Subscribe to Updates
Get the latest creative news from FooBar about art, design and business.
Author: kannadanewsnow57
ಮೈಸೂರು : ದಸರಾ ಹಿನ್ನೆಲೆಯಲ್ಲಿ ಮೈಸೂರಿಗೆ ವಲಸೆ ಬಂದಿದ್ದ 10 ವರ್ಷದ ಬಾಲಕಿಯನ್ನು ಅಮಾನುಷವಾಗಿ ಅತ್ಯಾಚಾರವೆಸಗಿ ಭೀಕರವಾಗಿ ಹತ್ಯೆ ಮಾಡಿದ್ದ ದುಷ್ಕರ್ಮಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಿಸಿ ಕ್ಯಾಮರಾ ದೃಶ್ಯದ ಸುಳಿವಿನ ಮೇಲೆ ಕಾರಾಚರಣೆ ಕೈಗೊಂಡ ಪೊಲೀಸರು ಕೊಳ್ಳೇಗಾಲದಲ್ಲಿ ಆರೋಪಿ ಕಾರ್ತಿಕ್ನನ್ನು ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ. ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ಕುಟುಂಬ ಬಲೂನ್ ವ್ಯಾಪಾರಕ್ಕಾಗಿ ಕಲಬುರಗಿಯಿಂದ ಮೈಸೂರಿಗೆ ಬಂದಿದ್ದವು. ಇವರೆಲ್ಲರೂ ಮೈಸೂರು ಅರಮನೆ ಮುಂಭಾಗದ ದೊಡ್ಡಕೆರೆ ಮೈದಾನದ ಬಯಲಿನಲ್ಲಿ ತಂಗಿದ್ದರು. ಚಾಮುಂಡಿಬೆಟ್ಟ, ದಸರಾ ವಸ್ತುಪ್ರದರ್ಶನ, ದೇವರಾಜ ಮಾರುಕಟ್ಟೆ ಸೇರಿ ಹಲವು ಸ್ಥಳಗಳಲ್ಲಿ ಬಲೂನ್ ಮಾರುತ್ತಿದ್ದರು. ಬುಧವಾರ ರಾತ್ರಿ ಸುಮಾರು 12 ಗಂಟೆ ಹೊತ್ತಿಗೆ ವ್ಯಾಪಾರ ಮುಗಿಸಿಕೊಂಡು ಬಂದಿದ್ದ ಬಾಲಕಿ, ಪಾಲಕರೊಂದಿಗೆ ಮಲಗಿದ್ದಳು. ಮಧ್ಯರಾತ್ರಿ ವೇಳೆ ಸ್ಥಳಕ್ಕೆ ಬಂದ ದುಷ್ಕರ್ಮಿ ಸ್ಥಳದಿಂದ ಅಪಹರಿಸಿದ್ದಾನೆ. ದೊಡ್ಡ ಮೋರಿಯ ಬಳಿ ಎತ್ತಿಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ. ನಂತರ ಬಾಲಕಿಯ ಶವವನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾನೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಕೆ.ಆರ್.ಆಸ್ಪತ್ರೆ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ…
ಬೆಂಗಳೂರು: 2026ರ ಮಾರ್ಚ್/ಏಪ್ರಿಲ್ನಲ್ಲಿ ನಡೆಯಲಿರುವ ಎಸ್ ಎಸ್ ಎಲ್ ಸಿ ಪರೀಕ್ಷೆ-1ಕ್ಕೆ ನೋಂದಣಿಗಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಮಾರ್ಗಸೂಚಿ ಬಿಡುಗಡೆ ಮಾಡಿದೆ. ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ‘ಶಾಲಾ ವಿದ್ಯಾರ್ಥಿ’ಗಳನ್ನು ನೋಂದಾಯಿಸಲು ಅರ್ಜಿಗಳನ್ನು ಆಹ್ವಾನಿಸಿದೆ. ಶಾಲೆಗಳ ಮುಖ್ಯ ಶಿಕ್ಷಕರು ವಿದ್ಯಾರ್ಥಿಗಳ ಮಾಡುವಂತೆ ತಿಳಿಸಿದೆ. ಪ್ರಥಮ ಬಾರಿಗೆ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ 710 ರೂ. ಶುಲ್ಕ ನಿಗದಿಪಡಿಸಲಾಗಿದೆ. ಬಾಲಕಿಯರು, ಪರಿಶಿಷ್ಟರು, ಆದಾಯಮಿತಿಗೆ ಒಳಪಟ್ಟು ವಿವಿಧ ಪ್ರವರ್ಗಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಪರೀಕ್ಷೆಗೆ ಹಾಜರಾಗಲು ಶೇ.75 ಹಾಜರಾತಿ ಹೊಂದಿರುವುದು ಕಡ್ಡಾಯವಾಗಿದೆ. 2026ರ ಮಾರ್ಚ್/ಏಪ್ರಿಲ್ ಮಾಹೆಯಲ್ಲಿ ನಡೆಯಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆ-1ಕ್ಕೆ ರಾಜ್ಯದ ಸರ್ಕಾರಿ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಅನುದಾನಿತ, ಅನುದಾನರಹಿತ ಪ್ರೌಢ ಶಾಲಾ/ ಕಾಲೇಜುಗಳಿಂದ (ಪ್ರೌಢ ಶಾಲಾ ವಿಭಾಗ) ಹಾಜರಾಗುವ ಅರ್ಹ ಶಾಲಾ ವಿದ್ಯಾರ್ಥಿಗಳನ್ನು ನೋಂದಾಯಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸದರಿ ಶಾಲೆಗಳ ಮುಖ್ಯ ಶಿಕ್ಷಕರು ತಮ್ಮ ಶಾಲೆಯಿಂದ 2026ರ ಎಸ್.ಎಸ್.ಎಲ್.ಸಿ ಪರೀಕ್ಷೆ-1ಕ್ಕೆ ಹಾಜರಾಗುವ ಅರ್ಹ ಶಾಲಾ ವಿದ್ಯಾರ್ಥಿಗಳ (CCERF)…
ಮಾನ್ವಿ: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಅಪ್ರಾಪ್ತ ಬಾಲಕಿ ಮೇಲೆ ಮೂವರು ಕಾಮುಕರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನಲ್ಲಿ ನಡೆದಿದೆ. ತಾಲ್ಲೂಕಿನಲ್ಲಿರುವ ಗ್ರಾಮವೊಂದರಲ್ಲಿ ಮೂವರು ಅತ್ಯಾಚಾರ ನಡೆಸಿದ್ದರಿಂದ ಬಾಲಕಿ ಗರ್ಭಿಣಿಯಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅನಾರೋಗ್ಯ ಹಿನ್ನೆಲೆ ಪಾಲಕರು ಆಸ್ಪತ್ರೆಗೆ ಕರೆದೊಯ್ದಾಗ ವೈದ್ಯರು ಈ ಸಂಗತಿ ತಿಳಿಸಿದ್ದಾರೆ. ಪೋಷಕರು ಬಾಲಕಿಯನ್ನು ವಿಚಾರಿಸಿದಾಗ, ಗ್ರಾಮದ ಬಸ್ ನಿಲ್ದಾಣದಲ್ಲಿ ನಿಂತಿದ್ದಾಗ ಮೂವರು ಮುಸುಕುಧಾರಿಗಳು ಗುಡ್ಡಕ್ಕೆ ಕರೆದೊಯ್ದು ಅತ್ಯಾಚಾರ ಮಾಡಿದ್ದಾರೆ. ವಿಷಯ ಬಹಿರಂಗ ಮಾಡಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರು ಎಂದಿದ್ದಾಳೆ. ಘಟನೆ ಸಂಬಂಧ ಮಾನ್ವಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಚಿನ್ನದ ಬೆಲೆ ಗಗನಕ್ಕೇರಿದ್ದು, ಚಿನ್ನ ಖರೀದಿಸುವವರ ಸಂಖ್ಯೆಯೂ ಹೆಚ್ಚಾಗಿದೆ. ಹೀಗಾಗಿ ಚಿನ್ನ ಖರೀದಿಸುವಾಗ ಎಚ್ಚರಿಕೆಯಿಂದ ಖರೀದಿಸುವುದ ಅಗತ್ಯ. ಚಿನ್ನ ಖರೀದಿಸುವಾಗ ಎಂದಿಗೂ ಈ 5 ತಪ್ಪುಗಳನ್ನು ಮಾಡಬೇಡಿ. BIS ಹಾಲ್ಮಾರ್ಕ್ ನೀವು ಖರೀದಿಸುವ ಚಿನ್ನವು ಅಸಲಿಯೋ ಅಲ್ಲವೋ ಎಂದು ಹೇಳುವ ಏಕೈಕ ವಿಷಯವೆಂದರೆ BIS ಹಾಲ್ಮಾರ್ಕ್. ನೀವು ಖರೀದಿಸುವ ಪ್ರತಿಯೊಂದು ತುಂಡಿನ ಮೇಲೂ BIS ಲೋಗೋ, ಶುದ್ಧತೆ ಸಂಖ್ಯೆ ಮತ್ತು 6-ಅಂಕಿಯ HUID ಕೋಡ್ ಇದೆಯೇ ಎಂದು ಪರಿಶೀಲಿಸಿ. ಈ ಹಾಲ್ಮಾರ್ಕ್ ಇಲ್ಲದೆ ಎಂದಿಗೂ ಚಿನ್ನವನ್ನು ಖರೀದಿಸಬೇಡಿ. ಚಿನ್ನದ ಬೆಲೆ ಮತ್ತು ಅದರ ಶುದ್ಧತೆಯು ಕ್ಯಾರೆಟ್ ಅನ್ನು ಅವಲಂಬಿಸಿರುತ್ತದೆ. 24K ಎಂದರೆ ಶುದ್ಧ ಚಿನ್ನ. ಇದು ತುಂಬಾ ಮೃದುವಾಗಿರುತ್ತದೆ. ಅದಕ್ಕಾಗಿಯೇ ಇದನ್ನು ಆಭರಣಗಳಿಗೆ ಬಳಸಲಾಗುವುದಿಲ್ಲ. ಆಭರಣಗಳು ಮತ್ತು ಆಭರಣಗಳನ್ನು ತಯಾರಿಸಲು 22K ಚಿನ್ನವನ್ನು ಅತ್ಯುತ್ತಮವೆಂದು ಹೇಳಲಾಗುತ್ತದೆ. ಬಾಳಿಕೆಗಾಗಿ 18K ಚಿನ್ನಕ್ಕೆ ಇತರ ಲೋಹಗಳನ್ನು ಸೇರಿಸಲಾಗುತ್ತದೆ. ಆಭರಣಗಳನ್ನು ಖರೀದಿಸುವಾಗ ಇವುಗಳ ಬಗ್ಗೆ ಎಚ್ಚರಿಕೆಯಿಂದ ಕೇಳಿ. ಉತ್ಪಾದನಾ ಶುಲ್ಕಗಳು…
ನವದೆಹಲಿ : ದೆಹಲಿಯಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ದೆಹಲಿಯ ತೀಸ್ ಹಜಾರಿ ನ್ಯಾಯಾಲಯದಲ್ಲಿ ದೆಹಲಿ ಪೊಲೀಸ್ ಎಎಸ್ಐ ಒಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದರು. ಅವರನ್ನು ದೆಹಲಿ ಪೊಲೀಸ್ ಭದ್ರತಾ ವಿಭಾಗದಲ್ಲಿ ನಿಯೋಜಿಸಲಾಗಿತ್ತು. ಈ ವೀಡಿಯೊವನ್ನು ನೋಡುವುದರಿಂದ ಪ್ರಯಾಣದಲ್ಲಿರುವ ಯಾರಿಗಾದರೂ ಸಾವು ಸಂಭವಿಸಬಹುದು ಎಂದು ನಿಮಗೆ ಮನವರಿಕೆಯಾಗುತ್ತದೆ. ತೀಸ್ ಹಜಾರಿ ನ್ಯಾಯಾಲಯದಲ್ಲಿ ಎಎಸ್ಐ ಕರ್ತವ್ಯದಲ್ಲಿದ್ದರು. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಹೊರಬಂದಿವೆ. ಎಸ್ಕಲೇಟರ್ ಏರುವ ಮೊದಲೇ ಎಎಸ್ಐ ಪ್ರಜ್ಞಾಹೀನರಾಗಿ ನೆಲಕ್ಕೆ ಬಿದ್ದರು. ಅಕ್ಟೋಬರ್ 6 ರಂದು ಬೆಳಿಗ್ಗೆ 9:15 ರ ಸುಮಾರಿಗೆ ಈ ಘಟನೆ ಸಂಭವಿಸಿದೆ. https://twitter.com/iAtulKrishan1/status/1975935177772937253?ref_src=twsrc%5Etfw%7Ctwcamp%5Etweetembed%7Ctwterm%5E1975935177772937253%7Ctwgr%5Ef2c81ae08f5d5ff6d18857a224c0afb43dc850d7%7Ctwcon%5Es1_c10&ref_url=https%3A%2F%2Fkalingatv.com%2Fnation%2Fdelhi-police-asi-dies-of-heart-attack-at-tis-hazari-court-cctv-footage-goes-viral%2F
ಬೆಂಗಳೂರು: ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಪ್ರೇಮಿಗಳಿಬ್ಬರು ಲಾಡ್ಜ್ನಲ್ಲಿ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಶರಣಾದ ಪರಿಣಾಮ ರೆಸ್ಟೋರೆಂಟ್ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಬೆಂಗಳೂರಿನ ಯಲಹಂಕ ನ್ಯೂ ಟೌನ್ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅಗ್ನಿ ದುರಂತದಲ್ಲಿ ಗದಗ ಮೂಲದ ರಮೇಶ್ ಮತ್ತು ಕಾವೇರಿ ಸಾವನ್ನಪ್ಪಿದ್ದಾರೆ. ಮೃತಪಟ್ಟ ಪ್ರೇಮಿಗಳಿಬ್ಬರು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಇಬ್ಬರೂ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಕಿಚನ್-6 ಫ್ಯಾಮಿಲಿ ರೆಸ್ಟೋರೆಂಟ್ ಕಟ್ಟಡದ ಮೂರನೇ ಮಹಡಿಯಲ್ಲಿರುವ ಲಾಡ್ಜ್ಗೆ ಬಂದಿದ್ದರು. ಲಾಡ್ಜ್ನಲ್ಲಿ ಕೊಠಡಿ ಪಡೆದ ಕೆಲವೇ ಸಮಯದಲ್ಲಿ, ಪೆಟ್ರೋಲ್ ತಂದು ತಮ್ಮ ಮೈ ಮೇಲೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ. ಸದ್ಯ ಯಲಹಂಕ ನ್ಯೂ ಟೌನ್ ಪೊಲೀಸರು ತನಿಖೆ ಕೈಗೊಂಡಿದ್ದು, ಇದು ಆತ್ಮಹತ್ಯೆ ನಾ ಅಥವಾ ಬೆಂಕಿಯ ಅವಘಡ ದಿಂದ ನಡೆದಿರೋದಾ ಅನ್ನೋದು ತಿಳಿದುಬರಬೇಕಿದೆ.
ಮಂಗಳೂರು : ರಾಜ್ಯ ಸರ್ಕಾರವು ಕಂಬಳ ಕ್ರೀಡೆಗೆ ಅಧಿಕೃತ ಮಾನ್ಯತೆ ನೀಡಿದ್ದು, ಕರ್ನಾಟಕ ಕ್ರೀಡಾ ಪ್ರಾಧಿಕಾರದಡಿ ‘ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಷನ್’ ರಚಿನೆಗೆ ಗ್ರೀನ್ ಸಿಗ್ನಲ್ ನೀಡಿದೆ. ರಾಜ್ಯ ಕಂಬಳ ಅಸೋಸಿಯೇಷನ್ಗೆ ಮೂರು ವರ್ಷದ ಅವಧಿ ಅಥವಾ ಮುಂದಿನ ಆದೇಶದವರೆಗೆ ಮಾನ್ಯತೆ ನೀಡಲಾಗಿದೆ. ಕ್ರೀಡಾ ಇಲಾಖೆ ಪ್ರಧಾನ ಕಾರ್ಯದರ್ಶಿ ನೇತೃತ್ವದಲ್ಲಿ ಅ.15ರಂದು ಮೊದಲ ಸಭೆ ಬೆಂಗಳೂರಿನಲ್ಲಿ ನಡೆಯಲಿದೆ. ಈ ಸಭೆಯಲ್ಲಿ ಕಂಬಳ ಅಸೋಸಿಯೇಷನ್ನ ಬೈಲಾದ ಕರಡು ಪ್ರತಿ ಅನುಮೋದನೆ ಸಿಗಲಿದೆ. ಅಸೋಸಿಯೇಷನ್ ಪ್ರತಿವರ್ಷಜೂ.30ರೊಳಗೆ ಕಾರ್ಯಚಟುವಟಿಕೆಗಳ ಆಡಳಿತ ವರದಿ, ವಾರ್ಷಿಕ ವಹಿವಾಟುವಿನ ಆಡಿಟ್ ವರದಿ, ವಾರ್ಷಿಕ ಸಾಮಾನ್ಯ ಸಮಿತಿ ಮತ್ತು ಕಾರ್ಯಕಾರಿ ಸಮಿತಿ ಸಭೆಗಳ ನಡವಳಿ ಪ್ರತಿ, ಕ್ಯಾಲೆಂಡರ್ ಆಫ್ ಇವೆಂಟ್, ಸಂಘಗಳ ನೋಂದಣಿ ಕಾಯಿದೆ 1960ರಡಿ ಸಕ್ಷಮ ಪ್ರಾಧಿಕಾರದಿಂದ ರಾಜ್ಯ ಕಂಬಳ ಅಸೋಸಿಯೇಷನ್ ನವೀಕರಿಸಿರುವ ಪ್ರತಿ ಒದಗಿಸಲು ಆದೇಶದಲ್ಲಿ ತಿಳಿಸಲಾಗಿದೆ. ಸಂಸ್ಥೆಯ ಅಧ್ಯಕ್ಷರಾಗಿ ಬೆಳಪು ದೇವಿಪ್ರಸಾದ್ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ.
ಕೋಲಾರ : ಹೊಸ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿ ರಾಜ್ಯದ ಜನತೆಗೆ ಭರ್ಜರಿ ಸಿಹಿಸುದ್ದಿ ಸಿಕ್ಕಿದ್ದು, ಶೀಘ್ರವೇ ಹೊಸ ಬಿಪಿಎಲ್ ಕಾರ್ಡ್ ವಿತರಿಸಲಾಗುವುದು ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಭರವಸೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, . ಕಳೆದ ಎರಡು ವರ್ಷಗಳಿಂದ ಬಿಪಿಎಲ್ ಕಾರ್ಡ್ಗಾಗಿ ಕಾಯುತ್ತಿರುವವರಿಗೆ ಶೀಘ್ರದಲ್ಲೇ ವಿತರಿಸಲಾಗುವುದು, ಅರ್ಹತೆ ಇಲ್ಲದವರನ್ನು ಎಪಿಎಲ್ ಪಟ್ಟಿಗೆ ಸೇರಿಸುವ ಕೆಲಸ ನಡೆಯುತ್ತಿದೆ. ಅರ್ಹತೆ ಇರುವ ಎಲ್ಲರಿಗೂ ಬಿಪಿಎಲ್ ಕಾರ್ಡ್ಗಳನ್ನು ವಿತರಿಸಲಾಗುವುದು ಎಂದು ಹೇಳಿದರು. ಸದ್ಯ ಆಹಾರ ಇಲಾಖೆಯಿಂದ ಕರ್ನಾಟಕದೆಲ್ಲೆಡೆ ಅಕ್ರಮ ಬಿಪಿಎಲ್ ಕಾರ್ಡ್ ಪತ್ತೆ ಕಾರ್ಯ ನಡೆಯುತ್ತಿದೆ. ಅರ್ಹರೆ ಇಲ್ಲದೇ ಇದ್ದರೂ ಬಿಪಿಎಲ್ ಕಾರ್ಡ್ ಹೊಂಡಿದ್ದರೆ ಅಂತಹವರನ್ನು ಪತ್ತೆ ಮಾಡಿ ಅವರ ಕಾರ್ಡ್ ಅನ್ನು ಎಪಿಎಲ್ಗೆ ಬದಲಾವಣೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರು : ರೈತರ ಅನುಕೂಲಕ್ಕಾಗಿ ಆಯಾ ಊರಿನ ವ್ಯಾಪ್ತಿಯ ಪೋಡಿ ನಕ್ಷೆಯನ್ನು ಆನ್ ಲೈನ್ ನಲ್ಲಿ ಡೌನ್ ಲೋಡ್ ಮಾಡಲು ರಾಜ್ಯ ಸರ್ಕಾರವು ಅವಕಾಶ ನೀಡಲಾಗುತ್ತಿದೆ. ನೀವು ಪೋಡಿ ನಕ್ಷೆಯನ್ನು ಕುಳಿತಲ್ಲೇ ಡೌನ್ ಲೋಡ್ ಮಾಡಿಕೊಳ್ಳಲು ಮುಂದಿನ ಹಂತಗಳನ್ನು ಅನುಸರಿಸಿ. ಡಿಜಿಟಲ್ ಆ್ಯಪ್ ಮುಖಾಂತರ ಮಾಡುವುದರಿಂದ ಸರಳ, ವೇಗವಾಗಿ ಕಡತಗಳನ್ನು ತಯಾರಿಸಬಹುದು. ಯಾರ ಬಳಿ ವಿಳಂಬವಾಗಿದೆ ಎಂಬುದು ಪಾರದರ್ಶಕವಿರುವುದರಿಂದ, ವೇಗವಾಗಿ ಕೆಲಸವಾಗಬಹುದು. ಮೂಲ ಮಂಜೂರಿ ದಾಖಲೆಗಳನ್ನು ಸುರಕ್ಷಿತವಾಗಿಡಬಹುದು. ಮುಂದೆ ತಿದ್ದಲು, ನಕಲು ಮಾಡಲು ಸಾಧ್ಯವಿಲ್ಲ. ಒಬ್ಬ ರೈತನಿಗೆ ತಯಾರು ಮಾಡಿದ 1-5 (ನಮೂನೆ)ಕಡತ, ಆ ಸರ್ವೆ ನಂಬರಿನ ಎಲ್ಲಾ ರೈತರಿಗೂ ಅದೇ ಕಡತ ಅನುಕೂಲವಾಗುತ್ತದೆ. 1-5(ನಮೂನೆ)ಕಡತ ಕಾಣೆಯಾಗಲು ಅಥವಾ ಕಳೆದು ಹೋಗಲು ಸಾಧ್ಯವಿಲ್ಲ. ಕುಟುಂಬದ ಸದಸ್ಯರ ಪಾಲುಗಾರಿಕೆ, ಭೂ ಆಸ್ತಿಯ ಕೆಲವು ಭಾಗ ಮಾರಾಟ, ದಾನಪತ್ರ, ನಿವೇಶನಕ್ಕೆ ಬಳಕೆ, ಭೂ ಪರಿವರ್ತನೆ ಸೇರಿ ಹಲವು ಚಟುವಟಿಕೆಗಳಿಗೆ ಪೋಡಿ ನಕ್ಷೆ ಅವಶ್ಯಕವಾಗಿದೆ. ಒಂದು ಸರ್ವೇ ನಂಬರಿನಲ್ಲಿ ಹಲವರ ಹೆಸರಿದ್ದರೆ ಮುಂದೆ ಸರ್ಕಾರದಿಂದ ಸೌಲಭ್ಯ…
ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, ಮತ್ತೆ 10 ಮಂದಿ ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ / ಸ್ಥಳ ನಿಯುಕ್ತಿಗೊಳಿಸಿ ಆದೇಶಿಸಿದೆ.














