Subscribe to Updates
Get the latest creative news from FooBar about art, design and business.
Author: kannadanewsnow57
ವಿಜಯಪುರ : ಸ್ವಪಕ್ಷದ ನಾಯಕರ ವಿರುದ್ಧವೇ ಇಲ್ಲಸಲ್ಲದ ಆರೋಪ ಮಾಡಿದ್ದು ಅಲ್ಲದೆ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ನೀಡಿರುವ ನೋಟಿಸ್ ಗೂ ಉತ್ತರಿಸದ ಹಿನ್ನೆಲೆಯಲ್ಲಿ ಇದೀಗ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿ ಬಿಜೆಪಿ ರಾಷ್ಟ್ರೀಯ ಶಿಸ್ತು ಸಮಿತಿ ಆದೇಶಿಸಿದೆ. ಶಾಸಕ ಯತ್ನಾಳರನ್ನು ಉಚ್ಚಾಟಿಸಿದ ಬೆನ್ನಲ್ಲೇ ಇದೀಗ ಯತ್ನಾಳ್ ಅಭಿಮಾನಿಗಳು ಇಂದು ವಿಜಯಪುರ ನಗರದಲ್ಲಿ ಬೃಹತ್ ಪ್ರತಿಭಟನೆಗೆ ಮುಂದಾಗಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ವಿಜಯಪುರದ ಗಾಂಧಿಚೌಕ್ ನಲ್ಲಿ ಯತ್ನಾಳ್ ಅಭಿಮಾನಿಗಳು ಬೃಹತ್ ಪ್ರತಿಭಟನೆ ನಡೆಸಲಿದ್ದದಾರೆ.. ಇನ್ನು ಯತ್ನಾಳ್ ಅವರ ಉಚ್ಚಾಟನೆ ಹಿನ್ನೆಲೆಯಲ್ಲಿ ಅವರ ಬೆಂಬಲಿಗರ ರಾಜೀನಾಮೆ ಪರ್ವ ಆರಂಭವಾಗಿದ್ದು, ವಿಜಯಪುರ ಬಿಜೆಪಿ ನಗರ ಮೋರ್ಚಾ ಉಪಾಧ್ಯಕ್ಷ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ನಗರ ಓಬಿಸಿ ಮೋರ್ಚ ಉಪಾಧ್ಯಕ್ಷ ರಾಜೀನಾಮೆ ಸಲ್ಲಿಸಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ಭೀಮು ಮಾಶಾಳ ಇದೀಗ ರಾಜೀನಾಮೆ ಸಲ್ಲಿಸಿದ್ದಾರೆ. ಬಿಜೆಪಿ ನಗರ ಮಂಡಲ ಅಧ್ಯಕ್ಷ ಹೂಗಾರ್ ಅವರಿಗೆ ರಾಜೀನಾಮೆ…
ಭಾರತೀಯ ಸೇನೆ ವತಿಯಿಂದ ಅಗ್ನಿವೀರ್ ಯೋಜನೆಯಡಿ ಭಾರತೀಯ ಸೇನೆಯಲ್ಲಿ ಸೇರಲು ವಿವಿಧ ಹುದ್ದೆಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, 17 ವರ್ಷ 6 ತಿಂಗಳು ತುಂಬಿದ ಹಾಗೂ 21 ವರ್ಷದೊಳಗಿನ ವಯೋಮಿತಿಯ ಅಭ್ಯರ್ಥಿಗಳು ನೇಮಕಾತಿ ರ್ಯಾಲಿಯಲ್ಲಿ ಭಾಗವಹಿಸಬಹುದು. 8ನೇ ತರಗತಿಯಿಂದ ದ್ವಿತೀಯ ಪಿಯುಸಿ, ಐಟಿಐ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ನೇಮಕಾತಿ ರ್ಯಾಲಿಯಲ್ಲಿ ಭಾಗವಹಿಸಬಹುದಾಗಿದ್ದು, ನೇಮಕಾತಿ ರ್ಯಾಲಿಯನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುತ್ತದೆ. ಹುದ್ದೆ: ಅಗ್ನಿವೀರ್ (ಸಾಮಾನ್ಯ ಕರ್ತವ್ಯ) ಎಲ್ಲಾ ಶಸ್ತಾçಸ್ತçಗಳು, ಅಗ್ನಿವೀರ್ (ಸಾಮಾನ್ಯ ಕರ್ತವ್ಯ) (ಮಹಿಳಾ ಮಿಲಿಟರಿ ಪೊಲೀಸ್), ಅಗ್ನಿವೀರ್ (ತಾಂತ್ರಿಕ) (ಎಲ್ಲಾ ಶಸ್ತಾçಸ್ತçಗಳು), ಅಗ್ನಿವೀರ್ ಆಫೀಸ್ ಅಸಿಸ್ಟೆಂಟ್ (ಗುಮಾಸ್ತ)/ಸ್ಟೋರ್ ಕೀಪರ್ ಟೆಕ್ನಿಕಲ್ (ಎಲ್ಲಾ ಆರ್ಮ್ಸ್), ಅಗ್ನಿವೀರ್ ಟ್ರೇಡ್ಸ್ಮ್ಯಾನ್ 10 ನೇ ಪಾಸ್(ಎಲ್ಲಾ ಆರ್ಮ್ಸ್), ಅಗ್ನಿವೀರ್ ಟ್ರೇಡ್ಸ್ಮ್ಯಾನ್ 8 ನೇ ಪಾಸ್(ಎಲ್ಲಾ ಆರ್ಮ್ಸ್). ಮಹಿಳಾ ಸಂಸದರಿಗೆ ಮಾತ್ರ: ಸರಂಜಾಮುಗಳಲ್ಲಿ ಮರಣ ಹೊಂದಿದ ರಕ್ಷಣಾ ಸಿಬ್ಬಂದಿಯ ವಿಧವೆಯರಿಗೆ ಸಂಬಂಧಿಸಿದಂತೆ ಗರಿಷ್ಠ ವಯಸ್ಸಿನ ಮಿತಿಯನ್ನು 30 ವರ್ಷಗಳವರೆಗೆ ಸಡಿಲಗೊಳಿಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂ.08392-294230 ಅಥವಾ ಜಿಲ್ಲಾ ಕೌಶಲ್ಯಾಭಿವೃದ್ಧಿ…
ಬೆಂಗಳೂರು : ಬೆಂಗಳೂರಿನ ಜನತೆಗೆ ಜಿಲ್ಲಾಡಳಿತ ನೆಮ್ಮದಿಯ ಸುದ್ದಿ ನೀಡಿದ್ದು, ಆಟೋ ದರ ಏರಿಕೆಗೆ ಜಿಲ್ಲಾಡಳಿತ ಸದ್ಯಕ್ಕೆ ಬ್ರೇಕ್ ಹಾಕಿದೆ. ಹೌದು, ಆಟೋ ದರ ಏರಿಕೆಗೆ ಜಿಲ್ಲಾಡಳಿತ ಬ್ರೇಕ್ ಹಾಕಿದ್ದು, ಸದ್ಯಕ್ಕೆ ಆಟೋ ಮೀಟರ್ ದರ ಏರಿಕೆ ಮಾಡದಂತೆ ಸೂಚನೆ ನೀಡಲಾಗಿದೆ. ಈ ಮೂಲಕ ಬೆಂಗಳೂರಿನ ಜನತೆಗೆ ನೆಮ್ಮದಿಯ ಸುದ್ದಿಯೊಂದನ್ನು ನೀಡಿದೆ. ಇನ್ನು ಆಟೋ ದರ ಪರಿಷ್ಕರಣೆಗೆ ಸಂಚಾರ ಪೂರ್ವ ವಿಭಾಗದ ಡಿಸಿಪಿ ಕಚೇರಿಯಲ್ಲಿ ಸಭೆ ಕರೆಯಲಾಗಿತ್ತು, 1 ಕಿಮೀಗೆ 15 ರೂಪಾಯಿ ಇದ್ದು, ಅದನ್ನು 20 ರೂಗೆ ಏರಿಕೆ ಮಾಡಬೇಕು. 2 ಕಿಮೀಗೆ 40 ರೂ ಏರಿಕೆ ಮಾಡಬೇಕು ಎಂದು ಆಟೋ ಚಾಲಕ ಸಂಘಟನೆಗಳು ಮನವಿ ಮಾಡಿದ್ದವು. 3-4 ವರ್ಷದಿಂದ ಆಟೋ ದರ ಏರಿಕೆಗೆ ಆಗ್ರಹಿಸಿ ಹೋರಾಟ ನಡೆಯುತ್ತವೇ ಇದ್ದು, ಆಟೋ ಚಾಲಕರ ಬೇಡಿಕೆ ಈಡೇರಿಸಲು ಜಿಲ್ಲಾಡಳಿತ ಅಸ್ತು ಎಂದಿದೆ. ಏಪ್ರಿಲ್ 1 ರಿಂದ ಅಧಿಕೃತವಾಗಿ ಪರಿಷ್ಕೃತ ಪಟ್ಟಿ ಜಾರಿಯಾಗುವ ಸಾಧ್ಯತೆ ಇದೆ ಎನ್ನಲಾಗಿತ್ತು. ಆದರೆ ಇದೀಗ ಜಿಲ್ಲಾಡಳಿತ ಆಟೋ…
ನವದೆಹಲಿ : ಭಾರತದ ನೆರೆಯ ರಾಷ್ಟ್ರ ನೇಪಾಳದಲ್ಲಿ ಪ್ರಬಲ ಭೂಕಂಪನ ಸಂಭವಿಸಿದೆ. ನೇಪಾಳದ ವಾಯುವ್ಯ ಹುಮ್ಲಾ ಜಿಲ್ಲೆಯಲ್ಲಿ ಈ ಭೂಕಂಪ ಸಂಭವಿಸಿದೆ. ಭೂಕಂಪ ಸಂಭವಿಸಿದ ತಕ್ಷಣ ಜನರು ಮನೆಗಳಿಂದ ಹೊರಗೆ ಬಂದರು. ಇಡೀ ಪ್ರದೇಶದಲ್ಲಿ ಭೀತಿ ಆವರಿಸಿತ್ತು. ಈ ಭೂಕಂಪನಗಳು ಮಾರ್ಚ್ 26 ರಂದು (ಬುಧವಾರ) ಸಂಜೆ 7.45 ರ ಸುಮಾರಿಗೆ ಸಂಭವಿಸಿದವು. ಇದರ ತೀವ್ರತೆ ರಿಕ್ಟರ್ ಮಾಪಕದಲ್ಲಿ 4.5 ರಷ್ಟು ದಾಖಲಾಗಿತ್ತು. ಆದಾಗ್ಯೂ, ಈ ಭೂಕಂಪದಿಂದಾಗಿ ಯಾವುದೇ ಜೀವ ಅಥವಾ ಆಸ್ತಿಪಾಸ್ತಿ ನಷ್ಟದ ಸುದ್ದಿ ಬಂದಿಲ್ಲ. ರಾಷ್ಟ್ರೀಯ ಭೂಕಂಪ ಮಾನಿಟರಿಂಗ್ ಮತ್ತು ಸಂಶೋಧನಾ ಕೇಂದ್ರದ ಪ್ರಕಾರ, ಭೂಕಂಪದ ಕೇಂದ್ರಬಿಂದು ಕಠ್ಮಂಡುವಿನಿಂದ ವಾಯುವ್ಯಕ್ಕೆ 425 ಕಿ.ಮೀ ದೂರದಲ್ಲಿರುವ ಹಮ್ಲಾ ಜಿಲ್ಲೆಯ ಕಲಿಕಾ ಪ್ರದೇಶದಲ್ಲಿತ್ತು. ಏತನ್ಮಧ್ಯೆ, ಕೇಂದ್ರದ ಪ್ರಕಾರ, ಸಂಜೆ 6.27 ಕ್ಕೆ ಭೂಕಂಪನದ ಅನುಭವವಾಗಿದೆ. ಇದರ ತೀವ್ರತೆಯನ್ನು 5.5 ಎಂದು ಅಳೆಯಲಾಯಿತು. ಇದರ ಕೇಂದ್ರಬಿಂದು ಟಿಬೆಟ್ನ ಟಿಂಗ್ರಿ ಕೌಂಟಿಯಲ್ಲಿತ್ತು. ಅದು ಕಠ್ಮಂಡುವಿನಲ್ಲಿಯೂ ಅನುಭವಕ್ಕೆ ಬಂದಿತು. ಒಟ್ಟಾರೆಯಾಗಿ, ನೇಪಾಳದ ಜನರು ಕಡಿಮೆ ಅವಧಿಯಲ್ಲಿ…
ಅನೇಕ ಜನರ ಮನೆಯಲ್ಲಿನ ಫ್ರಿಡ್ಜ್ಗಳು ಮತ್ತು ಫ್ರೀಜರ್ಗಳಲ್ಲಿ ಐಸ್ ಸಂಗ್ರಹವಾಗಿರುತ್ತದೆ. ಹಾಗಾದರೆ, ಹಾಗೆ ಹೆಪ್ಪುಗಟ್ಟುವುದನ್ನು ತಪ್ಪಿಸಲು ಏನು ಮಾಡಬೇಕೆಂದು ನೋಡೋಣ… ಇತ್ತೀಚಿನ ದಿನಗಳಲ್ಲಿ, ಫ್ರಿಡ್ಜ್ ದೈನಂದಿನ ಅಗತ್ಯವಾಗಿದೆ. ಅದಕ್ಕಾಗಿಯೇ ಪ್ರತಿಯೊಬ್ಬರ ಮನೆಯಲ್ಲಿಯೂ ಸಣ್ಣದಾಗಲಿ ಅಥವಾ ದೊಡ್ಡದಾಗಲಿ ಫ್ರಿಡ್ಜ್ ಇರುತ್ತದೆ. ಆದರೆ, ಅದನ್ನು ಹೇಗೆ ನಿರ್ವಹಿಸುವುದು ಎಂದು ಅನೇಕರಿಗೆ ತಿಳಿದಿಲ್ಲ. ಅವುಗಳ ಅನುಚಿತ ಬಳಕೆಯಿಂದಾಗಿ, ಫ್ರೀಜರ್ನಲ್ಲಿರುವ ನೀರು ಹೆಪ್ಪುಗಟ್ಟಿ ಮಂಜುಗಡ್ಡೆಯಾಗಿ ಬದಲಾಗುತ್ತದೆ. ಗಮನಿಸದೆ ಬಿಟ್ಟರೆ, ಫ್ರೀಜರ್ ಬಾಗಿಲು ತೆರೆಯಲು ಮತ್ತು ಮುಚ್ಚಲು ಸಹ ಕಷ್ಟವಾಗುತ್ತದೆ. ಅದಾದ ನಂತರ, ರೆಫ್ರಿಜರೇಟರ್ನ ಕಾರ್ಯಕ್ಷಮತೆಯ ಮೇಲೂ ಪರಿಣಾಮ ಬೀರುತ್ತದೆ. ಹಾಗಾದರೆ, ಈ ಫ್ರೀಜರ್ನಲ್ಲಿ ಐಸ್ ಏಕೆ ಹೆಪ್ಪುಗಟ್ಟುತ್ತದೆ? ಈಗ ಅದು ಹೆಪ್ಪುಗಟ್ಟದಂತೆ ತಡೆಯಲು ಏನು ಮಾಡಬೇಕೆಂದು ನೋಡೋಣ. ರೆಫ್ರಿಜರೇಟರ್ನಲ್ಲಿ ಐಸ್ ರಚನೆಗೆ ಕಾರಣಗಳು: 1. ಫ್ರಿಡ್ಜ್ ಬಾಗಿಲು ಅಥವಾ ಗ್ಯಾಸ್ಕೆಟ್ ಹಾನಿಗೊಳಗಾಗಿದ್ದರೆ, ಫ್ರೀಜರ್ನಲ್ಲಿ ಐಸ್ ರೂಪುಗೊಳ್ಳುತ್ತದೆ. ಗಾಳಿಯು ಒಳಗೆ ಹೋಗಿ ಪರಿಚಲನೆಗೊಳ್ಳುತ್ತದೆ. ಆದ್ದರಿಂದ ಫ್ರಿಡ್ಜ್ ಬಾಗಿಲು ಅಥವಾ ಗ್ಯಾಸ್ಕೆಟ್ ಹಾನಿಗೊಳಗಾಗಿದ್ದರೆ, ಅದನ್ನು ತಕ್ಷಣ ಬದಲಾಯಿಸಿ. 2. ಫ್ರಿಡ್ಜ್ನಲ್ಲಿರುವ…
ಬೆಂಗಳೂರು : ರಾಜ್ಯದ ವಾಹನ ಸವಾರರಿಗೇ ಮತ್ತೆ ಬಿಗ್ ರಿಲೀಫ್ ಸಿಕ್ಕಿದ್ದು, HSRP ನಂಬರ್ ಪ್ಲೇಟ್ ಅಳವಡಿಕೆಗೆ ಈಗಾಗಲೇ ಹಲವು ಬಾರಿ ಗಡುವು ವಿಸ್ತರಣೆ ಮಾಡಲಾಗಿದ್ದು, ಇದೀಗ ಮಾರ್ಚ್ 31 HSRP ನಂಬರ್ ಪ್ಲೇಟ್ ಅಳವಡಿಕೆಗೆ ಕೊನೆಯ ದಿನವಾಗಿದೆ. ಇನ್ನೂ ತುಂಬಾ ಜನರ ವಾಹನ ಸವಾರರು ತಮ್ಮ ವಾಹನಗಳಿಗೆ ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅನ್ನು ಅಳವಡಿಕೆ ಮಾಡಿಲ್ಲ. ಮತ್ತೆ ಗಡುವು ವಿಸ್ತರಿಸುವಂತೆ ಮನವಿ ಮಾಡಿದ ಹಿನ್ನೆಲೆ ಮಾರ್ಚ್ 31, 2025ರ ವರೆಗೆ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಉಳಿದಂತೆ ದಿನಾಂಕ 17-08-2023ರಲ್ಲಿ ಹೊರಡಿಸಿ ಆದೇಶದಲ್ಲಿ ಬೇರೆ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ತಿಳಿಸಿದೆ. ಇದರ ಮೇಲೂ ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡದಿದ್ದರೆ ಮಾಲೀಕತ್ವದ ಬದಲಾವಣೆ, ವಿಳಾಸ ಬದಲಾವಣೆ, ನಕಲಿ ಆರ್ಸಿ, ವಿಮೆ ಹಾಗೂ ಇನ್ನಿತರ ಕೆಲಸಗಳನ್ನು ಮಾಡಲಾಗುವುದಿಲ್ಲ. ಸಾರಿಗೆ ಇಲಾಖೆ ಹೊರಡಿಸಿರುವ ಈ ಸೂಚನೆಯಿಂದ ಅಧಿಕೃತ ಆಗಿಲ್ಲದ ವಾಹನಗಳು ರಸ್ತೆಯಲ್ಲಿ ಸಂಚರಿಸುವುದನ್ನು ಸುಲಭವಾಗಿ ಪತ್ತೆ ಹಚ್ಚಲು ಸಹಾಯಕ ಆಗಲಿದೆ. 2019ರ ಏಪ್ರಿಲ್…
ಬೆಂಗಳೂರು : ದುಬೈನಿಂದ ಅಕ್ರಮ ಚಿನ್ನ ಸಾಗಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ 64ನೇ ಸಿಸಿಎಚ್ ನ್ಯಾಯಾಲಯದಲ್ಲಿ ಆರೋಪಿ ನಟಿ ರನ್ಯಾರಾವ್ ಅವರು ಸಲ್ಲಿಸಿದ ಜಾಮೀನು ಅರ್ಜಿ ಕುರಿತು ಇಂದು ತೀರ್ಪು ಪ್ರಕಟವಾಗಲಿದೆ. ಮಾರ್ಚ್ 25 ರಂದು ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ವಿಚಾರಣೆ ಆರಂಭದಲ್ಲಿ DRI ಪರ ವಕೀಲ ಮಧು ರಾವ್ ಅವರು ವಾದ ಆರಂಭಿಸಿದರು. ಯಾವುದು ಕಾಗ್ನಿಸಬಲ್ ಯಾವುದು ನಾನ್ ಕಾಗ್ನಿಸಬಲ್ ಎಂದು ಕಸ್ಟಮ್ಸ್ ಕಾಯ್ದೆ 135 ರಲ್ಲಿ ಬಹಳ ಸ್ಪಷ್ಟವಾಗಿ ವಿವರಿಸಲಾಗಿದೆ. ಇದು ಕಾಗ್ನಿಸಬಲ್ ಅಪರಾಧವಾಗಿದೆ ಹಾಗೂ ಜಾಮೀನು ರಹಿತವಾಗಿದೆ. ನಟಿ ರನ್ಯಾ ಚಿನ್ನದ ಜೊತೆಗೆ ದುಬೈನಿಂದ ಆಗಮಿಸಿದ್ದಾರೆ.ಬೆಂಗಳೂರು ಏರ್ಪೋರ್ಟ್ಗೆ ಸಂಜೆ 6:30ಕ್ಕೆ ಲ್ಯಾಂಡ್ ಆಗಿದ್ದಾರೆ. ಈ ವೇಳೆ ಪ್ರೋಟೋಕಾಲ್ ಅಧಿಕಾರಿ ಅಲ್ಲಿಗೆ ಹೋಗಿದ್ದಾರೆ. ಅಂದರೆ ರಮ್ಯಾ ರಾನ್ ಗ್ರೀನ್ ಚಾನಲ್ ಮೂಲಕ ಬರುತ್ತಿದ್ದಾರೆ ಎಂದು ಅರ್ಥ ಎಂದು ವಾದಿಸಿದರು. ಕಸ್ಟಮ್ಸ್ ಏರಿಯಾ, ಇಮ್ಮಿಗ್ರೇಶನ್ ಏರಿಯಾ ಎಲ್ಲಾ ಆದಮೇಲೆ DRI ಅಧಿಕಾರಿಗಳು ನಟಿ ರನ್ಯಾ ರಾವ್ ಳನ್ನು…
Rain alert Karnataka : ಬೆಂಗಳೂರು ಸೇರಿ ರಾಜ್ಯದ 11 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ.!
ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ 11 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಎಲ್ಲಾ ಜಿಲ್ಲೆಗಳು ಸೇರಿದಂತೆ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಸೇರಿ ರಾಜ್ಯದ 11 ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಒಣಹವೆ ಇರಲಿದೆ.
ಬೆಂಗಳೂರು : ಬಿಗ್ ಬಾಸ್ ಮಾಜಿ ಸ್ಪರ್ಧಿ ರಕ್ಷಕ್ ಬುಲೆಟ್ ಅವರು ನಾಡದೇವಿ ಚಾಮುಂಡೇಶ್ವರಿಗೆ ಅವಹೇಳನ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಇದೀಗ ರಕ್ಷಕ್ ಬುಲೆಟ್ ವಿರುದ್ಧ ದೂರು ದಾಖಲಾಗಿದೆ. ಹಿಂದೂ ಸಂಘಟನೆಗಳು ರಕ್ಷಕ್ ಬುಲೆಟ್ ವಿರುದ್ಧ ದೂರು ನೀಡಿವೆ. ಖಾಸಗಿ ವಾಹಿನಿಯ ಕಾರ್ಯಕ್ರಮವೊಂದರಲ್ಲಿ ರಕ್ಷಕ್ ಹುಡುಗಿಯನ್ನು ಹೊಗಳುವ ಭರದಲ್ಲಿ ನಾಡದೇವಿ ಚಾಮುಂಡೇಶ್ವರಿಗೆ ಅವಹೇಳನಕಾರಿಯಾಗಿ ಮಾತನಾಡಿದ್ದು ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿದೆ. ರಕ್ಷಕ್ ಬುಲೆಟ್ ವಿರುದ್ಧ ಹಿಂದೂ ಕಾರ್ಯಕರ್ತ ಮಹೇಶ್ ಎಂಬುವವರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ಅವರಿಗೆ ದೂರು ಸಲ್ಲಿಸಿದ್ದಾರೆ. ಇತ್ತೀಚೆಗೆ ಖಾಸಗಿ ವಾಹಿನಿ ರಿಯಾಲಿಟಿ ಶೋನಲ್ಲಿ ರಕ್ಷಕ್ ಬುಲೆಟ್ ಅವರು ಸಹಸ್ಪರ್ಧಿ, ಪಕ್ಕದಲ್ಲಿದ್ದ ಹುಡುಗಿಯನ್ನು ಹೊಗಳುವ ಭರದಲ್ಲಿ ಯಡವಟ್ಟು ಮಾಡಿಕೊಂಡಿದ್ದಾರೆ. ರಕ್ಷಕ್ ಬುಲೆಟ್ ಅವರ ಅವಹೇಳನ ವಿಡಿಯೋ ವೈರಲ್ ಆಗಿದ್ದು, ಭಾರೀ ಟೀಕೆ ವ್ಯಕ್ತವಾಗಿದೆ. ರಕ್ಷಕ್ ಬುಲೆಟ್ ಹೇಳಿದ್ದೇನು? ಭರ್ಜರಿ ಬ್ಯಾಚುಲರ್ಸ್ ವೇದಿಕೆಯಲ್ಲಿ ರಕ್ಷಕ್ ಬುಲೆಟ್ ಅವರು ದರ್ಶನ್ ಹಾಗೂ ರಚಿತಾ ರಾಮ್ ಅಭಿನಯದ ಬುಲ್ ಬುಲ್ ಸಿನಿಮಾದ ದೃಶ್ಯವನ್ನು…
ಬೀದರ್ : ಮೊಬೈಲ್ ಜಾಸ್ತಿ ನೋಡಬೇಡ ಎಂದು ಪೋಷಕರು ಬುದ್ದಿವಾದ ಹೇಳಿದ್ದಕ್ಕೆ ಮನನೊಂದು 9 ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೀದರ್ ನಲ್ಲಿ ನಡೆದಿದೆ. ಬೀದರ್ ಜಿಲ್ಲೆಯ ಕಮಲಾನಗರ ತಾಲೂಕಿನ ಡಿಗ್ಗಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ವಿಪರೀತವಾಗಿ ಮೊಬೈಲ್ ನೋಡುವ ಗೀಳು ಬೆಳೆಸಿಕೊಂಡಿದ್ದ ವಿದ್ಯಾರ್ಥಿನಿಗೆ ಪೋಷಕರು ಜಾಸ್ತಿ ಮೊಬೈಲ್ ನೋಡಬೇಡಾ. ಓದಿನ ಕಡೆ ಗಮನ ಕೊಡು ಎಂದು ಬುದ್ದಿವಾದ ಹೇಳಿದ್ದಾರೆ. ಇದರಿಂದ ಮನನೊಂದು ಬಾಲಕಿ ಸೋನಿ (15) ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸದ್ಯ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.