Subscribe to Updates
Get the latest creative news from FooBar about art, design and business.
Author: kannadanewsnow57
ಗದಗ : ರಾಜ್ಯದಲ್ಲಿ ಮತ್ತೊಂದು ಭೀಕರ ಮರ್ಡರ್ ನಡೆದಿದ್ದು, ಆಸ್ತಿ ವಿಚಾರವಾಗಿ ಮಗನೇ ತನ್ನ ತಂದೆಯನ್ನು ಹತ್ಯೆ ಮಾಡಿರುವ ಘಟನೆ ಗದಗದಲ್ಲಿ ನಡೆದಿದೆ. ಗದಗ ಜಿಲ್ಲೆಯ ಗೋವನಾಳ ಗ್ರಾಮದಲ್ಲಿ ಆಸ್ತಿ ವಿಚಾರವಾಗಿ ಮಗನೇ ಹೆತ್ತ ತಂದೆಯನ್ನೇ ಕೊಲೆ ಮಾಡಿರುವ ಘಟನೆ ನಡೆದಿದೆ. ಶಂಕರ ಗೌಡ ದ್ಯಾವನಗೌಡ್ರ (60) ಎಂಬುವರನ್ನು ಅವರ ಮಗ ಪ್ರಭು ಹತ್ಯೆ ಮಾಡಿದ್ದಾನೆ. 2 ಎಕರೆ ಜಮೀನಿಗೊಸ್ಕರ ತಂದೆ-ಮಗನ ನಡುವೆ ಜಗಳವಾಗಿದ್ದು, ಈ ವೇಳೆ ತಂದೆ ಮೇಲೆ ಮಗ ಪ್ರಭು ಜೋರಾಗಿ ಹೊಡೆದಿದ್ದು, ಹೊಡೆದ ರಭಸಕ್ಕೆ ಶಂಕರಗೌಡ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಲಕ್ಷ್ಮೇಶ್ವರ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಆರೋಪಿ ಮಗ ಪ್ರಭುವನ್ನು ಬಂಧಿಸಿದ್ದಾರೆ.
ಸೈನಿಕ ಶಾಲೆಯಲ್ಲಿ ಓದಬೇಕೆಂಬ ಕನಸು ಹೊತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಒಂದು ಸಿಹಿ ಸುದ್ದಿ. ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಅಖಿಲ ಭಾರತ ಸೈನಿಕ ಶಾಲೆಗಳ ಪ್ರವೇಶ ಪರೀಕ್ಷೆಯ (AISSEE 2026) ಫಲಿತಾಂಶವನ್ನು ಬಿಡುಗಡೆ ಮಾಡಿದೆ. ಈ ಪ್ರವೇಶ ಪರೀಕ್ಷೆಗೆ ಹಾಜರಾಗಿದ್ದ ಅಭ್ಯರ್ಥಿಗಳು ಈಗ ಅಧಿಕೃತ ವೆಬ್ಸೈಟ್ exams.nta.nic.in ಗೆ ಭೇಟಿ ನೀಡುವ ಮೂಲಕ ತಮ್ಮ ಫಲಿತಾಂಶವನ್ನು ಡೌನ್ಲೋಡ್ ಮಾಡಿಕೊಳ್ಳಬಹುದು. ಈ ಪರೀಕ್ಷೆಯು ಜನವರಿ 18, 2026 ರಂದು ನಡೆದಿತ್ತು. ಫಲಿತಾಂಶ ಪಡೆಯಲು ಅಭ್ಯರ್ಥಿಗಳು ತಮ್ಮ ಅಪ್ಲಿಕೇಶನ್ ಸಂಖ್ಯೆ, ಪಾಸ್ವರ್ಡ್ ಮತ್ತು ಕ್ಯಾಪ್ಚಾ ಕೋಡ್ ಅನ್ನು ನಮೂದಿಸಬೇಕಾಗುತ್ತದೆ. ಈ ರೀತಿ ರಿಸಲ್ಟ್ ಚೆಕ್ ಮಾಡಿಕೊಳ್ಳಿ NTA ಬಿಡುಗಡೆ ಮಾಡಿರುವ ಸ್ಕೋರ್ಕಾರ್ಡ್ ಅನ್ನು ಡೌನ್ಲೋಡ್ ಮಾಡಲು ಅಭ್ಯರ್ಥಿಗಳು ಈ ಕೆಳಗಿನ ಹಂತಗಳನ್ನು ಅನುಸರಿಸಬಹುದು: ಹಂತ 1: ಮೊದಲು ಅಧಿಕೃತ ವೆಬ್ಸೈಟ್ exams.nta.nic.in ಗೆ ಭೇಟಿ ನೀಡಿ. ಹಂತ 2: ವೆಬ್ಸೈಟ್ನ ಮುಖಪುಟದಲ್ಲಿರುವ ‘Candidate Activity’ ವಿಭಾಗದ ಮೇಲೆ ಕ್ಲಿಕ್ ಮಾಡಿ. ಹಂತ 3: ನಂತರ…
ಕಾರ್ಮಿಕರೇ ನಿಮ್ಮ ಬಳಿ ಈ ಕಾರ್ಡ್ ಇದ್ರೆ ಸಿಗಲಿದೆ ₹3000 ಮಾಸಿಕ ಪಿಂಚಣಿ, ₹2 ಲಕ್ಷ ವಿಮೆ : ಸರ್ಕಾರದ ಬಂಪರ್ ಗಿಫ್ಟ್ !
ನವದೆಹಲಿ: ಅಸಂಘಟಿತ ವಲಯದ ಕೋಟ್ಯಂತರ ಕಾರ್ಮಿಕರ ಬಾಳಿಗೆ ಬೆಳಕಾಗಲು ಭಾರತ ಸರ್ಕಾರ ಮುಂದಾಗಿದ್ದು, 2026ರಲ್ಲಿ ಇ-ಶ್ರಮ್ (e-Shram) ಕಾರ್ಡ್ ಯೋಜನೆಯನ್ನು ಮತ್ತಷ್ಟು ಬಲಿಷ್ಠಗೊಳಿಸಿದೆ. ಈ ಡಿಜಿಟಲ್ ಗುರುತಿನ ಚೀಟಿಯು ಕಾರ್ಮಿಕರ ಸಾಮಾಜಿಕ ಭದ್ರತೆಗೆ ‘ಒನ್-ಸ್ಟಾಪ್ ಸೊಲ್ಯೂಷನ್’ ಆಗಿ ಮಾರ್ಪಟ್ಟಿದೆ. ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಇತ್ತೀಚಿನ ಅಂಕಿಅಂಶಗಳ ಪ್ರಕಾರ, ದೇಶದಾದ್ಯಂತ ಈಗಾಗಲೇ 31.54 ಕೋಟಿಗೂ ಹೆಚ್ಚು ಕಾರ್ಮಿಕರು ಈ ಯೋಜನೆಯಡಿ ನೋಂದಾಯಿಸಿಕೊಂಡಿದ್ದಾರೆ. ಕಟ್ಟಡ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಮನೆಗೆಲಸದವರು ಮಾತ್ರವಲ್ಲದೆ ಈಗ ಸ್ವಿಗ್ಗಿ-ಜೊಮ್ಯಾಟೊದಂತಹ ‘ಗಿಗ್ ವರ್ಕರ್ಸ್’ ಕೂಡ ಈ ಯೋಜನೆಯ ಪ್ರಯೋಜನ ಪಡೆಯಬಹುದಾಗಿದೆ. ಇ-ಶ್ರಮ್ ಕಾರ್ಡ್ 2026: ಪ್ರಮುಖ ಲಾಭಗಳು ಇಲ್ಲಿವೆ 2026ರ ಹೊಸ ಅಪ್ಡೇಟ್ ಅನ್ವಯ, ಇ-ಶ್ರಮ್ ಪೋರ್ಟಲ್ ಅನ್ನು ಇತರ ಪ್ರಮುಖ ಕಲ್ಯಾಣ ಯೋಜನೆಗಳೊಂದಿಗೆ ಲಿಂಕ್ ಮಾಡಲಾಗಿದೆ: ₹3,000 ಮಾಸಿಕ ಪಿಂಚಣಿ: ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್-ಧನ್ (PM-SYM) ಯೋಜನೆಯ ಅಡಿಯಲ್ಲಿ, ಕಾರ್ಮಿಕರಿಗೆ 60 ವರ್ಷ ತುಂಬಿದ ನಂತರ ಪ್ರತಿ ತಿಂಗಳು ₹3,000 ನಿಶ್ಚಿತ ಪಿಂಚಣಿ…
ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಿದ್ದು, ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಶುಭ ಹಾರೈಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ದ್ವಿತೀಯ ಪಿಯುಸಿ ಪರೀಕ್ಷೆ ಎದುರಿಸುತ್ತಿರುವ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಶುಭ ಹಾರೈಕೆಗಳು. ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಿರಿ, ಉತ್ತಮ ಅಂಕಗಳ ಜೊತೆಗೆ ಉಜ್ವಲ ಭವಿಷ್ಯವೂ ನಿಮ್ಮದಾಗಲಿ ಎಂದು ಹಾರೈಸುತ್ತೇನೆ ಎಂದು ಪೋಸ್ಟ್ ಮಾಡಿದ್ದಾರೆ. ಈ ಬಾರಿ ಒಟ್ಟು 7,10,363 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಇದರಲ್ಲಿ 6,46,801 ಹೊಸಬರಾದರೆ, 50,540 ಪುನರಾವರ್ತಿತ ಮತ್ತು 13,022 ಖಾಸಗಿ ಅಭ್ಯರ್ಥಿಗಳಿದ್ದಾರೆ. https://twitter.com/siddaramaiah/status/2027576078357913796?s=20
ಬೆಂಗಳೂರು: ನೀವು ವಾಟ್ಸಾಪ್ (WhatsApp) ಅಥವಾ ಟೆಲಿಗ್ರಾಮ್ (Telegram) ಬಳಸುತ್ತಿದ್ದೀರಾ? ಹಾಗಾದರೆ ಈ ಸುದ್ದಿ ನಿಮಗಾಗಿ. ನಾಳೆಯಿಂದ ಅಂದರೆ ಮಾರ್ಚ್ 1, 2026 ರಿಂದ ಜಾರಿಗೆ ಬರುವಂತೆ ಕೇಂದ್ರ ಟೆಲಿಕಾಂ ಇಲಾಖೆಯು ಸಂವಹನ ಆ್ಯಪ್ಗಳಿಗೆ ಸಂಬಂಧಿಸಿದಂತೆ ಅತ್ಯಂತ ಕಟ್ಟುನಿಟ್ಟಾದ ನಿಯಮಗಳನ್ನು ಜಾರಿಗೆ ತರುತ್ತಿದೆ.ಇನ್ನು ಮುಂದೆ ನಿಮ್ಮ ಮೊಬೈಲ್ನಲ್ಲಿ ಸಿಮ್ ಕಾರ್ಡ್ (SIM Card) ಇಲ್ಲದಿದ್ದರೆ ವಾಟ್ಸಾಪ್ ಕೆಲಸ ಮಾಡುವುದಿಲ್ಲ! ಏನಿದು ‘ಸಿಮ್ ಕಾರ್ಡ್ ಬೈಂಡಿಂಗ್’ ನಿಯಮ? ಇಲ್ಲಿಯವರೆಗೆ, ಒಂದು ಬಾರಿ ವಾಟ್ಸಾಪ್ ಅಥವಾ ಟೆಲಿಗ್ರಾಮ್ ಅನ್ನು ವೆರಿಫೈ (Verify) ಮಾಡಿದ ನಂತರ, ಫೋನ್ನಿಂದ ಸಿಮ್ ಕಾರ್ಡ್ ತೆಗೆದರೂ ವೈಫೈ (WiFi) ಮೂಲಕ ಆ್ಯಪ್ ಬಳಸಲು ಸಾಧ್ಯವಿತ್ತು. ಆದರೆ, ಹೊಸ ‘ಸಿಮ್ ಕಾರ್ಡ್ ಬೈಂಡಿಂಗ್’ ನಿಯಮದ ಪ್ರಕಾರ: ಸಿಮ್ ಇಲ್ಲದಿದ್ದರೆ ಆ್ಯಪ್ ಬಂದ್: ನಿಮ್ಮ ಸ್ಮಾರ್ಟ್ಫೋನ್ನಲ್ಲಿ ಆಕ್ಟಿವ್ ಆಗಿರುವ ಸಿಮ್ ಕಾರ್ಡ್ ಇಲ್ಲದಿದ್ದರೆ ವಾಟ್ಸಾಪ್ ಸ್ವಯಂಚಾಲಿತವಾಗಿ ಲಾಗ್ ಔಟ್ (Log out) ಆಗಲಿದೆ. ನಿರಂತರ ಪರಿಶೀಲನೆ: ಆ್ಯಪ್ ಕೆಲಸ ಮಾಡಲು ಫೋನ್ನಲ್ಲಿ ಸಿಮ್…
ಬೆಂಗಳೂರು: ರಾಜ್ಯದ ನಿವೃತ್ತ ಸರ್ಕಾರಿ ನೌಕರರ ದೀರ್ಘಕಾಲದ ಬೇಡಿಕೆಯಾಗಿದ್ದ ಪಿಂಚಣಿ ಪರಿವರ್ತಿತ ಮೊತ್ತದ (Commuted Pension) ಮರುಸ್ಥಾಪನೆ ಅವಧಿಯನ್ನು ಕಡಿತಗೊಳಿಸುವ ಪ್ರಸ್ತಾವನೆಯನ್ನು ಕರ್ನಾಟಕ ಸರ್ಕಾರವು ಅಧಿಕೃತವಾಗಿ ತಿರಸ್ಕರಿಸಿದೆ. ಈ ಕುರಿತು ಆರ್ಥಿಕ ಇಲಾಖೆಯು ಸ್ಪಷ್ಟನೆಯನ್ನು ನೀಡಿದ್ದು, ಪ್ರಸ್ತುತ ಜಾರಿಯಲ್ಲಿರುವ 15 ವರ್ಷಗಳ ಅವಧಿಯಲ್ಲೇ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ತಿಳಿಸಿದೆ. ಹಿನ್ನೆಲೆ ಮತ್ತು ಬೇಡಿಕೆ ಕರ್ನಾಟಕ ನಾಗರಿಕ ಸೇವಾ ನಿಯಮಗಳ (KCSR) ನಿಯಮ 376(14) ರ ಅನ್ವಯ, ನೌಕರರು ನಿವೃತ್ತಿಯ ಸಮಯದಲ್ಲಿ ತಮ್ಮ ಪಿಂಚಣಿಯ ಒಂದು ಭಾಗವನ್ನು ಇಡಿಗಂಟಾಗಿ ಪಡೆಯಬಹುದು. ಹೀಗೆ ಪಡೆದ ಮೊತ್ತವನ್ನು ಸರಿದೂಗಿಸಲು ಮಾಸಿಕ ಪಿಂಚಣಿಯಲ್ಲಿ ಕಡಿತ ಮಾಡಲಾಗುತ್ತದೆ. ಈ ಕಡಿತದ ಅವಧಿಯನ್ನು ಪ್ರಸ್ತುತ ಇರುವ 15 ವರ್ಷಗಳಿಂದ 12 ವರ್ಷಗಳಿಗೆ ಅಥವಾ ಅದಕ್ಕಿಂತ ಕಡಿಮೆ ಅವಧಿಗೆ ಇಳಿಸಬೇಕೆಂದು ನಿವೃತ್ತ ನೌಕರರ ಸಂಘಗಳು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದವು. ಸರಳ ಬಡ್ಡಿಯ ಲೆಕ್ಕಾಚಾರದ ಪ್ರಕಾರ 11-12 ವರ್ಷಗಳಲ್ಲೇ ಅಸಲು ಮತ್ತು ಬಡ್ಡಿ ವಸೂಲಿಯಾಗುತ್ತದೆ, ಆದ್ದರಿಂದ 15 ವರ್ಷಗಳ ವರೆಗೆ ಕಡಿತ…
ರಾಯಚೂರು : ಮನೆಯಲ್ಲಿದ್ದ ಫ್ರೀಡ್ಜ್ ಸ್ಪೋಟಗೊಂಡು ಮನೆ ಹೊತ್ತಿ ಉರಿದಿರುವ ಘಟನೆ ರಾಯಚೂರು ಜಿಲ್ಲೆಯ ಸಾಲಗುಂದಾ ಗ್ರಾಮದಲ್ಲಿ ನಡೆದಿದೆ. ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಸಾಲಗುಂದಾ ಗ್ರಾಮದಲ್ಲಿ ರಾಜನಾಯ್ಕ್ ಎಂಬುವರ ಮನೆಯಲ್ಲಿ ಫ್ರಿಡ್ಜ್ ಸ್ಪೋಟಗೊಂಡು ಮನೆ ಹೊತ್ತಿ ಉರಿದಿರುವ ಘಟನೆ ನಡೆದಿದೆ. ರಾಜನಾಯ್ಕ್ ಕುಟುಂಬ ನಿನ್ನೆ ಸಿರಗುಪ್ಪಗೆ ತೆರಳಿತ್ತು. ಈ ವೇಳೆ ಮನೆಯಲ್ಲಿ ಏಕಾಏಕಿ ಫ್ರಿಡ್ಜ್ ಸ್ಪೋಟಗೊಂಡಿದೆ. 2.5 ಲಕ್ಷ ರೂ. ನಗದು ಸೆರಿದಂತೆ ಮನೆಯಲ್ಲಿದ್ದ ವಸ್ತುಗಳು ಬೆಂಕಿಗಾಹುತಿಯಾಗಿದೆ. ಸಿಂಧನೂರು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸಾಂಧರ್ಬಿಕ ಚಿತ್ರ
ರಾಯಚೂರು: ಜಿಲ್ಲೆಯಲ್ಲಿ ಮತ್ತೊಂದು ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಅತಿ ವೇಗವಾಗಿ ಬಂದ ಟ್ರಕ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಯುವಕರು ಘಟನಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಗರದ ಬಸವೇಶ್ವರ ವೃತ್ತದಲ್ಲಿ ಈ ಅಪಘಾತ ನಡೆದಿದೆ. ಮೃತರನ್ನು ಮೊಹಮದ್ ಅಲಿ, ಫಯಾಜ್ ಮತ್ತು ನೂರ್ ಅಹಮದ್ ಎಂದು ಗುರುತಿಸಲಾಗಿದ್ದು, ಮೂವರೂ ಒಂದೇ ಬೈಕ್ನಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಘಟನೆಯ ವಿವರ: ಹೈದರಾಬಾದ್ ಮಾರ್ಗದಿಂದ ಮಂತ್ರಾಲಯದ ಕಡೆಗೆ ಅತಿ ವೇಗವಾಗಿ ತೆರಳುತ್ತಿದ್ದ ಟ್ರಕ್, ಬಸವೇಶ್ವರ ವೃತ್ತದ ಬಳಿ ಯುವಕರಿದ್ದ ಬೈಕ್ಗೆ ನೇರವಾಗಿ ಡಿಕ್ಕಿ ಹೊಡೆದಿದೆ.ಪರಿಣಾಮ ಡಿಕ್ಕಿಯ ರಭಸಕ್ಕೆ ಬೈಕ್ ಸಂಪೂರ್ಣ ಜಖಂಗೊಂಡಿದ್ದು, ಗಂಭೀರವಾಗಿ ಗಾಯಗೊಂಡ ಮೂವರು ಯುವಕರು ರಸ್ತೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ಚಾಲಕ ಪರಾರಿ: ಅಪಘಾತ ಸಂಭವಿಸುತ್ತಿದ್ದಂತೆ ಚಾಲಕ ವಾಹನ ಸಮೇತ ಸ್ಥಳದಿಂದ ಪರಾರಿಯಾಗಿದ್ದು, ಮಾನವೀಯತೆ ಮರೆತಿದ್ದಾನೆ. ಪೊಲೀಸ್ ಕ್ರಮ: ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾ ಆಸ್ಪತ್ರೆಗೆ ರವಾನಿಸಿದ್ದಾರೆ. ಪರಾರಿಯಾಗಿರುವ ಟ್ರಕ್…
ನವದೆಹಲಿ : ವ್ಯಾಪಾರ ಮೇಜು. ಕ್ಯಾಲೆಂಡರ್ ಬದಲಾದ ತಕ್ಷಣ, ನಿಮ್ಮ ದೈನಂದಿನ ಜೀವನಕ್ಕೆ ಸಂಬಂಧಿಸಿದ ಹಲವು ನಿಯಮಗಳು ಬದಲಾಗುತ್ತವೆ. ಮಾರ್ಚ್ 1, 2026 ರಿಂದ, ಸಿಮ್ ಕಾರ್ಡ್’ಗಳು, ಬ್ಯಾಂಕಿಂಗ್ ಮತ್ತು ರೈಲ್ವೆಗಳಿಗೆ ಸಂಬಂಧಿಸಿದ ಬದಲಾವಣೆಗಳನ್ನ ಜಾರಿಗೆ ತರಲಾಗುವುದು, ಇದು ನಿಮ್ಮ ಸ್ಮಾರ್ಟ್ಫೋನ್ ಬಳಕೆ ಮತ್ತು ಮನೆಯ ಬಜೆಟ್ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ. ಈ ಬದಲಾವಣೆಗಳು ಡಿಜಿಟಲ್ ಭದ್ರತೆಯನ್ನ ಬಲಪಡಿಸುವ ಮತ್ತು ಸೇವೆಗಳನ್ನ ಹೆಚ್ಚು ಪಾರದರ್ಶಕಗೊಳಿಸುವ ಗುರಿಯನ್ನ ಹೊಂದಿವೆ. ನಾಳೆ ಜಾರಿಗೆ ಬರಲಿರುವ ಐದು ಪ್ರಮುಖ ಬದಲಾವಣೆಗಳನ್ನು ತಿಳಿಯೋಣಾ. 1. ಈಗ ನೀವು ನಿಮ್ಮ ಸಿಮ್ ತೆಗೆದರೆ ವಾಟ್ಸಾಪ್ ಕೆಲಸ ನಿಲ್ಲಿಸುತ್ತದೆ.! ಡಿಜಿಟಲ್ ವಂಚನೆ ಮತ್ತು ‘ಒಟಿಪಿ ಹಗರಣ’ವನ್ನು ನಿಗ್ರಹಿಸಲು, ಸರ್ಕಾರವು ನಾಳೆಯಿಂದ ಕಟ್ಟುನಿಟ್ಟಾದ ಸಿಮ್ ಬೈಂಡಿಂಗ್ ನಿಯಮಗಳನ್ನು ಜಾರಿಗೆ ತರುತ್ತಿದೆ. ಈಗ ನಿಮ್ಮ ವಾಟ್ಸಾಪ್, ಟೆಲಿಗ್ರಾಮ್ ಮತ್ತು ಸಿಗ್ನಲ್ನಂತಹ ಮೆಸೇಜಿಂಗ್ ಅಪ್ಲಿಕೇಶನ್ಗಳು ನಿಮ್ಮ ಸಿಮ್ ಕಾರ್ಡ್ಗೆ ನೇರವಾಗಿ “ಲಾಕ್” ಆಗುತ್ತವೆ. ನಿಮ್ಮ ಫೋನ್ನಿಂದ ಸಿಮ್ ಕಾರ್ಡ್ ತೆಗೆದರೆ, ಈ ಅಪ್ಲಿಕೇಶನ್ಗಳು…
ಗುಬ್ಬಿ: ಅಪ್ರಾಪ್ತ ವಯಸ್ಸಿನ ಮಗನಿಗೆ ವಾಹನ ಚಲಾಯಿಸಲು ನೀಡಿದ ತಂದೆಗೆ ಗುಬ್ಬಿಯ ಜೆ.ಎಂ.ಎಫ್.ಸಿ ನ್ಯಾಯಾಲಯವು 25 ಸಾವಿರ ರೂಪಾಯಿ ದಂಡ ಹಾಗೂ ಒಂದು ದಿನದ ಕಾರಾಗೃಹ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಘಟನೆಯ ಹಿನ್ನೆಲೆ: ದಿನಾಂಕ: ಆಗಸ್ಟ್ 17, 2024 ರಂದು ಪಟ್ಟಣದ ವಿನಾಯಕ ನಗರದ 2ನೇ ಕ್ರಾಸ್, ಗುರುಭವನದ ಮುಂದಿನ ರಸ್ತೆಯಲ್ಲಿ 16 ವರ್ಷದ ಅಪ್ರಾಪ್ತ ಬಾಲಕನು ದ್ವಿಚಕ್ರ ವಾಹನ ಚಲಾಯಿಸುವಾಗ ರಸ್ತೆ ಅಪಘಾತ ಸಂಭವಿಸಿ ಸ್ಥಳದಲ್ಲೇ ಮೃತಪಟ್ಟಿದ್ದನು.ಈ ದುರ್ಘಟನೆಗೆ ಸಂಬಂಧಿಸಿದಂತೆ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಪ್ರಾಪ್ತನಿಗೆ ವಾಹನ ನೀಡುವ ಮೂಲಕ ಕಾನೂನು ಉಲ್ಲಂಘನೆ ಮಾಡಿದ್ದಕ್ಕಾಗಿ ಬಾಲಕನ ತಂದೆಯ ವಿರುದ್ಧ ಕ್ರಮ ಕೈಗೊಳ್ಳಲಾಗಿತ್ತು. ನ್ಯಾಯಾಲಯದ ತೀರ್ಪು: ಪ್ರಕರಣದ ವಿಚಾರಣೆ ನಡೆಸಿದ ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರಾದ ಡಿ. ಅನುಪಮಾ ಅವರು, ಮೃತನ ತಂದೆಯೇ ಈ ತಪ್ಪಿಗೆ ಕಾರಣರಾಗಿದ್ದಾರೆ ಎಂದು ಪರಿಗಣಿಸಿ, ಅವರಿಗೆ ₹25,000 ದಂಡ ಮತ್ತು ಒಂದು ದಿನದ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ. ಗಮನಿಸಿ: ಪೋಷಕರು…














