Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಬುಟಾಟಿಕೆ ಮತ್ತು ಪೊಳ್ಳು ಹಿಂದುತ್ವವಾದ ಪ್ರತಿಪಾದಕರಾದ ಬಿ.ಜೆ.ಪಿ ಯವರು ಧರ್ಮ ಧರ್ಮಗಳ ನಡುವೆ ದ್ವೇಷದ ಬೆಂಕಿ ಹಚ್ಚಿ, ಹಿಂದೂ ಧರ್ಮದ ಉಳಿವಿಗಾಗಿ ಯಾವುದೇ ಕಾರ್ಯ ಮಾಡದಿದ್ದರೂ, ಬರೀ ಬಾಯಿ ಮಾತಿನಲ್ಲಿ ಹಿಂದೂ ಧರ್ಮ, ದೇವಾಲಯಗಳ ಬಗ್ಗೆ ಪುಂಖಾನುಪುಂಖವಾಗಿ ಬೊಗಳೆ ಭಾಷಣ ಮಾಡುವವರ ಮುಂದೆ ಯಾವುದೇ ಸದ್ದುಗದ್ದಲವಿಲ್ಲದೆ ತಮ್ಮ ಕಾರ್ಯಕ್ರಮಗಳು ಹಾಗೂ ಯೋಜನೆಗಳ ಮೂಲಕ ಹಿಂದೂ ಧರ್ಮ ಮತ್ತು ದೇವಾಲಯಗಳ ರಕ್ಷಣೆಗೆ ಪಣ ತೊಟ್ಟಿರುವ ರಾಮಲಿಂಗಾರೆಡ್ಡಿಯವರ ಕಾರ್ಯ ಆಸ್ತಿಕ ಸಮುದಾಯದಲ್ಲಿ ಸಂತೋಷದ ಹೊನಲನ್ನು ಹರಿಸಿದೆ. ರಾಜ್ಯದ ಮುಜರಾಯಿ ದೇವಸ್ಥಾನದ ವ್ಯಾಪ್ತಿಯಲ್ಲಿ ಬರುವ ಸಾವಿರಾರು ಎಕರೆ ಜಮೀನು ಅನ್ಯರ ಪಾಲಾಗಿತ್ತು. ಕೆಲ ಸಂಸ್ಥೆಗಳು, ಟ್ರಸ್ಟ್ ಗಳು ಹಾಗೂ ಖಾಸಗಿ ವ್ಯಕ್ತಿಗಳು ಜಮೀನನ್ನು ಒತ್ತುವರಿ ಮಾಡಿಕೊಂಡಿದ್ದರು. ಇದನ್ನು ಹಿಂದಿನ ಬಿಜೆಪಿ ಸರಕಾರ ತೆರವು ಮಾಡುವ ಕಡೆ ಯಾವುದೇ ಒಲವು ತೋರಲಿಲ್ಲ. ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರ ಮುಜರಾಯಿ ಇಲಾಖೆ ಖಾತೆಯನ್ನು ವಹಿಸಿಕೊಂಡ ರಾಮಲಿಂಗಾ ರೆಡ್ಡಿ ಅವರ ಬದ್ಧತೆಯಿಂದ ಈವರೆಗೆ ರಾಜ್ಯದ ವಿವಿಧ…
ಬೆಳಗಾವಿ : ಮನೆಗೆ ನುಗ್ಗಿ ದುಷ್ಕರ್ಮಿಗಳು 9 ತಿಂಗಳ ಗರ್ಭಿಣಿ ಮಹಿಳೆಯ ಬರ್ಬರ ಹತ್ಯೆ ಮಾಡಿರವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕೂಡ ಗ್ರಾಮದಲ್ಲಿ ನಡೆದಿದೆ. ಚಿಕ್ಕೂಡ ಗ್ರಾಮದಲ್ಲಿ ಮನೆಯಲ್ಲಿ ಇದ್ದ ಗರ್ಭಿಣಿ ಮಹಿಳೆಯನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವ ಘಟನೆ ನಡೆದಿದೆ. ಮೃತ ಗರ್ಭಿಣಿ ಮಹಿಳೆಯನ್ನು ಸುವರ್ಣ ಮಾಂತಯ್ಯ ಮಠಪತಿ ಎಂದು ಗುರುತಿಸಲಾಗಿದೆ. ಮಹಿಳೆಗೆ 4 ಹೆಣ್ಣು ಮಕ್ಕಳಿದ್ದು, 5 ನೇ ಮಗುವಿನ ಗರ್ಭಿಣಿಯಾಗಿದ್ದರು. 9 ತಿಂಗಳಾಗಿದ್ದು, ಇನ್ನೊಂದು ವಾರದಲ್ಲಿ ಹೆರಿಗೆಗೆ ದಿನಾಂಕ ನೀಡಲಾಗಿತ್ತು. ಆದರೆ ದುಷ್ಕರ್ಮಿಗಳು ಮನೆಗೆ ನುಗ್ಗಿ ಹೊಟ್ಟೆಗೆ ಒದ್ದು ಹತ್ಯೆ ಮಾಡಿದ್ದಾರೆ. ಸದ್ಯ ಘಟನೆ ಸಂಬಂಧ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರು : ಬೆಂಗಳೂರಿನ ಬಾಗಲಗುಂಟೆಯಲ್ಲಿ ನೇಣು ಬಿಗಿದುಕೊಂಡು ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಬೆಂಗಳೂರಿನ ಬಾಗಲಗುಂಟೆಯ ನಿವಾಸಿ ನವೀನ್ ಪತ್ನಿ ಐಶ್ವರ್ಯ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪತಿ ನವೀನ್ ಪತ್ನಿಗೆ ವಿಷಯ ತಿಳಿಸದೇ ಧರ್ಮಸ್ಥಳಕ್ಕೆ ಟ್ರಿಪ್ ಗೆ ತೆರಳಿದ್ದ ಹಿನ್ನೆಲೆಯಲ್ಲಿ ಗಲಾಟೆಯಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ನವೀನ್ ಧರ್ಮಸ್ಥಳಕ್ಕೆ ಹೇಳದ ಹೋಗಿದ್ದಾರೆ ಎಂದು ಪತ್ನಿ ಐಶ್ವರ್ಯಾ ಗಲಾಟೆ ಮಾಡಿದ್ದಾಳೆ. ಬಳಿಕ ಮನೆಯ ರೂಮ್ ಗೆ ಹೋಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ತುಮಕೂರು : ತುಮಕೂರು ಜಿಲ್ಲೆಯ ತಿಪಟೂರಿನ ಹೊನ್ನವಳ್ಳಿಯಲ್ಲಿ ನಟ ಪುನೀತ್ ರಾಜ್ಕುಮಾರ್ ಅವರ ಪ್ರತಿಮೆಯನ್ನು ಪೊಲೀಸರು ತೆರವುಗೊಳಿಸಿರುವ ಘಟನೆ ನಡೆದಿದ್ದು, ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ಅವರ ಪ್ರತಿಮೆಯನ್ನು ಹೊನ್ನಾವಳ್ಳಿ ಗ್ರಾಮದಲ್ಲಿ ಗುರುವಾರ ರಾತ್ರಿ ಪ್ರತಿಷ್ಠಾಪಿಸಲಾಗಿತ್ತು. ಆದರೆ ಶುಕ್ರವಾರ ಬೆಳಗಿನ ಜಾವ ಪೊಲೀಸರು ತೆರವುಗೊಳಿಸಿದ್ದಾರೆ. ಪುನೀತ್ ರಾಜ್ ಕುಮಾರ್ ಪ್ರತಿಮೆ ತೆರವು ಪ್ರಕರಣದಿಂದ ಗ್ರಾಮದಲ್ಲಿ ಕೆಲ ಕಾಲ ಬಿಗುವಿನ ವಾತಾವರಣ ಉಂಟಾಗಿತ್ತು. ಡಿಸೆಂಬರ್ 18 ರಂದು ಪುನೀತ್ ರಾಜ್ ಕುಮಾರ್ ಅವರ ಪುತ್ಥಳಿ ಪ್ರತಿಷ್ಠಾಪನೆಗೆ ಅನುಮತಿ ಕೋರಿ ಕನ್ನಡ ರಕ್ಷಣಾ ವೇದಿಕೆ ಹಾಗೂ ಅಪ್ಪು ಸೇನೆ ವತಿಯಿಂದ ಗ್ರಾಮ ಪಂಚಾಯಿತಿಗೆ ಮನವಿ ಸಲ್ಲಿಸಲಾಗಿತ್ತು. ಅನುಮತಿ ಸಿಗುವ ಮೊದಲೇ ಪುತ್ಥಳಿ ಅನಾವರಣಗೊಳಿಸಲಾಗಿತ್ತು. ಇದೀಗ ಪೊಲೀಸರು ಪ್ರತಿಮೆಯನ್ನು ತೆರವುಗೊಳಿಸಿದ್ದಾರೆ.
ನವದೆಹಲಿ :ಭಾರತ ಕೇಂದ್ರ ಸರ್ಕಾರವು ದೇಶದ ಆರ್ಥಿಕವಾಗಿ ದುರ್ಬಲ ಜನರಿಗಾಗಿ ವಿವಿಧ ರೀತಿಯ ಯೋಜನೆಗಳನ್ನು ನಡೆಸುತ್ತಿದೆ, ಈ ಜನರ ಜೀವನವನ್ನು ಉನ್ನತೀಕರಿಸುವುದು ಇದರ ಉದ್ದೇಶವಾಗಿದೆ, ಅಂತಹ ಒಂದು ಯೋಜನೆ ಉಜ್ವಲ ಯೋಜನೆಯಾಗಿದ್ದು, ಇದರ ಅಡಿಯಲ್ಲಿ ಮೋದಿ ಸರ್ಕಾರವು ದೇಶದ ಮಹಿಳೆಯರಿಗೆ ಉಚಿತ ಅನಿಲ ಮತ್ತು ಸಿಲಿಂಡರ್ಗಳನ್ನು ಒದಗಿಸುತ್ತದೆ. ಸರ್ಕಾರವು ಉಜ್ವಲ ಯೋಜನೆ 2.0 ಅನ್ನು ತಂದಿದೆ, ಅದರ ನೋಂದಣಿ ಪ್ರಾರಂಭವಾಗಿದೆ, ಇದರ ಅಡಿಯಲ್ಲಿ ಅರ್ಹ ಕುಟುಂಬಗಳಿಗೆ ಉಚಿತ ದೇಶೀಯ ಅನಿಲ ಸಿಲಿಂಡರ್ಗಳು ಮತ್ತು ಒಲೆಗಳನ್ನು ನೀಡಲಾಗುವುದು. ಹೊಸದಾಗಿ ರೂಪುಗೊಂಡ ಕುಟುಂಬಗಳು: ಈ ಯೋಜನೆಯು ಹೊಸದಾಗಿ ಮದುವೆಯಾದ ಕುಟುಂಬಗಳಿಗೆ ಮತ್ತು ಹೊಸದಾಗಿ ಸೇರಿದ ಕುಟುಂಬಗಳಿಗೆ ವಿಶೇಷವಾಗಿ ಪ್ರಯೋಜನಕಾರಿಯಾಗಿದೆ, ಈ ಕುಟುಂಬಗಳು ಈಗ ಉಜ್ವಲ ಯೋಜನೆ 2.0 ಅಡಿಯಲ್ಲಿ ಉಚಿತ ಗ್ಯಾಸ್ ಸಿಲಿಂಡರ್ ಮತ್ತು ಒಲೆಗಳನ್ನು ಪಡೆಯಲು ನೋಂದಾಯಿಸಿಕೊಳ್ಳಬಹುದು. ಒಂದು ಬಾರಿಯ ಪ್ರಯೋಜನ: ಉಜ್ವಲ ಯೋಜನೆಯ ಲಾಭವನ್ನು ಪ್ರತಿ ಕುಟುಂಬಕ್ಕೆ ಒಮ್ಮೆ ಮಾತ್ರ ಪಡೆಯಬಹುದು. ನಿಮ್ಮ ಕುಟುಂಬದ ಯಾವುದೇ ಸದಸ್ಯರು ಈ ಹಿಂದೆ ಈ…
ಬೆಂಗಳೂರು : ಎಟಿಎಂಗಳಿಂದ ಹಣ ತೆಗೆಯುವಾಗ ಹರಿದ ನೋಟುಗಳು ಬಂದ್ರೆ ಗ್ರಾಹಕರು ಟೆನ್ಷನ್ ಆಗುತ್ತಾರೆ. ಹರಿದ ನೋಟುಗಳು ಅಮಾನ್ಯವಾಗಿದ್ದು, ಅವುಗಳನ್ನ ಬದಲಾಯಿಸಿಕೊಳ್ಳುವುದು ಹೇಗೆ.? ಎಂಬ ಚಿಂತೆ ಅವ್ರನ್ನ ಕಾಡುತ್ತೆ. ಇಷ್ಟಕ್ಕೂ ನಕಲಿ ನೋಟು ಮತ್ತು ಹರಿದ ನೋಟುಗಳಿಗೆ ಪರ್ಯಾಯವೇನು? ನೀವು ಕೂಡ ಇಂತಹ ಪರಿಸ್ಥಿತಿ ಅನುಭವಿಸಿದ್ರೆ, ಸುಲಭವಾಗಿ ಅವುಗಳನ್ನು ಬದಲಾಯಿಸಿಕೊಳ್ಳಬಹುದು. ಇಂದು ಸಹ ನಗದು ನೋಟುಗಳ ಅಗತ್ಯವು ಇನ್ನೂ ಗಮನಾರ್ಹವಾಗಿದೆ, ವಿಶೇಷವಾಗಿ ಮಾರುಕಟ್ಟೆ ಖರೀದಿಗಳು ಮತ್ತು ವಿವಿಧ ಸೇವೆಗಳಿಗೆ ಪಾವತಿ. ಅನೇಕ ಬಾರಿ, ಎಟಿಎಂನಿಂದ ಹಣವನ್ನು ಹಿಂಪಡೆಯುವಾಗ, ಕೆಲವು ಹರಿದ ನೋಟುಗಳು ಸಹ ಹೊರಬರುತ್ತವೆ, ಅದನ್ನು ಸ್ವೀಕರಿಸಲು ಜನರು ಹಿಂಜರಿಯುತ್ತಾರೆ. ನೀವು ಎಟಿಎಂನಿಂದ ಹರಿದ ನೋಟುಗಳನ್ನು ಪಡೆದಿದ್ದರೆ ಚಿಂತಿಸಬೇಡಿ ಏಕೆಂದರೆ ನೀವು ಬ್ಯಾಂಕ್ಗೆ ಹೋಗಿ ಅವುಗಳನ್ನು ಸುಲಭವಾಗಿ ವಿನಿಮಯ ಮಾಡಿಕೊಳ್ಳಬಹುದು. ಬ್ಯಾಂಕ್ನಲ್ಲಿ ನೋಟುಗಳನ್ನು ಬದಲಾಯಿಸುವ ಪ್ರಕ್ರಿಯೆ ನೀವು ಎಟಿಎಂನಿಂದ ಹರಿದ ನೋಟುಗಳನ್ನು ತೆಗೆದುಕೊಂಡಾಗ ಮತ್ತು ಅವುಗಳನ್ನು ಬ್ಯಾಂಕ್ನಲ್ಲಿ ಬದಲಾಯಿಸಲು ನಿರ್ಧರಿಸಿದಾಗ, ಅನುಸರಿಸಬೇಕಾದ ಕೆಲವು ಸರಳ ಹಂತಗಳಿವೆ. ಬ್ಯಾಂಕ್ ಎಟಿಎಂನಿಂದ ತೆಗೆದ ಹರಿದ…
ಜೈಪುರ : ಗ್ಯಾಸ್ ಟ್ಯಾಂಕರ್ ಒಂದು ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಸ್ಪೋಟಗೊಂಡ ಪರಿಣಾಮ ಭೀಕರ ಅವಘಡ ಸಂಭವಿಸಿ 16 ಮಂದಿ ಸಾವನ್ನಪ್ಪಿದ್ದು, 35 ಜನರು ಗಾಯಗೊಂಡಿರುವ ಘಟನೆ ರಾಜಸ್ಥಾನದ ಜೈಪುರ-ಅಜ್ಮೇರ್ ಹೆದ್ದಾರಿಯ ಭಂಕ್ರೋಟಾ ಎಂಬಲ್ಲಿ ನಡೆದಿದೆ. ಜೈಪುರದಲ್ಲಿ ಸಿಎನ್’ಜಿ ಗ್ಯಾಸ್ ತುಂಬಿದ್ದ ಟ್ಯಾಂಕರ್ ಸ್ಪೋಟಗೊಂಡು 16 ಮಂದಿ ಸಜೀವ ದಹನರಾಗಿದ್ದು, ಘಟನೆಯ ಭಯಾನಕ ವಿಡಿಯೋ ವೈರಲ್ ಆಗಿದೆ. https://twitter.com/Zinda_Avdhesh/status/1869935607788528122 ರಾಜಸ್ಥಾನದ ಜೈಪುರದ ಅಜ್ಮೀರ್ ರಸ್ತೆಯ ಪೆಟ್ರೋಲ್ ಪಂಪ್ ಬಳಿ ಶುಕ್ರವಾರ ಬೆಳಿಗ್ಗೆ ಎಲ್ಪಿಜಿ (ದ್ರವೀಕೃತ ಪೆಟ್ರೋಲಿಯಂ ಅನಿಲ) ಮತ್ತು ಸಿಎನ್ಜಿ (CNG) ಟ್ರಕ್ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 16 ಜನರು ಸಾವನ್ನಪ್ಪಿದ್ದಾರೆ ಮತ್ತು 35 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮಾಹಿತಿಯ ಪ್ರಕಾರ, ಟ್ರಕ್ ವಾಹನಗಳಿಗೆ ಡಿಕ್ಕಿ ಹೊಡೆದ ನಂತರ ಹಲವಾರು ವಾಹನಗಳು ಬೆಂಕಿಗೆ ಆಹುತಿಯಾಗಿದೆ. .ಘಟನೆಯಲ್ಲಿ 30 ಕ್ಕೂ ಹೆಚ್ಚು ವಾಹನಗಳು ಸುಟ್ಟು ಭಸ್ಮವಾಗಿದೆ. ಘಟನೆಯ ಭಯಾನಕ ವಿಡಿಯೋ ವೈರಲ್ ಆಗಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಚಿನ್ನ ಖರೀದಿಸಿ 2 ಕೋಟಿ ರೂ.ಗೆ ಹೆಚ್ಚು ವಂಚನೆ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್ ಆಪ್ತೆಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನಲ್ಲಿ ವರ್ತೂರು ಪ್ರಕಾಶ್ ಸೇರಿದಂತೆ ಹಲವು ಗಣ್ಯರ ಹೆಸರು ಬಳಸಿಕೊಂಡು ಚಿನ್ನ ಖರೀದಿಸಿ ಕೋಟ್ಯಾಂತರ ರೂ. ವಂಚಿಸಿದ ಆರೋಪದ ಹಿನ್ನೆಲೆಯಲ್ಲಿ ಮಾಜಿ ಸಚಿವ ವರ್ತೂರು ಪ್ರಕಾಶ್ ಆಪ್ತೆಯನ್ನು ಪುಲಕೇಶಿ ನಗರದ ಉಪ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಶ್ವೇತಾಗೌಡ ನವರತ್ನ ಜ್ಯುವೆಲರ್ಸ್ ಮಳಿಗೆಯಲ್ಲಿ ಖರೀದಿಸಿದ್ದ 2.945 ಕೆಜಿ ಚಿನ್ನವನ್ನು ನಗರದ ಡಾಲರ್ಸ್ ಕಾಲೋನಿಯಲ್ಲಿರುವ ಮಾಜಿ ಸಚಿವ ಹಾಗೂ ಕೋಲಾರ ಜಿಲ್ಲಾ ಬಿಜೆಪಿ ಮುಖಂಡ ವರ್ತೂರು ಪ್ರಕಾಶ್ ಮನೆಗೆ, ಅಂಗಡಿ ಸಿಬ್ಬಂದಿ ತಲುಪಿಸಿದ್ದರು. ಶ್ವೇತಾ ಮಾಜಿ ಸಚಿವರ ಮನೆ ವಿಳಾಸವನ್ನೇ ಕೊಟ್ಟಿದ್ದಳು. ಸದ್ಯ ವರ್ತೂರು ಪ್ರಕಾಶ್ ಗೂ ಪೊಲೀಸರು ನೋಟಿಸ್ ನೀಡಿದ್ದಾರೆ ಎನ್ನಲಾಗಿದೆ. ಆರೋಪಿಯಿಂದ ಚಿನ್ನ, ಕಾರು ಸೇರಿದಂತೆ ಇತರ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.
ನವದೆಹಲಿ:ಅಕ್ಟೋಬರ್ನಲ್ಲಿ ಉದ್ಯೋಗಿಗಳ ರಾಜ್ಯ ವಿಮಾ ನಿಗಮದ (ಇಎಸ್ಐಸಿ) ಚಂದಾದಾರರ ಸಂಖ್ಯೆ ಶೇಕಡಾ 3 ರಷ್ಟು ಅಂದರೆ 17.80 ಲಕ್ಷ ಹೆಚ್ಚಾಗಿದೆ. ಬುಧವಾರ ಬಿಡುಗಡೆ ಮಾಡಿರುವ ವೇತನದಾರರ ಅಂಕಿ ಅಂಶದಲ್ಲಿ ಈ ಮಾಹಿತಿ ನೀಡಲಾಗಿದೆ. ಅಕ್ಟೋಬರ್ 2024 ರ ವೇಳೆಗೆ 21,588 ಹೊಸ ಸಂಸ್ಥೆಗಳನ್ನು ಇಎಸ್ಐ ಯೋಜನೆಯ ಸಾಮಾಜಿಕ ಭದ್ರತಾ ವ್ಯಾಪ್ತಿಯಲ್ಲಿ ತರಲಾಗಿದೆ ಎಂದು ಕಾರ್ಮಿಕ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ESI ಯೋಜನೆಯನ್ನು ನಿರ್ವಹಿಸುವ ಜವಾಬ್ದಾರಿಯು ನೌಕರರ ರಾಜ್ಯ ವಿಮಾ ನಿಗಮದ ಮೇಲಿದೆ. ಈ ಯೋಜನೆಯಡಿ ನೌಕರರು ಅನೇಕ ಪ್ರಯೋಜನಗಳನ್ನು ಪಡೆಯುತ್ತಾರೆ. ನೌಕರರಿಗೆ ಸಾಮಾಜಿಕ ಮತ್ತು ಆರ್ಥಿಕ ಭದ್ರತೆ ಒದಗಿಸಲು ಇಎಸ್ಐ ಯೋಜನೆ ರೂಪಿಸಲಾಗಿದೆ. ಈ ಯೋಜನೆಯನ್ನು ನೌಕರರ ರಾಜ್ಯ ವಿಮಾ ನಿಗಮವು ನಿರ್ವಹಿಸುತ್ತದೆ. ಇಎಸ್ಐ ಯೋಜನೆಯು ಕಡಿಮೆ ಆದಾಯ ಹೊಂದಿರುವ ಉದ್ಯೋಗಿಗಳಿಗಾಗಿ ನಡೆಸಲ್ಪಡುತ್ತದೆ. ಖಾಸಗಿ ಕಂಪನಿಗಳು, ಕಾರ್ಖಾನೆಗಳು ಮತ್ತು ಕಾರ್ಖಾನೆಗಳಲ್ಲಿ ಕೆಲಸ ಮಾಡುವ ನೌಕರರು ಈ ಯೋಜನೆಯ ಪ್ರಯೋಜನವನ್ನು ಪಡೆಯುತ್ತಾರೆ. ಇಎಸ್ಐ ಯೋಜನೆಗೆ ಯಾರು ಅರ್ಜಿ ಸಲ್ಲಿಸಬಹುದು? ಜನವರಿ 1, 2017…
ಚಿಕ್ಕಮಗಳೂರು : ಬಿಜೆಪಿ ಎಂಎಲ್ ಸಿ ಸಿಟಿ ರವಿ ಬಂಧನ ಖಂಡಿಸಿ ಚಿಕ್ಕಮಗಳೂರಿನಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಹೀಗಾಗಿ ನೂರಾರು ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಅನುಮತಿ ಇಲ್ಲದೇ ಚಿಕ್ಕಮಗಳೂರಿನಲ್ಲಿ ಅಂಗಡಿಗಳನ್ನು ಬಂದ್ ಮಾಡಿದ್ದಾರೆ. ಜೊತೆಗೆ ಸಾರ್ವಜನಿಕರಿಗೆ ತೊಂದರೆ ಕೊಟ್ಟಿದ್ದಾರೆ ಎಂದು ಆರೋಪಿಸಿ ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜ್ ಶೆಟ್ಟಿ, ಯುವಮೋರ್ಚಾ ಜಿಲ್ಲಾಧ್ಯಕ್ಷ ಸೇರಿದಂತೆ ನೂರಾರು ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಚಿಕ್ಕಮಗಳೂರಿನ ಬಸವನಹಳ್ಳಿ ಠಾಣೆಯಲ್ಲಿ 5 ದೂರುಗಳು ದಾಖಲಾಗಿದ್ದರೆ, ನಗರ ಠಾಣೆಯಲ್ಲಿ 3 ಪ್ರಕರಣಗಳು ದಾಖಲಾಗಿದೆ ಎಂದು ವರದಿಯಾಗಿದೆ.













