Author: kannadanewsnow57

ಬೆಂಗಳೂರು: ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರು, ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷರಾದ ಕಾಮ್ರೇಡ್ ಜಿ.ಸಿ.ಬಯ್ಯಾರೆಡ್ಡಿ ನಿಧನರಾಗಿದ್ದಾರೆ. ಬಯ್ಯಾರೆಡ್ಡಿ ಅವರು ಇಂದು ಮುಂಜಾನೆ 3 ಗಂಟೆಗೆ ಜಯನಗರ 3ನೇ ಬ್ಲಾಕ್ ನಲ್ಲಿರುವ ಅಪೋಲೊ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವರ ಪಾರ್ಥೀವ ಶರೀರವನ್ನು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮಹಾಲಕ್ಷ್ಮಿ ಲೇ ಔಟ್ ನಲ್ಲಿರುವ ಸಿಪಿಐ(ಎಂ) ಪಕ್ಷದ ರಾಜ್ಯ ಕಚೇರಿ ಇಎಂಎಸ್ ಭವನದಲ್ಲಿ ಅಂತಿಮ‌ ದರ್ಶನಕ್ಕೆ ಇಡಲಾಗುವುದು. ಇವರ ಪಾರ್ಥಿವ ಶರೀರವನ್ನು ಬೆಳಗ್ಗೆ 6-00ಯಿಂದ ಸಂಜೆ 4-00 ಗಂಟೆಯವರೆಗೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಲ್ಲಿರುವ ಸಿ.ಪಿ.ಐ.( ಎಮ್) ಪಕ್ಷದ ರಾಜ್ಯ ಕಛೇರಿಯಲ್ಲಿ ಅಂತಿಮ ದರ್ಶನಕ್ಕೆ ಇಡಲಾಗುವುದು ಎಂದು ನೂತನ ರಾಜ್ಯ ಕಾರ್ಯದರ್ಶಿ ಡಾ. ಕೆ.ಪ್ರಕಾಶ್ ತಿಳಿಸಿದ್ದಾರೆ.

Read More

ಬೆಂಗಳೂರು : ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ವಿಶೇಷ ಘಟಕ / ಗಿರಿಜನ ಉಪಯೋಜನೆಯಡಿ ಸರ್ಕಾರದ ಸಹಾಯಧನ ಶೇ.75% ರಷ್ಟು ಸೌಲಭ್ಯ ಪಡೆದು ಜವಳಿ ಉದ್ದಿಮೆ ಸ್ಥಾಪಿಸಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ಜವಳಿ ಉದ್ದಿಮೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸಂಬಂಧಿಸಿದ ವೈಯಕ್ತಿಕ ಫಲಾನುಭವಿ/ ಪಾಲುದಾರಿಕೆ ಸಂಸ್ಥೆ / ಕಂಪನಿ/ ಜವಳಿ ಸಹಕಾರ ಸಂಘ / ಸಂಸ್ಥೆಯ ವತಿಯಿಂದ ಸಣ್ಣ ಮತ್ತು ಅತೀ ಸಣ್ಣ (ಎಸ್.ಎಂ.ಇ.) ಘಟಕಗಳನ್ನು ಪ್ರಾರಂಭಿಸಲು ಉತ್ತೇಜಿಸುವ ಸಲುವಾಗಿ ಯೋಜನೆಯನ್ನು ಜಾರಿಗೆ ತರಲಾಗಿದೆ . ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಛೇರಿ, ಗಾರ್ಮೆಂಟ್ಸ್ ತರಬೇತಿ ಕೇಂದ್ರದ ಕಟ್ಟಡ, ಕೆಐಎಡಿಬಿ ಅಪೇರಲ್ ಪಾರ್ಕ್, ದೊಡ್ಡಬಳ್ಳಾಪುರ-561203 ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೂ.ಸಂ 080-29501945 ಇಲ್ಲಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ ಎಂದು ಕೈ ಮಗ್ಗ ಮತ್ತು ಜವಳಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಬೆಂಗಳೂರು : ರಾಜ್ಯ ಸರ್ಕಾರ ಕಾರ್ಮಿಕರ ಮಕ್ಕಳಿಗೆ ಸಿಹಿಸುದ್ದಿ ನೀಡಿದ್ದು, 2023-24 ಮತ್ತು 2024-25ನೇ ಸಾಲಿನ ಶೈಕ್ಷಣಿಕ ಧನ ಸಹಾಯ ಪಡೆಯಲು ಅರ್ಹ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ತಮ್ಮ ಮಕ್ಕಳ ಅರ್ಜಿಗಳನ್ನು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ (ಎಸ್ಎಸ್ಪಿ) ಮೂಲಕ ಸಲ್ಲಿಸಲು ಜನವರಿ 15 ರವರೆಗೆ ಅವಕಾಶ ಕಲ್ಪಿಸಲಾಗಿದೆ. ಎಲ್ಲಾ ನೋಂದಾಯಿತ ಕಟ್ಟಡ ಕಾರ್ಮಿಕರು – https://kbocwwb. karnataka.gov.in (Registration Number) 2 (Reference Number) ನಮೂದಿಸಿ ಕಡ್ಡಾಯವಾಗಿ ದಿನಾಂಕ: 15-01-2025 ರೊಳಗೆ ಆಧಾರ್ ಕಾರ್ಡ್ ಸಂಖ್ಯೆಯನ್ನು ಲಿಂಕ್ ಮಾಡಲು ಸೂಚಿಸಿದೆ. ಅಲ್ಲದೇ ಎಲ್ಲಾ ನೋಂದಾಯಿತ ಕಟ್ಟಡ ಕಾರ್ಮಿಕರು ತಮ್ಮ ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಯೊಂದಿಗೆ ಜೋಡಣೆ ಮಾಡಿ ಎನ್.ಪಿ.ಸಿ.ಐ ಮ್ಯಾಪಿಂಗ್ (NPCI Mapping) ಮಾಡಿಸುವುದು ಕಡ್ಡಾಯವಾಗಿರುತ್ತದೆ. ಈ ಹಿಂದೆ ಪ್ರೀ ಮೆಟ್ರಿಕ್ (1 ರಿಂದ 10ನೇ ತರಗತಿ) ತರಗತಿಗಳಲ್ಲಿ ಶೈಕ್ಷಣಿಕ ಧನಸಹಾಯಕ್ಕಾಗಿ ಎಸ್.ಎಸ್.ಪಿ ತಂತ್ರಾಂಶದ ಮೂಲಕ ಕರ್ನಾಟಕ ಸರ್ಕಾರದ ಯಾವುದಾದರೂ ಇಲಾಖೆಗೆ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ವಿದ್ಯಾರ್ಥಿವೇತನ ಪಡೆದಿದ್ದಲ್ಲಿ…

Read More

ಬೆಂಗಳೂರು : ರಾಜ್ಯ ಸರ್ಕಾರವು ರೈತರಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಕುಸುಮ್ ಬಿ ಯೋಜನೆಯಡಿ ಜಾಲ ಮುಕ್ತ ಸೌರ ಕೃಷಿ ಪಂಪ್ಸೆಟ್ ಅಳವಡಿಸಲು ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯ ಸರ್ಕಾರದಿಂದ ರೈತರಿಗೆ ಹಗಲು ವೇಳೆಯಲ್ಲಿ ನೀರಾವರಿ ಸೌಕರ್ಯವನ್ನು ಒದಗಿಸುವ ಮಹತ್ವಾಕಾಂಕ್ಷಿ ಸೋಲಾರ್ ಪಂಪ್ಸೆಟ್ ಯೋಜನೆ ಇದಾಗಿದೆ.. ನೀರಾವರಿಗೆ ಸಾಂಪ್ರದಾಯಿಕ ವಿದ್ಯುತ್ ಅವಲಂಬನೆಯನ್ನು ಕಡಿಮೆ ಮಾಡಿ, ಸೌರಶಕ್ತಿಯ ಬಳಕೆ ಮೂಲಕ ರೈತರು ಸ್ವಾವಲಂಬನೆ ಸಾಧಿಸಲು ಕುಸುಮ್ ಬಿ ಯೋಜನೆ ರೂಪಿಸಲಾಗಿದೆ. ಕೃಷಿ ಕ್ಷೇತ್ರವನ್ನು ಲಾಭದಾಯಕವಾಗಿಸಲು, ಸೌರಶಕ್ತಿ ಬಳಕೆಯ ಉತ್ತೇಜನಕ್ಕೆ ಸರ್ಕಾರದಿಂದ ಶೇ.80 ರಷ್ಟು ಹೆಚ್ಚಿನ ಸಹಾಯಧನ ನೀಡಲಾಗುತ್ತಿದೆ. ಸೋಲಾರ್‌ ಆಧರಿತ 3 ಹೆಚ್‌ಪಿ ಸೋಲಾರ್‌ ಪಂಪ್‌ಸೆಟ್‌ಗಳಿಗೆ 2 ಲಕ್ಷವಾದರೆ ಶೇ.50 %ರಂತೆ 1 ಲಕ್ಷ ರೂಪಾಯಿ ಸಹಾಯಧನ ಸಿಗಲಿದೆ. 3 ಹೆಚ್‌ಪಿ ಸೋಲಾರ್‌ ಗಿಂತ ಮೇಲ್ಪಟ್ಟ ಸೋಲಾರ್‌ ಪಂಪ್‌ಸೆಟ್‌ಗಳಿಗೆ 3 ಲಕ್ಷ ಖರ್ಚಿಗೆ 1.5ಲಕ್ಷ ರೂಪಾಯಿ ಸಹಾಯಧನ ದೊರೆಯಲಿದೆ. ಕುಸುಮ್ ಬಿ ಯೋಜನೆಯಡಿ ಜಾಲ ಮುಕ್ತ ಸೌರ ಕೃಷಿ ಪಂಪ್ಸೆಟ್ ಅಳವಡಿಸಲು ಒತ್ತು ನೀಡಿ ರಾಜ್ಯ…

Read More

ನವದೆಹಲಿ : ಮಕ್ಕಳ ವೈಯಕ್ತಿಕ ಡೇಟಾವನ್ನ ಸಂಸ್ಕರಿಸುವ ಮೊದಲು ಪೋಷಕರ ಒಪ್ಪಿಗೆಯನ್ನ ಪಡೆಯಬೇಕು ಎಂದು ಹೇಳುವ ಡಿಜಿಟಲ್ ವೈಯಕ್ತಿಕ ಡೇಟಾ ಸಂರಕ್ಷಣಾ ನಿಯಮಗಳ ಬಹುನಿರೀಕ್ಷಿತ ಕರಡನ್ನು ಕೇಂದ್ರ ಸರ್ಕಾರ ಶುಕ್ರವಾರ ಬಿಡುಗಡೆ ಮಾಡಿದೆ. ಹೌದು, ಬಿಡುಗಡೆಯಾದ ಡಿಜಿಟಲ್ ವೈಯಕ್ತಿಕ ಡೇಟಾ ಸಂರಕ್ಷಣಾ ನಿಯಮಗಳ ಕರಡು, 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಈಗ ಸಾಮಾಜಿಕ ಮಾಧ್ಯಮ ಖಾತೆಗಳನ್ನು ರಚಿಸಲು ಪೋಷಕರ ಒಪ್ಪಿಗೆ ಅಗತ್ಯವಿದೆ ಎಂದು ಹೇಳುತ್ತದೆ. ಡಿಪಿಡಿಪಿ ನಿಯಮಗಳ ಬಹುನಿರೀಕ್ಷಿತ ಕರಡು “ಮಕ್ಕಳ ವೈಯಕ್ತಿಕ ಡೇಟಾವನ್ನು ಸಂಸ್ಕರಿಸುವ ಮೊದಲು ಡೇಟಾ ಸಂಗ್ರಹಿಸುವ ಘಟಕದಿಂದ ಪೋಷಕರ ಪರಿಶೀಲಿಸಬಹುದಾದ ಒಪ್ಪಿಗೆಯನ್ನು ಪಡೆಯಬೇಕು” ಎಂದು ಹೇಳುತ್ತದೆ. ಆದಾಗ್ಯೂ, ಉಲ್ಲಂಘನೆಗಾಗಿ ಯಾವುದೇ ದಂಡನಾತ್ಮಕ ಕ್ರಮವನ್ನು ಕರಡು ಉಲ್ಲೇಖಿಸಿಲ್ಲ ಎಂದು ವರದಿಯಾಗಿದೆ. “ಡಿಜಿಟಲ್ ವೈಯಕ್ತಿಕ ಡೇಟಾ ಸಂರಕ್ಷಣಾ ಕಾಯ್ದೆ, 2023 (2023 ರ 22) ರ ಸೆಕ್ಷನ್ 40 ರ ಉಪ-ವಿಭಾಗಗಳು (1) ಮತ್ತು (2) ರ ಅಡಿಯಲ್ಲಿ ನೀಡಲಾದ ಅಧಿಕಾರಗಳನ್ನು ಚಲಾಯಿಸಲು ಕೇಂದ್ರ ಸರ್ಕಾರ ಮಾಡಲು ಉದ್ದೇಶಿಸಿರುವ…

Read More

ನವದೆಹಲಿ : ಆಸ್ತಿ ವರ್ಗಾವಣೆಗೊಂಡ ಬಳಿಕ ತಂದೆ, ತಾಯಿಯನ್ನು ನೋಡಿಕೊಳ್ಳದ ಮಕ್ಕಳು ತಮಗೆ ನೀಡಿರುವ ಆಸ್ತಿಯನ್ನು ವಾಪಸ್ ಕೊಡಬೇಕು ಎಂದು ಸುಪ್ರೀಂಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಮಕ್ಕಳಿಗೆ ಪೋಷಕರ ಆಸ್ತಿ ಮತ್ತು ಇತರ ಉಡುಗೊರೆಗಳನ್ನು ನೀಡಿದ ನಂತರ, ಅವರು ಪೋಷಕರನ್ನು ನೋಡಿಕೊಳ್ಳಬೇಕು, ಅವರ ಅಗತ್ಯಗಳನ್ನು ಪೂರೈಸಬೇಕು ಮತ್ತು ಮಕ್ಕಳು ಈ ಕೆಲಸಗಳನ್ನು ಮಾಡದಿದ್ದರೆ ಮತ್ತು ತಾಯಿ – ತಂದೆ ಒಬ್ಬಂಟಿಯಾಗಿದ್ದರೆ, ಅವನ ಎಲ್ಲಾ ಆಸ್ತಿ ಮತ್ತು ಇತರ ಉಡುಗೊರೆಗಳನ್ನು ಅವನಿಂದ ಹಿಂತಿರುಗಿಸಲಾಗುತ್ತದೆ ಎಂದು ಕೋರ್ಟ್ ಹೇಳಿದೆ. ಆಸ್ತಿಯನ್ನು ಉಡುಗೊರೆ ರೂಪದಲ್ಲಿ ಮಗನಿಗೆ ನೀಡಿದ್ದ ಆಸ್ತಿ ವರ್ಗಾವಣೆಯನ್ನು ರದ್ದುಪಡಿಸಿದ ಸುಪ್ರೀಂ ಕೋರ್ಟ್, ತಾಯಿಗೆ ಆಸ್ತಿಯನ್ನು ಹಿಂದಿರುಗಿಸುವಂತೆ ಆದೇಶಿಸಿದೆ. ಆಸ್ತಿ ಪಡೆದ ನಂತರ ಮಗ ಪೋಷಕರೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಲಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸಿ.ಟಿ.ರವಿಕುಮಾರ್ ಮತ್ತು ಸಂಜಯ್ ಕರೋಲ್ ಅವರ ಪೀಠ, ಮಕ್ಕಳು ತಮ್ಮ ಜವಾಬ್ದಾರಿಗಳನ್ನು ಪೂರೈಸಲು ವಿಫಲವಾದರೆ, ಪಾಲಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆ,…

Read More

ಕಲಬುರ್ಗಿ: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಸಂಬಂಧ ಸಚಿವ ಪ್ರಿಯಾಂಕ್ ಖರ್ಗೆ ಆಪ್ತನ ವಿರುದ್ಧ ಈಗಾಗಲೇ ಎಫ್ಐಆರ್ ದಾಖಲಾಗಿತ್ತು. ಈ ಪ್ರಕರಣವನ್ನು ಸಿಐಡಿ ತನಿಖೆ ನಡೆಸುತ್ತಿದೆ. ಈ ಬೆನ್ನಲ್ಲೇ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಬ್ಬ ಆಪ್ತ ಸೇರಿ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕಲಬುರ್ಗಿಯಲ್ಲಿ ಆರ್ ಟಿ ಐ ಕಾರ್ಯಕರ್ತ ಸಿದ್ರಮಯ್ಯ ಎಂಬುವರು ನೀಡಿದಂತ ದೂರಿನ ಹಿನ್ನಲೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜೀವ್ ಜಾನೆ ಎಂಬಾತ ಸೇರಿದಂತೆ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಆರ್ ಟಿ ಐ ಕಾರ್ಯಕರ್ತ ಸಿದ್ರಾಮಯ್ಯ ಹಿರೇಮಠ ಎಂಬುವರು ಕಲಬುರ್ಗಿಯ ಸ್ಟೇಷನ್ ಬಜಾರ್ ಠಾಣೆಗೆ ದೂರು ನೀಡಿದ್ದರು. ಅವರು ನೀಡಿದಂತ ದೂರಿನಲ್ಲಿ ಕೊಲೆ ಸಂಚು ರೂಪಿಸಿದ ಆರೋಪ ಮಾಡಿದ್ದರು. ಈ ಹಿನ್ನಲೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜೀವ್ ಜಾನೆ, ಖಾಸಗಿ ವಾಹಿನಿಯ ವರದಿಗಾರ ಹಾಗೂ ಸಂಜು ಆಲಿಯಾಸ್ ಶಾಹೀರ್ ಪಾಟೀಲ್ ವಿರುದ್ಧ ಎಫ್ಐಆರ್ ದಾಖಲಾಗಿದೆ.

Read More

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, 2025ರಲ್ಲಿ ನಡೆಯಲಿರುವ ವಿವಿಧ ಹುದ್ದೆಗಳ ಪರೀಕ್ಷೆಗಳ ವಿವರವನ್ನು ಪ್ರಕಟಿಸಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಈ ಕೆಳಕಂಡ ಇಲಾಖೆಗಳ/ನಿಗಮ/ಸಂಸ್ಥೆಗಳ ವಿವಿಧ ಹುದ್ದೆಗಳ ನೇಮಕಾತಿಗಾಗಿ ಸಂಕ್ಷಿಪ್ತ ಅಧಿಸೂಚನೆಯನ್ನು ಹೊರಡಿಸಿ ವಿವರವಾದ ಅಧಿಸೂಚನೆಯನ್ನು ನಂತರ ಹೊರಡಿಸಲಾಗುವುದೆಂದು ತಿಳಿಸಲಾಗಿತ್ತು. ಈ ಕೆಳಕಂಡ ಕಾರಣಗಳಿಂದಾಗಿ ವಿವರವಾದ ಅಧಿಸೂಚನೆ ಹೊರಡಿಸಲು ಸಾಧ್ಯವಾಗಿರುವುದಿಲ್ಲ. * ಇಲಾಖೆಗಳಲ್ಲಿನ ಕೆಲವು ಹುದ್ದೆಗಳ ಮೀಸಲಾತಿ/ವರ್ಗಿಕರಣವನ್ನು ಪರಿಷ್ಕರಿಸಲು ಇಲಾಖೆಯು ಕೋರಿದ್ದರಿಂದ. ವಿವರವಾದ ಅಧಿಸೂಚನೆಯಲ್ಲಿನ ನಿಬಂಧನೆಗಳಲ್ಲಿ ಕೆಲವು ಪರಿಷ್ಕರಣೆ ಮಾಡಲು ಇಲಾಖೆಯು ಕೋರಿದ್ದರಿಂದ. * ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯಿಂದ ಅನುಮತಿ ಪಡೆಯುವ ಸಂಬಂಧ ಇಲಾಖೆಯು ತಡೆಹಿಡಿಯಲು ವಿನಂತಿಸಿದ್ದರಿಂದ. ಪ್ರಸ್ತುತ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವಿಧ ಇಲಾಖೆಗಳಿಂದ ನೇಮಕಾತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲು ಸ್ವೀಕರಿಸಿರುವ ಪ್ರಸ್ತಾವನೆಗಳು ಈ ಕೆಳಗಿನಂತಿವೆ.

Read More

ನವದೆಹಲಿ : ವಂದೇ ಭಾರತ್ ರೈಲಿನ ಸ್ಲೀಪರ್ ಕೋಚ್ ನ ಪ್ರಾಯೋಗಿಕ ಪರೀಕ್ಷೆ ವೇಳೆ ವಂದೇ ಭಾರತ್ ರೈಲು 180 ಕಿ.ಮೀ.ವೇಗದಲ್ಲಿ ಚಲಿಸಿ ದಾಖಲೆ ಬರೆದಿದೆ. ಹೊಸ ವರ್ಷದ ಆರಂಭದೊಂದಿಗೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೇ ಹಲವು ಉಡುಗೊರೆಗಳನ್ನು ನೀಡಲು ಹೊರಟಿದೆ. ಕಡಿಮೆ ಮತ್ತು ಮಧ್ಯಮ ದೂರದ ರೈಲುಗಳಲ್ಲಿ ವೇಗದ, ಸುರಕ್ಷಿತ ಮತ್ತು ವಿಶ್ವ ದರ್ಜೆಯ ಪ್ರಯಾಣದ ಅನುಭವವನ್ನು ಒದಗಿಸಿದ ನಂತರ, ಭಾರತೀಯ ರೈಲ್ವೇ ಈಗ ದೂರದ ರೈಲುಗಳಲ್ಲಿಯೂ ಸಹ ಅದನ್ನು ರಿಯಾಲಿಟಿ ಮಾಡಲು ಹೊರಟಿದೆ. ವಾಸ್ತವವಾಗಿ, ವಂದೇ ಭಾರತ್ ಸ್ಲೀಪರ್ ರೈಲು ಕಳೆದ ಮೂರು ದಿನಗಳಲ್ಲಿ ಹಲವಾರು ಪ್ರಾಯೋಗಿಕ ರನ್‌ಗಳಲ್ಲಿ ಗಂಟೆಗೆ 180 ಕಿಮೀ ವೇಗವನ್ನು ಸಾಧಿಸಿದೆ. ಈ ವಿಚಾರಣೆ ಈ ತಿಂಗಳ ಅಂತ್ಯದವರೆಗೆ ನಡೆಯಲಿದೆ. ಇದಾದ ನಂತರ ಈ ರೈಲು ದೂರದ ಪ್ರಯಾಣಕ್ಕೆ ರೈಲ್ವೆ ಪ್ರಯಾಣಿಕರಿಗೆ ಲಭ್ಯವಾಗಲಿದೆ. ವಂದೇ ಭಾರತ್ ಸ್ಲೀಪರ್ ರೈಲು ರಾಜಸ್ಥಾನದ 40 ಕಿ.ಮೀ ಉದ್ದದ ಮಾರ್ಗದಲ್ಲಿ ಕಳೆದ ಮೂರು ದಿನಗಳಿಂದ ನಡೆಸಿದ ಹಲವು ಪ್ರಯೋಗಗಳಲ್ಲಿ ಗಂಟೆಗೆ…

Read More

ಬೆಂಗಳೂರು: ರಾಜ್ಯ ಸರಕಾರದ ಎಲ್ಲಾಅಧಿಕಾರಿ ಹಾಗೂ ನೌಕರರ ಆಸ್ತಿ ವಿವರಗಳ ಮಾಹಿತಿ ನೀಡಬೇಕು. ಜತೆಗೆ, ಸರ್ಕಾರಿ ವೆಬ್‌ಸೈಟ್‌ಗಳಲ್ಲಿ ಪ್ರಕಟಿಸಲು ಕ್ರಮ ವಹಿಸಲು ಇಲಾಖಾ ಮುಖ್ಯಸ್ಥರಿಗೆ ನಿರ್ದೇಶಿಸಬೇಕು ಎಂದು ಲೋಕಾಯುಕ್ತದಿಂದ ರಾಜ್ಯ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ಡಿಸೆಂಬರ್ 18ರಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಲೋಕಾಯುಕ್ತ ರಿಜಿಸ್ಟ್ರಾರ್ ಎಂ. ಚಂದ್ರಶೇಖರ್ ರೆಡ್ಡಿ ಪತ್ರ ಬರೆದಿದ್ದು, ಘೋಷಿತ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ಸರ್ಕಾರಿ ನೌಕರರು, ಅಧಿಕಾರಿಗಳು ವಿರುದ್ಧ ಲೋಕಾಯುಕ್ತ ಪೊಲೀಸರು ತನಿಖೆ ಆರಂಭಿಸಿದಾಗ ಸಂಬಂಧಿಸಿದ ಇಲಾಖೆಗಳು ಸಕಾಲಕ್ಕೆ ಮಾಹಿತಿ ಒದಗಿಸುವುದಿಲ್ಲ. ಕೆಲವೊಮ್ಮೆ ಸತಾಯಿಸುವದರಿಂದ ತನಿಖೆಗೆ ಅಡಚಣೆಯಾಗುತ್ತಿದೆ. ಇದನ್ನು ತಪ್ಪಿಸಲು ಡಿಜಿಟಲ್ ಸ್ವರೂಪದಲ್ಲಿ ಆಸ್ತಿ ವಿವರ ಸಲ್ಲಿಸುವ ಕ್ರಮ ಕಡ್ಡಾಯಗೊಳಿಸಬೇಕು. ಆ ಮಾಹಿತಿ ಸಾರ್ವಜನಿಕರಿಗೆ ಲಭ್ಯವಾಗದಂತೆ ರಕ್ಷಣಾ ಕ್ರಮ ಕೈಗೊಂಡು ಲೋಕಾಯುಕ್ತರ ಜೊತೆ ಹಂಚಿಕೊಳ್ಳಬೇಕು ಎಂದು ತಿಳಿಸಲಾಗಿದೆ. ರಾಜ್ಯ ಸರ್ಕಾರಿ ನೌಕರರು ಹಾಗೂ ಅಖಿಲ ಭಾರತ ಸೇವೆಗಳ ನಿಯಮಗಳು 1968ರ (16) ಅನ್ವಯ ಸರ್ಕಾರಿ ನೌಕರರು ನೇಮಕಾತಿ ಹೊಂದಿದ…

Read More