Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ರಾಜ್ಯದಲ್ಲಿ ತಾಪಮಾನ ಕುಸಿತವಾಗಿದ್ದು, ಮೈನಡುಗುವ ಚಳಿಗೆ ಜನರು ತತ್ತರಿಸಿದ್ದಾರೆ. ಈ ನಡುವೆ ಇನ್ನೂ 2 ದಿನ ಶೀತಗಾಳಿ ಎಚ್ಚರಿಕೆ ನೀಡಲಾಗಿದೆ. ಹೌದು,ಉತ್ತರ ಕರ್ನಾಟಕದ ಎಲ್ಲ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಪ್ರಮುಖ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಶೀತ ಅಲೆ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕರ್ನಾಟಕ ಭಾಗದ ಬೀದರ್, ಕಲಬುರಗಿ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಿಗೆ ಶೀತ ಅಲೆಯು ತೀವ್ರವಾಗಿರುವ ಲಕ್ಷಣ ಕಂಡು ಬಂದಿರುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಬಾಗಲಕೋಟೆ, ಬೆಳಗಾವಿ, ಧಾರಾವಾಡ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಪ್ರಮಾಣದಲ್ಲಿ ಶೀತ ಅಲೆ ಇರಲಿದ್ದು, ಹೀಗಾಗಿ, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ನ ಎಚ್ಚರಿಕೆ ನೀಡಲಾಗಿದೆ.
ಬೆಂಗಳೂರು : ಸಾರ್ವಜನಿಕರೇ ಎಚ್ಚರ, ಹೊಸ ವರ್ಷಕ್ಕೆ ನಿಮ್ಮ ವಾಟ್ಸಪ್ ಗೆ ಅಪರಿಚಿತರು ಕಳುಹಿಸುವ `APK’ ಶುಭಾಶಯ ಲಿಂಕ್ಗಳ ಮೇಲೆ ಕ್ಲಿಕ್ ಮಾಡಬೇಡಿ. ಹೌದು, ಅಪರಿಚಿತರು ಲಿಂಕ್ನೊಂದಿಗೆ ಹೊಸ ವರ್ಷದ ಶುಭಾಶಯ ಸಂದೇಶವನ್ನು ಕಳುಹಿಸುತ್ತಾರೆ, ಶುಭಾಶಯ ಪತ್ರಗಳನ್ನು ಕಳುಹಿಸಲು APK ಇನ್ಸಾಲ್ ಮಾಡಲು ನಿಮ್ಮನ್ನು ಕೇಳಲಾಗುತ್ತದೆ. ಒಮ್ಮೆ ಇನ್ಸಾಲ್ ಮಾಡಿದ ನಂತರ, ಸೈಬರ್ ವಂಚಕರು ನಿಮ್ಮ ಫೋಟೋಗಳು, ಸಂಪರ್ಕಗಳು, OTP ಗಳು ಮತ್ತು ಬ್ಯಾಂಕಿಂಗ್ ಡೇಟಾವನ್ನು ಕದಿಯಬಹುದು. ಸುರಕ್ಷಿತವಾಗಿರಲು ಸಲಹೆಗಳು ಲಿಂಕ್ಗಳಿಂದ APK ಗಳನ್ನು ಎಂದಿಗೂ ಇನ್ಸಾಲ್ ಮಾಡದಿರಿ ಅಧಿಕೃತ ಅಪ್ಲಿಕೇಶನ್ ಸ್ಟೋರ್ಗಳನ್ನು ಬಳಸಿ ಕ್ಲಿಕ್ ಮಾಡುವ ಮೊದಲು ಕಳುಹಿಸುವವರೊಂದಿಗೆ ಪರಿಶೀಲಿಸಿ ಸಂದೇಹವಿದ್ದರೆ, ಕ್ಲಿಕ್ ಮಾಡಬೇಡಿ ನಿಮ್ಮ ಕುಟುಂಬ ಮತ್ತು ಸ್ನೇಹಿತರನ್ನು ರಕ್ಷಿಸಲು ಇದನ್ನು ಹಂಚಿಕೊಳ್ಳಿ
ಬೆಂಗಳೂರು : ರಾಜ್ಯ ಸರ್ಕಾರದ ಕಛೇರಿಗಳಲ್ಲಿ ಸರ್ಕಾರಿ ನೌಕರರು ಚಲನವಲನ ವಹಿ (Movement Register) ಮತ್ತು ನಗದು ಘೋಷಣೆ ವಹಿ (Cash Declaration Register) ಯನ್ನು ನಿರ್ವಹಣೆ ಮಾಡದಿರುವುದು, ಸಭ್ಯ ಉಡುಗೆ ತೊಡುಗೆಗಳನ್ನು ಧರಿಸದಿರುವ ಕುರಿತು ಸಾರ್ವಜನಿಕರಿಂದ/ಸಂಘ ಸಂಸ್ಥೆಗಳಿಂದ ಹಲವಾರು ದೂರುಗಳು ಸ್ವೀಕೃತವಾಗುತ್ತಿವೆ. ಈ ಕುರಿತು ಈ ಹಿಂದೆ ಹಲವು ಸುತ್ತೋಲೆಗಳನ್ನು ಹೊರಡಿಸಲಾಗಿರುತ್ತದೆ. ಆದಾಗ್ಯೂ ಸದರಿ ಸುತ್ತೋಲೆಗಳನ್ನು ಪಾಲನೆ ಮಾಡದಿರುವುದನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದ್ದು, ಈ ಕೆಳಕಂಡ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ನಿರ್ದೇಶಿಸಿದೆ. ಚಲನಾ ನೋಂದಣಿ ಕಚೇರಿ ವೇಳೆಯಲ್ಲಿ ಸರ್ಕಾರಿ ನೌಕರರ ಚಲನವಲನವನ್ನು ನಿಯಂತ್ರಿಸಲು ಚಲನವಲನ ವಹಿಯ ನಿರ್ವಹಣೆ ಬಗ್ಗೆ ಸುತ್ತೋಲೆ ಸಂಖ್ಯೆ: ಸಿಆಸುಇ 02 ತಎಇ 2016, ದಿನಾಂಕ: 12.04.2016, ಸಿಆಸುಇ 05 ಕತವ 2020, ໖:07.02.2020 ಹಾಗೂ /4464335/2025, ໖:25.07.2022 , 03, ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಚಲನವಲನ ವಹಿ (Movement Register) ಯನ್ನು ಕಡ್ಡಾಯವಾಗಿ ನಿರ್ವಹಿಸುವಂತೆ ಸೂಚಿಸಿದೆ. ಎಲ್ಲಾ ಅಧಿಕಾರಿ/ಸಿಬ್ಬಂದಿಗಳು ಸರ್ಕಾರಿ ಕಚೇರಿಗಳ ನಿಗದಿತ ಪ್ರಾರಂಭ ಸಮಯವಾದ…
ಬೆಂಗಳೂರು : ರಾಜ್ಯದ ಖಾಸಗಿ ಅನುದಾನಿತ ಕಾಲೇಜುಗಳ ಸಿಬ್ಬಂದಿಗಳಿಗೆ ರಜೆ (ವಿಶೇಷ ಸಾಂರ್ಭಿಕ ರಜೆ) ಸೌಲಭ್ಯಗಳನ್ನು ಮಂಜೂರು ಮಾಡುವ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಖಾಸಗಿ ಅನುದಾನಿತ ಕಾಲೇಜುಗಳ ಸಿಬ್ಬಂದಿಗಳಿಗೆ ರಜೆ (ಶಿಶು ಪಾಲನಾ ರಜೆ) ಸೌಲಭ್ಯಗಳನ್ನು ಮಂಜೂರು ಮಾಡುವ ಕುರಿತು ಸರ್ಕಾರವನ್ನು ಉಲ್ಲೇಖ(1)ರಲ್ಲಿ ಕೋರಲಾಗಿತ್ತು. ಸದರಿ ಪ್ರಸ್ತಾವನೆಯನ್ನು ಪರಿಶೀಲಿಸಿದ ಸರ್ಕಾರವು ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬೋಧನಾ ಸಿಬ್ಬಂದಿಗಳಿಗೆ ಶಿಶು ಪಾಲನಾ ರಜೆಯನ್ನು ನೀಡಬೇಕಾದರೆ ಸಂಬಂಧಿತ ಬೋಧಕರ ರಜೆ ಅವಧಿಯಲ್ಲಿ ಪರ್ಯಾಯ ಬೋಧಕ ವ್ಯವಸ್ಥೆಯನ್ನು ಮಾಡಿ ಅದಕ್ಕೆ ತಗಲುವ ವೆಚ್ಚವನ್ನು ತನ್ನ ಸ್ವಂತ ಸಂಪನ್ಮೂಲದಿಂದ ಭರಿಸಿದ್ದಲ್ಲಿ ಸದರಿ ಪ್ರಸ್ತಾವನೆಯನ್ನು ಒಪ್ಪಬಹುದಾಗಿದೆ ಎಂದು ನಿರ್ದೇಶಿಸಿದ್ದು, ಇದನ್ನು ತಮ್ಮ ಕಛೇರಿ ವ್ಯಾಪ್ತಿಯ ಖಾಸಗಿ ಅನುದಾನಿತ ಕಾಲೇಜುಗಳ ಗಮನಕ್ಕೆ ತರಲು ಈ ಮೂಲಕ ತಿಳಿಸಲಾಗಿದೆ.
ಬೆಳಗಾವಿ : ಗ್ರಾಮೀಣ ಪ್ರದೇಶಗಳಲ್ಲಿನ ಕಂದಾಯ ಜಮೀನಿನಲ್ಲಿ ನಿವೇಶನವನ್ನು ಕೇವಲ ಕರಾರು ಒಪ್ಪಂದ ಪತ್ರದಲ್ಲಿ ಖರೀದಿಸಿ, ಮನೆ ನಿರ್ಮಿಸಿಕೊಂಡವರಿಗೆ ಹಕ್ಕುಪತ್ರ ನೀಡಿ, ಖಾತಾ ಒದಗಿಸುವುದಕ್ಕೆ ನಿಯಮಗಳನ್ನು ರೂಪಿಸಲು ಕಾಲಾವಕಾಶ ಬೇಕಾಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಕಂಪ್ಲಿ ವಿಧಾನಸಭಾ ಕ್ಷೇತ್ರದ ಶಾಸಕ ಜೆ.ಎನ್. ಗಣೇಶ್ ಅವರ ಪ್ರಶ್ನೆಗೆ ಉತ್ತರಿಸಿದರು. ಗ್ರಾಮೀಣ ಪ್ರದೇಶಗಳಲ್ಲಿ ಬಡ ಕುಟುಂಬಗಳು ಕಂಪ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಕಡಿಮೆ ಬೆಲೆಗೆ ನಿವೇಶನಗಳು ದೊರಕುತ್ತದೆ ಎಂದು ಈ ಹಿಂದೆ ಕಂದಾಯ ಜಮೀನಿನ ನಿವೇಶನಗಳಲ್ಲಿ ಜಮೀನಿನ ಮಾಲೀಕರೊಂದಿಗೆ ಅಗ್ರೀಮೆಂಟ್ ಪತ್ರ ಮಾಡಿಕೊಂಡು ಖರೀದಿಸಿ, ಈಗಾಗಲೇ ವಸತಿ ಮನೆಗಳನ್ನು ನಿರ್ಮಿಸಿಕೊಂಡು ವಾಸವಿದ್ದಾರೆ, ಇಂತಹ ಪ್ರಕರಣಗಳು ರಾಜ್ಯಾದ್ಯಂತ ಇವೆ. ಹೀಗಾಗಿ ಇಂತಹವರಿಗೆ ದಾಖಲೆಗಳನ್ನು ಪರಿಶೀಲಿಸಿ, ಹಕ್ಕುಪತ್ರ ಕೊಡಿಸಿ, ಇವರಿಗೆ ನ್ಯಾಯ ಒದಗಿಸಿಕೊಡಬೇಕಿದೆ ಎಂದು ಕಂಪ್ಲಿ ಶಾಸಕ ಜೆ.ಎನ್. ಗಣೇಶ್ ಮನವಿ ಮಾಡಿದರು. ಗ್ರಾಮೀಣಾಭಿವೃದ್ಧಿ ಮತ್ತು…
BIG NEWS : ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : `ಹಳೆಯ ಡಿಫೈನ್ಸ್ ಪಿಂಚಣಿ ಯೋಜನೆ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ.!
ಬೆಂಗಳೂರು : ದಿನಾಂಕ:01-04-2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಳೆಯ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳವಡಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲೆ ಓದಲಾದ ಕ್ರಮ ಸಂಖ್ಯೆ(1)ರಲ್ಲಿನ ಸರ್ಕಾರದ ಆದೇಶ ದಿನಾಂಕ:01/04/2006 ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿದ್ದು, ಆ ದಿನಾಂಕದಂದು ಅಥವಾ ತದನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಿಂದನ ಡಿಫೈನ್ಸ್ ಪಿಂಚಣಿ ಯೋಜನೆಯ ವ್ಯಾಪ್ತಿಗೆ ಒಳಪಡಿಸಲು ಸರ್ಕಾರವು ಒಪ್ಪಿರುತ್ತದೆ. ಅದರಂತೆ ಈ ಆದೇಶದ ವ್ಯಾಪ್ತಿಗೊಳಪಡುವ ಸರ್ಕಾರಿ ನೌಕರರಿಂದ ದಿನಾಂಕ:30/06/2024 ರೊಳಗೆ ಅಭಿಮತವನ್ನು ಪಡೆದು ಕ್ರೂಡೀಕೃತ ಪ್ರಸ್ತಾವನೆಯನ್ನು ಸರ್ಕಾರದ ಪರಿಶೀಲನೆಗಾಗಿ ಸಲ್ಲಿಸುವಂತೆ ಸಂಬಂಧಪಟ್ಟ ಇಲಾಖೆಗಳಿಗೆ ನಿರ್ದೇಶನ ನೀಡಲಾಗಿರುತ್ತದೆ. ಮೇಲೆ ಓದಲಾದ ಕ್ರಮ ಸಂಖ್ಯೆ (2) ರಲ್ಲಿನ ಸರ್ಕಾರದ ಆದೇಶದಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆಯಿಂದ ಹಿಂದಿನ ಡಿಫೈನ್ಸ್ ಯೋಜನೆ ವ್ಯಾಪ್ತಿಗೆ ಒಳಪಡುವ ಸರ್ಕಾರಿ ನೌಕರರ ಎನ್ಪಿಎಸ್ ಪ್ರಾನ್ ಖಾತೆಯಲ್ಲಿನ…
ಬೆಂಗಳೂರು : ರಾಜ್ಯದಲ್ಲಿ ಮಂಗನ ಕಾಯಿಲೆ ತಡೆಗಟ್ಟಲು ಕೈಗೊಳ್ಳಬೇಕಾದ ನಿಯಂತ್ರಣ ಕ್ರಮಗಳ ಕುರಿತು ರಾಜ್ಯ ಸರ್ಕಾರವು ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಕ್ಯಾಸನೂರು ಫಾರೆಸ್ಟ್ ಡಿಸೀಸ್ (ಕೆ.ಎಫ್.ಡಿ.) ಅಥವಾ ಮಂಗನ ಕಾಯಿಲೆಯು ಸೋಂಕಿತ ಉಣ್ಣೆಗಳು ಕಚ್ಚುವುದರಿಂದ ಹರಡುವ ವೈರಾಣು ರೋಗವಾಗಿದ್ದು, ಸಾಮಾನ್ಯವಾಗಿ ನವೆಂಬರ್ನಿಂದ ಜೂನ್ ತಿಂಗಳ ಅವಧಿಯಲ್ಲಿ ಕಂಡುಬರುತ್ತದೆ. ಪ್ರಸ್ತುತ, ಈ ರೋಗಕ್ಕೆ ಯಾವುದೇ ನಿರ್ದಿಷ್ಟ ಚಿಕಿತ್ಸೆಯಾಗಲಿ ಲಸಿಕೆಯಾಗಲಿ ಲಭ್ಯವಿರುವುದಿಲ್ಲ. ಈ ಹಿನ್ನಲೆಯಲ್ಲಿ, ರೋಗವನ್ನು ತಡೆಗಟ್ಟುವುದು ಮತ್ತು ರೋಗವನ್ನು ಪ್ರಾಥಮಿಕ ಹಂತದಲ್ಲೇ ಗುರುತಿಸಿ ಸೂಕ್ತ ಚಿಕಿತ್ಸೆ ನೀಡಿ ಸಂಭವನೀಯ ಮರಣಗಳನ್ನು ತಡೆಗಟ್ಟುವುದು ಅತ್ಯಂತ ಅವಶ್ಯಕವಾಗಿದ್ದು, ಸೂಕ್ತ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದೆ. ಕೈಗೊಳ್ಳಬೇಕಾದ ಕ್ರಮಗಳು 1. ಮಂಗಗಳ ಅಸಾಮಾನ್ಯ ಸಾವಿನ ಘಟನೆಗಳು ಕೆಎಫ್ಡಿ ಹರಡುವಿಕೆಯ ಪ್ರಾಥಮಿಕ ಸೂಚಕಗಳಾಗಿರುವುದರಿಂದ, ಸಮುದಾಯ ಹಾಗೂ ಅರಣ್ಯ ಸಿಬ್ಬಂದಿಗಳಿಂದ ಮಂಗಗಳ ಸಾವಿನ ಮಾಹಿತಿಯನ್ನು ಸಂಗ್ರಹಿಸತಕ್ಕದ್ದು. ಇದಕ್ಕಾಗಿ ಅರಣ್ಯ ಇಲಾಖೆಯೊಂದಿಗೆ ಸಮನ್ವಯತೆ ಮತ್ತು ಗ್ರಾಮ ಮಟ್ಟದಲ್ಲಿ ಸಮುದಾಯದೊಂದಿಗೆ ಸಂವಹನ ನಡೆಸಿ ನೈಜ ಸಮಯದಲ್ಲಿ (real time) ಮಂಗಗಳ ಸಾವಿನ ವರದಿಯು ಲಭ್ಯವಾಗುವಂತೆ…
ಬೆಳಗಾವಿ : ರಾಜ್ಯ ಸರ್ಕಾರ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳಿಂದಾಗಿ ತಲಾ ಆದಾಯದಲ್ಲಿ ಕರ್ನಾಟಕ ದೇಶದಲ್ಲೇ ಮೊದಲ ಸ್ಥಾನ ತಲುಪಿದ್ದು, ರಾಜ್ಯದ ತಲಾದಾಯ ಸರಾಸರಿ 3.39 ಲಕ್ಷ ರು.ಗೆ ತಲುಪಿದೆ. ದೇಶದ ಆರ್ಥಿಕತೆ ಕುಸಿಯುತ್ತಿರುವಾಗ, ಗ್ಯಾರಂಟಿಗಳಿಂದಾಗಿ ರಾಜ್ಯದ ಆರ್ಥಿಕತೆ ವೃದ್ಧಿಯಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿಧಾನಪರಿಷತ್ತಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿನ ಆರ್ಥಿಕ ಅಸಮಾನತೆ ಕಡಿಮೆಯಾಗುವಂತೆ ಮಾಡಿದೆ. ತಲಾ ಆದಾಯದಲ್ಲಿ ಕರ್ನಾಟಕವು ದೇಶಕ್ಕೇ ಮೊದಲ ಸ್ಥಾನ ಪಡೆಯುವಂತಾಗಿದೆ. ಆದರೂ ಇನ್ನೂ ದಕ್ಷಿಣ ಕರ್ನಾಟಕ ಮತ್ತು ಉತ್ತರ ಕರ್ನಾಟಕದ ನಡುವಿನ ಅಸಮಾ ನತೆ ಕಡಿಮೆಯಾಗಿಲ್ಲ.ಗ್ಯಾರಂಟಿ ಯೋಜನೆಗಳಿಗಾಗಿ ಸರ್ಕಾರ 1.06 ಲಕ್ಷ ಕೋಟಿ ರು. ವೆಚ್ಚ ಮಾಡಿದ್ದು, ಅದರಲ್ಲಿ ಉತ್ತರ ಕರ್ನಾಟಕಕ್ಕಾಗಿಯೇ46,276 ಕೋಟಿರು.ವ್ಯಯಿಸಲಾಗಿದೆ. ಗ್ಯಾರಂಟಿ ಸ್ತ್ರೀಂಗಳ ಒಟ್ಟು ವೆಚ್ಚದಲ್ಲಿ ಶೇ. 43.63ರಷ್ಟನ್ನು ಉತ್ತರ ಕರ್ನಾಟಕ ಭಾಗಕ್ಕೆ ಖರ್ಚು ಮಾಡಲಾಗಿದೆ ಎಂದರು. ವಿಧಾನ ಪರಿಷತ್ ಅನ್ನು ಹಿರಿಯರ ಮನೆ ಎಂದು ಕರೆಯಲಾಗುತ್ತಿದ್ದು, ಇಲ್ಲಿನ ಸದಸ್ಯರ ಮಾತಿಗೆ…
ಬೆಂಗಳೂರು: ಬಿಡಿಎ, ಬೆಂಗಳೂರು ಜಲಮಂಡಳಿ, ತಾಂತ್ರಿಕ ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ನೇಮಕಾತಿಗೆ ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳಿಗೆ ಡಿ.20ರಿಂದ 22ರವರೆಗೆ ಲಿಖಿತ ಪರೀಕ್ಷೆ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಿಗಿ ಕ್ರಮಗಳನ್ನು ಕೈಗೊಂಡಿದೆ. ವಿವಿಧ ಹುದ್ದೆಗಳಿಗೆ ಕಲ್ಯಾಣ ಕರ್ನಾಟಕದ ಒಟ್ಟು 24,800 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು ಅಷ್ಟೂ ಮಂದಿಗೆ ಮೂರು ದಿನಗಳ ಕಾಲ ಪರೀಕ್ಷೆ ನಡೆಸಲಾಗುತ್ತದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದರು. ಅತ್ಯಂತ ಪಾರದರ್ಶಕ ಹಾಗೂ ಅಕ್ರಮಗಳಿಗೆ ಅವಕಾಶ ಇಲ್ಲದಂತೆ ಪರೀಕ್ಷೆಗಳನ್ನು ನಡೆಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಪರೀಕ್ಷಾ ಕೊಠಡಿಯಲ್ಲಿ ಸಿಸಿಟಿವಿ ಜತೆಗೆ ಜಾಮರ್ ಕೂಡ ಹಾಕಿದ್ದು, ಎಲೆಕ್ಟ್ರಾನಿಕ್ ವಸ್ತುಗಳ ಬಳಕೆಗೆ ನಿರ್ಬಂಧ ವಿಧಿಸಲಾಗಿದೆ. ಮುಖಚಹರೆ ಪತ್ತೆ ತಂತ್ರಜ್ಞಾನ ಬಳಸಿಯೇ ಅಭ್ಯರ್ಥಿಗಳನ್ನು ಪರೀಕ್ಷಾ ಕೇಂದ್ರದ ಒಳಗೆ ಬಿಡಲಾಗುತ್ತದೆ. ವಸ್ತ್ರ ಸಂಹಿತೆ ಇದ್ದು ಅಭ್ಯರ್ಥಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಅವರು ಹೇಳಿದ್ದಾರೆ. ಡಿ.20ರಂದು ಬೆಂಗಳೂರಿನ ಏಳು ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಒಟ್ಟು 3,486 ಮಂದಿ ತೆಗೆದುಕೊಂಡಿದ್ದಾರೆ.…
ಬೆಂಗಳೂರು : ರಾಜ್ಯದ ರೈತರಿಗೆ ಸಿಹಿಸುದ್ದಿ, ಪಶುಪಾಲನಾ ಇಲಾಖೆಯಲ್ಲಿ ಈ ಕೆಳಕಂಡ ಯೋಜನೆಗಳಡಿ ರೈತರ ವಂತಿಕೆ ಮತ್ತು ಸರ್ಕಾರದ ಸಹಾಯಧನವನ್ನು ಪಡೆಯಬಹುದು. ಪ್ರಾಥಮಿಕ ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಹಾಲು ಸರಬರಾಜು ಮಾಡುವ ಸದಸ್ಯರಿಗೆ ಪ್ರತಿ ಲೀಟರ್ ಗುಣಾತ್ಮಕ ಹಾಲಿಗೆ ಗೆ ರೂ.5/-ಪ್ರೋತ್ಸಾಹಧನ ನೀಡಲಾಗುತ್ತಿದೆ. ರಾಸುಗಳು ಆಕಸ್ಮಿಕ ಮರಣ ಹೊಂದಿದಾಗ ರೈತರಿಗೆ ಉಂಟಾಗುವ ಆರ್ಥಿಕ ನಷ್ಟವನ್ನು ಭರಿಸಲು ಮರಣ ಹೊಂದಿದ ಧನ, ಎಮ್ಮೆ. ಹೋರಿ ಮತ್ತು ಕಡಸುಗಳಿಗೆ ರೂ 15,000/- ಪರಿಹಾರ ಧನವನ್ನು ರಾಸುಗಳ ಮಾಲೀಕರಿಗೆ ವಿತರಿಸಲಾಗುವುದು. ಆಕಸ್ಮಿಕ ಮರಣ ಹೊಂದಿದ 3-6 ತಿಂಗಳ ವಯಸ್ಸಿನ ಕುರಿ/ ಮೇಕೆಗಳಿಗೆ ರೂ. 3,500 ಹಾಗೂ 6 ತಿಂಗಳ ಮೇಲ್ಪಟ್ಟ ಕುರಿ/ಮೇಕೆಗಳಿಗೆ ಅವುಗಳ ಮಾಲೀಕರಿಗೆ ರೂ. 5000/-ಪರಿಹಾರ ವಿತರಣೆ ಮಾಡಲಾಗುವುದು.














