಪ್ ಇ-ಚಲನ್ ಹಗರಣವು ಮೋಸದ ಯೋಜನೆಯಾಗಿದ್ದು, ಸೈಬರ್ ಅಪರಾಧಿಗಳು ವ್ಯಕ್ತಿಗಳಿಗೆ ನಕಲಿ ಸಂದೇಶಗಳನ್ನು ಕಳುಹಿಸುತ್ತಾರೆ, ಟ್ರಾಫಿಕ್ ಅಧಿಕಾರಿಗಳಂತೆ ನಟಿಸುತ್ತಾರೆ. ಈ ಸಂದೇಶಗಳು ವಿಶಿಷ್ಟವಾಗಿ ಚಲನ್ ಸಂಖ್ಯೆ, ವಾಹನ ಸಂಖ್ಯೆ ಮತ್ತು ಹೇಳಲಾದ…
ಹೈದರಾಬಾದ್ : ಟಾಲಿವುಡ್ ನಲನಚಿತ್ರ ನಿರ್ದೇಶಕಿ ಅಪರ್ಣಾ ಮಲ್ಲಾಡಿ (54) ಶುಕ್ರವಾರ ಕ್ಯಾನ್ಸರ್ ನಿಂದ ನಿಧನರಾಗಿದ್ದಾರೆ. ಅಪರ್ಣಾ ಮಲ್ಲಾಡಿ ಅವರು ಕೆಲ ದಿನಗಳಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದಳು. ಅಮೆರಿಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಅಪರ್ಣಾ ಮಲ್ಲಾಡಿ ಅವರು ‘ದಿ ಅನುಶ್ರೀ ಎಕ್ಸ್ಪರಿಮೆಂಟ್ಸ್’ ಚಿತ್ರದ ಮೂಲಕ ನಿರ್ದೇಶಕರಾಗಿ ಪಾದಾರ್ಪಣೆ ಮಾಡಿದರು. ‘ಪೋಶ್ ಪೂರಿಸ್’ ವೆಬ್ ಸೀರಿಸ್ ಆಕೆಗೆ ಒಳ್ಳೆಯ ಹೆಸರು ತಂದುಕೊಟ್ಟಿತ್ತು. ಎರಡು ವರ್ಷಗಳ ಹಿಂದೆ ‘ಪೆಳ್ಳಿ ಕೂತುರು ಪಾರ್ಟಿ’ ಸಿನಿಮಾ ನಿರ್ದೇಶಿಸಿದ್ದರು. ಕೆಲವು ಚಿತ್ರಗಳಿಗೆ ಕಥೆ ಒದಗಿಸುವುದರೊಂದಿಗೆ ನಿರ್ಮಾಪಕರಾಗಿಯೂ ಕೆಲಸ ಮಾಡಿದ್ದಾರೆ. ಅಪರ್ಣಾ ಮಲ್ಲಾಡಿ ಅವರ ನಿಧನಕ್ಕೆ ಚಿತ್ರರಂಗದ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.
ರಾಜ್ಯದ ಜನತೆಗೆ ಗುಡ್ ನ್ಯೂಸ್ : ಈ ಬಾರಿ ಬೇಸಿಗೆಯಲ್ಲಿ `ಪವರ್ ಕಟ್’ ಸಮಸ್ಯೆ ಇಲ್ಲದಂತೆ ಸಮರ್ಪಕ ‘ವಿದ್ಯುತ್ ಪೂರೈಕೆ’.!
ಬೆಂಗಳೂರು: ರಾಜ್ಯದಲ್ಲಿ ಬೇಸಿಗೆ ವೇಳೆ ಸಮರ್ಪಕ ವಿದ್ಯುತ್ ಪೂರೈಕೆಗೆ ಯಾವುದೇ ತೊಂದರೆಯಾಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ವಿದ್ಯುತ್ ಉತ್ಪಾದನೆ, ಖರೀದಿ/ವಿನಿಮಯ ಮತ್ತು ಪ್ರಸರಣ ಕುರಿತಂತೆ ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್), ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್), ಪವರ್ ಕಂಪನಿ ಆಫ್ ಕರ್ನಾಟಕ ಲಿಮಿಟೆಡ್ (ಪಿಸಿಕೆಎಲ್) ಅಧಿಕಾರಿಗಳೊಂದಿಗೆ ಶುಕ್ರವಾರ ಸಭೆ ನಡೆಸಿದ ಸಚಿವರು, “ಸಮರ್ಪಕ ವಿದ್ಯುತ್ ಪೂರೈಕೆ ಜತೆಗೆ ಅಗತ್ಯ ಸಂದರ್ಭದಲ್ಲಿ ಹೆಚ್ಚು ವಿದ್ಯುತ್ ಉತ್ಪಾದನೆ ಮೂಲಕ ಬೇಡಿಕೆ ಮತ್ತು ಪೂರೈಕೆ ನಡುವೆ ಅಂತರ ಇಲ್ಲದಂತೆ ನೋಡಿಕೊಳ್ಳಬೇಕು”, ಎಂದು ಸೂಚಿಸಿದರು. ಕೆಪಿಸಿಎಲ್ ನ ಉಷ್ಣ ವಿದ್ಯುತ್ ಸ್ಥಾವರಗಳ ಕುರಿತು ಅಧಿಕಾರಿಗಳೊಂದಿಗೆ ಸಮಾಲೋಚನ ನಡೆಸಿದ ಅವರು, ಕಳೆದ ಬೇಸಿಗೆಯಲ್ಲಿ ಸರಾಸರಿ 3,600 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುವ ಮೂಲಕ ಉಷ್ಣ ವಿದ್ಯುತ್ ಸ್ಥಾವರಗಳು ದಾಖಲೆ ನಿರ್ಮಿಸಿದ್ದವು.ಈ ಬಾರಿ ಅದಕ್ಕಿಂತ ಹೆಚ್ಚು ವಿದ್ಯುತ್ ಉತ್ಪಾದನೆ ಮಾಡಿ ಹೊಸ ದಾಖಲೆ ಸ್ಥಾಪಿಸಬೇಕು. ಅದಕ್ಕಾಗಿ ಎಲ್ಲಾ…
ವರ್ಷದ ಮೊದಲ ಶನಿವಾರದಂದು ಬ್ರಾಹ್ಮೀ ಮುಹೂರ್ತದ ಸಮಯದಲ್ಲಿ, ಈ ಒಂದು ಸಾಲಿನ ಮಂತ್ರವನ್ನು ಪಠಿಸುವ ಮೂಲಕ ಶ್ರೀನಿವಾಸನನ್ನು ಪೂಜಿಸುವವರಿಗೆ ಅವರ ಇಷ್ಟಾರ್ಥಗಳು ಶೀಘ್ರದಲ್ಲೇ ಈಡೇರುತ್ತವೆ. ಆಸೆಯನ್ನು ಪೂರೈಸುವ ಒಂದು ಸಾಲಿನ ಮಂತ್ರ ಪುಷ್ಯ ಮಾಸವು ಪೆರುಮಾಳ್ ತಿರುಪತಿ ತಿಮ್ಮಪ್ಪನ ಮಾಸ ಎಂದು ನಮಗೆಲ್ಲರಿಗೂ ತಿಳಿದಿದೆ. ಅಂತಹ ಜನವರಿ ತಿಂಗಳಿನಲ್ಲಿ ಬರುವ ಶನಿವಾರ ಬಹಳ ವಿಶೇಷವಾಗಿರುತ್ತದೆ. ಅಂತಹ ಶನಿವಾರವು ವರ್ಷದ ಮೊದಲ ಶನಿವಾರವಾದರೆ, ಅನುಗುಣವಾದ ಲಾಭವು ಸ್ವಲ್ಪ ಹೆಚ್ಚಾಗಿರುತ್ತದೆ. 2025 ರ ಮೊದಲ ಸಂಭವನೀಯ ಶನಿವಾರವು ಜನವರಿರಂದು ನಾಲ್ಕನೇ ತಾರೀಖಿನಂದು ಬರುತ್ತದೆ. ಈ ದಿನದಂದು ಭಗವಂತನನ್ನು ನೆನೆದು ಯಾವುದಾದರೂ ಮಂತ್ರವನ್ನು ಪಠಿಸಿದರೆ ಪ್ರಾರ್ಥನೆಯು ನೆರವೇರುತ್ತದೆ ಎಂಬುದನ್ನು ನಾವು ಈ ಆಧ್ಯಾತ್ಮಿಕ ಪೋಸ್ಟ್ನಲ್ಲಿ ನೋಡಲಿದ್ದೇವೆ . ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು…
ಬೆಂಗಳೂರು: ನಗರದ ಆಸ್ತಿ ಮಾಲೀಕರು ಇ-ಖಾತಾ ಪಡೆಯುವುದು ಕಡ್ಡಾಯ. ಹಲವಾರು ಗೊಂದಲಗಳ ನಡುವೆ ಈಗಾಗಲೇ ಕೆಲವರು ಪಡೆದಿದ್ದರೇ, ಮತ್ತೆ ಕೆಲವರು ಪಡೆಯೋ ಪ್ರಯತ್ನದಲ್ಲಿ ಇದ್ದಾರೆ. ಬೆಂಗಳೂರಿನ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ ಎನ್ನುವಂತೆ ಜಸ್ಟ್ ಐದು ದಾಖಲೆಗಳನ್ನು ಅಪ್ ಲೋಡ್ ಮಾಡಿದ್ರೆ, ಅಂತಿಮ ಇ-ಖಾತಾವನ್ನು ಪಡೆಯಬಹುದಾಗಿದೆ. ಈ ಬಗ್ಗೆ ಬಿಬಿಎಂಪಿ ಮಾಹಿತಿ ಹಂಚಿಕೊಂಡಿದ್ದು, ಬಿಬಿಎಂಪಿ ವ್ಯಾಪ್ತಿಯ ಆಸ್ತಿ ಮಾಲೀಕರು ಇ – ಖಾತಾ ಪಡೆಯಲು ಐದು ದಾಖಲೆಗಳನ್ನು ಅಪ್ಲೋಡ್ ಮಾಡಬೇಕು. ಮಾಲೀಕರ ಆಧಾರ್ ಕಾರ್ಡ್, ಆಸ್ತಿ ತೆರಿಗೆ ಐಡಿ, ಮಾರಾಟ / ರಿಜಿಸ್ಟರ್ ಡೀಡ್ ಸಂಖ್ಯೆ, ಬೆಸ್ಕಾಂ ಖಾತೆಯ ಸಂಖ್ಯೆ (ಖಾಲಿ ನಿವೇಶನವಿದ್ದರೆ ಅಗತ್ಯವಿಲ್ಲ), ಆಸ್ತಿ ಫೋಟೋ ಈ ಎಲ್ಲಾ ದಾಖಲೆಗಳು ಬಿಬಿಎಂಪಿಯಲ್ಲಿರುವ ದಾಖಲೆಗಳೊಂದಿಗೆ ಹೊಂದಾಣಿಕೆಯಾದರೆ ಕೂಡಲೇ ಅಂತಿಮ ಇ – ಖಾತಾವನ್ನು ಡೌನ್ಲೋಡ್ ಮಾಡಿಕೊಳ್ಳಬಹುದು ಎಂದಿದೆ. ಈ ಕುರಿತಂತೆ ಸಂಶಯವಿದ್ದಲ್ಲಿ ಇ – ಖಾತಾ ಸಹಾಯವಾಣಿ 94806 83695 ಗೆ ಕರೆ ಮಾಡಿ ಸಲಹೆ ಪಡೆಯುವಂತೆ ತಿಳಿಸಿದೆ. ಬಿಬಿಎಂಪಿ ಇ-ಖಾತಾ…













