Subscribe to Updates
Get the latest creative news from FooBar about art, design and business.
Author: kannadanewsnow57
ಯಾದಗಿರಿ : ಪತ್ನಿ ಮೇಲಿನ ಅನೈತಿಕ ಸಂಬಂಧದ ಶಂಕೆ ಯಿಂದ ಆಕ್ರೋಶಗೊಂಡಿದ್ದ ವ್ಯಕ್ತಿಯೊಬ್ಬ ತನ್ನ ಮೂವರು ಮಕ್ಕಳ ಮೇಲೆ ಕೊಡಲಿಯಿಂದ ಹಲ್ಲೆ ನಡೆಸಿದ್ದು, ಇಬ್ಬರು ಮಕ್ಕಳು ಸ್ಥಳದಲ್ಲೇ ಮೃತಪಟ್ಟು, ಓರ್ವ ಮಗು ಗಂಭೀರವಾಗಿ ಗಾಯಗೊಂಡಿದೆ. ಯಾದಗಿರಿ ಸಮೀಪದ ಹತ್ತಿಕುಣಿ ಗ್ರಾಮದಲ್ಲಿ ನಡೆದಿದೆ. ಶರಣಪ್ಪ ದುಗನೂರ, 4 ವರ್ಷದ ಮಗಳು ಸ್ವಾನಿ ಮತ್ತು 3 ವರ್ಷದ ಮಗ ಭಾರ್ಗವನನ್ನು ಹತ್ಯೆ ಮಾಡಿದ್ದಾನೆ. 8 ವರ್ಷದ ಹೇಮಂತ ಗಾಯಗೊಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರು ಮಕ್ಕಳನ್ನು ಕೊಲೆ ಮಾಡಿ ಪರಾರಿಯಾಗಿರುವ ಆರೋಪಿ ಶರಣಪ್ಪನ ಬಂಧನಕ್ಕೆ ಪೊಲೀಸರು ಬಲೇ ಬೀಸಿದ್ದಾರೆ. ಮಕ್ಕಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಯಾದಗಿರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪತ್ನಿಗೆ ಅಕ್ರಮ ಸಂಬಂಧವಿದೆ ಎಂದು ಅನುಮಾನ ಪಟ್ಟ ಪತಿ ತನ್ನ ಪುಟ್ಟ ಮಕ್ಕಳನ್ನು ಕೊಂದು ಪರಾರಿಯಾಗಿದ್ದಾನೆ. ಆರೋಪಿ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಸ್ಥಳದಲ್ಲಿ ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿದೆ. ಯಾದಗಿರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,…
ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದಿಂದ 2025-26ನೇ ಸಾಲಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ನೀಡಲು ಉದ್ದೇಶಿಸಲಾಗುತ್ತಿದ್ದು, ಮತೀಯ ಅಲ್ಪಸಂಖ್ಯಾತರಿಂದ (ಮುಸ್ಲಿಂ, ಕ್ರಿಶ್ಚಿಯನ್, ಜೈನರು, ಬೌದ್ಧರು, ಸಿಖ್ಖರು, ಪಾರ್ಸಿ ಜನಾಂಗದವರಿಂದ) ಆನ್-ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿವಿಧ ಯೋಜನೆಗಳು: ಶ್ರಮಶಕ್ತಿ ಸಾಲದ ಯೋಜನೆ: ಈ ಯೋಜನೆಯಡಿ ರೂ.50 ಸಾವಿರಗಳ ಒಳಗೆ ಶೇ.4ರಷ್ಟು ಬಡ್ಡಿ ದರದಲ್ಲಿ ಶೇ.50 ಸಾಲ ಹಾಗೂ ಶೇ.50 ಸಹಾಯಧನ ನೀಡಲಾಗುವುದು. ಸ್ವಾವಲಂಬಿ ಸಾರಥಿ ಯೋಜನೆ: ಈ ಯೋಜನೆಯಲ್ಲಿ ಟ್ಯಾಕ್ಸಿ/ಗೂಡ್ಸ್ ವಾಹನ/ಪ್ಯಾಸೆಂಜರ್ ಆಟೋರಿಕ್ಷಾ ಖರೀದಿಸಲು ಫಲಾನುಭವಿಗಳಿಗೆ ಬ್ಯಾಂಕ್ ನಿಂದ ಸಾಲ ಮಂಜೂರಾತಿಯಾಗಿದ್ದಲ್ಲಿ, ನಿಗಮದಿಂದ ವಾಹನದ ಮೌಲ್ಯದ ಶೇ.50ರಷ್ಟು ಸಹಾಯಧನ ಗರಿಷ್ಠ ರೂ.3 ಲಕ್ಷ ನೀಡಲಾಗುವುದು. ವಿದೇಶ ವ್ಯಾಸಂಗಕ್ಕೆ ಸಾಲ ಯೋಜನೆ: ಅಲ್ಪಸಂಖ್ಯಾತರ ವರ್ಗದ ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ವ್ಯಾಸಂಗ ಮಾಡಲು ಮಾನ್ಯತೆ ಪಡೆದಿರುವ ಯಾವುದೇ ವಿದೇಶ ವಿಶ್ವ ವಿದ್ಯಾಲಯದಿಂದ ಪದವಿ, ಸ್ನಾತಕೋತ್ತರ ಪದವಿ, ವಿಧ್ಯಾಭ್ಯಾಸ ಪಡೆಯಲು ರೂ.20 ಲಕ್ಷದವರೆಗೆ ಸಾಲವನ್ನು ನಿಗಮಕ್ಕೆ ಆಸ್ತಿಯ (ಕಟ್ಟಡ/ಜಮೀನು) ಅಡಮಾನದ ಮೇಲೆ ಮಾತ್ರ ಒದಗಿಸಲಾಗುವುದು. ವೃತ್ತಿ ಪ್ರೋತ್ಸಾಹ ಯೋಜನೆ:…
ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಗೆ ಒಳಪಡುವ ಭಾಗ್ಯಲಕ್ಷ್ಮೀ ಯೋಜನೆಯ ಫಲಾನುಭವಿಗಳು ಭಾಗ್ಯಲಕ್ಷ್ಮೀ ಯೋಜನೆಯಡಿ ಪರಿಪಕ್ವ ಮೊತ್ತ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಕುಂದಗೋಳ ತಾಲ್ಲೂಕಿನಲ್ಲಿ 2006-07 ನೇ ಸಾಲಿನಲ್ಲಿ ಜನಿಸಿ, 18 ವರ್ಷ ಪೂರ್ಣಗೊಂಡ ಭಾಗ್ಯಲಕ್ಷ್ಮೀ ಯೋಜನೆಯಡಿ ಪರಿಪಕ್ವ ಮೊತ್ತ ಪಡೆಯುವ ಫಲಾನುಭವಿಗಳು ಅರ್ಜಿ ಪಡೆದು, ಅಗತ್ಯ ದಾಖಲೆಗಳೊಂದಿಗೆ ಅಕ್ಟೋಬರ್ 30, 2025 ರೊಳಗಾಗಿ ಕುಂದಗೋಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಗೆ ಖುದ್ದಾಗಿ ಬಂದು ಮೂಲ ದಾಖಲಾತಿಗಳನ್ನು ಸಲ್ಲಿಸಬೇಕು. 2006-07ನೇ ಸಾಲಿಗೆ ಸಂಬಂಧಿಸಿದ ಅರ್ಹ ಫಲಾನುಭವಿಗಳಲ್ಲಿ 16 ಫಲಾನುಭವಿಗಳು ಪರಿಪಕ್ವ ಮೊತ್ತಕ್ಕಾಗಿ ಅರ್ಜಿ ಸಲ್ಲಿಸಿರುವುದಿಲ್ಲ. ಅವಧಿ ಮುಗಿದ ಮೇಲೆ ಬಂದ ಅರ್ಜಿಗಳನ್ನು ಆನ್ಲೈನ್ನಲ್ಲಿ ಅಳವಡಿಸಲು ಸಾಧ್ಯವಾಗದ ಕಾರಣ ಪರಿಗಣಿಸುವುದಿಲ್ಲ ಎಂದು ಕುಂದಗೋಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಆಯೋಗದಯಿಂದ ನಡೆಸಲಾಗುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಬಗ್ಗೆ ಸಮೀಕ್ಷಾ ಕಾರ್ಯವನ್ನು ಕೈಗೊಳ್ಳಲು ಸಾರ್ವಜನಿಕರಿಗೆ ಮಾಹಿತಿ ನೀಡುವ ಉದ್ದೇಶದಿಂದ ಸಹಾಯವಾಣಿ (ಹೆಲ್ಪ್ಲೈನ್) ಸೇವೆಯನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಕಚೇರಿಯಲ್ಲಿ ಆರಂಭಿಸಲಾಗಿದೆ. ಪ್ರತಿನಿತ್ಯ ಸಮೀಕ್ಷೆ ಕುರಿತಂತೆ ಸಾರ್ವಜನಿಕರಿಂದ ಬರುವ ಮಾಹಿತಿ, ದೂರು, ಆಕ್ಷೇಪಣೆ, ಸಲಹೆ ಇತ್ಯಾದಿಗಳನ್ನು ಸ್ವೀಕರಿಸಿ, ಕರೆಗಳಿಗೆ ಸೂಕ್ತ ಉತ್ತರ ನೀಡಲು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸಮೀಕ್ಷೆ ಕುರಿತಂತೆ ಹೆಚ್ಚಿನ ಮಾಹಿತಿ ಅಗತ್ಯವಿದ್ದಲ್ಲಿ ಸಹಾಯವಾಣಿ ಸಂಖ್ಯೆ: 0836-2447961 ಗೆ ಕರೆ ಮಾಡಬಹುದು ಎಂದು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು : ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ಬಾಡಿಗೆ (ತಿದ್ದುಪಡಿ) ಸೇರಿದಂತೆ ಹಲವು ವಿಧೇಯಕಗಳಿಗೆ ಅನುಮೋದನೆ ನೀಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಬೆಂಗಳೂರಿನಂತಹ ನಗರಗಳಲ್ಲಿ ಬಾಡಿಗೆ ಮನೆಗಳ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ, ಮಾಲೀಕರು ಮತ್ತು ಬಾಡಿಗೆದಾರರ ನಡುವೆ ಘರ್ಷಣೆಗಳು ಹೆಚ್ಚಾಗುತ್ತಿವೆ. ಇದನ್ನು ತಡೆಯಲು ಮತ್ತು ಸಮಸ್ಯೆಗಳನ್ನು ಬಗೆಹರಿಸಲು ರಾಜ್ಯ ಸರ್ಕಾರ ಕರ್ನಾಟಕ ಬಾಡಿಗೆ ತಿದ್ದುಪಡಿಗೆ ಅನುಮೋದನೆ ನೀಡಿದೆ. ರಾಜ್ಯದಲ್ಲಿ ಬಾಡಿಗೆ ಮನೆಗಳ ನಿಯಮಗಳನ್ನ ಬದಲಾಯಿಸಲು ಸರ್ಕಾರ ಮುಂದಾಗಿದ್ದು, ಕರ್ನಾಟಕ ಬಾಡಿಗೆ ಕಾಯ್ದೆ 1999ಕ್ಕೆ ತಿದ್ದುಪಡಿ ತರಲು ನಿರ್ಧರಿಸಿದೆ. ಈ ತಿದ್ದುಪಡಿಯಿಂದ ಬಾಡಿಗೆ ಮನೆಗಳಲ್ಲಿ ವಾಸ ಮಾಡುವವರು ಹಾಗೂ ಮನೆ ಮಾಲೀಕರು ಇಬ್ಬರಿಗೂ ಹೊಸ ನಿಯಮಗಳು ಅನ್ವಯ ಆಗುತ್ತವೆ ಎಂದು ಹೇಳಲಾಗಿದೆ. ಸಚಿವ ಸಂಪುಟದ ಪ್ರಮುಖ ನಿರ್ಣಯಗಳು ಕೇಂದ್ರ ಸರ್ಕಾರದ 15ನೇ ಹಣಕಾಸು ಆಯೋಗದ ಯೋಜನೆಯಡಿ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಇಲಾಖೆಯ ವಿಸ್ತರಣೆ ಹಾಗೂ ಆಧುನೀಕರಣದ ರೂ.329.00 ಕೋಟಿಗಳ…
ಮಂಡ್ಯ : ಗಂಗಾ ಆರತಿ ಮಾದರಿಯಲ್ಲಿ ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಕಾವೇರಿ ನದಿಗೆ “ಕಾವೇರಿ ಆರತಿ” ಮಾಡುವ ಕಾರ್ಯಕ್ರಮವು ಸೆಪ್ಟೆಂಬರ್ 26 ರ ಇಂದಿನಿಂದ ಐದು ದಿನಗಳ ಕಾಲ ಕೆಆರ್ ಎಸ್ ನ ಬೃಂದಾವನ ಉದ್ಯಾನವನದಲ್ಲಿ ನೆರವೇರಲಿದೆ. ಕಾವೇರಿ ಆರತಿ ಕಾರ್ಯಕ್ರಮದ ವೀಕ್ಷಣೆಗೆ ಪ್ರತಿ ನಿತ್ಯ 8 ರಿಂದ 10 ಸಾವಿರಕ್ಕೂ ಅಧಿಕ ಪ್ರವಾಸಿಗರು ರಾಜ್ಯ, ಹೊರರಾಜ್ಯದ ನಾನಾ ಭಾಗಗಳಿಂದ ಆಗಮಿಸಿ “ಕಾವೇರಿ ಆರತಿ”ಯನ್ನು ಕಣ್ತುಂಬಿಕೊಳ್ಳಲಿದ್ದಾರೆ. ಕಾವೇರಿ ಆರತಿ ವೀಕ್ಷಿಸಲು ಆಗಮಿಸುವ ಪ್ರವಾಸಿಗರಿಗೆ ಉಚಿತವಾಗಿ ಹಂಚಲು ಜಲಸಂಪನ್ಮೂಲ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಲಾಡು ಮಾಡಿಸಿದ್ದಾರೆ. ಪ್ರತಿನಿತ್ಯ ಲಾಡು ವಿತರಣೆಗೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. “ಕಾವೇರಿ ಆರತಿ” ವೀಕ್ಷಣೆಗೆ ಆಗಮಿಸುವ ಪ್ರವಾಸಿಗರಿಗೆ ಕಾವೇರಿ ತಾಯಿ ಪ್ರಸಾದವಾಗಿ ಲಾಡನ್ನು ಉಚಿತವಾಗಿ ವಿತರಣೆ ಮಾಡಲಾಗುವುದು. ಕಾವೇರಿ ಕನ್ನಡ ನಾಡಿನ ಜೀವನದಿ. ಕೇರಳ, ತಮಿಳುನಾಡು ಹಾಗೂ ರಾಜ್ಯದ ನಾನಾ ಭಾಗಗಳಿಂದ ಕೆಆರ್ ಎಸ್ ವೀಕ್ಷಣೆಗೆ ದಿನಂಪ್ರತಿ ಸಹಸ್ರಾರು ಸಂಖ್ಯೆಯಲ್ಲಿ ಪ್ರವಾಸಿಗರು…
ಮೈಸೂರು: ಇಂದು ಬೆಳಗ್ಗೆ 8.30ಕ್ಕೆ 8.30ಕ್ಕೆ ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ಅವರ ಮನೆಯಲ್ಲಿ ಅಂತಿಮ ವಿಧಿ ವಿಧಾನ ನಡೆದು, ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನ ರುದ್ರ ಭೂಮಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು. ಡಾ.ಎಸ್.ಎಲ್. ಭೈರಪ್ಪ ಅವರ ಪಾರ್ಥಿವ ಶರೀರ ಗುರುವಾರ ಮೈಸೂರಿಗೆ ತರಲಾಗಿದ್ದು, ನಗರದ ಕಲಾ ಮಂದಿರ ಬಳಿಯ ಕಿಂದರಿ ಜೋಗಿ ಆವರಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಬಳಿಕ ಜೆಎಸ್ಎಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಕನ್ನಡದ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ಅವರ ಅಂತ್ಯಕ್ರಿಯೆಯನ್ನು ನೆರವೇರಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ಪದ್ಮಭೂಷಣ ಪುರಸ್ಕೃತರು, ಹಿರಿಯ ಸಾಹಿತಿ ಡಾ.ಎಸ್ಎಲ್ ಭೈರಪ್ಪ ಅವರು ಇಂದು ನಿಧನರಾದ ವಿಷಯವನ್ನು ರಾಜ್ಯ ಸರ್ಕಾರವು ತೀವ್ರ ಸಂತಾಪವನ್ನು ಪ್ರಕಟಿಸಿದೆ ಎಂದಿದೆ. ಹಿರಿಯ ಸಾಹಿತಿ ಹಾಗೂ ಪದ್ಮಭೂಷಣ ಪುರಸ್ಕೃತ ಡಾ.ಎಸ್ಎಲ್ ಭೈರಪ್ಪ ಮೃತರ…
ಬೆಂಗಳೂರು: ರಾಜ್ಯ ಸರಕಾರದ ‘ಸಿ’ ವೃಂದದ ಮೇಲ್ಪಟ್ಟ ಎಲ್ಲ ಅಧಿಕಾರಿ, ನೌಕರರ ಮುಂಬಡ್ತಿಗೆ ತರಬೇತಿ ಕಡ್ಡಾಯಗೊಳಿಸುವ ಸಂಬಂಧದ ನಿಯಮಾವಳಿ ಅಂತಿಮಗೊಳಿಸಲಾಗಿದ್ದು, ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ. ರಾಜ್ಯ ಸರಕಾರದ ‘ಸಿ’ ವೃಂದ ಮೇಲ್ಪಟ್ಟ ಎಲ್ಲ ಅಧಿಕಾರಿ, ನೌಕರರಿಗೆ ಮುಂಬಡ್ತಿಗೆ ತರಬೇತಿ ಕಡ್ಡಾಯಗೊಳಿಸುವ ಮಹತ್ವದ ನಿರ್ಣಯವನ್ನು ರಾಜ್ಯ ಸಚಿವ ಸಂಪುಟ ಸಭೆ ಕೈಗೊಂಡಿದೆ. ಕೇಂದ್ರ ನಾಗರಿಕ ಸೇವಾ ಅಧಿ ಕಾರಿಗಳಿಗೆ ಸೇವಾವಧಿ ನಡುವೆ ಲಾಲ್ ಬಹದ್ದೂರ್ ಶಾಸ್ತ್ರಿ ಅಕಾಡೆಮಿಯಲ್ಲಿ ತರಬೇತಿ ವ್ಯವಸ್ಥೆ ಇದ್ದು, ಅದೇ ಮಾದರಿಯಲ್ಲಿ ರಾಜ್ಯ ಸರಕಾರದ ಎಲ್ಲ ಅಧಿಕಾರಿ ವರ್ಗಕ್ಕೆ ತರಬೇತಿಗೆ ನಿರ್ಧರಿಸಲಾಗಿದೆ. ಮುಂಬಡ್ತಿಗಾಗಿ ಈ ತರಬೇತಿಯನ್ನು ಕಡ್ಡಾಯಗೊಳಿಸಲು ನಿರ್ಧರಿಸಲಾಗಿದೆ. ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಮುಂಬಡ್ತಿಗಾಗಿ ಕಡ್ಡಾಯ ತರಬೇತಿ) ನಿಯಮಗಳು 2025ಕ್ಕೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಉನ್ನತ ಶಿಕ್ಷಣ ಇಲಾಖೆಯಡಿ ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳ ನಿರ್ವಹಣಾ ತಂತ್ರಾಂಶ 2ನೇ ಆವೃತ್ತಿ (UUCMS-V-2.0) ಯನ್ನು ರೂ.40.29 ಕೋಟಿಗಳ ಮೊತ್ತದಲ್ಲಿ ಅಭಿವೃದ್ಧಿಪಡಿಸಿ ಅನುಷ್ಠಾನಗೊಳಿಸಲು ಸಚಿವ…
ಬೆಂಗಳೂರು :ಆದಾಯ ಪ್ರಮಾಣಪತ್ರವು ವ್ಯಕ್ತಿಯ ಅಥವಾ ಕುಟುಂಬದ ಆದಾಯವನ್ನು ಪ್ರಮಾಣೀಕರಿಸುವ ಅತ್ಯಗತ್ಯ ದಾಖಲೆಯಾಗಿದೆ. ಸರ್ಕಾರಿ ವಿದ್ಯಾರ್ಥಿವೇತನಗಳಿಗೆ ಅರ್ಜಿ ಸಲ್ಲಿಸುವುದು, ಶಿಕ್ಷಣ ಮತ್ತು ಉದ್ಯೋಗಗಳಲ್ಲಿ ಮೀಸಲಾತಿ ಮತ್ತು ಸಬ್ಸಿಡಿಗಳನ್ನು ಪಡೆಯುವುದು ಮುಂತಾದ ವಿವಿಧ ಉದ್ದೇಶಗಳಿಗಾಗಿ ಇದನ್ನು ವ್ಯಾಪಕವಾಗಿ ಬಳಸಲಾಗುತ್ತದೆ. ಹೆಚ್ಚಿನ ಭಾರತೀಯ ರಾಜ್ಯಗಳು ನಾಗರಿಕರು ತಮ್ಮ ಅಧಿಕೃತ ಪೋರ್ಟಲ್ಗಳ ಮೂಲಕ ಆನ್ಲೈನ್ನಲ್ಲಿ ಆದಾಯ ಪ್ರಮಾಣಪತ್ರಗಳಿಗೆ ಅರ್ಜಿ ಸಲ್ಲಿಸಲು ಸುಲಭವಾಗುವಂತೆ ಪ್ರಕ್ರಿಯೆಯನ್ನು ಡಿಜಿಟಲೀಕರಣಗೊಳಿಸಿವೆ. ನಿಮ್ಮ ಆಯಾ ರಾಜ್ಯ ಸರ್ಕಾರಿ ಪೋರ್ಟಲ್ನಿಂದ ಡಿಜಿಟಲ್ ರೂಪದಲ್ಲಿ ಆದಾಯ ಪ್ರಮಾಣಪತ್ರಕ್ಕಾಗಿ ಹೇಗೆ ಅರ್ಜಿ ಸಲ್ಲಿಸಬೇಕು ಎಂಬುದರ ಕುರಿತು ವಿವರವಾದ ಮಾರ್ಗದರ್ಶಿಯನ್ನು ಒದಗಿಸುತ್ತದೆ, ಇದು ಪ್ರಕ್ರಿಯೆಯನ್ನು ತ್ವರಿತ, ಅನುಕೂಲಕರ ಮತ್ತು ಕಾಗದರಹಿತವಾಗಿಸುತ್ತದೆ. ಆದಾಯ ಪ್ರಮಾಣಪತ್ರ ಎಂದರೇನು? ಆದಾಯ ಪ್ರಮಾಣಪತ್ರವು ನಿಮ್ಮ ವಾರ್ಷಿಕ ಆದಾಯವನ್ನು ಪರಿಶೀಲಿಸುವ ಸರ್ಕಾರವು ನೀಡುವ ಕಾನೂನು ದಾಖಲೆಯಾಗಿದೆ. ಇದು ಸಾಮಾನ್ಯವಾಗಿ ವಿದ್ಯಾರ್ಥಿಗಳು, ರೈತರು, ನಿರುದ್ಯೋಗಿ ವ್ಯಕ್ತಿಗಳು ಮತ್ತು ಸರ್ಕಾರಿ ಯೋಜನೆಗಳು ಮತ್ತು ಪ್ರಯೋಜನಗಳಿಗಾಗಿ ಅರ್ಜಿ ಸಲ್ಲಿಸುವ ಜನರಿಗೆ ಅಗತ್ಯವಾಗಿರುತ್ತದೆ. ಆದಾಯ ಪ್ರಮಾಣಪತ್ರಕ್ಕಾಗಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸುವ ಪ್ರಯೋಜನಗಳು…
ಬೆಂಗಳೂರು : ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿರುವ ಸಮಸ್ಯೆಗಳನ್ನು ಪರಿಹರಿಸುವ ವರೆಗೂ ಮುಂದೂಡುವಂತೆ ಮನವಿ ರಾಜ್ಯದ ಶಿಕ್ಷಕರು ಮನವಿ ಮಾಡಿದ್ದಾರೆ. ಮೇಲ್ಕಾಣಿಸಿದ ವಿಷಯಕ್ಕೆ ಸಂಬಂಧಿಸಿದಂತೆ, ತಮ್ಮ ಗಮನಕ್ಕೆ ತರುವ ವಿಷಯವೆನೆಂದರೆ, ಸದ್ಯ ನಡೆಸುತ್ತಿರುವ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಅನೇಕ ತಾಂತ್ರಿಕ ಸಮಸ್ಯೆಗಳು ಶಿಕ್ಷಕರಿಗೆ ಕಾಡುತ್ತಿದ್ದು, ಇದರ ಕುರಿತು ಮೇಲಾಧಿಕಾರಿಗಳಿಗೆ ಎಷ್ಟೇ ಕೇಳಿಕೊಂಡರೂ ಸಹ ಯಾವುದೇ ಪರಿಹಾರ ಸಿಗುತ್ತಿಲ್ಲ. ಕಾರಣ ಶಿಕ್ಷಕರು ಮನೆ ಮನೆಗೆ ಹೋಗಿ ಗಂಟೆಗಟ್ಟಲೇ ಕುಳಿತು APP ಕಾರ್ಯ ನಿರ್ವಹಿಸದ ಕಾರಣ ಮುಜುಗರ ಪಡುವಂತಾಗಿದ್ದು, ಮಹಿಳಾ ಶಿಕ್ಷಕಿಯರು ಪಡುವ ಕಷ್ಟಗಳನ್ನು ಕೇಳುವವರಿಲ್ಲದಂತಾಗಿದೆ. 1) ಹೊಸ ವರ್ಷನ್ APP ಓಪನ್ ಆಗದೇ UNKNOWN ERROR ಬರುತ್ತಿರುವುದು. 2) ನಿಯೋಜಿಸಿರುವ ಮನೆಗಳು ಲೋಕೆಷನ್ ನಲ್ಲಿ ಸಿಗದೇ ಇರುವುದು. 3) ನಿಗದಿಪಡಿಸಿರುವ ಮನೆಗಳು ಒಂದೇ ಕಡೆ ಇಲ್ಲದಿರುವುದು 4) ಮನೆ ಸಮೀಕ್ಷೆ ಮಾಡಿದ ನಂತರ ಸಬ್ಸಿಟ್ ಆಗದೇ ಇರುವುದು 5) OTP ಮತ್ತು ODP ಸಮಸ್ಯೆ 6) ಮನೆಪಟ್ಟಿ ಮುಖ್ಯಸ್ಥರು…







