Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ : ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್, UPSC ನಾಗರಿಕ ಸೇವೆಗಳ ಮುಖ್ಯ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದೆ. ಇದರೊಂದಿಗೆ, ಆಯೋಗದ ಅಧಿಕೃತ ವೆಬ್ಸೈಟ್ upsc.gov.in ನಲ್ಲಿ ಫಲಿತಾಂಶದ ಪಿಡಿಎಫ್ ಫೈಲ್ ಲಭ್ಯವಾಗುವಂತೆ ಮಾಡಲಾಗಿದೆ. ಇದರಲ್ಲಿ ಮುಖ್ಯ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳ ರೋಲ್ ಸಂಖ್ಯೆಗಳನ್ನು ಹಂಚಿಕೊಳ್ಳಲಾಗಿದೆ. ಯಶಸ್ವಿ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬೇಕಾಗುತ್ತದೆ. ಫಲಿತಾಂಶಕ್ಕಾಗಿ ಹೊರಡಿಸಲಾದ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ಸಂದರ್ಶನದ ದಿನಾಂಕಗಳನ್ನು ಸಮಯಕ್ಕೆ ಬಿಡುಗಡೆ ಮಾಡಲಾಗುತ್ತದೆ. ಸಂದರ್ಶನಗಳು ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ಕಛೇರಿ, ಧೋಲ್ಪುರ್ ಹೌಸ್, ಷಹಜಹಾನ್ ರಸ್ತೆ, ನವದೆಹಲಿ-110069 ನಲ್ಲಿ ನಡೆಯಲಿದೆ. ಈ ರೀತಿಯ ಫಲಿತಾಂಶಗಳನ್ನು ಪರಿಶೀಲಿಸಿ UPSC ಮುಖ್ಯ ಪರೀಕ್ಷೆಯ ಫಲಿತಾಂಶವನ್ನು ಪರಿಶೀಲಿಸಲು, ನೀವು ಮೊದಲು ಅಧಿಕೃತ ವೆಬ್ಸೈಟ್ upsc.gov.in ಗೆ ಹೋಗಬೇಕು. ಇದರ ನಂತರ, ನೀವು ಮುಖಪುಟದಲ್ಲಿ ಲಭ್ಯವಿರುವ ಫಲಿತಾಂಶಕ್ಕೆ ಸಂಬಂಧಿಸಿದ PDF ಲಿಂಕ್ ಅನ್ನು ಕ್ಲಿಕ್ ಮಾಡಬೇಕಾಗುತ್ತದೆ. ಈಗ ಫಲಿತಾಂಶವು PDF ಸ್ವರೂಪದಲ್ಲಿ ಪರದೆಯ ಮೇಲೆ ತೆರೆಯುತ್ತದೆ, ಅಲ್ಲಿ ನೀವು ಅದನ್ನು ಡೌನ್ಲೋಡ್ ಮಾಡಬಹುದು. ಇದರ…
ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಎಸ್.ಎಂ. ಕೃಷ್ಣ ವಿಧಿವಶರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಅವರು ನಿಧನರಾಗಿದ್ದಾರೆ. ಕರ್ನಾಟಕದ ಹಿರಿಯ ರಾಜಕಾರಣಿಗಳಲ್ಲೊಬ್ಬರು. 1999 ರಿಂದ 2004 ರವರೆಗೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾಗಿದ್ದರು. ಮಹಾರಾಷ್ಟ್ರ ರಾಜ್ಯದ ಮಾಜಿ ರಾಜ್ಯಪಾಲರಾದ ಇವರು, ಕೇಂದ್ರ ವಿದೇಶಾಂಗ ಸಚಿವರಾಗಿಯೂ ಸಹ ಕಾರ್ಯ ನಿರ್ವಹಿಸಿದ್ದಾರೆ. ವಿದ್ಯಾಭ್ಯಾಸದ ದೃಷ್ಟಿಯಿಂದ, ಕರ್ನಾಟಕದ ಅತ್ಯಂತ ಹೆಚ್ಚು ಸುಶಿಕ್ಷಿತ ಮುಖ್ಯಮಂತ್ರಿಗಳಲ್ಲಿ ಕೃಷ್ಣ ಒಬ್ಬರು. ಇವರು ಬಹುಕಾಲ ಕಾಂಗ್ರೆಸ್ ಪಕ್ಷದ ಸದಸ್ಯರಾಗಿದ್ದರು, ಬದಲಾದ ರಾಜಕೀಯ ಸನ್ನಿವೇಶಗಳ ಕಾರಣ ಮಾರ್ಚ್2017 ರಂದು ಭಾರತೀಯ ಜನತಾ ಪಕ್ಷದ ಸದಸ್ಯತ್ವವನ್ನು ಪದೆದರು. ಅವರು 1999 ರಿಂದ 2004ರವರೆಗೆ ಕರ್ನಾಟಕದ 16 ನೇ ಮುಖ್ಯಮಂತ್ರಿಯಾಗಿದ್ದರು ಮತ್ತು 2004 ರಿಂದ 2008ರವರೆಗೆ ಮಹಾರಾಷ್ಟ್ರದ ೧೯ ನೇ ರಾಜ್ಯಪಾಲರಾಗಿದ್ದರು . ಎಸ್.ಎಂ.ಕೃಷ್ಣ ಅವರು ಡಿಸೆಂಬರ್ ೧೯೮೯ ರಿಂದ ಜನವರಿ ೧೯೯೩ ರವರೆಗೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿ ಸೇವೆ…
ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಎಸ್.ಎಂ. ಕೃಷ್ಣ ವಿಧಿವಶರಾಗಿದ್ದಾರೆ ಸದಾಶಿವನಗರದ ತಮ್ಮ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಅವರು ನಿಧನರಾಗಿದ್ದಾರೆ. ಕರ್ನಾಟಕದ ಹಿರಿಯ ರಾಜಕಾರಣಿಗಳಲ್ಲೊಬ್ಬರು. 1999 ರಿಂದ 2004 ರವರೆಗೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾಗಿದ್ದರು. ಮಹಾರಾಷ್ಟ್ರ ರಾಜ್ಯದ ಮಾಜಿ ರಾಜ್ಯಪಾಲರಾದ ಇವರು, ಕೇಂದ್ರ ವಿದೇಶಾಂಗ ಸಚಿವರಾಗಿಯೂ ಸಹ ಕಾರ್ಯ ನಿರ್ವಹಿಸಿದ್ದಾರೆ. ವಿದ್ಯಾಭ್ಯಾಸದ ದೃಷ್ಟಿಯಿಂದ, ಕರ್ನಾಟಕದ ಅತ್ಯಂತ ಹೆಚ್ಚು ಸುಶಿಕ್ಷಿತ ಮುಖ್ಯಮಂತ್ರಿಗಳಲ್ಲಿ ಕೃಷ್ಣ ಒಬ್ಬರು. ಇವರು ಬಹುಕಾಲ ಕಾಂಗ್ರೆಸ್ ಪಕ್ಷದ ಸದಸ್ಯರಾಗಿದ್ದರು, ಬದಲಾದ ರಾಜಕೀಯ ಸನ್ನಿವೇಶಗಳ ಕಾರಣ ಮಾರ್ಚ್ ೨೦೧೭ ರಂದು ಭಾರತೀಯ ಜನತಾ ಪಕ್ಷದ ಸದಸ್ಯತ್ವವನ್ನು ಪದೆದರು. ಅವರು ೧೯೯೯ ರಿಂದ ೨೦೦೪ ರವರೆಗೆ ಕರ್ನಾಟಕದ ೧೬ ನೇ ಮುಖ್ಯಮಂತ್ರಿಯಾಗಿದ್ದರು ಮತ್ತು ೨೦೦೪ ರಿಂದ ೨೦೦೮ ರವರೆಗೆ ಮಹಾರಾಷ್ಟ್ರದ ೧೯ ನೇ ರಾಜ್ಯಪಾಲರಾಗಿದ್ದರು . ಎಸ್.ಎಂ.ಕೃಷ್ಣ ಅವರು ಡಿಸೆಂಬರ್ ೧೯೮೯ ರಿಂದ…
ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಎಸ್.ಎಂ. ಕೃಷ್ಣ ವಿಧಿವಶರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಅವರು ನಿಧನರಾಗಿದ್ದಾರೆ. ಕರ್ನಾಟಕದ ಹಿರಿಯ ರಾಜಕಾರಣಿಗಳಲ್ಲೊಬ್ಬರು. 1999 ರಿಂದ 2004 ರವರೆಗೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾಗಿದ್ದರು. ಮಹಾರಾಷ್ಟ್ರ ರಾಜ್ಯದ ಮಾಜಿ ರಾಜ್ಯಪಾಲರಾದ ಇವರು, ಕೇಂದ್ರ ವಿದೇಶಾಂಗ ಸಚಿವರಾಗಿಯೂ ಸಹ ಕಾರ್ಯ ನಿರ್ವಹಿಸಿದ್ದಾರೆ. ವಿದ್ಯಾಭ್ಯಾಸದ ದೃಷ್ಟಿಯಿಂದ, ಕರ್ನಾಟಕದ ಅತ್ಯಂತ ಹೆಚ್ಚು ಸುಶಿಕ್ಷಿತ ಮುಖ್ಯಮಂತ್ರಿಗಳಲ್ಲಿ ಕೃಷ್ಣ ಒಬ್ಬರು. ಇವರು ಬಹುಕಾಲ ಕಾಂಗ್ರೆಸ್ ಪಕ್ಷದ ಸದಸ್ಯರಾಗಿದ್ದರು, ಬದಲಾದ ರಾಜಕೀಯ ಸನ್ನಿವೇಶಗಳ ಕಾರಣ ಮಾರ್ಚ್ ೨೦೧೭ ರಂದು ಭಾರತೀಯ ಜನತಾ ಪಕ್ಷದ ಸದಸ್ಯತ್ವವನ್ನು ಪದೆದರು. ಅವರು ೧೯೯೯ ರಿಂದ ೨೦೦೪ ರವರೆಗೆ ಕರ್ನಾಟಕದ ೧೬ ನೇ ಮುಖ್ಯಮಂತ್ರಿಯಾಗಿದ್ದರು ಮತ್ತು ೨೦೦೪ ರಿಂದ ೨೦೦೮ ರವರೆಗೆ ಮಹಾರಾಷ್ಟ್ರದ ೧೯ ನೇ ರಾಜ್ಯಪಾಲರಾಗಿದ್ದರು . ಎಸ್.ಎಂ.ಕೃಷ್ಣ ಅವರು ಡಿಸೆಂಬರ್ ೧೯೮೯ ರಿಂದ ಜನವರಿ ೧೯೯೩ ರವರೆಗೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿ ಸೇವೆ ಸಲ್ಲಿಸಿದ್ದರು.[೧]…
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಅನಾರೋಗ್ಯದ ಕಾರಣ ಜಾಮೀನು ಪಡೆದಿರುವಂತ ನಟ ದರ್ಶನ್ ಅವರಿಗೆ, ಈಗ ಸರ್ಜರಿ ಮಾಡೋದಕ್ಕೆ ದಿನಾಂಕ ನಿಗದಿ ಪಡಿಸಲಾಗಿದೆ. ನಟ ದರ್ಶನ್ ಅವರಿಗೆ ಡಿಸೆಂಬರ್.11ರ ನಾಳೆ ವೈದ್ಯರು ಸರ್ಜರಿ ಮಾಡಲಿದ್ದಾರೆ ಎಂಬುದಾಗಿ ಅವರ ಪರ ವಕೀಲರು ಹೈಕೋರ್ಟ್ ಗೆ ಮಾಹಿತಿ ನೀಡಿದ್ದಾರೆ. ಟ ದರ್ಶನ್ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನಲ್ಲಿ ನಡೆಸಲಾಯಿತು. ಹಿರಿಯ ವಕೀಲ ಸಿವಿ ನಾಗೇಶ್ ಅವರು ದರ್ಶನ್ ಪರ ವಾದ ಮಂಡಿಸಿದರು. ನಟ ದರ್ಶನ್ ಅವರಿಗೆ ಡಿಸೆಂಬರ್.11ರಂದು ಸರ್ಜರಿ ಮಾಡಲಾಗುತ್ತದೆ ಎಂಬುದೈಗಿ ಹೈಕೋರ್ಟ್ ಗೆ ಮಾಹಿತಿ ನೀಡಿದರು. ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಜೈಲು ಸೇರಿದ್ದ ನಟ ದರ್ಶನ್ ಗೆ ಬೆನ್ನುನೋವು ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಹೈಕೋರ್ಟ್ 6 ವಾರಗಳ ಮಧ್ಯಂತರ ಜಾಮೀನು ನೀಡಿತ್ತು. ವೈದ್ಯರು ಸರ್ಜರಿಗೆ ಸೂಚಿಸಿದ್ದರೂ ದರ್ಶನ್ ಸರ್ಜರಿಗೆ ಒಳಗಾಗದೇ ವಿಳಂಬ ಮಾಡುತ್ತಿದ್ದರು ಎನ್ನಲಾಗಿದೆ. ಈ ನಡುವೆ ಜಾಮೀನು ಅರ್ಜಿ ವಿಚಾರಣೆ ವೇಳೆ ದರ್ಶನ್ ಸರ್ಜರಿಗೆ ವಿಳಂಬ ಮಾಡುತ್ತಿರುವ ಬಗ್ಗೆ…
ಬೆಳಗಾವಿ : ಅನರ್ಹರು ಬಿಪಿಎಲ್ ಕಾರ್ಡಗಳನ್ನು ಬಳಸುತ್ತಾರೆ ಎನ್ನುವ ದೂರನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಗ್ರಾಮ ಪಂಚಾಯತಿ ಮಟ್ಟದಲ್ಲಿ ಪರಿಪಕ್ವವಾದ ದತ್ತಾಂಶ ಸಂಗ್ರಹಿಸಿ ಅರ್ಹರಿಗೆ ಬಿಪಿಎಲ್ ಪಡಿತರ ಕಾರ್ಡ್ ವಿತರಣೆಗೆ ಕ್ರಮ ವಹಿಸಲಾಗುವುದು ಎಂದು ಆಹಾರ ಸಚಿವರಾದ ಕೆ.ಎಚ್.ಮುನಿಯಪ್ಪ ಅವರು ಹೇಳಿದರು. ವಿಧಾನ ಪರಿಷತ್ನಲ್ಲಿ ಡಿಸೆಂಬರ್ 09 ರಂದು ಪರಿಷತ್ ಸದಸ್ಯರಾದ ಕೆ ಎ ತಿಪ್ಪೇಸ್ವಾಮಿ ಅವರ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಹಾಗೂ ವಿರೋದ ಪಕ್ಷದ ಕೆಲ ಸದಸ್ಯರು ಬಿಪಿಎಲ್ ಪಡಿತರ ಕಾರ್ಡ್ ರದ್ದು ಕುರಿತು ಕೇಳಿದ ಪ್ರಶ್ನೆಗೆ ಸಚಿವರು ಉತ್ತರಿಸಿದರು. ರಾಜ್ಯದಲ್ಲಿ ಸುಮಾರು ಶೇಕಡ 65 ರಿಂದ 75ರಷ್ಟು ಜನಸಂಖ್ಯೆ ಬಡತನ ರೇಖೆಗಿಂತ ಕೆಳಗಿದ್ದಾರೆ ಎನ್ನುವ ಮಾಹಿತಿ ಇದೆ. ಬಡತನದಲ್ಲಿ ಇರುವ ಜನತೆಗೆ ಅನ್ಯಾಯ ಮಾಡಲು ಬಿಡುವುದಿಲ್ಲ ಎಂದು ಭರವಸೆ ನೀಡಿದ ಸಚಿವರು ಇನ್ನಷ್ಟು ಸಮಯ ಪಡೆದುಕೊಂಡು ಬಿಪಿಎಲ್ ಪಡಿತರದಾರರಿಗೆ ತೊಂದರೆಯಾಗದ ಹಾಗೆ ಎಪಿಎಲ್ ಕಾರ್ಡ್ಗೆ ಅರ್ಹ ಇರುವವರನ್ನು ಬಿಪಿಎಲ್ನಿಂದ ಬೇರ್ಪಡಿಸಲಾಗುವುದು ಎಂದು ತಿಳಿಸಿದರು. ಪ್ರಸ್ತುತ ಈಗಿರುವ ಬಿಪಿಎಲ್ ಕಾರ್ಡ್ ಗಳಲ್ಲಿ…
ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತ ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಬಾಣಸವಾಡಿ ಸ್ಟೇಷನ್ ನಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ: 10.12.2024 (ಮಂಗಳವಾರ) ರಂದು ಬೆಳಗ್ಗೆ 10:30 ರಿಂದ ಮಧ್ಯಾಹ್ನ 05:30 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಇಂದು ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ “ಹೊರಮಾವು ಪಿ&ಟಿ ಲೇಔಟ್, ನಿಸರ್ಗ ಕಾಲೋನಿ, ನಂದನಂ ಕಾಲೋನಿ, ಆರಶಿರ್ವಾದ್ ಕಾಲೋನಿ, ಜ್ಯೋತಿನಗರ, ಗರ, ಬಾಲಾಜಿ ಲೇಔಟ್, ಚಿನ್ನಸ್ವಾಮಪ್ಪ ಲೇಔಟ್, ಕೋಕೋನಟ್ ಗ್ರೋವ್, ದೇವಮತ ಶಾಳೆ, ಅಮರ್ಗೀಜೆನ್ಸಿ, ವಿಜಯ ಬ್ಯಾಂಕ್ ಕಾಲೋನಿ, ಹೆಚ್.ಆರ್.ಬಿ.ಆರ್. ಲೇಔಟ್, 1ನೇ ಬ್ಲಾಕ್, 2ನೇ ಬ್ಲಾಕ್, 3ನೇ ಬ್ಲಾಕ್, ಕಮ್ಮನಹಳ್ಳಿ ಮುಖ್ಯರಸ್ತೆ, ಕಲ್ಯಾಣ ನಗರ, ಬಿಡಬ್ಲ್ಯೂ ಎಸ್.ಎಸ್.ಬಿ. ವಾಟರ್ ಟ್ಯಾಂಕ್, ಹೆಣ್ಣೂರು ಗ್ರಾಮ, ಚಳ್ಳಕೆರೆ, ಮೇಘನ ಪಾಳ್ಯ, ಗೆದ್ದಲಹಳ್ಳಿ, ಕೊತ್ತನೂರು, ವಡ್ಡರ ಪಾಳ್ಯ, ಜಾನಕೀರಾಮ್ ಲೇಔಟ್, ಬಿ.ಡಿ.ಎಸ್. ಗಾರ್ಡನ್, ಸತ್ಯಎನ್ ಕ್ಲೇವ್, ಪ್ರಕೃತಿ ಲೇಔಟ್ ಹೊಯ್ಸಸಳನಗರ, ಬೃಂದಾವನ ಲೇಔಟ್, ವಿನಾಯಕ ಲೇಔಟ್, ವಿವೇಕಾನಂದ ಲೇಔಟ್, ಮಂಜುನಾಥ್ ನಗರ ರಸ್ತೆ, ಎನ್.ಆರ್.ಐ…
ದಾವಣಗೆರೆ : ಏಕಮುಖ ರಸ್ತೆ, ಸಿಗ್ನಲ್ ಜಂಪ್, ಪಾರ್ಕಿಂಗ್ ಇಲ್ಲದ ಜಾಗದಲ್ಲಿ ಪಾರ್ಕಿಂಗ್ ಮಾಡಿದ ವಾಹನ ಸವಾರರಿಗೆ ದಂಡದ ಜೊತೆಗೆ ಕಠಿಣ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು. ಸೋಮವಾರ(ಡಿ.9) ರಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಗರದಲ್ಲಿ ಪಾರ್ಕಿಂಗ್ ವ್ಯವಸ್ಥೆ, ಘೋಷಿತ ವ್ಯಾಪಾರ ಪ್ರದೇಶ ಹಾಗೂ ನಿರ್ಭಂದಿತ ವ್ಯಾಪಾರ ಪ್ರದೇಶ, ಮತ್ತು ವಾಹನ ಸಂಚಾರ ನಿಯಮಗಳ ಪಾಲನೆ ಕುರಿತು ಆಯೋಜಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತಾನಾಡಿದರು. ಸರ್ಕಾರ ಡೀಸೆಲ್ ಮಾದರಿ ಹಾಗೂ ಇತರೆ ಮಾದರಿಯ ವಾಹನಗಳ ಎಫ್.ಸಿ ಮುಗಿದರೂ ವಾಹನಗಳು ವಿಲೇವಾರಿಗೆ ಬರುತ್ತಿಲ್ಲ ಏಕೆ? ಪಾರ್ಕಿಂಗ್ನಲ್ಲಿ ನಿಲ್ಲದೇ ಇರುವ ಕನಿಷ್ಠ 100 ವಾಹನಗಳನ್ನಾದರೂ ತಡೆದು ದಂಡ ವಿಧಿಸಿ, ಗಾಡಿಗಳನ್ನು ಜಾಪ್ತಿ ಮಾಡಿ ಎಂದು ಆರ್ ಟಿ ಓ ಅಧಿಕಾರಿಗಳಿಗೆ ಸೂಚಿಸಿದರು. ಟ್ರಾಕ್ಟರ್ ಸಿಟಿ ಒಳಗಡೆ ಬರುತ್ತಿವೆ, ಅಂತಹ ಟ್ರ್ಯಾಕ್ಟರ್ ಮೇಲೆ ಕೂಡಲೇ ಕೇಸ್ ಮಾಡಿ, ಲಾರಿಗಳು ನಗರದ ಒಳಗಡೆ ಪ್ರವೇಶಸಲು ಸಮಯ ನಿಗಧಿಮಾಡಬೇಕು. ಸಿ.ಜಿ ಆಸ್ಪತ್ರೆಯ…
ಬೆಳಗಾವಿ : ಯುವನಿಧಿ ಫಲಾನುಭವಿಗಳು ಪ್ರತಿ ತಿಂಗಳು ಡಿಕ್ಲರೇಶನ್ ನೀಡುವುದು ಕಡ್ಡಾಯವಾಗಿದ್ದು, ತಪ್ಪದೇ ಡಿಕ್ಲರೇಶನ್ ಮಾಡುವಂತೆ ಸಚಿವ ಡಾ.ಶರಣಪ್ರಕಾಶ ಪಾಟೀಲ್ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಸಚಿವರು, ಯುವನಿಧಿ ಯೋಜನೆ ಅಡಿ ನೋಂದಾಯಿಸಿದ ಅರ್ಹ ಪದವಿ, ಸ್ನಾತಕೋತ್ತರ ಪದವಿ ಹಾಗೂ ಡಿಪ್ಲೊಮಾ ಅಭ್ಯರ್ಥಿಗಳಿಗೆ ಈ ಯೋಜನೆ ತಲುಪುತ್ತಿದೆ. ಯುವನಿಧಿ ಯೋಜನೆ ಅಡಿಯಲ್ಲಿ ನೋಂದಾಯಿಸಿದ ಅಭ್ಯರ್ಥಿಗಳು ಪ್ರತಿ ತಿಂಗಳು ಡಿಕ್ಲರೇಶನ್ ನೀಡುವುದು ಕಡ್ಡಾಯವಾಗಿದ್ದು, ಇದನ್ನು ನೀಡದೆ ಇದ್ದಲ್ಲಿ ಭತ್ಯೆ ಸ್ಥಗಿತಗೊಳ್ಳಲಿದೆ ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿ ಈವರೆಗೆ 1,81,699 ಪದವೀಧರರು ಯುವನಿಧಿ ಯೋಜನೆಯಡಿ ನೋಂದಣಿ ಮಾಡಿಕೊಂಡಿದ್ದು, ಅವರಲ್ಲಿ ಈವರೆಗೆ 1,45,978 ಪದವೀಧರರಿಗೆ ನೇರ ನಗದು ವರ್ಗಾವಣೆ ಮಾಡುವ ಮೂಲಕ ನಿರುದ್ಯೋಗ ಭತ್ಯೆ ಪಾವತಿಸಲಾಗಿದೆ ಎಂದು ಬೆಳಗಾವಿಯ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ಮಾಹಿತಿ ನೀಡಿದ್ದಾರೆ.
ಬೆಳಗಾವಿ : ರಾಜ್ಯದಲ್ಲಿ ಈವರೆಗೆ 1,81,699 ಪದವೀಧರರು ಯುವನಿಧಿ ಯೋಜನೆಯಡಿ ನೋಂದಣಿ ಮಾಡಿಕೊಂಡಿದ್ದು, ಅವರಲ್ಲಿ ಈವರೆಗೆ 1,45,978 ಪದವೀಧರರಿಗೆ ನೇರ ನಗದು ವರ್ಗಾವಣೆ ಮಾಡುವ ಮೂಲಕ ನಿರುದ್ಯೋಗ ಭತ್ಯೆ ಪಾವತಿಸಲಾಗಿದೆ ಎಂದು ಬೆಳಗಾವಿಯ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ತಿಳಿಸಿದರು. ಯುವನಿಧಿ ಯೋಜನೆ ಅಡಿ ನೋಂದಾಯಿಸಿದ ಅರ್ಹ ಪದವಿ, ಸ್ನಾತಕೋತ್ತರ ಪದವಿ ಹಾಗೂ ಡಿಪ್ಲೊಮಾ ಅಭ್ಯರ್ಥಿಗಳಿಗೆ ಈ ಯೋಜನೆ ತಲುಪುತ್ತಿದೆ. ಯುವನಿಧಿ ಯೋಜನೆ ಅಡಿಯಲ್ಲಿ ನೋಂದಾಯಿಸಿದ ಅಭ್ಯರ್ಥಿಗಳು ಪ್ರತಿ ತಿಂಗಳು ಡಿಕ್ಲರೇಶನ್ ನೀಡುವುದು ಕಡ್ಡಾಯವಾಗಿದ್ದು, ಇದನ್ನು ನೀಡದೆ ಇದ್ದಲ್ಲಿ ಭತ್ಯೆ ಸ್ಥಗಿತಗೊಳ್ಳಲಿದೆ ಎಂದು ಮಾಹಿತಿ ನೀಡಿದರು.











