Subscribe to Updates
Get the latest creative news from FooBar about art, design and business.
Author: kannadanewsnow57
ಕಲಬುರಗಿ : ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರದ ಕುರಿತಂತೆ ಸಚಿವ ಶಿವರಾಜ್ ತಂಗಡಗಿ ಮಹತ್ವದ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ. ಸಿಎಂ ಬದಲಾವಣೆ ಮಾಡೋದು ಹೈಕಮಾಂಡ್, ಸ್ವಾಮೀಜಿಗಳು ತಮ್ಮ ವೈಯಕ್ತಿಕ ವಿಚಾರ ಹೇಳಿದ್ದಾರೆ. ಸ್ವಾಮೀಜಿಗಳ ಹೇಳಿಕೆ ಕುರಿತು ಹೆಚ್ಚಿನ ಚರ್ಚೆ ಮಾಡುವುದು ಬೇಡ. ನಮ್ಮ ಹೈಕಮಾಂಡ್ ಬಲಿಷ್ಠವಾಗಿದ್ದು, ಸಿಎಂ ಬದಲಾವಣೆ ಮಾಡುವುದು ಹೈಕಮಾಂಡ್ ಎಂದು ತಿಳಿಸಿದ್ದಾರೆ. ಲೋಕಸಭಾ ಚುನಾವಣಾ ಫಲಿತಾಂಶದ ಬಳಿಕ ಮುಖ್ಯಮಂತ್ರಿ ಬದಲಾವಣೆ ವಿಚಾರ ಕರ್ನಾಟಕ ಕಾಂಗ್ರೆಸ್ ನಲ್ಲಿ ಗೊಂದಲಕ್ಕೆ ಕಾರಣವಾಗಿದೆ. ಒಕ್ಕಲಿಗ ಸ್ವಾಮೀಜಿ ಡಿ.ಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಬೇಕೆಂದು ಆಗ್ರಹಿಸಿದ್ದರು. ಇದರ ಬೆನ್ನಲ್ಲೇ ವೀರಶೈವ ಲಿಂಗಾಯತರಿಗೆ ಆದ್ಯತೆ ನೀಡಬೇಕೆಂದು ಶ್ರೀಶೈಲ ಜಗದ್ಗುರುಗಳು ಒತ್ತಾಯಿಸಿದ್ದಾರೆ.
ಬೆಂಗಳೂರು ; ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಭೇಟಿಗೆ ಇಂದು ಕುಟುಂಬ ಖಾಸಗಿ ವಾಹನದಲ್ಲೇ ಬಂದಿದ್ದು, ಬಂಧಿಖಾನೆ ಇಲಾಖೆ ಕಾನೂನು ಗಾಳಿಗೆ ತೂರಿದೆ ಎಂಬ ಆರೋಪ ಕೇಳಿಬಂದಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ನೋಡಲು ಕುಟುಂಬಸ್ಥರು ಖಾಸಗಿ ವಾಹನದಲ್ಲಿ ಆಗಮಿಸಿದ್ದು, ರಾಜಾರೋಷವಾಗಿ ದರ್ಶನ್ ಕುಟುಂಬದವರನ್ನು ಜೈಲಿಗೆ ಪ್ರವೇಶ ನೀಡಲಾಗಿದೆ. ದರ್ಶನ್ ತಾಯಿ ಮೀನಾ, ಸೋದರ ದಿನಕರ್, ದರ್ಶನ್ ಪತ್ನಿ ವಿಜಯಲಕ್ಷ್ಮಿ ಹಾಗೂ ಮಗ ವಿನೀಶ್ ಖಾಸಗಿ ವಾಹನದಲ್ಲಿ ಜೈಲಿಗೆ ಎಂಟ್ರಿ ಕೊಟ್ಟಿದ್ದಾರೆ. ದರ್ಶನ್ ಕುಟುಂಬದವರನ್ನು ಮಾಧ್ಯಮದವರ ಕಣ್ಣುತಪ್ಪಿಸಿ ಖಾಸಗಿ ಕಾರಿನಲ್ಲಿ ಹೆಡ್ ಕಾನ್ಸ್ ಟೇಬಲ್ ವೊಬ್ಬರು ಜೈಲಿನೊಳಗೆ ಕರೆದುಕೊಂಡು ಹೋಗಿದ್ದಾರೆ.
ಕೊಲಂಬೊ : ಶ್ರೀಲಂಕಾದ ಹಿರಿಯ ರಾಜಕಾರಣಿ ಮತ್ತು ದೇಶದ ತಮಿಳು ಅಲ್ಪಸಂಖ್ಯಾತರ ಪ್ರಚಾರಕ ರಾಜವರೋಥಿಯಂ ಸಂಪಂತನ್ ತಮ್ಮ 91 ನೇ ವಯಸ್ಸಿನಲ್ಲಿ ನಿಧನರಾದರು. ಸಂಪಂತನ್ ಕಳೆದ 23 ವರ್ಷಗಳಿಂದ ತಮಿಳು ರಾಷ್ಟ್ರೀಯ ಒಕ್ಕೂಟ (ಟಿಎನ್ಎ) ಎಂಬ ವೈವಿಧ್ಯಮಯ ಒಕ್ಕೂಟವನ್ನು ಮುನ್ನಡೆಸಿದರು. ಟಿಎನ್ಎ ಶ್ರೀಲಂಕಾದ ಉತ್ತರ ಮತ್ತು ಪೂರ್ವದ ತಮಿಳರನ್ನು ಪ್ರತಿನಿಧಿಸುವ ಪ್ರಮುಖ ರಾಜಕೀಯ ಗುಂಪು. ಸಂಪಂತನ್ ಅವರ ನಿಧನದ ಸುದ್ದಿಯನ್ನು ಟಿಎನ್ಎ ನಾಯಕ ಎಂ.ಎ.ಸುಮಂತಿರನ್ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಎಕ್ಸ್ನಲ್ಲಿ ದೃಢಪಡಿಸಿದ್ದಾರೆ. https://Twitter.com/TNAmediaoffice/status/1807483213859913743?ref_src=twsrc%5Etfw%7Ctwcamp%5Etweetembed%7Ctwterm%5E1807483213859913743%7Ctwgr%5E5e94d2a876c77ad0bb48f01cd6ed0a814f88b38f%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fenglish%2Fforyou%3Fmode%3Dpwalangchange%3Dtruelaunch%3Dtrue ಸಂಪಂತನ್ ಅವರನ್ನು 2015 ರಲ್ಲಿ ವಿರೋಧ ಪಕ್ಷದ ನಾಯಕರಾಗಿ ನೇಮಿಸಲಾಯಿತು, 32 ವರ್ಷಗಳಲ್ಲಿ ಸಂಸದೀಯ ಹುದ್ದೆಯನ್ನು ಅಲಂಕರಿಸಿದ ಜನಾಂಗೀಯ ಅಲ್ಪಸಂಖ್ಯಾತ ಗುಂಪಿನ ಮೊದಲ ಸದಸ್ಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು.
ನವದೆಹಲಿ : ನೀವೂ ಸಹ ದೀರ್ಘಕಾಲದಿಂದ ಸಿಮ್ ಪೋರ್ಟ್ ಅಥವಾ ನಿಮ್ಮ ಹಳೆಯ ಸಿಮ್ ಕಾರ್ಡ್ ಅನ್ನು ಬದಲಾಯಿಸುವ ಬಗ್ಗೆ ಯೋಚಿಸುತ್ತಿದ್ದರೆ, ಈ ಸುದ್ದಿ ನಿಮಗಾಗಿ ಏಕೆಂದರೆ ಇಂದು ಅಂದರೆ ಜುಲೈ 1 ರಿಂದ, ಸಿಮ್ ಪೋರ್ಟ್ ಪಡೆಯುವುದು ಸುಲಭವಲ್ಲ ಆದರೆ ಅದು ಕಷ್ಟಕರವಾಗಲಿದೆ. ವಾಸ್ತವವಾಗಿ, ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ (ಟ್ರಾಯ್) ಸಿಮ್ ನಂಬರ್ ಪೋರ್ಟ್ಗೆ ಸಂಬಂಧಿಸಿದಂತೆ ಇಂದಿನಿಂದ ಹೊಸ ನಿಯಮಗಳನ್ನು ಹೊರಡಿಸಿದೆ. ಈ ಹೊಸ ನಿಯಮಗಳೊಂದಿಗೆ, ಮೊಬೈಲ್ ಫೋನ್ ಸಂಖ್ಯೆಗಳನ್ನು ಒಂದು ನೆಟ್ವರ್ಕ್ನಿಂದ ಇನ್ನೊಂದಕ್ಕೆ ಬದಲಾಯಿಸುವಾಗ ನಿಮಗೆ ಈಗ ಸ್ವಲ್ಪ ತೊಂದರೆಯಾಗುತ್ತದೆ. ಅದರ ಬಗ್ಗೆ ತಿಳಿದುಕೊಳ್ಳೋಣ… https://Twitter.com/TRAI/status/1806669226457149693?ref_src=twsrc%5Etfw%7Ctwcamp%5Etweetembed%7Ctwterm%5E1806669226457149693%7Ctwgr%5E5e94d2a876c77ad0bb48f01cd6ed0a814f88b38f%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fenglish%2Fforyou%3Fmode%3Dpwalangchange%3Dtruelaunch%3Dtrue ಈ ಕಾರಣದಿಂದಾಗಿ, ಟ್ರಾಯ್ ಹೊಸ ನಿಯಮಗಳನ್ನು ತಂದಿತು ಮೊದಲ ಬಳಕೆದಾರರ ವೈಯಕ್ತಿಕ ಡೇಟಾವನ್ನು ಬಳಸಿದ ಮತ್ತು ಅವರ ಸಿಮ್ ಅನ್ನು ಪೋರ್ಟ್ ಮಾಡಿದ ಇಂತಹ ಅನೇಕ ಪ್ರಕರಣಗಳು ದೇಶಾದ್ಯಂತ ದೀರ್ಘಕಾಲದವರೆಗೆ ನಡೆದಿವೆ. ಅಷ್ಟೇ ಅಲ್ಲ, ಕೆಲವು ಸ್ಥಳಗಳಲ್ಲಿ, ಸಿಮ್ ಅನ್ನು ಪೋರ್ಟ್ ಮಾಡುವುದಾಗಿ ಹೇಳಿ ಕೆಲವು ಸಿಮ್…
ಶ್ರೀನಿವಾಸಪುರ : ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ದೊಡ್ಡ ಪ್ರಮಾಣದಲ್ಲಿ ʻಕಮಿಷನ್ ದಂಧೆʼ ನಡೆಯುತ್ತಿದೆ ಮಾಜಿ ಎಂಎಲ್ ಸಿ ವೈ.ಎ. ನಾರಾಯಣಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ದೊಡ್ಡ ಪ್ರಮಾಣದಲ್ಲಿ ಕಮಿಷನ್ ದಂಧೆ ನಡೆಯುತ್ತಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಸಂಕಷ್ಟ ಎದುರಾಗಿದೆ. ರಾಜ್ಯದ ಜನರು ಬಹಳಷ್ಟು ಸಂಕಷ್ಟ ಅನುಭವಿಸುತ್ತಿದ್ದಾರೆ. ಜನರ ಕಾರ್ಯಕ್ರಮಗಳ ಬದಲು ಬರೀ ರಾಜಕಾರಣ ಮಾಡುತ್ತಿದ್ದಾರೆ. ೧೪ ತಿಂಗಳಿಂದ ೧೦ ವಿವಿಧ ರೀತಿಯಲ್ಲಿ ತೆರಿಗೆ ಹೆಚ್ಚಳ ಮಾಡಲಾಗಿದೆ. ಈ ಸರ್ಕಾರಕ್ಕೆ ಬಡವರು, ಜನರ ಬಗ್ಗೆ ಕಾಳಜಿ ಇಲ್ಲ ಎಂದು ಕಿಡಿಕಾರಿದ್ದಾರೆ.
ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆ ಹೆಚ್ಚಾಗುವ ದಿನಗಳಲ್ಲಿ ರಸ್ತೆಯ ಪರಿಸ್ಥಿತಿ ಹದಗೆಡುತ್ತಿದೆಯಲ್ಲದೆ ಅಧಿಕ ಬಾರ ತುಂಬಿದ ಭಾರೀ ಸರಕು ಸಾಗಾಣೆ ವಾಹನಗಳು ದಿನನಿತ್ಯ ಸಂಚರಿಸುವುದರಿಂದ ರಸ್ತೆಯ ಬದಿಗಳ ಮಣ್ಣು ಕುಸಿತದಿಂದಾಗಿ ರಸ್ತೆಯ ಮೇಲೆ ಮಣ್ಣು ಬಿದ್ದು, ರಸ್ತೆ ಸಂಚಾರಕ್ಕೆ ತೊಂದರೆಯಾಗಿ ಸಾಕಷ್ಟು ಅಪಘಾತಗಳಿಗೆ ಕಾರಣವಾಗುತ್ತಿರುತ್ತದೆ. ವಾಹನದ ನೋಂದಣಿ ತೂಕ 18,500 ಕೆ.ಜಿ.ಗಿಂತ ಹೆಚ್ಚಿನ ತೂಕದ ಸರಕು ಸಾಗಾಣಿಕೆ ವಾಹನ, ಮಲ್ಟಿ ಆಕ್ಸಿಲ್ ಟ್ರಕ್ಗಳ ಸಂಚಾರ ಮತ್ತು ಭಾರೀ ವಾಹನಗಳಾದ ಬುಲೆಟ್ ಟ್ಯಾಂಕರ್ಸ್, ಶಿಪ್ ಕಾರ್ಗೋ ಕಂಟೈನರ್ಸ್, ಲಾಂಗ್ ಚಾಸಿಸ್(ಮಲ್ಟಿ ಆಕ್ಸಿಲ್), ಆರ್ಟಿಕ್ಯೂಲೇಟೆಡ್ ವಾಹನಗಳು ಮತ್ತು ಮರಳು ಸಾಗಾಣಿಕೆ, ಮರದ ದಿಮ್ಮಿಗಳನ್ನು ಸಾಗಿಸುವ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ಕೊಡಗು ಜಿಲ್ಲೆಯಲ್ಲಿ ಮಳೆಗಾಲ ಮುಗಿಯುವವರೆಗೆ ನಿರ್ಭಂದಿಸಲಾಗಿದೆ. ಕರ್ನಾಟಕ ಪೊಲೀಸ್ ಕಾಯ್ದೆ 1961 ರ ವಿಧಿ 11 ಡಿಸಾಸ್ಟರ್ ಮ್ಯಾನೇಜ್ಮೆಂಟ್ ಆಕ್ಟ್ 2005ರ ಕಲಂ 33, ಮೋಟಾರು ವಾಹನಗಳ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ರನ್ನು ಇಂದು ತಾಯಿ ಮೀನಾ ಹಾಗೂ ಸಹೋದರ ದಿನಕರ್ ತೂಗುದೀಪ ಅವರು ಭೇಟಿ ಮಾಡಿ ಧೈರ್ಯ ತುಂಬಲಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಗೆ ಇತ್ತೀಚೆಗಷ್ಟೇ ಪತ್ನಿ ವಿಜಯಲಕ್ಷ್ಮಿ ಹಾಗೂ ಪುತ್ರ ಭೇಟಿ ನೀಡಿದ್ದರು. ಇಂದು ತಾಯಿ ಮೀನಾ ಹಾಗೂ ದಿನಕರ್ ತೂಗುದೀಪ ಭೇಟಿಯಾಗಲಿದ್ದಾರೆ. ಇನ್ನು ನಟ ದರ್ಶನ್ ಗೆ ಜೈಲಿನ ಮೆನವಿನಂತೆ ಇಂದು ಉಪ್ಪಿಟ್ಟು ನೀಡಲಾಗಿದ್ದು, ಒಗ್ಗದಿದ್ರೂ ದರ್ಶನ್ ಜೈಲೂಟ ಸೇವಿಸುತ್ತಿದ್ದಾರೆ.
ನವದೆಹಲಿ: ರಾಷ್ಟ್ರೀಯ ವೈದ್ಯರ ದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು ವೈದ್ಯರಿಗೆ ಶುಭಾಶಯ ಕೋರಿದ್ದಾರೆ, ಇದು ಆರೋಗ್ಯ ಕಾರ್ಯಕರ್ತರ ಗಮನಾರ್ಹ ಸಮರ್ಪಣೆ ಮತ್ತು ಸಹಾನುಭೂತಿಯನ್ನು ಗೌರವಿಸುವ ದಿನವಾಗಿದೆ ಎಂದು ಒತ್ತಿ ಹೇಳಿದರು. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಅತ್ಯಂತ ಸವಾಲಿನ ಸಂಕೀರ್ಣತೆಗಳನ್ನು ಸಹ ಅಸಾಧಾರಣ ಕೌಶಲ್ಯದಿಂದ ನಿಭಾಯಿಸುವ ಅವರ ಸಾಮರ್ಥ್ಯವನ್ನು ಅವರು ಶ್ಲಾಘಿಸಿದರು. ಭಾರತದ ಆರೋಗ್ಯ ಮೂಲಸೌಕರ್ಯವನ್ನು ಹೆಚ್ಚಿಸಲು ಮತ್ತು ವೈದ್ಯರು ತಮಗೆ ಅರ್ಹವಾದ ವ್ಯಾಪಕ ಗೌರವವನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳುವ ಸರ್ಕಾರದ ಬದ್ಧತೆಯನ್ನು ಪ್ರಧಾನಿ ಪುನರುಚ್ಚರಿಸಿದರು. https://Twitter.com/narendramodi/status/1807612662051680688?ref_src=twsrc%5Etfw%7Ctwcamp%5Etweetembed%7Ctwterm%5E1807612662051680688%7Ctwgr%5E5e94d2a876c77ad0bb48f01cd6ed0a814f88b38f%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fenglish%2Fforyou%3Fmode%3Dpwalangchange%3Dtruelaunch%3Dtrue #DoctorsDay ಶುಭಾಶಯಗಳು. ಇದು ನಮ್ಮ ಆರೋಗ್ಯ ಕಾರ್ಯಕರ್ತರ ನಂಬಲಾಗದ ಸಮರ್ಪಣೆ ಮತ್ತು ಸಹಾನುಭೂತಿಯನ್ನು ಗೌರವಿಸುವ ದಿನ. ಅವರು ಗಮನಾರ್ಹ ಕೌಶಲ್ಯದೊಂದಿಗೆ ಅತ್ಯಂತ ಸವಾಲಿನ ಸಂಕೀರ್ಣತೆಗಳನ್ನು ನ್ಯಾವಿಗೇಟ್ ಮಾಡಬಹುದು. ಭಾರತದಲ್ಲಿ ಆರೋಗ್ಯ ಮೂಲಸೌಕರ್ಯವನ್ನು ಸುಧಾರಿಸಲು ಮತ್ತು ವೈದ್ಯರಿಗೆ ಅವರು ಅರ್ಹವಾದ ವ್ಯಾಪಕ ಗೌರವವನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳಲು ನಮ್ಮ ಸರ್ಕಾರ ಸಂಪೂರ್ಣವಾಗಿ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.
ಬಳ್ಳಾರಿ : ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಾಗಿರುವ ಐದು ಗ್ಯಾರಂಟಿ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸುವಲ್ಲಿ ಯಾವುದೇ ತಾಂತ್ರಿಕ ಸಮಸ್ಯೆಗಳು ಕಂಡುಬಂದಲ್ಲಿ ಕೂಡಲೇ ಸರಿಪಡಿಸುವ ಕೆಲಸವನ್ನು ಸಂಬಂಧಿಸಿದ ಇಲಾಖಾ ಅಧಿಕಾರಿಗಳು ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಎನ್.ಝುಬೇರ್ ಅವರು ಸೂಚಿಸಿದರು. ನಗರದ ಅನಂತಪುರ ರಸ್ತೆಯ ನೂತನ ಜಿಲ್ಲಾಡಳಿತ ಭವನದ ವಿಡಿಯೋ ಸಭಾಂಗಣದಲ್ಲಿ ಏರ್ಪಡಿಸಿದ್ದ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಸಮಿತಿಯ ಅಧ್ಯಕ್ಷ ಮತ್ತು ಸದಸ್ಯರ ಸಭೆಯಲ್ಲಿ ಅವರು ಮಾತನಾಡಿದರು. ಐದು ಗ್ಯಾರಂಟಿ ಯೋಜನೆಗಳಾದ ಶಕ್ತಿ ಯೋಜನೆ, ಗೃಹ ಲಕ್ಷ್ಮಿ, ಗೃಹ ಜ್ಯೋತಿ, ಅನ್ನ ಭಾಗ್ಯ ಹಾಗೂ ಯುವನಿಧಿ ಯೋಜನೆಗಳನ್ನು ಜಿಲ್ಲೆಯ ಅರ್ಹ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಸಮಿತಿ ರಚಿಸಿದ್ದು, ಲೋಪದೋಷ ಹಾಗೂ ವಿಳಂಬ ಕಂಡುಬಂದಲ್ಲಿ ಅಧ್ಯಕ್ಷರು ಹಾಗೂ ಸದಸ್ಯರ ಗಮನಕ್ಕೆ ತರಬೇಕು ಎಂದರು. ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಜಿಲ್ಲಾಧ್ಯಕ್ಷ ಕೆ.ಇ.ಚಿದಾನಂದಪ್ಪ ಅವರು ಮಾತನಾಡಿ, ಸರ್ಕಾರ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಿಂದ ಜಿಲ್ಲೆಯ ಸಹಸ್ರಾರು ಕುಟುಂಬಗಳು ಏಳಿಗೆ ಕಾಣುತ್ತಿವೆ. ಅನುಷ್ಠಾನ ಸಮಿತಿಯ ಕಾರ್ಯಕರ್ತರು…
ಬೆಂಗಳೂರು : ರಾಜ್ಯದಲ್ಲಿ ಡೆಂಗ್ಯೂ ಮಹಾಮಾರಿ ಅಬ್ಬರ ಹೆಚ್ಚಳವಾಗಿದ್ದು, ಬೆಂಗಳೂರಿನಲ್ಲಿ ಡೆಂಗ್ಯೂ ಜ್ವರಕ್ಕೆ ಮತ್ತೊಂದು ಬಲಿಯಾಗಿದೆ. ಬೆಂಗಳೂರಿನ ಕಗ್ಗದಾಸಪುರದಲ್ಲಿ ಡೆಂಗ್ಯೂ ಜ್ವರಕ್ಕೆ 27 ವರ್ಷದ ಯುವಕ ಸಾವನ್ನಪ್ಪಿರುವುದಾಗಿ ಬಿಬಿಎಂಪಿ ದೃಢಪಡಿಸಿದೆ. ಶುಕ್ರವಾರವಷ್ಟೇ ಡೆಂಗ್ಯೂ ಜ್ವರಕ್ಕೆ ಇಬ್ಬರು ಮೃತಪಟ್ಟಿದ್ದು, ಇದೀಗ ಮತ್ತೆ ಡೆಂಗ್ಯೂಗೆ ಯುವಕ ಮೃತಪಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ. ಕಳೆದ 6 ತಿಂಗಳಲ್ಲಿ 6 ಸಾವಿರದ 900ಕ್ಕೂ ಹೆಚ್ಚು ಜನ ಡೆಂಗ್ಯೂ ಟೆಸ್ಟ್ಗೆ ಒಳಗಾಗಿದ್ದಾರೆ. ಈ ಪೈಕಿ 2457 ಜನರಲ್ಲಿ ಡೆಂಗ್ಯೂ ದೃಢಪಟ್ಟಿದೆ. ಬೆಂಗಳೂರು ಪೂರ್ವ ವಲಯದಲ್ಲಿ ಓರ್ವ ವೃದ್ಧ, ಓರ್ವ ಯುವಕ ಡೆಂಗ್ಯೂಗೆ ಬಲಿಯಾಗಿದ್ದಾರೆ. ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಶಂಕಿತ ಡೆಂಗ್ಯೂ ಪ್ರಕರಣಗಳ ಹೆಚ್ಚಳ ಆತಂಕ ಮೂಡಿಸಿದೆ.