Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಬೆಂಗಳೂರಿನ ಆಸ್ತಿ ಮಾಲೀಕರೇ ಗಮನಿಸಿ, ಆನ್ಲೈನ್ ಮೂಲಕ ಬಿ ಯಿಂದ ಎ-ಖಾತಾಗೆ ಹೇಗೆ ಪರಿವರ್ತಿಸಬೇಕೆಂಬುದರ ಬಗ್ಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರವು ವಿವರಣೆಗಳನ್ನು ಬಿಡುಗಡೆ ಮಾಡಿದೆ. ನ.1 ರಿಂದ ಪ್ರಾರಂಭವಾಗುವ ಕರ್ನಾಟಕ ಸರ್ಕಾರದ 100 ದಿನಗಳ ಅಭಿಯಾನದಿಂದ ಬೆಂಗಳೂರಿನಲ್ಲಿ ಸುಮಾರು 15 ಲಕ್ಷ ಆಸ್ತಿ ಮಾಲೀಕರಿಗೆ ಪ್ರಯೋಜನವಾಗುವ ನಿರೀಕ್ಷೆಯಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಬಿ-ಖಾತಾ ನಿವೇಶನ ಮಾಲೀಕರಿಗೆ ಬಿ-ಖಾತಾದಿಂದ ಎ-ಖಾತಾಗೆ ಪರಿವರ್ತನೆ ಮತ್ತು ಹೊಸ ನಿವೇಶನಗಳಿಗೂ ಎ-ಖಾತಾ ನೀಡಲು ಹೊಸದಾಗಿ ಜಾರಿಗೊಳಿಸಿರುವ ಆನ್ಲೈನ್ ವ್ಯವಸ್ಥೆಗೆ ಚಾಲನೆ ದೊರೆತಿದೆ. ಬಿ-ಖಾತಾದಿಂದ ಎ-ಖಾತಾ ಪರಿವರ್ತನೆ ಮತ್ತು ಹೊಸ ನಿವೇಶನಗಳಿಗೆ ಎ-ಖಾತಾ ಪಡೆಯಲು ಅರ್ಜಿ ಸಲ್ಲಿಸುವ ವಿಧಾನ 2000 ಚ.ಮೀ.ಗಳ ವರೆಗೆ * ನಿಮ್ಮ ಮೊಬೈಲ್ ಮತ್ತು ಓಟಿಪಿ ಬಳಸಿ https://bbmp.karnataka.gov.in/BtoAKhata ರಲ್ಲಿ ಲಾಗಿನ್ ಆಗಿ * ನಿಮ್ಮ ಅಂತಿಮ ಬಿ-ಖಾತೆಯ ಇಪಿಐಡಿ ಸಂಖ್ಯೆಯನ್ನು ನಮೂದಿಸಿ ವಿವರಗಳನ್ನು ಪಡೆಯಿರಿ * ಮಾಲೀಕರ ಆಧಾರ್ ದೃಢೀಕರಿಸಿ * ನಿವೇಶನವಿರುವ ಸ್ಥಳವನ್ನು ಮತ್ತು ನಿವೇಶನ ಮುಂಭಾಗದ…
ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಬಿ-ಖಾತಾ ನಿವೇಶನ ಮಾಲೀಕರಿಗೆ ಬಿ-ಖಾತಾದಿಂದ ಎ-ಖಾತಾಗೆ ಪರಿವರ್ತನೆ ಮತ್ತು ಹೊಸ ನಿವೇಶನಗಳಿಗೂ ಎ-ಖಾತಾ ನೀಡಲು ಹೊಸದಾಗಿ ಜಾರಿಗೊಳಿಸಿರುವ ಆನ್ಲೈನ್ ವ್ಯವಸ್ಥೆಗೆ ಚಾಲನೆ ದೊರೆತಿದೆ. ಬಿ-ಖಾತಾದಿಂದ ಎ-ಖಾತಾ ಪರಿವರ್ತನೆ ಮತ್ತು ಹೊಸ ನಿವೇಶನಗಳಿಗೆ ಎ-ಖಾತಾ ಪಡೆಯಲು ಅರ್ಜಿ ಸಲ್ಲಿಸುವ ವಿಧಾನ 2000 ಚ.ಮೀ.ಗಳ ವರೆಗೆ * ನಿಮ್ಮ ಮೊಬೈಲ್ ಮತ್ತು ಓಟಿಪಿ ಬಳಸಿ https://bbmp.karnataka.gov.in/BtoAKhata ರಲ್ಲಿ ಲಾಗಿನ್ ಆಗಿ * ನಿಮ್ಮ ಅಂತಿಮ ಬಿ-ಖಾತೆಯ ಇಪಿಐಡಿ ಸಂಖ್ಯೆಯನ್ನು ನಮೂದಿಸಿ ವಿವರಗಳನ್ನು ಪಡೆಯಿರಿ * ಮಾಲೀಕರ ಆಧಾರ್ ದೃಢೀಕರಿಸಿ * ನಿವೇಶನವಿರುವ ಸ್ಥಳವನ್ನು ಮತ್ತು ನಿವೇಶನ ಮುಂಭಾಗದ ರಸ್ತೆಯ ಪ್ರಕಾರವನ್ನು ದೃಢಪಡಿಸಿ * ಭೂ ಪರಿವರ್ತನೆಯಾದ ಮತ್ತು ಭೂ ಪರಿವರ್ತನೆಯಾಗದ ಎರಡೂ ನಿವೇಶನಗಳು ಅರ್ಹ (ಫ್ಲಾಟ್ಗಳಿಗೆ ಅರ್ಹತೆಯಿಲ್ಲ) + ಸ್ವೀಕೃತಿಯನ್ನು ಪಡೆಯಿರಿ * ನಗರ ಪಾಲಿಕೆ ವತಿಯಿಂದ ನಿವೇಶನಕ್ಕೆ ಭೇಟಿ ಮತ್ತು ದೃಢೀಕರಣ * ಮಾರುಕಟ್ಟೆ ಮೌಲ್ಯದ ಶೇ. 5% ರಷ್ಟು ಮೊತ್ತವನ್ನು “ಏಕ ನಿವೇಶನ”…
ಬೆಂಗಳೂರು: ರಾಜ್ಯದಲ್ಲಿನ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ 1200 ಚದುರ ಅಡಿ ವಿಸ್ತರೀಣದವರೆಗಿನ ನಿವೇಶನಗಳಲ್ಲಿ ನಿರ್ಮಿಸಿರುವ ನೆಲ+ 2 ಅಂತಸ್ತು ಅಥವಾ Stilt + 3 ಅಂತಸ್ತಿನವರೆಗಿನ ವಾಸದ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣಪತ್ರ ( Occupancy Certificate-OC) ಪಡೆಯುವುದರಿಂದ ವಿನಾಯ್ತಿ ನೀಡಿ ಅಧಿಕೃತ ಆದೇಶ ಹೊರಡಿಸಿದೆ. ಈ ಕುರಿತಂತೆ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಮಾನ್ಯ ಮುಖ್ಯ ಮಂತ್ರಿಯವರು ಅಧ್ಯಕ್ಷತೆ ಹಾಗೂ ಮಾನ್ಯ ಉಪ ಮುಖ್ಯಮಂತ್ರಿಯವರು ಮತ್ತು ಸಂಬಂಧಿಸಿದ ಇತರ ಮಾನ್ಯ ಸಚಿವರುಗಳ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ, ರಾಜ್ಯಾದ್ಯಂತ ಸ್ಥಳೀಯ ಸಂಸ್ಥೆಗಳ ಕಾರ್ಯನಿರ್ವಹಣೆಗೆ ಸಂಬಂಧಿಸಿದಂತೆ, ಅನ್ವಯವಾಗುವ ಎಲ್ಲಾ ಕಾಯ್ದೆಗಳಲ್ಲಿಯೂ ಕೆಲವೊಂದು ವರ್ಗದ ನಿವೇಶನಗಳಲ್ಲಿ ನಿರ್ಮಿಸಿರುವ ಕಟ್ಟಡಗಳಿಗೆ ಸ್ವಾಧೀನಾನುಭವ ಪಮಾಣ ಪತ್ರ ಪಡೆಯುವ ವಿಷಯಕ್ಕೆ ಸಂಬಂಧಿಸಿದಂತೆ, ಸಮಾನ ಅವಕಾಶಗಳಿರುವುದು ಸೂಕ್ತವೆಂದು ಅಭಿಪ್ರಾಯಿಸಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆಯವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ, ಸೂಕ್ತ ತೀರ್ಮಾನ ಕೈಗೊಳ್ಳುವಂತೆ ಸೂಚಿಸಲಾಗಿತ್ತು ಎಂದಿದ್ದಾರೆ. ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆ…
ನವದೆಹಲಿ : ನವೆಂಬರ್ 1, 2025 ರಿಂದ ದೇಶಾದ್ಯಂತ ಹಲವಾರು ಪ್ರಮುಖ ನಿಯಮಗಳು ಬದಲಾಗಲಿವೆ, ಇದು ನಿಮ್ಮ ದೈನಂದಿನ ಜೀವನದ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ. ಈ ಬದಲಾವಣೆಗಳಲ್ಲಿ ಆಧಾರ್ ಕಾರ್ಡ್ಗಳಿಂದ ಹಿಡಿದು ಬ್ಯಾಂಕಿಂಗ್, ಗ್ಯಾಸ್ ಸಿಲಿಂಡರ್ಗಳು ಮತ್ತು ಮ್ಯೂಚುವಲ್ ಫಂಡ್ಗಳವರೆಗೆ ಎಲ್ಲವೂ ಸೇರಿವೆ. ನವೆಂಬರ್ 1 ರಿಂದ ಬದಲಾಗಲಿವೆ ಈ ಎಲ್ಲಾ ನಿಯಮಗಳು `LPG’ ಸಿಲಿಂಡರ್ ಗಳ ಬೆಲೆ ಪ್ರತಿ ತಿಂಗಳಂತೆ, ನವೆಂಬರ್ 1 ರಂದು LPG, CNG ಮತ್ತು PNG ಬೆಲೆಗಳು ಬದಲಾಗಬಹುದು. ಅದೇ ರೀತಿ, CNG ಮತ್ತು PNG ಅನಿಲ ಬೆಲೆಗಳಿಗೂ ಹೊಂದಾಣಿಕೆಗಳನ್ನು ಮಾಡಬಹುದು. ಆಧಾರ್ ಕಾರ್ಡ್ ನವೀಕರಣ ನವೆಂಬರ್ 1 ರಿಂದ, UIDAI ಆಧಾರ್ ಕಾರ್ಡ್ ನವೀಕರಣ ನಿಯಮಗಳಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡಿದೆ. ನೀವು ಈಗ ಆಧಾರ್ ಕೇಂದ್ರಕ್ಕೆ ಭೇಟಿ ನೀಡದೆಯೇ ನಿಮ್ಮ ಹೆಸರು, ವಿಳಾಸ, ಜನ್ಮ ದಿನಾಂಕ ಮತ್ತು ಮೊಬೈಲ್ ಸಂಖ್ಯೆಯಂತಹ ಪ್ರಮುಖ ಮಾಹಿತಿಯನ್ನು ಆನ್ಲೈನ್ನಲ್ಲಿ ನವೀಕರಿಸಬಹುದು. ಫಿಂಗರ್ಪ್ರಿಂಟ್ಗಳು ಅಥವಾ ಐರಿಸ್ ಸ್ಕ್ಯಾನ್ಗಳಂತಹ ಬಯೋಮೆಟ್ರಿಕ್…
ಶಿವಮೊಗ್ಗ: ಇನ್ನು ಮುಂದೆ ಎಲ್ಲಾ ಪಡಿತರ ಅಂಗಡಿಗಳಲ್ಲೂ ಆಯಾ ತಿಂಗಳ 10ನೇ ತಾರೀಕು ಪಡಿತರ ನೀಡುವಂತೆ ಕ್ರಮವಹಿಸಲಾಗುವುದು. ‘ಒನ್ ನೇಷನ್ ಒನ್ ಕಾರ್ಡ್’ ಯೋಜನೆಯಡಿ ವಲಸಿಗ ಕಾರ್ಮಿಕರಿಗೂ ತಕ್ಷಣ ರೇಷನ್ ಕಾರ್ಡ್ ನೀಡಲಾಗುತ್ತದೆ ಎಂದು ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ನಿಯಮಾವಳಿ ಪ್ರಕಾರ ರಾಜ್ಯದಲ್ಲಿ ಶೇ 15ರಷ್ಟು ಬಿಪಿಎಲ್ ಕಾರ್ಡ್ ರದ್ದಾಗಲಿವೆ. ಆದರೆ ಅರ್ಹರು ಆತಂಕ ಪಡುವುದು ಬೇಡ. ರಾಜ್ಯದಲ್ಲಿ ಒಂದೇ ಒಂದು ಬಿಪಿಎಲ್ ಕಾರ್ಡ್ ಕೂಡ ರದ್ದಾಗಲ್ಲ. ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದಾಗಲಿವೆ. ಅನರ್ಹರ ಕಾರ್ಡ್ ರದ್ದು ಮಾಡಿ ಎಪಿಎಲ್ ಕಾರ್ಡ್ ಮಾಡುತ್ತೇವೆ ಎಂಬುದಾಗಿ ತಿಳಿಸಿದರು. ರಾಜ್ಯದಲ್ಲಿ ಶೇ.15ರಷ್ಟು ಬಿಪಿಎಲ್ ಕಾರ್ಡ್ ದಾರರರಷ್ಟೇ ರದ್ದು ಮಾಡಲಾಗಿದೆ. ಇದನ್ನು ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ ಕ್ಯಾನ್ಸಲ್ ಮಾಡಲಾಗಿದೆ. ಯಾವುದೇ ಫಲಾನುಭವಿಗಳಿಗೂ ಮೋಸವಾಗುತ್ತಿಲ್ಲ. ಶೀಘ್ರದಲ್ಲಿಯೇ ಎಣ್ಣೆ, ಬೇಳೆ, ಕಾಳುಗಳು ಸೇರಿದಂತೆ ಪೌಷ್ಟಿಕಾಂಶ ಆಹಾರ ಪದಾರ್ಥ ವಿತರಣೆ ಮಾಡಲಾಗುತ್ತದೆ ಎಂದರು. ಪಡಿತರ ವಿತರಕರಿಗೆ ಮೇ ತಿಂಗಳಿಂದ…
ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯ್ತಿಗಳಲ್ಲಿ ಗ್ರಾಮೀಣ ಜನತೆಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ವಿವಿಧ ಸೇವೆಗಳನ್ನು ಒದಗಿಸಲಾಗುತ್ತಿದೆ. ಆ ಮೂಲಕ ಗ್ರಾಮೀಣ ಜನರು ತಾಲ್ಲೂಕು, ಜಿಲ್ಲಾ ಮಟ್ಟಕ್ಕೆ ಅಲೆಯುವುದನ್ನು ಸರ್ಕಾರ ತಪ್ಪಿಸಿದೆ. ಹಾಗಾದ್ರೇ ಸಾರ್ವಜನಿಕರಿಗೆ ಉಪಯುಕ್ತ ಮಾಹಿತಿ ಎನ್ನುವಂತೆ ರಾಜ್ಯದ ಗ್ರಾಮ ಪಂಚಾಯ್ತಿಗಳಲ್ಲಿ ಸಿಗುವಂತ ಸೇವೆಗಳ ಸಂಪೂರ್ಣ ಮಾಹಿತಿ ಮುಂದಿದೆ ಓದಿ ತಿಳಿದುಕೊಳ್ಳಿ. ಬಾಪೂಜಿ ಸೇವಾ ಕೇಂದ್ರ (ಬಿ.ಎಸ್.ಕೆ.)(bsk.karnataka.gov.in) ಗ್ರಾಮೀಣ ಜನತೆಗೆ ತಮ್ಮ ಸಾಮಾಜಿಕ, ಶೈಕ್ಷಣಿಕ, ವಾಣಿಜ್ಯ ಹಾಗೂ ಕೃಷಿ ಚಟುವಟಿಕೆಗಳಗಾಗಿ ವಿವಿಧ ಇಲಾಖೆಗಳಿಂದ ಹಲವಾರು ದಾಖಲೆಗಳು ಬೇಕಾಗುತ್ತವೆ. ಇವುಗಳನ್ನು ತ್ವರಿತವಾಗಿ ಒಂದೇ ಸೂರಿನಡಿ ಪಡೆದುಕೊಳ್ಳಲು ಅನುಕೂಲವಾಗುವಂತೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸ್ಥಾಪಿಸಿರುವ ಕೇಂದ್ರವೇ ‘ಬಾಪೂಜಿ ಸೇವಾ ಕೇಂದ್ರ’. ಪಂಚತಂತ್ರ, ನಾಡಕಛೇರಿ ತಂತ್ರಾಂಶ ಹಾಗೂ ಭೂಮಿ ತಂತ್ರಾಂಶಗಳನ್ನು ಸಮ್ಮಿಲನಗೊಳಸಿ ಗ್ರಾಮ ಪಂಚಾಯಿತಿಗಳು ಈ ಸೇವೆಯನ್ನು ನೀಡುತ್ತಿವೆ. ಈಗ ನೀಡುತ್ತಿರುವ 19 ಸೇವೆಗಳ ಜೊತೆಗೆ ಕಂದಾಯ ಇಲಾಖೆಯಿಂದ ಪಹಣಿ ಪತ್ರ ಒಳಗೊಂಡಂತೆ 40 ಸೇವೆಗಳನ್ನು ಒಂದೇ ಸೂರಿನಡಿ ಒದಗಿಸಲಾಗುತ್ತದೆ.ಇದರಿಂದ ಸಾರ್ವಜನಿಕರು ತಮ್ಮ ದಾಖಲೆಗಳಗಾಗಿ ಕಛೇರಿಯಿಂದ…
ಬೆಂಗಳೂರು: ಆಂಧ್ರಪ್ರದೇಶದ ಕರ್ನೂಲ್ ಬಳಿಯಲ್ಲಿ ಖಾಸಗಿ ಬಸ್ ಅಪಘಾತದ ನಂತ್ರ ಬೆಂಕಿ ಹೊತ್ತಿಕೊಂಡು, 20 ಮಂದಿ ಸಜೀವ ದಹನವಾಗಿದ್ದರು. ಈ ದುರಂತದ ಬೆನ್ನಲ್ಲೇ ಕೆ ಎಸ್ ಆರ್ ಟಿ ಸಿ ಪ್ರಯಾಣಿಕರ ಸುರಕ್ಷತೆಗಾಗಿ ಮಹತ್ವದ ಕ್ರಮ ಕೈಗೊಂಡಿದೆ. ಇನ್ಮುಂದೆ ಸಾರಿಗೆ ಬಸ್ಸುಗಳಲ್ಲಿ ಈ ವಸ್ತುಗಳನ್ನು ಕೊಂಡೊಯ್ಯುವುದನ್ನು ನಿಷೇಧಿಸಿ, ಸಚಿವ ರಾಮಲಿಂಗಾರೆಡ್ಡಿ ಆದೇಶಿಸಿದ್ದಾರೆ. ಈ ಕುರಿತಂತೆ ಎಲ್ಲಾ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರಿಗೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಪತ್ರ ಬರೆದಿದ್ದು, ಇತ್ತೀಚೆಗೆ ಕರ್ನೂಲ್ ಬಸ್ ದುರಂತ ತೀವ್ರ ದುಃಖಕರವಾದ ಸಂಗತಿ. ಆ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಸಾರಿಗೆ ಸಂಸ್ಥೆಗಳ ಬಸ್ಸುಗಳಲ್ಲಿರುವ ಸುರಕ್ಷತಾ ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಬೇಕು. ಈ ಹಿಂದೆ ನಾನು ಸಾರಿಗೆ ಸಚಿವನಾಗಿದ್ದಾಗ ಹಾವೇರಿ ಬಳಿ ಜಬ್ಬಾರ್ ಟ್ರಾವೆಲ್ಸ್ ನ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡು ಕೆಲ ಪ್ರಯಾಣಿಕರು ತಮ್ಮ ಪ್ರಾಣ ಕಳೆದುಕೊಂಡಿದ್ದರು ಎಂದು ಹೇಳಿದ್ದಾರೆ. ನಾನು ಆ ಸಂದರ್ಭದಲ್ಲಿ ರಾಜ್ಯದ ಎಲ್ಲಾ ಸುಮಾರು 50000 ವಾಹನಗಳಲ್ಲಿ ( ಸಾರಿಗೆ ಸಂಸ್ಥೆಗಳ…
ಬೆಂಗಳೂರು : ರಾಜ್ಯದಲ್ಲಿ ಎಸ್, ಎಸ್ಟಿ ಸಮುದಾಯದ ಭೂಮಿ ಮಾರಾಟ ಮಾಡುವುದು ಕಾನೂನು ಬಾಹಿರ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಕರ್ನಾಟಕ ಪರಿಶಿಷ್ಟ ಜಾತಿಗಳ ಮತ್ತು ಪರಿಶಿಷ್ಟ ವರ್ಗಗಳ ಕಾಯ್ದೆಯಡಿ ಮಂಜೂರಾದ ಜಮೀನು ಬೇರೊಬ್ಬರಿಗೆ ವರ್ಗಾವಣೆ/ಮಾರಾಟ ಮಾಡುವುದು ಅಕ್ರಮ ಹಾಗೂ ಅನೂರ್ಜಿತ, ಇಂಥ ಜಮೀನಿನ ಅಕ್ರಮ ವರ್ಗಾವಣೆ ಕುರಿತು ಕಾನೂನು ಕ್ರಮ ಜರುಗಿಸುವಂತೆ ಕೋರಿ ಲಿಖಿತವಾಗಿ ಅರ್ಜಿ ಸಲ್ಲಿಸಲು, ದೂರು ನೀಡಿ ವಿಚಾರಣೆಗೆ ಕೋರಲು ಯಾವುದೇ ಆಸಕ್ತ ವ್ಯಕ್ತಿಗೂ ಅವಕಾಶವಿದೆ ಎಂದು ಹೈಕೋರ್ಟ್ ಹೇಳಿದೆ. ಬೆಂಗಳೂರು ಪೂರ್ವ ತಾಲೂಕಿನ ವರ್ತೂರು ಹೋಬಳಿಯ ರಾಮಗೊಂಡನಹಳ್ಳಿ ಗ್ರಾಮದ ಸರ್ವೇ ನಂಬರ್ 114ರಲ್ಲಿನ 2 ಎಕರೆ 4 ಗುಂಟೆ ಜಾಗ ಪಿಟಿಸಿಎಲ್ ಕಾಯ್ದೆಯಡಿ 1950ರ ಪೂರ್ವದಲ್ಲಿ ಸರ್ಕಾರದಿಂದ ಮಂಜೂರಾಗಿರುವ ಪೂಜಿಗ ಎಂಬುವವರ ಕಾನೂನುಬದ್ದ ವಾರಸುದಾರರ ಹೆಸರಿಗೆ ಪುನರ್ ಸ್ಥಾಪಿಸಲು ನಗರ ಜಿಲ್ಲಾಧಿಕಾರಿ 2022ರ ಅ.31ರಂದು ಆದೇಶ ಹೊರಡಿಸಿದ್ದರು. ಈ ಆದೇಶ ರದ್ದು ಕೋರಿ ಬೆಂಗಳೂರಿನ ವಿಜಯ್ ಕುಮಾರ್ ಎಂಬುವವರು ಹೈಕೋರ್ಟ್ಗೆ ತಕರಾರು ಅರ್ಜಿ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ರೂಪುಗೊಂಡಿರುವ ಮೋಂಥಾ ಚಂಡಮಾರುತ ಪರಿಣಾಮ ರಾಜ್ಯದಲ್ಲಿ ಇಂದು, ನಾಳೆ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವು ಚಂಡಮಾರುತವಾಗಿ ಪರಿವರ್ತನೆಯಾಗಿದ್ದು, ಆಂಧ್ರದ ಉತ್ತರ ಭಾಗ ಹಾಗೂ ಒಡಿಶಾಗೆ ಅಪ್ಪಳಿಸುವ ಸಾಧ್ಯತೆ ಇದೆ. ಇದರ ಪರಿಣಾಮವಾಗಿ ರಾಜ್ಯದ ಕರಾವಳಿ, ಉತ್ತರ ಒಳನಾಡು ಹಾಗೂ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಮುಂದಿನ ಎರಡು ದಿನ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಅ.27ಕ್ಕೆ ಬೆಳಗಾವಿ, ಧಾರಾವಾಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಕಡೆಯಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಂಭವವಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಕಾರಣ ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೆಳಗಾವಿ, ಧಾರವಾಡದಲ್ಲಿ ನಿರಂತರ ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೀದರ್, ಗದಗ, ಬಾಗಲಕೋಟೆ, ಕಲಬುರ್ಗಿ, ಕೊಪ್ಪಳ,…
ನವದೆಹಲಿ : ದೇಶಾದ್ಯಂತ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ದಿನಾಂಕಗಳನ್ನು ಘೋಷಿಸಲು ಭಾರತೀಯ ಚುನಾವಣಾ ಆಯೋಗ (ECI) ಇಂದು ಸಂಜೆ ಪತ್ರಿಕಾಗೋಷ್ಠಿ ನಡೆಸಲಿದೆ. ಸಂಜೆ 4:15 ಕ್ಕೆ ಘೋಷಣೆ ನಡೆಯಲಿದ್ದು, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್, ಚುನಾವಣಾ ಆಯುಕ್ತರಾದ ಸುಖ್ಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಅವರು ವಿವರಗಳನ್ನು ಹಂಚಿಕೊಳ್ಳುವ ಪ್ರಕ್ರಿಯೆಯನ್ನು ಮುನ್ನಡೆಸಲಿದ್ದಾರೆ. ವರದಿಯ ಪ್ರಕಾರ, ಮೊದಲ ಹಂತವು 2026 ರಲ್ಲಿ ವಿಧಾನಸಭಾ ಚುನಾವಣೆಗಳು ಸೇರಿದಂತೆ 10 ರಿಂದ 15 ರಾಜ್ಯಗಳನ್ನು ಒಳಗೊಳ್ಳುತ್ತದೆ. ಮತದಾರರ ಪಟ್ಟಿಯನ್ನು ನವೀಕರಿಸಲು ಮತ್ತು ಶುದ್ಧೀಕರಿಸಲು ಎಸ್ಐಆರ್ ಒಂದು ನಿರ್ಣಾಯಕ ಪ್ರಕ್ರಿಯೆಯಾಗಿದ್ದು, ಇದರಲ್ಲಿ ಹೊಸ ಮತದಾರರನ್ನು ನೋಂದಾಯಿಸುವುದು, ಮೃತರ ಹೆಸರುಗಳನ್ನು ತೆಗೆದುಹಾಕುವುದು, ನಕಲಿ ನಮೂದುಗಳನ್ನು ತೆಗೆದುಹಾಕುವುದು ಮತ್ತು ವರ್ಗಾವಣೆಗಳು ಸೇರಿವೆ. ಆಯೋಗದ ಈ ಉಪಕ್ರಮವು ಶೀಘ್ರದಲ್ಲೇ ಚುನಾವಣೆಗಳು ನಡೆಯಲಿರುವ ತಮಿಳುನಾಡು, ಪಶ್ಚಿಮ ಬಂಗಾಳ, ಕೇರಳ, ಅಸ್ಸಾಂ ಮತ್ತು ಪುದುಚೇರಿಯಂತಹ ರಾಜ್ಯಗಳ ಮೇಲೆ ವಿಶೇಷವಾಗಿ ಗಮನಹರಿಸಿದೆ. ಈ ರಾಜ್ಯಗಳಲ್ಲಿ 2026ಕ್ಕೆ ವಿಧಾನಸಭಾ ಚುನಾವಣೆಗಳು…














