Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ರಾಜ್ಯದಲ್ಲಿ 800 ಸರ್ಕಾರಿ (ಮ್ಯಾಗ್ನೆಟ್) ಶಾಲೆಗಳನ್ನು ADB, KKRDB ನಿಧಿ ಹಾಗೂ CEPMIZ ತಾಲ್ಲೂಕುಗಳಲ್ಲಿನ KMERC ನಿಧಿಗಳ ಸಹಾಯದಿಂದ ಕೆ.ಪಿ.ಎಸ್. ಮಾನದಂಡಗಳ ಕೈಪಿಡಿಯಂತೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಗಳಾಗಿ (KPS) ಉನ್ನತೀಕರಿಸಲು ವಿಸ್ತ್ರತ ಯೋಜನಾ ವರದಿ (DPR) ತಯಾರಿಸಲು ಸಂಸ್ಥೆಯನ್ನು ಆಯ್ಕೆ ಮಾಡಲು ಅನುಮೋದನೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮೇಲೆ ಓದಲಾದ ಕ್ರಮಾಂಕ(1) ರಲ್ಲಿ ಸನ್ಮಾನ್ಯ ಮುಖ್ಯಮಂತ್ರಿಯವರು ವಿಧಾನ ಮಂಡಲದಲ್ಲಿ ಮಂಡಿಸಿದ 2025-26ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಗೆ ಸಂಬಂಧಿಸಿದಂತೆ ಕಂಡಿಕೆ-105 ರಲ್ಲಿ “ಪೂರ್ವ ಪ್ರಾಥಮಿಕದಿಂದ ಪದವಿ ಪೂರ್ವ ಹಂತದವರೆಗೂ ಒಂದೇ ಸೂರಿನಡಿ ಗುಣಮಟ್ಟ ಶಿಕ್ಷಣ ನೀಡಲು ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಪ್ರಾರಂಭಿಸಲಾಗಿರುವ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ವಿಸ್ತರಿಸಲು ಉದ್ದೇಶಿಸಿದೆ. ಏಷಿಯನ್ ಡೆವಲೆಪ್ಮೆಂಟ್ ಬ್ಯಾಂಕ್ ನೆರವಿನೊಂದಿಗೆ 2,500 ಕೋಟಿ ರೂ. ವೆಚ್ಚದಲ್ಲಿ 500 ಹೊಸ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಲಾಗುವುದು” ಮತ್ತು ಕಂಡಿಕೆ-118 ರಲ್ಲಿ ” ಕಲ್ಯಾಣ ಕರ್ನಾಟಕ…
ಬೆಂಗಳೂರು : ಚಿಕನ್ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ದೇಶದ ಹಲವಡೆ ಕೋಳಿ ಮಾಂಸ, ಮೊಟ್ಟೆ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. ಕೋಳಿ ಮಾಂಸದ ಬೆಲೆ ಏರಿಕೆಗೆ ಕಾರಣ ಸರಣಿ ಹಬ್ಬಗಳ ಆಗಮನ ಎಂದು ಹೇಳಲಾಗುತ್ತದೆ. ಕೋಳಿ ಮಾಂಸದ ಬೆಲೆ ಈಗ ಹೆಚ್ಚಾಗಿದೆ. ಪ್ರಸ್ತುತ, ಮಾರುಕಟ್ಟೆಯಲ್ಲಿ ಕೋಳಿ ಬೆಲೆ 190 ರಿಂದ 200 ರೂ. ಮತ್ತು ಒಂದು ಕೆಜಿ ಕೋಳಿ ಮಾಂಸದ ಬೆಲೆ 300 ರೂ. ತಲುಪಿದೆ. ಇತ್ತೀಚೆಗೆ, ಒಂದು ಕೆಜಿ ಕೋಳಿ ಮಾಂಸದ ಬೆಲೆ 230 ರಿಂದ 240 ರೂ.ಗಳಷ್ಟಿತ್ತು. ಈಗ ಅದು ತೀವ್ರವಾಗಿ ಏರಿಕೆಯಾಗಿ 270 ರೂ. ಮೊಟ್ಟೆಗಳ ಬೆಲೆಯೂ ಹೆಚ್ಚಾಗಿದ್ದು, ಸಾಮಾನ್ಯ ಜನರಿಗೆ ಶಾಕ್ ಎದುರಾಗಿದೆ.. ಭಾನುವಾರ ಬಂತೆಂದರೆ ಕೋಳಿ ಅಂಗಡಿಗಳ ಮುಂದೆ ಸರತಿ ಸಾಲುಗಳು ರೂಪುಗೊಳ್ಳುತ್ತವೆ. ಡಿಸೆಂಬರ್ನಲ್ಲಿ ಒಂದು ಕೆಜಿ ಕೋಳಿಯ ಬೆಲೆ 240-250 ರೂ.ಗಳ ನಡುವೆ ಮುಂದುವರೆಯಿತು. ಆದರೆ ಡಿಸೆಂಬರ್ ಕೊನೆಯ ವಾರ ಮತ್ತು ಈ ವರ್ಷದ ಮೊದಲ ವಾರದ ನಡುವೆ, ಕೋಳಿಯ ಬೆಲೆ ತೀವ್ರವಾಗಿ…
ಬೆಂಗಳೂರು : 2025-26ನೇ ಸಾಲಿನಲ್ಲಿ ಶುಚಿ ಕಾರ್ಯಕ್ರಮದಡಿ ಸ್ಯಾನಿಟರಿ ನ್ಯಾಪ್ಟಿನ್ ಪ್ಯಾಡ್ಗಳನ್ನು ಹಾಗೂ ಮುಟ್ಟಿನ ಕಪ್ ಗಳನ್ನು ಖರೀದಿಸಲು ಮತ್ತು ವಿತರಣೆ ಮಾಡಲು ಆಡಳಿತಾತ್ಮಕ ಅನುಮೋದನೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮೇಲೆ ಕ್ರಮಸಂಖ್ಯೆ (1)ರಲ್ಲಿ ಓದಲಾದ ಆದೇಶದಲ್ಲಿ 2025-26ನೇ ಸಾಲಿನಲ್ಲಿ ಶುಚಿ ಕಾರ್ಯಕ್ರಮದಡಿಯಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಸರ್ಕಾರಿ, ಸರ್ಕಾರಿ ಅನುದಾನಿತ ಶಾಲೆಗಳು, ಕಾಲೇಜುಗಳು ಮತ್ತು ಸರ್ಕಾರಿ ಹಾಸ್ಟೆಲ್ಗಳಲ್ಲಿ ನೋಂದಾಯಿಸಲಾದ ಎಲ್ಲಾ ಹದಿಹರೆಯದ ಹೆಣ್ಣುಮಕ್ಕಳಿಗೆ ವಿತರಿಸಲು 2,35,74,084 ಯೂನಿಟ್ ಸ್ಯಾನಿಟರಿ ನ್ಯಾಪ್ಕಿನ್ಗಳನ್ನು (ಒಂದು ಯೂನಿಟ್ = 10 ಪ್ಯಾಡ್ಗಳು) ಪ್ರತಿ ಯೂನಿಟ್ಗೆ ಅಂದಾಜು ರೂ.30.47/- ರಂತೆ ಒಟ್ಟು ರೂ.71.83 (ಎಪ್ಪತ್ತೊಂದು ಕೋಟಿ ಎಂಭತ್ತ ಮೂರು ಲಕ್ಷ ರೂಪಾಯಿಗಳು ಮಾತ್ರ) ಕೋಟಿ ಮೊತ್ತದಲ್ಲಿ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ನಿಯಮಿತದ (ಕೆಎಸ್ಎಂಎಸ್ಸಿಎಲ್) ಮುಖಾಂತರ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳ ಪಾರದರ್ಶಕತೆ ಅಧಿನಿಯಮ ಹಾಗೂ ನಿಯಮಾವಳಿಗಳನ್ವಯ ಖರೀದಿಸಿ ವಿತರಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿರುತ್ತದೆ. ಮೇಲೆ ಕ್ರಮಸಂಖ್ಯೆ (2) ರಲ್ಲಿ ಓದಲಾದ…
ನೀವು ಯಾವುದೇ ಪ್ರಕರಣದಲ್ಲಿ ಸಿಲುಕಿಕೊಂಡಾಗ ಅಥವಾ ಬೇರೆ ಯಾವುದೇ ಕಾನೂನು ಸಲಹೆಯ ಅಗತ್ಯವಿದ್ದಾಗ, ನೀವು ವಕೀಲರನ್ನು ಸಂಪರ್ಕಿಸಬೇಕು. ಕೆಲವೊಮ್ಮೆ ಇದು ಸಾಧ್ಯವಾಗದಿರಬಹುದು. ಇದು ತೊಂದರೆಗಳನ್ನು ಇನ್ನಷ್ಟು ಹದಗೆಡಿಸಬಹುದು. ಕೆಲವು ಸಂದರ್ಭಗಳಲ್ಲಿ, ಇದು ದುಬಾರಿಯೂ ಆಗಿರುತ್ತದೆ. ಅಂತಹ ಸಮಯದಲ್ಲಿ, ಉಚಿತ ಕಾನೂನು ಸಲಹೆಯನ್ನು ಪಡೆಯುವುದು ಒಳ್ಳೆಯದು. ಅಂತಹ ಜನರಿಗೆ, ಹೊಸ ವರ್ಷದ ಸಂದರ್ಭದಲ್ಲಿ, ಭಾರತ ಸರ್ಕಾರವು ಇನ್ಸ್ಟೆಂಟ್ ಮೆಸೆಂಜರ್ ಅಪ್ಲಿಕೇಶನ್ ವಾಟ್ಸಾಪ್ನಲ್ಲಿ ನ್ಯಾಯ ಸೇತು ಚಾಟ್ಬಾಟ್ ಅನ್ನು ಪ್ರಾರಂಭಿಸಿದೆ. ಕಾನೂನು ಮತ್ತು ನ್ಯಾಯ ಸಚಿವಾಲಯವು ಇದನ್ನು ವಾಟ್ಸಾಪ್ನಲ್ಲಿ ಪೋಸ್ಟ್ನಲ್ಲಿ ಪ್ರಕಟಿಸಿದೆ. ನ್ಯಾಯ ಸೇತು ನಾಗರಿಕರಿಗೆ ಉಚಿತ ಕಾನೂನು ಸಹಾಯವನ್ನು ಒದಗಿಸುವ AI ಚಾಟ್ಬಾಟ್ ಆಗಿದೆ. ಈ ಸ್ಮಾರ್ಟ್ ಪ್ಲಾಟ್ಫಾರ್ಮ್ ಕಾನೂನು ಸಲಹೆಗಾಗಿ ವಕೀಲರೊಂದಿಗೆ ನಿಮ್ಮನ್ನು ನೇರವಾಗಿ ಸಂಪರ್ಕಿಸುತ್ತದೆ, ಪ್ರತಿಯೊಬ್ಬ ನಾಗರಿಕನು ಸಕಾಲಿಕ ಮತ್ತು ನಿಖರವಾದ ಮಾರ್ಗದರ್ಶನವನ್ನು ಪಡೆಯುವುದನ್ನು ಖಚಿತಪಡಿಸುತ್ತದೆ. ನ್ಯಾಯ ಸೇತು ನಿಮ್ಮ ವಾಟ್ಸಾಪ್ಗೆ ನೇರವಾಗಿ ನ್ಯಾಯವನ್ನು ಪಡೆಯುವ ಅನುಕೂಲವನ್ನು ಒದಗಿಸುತ್ತದೆ. ಕಾನೂನು ಸಲಹೆ ಮತ್ತು ಮಾಹಿತಿಗಾಗಿ ಏಕೀಕೃತ ಇಂಟರ್ಫೇಸ್ ಅನ್ನು ಪ್ರವೇಶಿಸಲು…
ಬೆಂಗಳೂರು : 2025-26 ಶೈಕ್ಷಣಿಕ ಸಾಲಿನಲ್ಲಿ ಗಣಿತ-ಗಣಕ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಶಾಲಾ ಅವಧಿಯ ನಂತರ ಫೋನ್ ಕರೆಗಳ ಮೂಲಕ(ರಿಮೋಟ್ ಟ್ಯೂಟರಿಂಗ್) ಬೋಧನೆಯನ್ನು ಪ್ರಾರಂಭಿಸುವ ಕುರಿತು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಗಣಿತ ಗಣಕ ಕಾರ್ಯಕ್ರಮವು 2025-2026 ರ ಬಜೆಟ್ ಭಾಷಣದಲ್ಲಿ ಘೋಷಿಸಿದಂತೆ ಕರ್ನಾಟಕ ಸರ್ಕಾರದ ಉಪಕ್ರಮವಾಗಿದೆ. ಅಲೋ ಕಿಟ್ ಹಾಗೂ ಯೂತ್ ಇಂಪ್ಯಾಕ್ಟ್ ಸಂಸ್ಥೆಯವರು ತಾಂತ್ರಿಕ ಬೆಂಬಲದ ಪಾಲುದಾರರಾಗಿರುತ್ತಾರೆ. 2025-26ನೇ ಸಾಲಿನ ಆಯವ್ಯಯದಲ್ಲಿ ಗಣಿತ ಗಣಕ ಕಾರ್ಯಕ್ರಮವನ್ನು ರಾಜ್ಯಾದ್ಯಂತ ಸರ್ಕಾರಿ ಶಾಲೆಗಳಲ್ಲಿ 3 ರಿಂದ 5 ನೇ ತರಗತಿಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಗಣಿತ ಕಲಿಕೆಯಲ್ಲಿ ಆಸಕ್ತಿ ಅಭಿವೃದ್ಧಿಸಿ ಮೂಲ ಗಣಿತ ವಿಷಯ ಪರಿಕಲ್ಪನೆಗಳನ್ನು ಶಿಕ್ಷಕರಿಂದ ಮಕ್ಕಳಿಗೆ ಶಾಲಾ ಅವಧಿಯ ನಂತರ ಫೋನ್ ಕರೆಗಳ ಮೂಲಕ (ರಿಮೋಟ್ ಟ್ಯೂಟರಿಂಗ್) ಅರ್ಥೈಸುವುದು ಮತ್ತು ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವುದು ಹಾಗೂ ಕಾರ್ಯಕ್ರಮದ ಆಯೋಜನೆಗೆ ಶಿಕ್ಷಕರಿಗೆ ವಿವಿಧ ಹಂತಗಳಲ್ಲಿ ತರಬೇತಿ ನೀಡಿ, ಶಿಕ್ಷಕರಲ್ಲಿ ಅಗತ್ಯ ಕೌಶಲ್ಯಗಳನ್ನು ವೃದ್ಧಿಸಿ ಕಾರ್ಯಕ್ರಮವನ್ನು ನಿರ್ವಹಿಸುವುದು ಮುಖ್ಯ ಉದ್ದೇಶವಾಗಿರುತ್ತದೆ. 2025-26ನೇ…
ಬೆಂಗಳೂರು : ಶಿಕ್ಷಣ ಇಲಾಖೆಯ ಎಲ್ಲಾ ಡಿಡಿಓಗಳು ಎಚ್ ಆರ್ ಎಂ ಎಸ್ 2 ನಲ್ಲಿ ವೇತನ ಪರಿಶೀಲಿಸುವ ಮೊದಲು ಈ ಕ್ರಮಗಳನ್ನು ಅನುಸರಿಸುವುದು ಕಡ್ಡಾಯ. ಶಿಕ್ಷಣ ಇಲಾಖೆಯ ಎಲ್ಲಾ ಡಿಡಿಓಗಳು ಎಚ್ ಆರ್ ಎಂ ಎಸ್ 2 ನಲ್ಲಿ ವೇತನ ಪರಿಶೀಲಿಸುವ ಮೊದಲು ಅನುಸರಿಸಬೇಕಾದ ಕ್ರಮಗಳು ಎಲ್ಲಾ ಡಿಡಿಓ ಗಳಿಗೂ ತಿಳಿಸುವುದೇನೆಂದರೆ ಎಚ್ ಆರ್ ಎಂ ಎಸ್ 2 ನಲ್ಲಿ ವೇತನ ಡ್ರಾಫ್ಟ್ ಬಿಲ್ ಓಪನ್ ಮಾಡುವ ಮೊದಲು ನೌಕರರ ಇನ್ನಿಮೆಂಟ್ ಡೇಟ್ ಅನ್ನು ಪರಿಶೀಲಿಸುವುದು ಇಂಕ್ರಿಮೆಂಟ್ ಡೇಟ್ ತಪ್ಪಿದ್ದಲ್ಲಿ ಎಚ್.ಆರ್.ಎಂ.ಎಸ್ 1 ನಲ್ಲಿ ನೋಡಲ್ ಅಧಿಕಾರಿಗಳಿಗೆ ಅನ್ಸೆನ್ ರಿಕ್ವೆಸ್ಟ್ ಮುಖಾಂತರ ಸರಿಪಡಿಸಿಕೊಳ್ಳುವುದು ನೌಕರರ ನೌಕರರ ಪಿಪಿ ಎಸ್ಎಫ್ಎನ್ ಹಾಗೂ ಸಿಂಗಲ್ ಚೈಲ್ಡ್ ಸರಿಯಾಗಿರುವ ಬಗ್ಗೆ ಎಚ್ ಆರ್ ಎಂ ಎಸ್ 1 ನಲ್ಲಿ ಪರಿಶೀಲಿಸಿಕೊಳ್ಳುವುದು, ಪಿಪಿಎಸ್ಎಫ್ ಎನ್ ಮತ್ತು ಸಿಂಗಲ್ ಚೈಲ್ಡ್ ಹೊರತಾಗಿ ಬೇರೆ ಮಾಹಿತಿ ಎಚ್ ಆರ್ ಎಂ ಎಸ್ 1 ನಲ್ಲಿ ಅಳವಡಿಸಿದ್ದಲ್ಲಿ ಸದರಿಯವರ ವೇತವದಲ್ಲಿ…
ಬೆಂಗಳೂರು : ಎಲ್ಲ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳ ವೈದ್ಯರು, ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ತಮ್ಮ ಪ್ರಸ್ತುತ ಸಂಬಳ ಮತ್ತು ಹುದ್ದೆಗೆ ಅನುಗುಣವಾಗಿ ಅವಧಿ ವಿಮೆ (ಟರ್ಮ್ ಇನ್ಶ್ಯೂರೆನ್ಸ್) ಕಡ್ಡಾಯವಾಗಿ ಪಡೆಯಬೇಕು. ಇತ್ತೀಚೆಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರ ವಿಮಾ ಹಣ ಪಡೆಯಲು ಅವರ ಕುಟುಂಬದ ಸದಸ್ಯರು ತಾಂತ್ರಿಕ ಸಮಸ್ಯೆಗಳು ಎದುರಿಸಿದ ಕಾರಣ, ತಮ್ಮ ಇಲಾಖೆಯ ಅಡಿಯಲ್ಲಿರುವ ಎಲ್ಲ ವೈದ್ಯರು, ಅಧಿಕಾರಿಗಳು ಮತ್ತು ಸಿಬ್ಬಂದಿ ಸಾಮಾಜಿಕ ಭದ್ರತಾ ಕ್ರಮವಾಗಿ ಕಡ್ಡಾಯವಾಗಿ ಅವಧಿ ವಿಮೆ ಪಡೆಯುವಂತೆ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ್ ಪಾಟೀಲ್ ಅವರು ಸೂಚನೆ ನೀಡಿದ್ದಾರೆ. https://twitter.com/KarnatakaVarthe/status/2008083291518468533?s=20
ಬೆಂಗಳೂರು : ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ಸಿಕ್ಕಿದ್ದು, ರಾಜ್ಯ, ಕೇಂದ್ರ ಸರ್ಕಾರದ ವಿವಿಧ ಇಲಾಖೆಯಲ್ಲಿ ಈ ವರ್ಷ ಬರೋಬ್ಬರಿ 75 ಸಾವಿರ ಹುದ್ದೆಗಳ ನೇಮಕಾತಿ ನಡೆಯಲಿದೆ. ಹೌದು, ಕರ್ನಾಟಕದಲ್ಲಿ 18 ಸಾವಿರ ಶಾಲಾ ಶಿಕ್ಷಕರ ನೇಮಕಾತಿ ನಡೆಯಲಿದೆ. ಭಾರತೀಯ ರೈಲ್ವೆ ಇಲಾಖೆಯಲ್ಲಿ 22,000 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಭಾರತೀಯ ಅಂಚೆ ಇಲಾಖೆಯಲ್ಲಿ 30 ಸಾವಿರ ಹುದ್ದೆಗಳ ನೇಮಕಾತಿಗೆ ಪ್ರಕಟಣೆ ಹೊರಡಿಸಲಾಗಿದೆ. ಆಗಸ್ಟ್-ಅಕ್ಟೋಬರ್ ನಲ್ಲಿ ಬ್ಯಾಂಕಿಂಗ್ ಪರೀಕ್ಷೆಗಳ ಸರಣಿ ಆರಂಭವಾಗಲಿದ್ದು, 5,000ಕ್ಕೂ ಹೆಚ್ಚಿನ ಹುದ್ದೆಗಳಿಗೆ ನೇಮಕಾತಿ ನಿರೀಕ್ಷಿಸಲಾಗಿದೆ. ಕರ್ನಾಟಕದಲ್ಲಿ 18 ಸಾವಿರ ಶಾಲಾ ಶಿಕ್ಷಕರ ನೇಮಕಾತಿ ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ 18 ಸಾವಿರ ಶಿಕ್ಷಕರ ನೇಮಕಾತಿಗೆ ಇದೇ ತಿಂಗಳು ಅಧಿಸೂಚನೆ ಪ್ರಕಟವಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಶಾಲಾರಂಭವಾಗುವ ಜೂನ್ ವೇಳೆಗೆ ರಾಜ್ಯ ಸರ್ಕಾರ 18 ಸಾವಿರ ಶಿಕ್ಷಕರ ನೇಮಕಾತಿ ನಡೆಸಲಿದೆ. ಇದಕ್ಕಾಗಿ ಈಗಾಗಲೇ ಟಿಇಟಿಯನ್ನು ಮುಗಿಸಿ ಫಲಿತಾಂಶ ಪ್ರಕಟಿಸಿದೆ. ಜನವರಿಯಲ್ಲಿ ಶಿಕ್ಷಕರ…
ನವದೆಹಲಿ : ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಪರೀಕ್ಷೆಯಿಂದ ಶಿಕ್ಷಕರಿಗೆ ವಿನಾಯಿತಿ ನೀಡಬೇಕು ಎಂದು ಅಖಿಲ ಭಾರತ ಮಾಧ್ಯಮಿಕ ಶಿಕ್ಷಕರ ಒಕ್ಕೂಟ (ಎಐಎಸ್ಟಿಎಫ್) ಆಗ್ರಹಿಸಿದೆ. ಪ್ರಸ್ತುತ ಸೇವೆಯಲ್ಲಿರುವ ಎಲ್ಲಾ ಶಿಕ್ಷಕರು ಮುಂದಿನ ಎರಡು ವರ್ಷಗಳಲ್ಲಿ ಟಿಇಟಿಯಲ್ಲಿ ಅರ್ಹತೆ ಪಡೆಯದಿದ್ದರೆ, ಅವರೆಲ್ಲರೂ ತಮ್ಮ ಉದ್ಯೋಗ ಕಳೆದುಕೊಳ್ಳುತ್ತಾರೆ. ಆಂಧ್ರಪ್ರದೇಶ ಮತ್ತು ತೆಲಂಗಾಣ ಸೇರಿದಂತೆ ದೇಶಾದ್ಯಂತ ಅನೇಕ ರಾಜ್ಯಗಳ ಶಿಕ್ಷಕರು ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ಟಿಇಟಿಯಿಂದ ವಿನಾಯಿತಿ ನೀಡಬೇಕೆಂದು ಅವರು ಒತ್ತಾಯಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ, ಅಖಿಲ ಭಾರತ ಮಾಧ್ಯಮಿಕ ಶಿಕ್ಷಕರ ಒಕ್ಕೂಟ (ಎಐಎಸ್ಟಿಎಫ್) ಭಾನುವಾರ ರಾಜಸ್ಥಾನದ ಜೈಪುರದಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಎಸ್ಟಿಯು ರಾಜ್ಯ ಅಧ್ಯಕ್ಷ ಜಿ ಸದಾನಂದಮ್ ಗೌಡ್ ಅವರ ಅಧ್ಯಕ್ಷತೆಯಲ್ಲಿ ರಾಷ್ಟ್ರೀಯ ಕಾರ್ಯಕಾರಿ ಸಭೆಯನ್ನು ನಡೆಸಿತು. ಈ ಸಭೆಯಲ್ಲಿ, ಟಿಇಟಿಯಿಂದ ವಿನಾಯಿತಿ ನೀಡಬೇಕೆಂದು ಅವರು ಒತ್ತಾಯಿಸಿದರು. ಹಲವು ರಾಜ್ಯಗಳ ಶಿಕ್ಷಕರ ಸಂಘಗಳ ಪ್ರತಿನಿಧಿಗಳು ಇದರಲ್ಲಿ ಭಾಗವಹಿಸಿದ್ದರು. ಶಿಕ್ಷಣ ಹಕ್ಕು ಕಾಯ್ದೆ ಜಾರಿಗೆ ಬರುವ ಮೊದಲು ನೇಮಕಗೊಂಡ ಎಲ್ಲಾ ಶಿಕ್ಷಕರು ಎರಡು…
ಕೃಷಿ ಇಲಾಖೆ ಕೊಪ್ಪಳ ಹಾಗೂ ಐ.ಸಿ.ಎ.ಆರ್-ಕೃಷಿ ವಿಜ್ಞಾನ ಕೇಂದ್ರ, ಗಂಗಾವತಿ ವತಿಯಿಂದ ಜಿಲ್ಲೆಯ ರೈತರಿಗೆ ಭತ್ತ, ಕಡಲೆ, ತೊಗರಿ ಬೆಳೆಯಲ್ಲಿ ಬರುವ ಕೀಟ ಮತ್ತು ರೋಗ ಬಾಧೆ ನಿಯಂತ್ರಣ ಹಾಗೂ ನಿರ್ವಹಣೆಗೆ ರೈತರಿಗೆ ಸಲಹೆಯನ್ನು ನೀಡಲಾಗಿದೆ. ಭತ್ತ ಬೆಳೆಯು ನರ್ಸರಿ ಅಥವಾ ನಾಟಿ ಮಾಡುವ ಹಂತದಲ್ಲಿರುವಾಗ ಭತ್ತ ನಾಟಿ ಮಾಡಲು ಒಣ ಸಸಿಮಡಿ ತಯಾರಿಸಬೇಕು. ಪ್ರತಿ ಸಸಿಮಡಿಗೆ ಗೊಬ್ಬರ 10 ಕಿ.ಗ್ರಾಂ. ಕೊಟ್ಟಿಗೆ ಗೊಬ್ಬರ ಜೊತೆಗೆ 80 ಗ್ರಾಂ ಯೂರಿಯಾ, 280 ಗ್ರಾಂ ಸೂಪರ್ ಫಾಸ್ಪೇಟ್ ಮತ್ತು 75 ಗ್ರಾಂ ಮ್ಯೂರಿಯೇಟ್ ಆಫ್ ಪೊಟ್ಯಾಷ್ ಹಾಕಬೇಕು. ಭತ್ತದ ಸಸಿಮಡಿಯಲ್ಲಿ ಕಣೆನೊಣದ ನಿರ್ವಹಣೆಗಾಗಿ ಕ್ಲೊರೋಪೈರಿಫಾಸ್ 2.0 ಮಿ.ಲೀ ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಿಸಬೇಕು. ಅಥವಾ ಹರಳು ರೂಪದ ಶೇ. 3 ರ ಕಾರ್ಬೋಫ್ಯೂರಾನ್ 4.0 ಕೆ.ಜಿ ಪ್ರತಿ ಎಕರೆಗೆ ಹಾಕಬೇಕು. ಕಡಲೆ ಬೆಳೆಯು ಬೆಳವಣಿಗೆ ಅಥವಾ ಕಾಳು ಕಟ್ಟುವ ಹಂತದಲ್ಲಿದ್ದಾಗ ಕಡಲೆಯಲ್ಲಿ 35-40 ದಿನದ ಬೆಳೆಯಲ್ಲಿ ಕುಡಿ ಚಿವುಟುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ…














