Author: kannadanewsnow57

ನವದೆಹಲಿ : ಎಸ್ ಎಸ್ ಎಲ್ ಸಿ ಹಾಗೂ ಐಟಿಐ ಪಾಸಾದವರಿಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದ್ದು, ಭಾರತೀಯ ರೈಲ್ವೆ ಇಲಾಖೆಯಲ್ಲಿ 50,000 ಕ್ಕೂ ಹೆಚ್ಚು ಗ್ರೂಪ್ ಡಿ ಹುದ್ದೆಗಳ ನೇಮಕಾತಿಗೆ ಮುಂದಾಗಿದೆ. ಹೌದು, ಭಾರತೀಯ ರೈಲ್ವೇಯು ಗ್ರೂಪ್ ಡಿ ನೇಮಕಾತಿ 2024 ಕ್ಕೆ ದೊಡ್ಡ ಅವಕಾಶವನ್ನು ಒದಗಿಸಿದೆ. ಈ ನೇಮಕಾತಿ ಡ್ರೈವ್ ಅಡಿಯಲ್ಲಿ, 50,000 ಕ್ಕೂ ಹೆಚ್ಚು ಹುದ್ದೆಗಳಲ್ಲಿ ನೇಮಕಾತಿ ನಡೆಯಲಿದೆ. ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿರುವ ಮತ್ತು ಭಾರತೀಯ ರೈಲ್ವೆಯಲ್ಲಿ ತಮ್ಮ ವೃತ್ತಿಜೀವನವನ್ನು ಮಾಡಲು ಬಯಸುವ ಯುವಕರಿಗೆ ಇದು ಸುವರ್ಣಾವಕಾಶ. ಈ ನೇಮಕಾತಿ ಡ್ರೈವ್ ವಿಶೇಷವಾಗಿ 10 ನೇ ಪಾಸ್ ಮತ್ತು ITI ಹೊಂದಿರುವವರಿಗೆ ಪ್ರಯೋಜನಕಾರಿಯಾಗಿದೆ. ಆಯ್ಕೆ ಪ್ರಕ್ರಿಯೆಯು ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT), ದೈಹಿಕ ದಕ್ಷತೆ ಪರೀಕ್ಷೆ (PET), ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯನ್ನು ಒಳಗೊಂಡಿರುತ್ತದೆ. ರೈಲ್ವೆ ಗ್ರೂಪ್ ಡಿ ನೇಮಕಾತಿ 2024 ವಿವರ ನೇಮಕಾತಿ ಹೆಸರು : ರೈಲ್ವೆ ಗ್ರೂಪ್ ಡಿ ನೇಮಕಾತಿ 2024 ಒಟ್ಟು ಪೋಸ್ಟ್‌ಗಳು…

Read More

ಬೆಂಗಳೂರು: 2024-25ನೇ ಸಾಲಿಗೆ ಸರ್ಕಾರಿ ಪ್ರೌಢಶಾಲೆಗಳಲ್ಲಿ ವಿಜ್ಞಾನ ಪ್ರಯೋಗಾಲಯ ಸೌಲಭ್ಯವನ್ನು ಅನುಷ್ಠಾನಗೊಳಿಸುವ ಕುರಿತು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಮೇಲಿನ ವಿಷಯ ಹಾಗೂ ಉಲ್ಲೇಖಗಳಿಗೆ ಸಂಬಂಧಿಸಿದಂತೆ, 2024-25ನೇ ಸಾಲಿಗೆ ಸರ್ಕಾರಿ ಪ್ರೌಢಶಾಲೆಗಳಲ್ಲಿ ವಿಜ್ಞಾನ ಪ್ರಯೋಗಾಲಯ ಸೌಲಭ್ಯವನ್ನು ಅನುಷ್ಠಾನಗೊಳಿಸುವ ಕುರಿತು ಮಾರ್ಗದರ್ಶನವನ್ನು ನೀಡಲಾಗಿರುತ್ತದೆ. ಆದಾಗ್ಯೂ ಶಾಲಾ ಹಂತದಲ್ಲಿ ಅನುಷ್ಠಾನ ಸಂಬಂಧ ನಿರ್ವಹಿಸಬೇಕಾದ ಕ್ರಮಗಳು, ವಿಜ್ಞಾನ ಪ್ರಯೋಗಾಲಯ ಉಪಕರಣಗಳ ಖರೀದಿ ಪ್ರಕ್ರಿಯೆಯನ್ನು ಸಮರ್ಪಕವಾದ ರೀತಿಯಲ್ಲಿ ಅನುಸರಿಸದೇ ಇರುವುದನ್ನು ಗಮನಿಸಲಾಗಿದೆ. ಈ ಕುರಿತು ಡಯಟ್ ನೋಡಲ್ ಅಧಿಕಾರಿಗಳು, ಡಯಟ್ ಪ್ರಾಂಶುಪಾಲರು ಸಂಬಂಧಿಸಿದ ಶಾಲಾ ಮುಖ್ಯ ಶಿಕ್ಷಕರ ಸಭೆ ಕರೆದು ಅಗತ್ಯ ಮಾರ್ಗದರ್ಶನ ನೀಡುವಂತೆ ತಿಳಿಸಿದ. ಪ್ರಯೋಗಾಲಯ ಅನುಷ್ಠಾನದಲ್ಲಿ ಗಮನಿಸಲಾದ ವ್ಯತ್ಯಯಗಳನ್ನು ಈ ಕೆಳಗಿನಂತೆ ಸರಿಪಡಿಸಲು ತಿಳಿಸಿದೆ. ಪಠ್ಯಕ್ರಮದ ಪ್ರಯೋಗಗಳಿಗೆ ಅನುಗುಣವಾಗಿ ಎಲ್ಲಾ ವಿದ್ಯಾರ್ಥಿಗಳು ಪ್ರಯೋಗಗಳಲ್ಲಿ ತೊಡಗಿಕೊಳ್ಳಲು ಅವಕಾಶವಾಗುವಂತೆ ಖರೀದಿಸಬೇಕಾದ ಉಪಕರಣಗಳ ಪಟ್ಟಿಯನ್ನು ಸಿದ್ಧಪಡಿಸದಿರುವುದು ಕಂಡುಬಂದಿರುತ್ತದೆ. ಆದ್ದರಿಂದ ಶಾಲಾ ಹಂತದಲ್ಲಿ 8, 9 ಮತ್ತು 10ನೇ ತರಗತಿಗಳ ವಿಜ್ಞಾನ ವಿಷಯದ ಪಠ್ಯಕ್ರಮದಲ್ಲಿನ ಪ್ರಯೋಗಗಳಿಗೆ ಹೊಂದಿಕೆಯಾಗುವ ಪ್ರಯೋಗಗಳನ್ನು…

Read More

ನವದೆಹಲಿ : ಜನವರಿ 1, 2025 ರಿಂದ ಜಾರಿಗೆ ಬರಲಿರುವ ಪಡಿತರ ಚೀಟಿ ಯೋಜನೆಯಲ್ಲಿ ಭಾರತ ಸರ್ಕಾರವು ಹಲವು ಪ್ರಮುಖ ಬದಲಾವಣೆಗಳನ್ನು ಮಾಡಿದೆ. ಈ ಹೊಸ ನಿಯಮಗಳ ಮುಖ್ಯ ಉದ್ದೇಶವೆಂದರೆ ಪಡಿತರ ವಿತರಣಾ ವ್ಯವಸ್ಥೆಯನ್ನು ಹೆಚ್ಚು ಪಾರದರ್ಶಕ, ದಕ್ಷ ಮತ್ತು ಗುರಿಯನ್ನಾಗಿ ಮಾಡುವುದು. ಈ ಬದಲಾವಣೆಗಳು ಪಡಿತರ ಪ್ರಯೋಜನಗಳು ನಿಜವಾದ ಅಗತ್ಯವಿರುವ ಜನರಿಗೆ ಮಾತ್ರ ತಲುಪುವುದನ್ನು ಖಚಿತಪಡಿಸುತ್ತದೆ ಎಂದು ಸರ್ಕಾರ ನಂಬುತ್ತದೆ. ಈ ಹೊಸ ನಿಯಮಗಳ ಪ್ರಕಾರ, ಪಡಿತರ ಚೀಟಿದಾರರು ತಮ್ಮ ಕಾರ್ಡ್‌ಗಳನ್ನು ನವೀಕರಿಸಬೇಕು ಮತ್ತು ಕೆಲವು ಹೊಸ ಷರತ್ತುಗಳನ್ನು ಪೂರೈಸಬೇಕು. ಈ ನಿಯಮಗಳನ್ನು ಪಾಲಿಸದವರ ಪಡಿತರ ಚೀಟಿಯನ್ನು ರದ್ದುಗೊಳಿಸಬಹುದು. ಆದ್ದರಿಂದ, ಈ ಹೊಸ ನಿಯಮಗಳು ಯಾವುವು ಮತ್ತು ಅವು ನಿಮಗೆ ಹೇಗೆ ಅನ್ವಯಿಸುತ್ತವೆ ಎಂಬುದನ್ನು ತಿಳಿದುಕೊಳ್ಳುವುದು ಬಹಳ ಮುಖ್ಯ. ಪಡಿತರ ಚೀಟಿಯ ಹೊಸ ನಿಯಮಗಳೇನು? ಜನವರಿ 1, 2025 ರಿಂದ ಜಾರಿಗೆ ಬರುವ ಪ್ರಮುಖ ನಿಯಮಗಳು ಈ ಕೆಳಗಿನಂತಿವೆ: 1. ಕಡ್ಡಾಯ ಇ-ಕೆವೈಸಿ ಎಲ್ಲಾ ಪಡಿತರ ಚೀಟಿದಾರರು ತಮ್ಮ ಇ-ಕೆವೈಸಿ…

Read More

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯಲ್ಲಿ ಘೋರ ಘಟನೆಯೊಂದು ನಡೆದಿದ್ದು, ನೀರು ತುಂಬಿದ ಬಕೆಟ್ ಗೆ ಬಿದ್ದು ಒಂದೂವರೆ ವರ್ಷದ ಮಗುವೊಂದು ಮೃತಪಟ್ಟಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ ಎನ್.ಆರ್. ಪುರ ತಾಲೂಕಿನ ರಾವೂರು ಗ್ರಾಮದಲ್ಲಿ ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಒಂದೂವರೆ ವರ್ಷದ ಮಗು ಸಾವನ್ನಪ್ಪಿದೆ. ಆನಂದ್- ಅನು ದಂಪತಿಯ ಪುತ್ರಿ ಪೂರ್ವಿಕಾ ಮೃತಪಟ್ಟ ಮಗು ಎನ್ನಲಾಗಿದೆ. ಡಿಸೆಂಬರ್ 19 ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮನೆಯಲ್ಲಿ ಆಟವಾಡುತ್ತಾ ಮಗು ನೀರು ತುಂಬಿದ್ದ ಬಕೆಟ್ ಗೆ ಬಿದ್ದು ಮೃತಪಟ್ಟಿದೆ ಎನ್ನಲಾಗಿದೆ. ಘಟನೆ ಸಂಬಂಧ ಎನ್ಆರ್ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

2024-25ನೇ ಸಾಲಿಗೆ ಮೆಟ್ರಿಕ್ ಪೂರ್ವ ಹಾಗೂ ನಂತರದ ವಿದ್ಯಾರ್ಥಿವೇತನ ಅಭಿಯಾನ ಕೈಗೊಳ್ಳಲಾಗಿದ್ದು,  ಎಲ್ಲಾ ಅರ್ಹ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ಇಲಾಖೆಯ ವೆಬ್ಸೈಟ್ ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಬಹುದು. 2024-25ನೇ ಸಾಲಿನಿಂದ ಕೇಂದ್ರ ಪುರಸ್ಕøತ ವಿದ್ಯಾರ್ಥಿವೇತನ ಕಾರ್ಯಕ್ರಮಗಳಿಗೆ ಆಧಾರ್ ಆಧಾರಿತ ಬಯೋಮೆಟ್ರಿಕ್ ಅಥೆಂಟಿಕೇಷನ್ ಅಂಡ್ ಇ-ಕೆವೈಸಿ ಕಡ್ಡಾಯವಾಗಿದೆ. ಈ ಸಂಬಂಧ ರಾಜ್ಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್ ಕೇಂದ್ರಗಳಲ್ಲಿ ಈ ಪ್ರಕ್ರಿಯೆಯನ್ನು ಉಚಿತವಾಗಿ ಕೈಗೊಳ್ಳಲಾಗಿದ್ದು, ಎಲ್ಲಾ ಅರ್ಹ ಫಲಾನುಭವಿಗಳು ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಹಾಗೂ ಸಂಬಂಧಿಸಿದ ಸಮಾಜ ಕಲ್ಯಾಣ ಇಲಾಖೆಗೆ ಭೇಟಿ ನೀಡಿ ಎಲ್ಲಾ ಅರ್ಹ ಫಲಾನುಭವಿಗಳು ಸಕಾಲದಲ್ಲಿ ಇ-ಕೆವೈಸಿ ನೊಂದಣಿ ಮಾಡಿಸಲು ಕೋರಿದೆ. ಚಿತ್ರದುರ್ಗ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಎಲ್ಲಾ ಸಹಾಯಕ ನಿರ್ದೇಶಕರ ಕಚೇರಿಗಳಲ್ಲಿ ವಿದ್ಯಾರ್ಥಿಗಳಿಂದ ಅರ್ಜಿ ಪಡೆಯಲು ಹಾಗೂ ಇ-ಕೆವೈಸಿ ಮಾಡಲು ಫೆಸಿಲಿಟೇಷನ್ ಕೇಂದ್ರಗಳನ್ನು ಆರಂಭಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ…

Read More

ಮಂಡ್ಯ : ಮಂಡ್ಯ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿ, ಕಾರು ಡಿಕ್ಕಿಯಾಗಿ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬೋಸೇಗೌಡನದೊಡ್ಡಿ ಗ್ರಾಮದ ಬಳಿ ಲಾರಿಗೆ ಕಾರಿ ಡಿಕ್ಕಿಯಾದ ಪರಿಣಾಮ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಬೆಂಗಳೂರು ಮೂಲದ ಪ್ರಣವ್ ಆಕಾಶ್, ಆದರ್ಶ್ ಮೃತ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗವು 2024ರ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗಳಿಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್‌ನಲಿ.. ಅರ್ಜಿ ಸಲಿ..ಸಲು ಪ್ರಾರಂಭಿಕ ದಿನಾಂಕ: 30-12-2024 ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29-01-2025 ಶುಲ್ಕ ಪಾವತಿಸಲು ಕೊನೆಯ ದಿನಾಂಕ: 31-01-2025 2) ಅರ್ಜಿ ಸಲ್ಲಿಸುವ ವಿಧಾನ:- ಇಲಾಖಾ ಪರೀಕ್ಷೆಗೆ ಆನ್‌ಲೈನ್ ಮೂಲಕ ಅರ್ಜಿ ಸಲಿ..ಸಲು ಕರ್ನಾಟಕ ಲೋಕಸೇವಾ ಆಯೋಗದ (KPSC) ವೆಬ್‌ಸೈಟ್ http://www.kpsc.kar.nic.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸುವ ವಿಧಾನಕ್ಕಾಗಿ ಅನುಬಂಧ-1 ರಲಿ.. ನಮೂದಿಸಿರುವ ಮಾಹಿತಿಯನ್ನು ಗಮನಿಸತಕ್ಕದ್ದು. 3) ಅಹರ್ತೆ a) ಈ ಕೆಳಕಂಡ ನೌಕರರು ಇಲಾಖಾ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅ) ಸರ್ಕಾರಿ ನೌಕರರು. ಆ) ಸರ್ಕಾರಿ ಸ್ವಾಮ್ಯಕ್ಕೊಳಪಟ್ಟ ನಿಗಮ/ ಮಂಡಳಿ/ ಸ್ಥಳೀಯ ಸಂಸ್ಥೆಗಳು/ ವಿಶ್ವವಿದ್ಯಾಲಯಗಳು / ಪ್ರಾಧಿಕಾರಿಗಳ ಖಾಯಂ ನೌಕರರು, b) ಗ್ರೂಪ್-‘ಡಿ’ ನೌಕರರು ಇಲಾಖಾ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.. 4) ಅಭ್ಯರ್ಥಿಗಳಿಗೆ ವಿಶೇಷ ಸೂಚನೆಗಳು: ಆ) ಇಲಾಖಾ ಪರೀಕ್ಷೆಗೆ ಅರ್ಜಿ…

Read More

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ತಾಳೇಕೆರೆ ಗ್ರಾಮದ ಬಳಿ ಸರಣಿ ಅಪಘಾತ ಸಂಭವಿಸಿದ್ದು, ಇಬ್ಬರು ಮಕ್ಕಳು ಸೇರಿದಂತೆ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ-4 ರಲ್ಲಿ ಸರಣಿ ಅಪಘಾತ ಸಂಭವಿಸಿದೆ. ಲಾರಿಗಳ ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿದಂತೆ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸರಣಿ ಅಪಘಾತ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿ.ಮೀ.ಗಟ್ಟಲೆ ಟ್ರಾಫಿಕ್ ಜಾಮ್ ಆಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ತಾಳೇಕೆರೆ ಗ್ರಾಮದ ಬಳಿ ಸರಣಿ ಅಪಘಾತ ಸಂಭವಿಸಿದ್ದು, ಇಬ್ಬರು ಮಕ್ಕಳು ಸೇರಿದಂತೆ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ-4 ರಲ್ಲಿ ಸರಣಿ ಅಪಘಾತ ಸಂಭವಿಸಿದೆ. ಲಾರಿಗಳ ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿದಂತೆ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸರಣಿ ಅಪಘಾತ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿ.ಮೀ.ಗಟ್ಟಲೆ ಟ್ರಾಫಿಕ್ ಜಾಮ್ ಆಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ಬೆಂಗಳೂರು : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಮುಖಾಂತರ ಸರ್ಕಾರದ ಮಹತ್ತರ ಖಾತರಿ ಯೋಜನೆಯಾದ ‘ಯುವನಿಧಿ’ ಯೋಜನೆ ಫಲಾನುಭವಿಗಳು ಡಿಸೆಂಬರ್ 25 ರೊಳಗೆ ತಪ್ಪದೇ ಡಿಕ್ಲರೇಶನ್ ಮಾಡುವಂತೆ ಸೂಚನೆ ನೀಡಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರವು ಪದವಿ ಹಾಗೂ ಡಿಪ್ಲೋಮಾ ಕೋರ್ಸ್‍ಗಳನ್ನು 2022-23 ಹಾಗೂ 2023-24 ನೇ ಸಾಲಿನಲ್ಲಿ ತೇರ್ಗಡೆಯಾದ ಕರ್ನಾಟಕ ರಹವಾಸಿಗಳಿಗೆ ನಿರುದ್ಯೊಗಿ ಭತ್ಯೆಯನ್ನು ನೀಡುವ ಖಾತರಿ ಯೋಜನೆಯಾಗಿದೆ. ಯಾವುದೇ ಪದವಿ, ಡಿಪ್ಲೋಮಾ, ಸ್ನಾತಕೋತ್ತರ ಪದವಿ ಉತ್ತೀರ್ಣರಾಗಿ ಸರ್ಕಾರಿ, ಖಾಸಗಿ, ಸ್ವಯಂ ಉದ್ಯೋಗ ಹೊಂದಿಲ್ಲದವರು ಮತ್ತು ಉನ್ನತ ವಿದ್ಯಾಭ್ಯಾಸ ಮುಂದುವರೆಸದೆ ಇರುವ ವಿದ್ಯಾರ್ಥಿಗಳು ಕರ್ನಾಟಕ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ http://sevasindhugs.karnataka.gov.in ಪೋರ್ಟಲ್ ಮೂಲಕ ಉಚಿತವಾಗಿ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಎಲ್ಲಾ ಪದವೀಧರರಿಗೆ, ಸ್ನಾತಕೋತ್ತರ ಪದವಿ, ಬಿಎಡ್ ಪದವೀಧರರಿಗೆ ಪ್ರತಿ ತಿಂಗಳು ರೂ.3 ಸಾವಿರ ಗಳು ಹಾಗೂ ಡಿಪ್ಲೋಮಾ ತೇರ್ಗಡೆಯಾದವರಿಗೆ ರೂ.1500 ಗಳನ್ನು ನಿರುದ್ಯೋಗ ಭತ್ಯೆಯನ್ನಾಗಿ ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ…

Read More