Subscribe to Updates
Get the latest creative news from FooBar about art, design and business.
Author: kannadanewsnow57
BREAKING : ಕಾಂಗೋದ ಫಿಮಿ ನದಿಯಲ್ಲಿ ದೋಣಿ ಮುಳುಗಿ ಘೋರ ದುರಂತ : ಮಕ್ಕಳು ಸೇರಿ 25 ಮಂದಿ ಜಲಸಮಾಧಿ, ಹಲವರು ನಾಪತ್ತೆ.!
ಕಾಂಗೋ : ಮಧ್ಯ ಕಾಂಗೋದ ಫಿಮಿ ನದಿಯಲ್ಲಿ ಜನ ತುಂಬಿದ್ದ ದೋಣಿಯೊಂದು ಮಗುಚಿ ಬಿದ್ದಿದೆ. ಅಪಘಾತದಲ್ಲಿ ಮಕ್ಕಳು ಸೇರಿದಂತೆ 25 ಜನರು ಸಾವನ್ನಪ್ಪಿದ್ದಾರೆ ಮತ್ತು ಡಜನ್ಗಟ್ಟಲೆ ಜನರು ನಾಪತ್ತೆಯಾಗಿದ್ದಾರೆ. ಕಾಂಗೋದ ರಾಜಧಾನಿ ಕಿನ್ಶಾಸಾದ ಈಶಾನ್ಯ ಭಾಗದಲ್ಲಿರುವ ಇನಾಂಗೊ ನಗರದ ಬಳಿ ಈ ಘಟನೆ ನಡೆದಿದೆ. ಅಧಿಕಾರಿಗಳು ಮತ್ತು ಸ್ಥಳೀಯ ನಿವಾಸಿಗಳ ಪ್ರಕಾರ, ದೋಣಿಯಲ್ಲಿ 100 ಕ್ಕೂ ಹೆಚ್ಚು ಜನರು ಇದ್ದರು. ಅಪಘಾತದ ನಂತರ ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವನ್ನು ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ. ಇನೊಂಗೊ ನದಿಯ ಕಮಿಷನರ್ ಡೇವಿಡ್ ಕಲೆಂಬಾ ಅವರು ದೋಣಿಯಲ್ಲಿ ಹೆಚ್ಚು ಜನರನ್ನು ತುಂಬಿದ್ದರು. ಇದುವರೆಗೆ 25 ಮೃತದೇಹಗಳು ಪತ್ತೆಯಾಗಿವೆ. ದೋಣಿಯಲ್ಲಿ ಸರಕುಗಳನ್ನು ತುಂಬಿಸಲಾಗಿತ್ತು ಮತ್ತು ಸಾವನ್ನಪ್ಪಿದವರಲ್ಲಿ ಮಕ್ಕಳೂ ಸೇರಿದ್ದಾರೆ ಎಂದು ಪ್ರದೇಶದ ನಿವಾಸಿ ಅಲೆಕ್ಸ್ ಎಂಬುಂಬಾ ಹೇಳಿದ್ದಾರೆ. ಬೋಟ್ನಲ್ಲಿ ಸಾಕಷ್ಟು ಮಂದಿ ಪ್ರಯಾಣಿಕರಿದ್ದು, ಮೃತಪಟ್ಟವರ ಸಂಖ್ಯೆಯನ್ನು ನಿಖರವಾಗಿ ಹೇಳುವುದು ಕಷ್ಟ ಎಂದು ಅವರು ಹೇಳಿದರು. ಕಾಂಗೋ ಸರ್ಕಾರವು ಓವರ್ಲೋಡ್ನ ವಿರುದ್ಧ ಆಗಾಗ್ಗೆ…
ಕೊಪ್ಪಳ : ಕೊಪ್ಪಳ ಜಿಲ್ಲೆಯಲ್ಲಿ 7 ನೇ ತರಗತಿ ಪಾಸ್ ಆಗಿದ್ದರೂ ಭಾಷಾ ವಿಷಯಗಳಲ್ಲಿ ಮಕ್ಕಳು ವೀಕ್ ಆಗಿದ್ದಾರೆ. 7,000 ಮಕ್ಕಳಿಗೆ ಓದಲು, ಬರೆಯಲು ಬಾರದೇ ಇರುವುದು ಪತ್ತೆಯಾಗಿದೆ. ಹೌದು, ಕೊಪ್ಪಳ ಜಿಲ್ಲೆಯಲ್ಲಿ ಪ್ರಾಥಮಿಕ ಶಾಲೆಗಳಿಂದ ಪ್ರೌಢಶಾಲೆಗಳಿಗೆ ಪ್ರವೇಶ ಪಡೆಯುವ ಸಂದರ್ಭದಲ್ಲಿ ಭಾಷಾ ವಿಷಯದಲ್ಲಿ ವಿದ್ಯಾರ್ಥಿಗಳಿಗೆ ಓದಲು, ಬರೆಯಲು ಬರುತ್ತಿಲ್ಲ. ಪ್ರಾಥಮಿಕ ಶಾಲೆಯಿಂದ ಪ್ರೌಢಶಾಲೆಗೆ ಮಕ್ಕಳು ಪ್ರವೇಶ ಪಡೆದುಕೊಂಡಿದ್ದಾರೆ. ಹೈಸ್ಕೂಲ್ ಪ್ರವೇಶ ಸಂದರ್ಭದಲ್ಲಿ ಮಕ್ಕಳನ್ನು ಪರೀಕ್ಷಿಸಿದಾಗ ಈ ವಿಚಾರ ಪತ್ತೆಯಾಗಿದೆ. ಕಳೆದ ಜೂನ್ ಮತ್ತು ಜುಲೈ ತಿಂಗಳಿನಲ್ಲಿ ಪರೀಕ್ಷೆ ನಡೆಸಿದಾಗ ಕನ್ನಡ ಓದಲು, ಬರೆಯಲು ಬಾರದೇ ಇರುವುದು ಪತ್ತೆಯಾಗಿದೆ. ಈ ಕಾರಣಕ್ಕೆ ಎಸ್ಎಸ್ಎಲ್ಸಿಯಲ್ಲಿ ಫಲಿತಾಂಶ ಕಡಿಮೆ ಬರುತ್ತಿದೆ ಎಂದು ಶಿಕ್ಷಕರು ಹೇಳಿದ್ದಾರೆ. ಕೊಪ್ಪಳ ಜಿಲ್ಲೆಯ ಎಲ್ಲಾ ಪ್ರಾಥಮಿಕ ಶಾಲೆಗಳ ಮುಖ್ಯ ಶಿಕ್ಷಕರಿಗೆ ಕೊಪ್ಪಳ ಡಿಡಿಪಿಐ ಶ್ರೀಶೈಲ ಬಿರಾದಾರ ಪತ್ರ ಬರೆದು 7ನೇ ತರಗತಿ ಮಕ್ಕಳಿಗೆ ಓದಲು ಬರೆಯಲು ಬರುವಂತೆ ನೋಡಿಕೊಳ್ಳಿ. ಮಕ್ಕಳು ನಿಗದಿತ ಗುರಿ ತಲುಪದೇ ಇದ್ದರೆ ನಿಮ್ಮ ವಾರ್ಷಿಕ ಬಡ್ತಿಗೆ…
ಬೆಂಗಳೂರು: ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಫ್ಲೈಟ್(HSRP) ಅಳವಡಿಸದ ವಾಹನ ಸವಾರರಿಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದು, HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳದ ವಾಹನ ಸವಾರರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ತಿಳಿಸಿದೆ. ಸಾರಿಗೆ ಇಲಾಖೆ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸಲು ಐದು ಬಾರಿ ಗಡುವು ವಿಸ್ತರಣೆ ಮಾಡಿದೆ. ಈ ಬಾರಿ ಕೊನೆಯದಾಗಿ ಡಿಸೆಂಬರ್ 31 ರವರೆಗೆ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಆಳವಡಿಕೆಗೆ ಗಡುವು ಕೊಟ್ಟಿದೆ. ಗಡುವು ಮುಗಿದ ಕೂಡಲೇ ದಂಡ ವಿಧಿಸಲು ಸಾರಿಗೆ ಇಲಾಖೆ ಮುಂದಾಗಿತ್ತು. ಆದರೆ, ಇದಕ್ಕೆ ಸದ್ಯ ಹೈಕೋರ್ಟ್ ರಿಲೀಫ್ ನೀಡಿದ್ದು, ಮುಂದಿನ ಆದೇಶದ ವರೆಗೂ ವಾಹನ ಮಾಲೀಕರ ಮೇಲೆ ಕ್ರಮ ಕೈಗೊಳ್ಳುವಂತಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. ಈ ಬಗ್ಗೆ ಕುರಿತು ಮಾಹಿತಿ ನೀಡಿರುವ ಸಾರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತ ಮಲ್ಲಿಕಾರ್ಜುನ, ಕೋರ್ಟ್ ಡಿಸೆಂಬರ್ 31 ರ ವರೆಗೆ ಮಾತ್ರ ಯಾವುದೇ ಕ್ರಮ ಕೈಗೊಳ್ಳದಂತೆ ಸೂಚನೆ ನೀಡಿದೆ. ಮುಂದಿನ ಆದೇಶದ ಬಳಿಕ ಕೋರ್ಟ್ ಯಾವ…
ಬೆಳಗಾವಿ : ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಬಿಬಿಎಂಪಿ ಮಾದರಿಯಲ್ಲಿ ಎ – ಖಾತಾ ಮತ್ತು ಬಿ-ಖಾತಾ ಎಂದು ಇ-ಆಸ್ತಿ ನೀಡುವ ಕಾರ್ಯವನ್ನು ಜಾರಿಗೊಳಿಸಲಾಗುವುದು ಎಂದು ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂ ಖಾನ್ ತಿಳಿಸಿದ್ದಾರೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಚಿದಾನಂದ ಎಂ ಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂ ಖಾನ್ ಅವರ ಉತ್ತರಿಸಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಾಯ್ದೆ, 2020ರ ಕಲಂ 144(6) ಮತ್ತು (21)ರ ಅಂಶವನ್ನು ರಾಜ್ಯದ ಇತರೆ ಮಹಾನಗರ ಪಾಲಿಕೆಗಳು / ನಗರ ಸ್ಥಳೀಯ ಸಂಸ್ಥೆಗಳಿಗೂ ಸಹ ವಿಸ್ತರಿಸಲು ಕರ್ನಾಟಕ ಮಹಾನಗರ ಪಾಲಿಕೆಗಳ ಅಧಿನಿಯಮ 1976 ಹಾಗೂ ಕರ್ನಾಟಕ ಪುರಸಭೆಗಳ ಅಧಿನಿಯಮ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಾಯ್ದೆ, 2020ರ ಕಲಂ 144(6) ಮತ್ತು (21)ರ ಅಂಶವನ್ನು ರಾಜ್ಯದ ಇತರ ಮಹಾನಗರ ಪಾಲಿಕೆಗಳು / ನಗರ ಸ್ಥಳೀಯ ಸಂಸ್ಥೆಗಳಿಗೂ ಸಹ ವಿಸ್ತರಿಸಲು ಕರ್ನಾಟಕ…
ಬೆಳಗಾವಿ: ಬೆಳಗಾವಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಗುಜರಿ ಗೋದಾಮಿಗೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ಬೆಳಗಾವಿಯ ಖಂಜರ ಗಲ್ಲಿಯಲ್ಲಿರುವ ಜಾಹಿದ್ ಡಾಂಗೆ ಎಂಬುವರಿಗೆ ಸೇರಿದ ಗೋದಾಮಿಗೆ ಬೆಂಕಿ ತಗುಲಿದ್ದು, ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ಮಾಹಿತಿ ತಿಳಿದ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಗೋದಾಮಿನಲ್ಲಿದ್ದ ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ. ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಮಂಡ್ಯ : ವಿವಾಹಿತ ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಬನ್ನಹಳ್ಳಿ, ಯರಗನಹಳ್ಳಿಯಲ್ಲಿ ನಡೆದಿದೆ. ಯರಗನಹಳ್ಳಿ ನಿವಾಸಿಯಾದ ಸೃಷ್ಟಿ ದಿನೇಶ್ ಎಂಬುವರನ್ನು ಮದುವೆಯಾಗಿದ್ದರು. ಆದರೆ ಸೃಷ್ಟಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸೃಷ್ಟಿ ಆತ್ಮಹತ್ಯೆ ವಿಷಯ ತಿಳಿದ ಹಳೆಯ ಪ್ರೇಮಿ ಪ್ರಸನ್ನ ಎಂಬಾತನು ಕೂಡ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಕೆಲವು ವರ್ಷಗಳಿಂದ ಪ್ರಸನ್ನ ಹಾಗೂ ಸೃಷ್ಟಿ ಪರಸ್ಪರ ಪ್ರೀತಿಸುತ್ತಿದ್ದರು. ಈ ನಡುವೆ ಸೃಷ್ಟಿ ದಿನೇಶ್ ಎಂಬಾತನನ್ನು ಮದುವೆಯಾಗಿದ್ದರು. ಇತ್ತ ಸೃಷ್ಟಿ ಗೆಳತಿ ಸ್ಪಂದನ ಜೊತೆಗೆ ಪ್ರಸನ್ನ ಮದುವೆಯಾಗಿದ್ದ. ಆದರೂ ಸೃಷ್ಟಿ ಹಾಗೂ ಪ್ರಸನ್ನ ನಡುವೆ ಪ್ರೀತಿ ಮುಂದುವರೆದಿತ್ತು. ಇದೇ ವಿಚಾರಕ್ಕೆ ಸೃಷ್ಟಿ ಹಾಗೂ ದಿನೇಶ್ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಈ ಹಿನ್ನೆಲೆಯಲ್ಲಿ ಡಿಸೆಂಬರ್ 11 ರಂದು ಸೃಷ್ಟಿ ಮನೆಯಿಂದ ನಾಪತ್ತೆಯಾಗಿದ್ದಳು. ಡಿಸೆಂಬರ್ 16 ರಂದು ವೈದ್ಯನಾಥಪುರ ಬಳಿಯ ಶಿಂಷಾ ನದಿಯಲ್ಲಿ ಶವ ಪತ್ತೆಯಾಗಿತ್ತು. ಸೃಷ್ಟಿ ಆತ್ಮಹತ್ಯೆ ವಿಚಾರ ತಿಳಿಯುತ್ತಿದ್ದಂತೆ ಪ್ರಸನ್ನ ಕೂಡ ಮನೆಯಲ್ಲಿ…
ನವದೆಹಲಿ : ಹೊಸ ವರ್ಷದಿಂದ ದೇಶದಲ್ಲಿ ಬೋರ್ಡ್ ಪರೀಕ್ಷೆಗಳ ಕಾಲ ಆರಂಭವಾಗಿದೆ. ಬೋರ್ಡ್ ಎಕ್ಸಾಮ್ ಸೀಸನ್ ಎಂದರೆ ಒತ್ತಡದ ಸೀಸನ್. ಈ ಒತ್ತಡವನ್ನು ಕಡಿಮೆ ಮಾಡಲು ಕೇಂದ್ರ ಸರ್ಕಾರವು ಪ್ರತಿ ವರ್ಷ ಪರೀಕ್ಷೆಯ ಕುರಿತು ಚರ್ಚಾ ಕಾರ್ಯಕ್ರಮವನ್ನು ಆಯೋಜಿಸುತ್ತದೆ. ‘ಪರೀಕ್ಷಾ ಪೇ ಚರ್ಚಾ’ 8ನೇ ಆವೃತ್ತಿಗೆ ನೋಂದಣಿ ಆರಂಭವಾಗಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಇತ್ತೀಚಿನ ಪೋಸ್ಟ್ನಲ್ಲಿ ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಪರೀಕ್ಷೆಯ ಅವಧಿಯು ಪೂರ್ಣ ಸ್ವಿಂಗ್ನಲ್ಲಿದೆ, PPC2025 ನೊಂದಿಗೆ ಪರೀಕ್ಷೆಯ ಭಯ ಮತ್ತು ಒತ್ತಡವನ್ನು ತೊರೆಯುವ ಸಮಯ ಬಂದಿದೆ ಎಂದು ಅವರು ಹೇಳಿದರು. ಹಾಗಾದರೆ ನೀವು ಏನು ಕಾಯುತ್ತಿದ್ದೀರಿ? ಪ್ರಧಾನಿ ಮೋದಿಯವರೊಂದಿಗೆ ನಿಮ್ಮೊಳಗಿನ ಪರೀಕ್ಷಾ ಯೋಧನನ್ನು ಬೆಳಗಿಸಿ. ‘ಪರೀಕ್ಷಾ ಪೇ ಚರ್ಚಾ’ ಪ್ರಧಾನಿ ನರೇಂದ್ರ ಮೋದಿಯವರ ಅತ್ಯುತ್ತಮ ಯೋಜನೆಯಾಗಿದೆ. ಈ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿಯವರು ದೇಶದಾದ್ಯಂತ ಇರುವ ಮಕ್ಕಳೊಂದಿಗೆ ಬೋರ್ಡ್ ಪರೀಕ್ಷೆಗಳ ಒತ್ತಡ ಮತ್ತು ಭಯದ ಬಗ್ಗೆ ಮಾತನಾಡುವುದು ಮಾತ್ರವಲ್ಲದೆ ಅವರಿಗೆ ಸ್ಪೂರ್ತಿದಾಯಕ ಕಥೆಗಳನ್ನು ಹೇಳುವ ಮೂಲಕ…
ನವದೆಹಲಿ : ಗುಣಮಟ್ಟದ ಪರೀಕ್ಷೆಗಳಲ್ಲಿ ವಿಫಲವಾದ ನಂತರ ಮರುಪಡೆಯಲಾದ ಔಷಧಿಗಳ ಬ್ಯಾಚ್ಗಳ ಸಂಖ್ಯೆಯು 2019-20 ರಲ್ಲಿ 950 ರಿಂದ 2023-24 ರಲ್ಲಿ 1,394 (ತಾತ್ಕಾಲಿಕ) ಕ್ಕೆ ಏರಿದೆ. ಆರೋಗ್ಯ ಖಾತೆ ರಾಜ್ಯ ಸಚಿವೆ ಅನುಪ್ರಿಯಾ ಪಟೇಲ್ ಮಂಗಳವಾರ ರಾಜ್ಯಸಭೆಗೆ ಈ ವಿಷಯ ತಿಳಿಸಿದರು. ವರದಿಗಳ ಪ್ರಕಾರ, ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಡ್ರಗ್ಸ್ ಕಂಟ್ರೋಲರ್ಗಳಿಂದ ಪಡೆದ ಮಾಹಿತಿಯ ಪ್ರಕಾರ, 2022-23ರ ಹಣಕಾಸು ವರ್ಷದಲ್ಲಿ 1,171 ಬ್ಯಾಚ್ಗಳನ್ನು ಹಿಂಪಡೆಯಲಾಗಿದೆ ಎಂದು ಪಟೇಲ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. ಗುಣಮಟ್ಟದ ಪರೀಕ್ಷೆಗಳಲ್ಲಿ ವಿಫಲವಾದ ನಂತರ ಮರುಪಡೆಯಲಾದ ಔಷಧಿಗಳ ಡೇಟಾವನ್ನು ಕೇಂದ್ರೀಯ ಔಷಧಗಳ ಗುಣಮಟ್ಟ ನಿಯಂತ್ರಣ ಸಂಸ್ಥೆ (CDSCO) ಕೇಂದ್ರೀಯವಾಗಿ ನಿರ್ವಹಿಸುವುದಿಲ್ಲ. 282 ಔಷಧ ಮಾದರಿಗಳು ನಕಲಿ ಅಥವಾ ಕಲಬೆರಕೆ ಮಾಡಿರುವುದು ಕಂಡುಬಂದಿದೆ 2023-24ರ ಅವಧಿಯಲ್ಲಿ (ಏಪ್ರಿಲ್ನಿಂದ ಮಾರ್ಚ್ವರೆಗೆ) 2,988 ಔಷಧ ಮಾದರಿಗಳು ಗುಣಮಟ್ಟದಿಂದ ಕೂಡಿಲ್ಲ ಎಂದು ಘೋಷಿಸಲಾಗಿದ್ದು, 282 ಔಷಧ ಮಾದರಿಗಳು ನಕಲಿ ಅಥವಾ ಕಲಬೆರಕೆಯಾಗಿದೆ ಎಂದು ಕೇಂದ್ರ ಸಚಿವರು ತಿಳಿಸಿದ್ದಾರೆ. ಸಂಶೋಧನೆಗಳ ಆಧಾರದ…
ಬೆಂಗಳೂರು: 500 ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ನ್ಯೂ ಇಂಡಿಯ ಅಶುರನ್ಸ್ ಕಂಪನಿ ಲಿಮಿಟೆಡ್ ತಿಳಿಸಿದೆ. 21 ರಿಂದ 30 ವರ್ಷದೊಳಗಿನ ಪದವೀಧರ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಹ ಅಭ್ಯರ್ಥಿಗಳು 2025 ರ ಜನವರಿ, 01 ರೊಳಗೆ ವೆಬ್ಸೈಟ್ ವಿಳಾಸ https://www.newindia.co.in/ ಕ್ಕೆ ಭೇಟಿ ನೀಡಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಡಿಸೆಂಬರ್, 27 ರಂದು ಹಾಸನದ ಸಾಲಗಾಮೆ ರಸ್ತೆಯಲ್ಲಿರುವ ಕೃಷಿಕ್ ಸರ್ವೋದಯ ಫೌಂಡೇಶನ್ನಲ್ಲಿ ಈ ನೇಮಕಾತಿ ಪರೀಕ್ಷೆ ಹಾಗೂ ವಿವಿಧ ಬ್ಯಾಂಕ್ ಮತ್ತು ಇನ್ಶುರೆನ್ಸ್ ಕಂಪನಿಗಳ ನೇಮಕಾತಿ ಪರೀಕ್ಷೆಗಳ ಬಗ್ಗೆ ಉಚಿತ ಜಾಗೃತಿ ಮತ್ತು ಮಾರ್ಗದರ್ಶನ ಕಾರ್ಯಕ್ರಮ ಆಯೋಜಿಸಲಾಗಿದೆ. ಹೆಚ್ಚಿನ ಮಾಹಿತಿಗೆ 8660217739 ಸಂಖ್ಯೆಗೆ ಕರೆ ಅಥವಾ ವಾಟ್ಸಾಪ್ ಮಾಡಬಹುದಾಗಿದೆ ಎಂದು ಕೃಷಿಕ್ ಸರ್ವೋದಯ ಫೌಂಡೇಶನ್ ಗೌರವ ಕಾರ್ಯದರ್ಶಿ ಎಚ್.ಪಿ.ಮೋಹನ್ ಅವರು ತಿಳಿದ್ದಾರೆ.
Karnataka Weather : ಮೈ ಕೊರೆಯುವ ಚಳಿಗೆ ಜನರು ತತ್ತರ : ರಾಜ್ಯದಲ್ಲಿ `ಶೀತಗಾಳಿ’ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ.!
ಬೆಂಗಳೂರು : ಭಾರೀ ಮಳೆಯಿಂದಾಗಿ ತ್ತರಿಸಿರುವ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಾಮಾನ ಕುಸಿತವಾಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಚಳಿ ಹೆಚ್ಚಳವಾಗಿದೆ. ರಾಜ್ಯದ ಆರು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಶೀತದ ಅಲೆ ಮುಂದುವರಿಯಲಿದೆ, ವಿಜಯಪುರ, ಕಲಬುರಗಿ, ಬೀದರ್ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕಲ್ಯಾಣ ಕರ್ನಾಟಕ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಶೀತಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಳೆ, ಮೋಡ ಇಲ್ಲದ ಕಾರಣ ಶುಭ್ರ ಆಕಾಶ, ಕನಿಷ್ಠ ಉಷ್ಣಾಂಶದಲ್ಲಿ ಸುಮಾರು 5 ಡಿಗ್ರಿ ಸೆಲ್ಸಿಯಸ್ ನಷ್ಟು ಇಳಿಕೆ, ಉತ್ತರ ದಿಕ್ಕಿನಿಂದ ದಕ್ಷಿಣಕ್ಕೆ ಗಾಳಿ ಬೀಸುತ್ತಿರುವುದರಿಂದ ಉತ್ತರ ಒಳನಾಡಿನ ಆರು ಜಿಲ್ಲೆಗಳಲ್ಲಿ ಶೀತ ಅಲೆ ಕಾಣಿಸಿಕೊಂಡಿದೆ. ಹೀಗಾಗಿ ಯಾದಗಿರಿ, ಬಾಗಲಕೋಟೆ, ರಾಯಚೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಾಮರಾಜನಗರ, ಮೈಸೂರು, ಮಂಡ್ಯ,…














