Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ : ಷೇರುಪೇಟೆಯಲ್ಲಿ ಸೆನ್ಸೆಕ್ಸ್ 200 ಪಾಯಿಂಟ್ ಏರಿಕೆಯಾಗಿದ್ದು, ನಿಫ್ಟಿ 24,800 ಗಡಿ ದಾಟಿದ್ದು, ಸ್ವಿಗ್ಗಿ 3% ಏರಿಕೆಯಾಗಿದೆ. ಜಿಎಸ್ಟಿ ಸುಧಾರಣೆಗಳ ಬಗ್ಗೆ ಆಶಾವಾದ, ಸ್ಥಿರವಾದ ದೇಶೀಯ ಸಾಂಸ್ಥಿಕ ಒಳಹರಿವು ಮತ್ತು ಮಿಶ್ರ ಜಾಗತಿಕ ಸೂಚನೆಗಳಿಂದ ಉತ್ತೇಜಿತವಾಗಿರುವ ಭಾರತೀಯ ಷೇರು ಮಾರುಕಟ್ಟೆಗಳು ಸೋಮವಾರ ಸಕಾರಾತ್ಮಕವಾಗಿ ತೆರೆಯಲು ಸಿದ್ಧವಾಗಿವೆ. ಆದಾಗ್ಯೂ, ಟ್ರಂಪ್ ಯುಗದ ಸುಂಕ ಕ್ರಮಗಳ ಬಗ್ಗೆ ದೀರ್ಘಕಾಲದ ಅನಿಶ್ಚಿತತೆಯು ಹೂಡಿಕೆದಾರರನ್ನು ಅಧಿವೇಶನದುದ್ದಕ್ಕೂ ಜಾಗತಿಕ ಬೆಳವಣಿಗೆಗಳು ಮತ್ತು ಎಫ್ಐಐ ಚಟುವಟಿಕೆಯ ಬಗ್ಗೆ ನಿಗಾ ಇಡುವಂತೆ ಮಾಡುತ್ತದೆ. ಬೆಳಿಗ್ಗೆ 8:25 ಕ್ಕೆ, GIFT ನಿಫ್ಟಿ ಫ್ಯೂಚರ್ಗಳು 31.5 ಪಾಯಿಂಟ್ಗಳ ಏರಿಕೆಯಾಗಿ 24,879 ಕ್ಕೆ ವಹಿವಾಟು ನಡೆಸುತ್ತಿದ್ದವು.
ಬೆಂಗಳೂರು :ಉದ್ಯಮ ಶೀಲತಾ ಅಭಿವೃದ್ದಿ ಯೋಜನೆ (ಐಎಸ್ಬಿ) ಯ ಅಡಿಯಲ್ಲಿ ಬ್ಯಾಂಕ್ಗಳ ಸಹಯೋಗದೊಂದಿಗೆ ಸ್ವಾವಲಂಬಿ ಸಾರಥಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿಯ ಯುವಜನತೆಗೆ ಇಲಾಖೆಯ ಆಯಾ ನಿಗಮಗಳ ಅಡಿಯಲ್ಲಿ ಘಟಕ ವೆಚ್ಚ ಶೇ.75 ರಷ್ಟು ಅಥವಾ ಗರಿಷ್ಟ ರೂ. 4.00 ಲಕ್ಷದವರೆಗೆ ಸಹಾಯಧನವನ್ನು ನೀಡಲಾಗುವುದು. ಕೊನೆಯ ದಿನಾಂಕ: 10.09.2025 ಈ ಕೆಳಗಿನ ಲಿಂಕ್ ಮೂಲಕ ಅರ್ಜಿ ಸಲ್ಲಿಸಬಹುದು. http://sevasindhu.karnataka.gov.in ಅಥವಾ ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಿಗೆ ಭೇಟಿ ನೀಡಿ.
ನವದೆಹಲಿ : ವಿಶ್ವಸಂಸ್ಥೆಯು ಸೆಪ್ಟೆಂಬರ್ 08, 2000 ರಂದು ‘ಅಂತರರಾಷ್ಟ್ರೀಯ ಸಾಕ್ಷರತಾ ದಿನ’ ಎಂದು ಘೋಷಿಸಿತು ಮತ್ತು ಅಂದಿನಿಂದ ಈ ದಿನವನ್ನು ಪ್ರತಿ ವರ್ಷ ಪ್ರಪಂಚದಾದ್ಯಂತ ಆಚರಿಸಲಾಗುತ್ತದೆ. ಶಿಕ್ಷಣ ಮತ್ತು ಸಾಕ್ಷರತೆಯ ಮಹತ್ವವನ್ನು ಒತ್ತಿಹೇಳುವುದು ಮತ್ತು ಅನಕ್ಷರತೆಯ ವಿರುದ್ಧ ಜಾಗೃತಿ ಮೂಡಿಸುವುದು ಈ ದಿನದ ಉದ್ದೇಶವಾಗಿದೆ. ಸಾಕ್ಷರತೆಯು ಕೇವಲ ಓದುವ ಮತ್ತು ಬರೆಯುವ ಸಾಮರ್ಥ್ಯವಲ್ಲ, ಆದರೆ ಒಬ್ಬ ವ್ಯಕ್ತಿಯನ್ನು ಸ್ವಾವಲಂಬಿ, ಅರಿವು ಮತ್ತು ಸಬಲೀಕರಣಗೊಳಿಸುವ ಕೀಲಿಯಾಗಿದೆ. ಶಿಕ್ಷಣದ ಮೂಲಕ, ಜನರು ವೈಯಕ್ತಿಕವಾಗಿ ಅಭಿವೃದ್ಧಿ ಹೊಂದುವುದಲ್ಲದೆ, ಸಮಾಜ ಮತ್ತು ರಾಷ್ಟ್ರದ ಪ್ರಗತಿಗೆ ಕೊಡುಗೆ ನೀಡುತ್ತಾರೆ. ಅದಕ್ಕಾಗಿಯೇ ವಿಶ್ವಸಂಸ್ಥೆಯು ಇದನ್ನು ಮಾನವ ಹಕ್ಕುಗಳು, ಸಾಮಾಜಿಕ ಸಮಾನತೆ ಮತ್ತು ಆರ್ಥಿಕ ಅಭಿವೃದ್ಧಿಯೊಂದಿಗೆ ಸಂಬಂಧ ಹೊಂದಿದೆ ಎಂದು ನೋಡುತ್ತದೆ. ಪ್ರಮುಖ ಅಂಶಗಳು: ಅಂತರರಾಷ್ಟ್ರೀಯ ಸಾಕ್ಷರತಾ ದಿನ 2025 ರ ಧ್ಯೇಯವಾಕ್ಯ – “ಡಿಜಿಟಲ್ ಯುಗದಲ್ಲಿ ಸಾಕ್ಷರತೆಯನ್ನು ಉತ್ತೇಜಿಸುವುದು” ಸೆಪ್ಟೆಂಬರ್ 8 ಅನ್ನು ಯುನೆಸ್ಕೋ 1966 ರಲ್ಲಿ ಅಂತರರಾಷ್ಟ್ರೀಯ ಸಾಕ್ಷರತಾ ದಿನವೆಂದು ಘೋಷಿಸಿತು. ಈ ದಿನವನ್ನು ಮೊದಲು 1967…
ಕುಲ್ಗಾಮ್ : ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ನಲ್ಲಿ ಭಯೋತ್ಪಾದಕರೊಂದಿಗೆ ಎನ್ಕೌಂಟರ್, ಭದ್ರತಾ ಪಡೆಗಳು ಇಡೀ ಪ್ರದೇಶವನ್ನು ಸುತ್ತುವರೆದಿವೆ, ಭಾರೀ ಗುಂಡಿನ ಚಕಮಕಿ ನಡೆಯುತ್ತಿದೆ ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಗುಡ್ಡಾರ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್ಕೌಂಟರ್ ಆರಂಭವಾಗಿದೆ. ಗುಪ್ತಚರ ಮಾಹಿತಿ ಪಡೆದ ನಂತರ, ಭದ್ರತಾ ಪಡೆಗಳು ಆ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು, ಆ ಸಮಯದಲ್ಲಿ ಭಯೋತ್ಪಾದಕರು ಗುಂಡು ಹಾರಿಸಲು ಪ್ರಾರಂಭಿಸಿದರು. ಪ್ರತೀಕಾರವಾಗಿ, ಭದ್ರತಾ ಪಡೆಗಳು ಸಹ ಗುಂಡು ಹಾರಿಸಿದವು ಮತ್ತು ಎನ್ಕೌಂಟರ್ ನಡೆಯುತ್ತಿದೆ. ಪ್ರದೇಶವನ್ನು ಸಂಪೂರ್ಣವಾಗಿ ಸುತ್ತುವರೆದಿದ್ದು, ಭಯೋತ್ಪಾದಕರು ತಪ್ಪಿಸಿಕೊಳ್ಳಲು ಯಾವುದೇ ಅವಕಾಶ ಸಿಗದಂತೆ ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಗಿದೆ. https://twitter.com/ANI/status/1964894277395476656?ref_src=twsrc%5Egoogle%7Ctwcamp%5Eserp%7Ctwgr%5Etweet
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್ ನಡೆದಿದ್ದು, ದುಷ್ಕರ್ಮಿಗಳು ಕಾರು ಚಾಲಕನನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಬೆಂಗಳೂರಿನ ಮೈಸೂರು ರಸ್ತೆಯ ಬಾಪೂಜಿನಗರದಲ್ಲಿ ಕಾರು ಚಾಲಕನನ್ನು ದುಷ್ಕರ್ಮಿಗಳು ಹತ್ಯೆ ಮಾಡಿ ಪರಾರಿಯಾಗಿರುವ ಘಟನೆ ನಡೆದಿದೆ. ಕೊಲೆಯಾದ ಯುವಕನನ್ನ ಕೌಶಿಕ್ (25) ಎಂದು ಗುರುತಿಸಲಾಗಿದೆ. ದುಷ್ಕರ್ಮಿಗಳು ಕೌಶಿಕ್ ಮೇಲೆ ಬಿಯರ್ ಬಾಟಲಿಯಿಂದ ಹೊಡೆದು ಹತ್ಯೆ ಮಾಡಿ ಎಸ್ಕೇಪ್ ಆಗಿದ್ದಾರೆ. ಸ್ಥಳಕ್ಕೆ ಬ್ಯಾಟರಾಯನಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಂಡ್ಯ: ಜಿಲ್ಲೆಯಲ್ಲಿ ಮದ್ದೂರಲ್ಲಿ ಗಣೇಶ ವಿಸರ್ಜನೆಯ ವೇಳೆಯಲ್ಲಿ ಕಲ್ಲು ತೂರಾಟ ಘಟನೆ ನಡೆದಿದ್ದು, ಘಟನೆ ಸಂಬಂಧ ಪೊಲೀಸರು ಇದೀಗ 20 ಮಂದಿಯನ್ನು ವಶಕ್ಕೆ ಪಡೆಯಲಾಗಿದ್ದು, ನಾಳೆ ಬೆಳಗ್ಗೆ ವರೆಗೆ 144 ಸೆಕ್ಷನ್ ನಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಅನ್ಯಕೋಮಿನವರು ಗಣೇಶ ಮೆರವಣಿಗೆಯ ಮೇಲೆ ಕಲ್ಲು ತೂರಾಟ ಮಾಡಿದ್ದಾಗಿ ಆರೋಪಿಸಲಾಗಿದೆ. ಇದಕ್ಕೆ ಪ್ರತಿಯಾಗಿ ಕಲ್ಲು ತೂರಾಟ ನಡೆಸಿದ್ದರಿಂದ ಹಲವರಿಗೆ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೆಲ ಕಾಲ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಸ್ಥಳದಲ್ಲಿದ್ದಂತ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿ, ಗಣೇಶ ಮೆರವಣಿಗೆ ಮುಂದುವರೆಸಲು ಅವಕಾಶ ಮಾಡಿಕೊಟ್ಟರು. ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ ಚನ್ನೇಗೌಡ ಬಡಾವಣೆಯಲ್ಲಿ ಕೂರಿಸಿದ್ದಂತ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಯ ವೇಳೆಯಲ್ಲಿ ಅನ್ಯ ಕೋಮಿನಿಂದ ಕಲ್ಲು ತೂರಾಟ ನಡೆಸಿರುವಂತ ಆರೋಪ ಕೇಳಿ ಬಂದಿದೆ. ಗಣೇಶ ಮೂರ್ತಿ ವಿಸರ್ಜನೆಯ ವೇಳೆಯಲ್ಲಿ ಉಂಟಾದಂತ ಗಲಭೆಯಲ್ಲಿ ಹಲವರು ಗಾಯಗೊಂಡಿದ್ದು, ಮದ್ದೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಗಲಭೆ ಖಂಡಿಸಿ ಹಿಂದೂ -ಮುಸ್ಲೀಂ ಮುಖಂಡರು ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿದರು. ಮುಂಜಾಗ್ರತಾ…
ಯಾದಗಿರಿ : ಫಾರಿನ್ ಗೆ ಅನ್ನಭಾಗ್ಯದ ಅಕ್ಕಿ ಕಳುಹಿಸುತ್ತಿದ್ದ ಜಾಲವೊಂದನ್ನು ಆಹಾರ ಇಲಾಖೆ ಅಧಿಕಾರಿಗಳು ಪತ್ತೆ ಮಾಡಿದ್ದು, 6000 ಟನ್ ಅಕ್ಕಿ ಜಪ್ತಿ ಮಾಡಿಕೊಂಡಿದ್ದಾರೆ. ಆಹಾರ ಇಲಾಖೆಯ ಅಧಿ ಕಾರಿಗಳು ಶುಕ್ರವಾರ ರಾತ್ರಿ ಯಾದಗಿರಿ ಜಿಲ್ಲೆ ಗುರುಮಠಕಲ್ನ ಶ್ರೀ ಲಕ್ಷ್ಮೀ ವೆಂಕಟೇಶ್ವರ ಇಂಡಸ್ಟ್ರೀಸ್ ಮೇಲೆ ದಾಳಿ ನಡೆಸಿ, ಪ್ರಮಾಣ ದಲ್ಲಿ ಸರ್ಕಾರದ ‘ಅನ್ನಭಾಗ್ಯ’ ಪಡಿತರ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ. ಬಿಪಿಎಲ್ , ಎಪಿಎಲ್ ಕಾರ್ಡ್ ದಾರರಿಗೆ ವಿತರಿಸುತ್ತಿದ್ದ ಅಕ್ಕಿಯನ್ನು ಪಾಲಿಶ್ ಮಾಡಿ ದುಬೈ, ಫ್ರಾನ್ಸ್ ದೇಶಗಳಿಗೆ ರಫ್ತು ಮಾಡಲಾಗುತ್ತಿತ್ತು. ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಸುಮಾರು 6000 ಟನ್ ಅಕ್ಕಿ ಸೀಜ್ ಮಾಡಿದ್ದಾರೆ. ಜಿಲ್ಲೆಯ ಹಲವು ಕಡೆಯಿಂದ ಅಕ್ಕಿ ಸಂಗ್ರಹಿಸಿ ತಂದು ಅದನ್ನು ಪಾಲಿಶ್ ಮಾಡಿ ಅದಕ್ಕೊಂದು ಬ್ರ್ಯಾಂಡ್ ಹೆಸರು ಕೊಟ್ಟು ದುಬೈ, ಫ್ರಾನ್ಸ್ ಇನ್ನಿತರ ರಾಷ್ಟ್ರಗಳಿಗೆ ಕಳುಹಿಸಲು ಸಂಚು ರೂಪಿಸಲಾಗುತ್ತಿತ್ತು. ಹೊರ ದೇಶದಲ್ಲಿ ಅಕ್ಕಿಗೆ ಭಾರಿ ರೇಟ್ ಇದೆ. ಒಳ್ಳೆ ಗುಣಮಟ್ಟದ ಅಕ್ಕಿ ಎಂದು ಅಲ್ಲಿ ಮಾರಾಟ ಮಾಡಿ ಹಣ ಮಾಡುವ…
ಉತ್ತರ ಪ್ರದೇಶದ ಫರೂಕಾಬಾದ್ನ ಬಿಜೆಪಿ ಸಂಸದ ಮುಖೇಶ್ ರಜಪೂತ್ ಅವರ ಸಹೋದರಿಯೊಂದಿಗೆ ಕೌಟುಂಬಿಕ ಹಿಂಸಾಚಾರದ ಪ್ರಕರಣ ಬೆಳಕಿಗೆ ಬಂದಿದೆ. ತನ್ನ ಮಾವ ಕೋಲುಗಳಿಂದ ತನ್ನನ್ನು ಕೆಟ್ಟದಾಗಿ ಹೊಡೆದಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ ಮತ್ತು ಇಡೀ ಘಟನೆಯ ವಿಡಿಯೋ ಈಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಯಾವುದೋ ವಿಷಯದ ಬಗ್ಗೆ ವಾಗ್ವಾದ ಆರಂಭವಾಗುವುದನ್ನು ವೀಡಿಯೊದಲ್ಲಿ ಸ್ಪಷ್ಟವಾಗಿ ಕಾಣಬಹುದು ಮತ್ತು ಈ ವಿವಾದವು ಕ್ಷಣಮಾತ್ರದಲ್ಲಿ ಹಿಂಸಾತ್ಮಕವಾಗುತ್ತದೆ. ಹೊಡೆಯುವಿಕೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ ವೀಡಿಯೊದಲ್ಲಿ, ಮೊದಲು ಸಂಸದರ ಸಹೋದರಿ ಮತ್ತು ಅವರ ಮಾವನ ನಡುವೆ ವಾಗ್ವಾದ ನಡೆಯುತ್ತದೆ, ಆದರೆ ಇದ್ದಕ್ಕಿದ್ದಂತೆ ಮಾವ ಸೊಸೆಯ ಮೇಲೆ ಕೋಲಿನಿಂದ ಹಲ್ಲೆ ಮಾಡುತ್ತಾನೆ. ಈ ಸಮಯದಲ್ಲಿ, ಮಹಿಳೆ ತನ್ನನ್ನು ತಾನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಾಳೆ ಆದರೆ ಮಾವನ ಕೋಪ ನಿಲ್ಲುವುದಿಲ್ಲ. ಮುಖೇಶ್ ರಜಪೂತ್ ಅವರ ಸಹೋದರಿಯ ಗಂಭೀರ ಆರೋಪಗಳು: ಸ್ನಾನ ಮಾಡುವಾಗ ವೀಡಿಯೊ ಮಾಡಲಾಗಿದ್ದು, ನಂತರ ಕೊಲೆ ಬೆದರಿಕೆ ನೀಡಲಾಗಿದೆ ಎಂದು ಸಹವರ್ ಪೊಲೀಸ್ ಠಾಣೆಯಲ್ಲಿ ಮಹಿಳೆ ದೂರು…
ಮಂಡ್ಯ: ಜಿಲ್ಲೆಯಲ್ಲಿ ಮದ್ದೂರಲ್ಲಿ ಗಣೇಶ ವಿಸರ್ಜನೆಯ ವೇಳೆಯಲ್ಲಿ ಕಲ್ಲು ತೂರಾಟ ಘಟನೆ ನಡೆದಿದ್ದು, ಘಟನೆ ಸಂಬಂಧ ಪೊಲೀಸರು ಇದೀಗ 20 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಅನ್ಯಕೋಮಿನವರು ಗಣೇಶ ಮೆರವಣಿಗೆಯ ಮೇಲೆ ಕಲ್ಲು ತೂರಾಟ ಮಾಡಿದ್ದಾಗಿ ಆರೋಪಿಸಲಾಗಿದೆ. ಇದಕ್ಕೆ ಪ್ರತಿಯಾಗಿ ಕಲ್ಲು ತೂರಾಟ ನಡೆಸಿದ್ದರಿಂದ ಹಲವರಿಗೆ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೆಲ ಕಾಲ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಸ್ಥಳದಲ್ಲಿದ್ದಂತ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿ, ಗಣೇಶ ಮೆರವಣಿಗೆ ಮುಂದುವರೆಸಲು ಅವಕಾಶ ಮಾಡಿಕೊಟ್ಟರು. ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ ಚನ್ನೇಗೌಡ ಬಡಾವಣೆಯಲ್ಲಿ ಕೂರಿಸಿದ್ದಂತ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಯ ವೇಳೆಯಲ್ಲಿ ಅನ್ಯ ಕೋಮಿನಿಂದ ಕಲ್ಲು ತೂರಾಟ ನಡೆಸಿರುವಂತ ಆರೋಪ ಕೇಳಿ ಬಂದಿದೆ. ಗಣೇಶ ಮೂರ್ತಿ ವಿಸರ್ಜನೆಯ ವೇಳೆಯಲ್ಲಿ ಉಂಟಾದಂತ ಗಲಭೆಯಲ್ಲಿ ಹಲವರು ಗಾಯಗೊಂಡಿದ್ದು, ಮದ್ದೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಗಲಭೆ ಖಂಡಿಸಿ ಹಿಂದೂ -ಮುಸ್ಲೀಂ ಮುಖಂಡರು ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿದರು. ಮುಂಜಾಗ್ರತಾ ಕ್ರಮವಾಗಿ ಮದ್ದೂರು ಪಟ್ಟಣದಾದ್ಯಂತ ಭಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಮದ್ದೂರಿನಲ್ಲಿ…
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ಮುಂದಿನ ವರ್ಷದಿಂದ ಉಚಿತವಾಗಿ ನೋಟ್ಬುಕ್ ವಿತರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಮಕ್ಕಳಿಗಾಗಿ ಹಾಲು, ಮೊಟ್ಟೆ ಮತ್ತು ಬಿಸಿಯೂಟ ಯೋಜನೆ ಜಾರಿಗೊಳಿಸಲಾಗಿದೆ. ಶಿಕ್ಷಣಕ್ಕೆ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದ್ದು, ವರ್ಷಕ್ಕೆ ₹65 ಸಾವಿರ ಕೋಟಿ ಖರ್ಚು ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ. ಸರ್ಕಾರಿ ಶಾಲಾ ಮಕ್ಕಳಿಗೆ ಮುಂದಿನ ವರ್ಷದಿಂದ ಉಚಿತವಾಗಿ ನೋಟ್ಬುಕ್ ವಿತರಿಸಲಾಗುವುದು. ಈಗಾಗಲೇ ಉಚಿತವಾಗಿ ಪಠ್ಯಪುಸ್ತಕಗಳನ್ನು ನೀಡುತ್ತಿದ್ದೇವೆ. ಮಕ್ಕಳಿಗಾಗಿ ಹಾಲು, ಮೊಟ್ಟೆ ಮತ್ತು ಬಿಸಿಯೂಟ ಯೋಜನೆ ಜಾರಿಗೊಳಿಸಲಾಗಿದೆ. ಶಿಕ್ಷಣಕ್ಕೆ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದ್ದು, ವರ್ಷಕ್ಕೆ ₹65 ಸಾವಿರ ಕೋಟಿ ಖರ್ಚು ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ. https://twitter.com/KarnatakaVarthe/status/1964308120651649526