Author: kannadanewsnow57

ನವದೆಹಲಿ : ತ್ರಿಪುರಾದ ಇಂಡೋ-ಬಾಂಗ್ಲಾದೇಶ ಗಡಿಯಲ್ಲಿ ಭಾರತೀಯ ಯೋಧರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 13,000 ಕೋಟಿ ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಲಾಗಿದೆ. ತ್ರಿಪುರಾದ ಸೆಪಾಹಿಜಾಲಾ ಜಿಲ್ಲೆಯ ಗಡಿ ಹೊರಠಾಣೆ (ಬಿಒಪಿ) ಎನ್ ಸಿ ನಗರದ ಬಳಿ ಡಿಸೆಂಬರ್ 4, 2024 ರ ಸಂಜೆ 81 ಬೆಟಾಲಿಯನ್ ಬಿಎಸ್ ಎಫ್ ಈ ಕಾರ್ಯಾಚರಣೆಯನ್ನು ನಡೆಸಿದ್ದು, ಈ ವೇಳೆ 172.828 ಕೆಜಿ ಬೆಲೆ ಬಾಳುವ ಚಿನ್ನ, 178,805 ಕೆಜಿ ಬೆಲೆ ಬಾಳುವ ಬೆಳ್ಳಿ ಜಪ್ತಿ ಮಾಡಿಕೊಳ್ಳಲಾಗಿದೆ. ನಿರ್ದಿಷ್ಟ ಗುಪ್ತಚರ ಮಾಹಿತಿಯ ಮೇರೆಗೆ ಬಿಎಸ್ಎಫ್ ಪಡೆಗಳು ಅಂತರರಾಷ್ಟ್ರೀಯ ಗಡಿಯುದ್ದಕ್ಕೂ ದಾಳಿ ನಡೆಸಿದವು. ರಾತ್ರಿ 8:45 ರ ಸುಮಾರಿಗೆ, ಗಡಿ ಬೇಲಿಯ ಬಳಿ ಅನುಮಾನಾಸ್ಪದ ಚಲನವಲನಗಳನ್ನು ಅವರು ಗಮನಿಸಿದರು. ಇದನ್ನು ಪ್ರಶ್ನಿಸಿದಾಗ, ಶಂಕಿತ ಕಳ್ಳಸಾಗಣೆದಾರರು ಓಡಿಹೋದರು. ಶಂಕಿತರು ತಪ್ಪಿಸಿಕೊಂಡರೂ, ಜಾಗರೂಕ ಬಿಎಸ್ಎಫ್ ಸಿಬ್ಬಂದಿ ಈ ಪ್ರದೇಶದಲ್ಲಿ ಸಮಗ್ರ ಶೋಧ ನಡೆಸಿದರು, ಈ ವೇಳೆ ಅಪಾರ ಪ್ರಮಾಣದ ಚಿನ್ನಾಭರಣ ಜಪ್ತಿ ಮಾಡಿಕೊಂಡಿದ್ದಾರೆ. ವಶಪಡಿಸಿಕೊಂಡ ವಸ್ತುಗಳಲ್ಲಿ ಚಿನ್ನದ ಗಟ್ಟಿಗಳು, ಬಿಸ್ಕತ್ತುಗಳು…

Read More

ನವದೆಹಲಿ : ಸಿರಿಯಾದಲ್ಲಿ ಪರಿಸ್ಥಿತಿ ಗಂಭೀರವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ವಿದೇಶಾಂಗ ಸಚಿವಾಲಯ ಸಲಹೆ ಸೂಚನೆ ನೀಡಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದಿಂದ ಸಹಾಯವಾಣಿ ಸಂಖ್ಯೆಗಳನ್ನು ಸಹ ನೀಡಲಾಗಿದೆ. ಅಲ್ಲದೆ, ಅಲ್ಲಿಗೆ ಪ್ರಯಾಣಿಸದಂತೆ ಸೂಚಿಸಲಾಗಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಸಾಮಾಜಿಕ ಮಾಧ್ಯಮ X ನಲ್ಲಿ ಪೋಸ್ಟ್ ಮಾಡಿದೆ, “ಸಿರಿಯಾದಲ್ಲಿನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಈ ನಿಟ್ಟಿನಲ್ಲಿ ಹೆಚ್ಚಿನ ಮಾಹಿತಿ ನೀಡುವವರೆಗೆ ಭಾರತೀಯ ನಾಗರಿಕರಿಗೆ ಸಿರಿಯಾಕ್ಕೆ ಪ್ರಯಾಣಿಸದಂತೆ ಸೂಚಿಸಲಾಗಿದೆ. ಸಿರಿಯಾದಲ್ಲಿ ವಾಸಿಸುವ ಭಾರತೀಯರು ಭಾರತೀಯ ರಾಯಭಾರ ಕಚೇರಿಯನ್ನು ಸಂಪರ್ಕಿಸಲು ಸೂಚಿಸಲಾಗಿದೆ. ತುರ್ತು ಸಹಾಯವಾಣಿ ಸಂಖ್ಯೆ +96399385793 ನಲ್ಲಿ ಈ ಸಂಖ್ಯೆ WhatsApp ನಲ್ಲಿಯೂ ಲಭ್ಯವಿದೆ. ನೀವು hoc.damascus@mea.gov.in ಗೆ ಇಮೇಲ್ ಮಾಡಬಹುದು, ಪ್ರಸ್ತುತ ಸಿರಿಯಾದಲ್ಲಿರುವವರು ಆದಷ್ಟು ಬೇಗ ಅಲ್ಲಿಂದ ಹಿಂತಿರುಗಲು ಮತ್ತು ಅವರ ಸುರಕ್ಷತೆಯನ್ನು ನೋಡಿಕೊಳ್ಳಿ ಎಂದು ತಿಳಿಸಿದೆ. https://twitter.com/MEAIndia/status/1865096702312567027?ref_src=twsrc%5Etfw%7Ctwcamp%5Etweetembed%7Ctwterm%5E1865096702312567027%7Ctwgr%5E744ccdeaf4dfb9df364e14ada7656ab5da6cbc14%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fhindi%2Fndtvindiahindi-epaper-dh413d09b892d54d6daaf0b764dd6f488f%2Fsiriyakolekarbharatnejarikiedavaijarijaniekyasalahdigai-newsid-n642345878 ಸಿರಿಯಾದಲ್ಲಿ ಇಸ್ಲಾಮಿಸ್ಟ್ ನೇತೃತ್ವದ ಬಂಡುಕೋರರು ನಿಯಂತ್ರಣ ಸಾಧಿಸುತ್ತಿದ್ದಂತೆ, ಅಲ್ಲಿನ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವುದಾಗಿ ಭಾರತ ಶುಕ್ರವಾರ ಹೇಳಿದೆ. ದೇಶದ ಅತಿದೊಡ್ಡ ನಗರವಾದ ಅಲೆಪ್ಪೊದ ಹೆಚ್ಚಿನ…

Read More

ಬೆಂಗಳೂರು : 2024-25ನೇ ಸಾಲಿನ ಬಿ.ಇಡಿ ಕೋರ್ಸಿನ ವ್ಯಾಸಂಗಕ್ಕಾಗಿ ಸರ್ಕಾರಿ ಕೊಟಾದ ಸೀಟುಗಳ ದಾಖಲಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ 1ನೇ ಸುತ್ತಿನ ಸೀಟು ಹಂಚಿಕೆಯ ಪಟ್ಟಿಯನ್ನು ದಿನಾಂಕ:06/12/2024 ರಂದು ಇಲಾಖಾ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಸೀಟು ಹಂಚಿಕೆಯಾದ ಅಭ್ಯರ್ಥಿಗಳು Online ನಲ್ಲಿ ಚಲನ್ ಡೌನ್‌ಲೋಡ್ ಮಾಡಿಕೊಂಡು ನಿಗದಿತ ದಾಖಲಾತಿ ಶುಲ್ಕವನ್ನು SBI ಬ್ಯಾಂಕಿನಲ್ಲಿ ಪಾವತಿಸಿ, ದಿನಾಂಕ:07/12/2024 ರಿಂದ 10/12/2024 ರೊಳಗಾಗಿ ಚಲನ್ ಪ್ರತಿಯನ್ನು ಸಂಬಂಧಿಸಿದ ನೋಡಲ್ ಕೇಂದ್ರಕ್ಕೆ (DIET/CTE) ಸಲ್ಲಿಸಿ, ಪ್ರವೇಶಾತಿ ಪತ್ರವನ್ನು (Admission Slip) ಸ್ವೀಕರಿಸುವುದು ಹಾಗೂ ದಿನಾಂಕ:13/12/2024 ರೊಳಗಾಗಿ ಕಾಲೇಜಿಗೆ ದಾಖಲಾತಿ ಪಡೆದುಕೊಳ್ಳುವುದು. ಶುಲ್ಕ ಪಾವತಿಸಿ, ನಿಗದಿತ ದಿನಾಂಕದೊಳಗೆ ಸಂಬಂಧಿಸಿದ ಕಾಲೇಜುಗಳಿಗೆ ದಾಖಲಾಗದ ಅಭ್ಯರ್ಥಿಗಳು ಮುಂದಿನ ಸುತ್ತಿಗೆ ತಮ್ಮ ಅರ್ಹತೆಯನ್ನು ಕಳೆದುಕೊಳ್ಳುತ್ತಾರೆ. ಆದ್ದರಿಂದ ಸೀಟು ಹಂಚಿಕೆಯಾದ ಕಾಲೇಜಿಗೆ ದಾಖಲಾತಿ ಪಡೆದುಕೊಳ್ಳುವುದು. ಹೆಚ್ಚಿನ ಮಾಹಿತಿಗಾಗಿ www.schooleducation.karnataka.gov.in e ఇಲಾಖಾ ವೆಬ್‌ಸೈಟ್ ಸಂಪರ್ಕಿಸುವುದು. ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಅಭ್ಯರ್ಥಿಗಳಿಗೆ ವೈಯಕ್ತಿಕವಾಗಿ ಮಾಹಿತಿ ನೀಡಲಾಗುವುದಿಲ್ಲ.

Read More

ಬೆಂಗಳೂರು : ಕಳೆದ ಮೂರು-ನಾಲ್ಕು ದಶಕಗಳಿಂದ ಸರ್ಕಾರದ ವಿವಿಧ ಯೋಜನೆಗಳ ಅಡಿಯಲ್ಲಿ ಲಕ್ಷಾಂತರ ರೈತರಿಗೆ ಜಮೀನು ಮಂಜೂರು ಮಾಡಲಾಗಿದೆ. ಆದರೆ, ನಾನಾ ಕಾರಣಗಳಿಂದಾಗಿ ರೈತರಿಗೆ ಸೂಕ್ತ ದಾಖಲೆಗಳನ್ನು ನೀಡಲಾಗಿಲ್ಲ. ಪರಿಣಾಮ ರೈತರು ಸಂಕಷ್ಟಕ್ಕೆ ಒಳಗಾಗಬೇಕಾದ ಸ್ಥಿತಿ ಇದೆ. ರೈತರು ತಮ್ಮ ಪಾಲಿನ ಜಮೀನು ಇದ್ದರೂ ಸಹ ಪೋಡಿಯಾಗದೆ ಸರ್ಕಾರಿ ಕಚೇರಿಗಳಿಗೆ ಸುತ್ತುವುದು ಪರಿಪಾಟವಾಗಿದೆ. ಹೀಗಾಗಿ ರೈತರಿಗೆ ಇಂತಹ ಶೋಷಣೆಗಳಿಂದ ತುಸು ನೆಮ್ಮದಿ ನೀಡಬೇಕು ಎಂಬ ವಿಚಾರದಲ್ಲಿ ರಾಜ್ಯ ಸರ್ಕಾರ ಹಾಗೂ ಕಂದಾಯ ಇಲಾಖೆ ಸ್ಪಷ್ಟವಾಗಿತ್ತು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ನಮೂನೆ 1-5 ಹಾಗೂ 6-10 ಅನ್ನು ಸರಳೀಕರಣಗೊಳಿಸಿ ರೈತರ ಜಮೀನನ್ನು ದುರಸ್ಥಿ ಮಾಡಿಕೊಡಬೇಕು ಹಾಗೂ ಬಡ ರೈತರ ಪಾಲಿನ ಮಹತ್ವಾಕಾಂಕ್ಷೆಯ ಯೋಜನೆಯಾದ ಬಗರ್ ಹುಕುಂ ಅಡಿಯಲ್ಲಿ ಮಂಜೂರು ಮಾಡಲಾಗುವ ಜಮೀನಿಗೆ ಹಕ್ಕುಪತ್ರ ನೀಡುವುದು ಮಾತ್ರವಲ್ಲದೆ, ರಿಜಿಸ್ಟರ್ ಕಚೇರಿಯಲ್ಲಿ ಸ್ವತಃ ತಹಶೀಲ್ದಾರ್ ನೋಂದಣಿ ಮಾಡಿಕೊಡುವಂತಹ ವ್ಯವಸ್ಥೆಯನ್ನು ರೂಪಿಸಬೇಕು ಎಂಬ ವಿಚಾರದಲ್ಲಿ ನಮ್ಮ ಸರ್ಕಾರ ದೃಢ ನಿರ್ಧಾರ ತೆಗೆದುಕೊಂಡಿತ್ತು. ಅದರಂತೆ ನಮೂನೆ 1-5…

Read More

ಮಂಗಳೂರು: ಬಂದರು ನಗರಿ ಮಂಗಳೂರಿನ ಶಕ್ತಿನಗರದ ಜನರಲ್ಲಿ ಎಂದಿಲ್ಲದ ಹರ್ಷ. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಶಕ್ತಿ’ ಗ್ಯಾರೆಂಟಿ ಯೋಜನೆ ರಾಜ್ಯದ ಎಲ್ಲೆಡೆ ಮಹಿಳೆಯರ ಪಾಲಿಗೆ ಆಶಾಕಿರಣವಾದರೆ, ಖಾಸಗಿ ಬಸ್’ಗಳ ಪ್ರಾಬಲ್ಯವಿರುವ ದಕ್ಷಿಣ ಕನ್ನಡದ ಬಹುತೇಕ ಊರುಗಳ ಮಹಿಳೆಯರಿಗೆ ನಿಲುಕದ ಕುಸುಮದಂತಿದೆ. ಇಂತಹಾ ಸ್ಥಿತಿಯನ್ನು ಮನಗಂಡ ಸಾಮಾಜಿಕ ಹೋರಾಟಗಾರರೂ ಆದ ಮಂಗಳೂರಿನ ಹಿರಿಯ ವಕೀಲ ಮನೋರಾಜ್ ರಾಜೀವ್ ಅವರ ಕಾಳಜಿಯಿಂದ ಮಂಗಳೂರು ಸುತ್ತಮುತ್ತಲ ಗ್ರಾಮಗಳಲ್ಲಿ ಸರ್ಕಾರಿ ಬಸ್ ಸಂಚರಿಸುವಂತಾಗಿದೆ. ಮಂಗಳೂರಿನ ಶಕ್ತಿನಗರ ಅನನ್ಯ ಸಂಭ್ರಮಕ್ಕೆ ಸಾಕ್ಷಿಯಾಯಿತು. ಶಕ್ತಿನಗರ ಪದವು ವಾರ್ಡ್ ಸುತ್ತಮುತ್ತಲ ಜನರು ತಮ್ಮೂರಿಗೆ ಸರ್ಕಾರಿ ಬಸ್ ಬರಬೇಕು, ಶಕ್ತಿ ಯೋಜನೆಯ ಅನುಕೂಲ ತಮಗೂ ಸಿಗಬೇಕೆಂದು ಬಹುಕಾಲದಿಂದ ಒತ್ತಾಯಿಸುತ್ತಲೇ ಇದ್ದರು. ಜನಪ್ರತಿನಿಧಿಗಳು ಸ್ಪಂಧಿಸದಿದ್ದಾಗ ಮಾಜಿ ಸರ್ಕಾರಿ ವಕೀಲರೂ ಆದ ಜಿಲ್ಲಾ ಕಾಂಗ್ರೆಸ್ ಕಾನೂನು, ಮಾನವ ಹಕ್ಕು ಹಾಗೂ ಮಾಹಿತಿ ಹಕ್ಕು ಘಟಕದ ಅಧ್ಯಕ್ಷರಾದ ಮನೋರಾಜ್ ರಾಜೀವ ಅವರು ಮಾಡಿದ ಕೆಲಸ ಎಂಪಿ-ಎಮ್ಮೆಲ್ಲೆಗಳನ್ನೂ ನಾಚಿಸುವಂತಿದೆ. ಶಕ್ತಿನಗರಕ್ಕೆ ಬಸ್ ಬಾರಿಸಬೇಕೆಂಬ ಈ ವಕೀಲರ ಭಗೀರಥ ಪ್ರಯತ್ನಕ್ಕೆ…

Read More

ಬೆಂಗಳೂರು : ರಾಜ್ಯ ಔಷಧ ಸರಬರಾಜು ನಿಗಮಕ್ಕೆ ಕಾಯಕಲ್ಪ ನೀಡುವತ್ತ ಕೆಲವು ಕ್ರಮಗಳನ್ನ ಕೈಗೊಳ್ಳಲಾಗುತ್ತಿದ್ದು ಈ ನಿಟ್ಟಿನಲ್ಲಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿರುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸಚಿವ ಸಂಪುಟ ಸಭೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಬಾಣಂತಿಯರ ಸಾವಿಗೂ ಔಷಧ ನಿಯಂತ್ರಣ ಇಲಾಖೆ ಹಾಗೂ ಆಹಾರ ಸುರಕ್ಷತಾ ಇಲಾಖೆ ವಿಲೀನಕ್ಕೂ ಸಂಬಂಧಿವಿಲ್ಲ ಎಂದು ಸ್ಪಷ್ಟಪಡಿಸಿದರು. ಔಷಧ ನಿಯಂತ್ರಣ ಇಲಾಖೆ ಹಾಗೂ ಆಹಾರ ಸುತಕ್ಷತಾ ಇಲಾಖೆಯನ್ನ ಆಡಳಿತಾತ್ಮಕ ದೃಷ್ಟಿಯಿಂದ ವಿಲೀನಗೊಳಿಸುವ ಪ್ರಸ್ತಾವನೆ ಈ ಹಿಂದೆಯೇ ಇತ್ತು. ಗುಣಮಟ್ಟ ಪರಿಶೀಲನೆಯಲ್ಲಿ ಔಷಧ ನಿಯಂತ್ರಣ ಇಲಾಖೆಗೆ ಮೇಲ್ವಿಚಾರಣೆಯ ಅಗತ್ಯತೆ ಇದೆ. ಐಎಎಸ್ ಮಟ್ಟದ ಅಧಿಕಾರಿ ಇದ್ದರೆ ಉತ್ತಮ ಎಂಬ ಕಾರಣಕ್ಕೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಔಷಧ ಸರಬರಾಜು ನಿಗಮಕ್ಕೂ ಕಾಯಕಲ್ಪ ನೀಡುವ ಅಗತ್ಯತೆ ಇದೆ. KSMCL ಕರೆಯುವ ಟೆಂಡರ್ ಗಳಲ್ಲಿ ಗುಣಮಟ್ಟದ ಔಷಧಿಗಳನ್ನ ಪೂರೈಸುವಂತಹ ದೊಡ್ಡ ಕಂಪನಿಗಳು ಪಾಲ್ಗೊಳ್ಳುವಂತಾಗಬೇಕು. ಇನ್ನಷ್ಟು ಪರಿಣಕಾರಿಯಾಗಿ ಔಷಧ ಗುಣಮಟ್ಟ…

Read More

ಬೆಂಗಳೂರು : 66/11ಕೆ.ವಿ ಎನ್.ಜಿ.ಇ.ಎಫ್’ ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ಡಿಸೆಂಬರ್ 7 ರ ಇಂದು ಬೆಳಗ್ಗೆ 10 ಗಂಟೆ ಯಿಂದ ಸಂಜೆ 5 ಗಂಟೆ ವರೆಗೆ ವಿದ್ಯುತ್ ವ್ಯತ್ಯಯ ಉಂಟಾಗುತ್ತದೆ. ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: “ಎಸ್‌ಎಂವಿಬಿ ರೈಲು ನಿಲ್ದಾಣ, ಇಂದಿರಾನಗರ 1ನೇ ಹಂತ, ಎಚ್‌ಎಎಲ್ 2ನೇ ಹಂತ, ಹಲಸೂರು, ಹಳೆ ಮದ್ರಾಸ್ ರಸ್ತೆ, ಬೆನ್ನಿಗಾನಹಳ್ಳಿ, ಎ ನಾರಾಯಣಪುರ, ಬಿ ನಾರಾಯಣಪುರ, ಕಗ್ಗದಾಸಪುರ, ಆಕಾಶ ನಗರ, ಪೈ ಲೇಔಟ್, ಬೈರಸಂದ್ರ, ಸಿ.ವಿ. ರಾಮನಗರ, ಎನ್‌ಜಿಇಎಫ್ ಲೇಔಟ್ನ ಪರ‍್ವ, ಸದಾನಂದನಗರ, ಕಸ್ತೂರಿನಗರ, ಭುವನೇಶ್ವರಿ ನಗರ, ಹೊಯ್ಸಳನಗರ, ಮುನೇಶ್ವರನಗರ, ಬಿಡಿಎ ಲೇಔಟ್, ಮುನಿನಂಜಪ್ಪ ಲೇಔಟ್, ದಯಾನಂದ ಲೇಔಟ್, ಕೆಜಿ ಪುರ, ಅಬ್ಬಯ್ಯ ರೆಡ್ಡಿ ಲೇಔಟ್, ನಾಗಪ್ಪ ರೆಡ್ಡಿ ಲೇಔಟ್, ನಾಗವಾರಪಾಳ್ಯ, ರ‍್ತೂರು ರಸ್ತೆ, ಕೆ.ಆರ್. ರಸ್ತೆ. ಜೋಗುಪಾಳ್ಯ ರ‍್ಟಿಲರಿ ರಸ್ತೆ, ಕೇಂಬ್ರಿಡ್ಜ್ ಲೇಔಟ್, ಕಾರ್ ಸ್ಟ್ರೀಟ್, ಬಜಾರ್ ಸ್ಟ್ರೀಟ್, ಮಿಲೇನಿಯಾ ಟರ‍್ಸ್, ಹಲಸೂರು ರಸ್ತೆ, ಸಿ.ಎಮ್.ಹೆಚ್ ರಸ್ತೆ, ಇಂದಿರಾನಗರ…

Read More

ಗೃಹಪ್ರವೇಶಕ್ಕೆ ಮನೆ ಯಜಮಾನನ ಜಾತಕವನ್ನು ನೋಡಿ ಮುಹೂರ್ತವನ್ನು ನಿಷ್ಕರ್ಷೆ ಮಾಡಬೇಕು ಆದರೆ ಸ್ಥೂಲವಾಗಿ ವಾರ ತಿಥಿ ನಕ್ಷತ್ರ ಲಗ್ನ ಕಾಲ ದ್ವಾದಶ ಸುದ್ದಿ ಬಗ್ಗೆ ಸ್ವಲ್ಪ ತಿಳುವಳಿಕೆ ಅಗತ್ಯ. ವೈಶಾಖ ಮಾಸದಲ್ಲಿ ಗೃಹಪ್ರವೇಶ ನಡೆಸಿದ್ದಲ್ಲಿ ಬಹು ಪ್ರಶಸ್ತ ಪ್ರದವಾದದ್ದು. ಜೇಷ್ಠ ಮಾಸವು ಶುಭ ಪಾಲ್ಗುಣ ಸಂಪತ್ಕರ ಮಾಘಮಾಸದಲ್ಲಿ ಸುಖ ಸಂತೋಷ ಮತ್ತು ಧಾನ್ಯ ಸಮೃದ್ಧಿ ವಾರಗಳಲ್ಲಿ ಸೋಮವಾರ ಬುಧವಾರ ಗುರುವಾರ ಶುಕ್ರವಾರ ಸಂಪತ್ಕರ ತಿಥಿಗಳಲ್ಲಿ ತೃತಿಯ ಪಂಚಮಿ ಸಪ್ತಮಿ ದಶಮಿ ತ್ರಯೋದಶಿ ಶ್ರೇಷ್ಠ. ರಕ್ತ ತಿಥಿ ದಗ್ದ ಯೋಗ ತಿಥಿಗಳು ಭದ್ರ ಕರಣ ಶುಕ್ಲ ಷಷ್ಟಿಗಳು ಬಹುಳ ಏಕಾದಶಿ ಮೊದಲ ಶುಕ್ಲ ಪ್ರತಿಪದಿಯ ವರೆಗೆ ಪ್ರದೋಷಗಳು ಸೂರ್ಯನನ್ನು ತನಗೆದುರಿಗಿರುವ ಶುಕ್ರನನ್ನು ಬಿಟ್ಟು ಗೃಹಪ್ರವೇಶ ಮಾಡತಕ್ಕದ್ದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ…

Read More

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆದಿದ್ದು, ಕರ್ನಾಟಕ ಜನನ ಮರಣಗಳ ನೋಂದಣಿ (ತಿದ್ದುಪಡಿ) ನಿಯಮಗಳು 2024ಕ್ಕೆ ಅನುಮೋದನೆ ನೀಡಲಾಗಿದೆ. ಸಚಿವ ಹೆಚ್.ಕೆ. ಪಾಟೀಲ್ ಈ ಬಗ್ಗೆ ಮಾಹಿತಿ ನೀಡಿದ್ದು, ವರ್ಷಕ್ಕಿಂತ ಹಿಂದಿನ ಸಾವಿನ ಪ್ರಕರಣಗಳಲ್ಲಿ ನ್ಯಾಯಾಲಯದ ಆದೇಶದ ಮೂಲಕವೇ ಮರಣ ಪ್ರಮಾಣ ಪತ್ರ ಪಡೆಯಬೇಕು ಎನ್ನುವ ಷರತ್ತು ರದ್ದುಗೊಳಿಸುವ ಜನನ ಮತ್ತು ಮರಣ ತಿದ್ದುಪಡಿ ವಿಧೇಯಕಕ್ಕೆ ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.ಮರಣ ಪ್ರಮಾಣ ಪತ್ರದಲ್ಲಿ ಲಭ್ಯವಿದ್ದಲ್ಲಿ ಕಾಯಿಲೆಯ ಅಥವಾ ಆಸ್ಪತ್ರೆಯ ಹಿನ್ನೆಲೆಯನ್ನು ದಾಖಲಿಸಿ ಡಿಜಿಟಲ್ ಜನನ ಮತ್ತು ಮರಣ ಪ್ರಮಾಣ ಪತ್ರ ವಿತರಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ. ಹೀಗಿವೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು. * ಕರ್ನಾಟಕ ಜನನ ಮರಣಗಳ ನೋಂದಣಿ (ತಿದ್ದುಪಡಿ) ನಿಯಮಗಳು 2024ಕ್ಕೆ ಅನುಮೋದನೆ * ಬೆಂಗಳೂರಿನ ಸಂಪಂಗಿರಾಮ ನಗರದಲ್ಲಿ ಸಮಾಜ ಕಲ್ಯಾಣ ಭವನವನ್ನು ₹40 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ…

Read More

ನವದೆಹಲಿ : ಮಧ್ಯಪ್ರದೇಶದಲ್ಲಿ ಜೈಶ್ರೀರಾಮ್ ಎಂದು ಘೋಷಣೆ ಕೂಗುವಂತೆ ಅಪ್ರಾಪ್ತ ಮಕ್ಕಳಿಗೆ ಯುವಕನೊಬ್ಬ ಥಳಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಧ್ಯಪ್ರದೇಶದ ರತ್ಲಾಮ್ ನಲ್ಲಿ ಜೈ ಶ್ರೀ ರಾಮ್ ಎಂದು ಹೇಳಲು ಯುವಕನೊಬ್ಬ ಮಕ್ಕಳಿಗೆ ಕೇಳಿದನು ಮತ್ತು ಅವರು ಜೈ ಶ್ರೀ ರಾಮ್ ಎಂದು ಹೇಳುವವರೆಗೂ ಅವನು ಅವರನ್ನು ಹೊಡೆಯುತ್ತಲೇ ಇದ್ದನು ಎಂದು ಹೇಳಲಾಗುತ್ತಿದೆ. ಮಕ್ಕಳು ಅಳುತ್ತಲೇ ಇದ್ದರು ಆದರೆ ಹುಡುಗ ನಿಲ್ಲಿಸಲಿಲ್ಲ. ಕಪಾಳಮೋಕ್ಷ ಮಾಡಿದರೂ ಸಮಾಧಾನವಾಗದಿದ್ದಾಗ ಚಪ್ಪಲಿ ತೆಗೆದು ಮಕ್ಕಳಿಗೆ ಹೊಡೆಯತೊಡಗಿದ. ಪ್ರಕರಣ ಒಂದು ತಿಂಗಳ ಹಿಂದಿನದು ಎನ್ನಲಾಗಿದೆ. ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದಾಗಲೇ ವಿಷಯ ಬೆಳಕಿಗೆ ಬಂದಿದೆ. ವ್ಯಕ್ತಿ ಹೊಡೆದ ಮೂವರು ಮಕ್ಕಳಲ್ಲಿ 6 ವರ್ಷದ ಮಗು ಕೂಡ ಸೇರಿದೆ. ಉಳಿದ ಇಬ್ಬರ ವಯಸ್ಸು 11 ಮತ್ತು 13 ವರ್ಷ ಎನ್ನಲಾಗಿದೆ. ವ್ಯಕ್ತಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. https://twitter.com/i/status/1864720434895233524 ವರದಿಯ ಪ್ರಕಾರ, ಗುರುವಾರ ಮೂವರು ಬಾಲಕರ ಕುಟುಂಬಗಳು ಮನಕ್ ಚೌಕ್ ಪೊಲೀಸ್ ಠಾಣೆಗೆ ಆಗಮಿಸಿ ಆರೋಪಿ…

Read More