Author: kannadanewsnow57

ಬೆಂಗಳೂರು: ಪ್ರಸಕ್ತ ಸಾಲಿನ ಮುಂಗಾರು ಮಳೆ ಬುಧವಾರ ಕೊನೆಗೊಂಡಿದ್ದು, ಅಕ್ಟೋಬರ್ 16 ರ ಇಂದಿನಿಂದ ಹಿಂಗಾರು ಮಳೆ ರಾಜ್ಯ ಪ್ರವೇಶಿಸಲಿದೆ. ಈ ಬಾರಿ ಹಿಂಗಾರು ಅವಧಿ ನವೆಂಬರ್ ತಿಂಗಳಾಂತ್ಯದವರೆಗೆ ಇರಲಿದ್ದು, ವಾಡಿಕೆಯಷ್ಟೇ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರು ಮತ್ತು ಚಾಮರಾಜನಗರದಲ್ಲಿ ಗುಡುಗು ಮತ್ತು ಮಿಂಚು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಮೈಸೂರು, ಹಾಸನ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು,ಕೊಡಗು, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ, ಕೋಲಾರ, ಯಾದಗಿರಿ, ಕಲಬುರಗಿ, ರಾಯಚೂರು, ಬಳ್ಳಾರಿ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Read More

ನವದೆಹಲಿ : ಯುನೈಟೆಡ್ ಸ್ಟೇಟ್ಸ್, ಆಸ್ಟ್ರೇಲಿಯಾ, ಕೆನಡಾ ಮತ್ತು ಯುಕೆ ಸೇರಿದಂತೆ ಜಾಗತಿಕವಾಗಿ ಸಾವಿರಾರು ಬಳಕೆದಾರರಿಗೆ ಆಲ್ಫಾಬೆಟ್ ಒಡೆತನದ ಯೂಟ್ಯೂಬ್ ಸ್ಥಗಿತಗೊಂಡಿದೆ. ಡೌನ್ ಡಿಟೆಕ್ಟರ್ ಪ್ರಕಾರ, ಯೂಟ್ಯೂಬ್ ಬುಧವಾರ ದೋಷವನ್ನು ಒಪ್ಪಿಕೊಂಡಿದೆ ಮತ್ತು ಬಳಕೆದಾರರು ವೀಡಿಯೊಗಳನ್ನು ನೋಡುವ ಸಮಸ್ಯೆಗಳನ್ನು ಅನುಭವಿಸುತ್ತಿರುವ ಬಗ್ಗೆ ತಿಳಿದಿದೆ ಎಂದು ತನ್ನ ಸ್ಥಿತಿ ಪುಟದಲ್ಲಿ ಹೇಳಿದೆ ಮತ್ತು ಈ ವಿಷಯದ ಬಗ್ಗೆ ತನಿಖೆ ನಡೆಸುತ್ತಿದೆ ಎಂದು ಹೇಳಿದೆ. ಆದಾಗ್ಯೂ, ಸ್ಟ್ರೀಮಿಂಗ್ ಪ್ಲಾಟ್ ಫಾರ್ಮ್ ನ ನಿಲುಗಡೆಗೆ ಕಾರಣವೇನೆಂದು ತಕ್ಷಣ ಸ್ಪಷ್ಟವಾಗಿಲ್ಲ. ಡೌನ್ಡಿಟೆಕ್ಟರ್ ಪ್ರಕಾರ, ಸಂಜೆ 7:55 ಕ್ಕೆ (ಸ್ಥಳೀಯ ಸಮಯ), 366,000 ಕ್ಕೂ ಹೆಚ್ಚು ಜನರು ಯುನೈಟೆಡ್ ಸ್ಟೇಟ್ಸ್ನಲ್ಲಿಯೇ ಯೂಟ್ಯೂಬ್ ಸ್ಟ್ರೀಮಿಂಗ್ ನಲ್ಲಿ ಸಮಸ್ಯೆಗಳನ್ನು ವರದಿ ಮಾಡಿದ್ದಾರೆ. ಈ ವಿಷಯದ ಬಗ್ಗೆ ನವೀಕರಿಸಿದ ಡೌನ್ ಡಿಟೆಕ್ಟರ್ ಎಕ್ಸ್ ನಲ್ಲಿನ ಪೋಸ್ಟ್ ನಲ್ಲಿ, “ಯೂಟ್ಯೂಬ್ ನೊಂದಿಗೆ ನಡೆಯುತ್ತಿರುವ ಸಮಸ್ಯೆಯು ಸಂಜೆ 7:12 ಕ್ಕೆ ಗುರುತಿಸಲ್ಪಟ್ಟಾಗಿನಿಂದ ಈಗ 800,000 ಕ್ಕೂ ಹೆಚ್ಚು ವರದಿಗಳನ್ನು ಸ್ವೀಕರಿಸಿದೆ” ಎಂದಿದೆ. https://twitter.com/ETNowSwadesh/status/1978638271463989546

Read More

ಬೆಂಗಳೂರು : “ನವೆಂಬರ್ 1 ನೇ‌ ತಾರೀಕಿನಿಂದ ಬಿ ಖಾತೆಗಳನ್ನು ಎ ಖಾತೆಗಳಾಗಿ ಬದಲಾವಣೆ ಮಾಡುವ ಐತಿಹಾಸಿಕ ನಿರ್ಣಯಕ್ಕೆ ಸರ್ಕಾರ ತೀರ್ಮಾನ ಮಾಡಿದೆ. ಇದು ಬೆಂಗಳೂರಿನ 15 ಲಕ್ಷ ಆಸ್ತಿಗಳ ಮಾಲೀಕರಿಗೆ ಉಪಯೋಗವಾಗುತ್ತದೆ. ಇದೊಂದು ಕ್ರಾಂತಿಕಾರಕ ತೀರ್ಮಾನ.‌ ಆಸ್ತಿ ಶುದ್ಧೀಕರಣಕ್ಕೆ ನಾಂದಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ‌ಅವರು ಹೇಳಿದರು. ಜಿಬಿಎ ವ್ಯಾಪ್ತಿಯ ಬಿ-ಖಾತಾ ನಿವೇಶನ ಮಾಲೀಕರಿಗೆ ಬಿ-ಖಾತಾದಿಂದ ಎ-ಖಾತಾಗೆ ಪರಿವರ್ತನೆ ಮತ್ತು ಹೊಸ ನಿವೇಶನಗಳಿಗೂ ಎ-ಖಾತಾ ನೀಡಲು ಹೊಸದಾಗಿ ಜಾರಿಗೊಳಿಸಿರುವ ಆನ್ ಲೈನ್ ವ್ಯವಸ್ಥೆಗೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ ಶಿವಕುಮಾರ್ ರವರು ವಿಧಾನಸೌಧದಲ್ಲಿ ಬುಧವಾರ ಚಾಲನೆ ನೀಡಿ, ಮಾತನಾಡಿದರು. “2 ಸಾವಿರ ಚ.ಮೀ. ವಿಸ್ತೀರ್ಣದ ಆಸ್ತಿಗಳು ಈ ಕಾರ್ಯಕ್ರಮದ ವ್ಯಾಪ್ತಿಗೆ ಬರುತ್ತವೆ. 2 ಸಾವಿರ ಚದರ ಮೀಟರ್ ಗಿಂತ ಹೆಚ್ಚು ವಿಸ್ತೀರ್ಣದ ಆಸ್ತಿಗಳಿಗೆ ಕ್ಯಾಡ್ ಡ್ರಾಯಿಂಗ್ ಸೇರಿದಂತೆ ಇತರೇ ದಾಖಲೆಗಳನ್ನು ನೀಡಬೇಕಾಗುತ್ತದೆ. ನವೆಂಬರ್ 1 ರಿಂದ ಪ್ರಾರಂಭವಾಗುವ ಈ ಅಭಿಯಾನ 100 ದಿನಗಳ ನಡೆಯಲಿದೆ. 500 ರೂಪಾಯಿ ಅರ್ಜಿ…

Read More

ಬೆಂಗಳೂರು: ರಾಜ್ಯ ಸರ್ಕಾರವು ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಲು ಮುಂದಾಗಿದ್ದು, ರಾಜ್ಯದ ಮಹಾನಗರ ಪಾಲಿಕೆಗಳು, ನಗರಸಭೆ, ಪುರಸಭೆಗಳ ವ್ಯಾಪ್ತಿಯಲ್ಲಿಯೂ ಸ್ವಾಧೀನಾನುಭವ ಪತ್ರ(ಓಸಿ)ದಿಂದ ವಿನಾಯಿತಿ ಮುಂದಾಗಿದೆ. ಹೌದು, ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ 1,200 ಚದರಡಿವರೆಗಿನ ವಿಸ್ತೀರ್ಣದಲ್ಲಿ ನಿರ್ಮಾಣ ಮಾಡಿದ ವಸತಿ ಕಟ್ಟಡಗಳಿಗೆ ಸ್ವಾಧೀನಾನುಭವ ಪತ್ರ(ಓಸಿ)ದಿಂದ ವಿನಾಯಿತಿ ನೀಡಿದ ಬೆನ್ನಲ್ಲೇ ಇತರೆ ಮಹಾನಗರ ಪಾಲಿಕೆಗಳು, ನಗರಸಭೆ, ಪುರಸಭೆಗಳ ವ್ಯಾಪ್ತಿಯಲ್ಲಿಯೂ ವಿನಾಯಿತಿ ನೀಡಲು ಸರ್ಕಾರ ಮುಂದಾಗಿದೆ. ನಗರಾಭಿವೃದ್ಧಿ ಇಲಾಖೆಯಿಂದ ಈ ಬಗ್ಗೆ ಪ್ರಸ್ತಾವನೆ ಸಲ್ಲಿಸಲಿಸಿದೆ. ಇಂದು ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಂಪುಟ ಸಭೆಯಲ್ಲಿ 1,200 ಚದರಡಿವರೆಗಿನ ವಿಸ್ತೀರ್ಣದವರೆಗಿನ ನಿವೇಶನಗಳಲ್ಲಿ ನಿರ್ಮಾಣ ಮಾಡಿದ ನೆಲ ಅಂತಸ್ತು, ಎರಡು ಅಂತಸ್ತು, ಸ್ಟಿಲ್ಟ್ ಮತ್ತು ಮೂರು ಅಂತಸ್ತಿನವರೆಗಿನ ವಸತಿ ಕಟ್ಟಡಗಳಿಗೆ ವಿನಾಯಿತಿ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ಕರ್ನಾಟಕ ಮಹಾನಗರ ಪಾಲಿಕೆಗಳ ಕಾಯ್ದೆಯಡಿ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ, ಕರ್ನಾಟಕ ಪುರಸಭೆಗಳ ಅಧಿನಿಯಮದಡಿ ಪುರಸಭೆಗಳ ವ್ಯಾಪ್ತಿಯಲ್ಲಿ ವಿನಾಯಿತಿ ಕೋರಲಾಗುವುದು. ಈ ವೇಳೆ ನಕ್ಷೆ ಮಂಜೂರಾತಿ ಪಡೆದು…

Read More

ಬೆಂಗಳೂರು : ಫೆಬ್ರವರಿ/ಮಾರ್ಚ್ 2026 ರಲ್ಲಿ ನಡೆಸಲಾಗುವ ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೆ ಖಾಸಗಿ ಅಭ್ಯರ್ಥಿಗಳಾಗಿ ನೋಂದಾಯಿಸಿಕೊಳ್ಳುವ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಮಹತ್ವದ ಆದೇಶ ಹೊರಡಿಸಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ವತಿಯಿಂದ ನಡೆಸುತ್ತಿರುವ ಫೆಬ್ರವರಿ/ಮಾರ್ಚ್ 2026 ರ ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೆ ಉಲ್ಲೇಖಿತ ಸರ್ಕಾರದ ಆದೇಶಗಳನ್ವಯ ಪಿಯುಸಿ ಶಿಕ್ಷಣ ಬೋಧಿಸುವ ರಾಜ್ಯದ ಎಲ್ಲಾ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಮಾತ್ರ ಖಾಸಗಿ ಅಭ್ಯರ್ಥಿಯಾಗಿ ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಅದರಂತೆ 2026 ರ ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೆ ಅರ್ಹ ಅಭ್ಯರ್ಥಿಗಳಿಂದ ದಿನಾಂಕ:15-10-2025 ರಿಂದ ಖಾಸಗಿ ಅಭ್ಯರ್ಥಿಗಳಾಗಿ ನೋಂದಾಯಿಸಿಕೊಳ್ಳಲು ONLINE ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ನೇರವಾಗಿ ಕಾಲೇಜಿನಲ್ಲಿ ನೋಂದಾಯಿಸಿಕೊಳ್ಳಲು ಅವಕಾಶವಿರುವುದಿಲ್ಲ. ಖಾಸಗಿ ಅಭ್ಯರ್ಥಿಗಳಾಗಿ ನೋಂದಾಯಿಸಿಕೊಳ್ಳಲು ಕಡ್ಡಾಯವಾಗಿ ಇರಬೇಕಾದ ಅರ್ಹತೆಗಳು ಹಾಗೂ ಸೂಚನೆಗಳು: 1. ದಿನಾಂಕ: 31-03-2026 ಕ್ಕೆ 17 ವರ್ಷಗಳು ತುಂಬಿರಬೇಕು. (31-03-2009 ರಂದು ಅಥವಾ ಅದಕ್ಕಿಂತ ಹಿಂದೆ…

Read More

ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ, ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ಅಕ್ಟೋಬರ್, 17 ರಂದು ಮಧ್ಯಾಹ್ನ 1.44 ನಿಮಿಷಕ್ಕೆ ಸಲ್ಲುವ ಮಕರ ಲಗ್ನದಲ್ಲಿ ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಜರುಗಲಿದೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾ ರೆಡ್ಡಿ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯರಾದ ಅಜಯ್ ಮಾಕನ್, ಶಾಸಕರಾದ ಡಾ.ಮಂತರ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಸಿ.ಎಚ್.ಅರುಣ್ ಮಾಚಯ್ಯ, ಭಾಗಮಂಡಲ ಗ್ರಾ.ಪಂ.ಅಧ್ಯಕ್ಷರಾದ ಕಾಳನ ರವಿ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ತಾಲ್ಲೂಕು ಅಧ್ಯಕ್ಷರಾದ ಎಂ.ಜಿ.ಮೋಹನ್ ದಾಸ್, ಇತರರು ಪಾಲ್ಗೊಳ್ಳಲಿದ್ದಾರೆ. ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ…

Read More

ಬೆಂಗಳೂರು : ರಾಜ್ಯದಲ್ಲಿರುವ ಆಯ್ದ ಸರ್ಕಾರಿ ಶಾಲೆಗಳನ್ನು (ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 200 ಶಾಲೆಗಳನ್ನು ಹಾಗೂ ರಾಜ್ಯದ ಇತರೆಡೆ 500 ಶಾಲೆಗಳನ್ನು) ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಉನ್ನತೀಕರಿಸಿ, ಹೆಚ್ಚುವರಿ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಬಗ್ಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕದಲ್ಲಿ ಸುಮಾರು 47,493 ಸರ್ಕಾರಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿವೆ. ಇವುಗಳಲ್ಲಿ 19,603 ಪ್ರಾಥಮಿಕ ಶಾಲೆಗಳು, 21,676 ಹಿರಿಯ ಪ್ರಾಥಮಿಕ ಶಾಲೆಗಳು, 4,895 ಪ್ರೌಢಶಾಲೆಗಳು ಮತ್ತು 1,319 ಪದವಿಪೂರ್ವ ಕಾಲೇಜುಗಳಿರುತ್ತವೆ. ಒಟ್ಟಾರೆಯಾಗಿ ಕೇವಲ 309 ಶಾಲೆಗಳು ಎಲ್.ಕೆ.ಜಿಯಿಂದ 12ನೇ ತರಗತಿಯವರೆಗೆ ಸಂಯುಕ್ತ ವ್ಯವಸ್ಥೆಯನ್ನು ಹೊಂದಿವೆ. ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿಯು 2015-16ರಲ್ಲಿ 47.1 ಲಕ್ಷದಿಂದ 2025-26ರಲ್ಲಿ 38.2 ಲಕ್ಷಕ್ಕೆ (19% ಕಡಿಮೆ) ಕುಸಿದಿರುತ್ತದೆ. ಒಟ್ಟು ದಾಖಲಾತಿಯಲ್ಲಿ ಸರ್ಕಾರಿ ಶಾಲೆಗಳ ಪಾಲು 46% ರಿಂದ 38% ಕ್ಕೆ ಕುಸಿದಿರುತ್ತದೆ. ಆದರೆ ಖಾಸಗಿ ಅನುದಾನರಹಿತ ಶಾಲೆಗಳ ಪಾಲು 2015-16ರಲ್ಲಿ 36.3 ಲಕ್ಷ ವಿದ್ಯಾರ್ಥಿಗಳಿಂದ 2025-26ರಲ್ಲಿ 47 ಲಕ್ಷ ವಿದ್ಯಾರ್ಥಿಗಳಿಗೆ (29%) ಹೆಚ್ಚಾಗಿದೆ.…

Read More

ಬೆಂಗಳೂರು : ಶಿಕ್ಷಕ, ಉಪನ್ಯಾಸಕ ಹುದ್ದೆ ನಿರೀಕ್ಷೆಯಲ್ಲಿರುವವರಿಗೆ ಸಚಿವ ಮಧು ಬಂಗಾರಪ್ಪ ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯ ಸರ್ಕಾರಿ, ಅನುದಾನಿತ ಶಾಲೆಗಳು ಹಾಗೂ ಪಿಯು ಕಾಲೇಜುಗಳಲ್ಲಿ ಖಾಲಿ ಇರುವ ಬೋಧಕರ ಕೊರತೆ ನೀಗಿಸಲು 18 ಸಾವಿರ ಶಿಕ್ಷಕರು ಮತ್ತು ಉಪನ್ಯಾಸಕರ ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವೆಂಬರ್ ಇಲ್ಲವೇ ಡಿಸೆಂಬರ್ನಲ್ಲಿ ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಸಿದ ನಂತರ ಸಿಇಟಿ ಮೂಲಕ ಶಿಕ್ಷಕರ ನೇಮಕಾತಿ ಮಾಡಲಾಗುವುದು, ಅನುದಾನಿತ ಶಾಲೆಗಳಿಗೆ 5000 ಶಿಕ್ಷಕರು ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರು ಸೇರಿ ಒಟ್ಟು 18 ಸಾವಿರ ಶಿಕ್ಷಕರು, ಉಪನ್ಯಾಸಕರ ನೇಮಿಸಲಾಗುತ್ತದೆ ಎಂದು ಹೇಳಿದ್ದಾರೆ. ಪರಿಶಿಷ್ಟ ಜಾತಿ ಒಳಪಂಗಡಗಳಿಗೆ ಒಳ ಮೀಸಲಾತಿ ಅನುಸಾರ ನೇಮಕಾತಿ ಪ್ರಕ್ರಿಯೆ ನಡೆಯಲಿದೆ, ಈ ಸಂಬಂಧ ಶೀಘ್ರ ಅಧಿಸೂಚನೆ ಹೊರಡಿಸಲಾಗುವುದು ಎಂದರು.

Read More

ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಬಿ-ಖಾತಾ ನಿವೇಶನ ಮಾಲೀಕರಿಗೆ ಬಿ-ಖಾತಾದಿಂದ ಎ-ಖಾತಾಗೆ ಪರಿವರ್ತನೆ ಮತ್ತು ಹೊಸ ನಿವೇಶನಗಳಿಗೂ ಎ-ಖಾತಾ ನೀಡಲು ಹೊಸದಾಗಿ ಜಾರಿಗೊಳಿಸಿರುವ ಆನ್ಲೈನ್ ವ್ಯವಸ್ಥೆಗೆ  ಚಾಲನೆ ದೊರೆತಿದೆ. ಬಿ-ಖಾತಾದಿಂದ ಎ-ಖಾತಾ ಪರಿವರ್ತನೆ ಮತ್ತು ಹೊಸ ನಿವೇಶನಗಳಿಗೆ ಎ-ಖಾತಾ ಪಡೆಯಲು ಅರ್ಜಿ ಸಲ್ಲಿಸುವ ವಿಧಾನ 2000 ಚ.ಮೀ.ಗಳ ವರೆಗೆ * ನಿಮ್ಮ ಮೊಬೈಲ್ ಮತ್ತು ಓಟಿಪಿ ಬಳಸಿ https://bbmp.karnataka.gov.in/BtoAKhata ರಲ್ಲಿ ಲಾಗಿನ್ ಆಗಿ * ನಿಮ್ಮ ಅಂತಿಮ ಬಿ-ಖಾತೆಯ ಇಪಿಐಡಿ ಸಂಖ್ಯೆಯನ್ನು ನಮೂದಿಸಿ ವಿವರಗಳನ್ನು ಪಡೆಯಿರಿ * ಮಾಲೀಕರ ಆಧಾರ್ ದೃಢೀಕರಿಸಿ * ನಿವೇಶನವಿರುವ ಸ್ಥಳವನ್ನು ಮತ್ತು ನಿವೇಶನ ಮುಂಭಾಗದ ರಸ್ತೆಯ ಪ್ರಕಾರವನ್ನು ದೃಢಪಡಿಸಿ * ಭೂ ಪರಿವರ್ತನೆಯಾದ ಮತ್ತು ಭೂ ಪರಿವರ್ತನೆಯಾಗದ ಎರಡೂ ನಿವೇಶನಗಳು ಅರ್ಹ (ಫ್ಲಾಟ್‌ಗಳಿಗೆ ಅರ್ಹತೆಯಿಲ್ಲ) + ಸ್ವೀಕೃತಿಯನ್ನು ಪಡೆಯಿರಿ * ನಗರ ಪಾಲಿಕೆ ವತಿಯಿಂದ ನಿವೇಶನಕ್ಕೆ ಭೇಟಿ ಮತ್ತು ದೃಢೀಕರಣ * ಮಾರುಕಟ್ಟೆ ಮೌಲ್ಯದ ಶೇ. 5% ರಷ್ಟು ಮೊತ್ತವನ್ನು “ಏಕ ನಿವೇಶನ”…

Read More

ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಬಿ-ಖಾತಾ ನಿವೇಶನ ಮಾಲೀಕರಿಗೆ ಬಿ-ಖಾತಾದಿಂದ ಎ-ಖಾತಾಗೆ ಪರಿವರ್ತನೆ ಮತ್ತು ಹೊಸ ನಿವೇಶನಗಳಿಗೂ ಎ-ಖಾತಾ ನೀಡಲು ಹೊಸದಾಗಿ ಜಾರಿಗೊಳಿಸಿರುವ ಆನ್ಲೈನ್ ವ್ಯವಸ್ಥೆಗೆ  ಚಾಲನೆ ದೊರೆತಿದೆ. ಬಿ-ಖಾತಾದಿಂದ ಎ-ಖಾತಾ ಪರಿವರ್ತನೆ ಮತ್ತು ಹೊಸ ನಿವೇಶನಗಳಿಗೆ ಎ-ಖಾತಾ ಪಡೆಯಲು ಅರ್ಜಿ ಸಲ್ಲಿಸುವ ವಿಧಾನ 2000 ಚ.ಮೀ.ಗಳ ವರೆಗೆ * ನಿಮ್ಮ ಮೊಬೈಲ್ ಮತ್ತು ಓಟಿಪಿ ಬಳಸಿ https://bbmp.karnataka.gov.in/BtoAKhata ರಲ್ಲಿ ಲಾಗಿನ್ ಆಗಿ * ನಿಮ್ಮ ಅಂತಿಮ ಬಿ-ಖಾತೆಯ ಇಪಿಐಡಿ ಸಂಖ್ಯೆಯನ್ನು ನಮೂದಿಸಿ ವಿವರಗಳನ್ನು ಪಡೆಯಿರಿ * ಮಾಲೀಕರ ಆಧಾರ್ ದೃಢೀಕರಿಸಿ * ನಿವೇಶನವಿರುವ ಸ್ಥಳವನ್ನು ಮತ್ತು ನಿವೇಶನ ಮುಂಭಾಗದ ರಸ್ತೆಯ ಪ್ರಕಾರವನ್ನು ದೃಢಪಡಿಸಿ * ಭೂ ಪರಿವರ್ತನೆಯಾದ ಮತ್ತು ಭೂ ಪರಿವರ್ತನೆಯಾಗದ ಎರಡೂ ನಿವೇಶನಗಳು ಅರ್ಹ (ಫ್ಲಾಟ್‌ಗಳಿಗೆ ಅರ್ಹತೆಯಿಲ್ಲ) + ಸ್ವೀಕೃತಿಯನ್ನು ಪಡೆಯಿರಿ * ನಗರ ಪಾಲಿಕೆ ವತಿಯಿಂದ ನಿವೇಶನಕ್ಕೆ ಭೇಟಿ ಮತ್ತು ದೃಢೀಕರಣ * ಮಾರುಕಟ್ಟೆ ಮೌಲ್ಯದ ಶೇ. 5% ರಷ್ಟು ಮೊತ್ತವನ್ನು “ಏಕ ನಿವೇಶನ”…

Read More