Author: kannadanewsnow57

ನಿಮ್ಮ ಲಾಂಡ್ರಿಯನ್ನು ತೊಳೆದ ನಂತರ ನೀವು ತೃಪ್ತಿ ಅನುಭವಿಸಬಹುದಾದರೂ, ಬಳಸಿದ ಡಿಟರ್ಜೆಂಟ್ ಗಳು ಮತ್ತು ಕ್ಲೀನರ್ ಗಳು ಸಂಪೂರ್ಣವಾಗಿ ಸುರಕ್ಷಿತವೆಂದು ಭಾವಿಸಿ, ಅವು ನಿಮ್ಮ ಆರೋಗ್ಯದ ಮೇಲೆ ನಿಧಾನವಾಗಿ ಪರಿಣಾಮ ಬೀರುವ, ಹಾರ್ಮೋನುಗಳನ್ನು ಅಡ್ಡಿಪಡಿಸುವ ಮತ್ತು ಕ್ಯಾನ್ಸರ್ ನಂತಹ ಗಂಭೀರ ಕಾಯಿಲೆಗಳ ಅಪಾಯವನ್ನು ಹೆಚ್ಚಿಸುವ ಗುಪ್ತ ರಾಸಾಯನಿಕಗಳನ್ನು ಹೊಂದಿರಬಹುದು. ನಿಮ್ಮ ಸೋಪು ಕೇವಲ ತಾಜಾ ಪರಿಮಳಕ್ಕಿಂತ ಹೆಚ್ಚಿನದನ್ನು ಬಿಡಬಹುದು. ಕೆಲವು ದೈನಂದಿನ ಮಾರ್ಜಕಗಳು ಹೆಚ್ಚಿನ ಜನರು ಗಮನಿಸದ ವಿಷಯಗಳನ್ನು ಮರೆಮಾಡುತ್ತವೆ” ಎಂದು ಪ್ರಮುಖ ಆಂಕೊಲಾಜಿಸ್ಟ್ ಡಾ.ತರಂಗ್ ಕೃಷ್ಣ ಸಾಮಾಜಿಕ ಮಾಧ್ಯಮದಲ್ಲಿ ಹೇಳಿದ್ದಾರೆ. “ನೀವು ಪ್ರತಿದಿನ ಬಳಸುವ ಡಿಟರ್ಜೆಂಟ್ ಗಳು ಮತ್ತು ಕ್ಲೀನರ್ ಗಳು ಕ್ಯಾನ್ಸರ್ ಸೇರಿದಂತೆ ಗಂಭೀರ ಆರೋಗ್ಯದ ಅಪಾಯಗಳನ್ನು ಉಂಟುಮಾಡಬಹುದು” ಎಂದು ಡಾ.ಕೃಷ್ಣ ಇನ್ಸ್ಟಾಗ್ರಾಮ್ನಲ್ಲಿ ಎಚ್ಚರಿಸಿದ್ದಾರೆ. “ನಮ್ಮ ಬಟ್ಟೆಗಳಲ್ಲಿ ಮತ್ತು ನಮ್ಮ ಮನೆಗಳ ಸುತ್ತಲೂ ನಾವು ಬಳಸುವ ಅನೇಕ ಉತ್ಪನ್ನಗಳು, ಸುರಕ್ಷಿತವೆಂದು ನಾವು ಭಾವಿಸುತ್ತೇವೆ ಮತ್ತು ನಮ್ಮ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಡುತ್ತೇವೆ, ವಾಸ್ತವವಾಗಿ ಗುಪ್ತ ರಾಸಾಯನಿಕಗಳನ್ನು ಹೊಂದಿರುತ್ತವೆ, ಅದು ನಿಧಾನವಾಗಿ…

Read More

ನವದೆಹಲಿ : ಇಂದಿನ ಡಿಜಿಟಲ್ ಯುಗದಲ್ಲಿ, ಮಕ್ಕಳು ಮತ್ತು ಹದಿಹರೆಯದವರು ನಿರಂತರವಾಗಿ ಒಂದಲ್ಲ ಒಂದು ಪರದೆಯ ಮುಂದೆ ಇರುತ್ತಾರೆ. ಕೆಲವೊಮ್ಮೆ ಅದು ಫೋನ್, ಕೆಲವೊಮ್ಮೆ ಟ್ಯಾಬ್ಲೆಟ್, ಕೆಲವೊಮ್ಮೆ ಟಿವಿ ಅಥವಾ ಗೇಮಿಂಗ್ ಕನ್ಸೋಲ್ ಆಗಿರಬಹುದು. ಆದರೆ ಹೊಸ ಸಂಶೋಧನೆಯು ಪೋಷಕರಿಗೆ ಪ್ರಮುಖ ಎಚ್ಚರಿಕೆಯನ್ನ ನೀಡಿದೆ. ಅಮೇರಿಕನ್ ಹಾರ್ಟ್ ಅಸೋಸಿಯೇಷನ್ ​​(AHA) ಬೆಂಬಲದೊಂದಿಗೆ ಡೆನ್ಮಾರ್ಕ್‌ನಲ್ಲಿ ನಡೆಸಿದ ಅಧ್ಯಯನವು ಮಕ್ಕಳ ಅತಿಯಾದ ಸ್ಕ್ರೀನ್ ಸಮಯವು ಅವರ ಹೃದಯ ಮತ್ತು ಚಯಾಪಚಯ ಆರೋಗ್ಯಕ್ಕೆ ಗಂಭೀರ ಹಾನಿಯನ್ನುಂಟು ಮಾಡುತ್ತಿದೆ ಎಂದು ಬಹಿರಂಗಪಡಿಸಿದೆ. ಸಂಶೋಧನೆಯ ಪ್ರಕಾರ , ಈ ಡಿಜಿಟಲ್ ಅಭ್ಯಾಸದ ಪರಿಣಾಮವು 10 ವರ್ಷ ವಯಸ್ಸಿನಿಂದ ಹಿಡಿದು 18 ವರ್ಷ ವಯಸ್ಸಿನವರೆಗಿನ ಮಕ್ಕಳ ಮೇಲೆ ಸ್ಪಷ್ಟವಾಗಿ ಗೋಚರಿಸುತ್ತದೆ. ಅವರು ಪರದೆಗಳ ಮೇಲೆ ಹೆಚ್ಚು ಸಮಯ ಕಳೆಯುತ್ತಿದ್ದಂತೆ, ರಕ್ತದೊತ್ತಡ, ಕೊಲೆಸ್ಟ್ರಾಲ್ ಮತ್ತು ಇನ್ಸುಲಿನ್ ಪ್ರತಿರೋಧದಂತಹ ಅಪಾಯಕಾರಿ ಅಂಶಗಳು ಹೆಚ್ಚಾಗುತ್ತವೆ. ಸರಳವಾಗಿ ಹೇಳುವುದಾದ್ರೆ, ಪರದೆಗಳ ಮೇಲೆ ಕಳೆಯುವ ಪ್ರತಿ ಹೆಚ್ಚುವರಿ ಗಂಟೆಯೂ ಮಕ್ಕಳ ಹೃದಯದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ.…

Read More

ಹಾಸನ : ಸೈಕಲ್ ಆಟವಾಡುತ್ತಿದ್ದ ವೇಳೆ ಆಯತಪ್ಪಿ ನೀರಿನ ಸಂಪ್ ಗೆ ಬಿದ್ದು ಪುಟ್ಟ ಬಾಲಕನೋರ್ವ ಮೃತಪಟ್ಟಿರುವ ಘಟನೆ ಹಾಸನದ ಅಣಚಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಎಡನ್ ಸ್ವೀವ್ (4) ಮೃತ ಬಾಲಕ. ಮನೆಯ ಮುಂದೆ ಎಡನ್ ಸ್ವೀವ್ ಆಟವಾಡುತ್ತಿದ್ದ. ಹಾಸನದ ಅಣಚಿಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಮನೆ ಮುಂದೆ ಸೈಕಲ್ ನಲ್ಲಿ ಆಟವಾಡುತ್ತಿದ್ದ ಬಾಲಕ ಆಕಸ್ಮಾತ್ ಆಗಿ ನೀರಿನ ಸಂಪಿಗೆ ಬಿದ್ದಿದ್ದಾನೆ. ನಂತರ ಪೋಷಕರು ಬಾಲಕನಿಗಾಗಿ ಎಲ್ಲಾ ಕಡೆ ಹುಡುಕಾಡಿದ್ದಾರೆ. ನಂತರ ಸಂಪ್ ನೋಡಿದಾಗ ಸಂಪ್ ಪಕ್ಕದಲ್ಲಿ ಸೈಕಲ್ ಬಿದ್ದಿದ್ದು, ಶವ ಸಂಪ್ ನಲ್ಲಿ ತೇಲುತ್ತಿತ್ತು. ಕೂಡಲೇ ಹಾಸನ ನಗರದ ಖಾಸಗಿ ಆಸ್ಪತ್ರೆಗೆ ಮಗುವನ್ನು ಕರೆದೊಯ್ಯಲಾಗಿತ್ತು. ಅಷ್ಟರಲ್ಲಿ ಮಗು ಸಾವನ್ನಪ್ಪಿದೆ ಎಂದು ವೈದ್ಯರು ದೃಢಪಡಿಸಿದ್ದಾರೆ. ಸ್ಥಳಕ್ಕೆ ಹಾಸನ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ದಕ್ಷಿಣ ಕನ್ನಡ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ದೊಡ್ಡಪ್ಪನ ಮಗಳಾದ ಅಪ್ರಾಪ್ತ ಬಾಲಕಿಯನ್ನು ಬೆದರಿಸಿ ಸೋದರನೇ ಅತ್ಯಾಚಾರ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಳಾಯಿಯಲ್ಲಿ ನಡೆದಿದೆ. ಕುಳಾಯಿ ನಿವಾಸಿ ವಿಠಲ ಕುಂಬಾರ ಆರೋಪಿಯು ದೊಡ್ಡಪ್ಪನ ಮಗಳನ್ನು ಬೆದರಿಸಿ ಮನೆಯಲ್ಲಿ ಯಾರೂ ಇಲ್ಲದಾಗ ಅತ್ಯಾಚಾರ ಎಸಗಿ ಗರ್ಭಿಣಿಯಾಗಿಸಿದ್ದಾನೆ. ಈ ವಿಚಾರವನ್ನು ಮನೆಯಲ್ಲಿ ಯಾರಿಗಾದರೂ ತಿಳಿಸಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ ಎಂದು ಸಂತ್ರಸ್ತೆಯ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ. ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಪೋಕ್ಸೋ ಮತ್ತು ಭಾರತೀಯ ನ್ಯಾಯ ಸಂಹಿತೆ ಕಾಯ್ದೆಗಳಡಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ನಗರದಲ್ಲಿ ಮೈ ಕೊರೆಯುವ ಚಳಿ ಮುಂದುವರಿದಿದ್ದು, ಜನ ಜೀವನದ ಮೇಲೆ ಪರಿಣಾಮ ಬೀರಿದೆ. ಕನಿಷ್ಠ ತಾಪಮಾನವು 14 ರಿಂದ 15 ಡಿಗ್ರಿ ಸೆಲ್ಸಿಯಸ್ಗೆ ಕುಸಿದಿದೆ. ವಿಶೇಷವಾಗಿ ಹೆಚ್ಎಎಲ್ ವ್ಯಾಪ್ತಿಯಲ್ಲಿ ನಿನ್ನೆ 13 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ. ಚಳಿ ಹಾಗೂ ಶೀತಗಾಳಿಯಿಂದಾಗಿ ಬೆಳಗ್ಗೆ ವಾಕಿಂಗ್ಗೆ ಹೋಗಲು ಸಹ ಜನರು ಹಿಂದೇಟು ಹಾಕುತ್ತಿದ್ದಾರೆ. ಇನ್ನೂ ಎರಡು ದಿನ ರಾಜ್ಯಾದ್ಯಂತ ಇದೇ ರೀತಿಯ ಚಳಿ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಕರ್ನಾಟಕದ ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಗದಗ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 9 ರಿಂದ 11 ಡಿಗ್ರಿ ಸೆಂಟಿಗ್ರೇಡ್ ತಲುಪುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಹೆಚ್ಚಿನ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ಸುಮಾರು 12 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿ ಇರಲಿದೆ. ಮುಂದಿನ ಎರಡು ದಿನಗಳಲ್ಲಿ ಇನ್ನೂ ಹೆಚ್ಚಿನ ಚಳಿ ಹಾಗೂ ಶೀತಗಾಳಿ ಇರಲಿದೆ. ಇದು ವಯಸ್ಸಾದವರ…

Read More

ಬೆಳಗಾವಿ : ರಾಜ್ಯದಲ್ಲಿರುವ ವನ್ಯ ಜೀವಿಧಾಮಗಳು ಮತ್ತು ರಾಷ್ಟ್ರೀಯ ಉದ್ಯಾನವನಗಳಲ್ಲಿ ಗಣತಿಯಂತೆ ಒಟ್ಟು 6,395 ಆನೆಗಳು ಮತ್ತು 563 ಹುಲಿಗಳಿವೆ ಎಂದು ಸಚಿವ ಈಶ್ವರ್ ಖಂಡ್ರೆ ಮಾಹಿತಿ ನೀಡಿದ್ದಾರೆ. ವನ್ಯ ಜೀವಿಗಳು ಅರಣ್ಯ ಪ್ರದೇಶದಿಂದ ಹೊರ ಬರುವುದನ್ನು ತಡೆಗಟ್ಟಲು ಮಾನವ ಪ್ರಾಣಹಾನಿಗೆ ಕಾರಣವಾದ ಹುಲಿ ಹಾಗೂ ಆನೆಯನ್ನು ನಿರ್ದಿಷ್ಟವಾಗಿ ಗುರುತಿಸಿ ಸೆರೆಹಿಡಿಯಲಾಗಿರುತ್ತದೆ. ಮಾನವ-ವನ್ಯಜೀವಿ ಸಂಘರ್ಷ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿರುವ ವಲಯಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಳ್ಳಬೇಟೆ ಶಿಬಿರಗಳ ಸಿಬ್ಬಂದಿಗಳನ್ನು ತಾತ್ಕಾಲಿಕವಾಗಿ ಸಂಘರ್ಷ ಸಂಭವಿಸುತ್ತಿರುವ ಅರಣ್ಯದಂಚಿನ ಗಡಿರೇಖೆಗಳಿಗೆ ಸ್ಥಳಾಂತರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿರುತ್ತದೆ. ಶಿಬಿರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರು ಸಂಘರ್ಷವಿರುವ ವಲಯಗಳಲ್ಲಿ ನಿರಂತರವಾಗಿ ಮುಂದಿನ ಮೂರು ತಿಂಗಳವರೆಗೆ ಗಸ್ತು ನಡೆಸಿ, ಮಾನವ ವನ್ಯಪ್ರಾಣಿ ಸಂಘರ್ಷವನ್ನು ತಡೆಗಟ್ಟಲು ಕ್ರಮವಹಿಸಲಾಗಿದೆ. ಮಾನವ-ವನ್ಯಜೀವಿ ಸಂಘರ್ಷ ಸಮಸ್ಯೆ ಇರುವ ಪ್ರತಿಯೊಂದು ವನ್ಯಜೀವಿ ವಲಯಗಳಲ್ಲಿ ಮಾನವ-ವನ್ಯಜೀವಿ ಸಂಘರ್ಷ ಉಂಟಾಗುವ ಸಂದರ್ಭದಲ್ಲಿ ತಕ್ಷಣದ ಪ್ರತಿಕ್ರಿಯೆಗಾಗಿ ಕ್ಷಿಪ್ರ ಸ್ಪಂದನ ವಾಹನ ಹಾಗೂ ಡ್ರೋನ್ ಒಳಗೊಂಡಂತೆ ಇತರೆ ಉಪಕರಣಗಳೊಂದಿಗೆ ಒಂದು ಕ್ಷಿಪ್ರಸ್ಪಂದನ ತಂಡವನ್ನು (RRT…

Read More

ಬೆಂಗಳೂರು : ರಾಜ್ಯದಲ್ಲಿ ಗ್ರಾಮ ಸಭೆ ಕರೆಯಲು ನಡೆಸಲು ರಾಜ್ಯ ಸರ್ಕಾರವು ಮಾರ್ಗಸೂಚಿ ಪ್ರಕಟಿಸಿದ್ದು, ಈ ನಿಯಮಗಳ ಪಾಲನೆ ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ 1993 (1993ರ ಕರ್ನಾಟಕ ಆಧಿನಿಯಮ ಸಂಖ್ಯೆ:14)ರ ಪ್ರಕರಣ 3ಇ ಉಪಬಂಧಗಳಲ್ಲಿನ ಉದ್ದೇಶಗಳನ್ನು ಕಾರ್ಯಗತಗೊಳಿಸುವುದಕ್ಕಾಗಿ ಪ್ರಕರಣ 311ರಲ್ಲಿ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ ಕರ್ನಾಟಕ ಸರ್ಕಾರವು ಈ ಕೆಳಕಂಡ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಸಭೆ ಕರೆಯುವ ಮತ್ತು ನಡೆಸುವು ನಿಯಮಗಳು, 2024ರ ಕರಡನ್ನು ದಿನಾಂಕ:07.12.2024 ಕರ್ನಾಟಕ ರಾಜ್ಯ ಪತ್ರದ ಭಾಗ-4ಎ ರಲ್ಲಿ ಪ್ರಕಟಿಸಿ ಅದರಿಂದ ಬಾಧಿತರಾಗುವ ವ್ಯಕ್ತಿಗಳಿಂದ ಸದರಿ ಕರಡಿಗೆ ಆಕ್ಷೇಪಣೆ ಅಥವಾ ಸಲಹೆಗಳನ್ನು ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟವಾದ ದಿನಾಂಕದಿಂದ ಮೂವತ್ತು ದಿನಗಳೊಳಗಾಗಿ ಸಲ್ಲಿಸಬೇಕೆಂದು ಕೋರಿರುವುದರಿಂದ; ಮತ್ತು ಸದರಿ ರಾಜ್ಯ ಪತ್ರವು ಸಾರ್ವಜನಿಕರಿಗೆ ದಿನಾಂಕ:07.12.2024 ರಂದು ಲಭ್ಯವಾಗುವಂತೆ ಮಾಡಿರುವುದರಿಂದ; ಮತ್ತು ಸದರಿ ಕರಡಿನ ಸಂಬಂಧದಲ್ಲಿ ರಾಜ್ಯ ಸರ್ಕಾರಕ್ಕೆ ಸ್ವೀಕೃತವಾದ ಆಕ್ಷೇಪಣೆ ಅಥವಾ ಸಲಹೆಗಳನ್ನು ಪರಿಗಣಿಸಿರುವುದರಿಂದ;…

Read More

ಬೆಳಗಾವಿ : ರಾಜ್ಯ ಸರ್ಕಾರವು ಡಾ. ಕಸ್ತೂರಿ ರಂಗನ್ ಸಮಿತಿ ವರದಿ ಆಧರಿಸಿ ಪಶ್ಚಿಮ ಘಟ್ಟ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಸಂಬಂಧ ಕೇಂದ್ರ ಸರ್ಕಾರ ಹೊರಡಿಸಿರುವ ಅಧಿಸೂಚನೆಯನ್ನು ತಿರಸ್ಕರಿಸಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಮಂಗಳವಾರ ಕಾಂಗ್ರೆಸ್ಸಿನ ಐವನ್ ಡಿಸೋಜಾ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪರಿಸರ ಸೂಕ್ಷ್ಮ ವಲಯ ಹಾಗೂ ಸಂರಕ್ಷಿತ ಅರಣ್ಯ ಪ್ರದೇಶ ಹೊರತುಪಡಿಸಿ ಬೇರೆ ಪ್ರದೇಶದಲ್ಲಿ ಕೃಷಿ, ಮತ್ತಿತರ ಚಟುವಟಿಕೆ ಮುಂದುವರೆಸಲು ಯಾವುದೇ ತೊಂದರೆ ಇಲ್ಲ ಎಂದು. ಡಾ.ಕಸ್ತೂರಿ ರಂಗನ ವರದಿ ಆಧರಿಸಿ ಈವರೆಗೆ ಆರು ಅಧಿಸೂಚನೆ ಹೊರಡಿಸಲಾಗಿದ್ದು, ರಾಜ್ಯ ಸರ್ಕಾರ ಅವುಗಳನ್ನು ತಿರಸ್ಕರಿಸಿದೆ ಎಂದು ತಿಳಿಸಿದ್ದಾರೆ. ಅಧಿಸೂಚನೆ ಸಂಬಂಧ ಸಚಿವ ಸಂಪುಟ ಉಪಸಮಿತಿ ಶಿಫಾರಸು ಆಧರಿಸಿ ರಾಜ್ಯ ಸರ್ಕಾರ ಕಳೆದ ವರ್ಷದ ಸೆಪ್ಟೆಂಬರ್ ತಿಂಗಳಲ್ಲಿ ವರದಿ ತಿರಸ್ಕರಿಸಿರುವುದಾಗಿ ಕೇಂದ್ರಕ್ಕೆ ತಿಳಿಸಿ ವರದಿ ಸಲ್ಲಿಸಿದೆ ಎಂದು ಹೇಳಿದ್ದಾರೆ. https://twitter.com/KarnatakaVarthe/status/2000927758277320938?s=20

Read More

ಬೆಂಗಳೂರು : ರಾಜ್ಯಾದ್ಯಂತ ತಾಪಮಾನ ಕುಸಿತದಿಂದ ಚಳಿ ಹೆಚ್ಚಳವಾಗಿದ್ದು, ಮೈ ನಡುಗುವ ಚಳಿಗೆ ಜನರು ತತ್ತರಿಸಿದ್ದಾರೆ. ಚಳಿ ಹಿನ್ನೆಲೆಯಲ್ಲಿ ಶಾಲಾ ಅವಧಿಯನ್ನು ಚಳಿಗಾಲ ಮುಗಿಯುವವರೆಗೂ ಪ್ರತಿ ದಿನ ಬೆಳಗ್ಗೆ 9.30 ಕ್ಕೆ ತರಗತಿಗಳನ್ನು ಆರಂಭಿಸಬೇಕು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ ಮನವಿ ಮಾಡಿದ್ದಾರೆ. ಮಕ್ಕಳ ರಕ್ಷಣೆ ಮತ್ತು ಸುರಕ್ಷತೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸಂಬಂಧಿಸಿ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ ಪತ್ರ ಬರೆದಿದ್ದಾರೆ. ರಾಜ್ಯದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಶೀತಗಾಳಿ ಕಾಣಿಸಿಕೊಳ್ಳುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದ್ದರಿಂದ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಎಲ್ಕೆಜಿಯಿಂದ ಪಿಯುಸಿ ವರೆಗೆ ಶಾಲಾ ಅವಧಿಯನ್ನು ಚಳಿಗಾಲ ಮುಗಿಯುವವರೆಗೂ ಪ್ರತಿ ದಿನ ಬೆಳಗ್ಗೆ 9.30 ಕ್ಕೆ ತರಗತಿಗಳನ್ನು ಆರಂಭಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ.

Read More

ಬೆಳಗಾವಿ : ರಾಜ್ಯದಲ್ಲಿ ವಿದ್ಯುತ್ ಕಳವು ಹಾಗೂ ವಿದ್ಯುತ್ ದುರ್ಬಳಕೆ ತಡೆಗೆ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಇಂಧನ ಸಚಿವರಾದ ಕೆ.ಜೆ.ಜಾರ್ಜ್ ಅವರ ಉತ್ತರ. ರಾಜ್ಯದಲ್ಲಿ ವಿದ್ಯುತ್ ಕಳವು ಹಾಗೂ ವಿದ್ಯುತ್ ದುರ್ಬಳಕೆಯ ಪ್ರಕರಣಗಳನ್ನು ಪತ್ತೆಹಚ್ಚಲು ಮತ್ತು ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳಲು ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಜಾಗೃತದಳ (ವಿಜಿಲೆನ್ಸ್) ಘಟಕವನ್ನು ಪೊಲೀಸ್ ಅಧೀಕ್ಷಕರು / ಪೊಲೀಸ್ ಉಪ ಅಧೀಕ್ಷಕರು ಹಾಗೂ ಕಾರ್ಯನಿರ್ವಾಹಕ ಇಂಜಿನಿಯರ್ (ವಿ) ಅವರ ನೇತೃತ್ವದಲ್ಲಿ ರಚಿಸಲಾಗಿದೆ ಹಾಗೂ ಪ್ರತಿ ಜಿಲ್ಲಾಮಟ್ಟದಲ್ಲಿ ಜಾಗೃತದಳ ಪೊಲೀಸ್ ಠಾಣೆಗಳಲ್ಲಿ ಪೊಲೀಸ್ ಇನ್ಸ್ಪೆಕ್ಟರ್ / ಸಬ್ ಇನ್ಸ್ಪೆಕ್ಟರ್, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (ವಿ) ಮತ್ತು ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಜಾಗೃತದಳವು ಸ್ಥಳೀಯ ವಿದ್ಯುತ್ ಸರಬರಾಜು ಕಂಪನಿಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಸಮನ್ವಯದಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದರು. ಜಾಗೃತದಳವು ನಿಯಮಿತವಾಗಿ…

Read More