Author: kannadanewsnow57

ಇತ್ತೀಚಿನ ದಿನಗಳಲ್ಲಿ ಬೀಳುತ್ತಿರುವ ತುಂತುರು ಮಳೆ ಹಾಗೂ ತಾಪಮಾನದಿಂದ ವಾತಾವರಣದಲ್ಲಿ ಹೆಚ್ಚಿನ ಆರ್ದ್ರತೆ ಉಂಟಾಗಿ ಅಲ್ಲಲ್ಲಿ ಭತ್ತದ ಬೆಳೆಗೆ ಕೀಟ ಮತ್ತು ರೋಗ ಭಾದೆಗಳನ್ನ ಕಂಡುಬರುತ್ತಿದ್ದು, ಸರಿಯಾಗಿ ನಿರ್ವಹಣಾ ಕ್ರಮಗಳನ್ನು ಅನುಸರಿಸುವ ಕ್ರಮದ ಮಾಹಿತಿಯನ್ನು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೆಶಕರು ರೈತರಿಗೆ ನೀಡಿದ್ದಾರೆ.  ಎಲೆ ಸುರುಳಿ ಹುಳು /ಕೊಳವೆ ಹುಳು: – ಈ ಹುಳುಗಳು ಮಡಚಿ ಕೊಳವೆ ಕೋಶದಲ್ಲಿ ಎಲೆಯನ್ನು ತಿನ್ನುತ್ತವೆ. ಸಾರಜನಕದ ಉಪಯೋಗವನ್ನು ಕಡಿಮೆಗೊಳಿಸಿ ಹಾಗೂ ಬದುಗಳನ್ನು ಸ್ವಚ್ಛಗೊಳಿಸುವುದು. ಕ್ವಿನಾಲ್ ಫಾಸ್ 2 ಮಿಲೀ ಅಥವಾ ಇಂಡಾಕ್ಸಿ ಕಾರ್ಬ್ 14.5 ಎಸ್ಸಿ 0.5 ಮಿಲಿ ಪ್ರತಿ ಲೀ ನೀರಿಗೆ ಬೆರೆಸಿ ಸಿಂಪಡಣೆ ಕೈಗೊಳ್ಳುವ ಮೂಲಕ ಹುಳುಗಳನ್ನು ಹತೋಟಿಗೆ ತರಬಹುದು. ಕಾಂಡಕೊರೆಯುವ ಹುಳು:- ಸುಳಿ ಒಣಗುವುದು ಮತ್ತು ಬಿಳಿ ತೆನೆಯಾಗಿ ಕಾಳು ಜೊಳ್ಳಾಗುವುದರಲ್ಲಿ ಈ ಹುಳುಗಳು ಕಂಡು ಬರಲಿದ್ದು, ಕ್ಲೋರೋಪೈರಿಪಾಸ್ 2 ಮಿಲಿ ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಣೆ ಕೈಗೊಳ್ಳುವ ಮೂಲಕ ಹುಳುಗಳನ್ನು ಹತೋಟಿಗೆ ತರಬಹುದು. ಕಂದುಜಿಗಿ ಹುಳು:-…

Read More

ಶಿವಮೊಗ್ಗ: ರಾಜ್ಯದಲ್ಲಿ ನಡೆಯುತ್ತಿರುವ ಆರ್ಥಿಕ ಮತ್ತು ಶೈಕ್ಷಣಿಕ ಗಣತಿಯ ಸಮೀಕ್ಷಾ ಕಾರ್ಯಕ್ಕೆ ನಿಯೋಜಿಸಲಾಗಿದ್ದ ಶಿಕ್ಷಕರನ್ನು ಮುಕ್ತಗೊಳಿಸಿ, ಉಳಿಕೆ ಕಾರ್ಯಕ್ಕೆ ಶಿಕ್ಷಣೇತರ ಇಲಾಖೆಗಳ ಅಧಿಕಾರಿ ಸಿಬ್ಬಂಧಿಗಳ ಸೇವೆಯನ್ನು ಪಡೆದುಕೊಳ್ಳಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ಆರಂಭಿಸಲಾಗಿರುವ ಆರ್ಥಿಕ ಮತ್ತು ಶೈಕ್ಷಣಿಕ ಗಣತಿಯಿಂದಾಗಿ ಸರ್ಕಾರದಿಂದ ಜನರ ಹಿತಕ್ಕಾಗಿ ರೂಪಿಸಿ ಅನುಷ್ಠಾನಗೊಳಿಸುವ ಯೋಜನೆಗಳನ್ನು ಎಲ್ಲಾ ವರ್ಗದ ಜನರಿಗೆ ತಲುಪಿಸುವಂತೆ ರೂಪಿಸಲು ಅನುಕೂಲವಾಗಲಿದೆ. ಅಲ್ಲದೇ ಜನರ ಜೀವನ ಗುಣಮಟ್ಟವನ್ನು, ಆರ್ಥಿಕ ಅಭಿವೃದ್ಧಿಯ ಶ್ರೇಯಾಂಕವನ್ನು ಗುರುತಿಸಲು ಉಪಕಾರಿಯಾಗಲಿದೆ. ಸದರಿ ಸಮೀಕ್ಷೆಗೆ ಈವರೆಗೂ ಮಾಹಿತಿ ನೀಡದವರು ಮಾಹಿತಿ ನೀಡಿ ಸಹಕರಿಸುವಂತೆ ಮನವಿ ಮಾಡಿದ ಅವರು, ಸಮೀಕ್ಷೆಯಲ್ಲಿ ಶಿವಮೊಗ್ಗ ಜಿಲ್ಲೆ ಶೇ.91.29ರಷ್ಟು ಪ್ರಗತಿ ಸಾಧಿಸಲಾಗಿದೆ. ಸದರಿ ಸಮೀಕ್ಷಾ ಕಾರ್ಯಕ್ಕೆ ನಿಯೋಜಿಸಲಾಗಿದ್ದ ಶಿಕ್ಷಕರನ್ನು ಮುಕ್ತಗೊಳಿಸಿ, ಉಳಿಕೆ ಕಾರ್ಯಕ್ಕೆ ಶಿಕ್ಷಣೇತರ ಇಲಾಖೆಗಳ ಅಧಿಕಾರಿ ಸಿಬ್ಬಂಧಿಗಳ ಸೇವೆಯನ್ನು ಪಡೆದುಕೊಳ್ಳಲಾಗುವುದು ಎಂದರು. ಈ ಹಿಂದಿನ ಸರ್ಕಾರದ ಅವಧಿಯಲ್ಲಿ ನೇಮಕಗೊಂಡ ಶಿಕ್ಷಕರ ಸಂಖ್ಯೆ ಅತ್ಯಲ್ಪ. ಆದರೆ, ಅಧಿಕವಾಗಿರುವ ಶಿಕ್ಷಕರ ಕೊರತೆಯನ್ನು ನೀಗಿಸಲು…

Read More

ಮುಂಬೈ : ದೀಪಾವಳಿ ಹಬ್ಬದ ದಿನವೇ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬೀದರ್ ಮೂಲದ ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.  ಹುಲಜಂತಿ ಮಾಳಿಂಗರಾಯ್ ಸ್ವಾಮೀಜಿ ದರ್ಶನಕ್ಕೆ ತೆರಳಿದ್ದ ಸ್ನೇಹಿತರು ತೆರಳಿದ್ದರು. ಮಹಾರಾಷ್ಟ್ರದ ಉಮ್ಮರ್ಗಾ ಬಳಿ ಎರಡು ಕಾರುಗಳ ನಡುವೆ ಡಿಕ್ಕಿಯಾಗಿದ್ದು, ಬೀದರ್ ಮೂಲದ ನಾಲ್ವರು ಸ್ನೇಹಿತರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಓರ್ವನ ಸ್ಥಿತಿ ಗಂಭೀರವಾಗಿದೆ. ಕಾರಿನಲ್ಲಿದ್ದ ಶಿವಕುಮಾರ್, ರತಿಕಾಂತ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಮೃತರು ಬೀದರ್ ತಾಲೂಕಿನ ಖಾಶಂಪುರ ನಿವಾಸಿಗಳು ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ನವದೆಹಲಿ : ಗೂಗಲ್ ಕ್ರೋಮ್ ಮತ್ತು ಮೊಜಿಲ್ಲಾ ಫೈರ್‌ಫಾಕ್ಸ್ ಬ್ರೌಸರ್‌ಗಳ ಬಳಕೆದಾರರಿಗೆ ಭಾರತ ಸರ್ಕಾರ ಹೈ ಅಲರ್ಟ್ ವಾರ್ನಿಂಗ್ ನೀಡಿದೆ. ಈ ಎರಡು ಬ್ರೌಸರ್‌ಗಳಲ್ಲಿ ಗಂಭೀರ ಭದ್ರತಾ ದೋಷಗಳಿವೆ ಎಂದು ಭಾರತೀಯ ಕಂಪ್ಯೂಟರ್ ತುರ್ತು ಪ್ರತಿಕ್ರಿಯೆ ತಂಡ (CERT-In) ಸ್ಪಷ್ಟಪಡಿಸಿದೆ, ಇವುಗಳನ್ನು ಸೈಬರ್ ಅಪರಾಧಿಗಳು ನಿಮ್ಮ ಸಿಸ್ಟಮ್ ಅನ್ನು ಹ್ಯಾಕ್ ಮಾಡಲು ಬಳಸಿಕೊಳ್ಳಬಹುದು. CERT-In ಬಿಡುಗಡೆ ಮಾಡಿದ ಸಲಹೆಯ ಪ್ರಕಾರ, ಹಳೆಯ ಆವೃತ್ತಿಗಳಲ್ಲಿನ ಈ ಭದ್ರತಾ ದೋಷಗಳಿಂದಾಗಿ, ಹ್ಯಾಕರ್‌ಗಳು ನಿಮ್ಮ ಕಂಪ್ಯೂಟರ್‌ನಲ್ಲಿ ಸಂಗ್ರಹವಾಗಿರುವ ವೈಯಕ್ತಿಕ ಮಾಹಿತಿ, ಪಾಸ್‌ವರ್ಡ್‌ಗಳು ಮತ್ತು ಹಣಕಾಸಿನ ವಿವರಗಳನ್ನು ಸುಲಭವಾಗಿ ಕದಿಯಬಹುದು. ಅವರು ನಿಮ್ಮ ಅನುಮತಿಯಿಲ್ಲದೆ ಸಿಸ್ಟಮ್ ಅನ್ನು ರಿಮೋಟ್ ಆಗಿ ಪ್ರವೇಶಿಸಬಹುದು ಮತ್ತು ಮಾಲ್‌ವೇರ್ ಅನ್ನು ಸ್ಥಾಪಿಸಬಹುದು. ಅವರು ಬಳಕೆದಾರರನ್ನು ವಿಶೇಷವಾಗಿ ರಚಿಸಲಾದ ವೆಬ್‌ಸೈಟ್‌ಗೆ ಭೇಟಿ ನೀಡುವಂತೆ ಮೋಸಗೊಳಿಸಬಹುದು ಮತ್ತು ಸಿಸ್ಟಮ್‌ನಲ್ಲಿ ದುರುದ್ದೇಶಪೂರಿತ ಕೋಡ್ ಅನ್ನು ಕಾರ್ಯಗತಗೊಳಿಸಬಹುದು. ಸೇವೆ ನಿರಾಕರಣೆ (DoS) ದಾಳಿಗಳನ್ನು ನಡೆಸಬಹುದು ಮತ್ತು ಸಿಸ್ಟಮ್ ಸೇವೆಗಳನ್ನು ಅಡ್ಡಿಪಡಿಸಬಹುದು. ಈ ಬೆದರಿಕೆ ಮುಖ್ಯವಾಗಿ ಡೆಸ್ಕ್‌ಟಾಪ್ (ವಿಂಡೋಸ್,…

Read More

ಹಾವೇರಿ : ರಾಜ್ಯದಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದು, ನದಿಗೆ ಹಾರಿ ತಾಯಿ, ಮಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಹಾವೇರಿ ತಾಲೂಕಿನ ತಾಲೂಕಿನ ವರದಾಹಳ್ಳಿ ಗ್ರಾಮದ ಬಳಿ ಇರುವ ವರದಾ ನದಿಗೆ ಹಾರಿ ತಾಯಿ,ಮಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸವಿತಾ ನಾಗರಾಜ್ ಉಳ್ಳಾಗಡ್ಡಿ (38) ಹಾಗೂ ಕಾವ್ಯಾ (12) ಆತ್ಮಹತ್ಯೆಗೆ ಶರಣಾದ ತಾಯಿ, ಮಗಳು. ಭಾನುವಾರ (ಅ.19) ಮಧ್ಯಾಹ್ನ ಸುಮಾರು 3 ಗಂಟೆ ಸುಮಾರಿಗೆ ಈ ದುರ್ಘಟನೆ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ದೋಣಿ ಮೂಲಕ ನದಿಯಲ್ಲಿ ಹುಡುಕಾಟ ನಡೆಸಿ ಮೃತದೇಹ ಪತ್ತೆ ಮಾಡಿದ್ದಾರೆ. ಈ ಸಂಬಂಧ ಹಾವೇರಿ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯವೊಂದು ಬೆಳಕಿಗೆ ಬಂದಿದ್ದು, ಖಾಸಗಿ ಆಸ್ಪತ್ರೆಯ ವೈದ್ಯನೊಬ್ಬ ಆಸ್ಪತ್ರೆಗೆ ಹೋದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. 22 ವರ್ಷದ ಯೂವತಿಯೊಬ್ಬರಿಗೆ 56 ವರ್ಷದ ಚರ್ಮರೋಗ ತಜ್ಞ ಕಿರುಕುಳ ನೀಡಿರುವ ಘಟನೆಯೊಂದು ವರದಿಯಾಗಿದೆ. ಈ ಘಟನೆ ಬೆಂಗಳೂರಿನ ಖಾಸಗಿ ಕ್ಲಿನಿಕ್ನಲ್ಲಿ ನಡೆದಿದೆ. ಯುವತಿ ತನ್ನ ತಂದೆ ಜತೆಗೆ ಕ್ಲಿನಿಕ್ ಗೆ ಭೇಟಿ ನೀಡಿದ್ದಾರೆ. ಯುವತಿ ಕ್ಲಿನಿಕ್ ಒಳಗೆ ಇರುವ ವೇಳೆ ಈ ವೈದ್ಯ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಪ್ರಕರಣ ದಾಖಲಾಗಿದೆ. ಪೊಲೀಸರಿಗೆ ನೀಡಿದ ದೂರಿನ ಪ್ರಕಾರ, ವೈದ್ಯರು ಪರಿಸ್ಥಿತಿಯ ಲಾಭ ಪಡೆದು ಚರ್ಮದ ಸೋಂಕನ್ನು ಪರೀಕ್ಷಿಸುವ ನೆಪದಲ್ಲಿ ಅನುಚಿತವಾಗಿ ಸ್ಪರ್ಶಿಸಿದ್ದಾರೆ. ಹಲವಾರು ಬಾರಿ ತನ್ನನ್ನು ತಬ್ಬಿಕೊಂಡು ಮುತ್ತಿಟ್ಟಿದ್ದಾರೆ ಹಾಗೂ ನನ್ನ ಜತೆಗೆ ಕೆಟ್ಟದಾಗಿ ನಡೆದುಕೊಂಡಿದ್ದಾರೆ. ಪರೀಕ್ಷೆ ಮಾಡಬೇಕು ಎಂದು ವೈದ್ಯರು ತನ್ನ ಬಟ್ಟೆ ಬಿಚ್ಚುವಂತೆ ಒತ್ತಾಯಿಸಿದ್ದಾರೆ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾರೆ. ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತಾ…

Read More

ಬೆಂಗಳೂರು: ನಗರದಲ್ಲಿ ದೀಪಾವಳಿ ಆರಂಭದಲ್ಲೇ ಪಟಾಕಿ ಸಿಡಿತದಿಂದ ಅವಘಡ ಸಂಭವಿಸಿದೆ. ಪಟಾಕಿ ಸಿಡಿದು ಮಕ್ಕಳು ಸೇರಿದಂತೆ ಒಟ್ಟು 40 ಮಂದಿ ಗಾಯಗೊಂಡಿದ್ದಾರೆ. ಬೆಂಗಳೂರಲ್ಲಿ ಬಿಜಿಲಿ ಪಟಾಕಿ ಸಿಡಿದು 11 ವರ್ಷದ ಬಾಲಕ ಗಾಯಗೊಂಡಿದ್ದಾನೆ. ಪಟಾಕಿ ಸಿಡಿಸುವುದನ್ನು ನೋಡುತ್ತಿದ್ದಾಗ ಮತ್ತೊಬ್ಬನಿಗೆ ಗಾಯವಾಗಿದೆ. ಆಟಂ ಬಾಂಬ್ ಪಟಾಕಿ ಸಿಡಿದು 48 ವರ್ಷದ ವ್ಯಕ್ತಿಯ ಕಣ್ಣಿಗೆ ಗಾಯವಾಗಿದೆ. ಅದೇ ರೀತಿಯಾಗಿ ಇನ್ನು 6 ಜನರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ನಾರಾಯಣ ನೇತ್ರಾಲಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. 20 ಜನರು ಬೆಂಗಳೂರಿನ ನಾರಾಯಣ ನೇತ್ರಾಲಯದಲ್ಲಿ ಒಟ್ಟು 20 ಪ್ರಕರಣಗಳು ದಾಖಲಾಗಿವೆ. ಪಟಾಕಿ ಸಿಡಿಸಲು ಹೋಗಿ ಮಕ್ಕಳು ಗಾಯಗೊಂಡಿದ್ದಾರೆ. ಪಟಾಕಿಯಿಂದ ಅನಾಹುತ ಸಂಭವಿಸಿದ ಪರಿಣಾಮ ಮಿಂಟೋ ಆಸ್ಪತ್ರೆಯಲ್ಲಿ 13 ಮಂದಿ ಚಿಕಿತ್ಸೆಗೆ ದಾಖಲಾಗಿದ್ದಾರೆ.

Read More

ಹುಟ್ಟಿದಿಂದಲೂ ನಮ್ಮ ದೇಹದ ಮೇಲೆ ನಮಗೆ ಇಷ್ಟವಿಲ್ಲದ ಕೆಲವು ಕಲೆಗಳು, ಗುರುತುಗಳು ಇರುತ್ತವೆ. ಅವುಗಳಲ್ಲಿ ಒಂದು ನರುಳ್ಳೆಗಳು. ಅನೇಕ ಜನರಲ್ಲಿ ಬಾಲ್ಯದಲ್ಲಿ ಅಥವಾ ವಯಸ್ಸಾದಂತೆ ದೇಹದ ಮೇಲೆ ನರುಳ್ಳೆಗಳು ಬೆಳೆಯುತ್ತವೆ. ಈ ನರುಳ್ಳೆಗಳು ದೇಹದ ಯಾವುದೇ ಭಾಗದಲ್ಲಿ ಕಾಣಿಸಿಕೊಳ್ಳಬಹುದು, ಆಗಾಗ್ಗೆ ಅವು ಮುಖದ ಮೇಲೂ ಕಾಣಿಸಿಕೊಳ್ಳುತ್ತವೆ, ಇದು ನಮ್ಮ ಮುಖದ ನೋಟವನ್ನು ಸಂಪೂರ್ಣವಾಗಿ ಹಾಳು ಮಾಡುತ್ತದೆ. ಅನೇಕ ಜನರು ಅವುಗಳನ್ನು ಮುಖದಿಂದ ತೆಗೆದುಹಾಕಲು ಲೇಸರ್ ಅನ್ನು ಬಳಸುತ್ತಾರೆ, ಇದು ತುಂಬಾ ನೋವಿನಿಂದ ಕೂಡಿದೆ. ಮತ್ತು ದುಬಾರಿಯಾಗಿದೆ. ಆದರೆ, ಇಂದು ನಾವು ನಿಮಗೆ ದೇಹದಿಂದ ನರುಳ್ಳೆಗಳನ್ನು ತೆಗೆದುಹಾಕಲು ಸುಲಭ, ಸರಳ, ಅಗ್ಗದ ಮತ್ತು ಕಡಿಮೆ ನೋವಿನ ಮಾರ್ಗವನ್ನು ಹೇಳಲಿದ್ದೇವೆ, ಅದು ಖಂಡಿತವಾಗಿಯೂ ನಿಮಗೆ ಪ್ರಯೋಜನವನ್ನು ನೀಡುತ್ತದೆ. ಈ ಪ್ರಕ್ರಿಯೆಯನ್ನು ಮನೆಯಲ್ಲಿ ನೈಸರ್ಗಿಕವಾಗಿ ಕಂಡುಬರುವ ಪದಾರ್ಥಗಳನ್ನು ಬಳಸಿ ಮಾಡಬಹುದು. ನಿಮ್ಮ ದೇಹದ ಮೇಲಿನ ನರುಳ್ಳೆಗಳು ಯಾವುದೇ ನೋವು ಇಲ್ಲದೆ ಉದುರಿಹೋಗುವುದನ್ನು ನೀವು ಗಮನಿಸಬಹುದು. ಈ ಸಲಹೆಯನ್ನು ಹೇಗೆ ಬಳಸುವುದು ಎಂದು ವಿವರವಾಗಿ ತಿಳಿಯಿರಿ. ಪದಾರ್ಥಗಳು…

Read More

ಬೆಂಗಳೂರು : ಬೆಂಗಳೂರಿನಲ್ಲಿ ಲಿವಿಂಗ್ ಟುಗೆದರ್ ನಲ್ಲಿದ್ದ ಜೋಡಿಯೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಕಲ್ಲುಬಾಳು ಗ್ರಾಮದಲ್ಲಿ ಒಡಿಶಾ ಮೂಲದ ಸೀಮಾ ನಾಯಕ್ (25), ರಾಕೇಶ್ (23) ಮೃತರು ಎಂದು ಗುರುತಿಸಲಾಗಿದೆ. ಎರಡು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ. ಬಾಗಿಲು ತೆರೆಯದ ಹಿನ್ನೆಲೆಯಲ್ಲಿ ಅನುಮಾನಗೊಂಡು ಕಿಟಕಿ ಗಾಜು ಒಡೆದು ನೋಡಿದಾಗ ಬೆಳಕಿಗೆ ಬಂದಿದೆ. ಕೂಡಲೇ ಜಿಗಣಿ ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಪದೇ ಪದೇ ಕುಡಿದು ಬಂದು ರಾಕೇಶ್ ಪಾತ್ರ ಜಗಳ ಮಾಡುತ್ತಿದ್ದ ಭಾನುವಾರವೂ ಜಗಳ ಮಾಡಿದ್ದ. ಅಂದು ಬೆಳಗ್ಗೆ ಎದ್ದಾಗ ರಾಕೇಶ್ ಪಾತ್ರ ನೇಣು ಬಿಗಿದುಕೊಂಡಿದ್ದ. ಬಳಿಕ ಸೀಮಾ ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.

Read More

ಬೆಂಗಳೂರು: ನಗರದಲ್ಲಿ ದೀಪಾವಳಿ ಆರಂಭದಲ್ಲೇ ಪಟಾಕಿ ಸಿಡಿತದಿಂದ ಅವಘಡ ಸಂಭವಿಸಿದೆ. ಪಟಾಕಿ ಸಿಡಿದು ಮಕ್ಕಳು ಸೇರಿದಂತೆ ಒಟ್ಟು 20 ಜನರು ಬೆಂಗಳೂರಿನ ನಾರಾಯಣ ನೇತ್ರಾಲಯದಲ್ಲಿ ಒಟ್ಟು 20 ಪ್ರಕರಣಗಳು ದಾಖಲಾಗಿವೆ. ಬೆಂಗಳೂರಲ್ಲಿ ಬಿಜಿಲಿ ಪಟಾಕಿ ಸಿಡಿದು 11 ವರ್ಷದ ಬಾಲಕ ಗಾಯಗೊಂಡಿದ್ದಾನೆ. ಪಟಾಕಿ ಸಿಡಿಸುವುದನ್ನು ನೋಡುತ್ತಿದ್ದಾಗ ಮತ್ತೊಬ್ಬನಿಗೆ ಗಾಯವಾಗಿದೆ. ಆಟಂ ಬಾಂಬ್ ಪಟಾಕಿ ಸಿಡಿದು 48 ವರ್ಷದ ವ್ಯಕ್ತಿಯ ಕಣ್ಣಿಗೆ ಗಾಯವಾಗಿದೆ. ಅದೇ ರೀತಿಯಾಗಿ ಇನ್ನು 6 ಜನರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ನಾರಾಯಣ ನೇತ್ರಾಲಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಪಟಾಕಿ ಸಿಡಿಸಲು ಹೋಗಿ ಮಕ್ಕಳು ಗಾಯಗೊಂಡಿದ್ದಾರೆ. ಪಟಾಕಿಯಿಂದ ಅನಾಹುತ ಸಂಭವಿಸಿದ ಪರಿಣಾಮ ಮಿಂಟೋ ಆಸ್ಪತ್ರೆಯಲ್ಲಿ 13 ಮಂದಿ ಚಿಕಿತ್ಸೆಗೆ ದಾಖಲಾಗಿದ್ದಾರೆ.

Read More