Subscribe to Updates
Get the latest creative news from FooBar about art, design and business.
Author: kannadanewsnow57
ತೆಲಂಗಾಣ : ಬಿಸಿನೀರಿಗಾಗಿ ವಾಟರ್ ಹೀಟರ್ ಬಳಸುವವರೇ ಎಚ್ಚರ,ವಾಟರ್ ಹೀಟರ್ ನಿಂದ ವಿದ್ಯುತ್ ಪ್ರವಹಿಸಿ ನವವಧು ಮೃತಪಟ್ಟ ಘಟನೆ ತೆಲಂಗಾಣದ ಮಂಚೇರಿಯಲ್ ಜಿಲ್ಲೆಯಲ್ಲಿ ಘಟನೆ ನಡೆದಿದೆ. ಮದುವೆಯಾಗಿ ಗಂಡನ ಮನೆಯೊಳಗೆ ಕಾಲಿಟ್ಟ 5 ದಿನದಲ್ಲಿ ಈ ಘಟನೆ ನಡೆದಿದೆ. ವಾಟರ್ ಹೀಟರ್ ನಿಂದ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಮಂಚೇರಿಯಲ್ ಜಿಲ್ಲೆಯ ನೆನ್ನೆಲಾ ಮಂಡಲದ ನಿವಾಸಿಗಳಾದ ಸಿದ್ದು ಮತ್ತು ಜಂಬಿ ಸ್ವಪ್ನಾ ಪರಸ್ಪರ ಪ್ರೀತಿಸುತ್ತಿದ್ದರು, ಕುಟುಂಬ ಸದಸ್ಯರು ಮತ್ತು ಪೋಷಕರು ಮದುವೆಗೆ ಒಪ್ಪದ ಹಿನ್ನೆಲೆ ದಂಪತಿಗಳು ಐದು ದಿನಗಳ ಹಿಂದೆ ಬೆಲ್ಲಂಪಲ್ಲಿಯಲ್ಲಿ ಪ್ರೇಮ ವಿವಾಹವಾಗಿದ್ದರು. ಅತ್ತೆಯ ಮನೆಗೆ ಕಾಲಿಟ್ಟ ಸ್ವಪ್ನಾಗೆ ಸಿದ್ದು ಪೋಷಕರು ಭವ್ಯ ಸ್ವಾಗತ ನೀಡಿದರು. ಆದರೆ ನಂತರ ಸ್ವಪ್ನಾ ಸ್ನಾನ ಮಾಡುವಾಗ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಹೀಟರ್ ನೀರಿನಿಂದ ಸ್ನಾನ ಮಾಡುವ ಅನಾನುಕೂಲಗಳು ಎಲೆಕ್ಟ್ರಿಕ್ ಹೀಟರ್ ಗಳಿಂದಾಗಿ ಬೆಂಕಿ ಅಪಘಾತಗಳ ಸಾಧ್ಯತೆಗಳು ತುಂಬಾ ಹೆಚ್ಚು. ನೀರಿನಲ್ಲಿ ಸರಿಯಾಗಿ ಇರಿಸಿ ಸ್ವಿಚ್ ಆನ್ ಮಾಡದಿದ್ದರೆ, ಅದು ಶಾಟ್…
ನವದೆಹಲಿ : ಪಶ್ಚಿಮ ಬಂಗಾಳದ ಮುರ್ಷಿದಾಬಾದ್ನಲ್ಲಿ ಬಾಂಬ್ ತಯಾರಿಸುವಾಗ ಸ್ಫೋಟಗೊಂಡಿದೆ. ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಸಾಗರಪಾರ ಪೊಲೀಸ್ ಠಾಣೆಯ ಖಯರ್ತಲಾ ಪ್ರದೇಶದಲ್ಲಿ ಬಾಂಬ್ ಸ್ಫೋಟಗೊಂಡಿದೆ. ಮಾಮುನ್ ಮೊಲ್ಲಾ ಎಂಬುವವರ ಮನೆಯಲ್ಲಿ ಬಾಂಬ್ಗಳನ್ನು ತಯಾರಿಸಲಾಗುತ್ತಿತ್ತು. ಮೃತರನ್ನು ಮಾಮುನ್ ಮೊಲ್ಲಾ, ಸಕಿರುಲ್ ಸರ್ಕಾರ್ ಮತ್ತು ಮುಸ್ತಕೀನ್ ಸೇಖ್ ಎಂದು ಗುರುತಿಸಲಾಗಿದೆ. ಮುಸ್ತಕಿನ್ ಸೇಖ್ ಮಹತಾಬ್ ಕಾಲೋನಿ ಮತ್ತು ಸಕಿರುಲ್ ಸರ್ಕಾರ್ ಖಯರ್ತಲಾ ಪ್ರದೇಶದ ನಿವಾಸಿ. ಅಪಘಾತದ ವೇಳೆ ಮೂವರು ಯುವಕರು ರಾತ್ರಿಯ ಕತ್ತಲಲ್ಲಿ ಅಡಗಿಕೊಂಡು ಬಾಂಬ್ ತಯಾರಿಸುತ್ತಿದ್ದರು. ಸ್ಫೋಟವು ಎಷ್ಟು ಶಕ್ತಿಯುತವಾಗಿತ್ತು ಎಂದರೆ ಅದು ಸುತ್ತಮುತ್ತಲಿನ ಜನರಲ್ಲಿ ಭಯಭೀತರಾದರು. ಅವರು ತಮ್ಮ ಮನೆಗಳಿಂದ ಹೊರಬಂದು ಮಾಮುನ್ನಲ್ಲಿನ ಮನೆಗೆ ಬೆಂಕಿ ಬಿದ್ದಿರುವುದನ್ನು ನೋಡಿ ಪೊಲೀಸರಿಗೆ ಕರೆ ಮಾಡಿದರು. ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ ಮೃತದೇಹಗಳನ್ನು ವಶಕ್ಕೆ ಪಡೆದಿದ್ದಾರೆ. ಇದೀಗ ಆ ಪ್ರದೇಶದಲ್ಲಿ ಭಾರೀ ಪೊಲೀಸ್ ಪಡೆ ನಿಯೋಜಿಸಲಾಗಿದ್ದು, ಬಾಂಬ್ಗಳನ್ನು ಏಕೆ ತಯಾರಿಸಲಾಗಿದೆ ಮತ್ತು ಅವುಗಳನ್ನು ಎಲ್ಲಿ ಬಳಸಲಾಗಿದೆ ಎಂಬ ಬಗ್ಗೆ ಪೊಲೀಸರು…
ಬೆಂಗಳೂರು : ಬೆಂಗಳೂರಿನಲ್ಲಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಯುವಕನೊಬ್ಬ ನಾಪತ್ತೆಯಾಗಿದ್ದು, ಆರೋಪಿ ಯುವಕನ ವಿರುದ್ಧ ದೂರು ದಾಖಲಾಗಿದೆ. ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಆಂಧ್ರ ಪ್ರದೇಶದ ಕಡಪ ಮೂಲದ ಯುವಕ ಕ್ರೆಡಿಟ್ ಕಾರ್ಡ್ ಮಾಡಿಸಲು ಬ್ಯಾಂಕ್ ವೊಂದಕ್ಕೆ ಹೋಗಿದ್ದ ವೇಳೆ ಕಸ್ಟಮರ್ ಕೇರ್ ಆಗಿದ್ದ ಯುವತಿ ಜೊತೆ ಸ್ನೇಹ ಬೆಳೆಸಿ ಹೊಟೇಲ್ವೊಂದಕ್ಕೆ ಕರೆಸಿಕೊಂಡು ಜ್ಯೂಸ್ ನಲ್ಲಿ ಮತ್ತು ಬರುವ ಡ್ರಗ್ಸ್ ಹಾಕಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ನಾಪತ್ತೆಯಾಗಿದ್ದಾನೆ. ಆರೋಪಿಯನ್ನು ಆಂಧ್ರಪ್ರದೇಶ ಮೂಲದ ಲಕ್ಷ್ಮೀ ರೆಡ್ಡಿ ಎನ್ನಲಾಗಿದೆ. ಸದ್ಯ ಸಂತ್ರಸ್ತೆ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದು, ಆರೋಪಿ ಲಕ್ಷ್ಮೀ ರೆಡ್ಡಿ ವಿಡಿಯೋ ತೋರಿಸಿ ಆಕೆಯ ಮೇಲೆ ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ. ಸದ್ಯ ಯುವತಿ ಪೊಲೀಸರಿಗೆ ದೂರು ನೀಡಿದ್ದು, ಲಕ್ಷ್ಮೀ ರೆಡ್ಡಿ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಲೈಂಗಿಕ ಶೋಷಣೆ, ಬೆದರಿಕೆ, ಜಾತಿ ನಿಂದನೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಬೆಂಗಳೂರು : ‘KEA’ ಸೀಟ್ ಬ್ಲಾಕಿಂಗ್ ಹಗರಣದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬೆಂಗಳೂರಿನ ಮಲ್ಲೇಶ್ವರಂ ಠಾಣೆಯ ಪೊಲೀಸರು ಕಿಂಗ್ ಪಿನ್ ಸಮೇತ 10 ಆರೋಪಿಗಳನ್ನು ಬಂಧಿಸಿದ್ದು, ಇದೀಗ ಸೀಟ್ ಬ್ಲಾಕಿಂಗ್ ನಲ್ಲಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ 3 ಪ್ರತಿಷ್ಟಿತ ಕಾಲೇಜುಗಳಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ನ್ಯೂ ಹಾರಿಜನ್ ಕಾಲೇಜ್ ಆಫ್ ಇಂಜಿನಿಯರಿಂಗ್, ಬಿಎಂಎಸ್ ಇಂಜಿನಿಯರಿಂಗ್ ಕಾಲೇಜು, ಆಕಾಶ್ ಇಂಜಿನಿಯರಿಂಗ್ ಕಾಲೇಜಿಗೆ ಮಲ್ಲೇಶ್ವರಂ ಪೊಲೀಸರು ನೋಟಿಸ್ ನೀಡಿದ್ದು, ವಿದ್ಯಾರ್ಥಿಗಳ ದಾಖಲಾತಿ ಸಮೇತ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ನೀಡಿದ್ದಾರೆ. ‘KEA’ ಸೀಟ್ ಬ್ಲಾಕಿಂಗ್ ಹಗರಣದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬೆಂಗಳೂರಿನ ಮಲ್ಲೇಶ್ವರಂ ಠಾಣೆಯ ಪೊಲೀಸರು ಕಿಂಗ್ ಪಿನ್ ಸಮೇತ 10 ಆರೋಪಿಗಳನ್ನು ಬಂಧಿಸಿದ್ದರು. ಬಂಧಿತ ಆರೋಪಿಗಳನ್ನು ಹರ್ಷ, ರವಿಶಂಕರ್, ಪುನೀತ್, ಶಶಿಕುಮಾರ್, ಪುರುಷೋತ್ತಮ್, ಪ್ರಕಾಶ್ ಹಾಗೂ ಅವಿನಾಶ್ ಸೇರಿದಂತೆ 10 ಆರೋಪಿಗಳನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದರು. ಬಂಧಿತ ಹರ್ಷ ಎನ್ನುವ ಆರೋಪಿ…
ನವದೆಹಲಿ : ದೆಹಲಿಯ ಮೂರು ದೊಡ್ಡ ಶಾಲೆಗಳಿಗೆ ಬಾಂಬ್ ಹಾಕುವುದಾಗಿ ಬೆದರಿಕೆ ಬಂದ ನಂತರ ಭೀತಿ ಉಂಟಾಗಿದೆ. ಇ-ಮೇಲ್ ಮೂಲಕ ಬೆದರಿಕೆ ಹಾಕಲಾಗಿದ್ದು, ಕೂಡಲೇ ಶಾಲೆಗಳು ಮುಂಜಾಗ್ರತಾ ಕ್ರಮವಾಗಿ ಮಕ್ಕಳನ್ನು ಮನೆಗೆ ಕಳುಹಿಸಿ ಪೊಲೀಸರು ಮತ್ತು ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಿದ್ದರು. ಬೆಳಿಗ್ಗೆ 7.00 ಗಂಟೆಗೆ ಆರ್ಕೆ ಪುರಂನ ಡಿಪಿಎಸ್, ಪಶ್ಚಿಮ ವಿಹಾರದ ಜಿಡಿ ಗೋಯೆಂಕಾ ಶಾಲೆ, ಮದರ್ ಮೇರಿ ಶಾಲೆ ಸೇರಿದಂತೆ 40 ಶಾಲಾ ಆಡಳಿತ ಮಂಡಳಿಗಳಿಗೆ ಬಾಂಬ್ ಬೆದರಿಕೆ ಇಮೇಲ್ ಬಂದಿದೆ. ಅಷ್ಟರಲ್ಲಾಗಲೇ ಮಕ್ಕಳು ತಮ್ಮ ತರಗತಿಗಳಿಗೆ ಶಾಲೆ ತಲುಪಿದ್ದರು. ಬೆದರಿಕೆಯ ವಿಷಯ ಬೆಳಕಿಗೆ ಬಂದ ತಕ್ಷಣ ಮಕ್ಕಳನ್ನು ಮೊದಲು ಮನೆಗೆ ಕಳುಹಿಸಿ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಅಗ್ನಿಶಾಮಕ ದಳ ಮತ್ತು ದೆಹಲಿ ಪೊಲೀಸರ ತಂಡ ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿದೆ. ದೆಹಲಿಯ ಶಾಲೆಗಳು, ವಿಮಾನ ನಿಲ್ದಾಣಗಳು, ಹೋಟೆಲ್ಗಳು ಮತ್ತು ಇತರ ಸ್ಥಳಗಳಲ್ಲಿ ಬಾಂಬ್ ಬೆದರಿಕೆಗಳ ಸರಣಿ ಕೊನೆಗೊಳ್ಳುತ್ತಿಲ್ಲ ಎಂಬುದು ಗಮನಾರ್ಹ. ಕೆಲ ಸಮಯದ ಹಿಂದೆ ದೆಹಲಿಯ ರೋಹಿಣಿಯಲ್ಲಿರುವ…
ಬೆಳಗಾವಿ : ತಮಗೆ 2A ಮೀಸಲಾತಿ ನೀಡಬೇಕು ಎಂದು ಪಂಚಮಸಾಲಿ ಸಮುದಾಯದವರು ಕಳೆದ ಹಲವು ವರ್ಷಗಳಿಂದ ಹೋರಾಟ ಮಾಡುತ್ತಲೇ ಬಂದಿದ್ದಾರೆ. ಇದೀಗ ಇಂದಿನಿಂದ ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿರುವುದರಿಂದ ಪಂಚಮಸಾಲಿ ಸಮುದಾಯದ ಪ್ರಮುಖರು ಬೆಳಗಾವಿ ಅಧಿವೇಶನ ನಡೆಯುವ ವೇಳೆ ಹೋರಾಟಕ್ಕೆ ಸಿದ್ಧತೆ ಮಾಡಿಕೊಂಡಿದ್ದರು.ಆದರೆ ಸರ್ಕಾರ ಅವರಿಗೆ ಶಾಕ್ ನೀಡಿದ್ದು ಹೋರಾಟದ ವಾಹನ ಬೆಳಗಾವಿ ಪ್ರವೇಶಿಸಿದಂತೆ ನಿರ್ಬಂಧಿಸಲಾಗಿದೆ. ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಶಾಕ್ ನೀಡಿದ ಸರ್ಕಾರ ಡಿಸೆಂಬರ್ 9, 10 ಹೋರಾಟದ ವಾಹನ ಬೆಳಗಾವಿ ಪ್ರವೇಶಕ್ಕೆ ನಿಷೇಧಿಸಿದೆ. 2 ಎ ಮೀಸಲಾತಿಗೆ ಪಂಚಮಸಾಲಿ ಸಮುದಾಯದಿಂದ ಹೋರಾಟ ನಡೆಸಲಾಗುತ್ತಿದ್ದು, ಹೋರಾಟಕ್ಕೆ ಬರೋ ಟ್ರ್ಯಾಕ್ಟರ್, ಕ್ರೂಜರ್ ವಾಹನಗಳಿಗೆ ನಿರ್ಬಂಧ ವಿಧಿಸಲಾಗಿದೆ. ಬಸವ ಜಯ ಮೃತ್ಯುಂಜಯ ಶ್ರೀಗಳ ನೇತೃತ್ವದಲ್ಲಿ ಹೋರಾಟಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಡಿಸೆಂಬರ್ 10ರಂದು ಸುವರ್ಣ ಸೌಧಕ್ಕೆ ಟ್ರ್ಯಾಕ್ಟರ್ ಮುತ್ತಿಗೆಗೆ ನಿರ್ಧರಿಸಿದ್ದರು. ನಿಷೇಧಾಜ್ಞೆ ಜಾರಿಗೊಳಿಸಿ ಡಿಸಿ ಮೊಹಮ್ಮದ್ ರೋಷನ್ ಅವರು ಆದೇಶಿಸಿದ್ದಾರೆ. ಅಧಿವೇಶನ ವೀಕ್ಷಣೆಗೆ ಸಾರ್ವಜನಿಕರು ಶಾಲಾ ಮಕ್ಕಳು ಆಗಮಿಸಲಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ನಿಷೇಧಾಜ್ಞೆ…
ಬೆಂಗಳೂರು : ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಮತ್ತು ಎಸ್ಕಾಂಗಳಲ್ಲಿ ಕೈಗೊಳ್ಳಲಾಗಿರುವ ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್ ಮ್ಯಾನ್ ಹುದ್ದೆಗಳ ನೇಮಕಾತಿಗೆ, ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಇ-ಸಹಿ ಮಾಡಿ ಅಂಚೆ ಚಲನ್ ಪಡೆಯುವ ದಿನಾಂಕವನ್ನು ಹಾಗೂ ಅರ್ಜಿ ಶುಲ್ಕ ಪಾವತಿ ಮಾಡುವ ದಿನಾಂಕವನ್ನು ಮತ್ತೊಮ್ಮೆ ವಿಸ್ತರಿಸಲಾಗಿದೆ. ಕೆಪಿಟಿಸಿಎಲ್ ಹಾಗೂ ಎಸ್ಕಾಂಗಳಲ್ಲಿ ಸದರಿ ಹುದ್ದೆಗಳ ಭರ್ತಿಗಾಗಿ 2024ರ ಅಕ್ಟೋಬರ್ 14ರಂದು ಉದ್ಯೋಗ ಪ್ರಕಟಣೆ ಹೊರಡಿಸಲಾಗಿತ್ತು. ಅದರಂತೆ, ನೇಮಕಾತಿಗೆ ಅರ್ಜಿ ಸಲ್ಲಿಸಲು 2024ರ ಡಿಸೆಂಬರ್ 5 ಹಾಗೂ ಅರ್ಜಿ ಶುಲ್ಕ ಪಾವತಿಸಲು ಡಿಸೆಂಬರ್ 10 ಕ್ಕೆ ಕೊನೆಯ ದಿನಾಂಕವೆಂದು ನಿಗದಿ ಪಡಿಸಲಾಗಿತ್ತು. ಇದೀಗ ಆನ್ ಲೈನ್ ಮೂಲಕ ಚಲನ್ ಡೌನ್ಲೋಡ್ ಮಾಡಲು ಡಿಸೆಂಬರ್ 13 ಹಾಗೂ ಶುಲ್ಕ ಪಾವತಿಸಲು ಡಿಸೆಂಬರ್ 18 ರವರೆಗೆ ಅವಧಿ ವಿಸ್ತರಿಸಲಾಗಿದೆ. ಹೀಗಿದೆ ಪ್ರಮುಖ ದಿನಾಂಕಗಳು ಆನ್ ಲೈನ್ ಮೂಲಕ ಚಲನ್ ಡೌನ್ಲೋಡ್ ಮಾಡಲು ಅಂತಿಮ ದಿನಾಂಕ: 13-12-2024 ಅಂಚೆ ಕಚೇರಿಯ ಮೂಲಕ ಅರ್ಜಿ ಶುಲ್ಕ…
ನಂದಿಕೋಟ್ಕೂರು: ಪ್ರೀತಿಸಲಿಲ್ಲ ಎಂಬ ಕಾರಣಕ್ಕೆ ಯುವಕನೊಬ್ಬ ಬಾಲಕಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿರುವ ಘಟನೆ ಆಂಧ್ರಪ್ರದೇಶದ ನಂದ್ಯಾಲ ಜಿಲ್ಲೆಯಲ್ಲಿ ನಡೆದಿದೆ. ನಂದ್ಯಾಲ ಜಿಲ್ಲೆಯ ನಂದಿಕೋಟ್ಕೂರಿನ ಬೈರೆಡ್ಡಿ ನಗರದಲ್ಲಿ ಈ ದುಷ್ಕೃತ್ಯ ನಡೆದಿದ್ದು, ಪ್ರೀತಿ ನಿರಾಕರಿಸಿದ ಬಾಲಕಿಯನ್ನು ಪ್ರೇಮಿಯೊಬ್ಬ ಬೆಂಕಿ ಹಚ್ಚಿದ ಘಟನೆ ನಡೆದಿದೆ. ಲಹರಿ (17) ಮೃತ ಬಾಲಕಿಯಾಗಿದ್ದು, ಬಾಲಕಿ ಮನೆಗೆ ರಾಘವೇಂದ್ರ ಎಂಬ ಯುವಕ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಪರಿಣಾಮ ಬಾಲಕಿ ಮನೆಯಲ್ಲೇ ಸಜೀವ ದಹನವಾಗಿದ್ದಾಳೆ. ಲಹರಿ ತನ್ನ ಮನೆಯಲ್ಲಿ ಮಲಗಿದ್ದ ವೇಳೆ ಆರೋಪಿ ರಾಘವೇಂದ್ರ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ರಾಘವೇಂದ್ರ ಕೋಲಿಮಿಗುಂಡ್ಲ ನಿವಾಸಿ ಎನ್ನಲಾಗಿದೆ. ಲಹರಿ ಮಲಗಿದ್ದ ವೇಳೆ ಲಹರಿ ಮನೆಯಲ್ಲಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದು, ಲಹರಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಈ ಘಟನೆಯಿಂದ ನಂದಿ ಕೊಟ್ಕೂರು ಬೈರೆಡ್ಡಿ ನಗರದಲ್ಲಿ ದುಃಖದ ಛಾಯೆ ಆವರಿಸಿದೆ. ಈ ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರಿಗೂ ಪಾನ್ ಕಾರ್ಡ್ ಅತ್ಯಗತ್ಯ. ಬ್ಯಾಂಕ್ ಸೇವೆಗಳಿಂದ ಹಿಡಿದು ಶಾಪಿಂಗ್ ಮತ್ತು ಸರ್ಕಾರಿ ಯೋಜನೆಗಳಿಗೆ ಪ್ಯಾನ್ ಕಾರ್ಡ್ಗಳು ಉಪಯುಕ್ತವಾಗಿವೆ. ಭಾರತ ಸರ್ಕಾರವು PAN ಕಾರ್ಡ್ ಆನ್ಲೈನ್ ಅಪ್ಲಿಕೇಶನ್ಗಾಗಿ ಎರಡು ಪ್ರಮುಖ ಏಜೆನ್ಸಿಗಳನ್ನು ಅಧಿಕೃತಗೊಳಿಸಿದೆ. ಅವುಗಳೆಂದರೆ ನ್ಯಾಷನಲ್ ಸೆಕ್ಯುರಿಟೀಸ್ ಡಿಪಾಸಿಟರಿ ಲಿಮಿಟೆಡ್ (ಎನ್ಎಸ್ಡಿಎಲ್), ಯುಟಿಐ ಇನ್ಫ್ರಾಸ್ಟ್ರಕ್ಚರ್ ಟೆಕ್ನಾಲಜಿ ಅಂಡ್ ಸರ್ವೀಸಸ್ ಲಿಮಿಟೆಡ್ (ಯುಟಿಐಐಟಿಎಸ್ಎಲ್). ನೀವು ಅವರ ಅಧಿಕೃತ ವೆಬ್ಸೈಟ್ಗೆ ಹೋಗಿ ಹೊಸ ಪ್ಯಾನ್ ಕಾರ್ಡ್ಗಾಗಿ ಅರ್ಜಿ ಸಲ್ಲಿಸಬಹುದು. ಆದರೆ ಇದರಿಂದ ಕೆಲವರು ಪಾನ್ ಕಾರ್ಡ್ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಮೋಸದ ಚಟುವಟಿಕೆಗಳನ್ನು ನಡೆಸಲು ಸುಳ್ಳು ವಿವರಗಳನ್ನು ಸಲ್ಲಿಸಿ ಒಂದಕ್ಕಿಂತ ಹೆಚ್ಚು ಪ್ಯಾನ್ ಕಾರ್ಡ್ಗಳನ್ನು ಪಡೆಯಲಾಗುತ್ತದೆ. ಇದು ಸಂಪೂರ್ಣ ಅಕ್ರಮವಾಗಿದೆ. ಅಂತಹ ಪ್ರಕರಣಗಳಲ್ಲಿ ದಂಡದ ಜೊತೆಗೆ ಜೈಲು ಶಿಕ್ಷೆಯ ಅಪಾಯವಿದೆ. ಆದಾಯ ತೆರಿಗೆ ಕಾಯಿದೆ, 1961 ರ ಸೆಕ್ಷನ್ 272 ಬಿ ಪ್ರಕಾರ, ರೂ. 10 ಸಾವಿರ ದಂಡ ವಿಧಿಸಲಾಗುವುದು. ಕೆಲವೊಮ್ಮೆ ಸೆರೆವಾಸ ಕೂಡ. ಆದ್ದರಿಂದ ನೀವು ಎರಡು ಪ್ಯಾನ್ ಕಾರ್ಡ್ಗಳನ್ನು ಹೊಂದಿದ್ದರೆ ಹೆಚ್ಚುವರಿ…
ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ವತಿಯಿಂದ ಕೇಂದ್ರ ಸರ್ಕಾರದ ಯೋಜನೆಯಾದ ಪ್ರಧಾನ ಮಂತ್ರಿಗಳ ಸೃಜನ ಯೋಜನೆ (ಪಿ.ಎಂ.ಇ.ಜಿ.ಪಿ)ಯಡಿ ದೇವನಹಳ್ಳಿ, ಹೊಸಕೋಟೆ, ದೊಡ್ಡಬಳ್ಳಾಪುರ ಮತ್ತು ನೆಲಮಂಗಲ ತಾಲ್ಲೂಕಿನ ನಿರುದ್ಯೋಗ ಯುವಕ-ಯುವತಿಯರಿಗೆ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆ(ಪಿ.ಎಂ.ಇ.ಜಿ.ಪಿ)ಯಡಿ ಆರ್ಥಿಕ ಸಾಲ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 18 ವರ್ಷ ಮೇಲ್ಪಟ್ಟ ಪುರುಷರು, ಮಹಿಳೆಯರು, ಪ.ಜಾ, ಪ.ಪಂ, ಹಿಂದುಳಿದ ವರ್ಗ, ಅಲ್ಪ ಸಂಖ್ಯಾತರು, ಮಾಜಿ ಸೈನಿಕರು, ಅಂಗವಿಕಲರು ಅರ್ಜಿ ಸಲ್ಲಿಸಬಹುದು. ವಿವಿಧ ಹಣಕಾಸು ಸಂಸ್ಥೆಗಳು (ಬ್ಯಾಂಕುಗಳ) ಮೂಲಕ ಸಾಲ ಸೌಲಭ್ಯ ನೀಡಲಾಗುವುದು. ಯಾವುದೇ ಆದಾಯದ ಮಿತಿ ಇರುವುದಿಲ್ಲ. ಅಸಕ್ತಿ ಹೊಂದಿರುವ ಉದ್ಯಮಶೀಲರು www.kviconline.gov.in ವೆಬ್ ಸೈಟ್ ನಲ್ಲಿ kvib ಏಜೆನ್ಸಿ ಲಾಗಿನ್ ಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಜಿಲ್ಲಾ ಕಛೇರಿ, ಬೆಂಗಳೂರು…













