Author: kannadanewsnow57

ಬೆಳಗಾವಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಪರಿಷತ್ ನಲ್ಲಿ ಸಿಟಿ ರವಿ ಅಶ್ಲೀಲ ಪದ ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಇದು ಕ್ರಿಮಿನಲ್ ಸ್ವರೂಪದ ಅಪರಾಧವಾಗಿದೆ ಎಂದು ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಸಭ್ಯ ಪದ ಬಳಕೆ ಮಾಡಿದ್ದು, ಇದು ಕ್ರಿಮಿನಲ್ ಸ್ವರೂಪದ ಅಪರಾಧವಾಗಿದೆ. ಈ ಸಂಬಂಧ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸಭಾಪತಿಗಳಿಗೆ ಮತ್ತು ಪೊಲೀಸರಿಗೆ ದೂರು ನೀಡಿದ್ದಾರೆ. ಕಾನೂನಾತ್ಮಕವಾಗಿ ಏನು ಕ್ರಮ ಕೈಗೊಳ್ಳುತ್ತಾರೆ ನೋಡೋಣ ಎಂದಿದ್ದಾರೆ. ಸಿ.ಟಿ.ರವಿಯವರು ಹತ್ತಕ್ಕೂ ಹೆಚ್ಚು ಬಾರಿ ಅತ್ಯಂತ ಕೀಳು ಪದದಿಂದ ನಿಂದನೆ ಮಾಡಿದ್ದಾರೆ ಎಂದು ಅಲ್ಲಿ ಸುತ್ತಲೂ ಇದ್ದ ನಮ್ಮ ಪರಿಷತ್ ಸದಸ್ಯರು ಹೇಳುತ್ತಿದ್ದಾರೆ. ರವಿಯವರ ಮಾತಿನಿಂದ ನೊಂದು ಲಕ್ಷ್ಮೀ ಹೆಬ್ಬಾಳ್ಕರ್ ಅವರು ದೂರು ದಾಖಲಿಸಿದ್ದಾರೆ. ಇದು ಲೈಂಗಿಕ ದೌರ್ಜನ್ಯದಂತಹ ಪ್ರಕರಣವಾಗಿರುವುದರಿಂದ ಪೊಲೀಸರು ಕ್ರಿಮಿನಲ್ ಪ್ರೊಸಿಜರ್ ರೀತ್ಯಾ ಕ್ರಮ ವಹಿಸುತ್ತಾರೆ…

Read More

ನವದೆಹಲಿ:ಅಕ್ಟೋಬರ್‌ನಲ್ಲಿ ಉದ್ಯೋಗಿಗಳ ರಾಜ್ಯ ವಿಮಾ ನಿಗಮದ (ಇಎಸ್‌ಐಸಿ) ಚಂದಾದಾರರ ಸಂಖ್ಯೆ ಶೇಕಡಾ 3 ರಷ್ಟು ಅಂದರೆ 17.80 ಲಕ್ಷ ಹೆಚ್ಚಾಗಿದೆ. ಬುಧವಾರ ಬಿಡುಗಡೆ ಮಾಡಿರುವ ವೇತನದಾರರ ಅಂಕಿ ಅಂಶದಲ್ಲಿ ಈ ಮಾಹಿತಿ ನೀಡಲಾಗಿದೆ. ಅಕ್ಟೋಬರ್ 2024 ರ ವೇಳೆಗೆ 21,588 ಹೊಸ ಸಂಸ್ಥೆಗಳನ್ನು ಇಎಸ್‌ಐ ಯೋಜನೆಯ ಸಾಮಾಜಿಕ ಭದ್ರತಾ ವ್ಯಾಪ್ತಿಯಲ್ಲಿ ತರಲಾಗಿದೆ ಎಂದು ಕಾರ್ಮಿಕ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ESI ಯೋಜನೆಯನ್ನು ನಿರ್ವಹಿಸುವ ಜವಾಬ್ದಾರಿಯು ನೌಕರರ ರಾಜ್ಯ ವಿಮಾ ನಿಗಮದ ಮೇಲಿದೆ. ಈ ಯೋಜನೆಯಡಿ ನೌಕರರು ಅನೇಕ ಪ್ರಯೋಜನಗಳನ್ನು ಪಡೆಯುತ್ತಾರೆ. ನೌಕರರಿಗೆ ಸಾಮಾಜಿಕ ಮತ್ತು ಆರ್ಥಿಕ ಭದ್ರತೆ ಒದಗಿಸಲು ಇಎಸ್‌ಐ ಯೋಜನೆ ರೂಪಿಸಲಾಗಿದೆ. ಈ ಯೋಜನೆಯನ್ನು ನೌಕರರ ರಾಜ್ಯ ವಿಮಾ ನಿಗಮವು ನಿರ್ವಹಿಸುತ್ತದೆ. ಇಎಸ್‌ಐ ಯೋಜನೆಯು ಕಡಿಮೆ ಆದಾಯ ಹೊಂದಿರುವ ಉದ್ಯೋಗಿಗಳಿಗಾಗಿ ನಡೆಸಲ್ಪಡುತ್ತದೆ. ಖಾಸಗಿ ಕಂಪನಿಗಳು, ಕಾರ್ಖಾನೆಗಳು ಮತ್ತು ಕಾರ್ಖಾನೆಗಳಲ್ಲಿ ಕೆಲಸ ಮಾಡುವ ನೌಕರರು ಈ ಯೋಜನೆಯ ಪ್ರಯೋಜನವನ್ನು ಪಡೆಯುತ್ತಾರೆ. ಇಎಸ್‌ಐ ಯೋಜನೆಗೆ ಯಾರು ಅರ್ಜಿ ಸಲ್ಲಿಸಬಹುದು? ಜನವರಿ 1, 2017…

Read More

ಬೆಳಗಾವಿ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕುರಿತು ಅವಾಚ್ಯ ಪದ ಬಳಸಿದ ಹಿನ್ನೆಲೆಯಲ್ಲಿ ಅರೆಸ್ಟ್ ಆಗಿರುವ ಬಿಜೆಪಿ ಎಂ.ಎಲ್.ಸಿ ಸಿ.ಟಿ. ರವಿ ಅವರನ್ನು ಬೆಳಗಾವಿ ಕೋರ್ಟ್ ಗೆ ಪೊಲೀಸರು ಕರೆದುಕೊಂಡು ಬಂದಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಅವಾಚ್ಯ ಪದ ಬಳಕೆ ಮಾಡಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಹಿರೇಬಾಗೇವಾಡಿ ಠಾಣೆಯಲ್ಲಿ BNS ಕಾಯ್ದೆ 75 ಮತ್ತು 79ರ ಅಡಿ ಕಾಯ್ದೆ, ಲೈಂಗಿಕ ಕಿರುಕುಳ, ಮಹಿಳಾ ಇಚ್ಛೆ ವಿರುದ್ಧ, ಅಶ್ಲೀಲತೆ ತೋರುವುದು, ಲೈಂಗಿಕ ಬಣ್ಣದ ಬಗ್ಗೆ ಟೀಕೆ ಹಾಗೂ ಮಹಿಳೆಯ ನಮ್ರತೆ, ಅವಮಾನಿಸುವ ಉದ್ದೇಶದಿಂದ ಸನ್ನೆ ಪದ ಅಥವಾ ಕ್ರಿಯೆ ಸೆಕ್ಷನ್ 75 ಲೈಂಗಿಕ ಕಿರುಕುಳ ನೀಡಿದ ಆರೋಪ ಸೆಕ್ಷನ್ 79 ಅವಮಾನಿಸುವ ಉದ್ದೇಶದಿಂದ ಸನ್ನೆ ಪದ ಕ್ರಿಯೆ ಸೇರಿದಂತೆ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಸಿ ಟಿ ರವಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇದೀಗ ಸಿಟಿ ರವಿ ಅವರನ್ನು ಹಿರಿಯ ಬಾಗೇವಾಡಿ ಪೊಲೀಸರು ವಶಕ್ಕೆ ಪಡೆದುಕೊಂಡು ಅರೆಸ್ಟ್ ಮಾಡಿದ್ದು,ಬೆಳಗಾವಿಯ ಜೆಎಂಎಫ್ ಸಿ ಕೋರ್ಟ್…

Read More

ಬೆಂಗಳೂರು : ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದು, ಬೆಂಗಳೂರಿನಾದ್ಯಂತ 45 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಲೋಕಾಯುಕ್ತ ಮುಖ್ಯ ನ್ಯಾಯಮೂರ್ತಿ ಬಿ.ಎಸ್ ಪಾಟೀಲ್ , ಉಪ ಲೋಕಾಯುಕ್ತ ಕೆ,ಎನ್ ಫಣೀಂದ್ರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಒಟ್ಟು 45 ತಂಡಗಳು ಬೆಸ್ಕಾಂ ಹಾಗೂ ಜಲಮಂಡಳಿ ಕಚೇರಿ ಮೇಲೆ ದಾಳಿ ನಡೆಸಿದೆ. ಬೆಸ್ಕಾಂ ನಲ್ಲಿ ಹಾಜರಾತಿ ಬುಕ್ ಸೇರಿ ಹಲವು ದಾಖಲೆಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆ ಲೋಕಾಯುಕ್ತ ತಂಡ ಬೆಂಗಳೂರಿನಾದ್ಯಂತ 45 ಕಡೆ ದಾಳಿ ನಡೆಸಿದೆ ಎನ್ನಲಾಗಿದ್ದು, ಸದ್ಯ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

Read More

ಬೆಳಗಾವಿ : ಬಿಜೆಪಿ ಎಂಎಲ್ ಸಿ ಸಿ.ಟಿ. ರವಿ ಅವರು ಹೇಳಿದ ಆ ಪದ ನನ್ನ ಬಾಯಿಯಿಂದ ಹೇಳಲು ಕಷ್ಟವಾಗುತ್ತಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕಣ್ಣೀರಿಟ್ಟಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿ.ಟಿ. ರವಿ ಅವರ ಹೇಳಿದ ಕೆಟ್ಟ ಪದವನ್ನು ನನ್ನ ಬಾಯಿಯಿಂದ ಹೇಳಲು ಕಷ್ಟವಾಗುತ್ತಿದೆ. ಹೀಗಾಗಿ ಪರಿಷತ್ ಹೋಗಿ ನಾನು ಕುಳಿದುಕೊಂಡೆ. ಸಿ.ಟಿ. ರವಿ ಅವರು ರಾಹುಲ್ ಗಾಂಧಿ ಡ್ರಗ್ ಅಡಿಕ್ಟ್ ಅಂತ ಹೇಳುತ್ತಿದ್ರು. ಆಗ ನಾನು ನೀವು ಅಪಘಾತದಲ್ಲಿ ಇಬ್ಬರನ್ನು ಕೊಂದಿದ್ದೀರಿ ಹಾಗಾದ್ರೆ ನೀವು ಕೊಲೆಗಾರರಾ? ಅಂತ ಕೇಳಿದೆ. ಅಷ್ಟೇ ಅವರು ಆ ಕೆಟ್ಟ ಪದ ಬಳಕೆ ಮಾಡಿದ್ರೂ ಅಂತ ಕಣ್ಣೀರಿಟ್ಟಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಅವಾಚ್ಯ ಪದ ಬಳಕೆ ಮಾಡಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಹಿರೇಬಾಗೇವಾಡಿ ಠಾಣೆಯಲ್ಲಿ BNS ಕಾಯ್ದೆ 75 ಮತ್ತು 79ರ ಅಡಿ ಕಾಯ್ದೆ, ಲೈಂಗಿಕ ಕಿರುಕುಳ, ಮಹಿಳಾ ಇಚ್ಛೆ ವಿರುದ್ಧ, ಅಶ್ಲೀಲತೆ ತೋರುವುದು, ಲೈಂಗಿಕ ಬಣ್ಣದ ಬಗ್ಗೆ ಟೀಕೆ…

Read More

ಬೆಳಗಾವಿ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕುರಿತು ಅವಾಚ್ಯ ಪದ ಬಳಸಿದ ಹಿನ್ನೆಲೆಯಲ್ಲಿ ಅರೆಸ್ಟ್ ಆಗಿರುವ ಬಿಜೆಪಿ ಎಂ.ಎಲ್.ಸಿ ಸಿ.ಟಿ. ರವಿ ಅವರನ್ನು ಬೆಳಗಾವಿ ಕೋರ್ಟ್ ಗೆ ಪೊಲೀಸರು ಕರೆದುಕೊಂಡು ಬಂದಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಅವಾಚ್ಯ ಪದ ಬಳಕೆ ಮಾಡಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಹಿರೇಬಾಗೇವಾಡಿ ಠಾಣೆಯಲ್ಲಿ BNS ಕಾಯ್ದೆ 75 ಮತ್ತು 79ರ ಅಡಿ ಕಾಯ್ದೆ, ಲೈಂಗಿಕ ಕಿರುಕುಳ, ಮಹಿಳಾ ಇಚ್ಛೆ ವಿರುದ್ಧ, ಅಶ್ಲೀಲತೆ ತೋರುವುದು, ಲೈಂಗಿಕ ಬಣ್ಣದ ಬಗ್ಗೆ ಟೀಕೆ ಹಾಗೂ ಮಹಿಳೆಯ ನಮ್ರತೆ, ಅವಮಾನಿಸುವ ಉದ್ದೇಶದಿಂದ ಸನ್ನೆ ಪದ ಅಥವಾ ಕ್ರಿಯೆ ಸೆಕ್ಷನ್ 75 ಲೈಂಗಿಕ ಕಿರುಕುಳ ನೀಡಿದ ಆರೋಪ ಸೆಕ್ಷನ್ 79 ಅವಮಾನಿಸುವ ಉದ್ದೇಶದಿಂದ ಸನ್ನೆ ಪದ ಕ್ರಿಯೆ ಸೇರಿದಂತೆ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಸಿ ಟಿ ರವಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇದೀಗ ಸಿಟಿ ರವಿ ಅವರನ್ನು ಹಿರಿಯ ಬಾಗೇವಾಡಿ ಪೊಲೀಸರು ವಶಕ್ಕೆ ಪಡೆದುಕೊಂಡು ಅರೆಸ್ಟ್ ಮಾಡಿದ್ದು,ಬೆಳಗಾವಿಯ ಜೆಎಂಎಫ್ ಸಿ ಕೋರ್ಟ್…

Read More

ಬೆಳಗಾವಿ: ರಾಜ್ಯ ಸರ್ಕಾರವು ಅತಿಥಿ ಉಪನ್ಯಾಸಕರಿಗೆ ಸಿಹಿಸುದ್ದಿ ನೀಡಿದ್ದು, ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರ ಗೌರವಧನ ಹೆಚ್ಚಳಕ್ಕೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಬಿಜೆಪಿಯ ಸಿ.ಸಿ. ಪಾಟೀಲ್ ಪರವಾಗಿ ಸುನಿಲ್ ಕುಮಾರ್ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಸಚಿವ ಮಧು ಬಂಗಾರಪ್ಪ ಅವರು, ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರ ಗೌರವಧನ ಹೆಚ್ಚಳಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಬೇಡಿಕೆ ಈಡೇರಿಸಲು ಹಣಕಾಸು ಇಲಾಖೆ ಒಪ್ಪಿಗೆ ನೀಡಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ನಡೆಸಿ ಗೌರವಧನ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಪ್ರಶ್ನೋತ್ತರ ಕಲಾಪದಲ್ಲಿ ಸುನಿಲ್ ಕುಮಾರ್ ವಿಷಯ ಪ್ರಸ್ತಾಪಿಸಿ, ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಮಾಸಿಕ 12 ಸಾವಿರ ರೂಪಾಯಿ ಗೌರವಧನ ನಿಗದಿಪಡಿಸಿದದ್ದು, ಕನಿಷ್ಠ ವೇತನಕ್ಕಿಂತಲೂ ಕಡಿಮೆ ಇದೆ. ಎಂದರು ಇದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ ಮಧು ಬಂಗಾರಪ್ಪ, ಹಣಕಾಸು ಇಲಾಖೆ ಅತಿಥಿ ಉಪನ್ಯಾಸಕರ ಗೌರವ…

Read More

ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯ ಸರ್ಕಾರಿ ನೌಕರರ ಕುಟುಂಬ ನಿಯಂತ್ರಣ ಭತ್ಯೆ/ವಿಶೇಷ ವೇತನ ಬಡ್ತಿ (SFN) ಮಂಜೂರು ಮಾಡಿದ್ದು, ಅರ್ಜಿ ಸಲ್ಲಿಸಲು ಸರ್ಕಾರಿ ನೌಕರರು ಈ ದಾಖಲೆಗಳನ್ನು ಹೊಂದಿರುವುದು ಕಡ್ಡಾಯವಾಗಿದೆ. ಕುಟುಂಬ ನಿಯಂತ್ರಣ ಭತ್ಯೆ/ವಿಶೇಷ ವೇತನ ಬಡ್ತಿಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ 1. ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆ ಪ್ರಮಾಣ ಪತ್ರ (STERILIZATION CERTIFICATE) 2. ಮುಚ್ಚಳಿಕೆ ಪ್ರಮಾಣ ಪತ್ರ : ಒಂದು/ಎರಡು ಮಕ್ಕಳಿದ್ದಾರೆಂದು ಹಾಗೂ ಪತಿ/ಪತ್ನಿಯು ‘ಕುಟುಂಬ ನಿಯಂತ್ರಣ ಭತ್ಯೆ’ ಪಡೆದಿಲ್ಲವೆಂದು ಛಾಪಾ ಕಾಗದದಲ್ಲಿ ಬರೆದುಕೊಟ್ಟಿರುವ ಮುಚ್ಚಳಿಕೆ ಪತ್ರ. 3. ಮಾಹೆಯ ವೇತನ ಪ್ರಮಾಣ ಪತ್ರ 4. ಪತಿ/ಪತ್ನಿಯ ಮಾಹೆಯ ವೇತನ ಪ್ರಮಾಣ ಪತ್ರ 5.ಅರ್ಜಿದಾರರ SSLC ಅಂಕಪಟ್ಟಿ 6. ಪತಿ/ಪತ್ನಿಯ SSLC ಅಂಕಪಟ್ಟಿ 7.ಚೆಕ್ ಲಿಸ್ಟ್ : ‘ಕುಟುಂಬ ನಿಯಂತ್ರಣ ಭತ್ಯೆ (SFN) ಬಗ್ಗೆ ದಾಖಲಾತಿಗಳನ್ನು ಪರಿಶೀಲಿಸುವ ಬಗ್ಗೆ (ಕಛೇರಿ ನಮೂನೆ)

Read More

ಬೆಳಗಾವಿ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕುರಿತು ಅವಾಚ್ಯ ಪದ ಬಳಸಿದ ಹಿನ್ನೆಲೆಯಲ್ಲಿ ಅರೆಸ್ಟ್ ಆಗಿರುವ ಸಿಟಿ ರವಿ ಅವರು ಸಚಿವೆ ಲಕ್ಷ್ಮೀಹೆಬ್ಬಾಳ್ಕರ್ ಕ್ಷೇತ್ರದಲ್ಲಿ ಬದುಕಿದ್ದೇ ಪುಣ್ಯ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸಿ.ಟಿ. ರವಿ ಬಂಧನದ ಕುರಿತು ಪ್ರತಿಕ್ರಿಯೆ ನೀಡಿರುವ ಡಿ.ಕೆ.ಶಿವಕುಮಾರ್ ಅವರು, ಕೊಳಕು ಬಾಯಿ ಇದೇನು ಹೊಸದಲ್ಲ, ಸಿಎಂ ಸಿದ್ದರಾಮಯ್ಯರನ್ನು ಸಿದ್ರಾಮುಲ್ಲಾ ಖಾನ್ ಎಂದು ನಿಂದಿಸಿದ್ದಾರೆ. ಬೇರೆಯವರಿಗೆ ಕೆಟ್ಟ ಪದಗಳಿಂದ ನಿಂದಿಸಿದ್ದಾರೆ. ಸಚಿವೆ ಲಕ್ಷ್ಮೀಹೆಬ್ಬಾಳ್ಕರ್ ಬಗ್ಗೆ ಕೆಟ್ಟದಾಗಿ ಮಾತನಾಡಿದ ಸಿಟಿ ರವಿ ಬದುಕಿದ್ದೇ ಹೆಚ್ಚು. ಪುಣ್ಯ ನಮ್ಮ ಕಾರ್ಯಕರ್ತರು ಸಮಾಧಾನವಾಗಿ ನಡೆದುಕೊಂಡಿದ್ದಾರೆ. ಈ ವಿಚಾರದಲ್ಲಿ ಸಭಾಪತಿಗಳ ನಡೆ ಸರಿ ಇಲ್ಲ. ಅಶ್ಲೀಲ ಪದ ಬಳಕೆಯಾದಾಗ ಆ ಬಗ್ಗೆ ಚರ್ಚೆ ನಡೆಸಲು ಸದನದಲ್ಲಿ ಅವಕಾಶ ನೀಡಬೇಕಿತ್ತು ಎಂದು ಹೇಳಿದರು. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಅವಾಚ್ಯ ಪದ ಬಳಕೆ ಮಾಡಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಹಿರೇಬಾಗೇವಾಡಿ ಠಾಣೆಯಲ್ಲಿ BNS ಕಾಯ್ದೆ 75 ಮತ್ತು 79ರ ಅಡಿ ಕಾಯ್ದೆ, ಲೈಂಗಿಕ…

Read More

ಇತ್ತೀಚಿನ ದಿನಗಳಲ್ಲಿ, ತಪ್ಪು ಆಹಾರ ಪದ್ಧತಿ ಮತ್ತು ಕಳಪೆ ಜೀವನಶೈಲಿಯಿಂದ, ಜನರು ಅನೇಕ ಗಂಭೀರ ಕಾಯಿಲೆಗಳಿಗೆ ಬಲಿಯಾಗುತ್ತಿದ್ದಾರೆ. ಈ ರೋಗಗಳಲ್ಲಿ ಒಂದು ಹೃದಯಾಘಾತವಾಗಿದೆ. ಕಳೆದ ಕೆಲವು ವರ್ಷಗಳಲ್ಲಿ ಹೃದಯಾಘಾತ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ. ಹಿಂದಿನ ಹೃದಯಾಘಾತ ಪ್ರಕರಣಗಳು ಹೆಚ್ಚಾಗಿ ವಯಸ್ಸಾದವರಲ್ಲಿ ಕಂಡುಬಂದವು. ಇದರೊಂದಿಗೆ ಇಂದಿನ ದಿನಗಳಲ್ಲಿ ಯುವಕರು ಕೂಡ ಇದರಿಂದ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಹೃದಯದಲ್ಲಿ ರಕ್ತ ಪರಿಚಲನೆ ಕಡಿಮೆಯಾದಾಗ ಅಥವಾ ನಿರ್ಬಂಧಿಸಿದಾಗ ಹೃದಯಾಘಾತ ಸಂಭವಿಸುತ್ತದೆ ಎಂದು ನಾವು ನಿಮಗೆ ಹೇಳೋಣ. ಸಾಮಾನ್ಯವಾಗಿ, ಈ ಅಡಚಣೆಯು ಹೃದಯದ ಅಪಧಮನಿಗಳಲ್ಲಿ ಕೊಬ್ಬು ಅಥವಾ ಕೊಲೆಸ್ಟ್ರಾಲ್ ಸಂಗ್ರಹಣೆಯಿಂದ ಉಂಟಾಗುತ್ತದೆ. ಇದು ಹೃದಯ ಸ್ನಾಯುಗಳಿಗೆ ಹಾನಿಯನ್ನುಂಟುಮಾಡುತ್ತದೆ ಮತ್ತು ವ್ಯಕ್ತಿಯ ಸಾವಿಗೆ ಕಾರಣವಾಗಬಹುದು. ಹೃದಯಾಘಾತದ ಮೊದಲು ನಮ್ಮ ದೇಹವು ಕೆಲವು ಎಚ್ಚರಿಕೆಯ ಸಂಕೇತಗಳನ್ನು ನೀಡುತ್ತದೆ. ಈ ಚಿಹ್ನೆಗಳನ್ನು ಸಮಯಕ್ಕೆ ಗುರುತಿಸಿದರೆ, ರೋಗಿಯ ಜೀವವನ್ನು ಉಳಿಸಬಹುದು. ಬನ್ನಿ, ಹೃದಯಾಘಾತವಾಗುವ 10 ದಿನಗಳ ಮೊದಲು ದೇಹದಲ್ಲಿ ಕಂಡುಬರುವ ಲಕ್ಷಣಗಳೇನು ಎಂದು ತಿಳಿಯೋಣ? ಎದೆ ನೋವು ಅಥವಾ ಭಾರ ಹೃದಯಾಘಾತಕ್ಕೆ ಕೆಲವು ದಿನಗಳ…

Read More