Subscribe to Updates
Get the latest creative news from FooBar about art, design and business.
Author: kannadanewsnow57
ಏರ್ ಫ್ರೈಯರ್ ಗಳು ಆಧುನಿಕ ದಿನದ ಅಡುಗೆಯಲ್ಲಿ ಬಳಸುವ ಅತ್ಯಂತ ಅನುಕೂಲಕರ ಗ್ಯಾಜೆಟ್ ಗಳಲ್ಲಿ ಒಂದಾಗಿದೆ. ಇದು ಹೆಚ್ಚು ಎಣ್ಣೆ, ಕೊಬ್ಬು ಮತ್ತು ಕ್ಯಾಲೊರಿಗಳಿಲ್ಲದೆ ಆರೋಗ್ಯಕರ ಆಹಾರವನ್ನು ತಯಾರಿಸಲು ನಿಮಗೆ ಸಹಾಯ ಮಾಡುತ್ತದೆ. ಆದಾಗ್ಯೂ, ಹೆಚ್ಚಿನ ತಾಪಮಾನದಲ್ಲಿ ಏರ್ ಫ್ರೈಯರ್ ಗಳನ್ನು ಬಳಸುವುದು ಅತ್ಯಂತ ವಿಷಕಾರಿ ಮತ್ತು ಕ್ಯಾನ್ಸರ್ ಅಪಾಯವನ್ನುಂಟು ಮಾಡುತ್ತದೆ ಎಂದು ತಜ್ಞರು ಹೇಳುತ್ತಾರೆ. ಏರ್ ಫ್ರೈಯರ್ ಗಳು ಸ್ವತಃ ಕ್ಯಾನ್ಸರ್ ಗೆ ಕಾರಣವಾಗದಿದ್ದರೂ, ಏರ್ ಫ್ರೈಯರ್ ಗಳು ಅಕ್ರಿಲಾಮೈಡ್ ಗಳು ಎಂದು ಕರೆಯಲ್ಪಡುವ ಸಂಯುಕ್ತಗಳನ್ನು ಉತ್ಪಾದಿಸುತ್ತವೆ. ಅವು “ಸಂಭವನೀಯ” ಕ್ಯಾನ್ಸರ್ ಕಾರಕಗಳಾಗಿವೆ. ಕರುಳಿನ ಆರೋಗ್ಯ ತಜ್ಞೆ ಡಾ.ಡಿಂಪಲ್ ಜಂಗ್ಡಾ ಅವರ ಪ್ರಕಾರ, ನಾನ್-ಸ್ಟಿಕ್ ಲೇಪನವು ಅದನ್ನು ವಿಷಕಾರಿಯನ್ನಾಗಿ ಮಾಡುತ್ತದೆ. ಭಾರವಾದ ಲೋಹಗಳನ್ನು ನಿಮ್ಮ ಆಹಾರಕ್ಕೆ ಬಿಡುಗಡೆ ಮಾಡುತ್ತದೆ. “ಏರ್ ಫ್ರೈಯರ್ಗಳನ್ನು ಹೆಚ್ಚಾಗಿ ಈ ನಾನ್-ಸ್ಟಿಕ್ ಲೇಪನದಿಂದ ಲೇಪಿಸಲಾಗುತ್ತದೆ. ಅದು ಬಿಸಿ ಮಾಡಿದಾಗ ವಿಷಕಾರಿ ಹೊಗೆಯನ್ನು ಬಿಡುಗಡೆ ಮಾಡುತ್ತದೆ. ಇದು ಈ ತಂತಿ ಲೇಪನಗಳನ್ನು ಸಹ ಹೊಂದಿದೆ – ಇವು…
ಹಾಸನ : ಹಾಸನದಲ್ಲಿ ಇಂದು ನಡೆಯುತ್ತಿರುವ ಕಾಂಗ್ರೆಸ್ ನ ಜನ ಕಲ್ಯಾಣ ಸಮಾವೇಶಕ್ಕೆ ಹೋಗುವಾಗ ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಅವರ ಕಾರು ಅಪಘಾತವಾಗಿರುವ ಘಟನೆ ನಡೆದಿದೆ. ಹಾಸನದ ಮಾರ್ಗದಲ್ಲಿ ಸಚಿವ ಮುನಿಯಪ್ಪ ಕಾರು ಅಪಘಾತಕ್ಕೀಡಾಗಿದ್ದು, ಬಳಿಕ ಬೇರೆ ವ್ಯವಸ್ಥೆ ಮೂಲಕ ಹಾಸನದ ಕಾರ್ಯಕ್ರಮಕ್ಕೆ ಹೋಗಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಬೆಂಗಳೂರು : ನಮ್ಮ ಸರ್ಕಾರದ ಜನಪರ ಕೆಲಸಗಳನ್ನು ಮೆಚ್ಚಿ ನಿರಂತರವಾಗಿ ಆಶೀರ್ವದಿಸುತ್ತಿರುವ ಕರುನಾಡ ಜನತೆಗೆ ಕೃತಜ್ಞತೆ ಅರ್ಪಿಸಲು ಜನ ಕಲ್ಯಾಣ ಸಮಾವೇಶ ಆಯೋಜಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಹಾಸನದಲ್ಲಿ ಇಂದು ಕಾಂಗ್ರೆಸ್ ಪಕ್ಷ ಮತ್ತು ಸ್ವಾಭಿಮಾನಿಗಳ ಒಕ್ಕೂಟದ ಜಂಟಿ ಸಹಯೋಗದಲ್ಲಿ ಜನಕಲ್ಯಾಣ ಸಮಾವೇಶವನ್ನು ಆಯೋಜಿಸಲಾಗಿದ್ದು, ನಮ್ಮ ಸರ್ಕಾರದ ಜನಪರ ಕೆಲಸಗಳನ್ನು ಮೆಚ್ಚಿ ನಿರಂತರವಾಗಿ ಆಶೀರ್ವದಿಸುತ್ತಿರುವ ಕರುನಾಡ ಜನತೆಗೆ ಕೃತಜ್ಞತೆ ಅರ್ಪಿಸಲು ಇದೊಂದು ಅಪೂರ್ವ ಘಳಿಗೆ ಎಂದು ಭಾವಿಸುತ್ತೇನೆ. ನಾಡಿನ ಪ್ರತಿಯೊಬ್ಬ ವ್ಯಕ್ತಿಯನ್ನು ಸ್ವಾವಲಂಬಿ ಮತ್ತು ಸ್ವಾಭಿಮಾನಿಯಾಗಿಸುವುದು ಕಾಂಗ್ರೆಸ್ ಪಕ್ಷದ ಉದ್ದೇಶ. ನುಡಿದಂತೆ ನಡೆದು, ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದ್ದು ಕೂಡಾ ಅದೇ ಕಾರಣಕ್ಕೆ. ಇದು ಕೇವಲ ಸಮಾವೇಶವಲ್ಲ, ಕಾಂಗ್ರೆಸ್ ಪಕ್ಷದ ಆಶಯಗಳ ಸಂಭ್ರಮ. ಬನ್ನಿ, ಈ ಸಂಭ್ರಮದಲ್ಲಿ ಎಲ್ಲರೂ ಪಾಲ್ಗೊಳ್ಳೋಣ ಎಂದು ಹೇಳಿದ್ದಾರೆ. https://twitter.com/siddaramaiah/status/1864546076977713168?ref_src=twsrc%5Egoogle%7Ctwcamp%5Eserp%7Ctwgr%5Etweet ಜೆಡಿಎಸ್ ಭದ್ರಕೋಟೆಯಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನಕ್ಕೆ ನಾಯಕರು ಸಜ್ಜಾಗಿದ್ದು, ಅರೀಕೆರೆ ರಸ್ತೆಯ ಎಸ್.ಎಂ.ಕೃಷ್ಣ ಬಡಾವಣೆಯ ಕ್ರೀಡಾಂಗಣದಲ್ಲಿ…
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ರಾಜ್ಯಪಾಲರು ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ಧರಾಮಯ್ಯ ಅವರು ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಸಿದ್ದರಾಮಯ್ಯ ಅವರು ಸಲ್ಲಿಸಿದ ಅರ್ಜಿ ವಿಚಾರಣೆ ಹೈಕೋರ್ಟ್ ವಿಭಾಗೀಯ ಪೀಠ ಜನವರಿ 25 ಕ್ಕೆ ಮುಂದೂಡಿದೆ. ಮುಡಾ ಹಗರಣದ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿದ್ದನ್ನು ಪ್ರಶ್ನಿಸಿ, ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸಲ್ಲಿಸಿದ ಮೇಲ್ಮನವಿ ಅರ್ಜಿ ವಿಚಾರಣೆ ಆರಂಭವಾದ ವೇಳೆ ಮೇಲ್ಮನವಿಯಲ್ಲಿ ನೋಟಿಸ್ ಇನ್ನೂ ಜಾರಿಯಲಿಲ್ಲ. ಮೊದಲು ಪ್ರತಿವಾದಿಗಳಿಗೆ ನೋಟಿಸ್ ಜಾರಿಯಾಗಬೇಕು ಎಂದು ಎಜಿ ಶಶಿಕಿರಣ್ ಶೆಟ್ಟಿ ತಿಳಿಸಿದರು. ಇದೆ ಸಂದರ್ಭದಲ್ಲಿ ದೂರುದಾರ ಸ್ನೇಹಮಯಿ ಕೃಷ್ಣ ಅವರ ಪರ ವಕೀಲರು, ಹೈಕೋರ್ಟ್ ಏಕ ಸದಸ್ಯ ಪೀಠ ಕೇವಲ ನೋಟಿಸ್ ಜಾರಿಗೊಳಿಸಿದೆ. ಅಲ್ಲಿನ ವಿಚಾರಣೆಗೂ ಈ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸ್ನೇಹಮಯಿ ಕೃಷ್ಣ ಪರ ಹಿರಿಯ ವಕೀಲ ಕೆ ಜಿ ರಾಘವನ್ ವಾದಿಸಿದರು. ಇದೀಗ ಅರ್ಜಿ ವಿಚಾರಣೆ…
ಒಂದು ವೇಳೆ ನಿಮ್ಮ ಮನೆಯಲ್ಲಿ ಯಾವುದೇ ರೀತಿಯ ಮಾಟ ಮಂತ್ರ ಪ್ರಯೋಗವಾಗಿದ್ದರೆ ಹಾಗೂ ಕೆಟ್ಟ ದೃಷ್ಟಿ ಬಿದ್ದಿದ್ದರೆ ಅದನ್ನು ಹೋಗಲಾಡಿಸಿ ಮನೆಯಲ್ಲಿ ಶಾಂತಿ ಹಾಗೂ ನೆಮ್ಮದಿ ದೊರಕಬೇಕು ಎಂದರೆ ನಾವು ಹೇಳುವ ಈ ಸರಳ ತಂತ್ರವನ್ನು ಪ್ರಯೋಗ ಮಾಡಿದರೆ ಈ ಎಲ್ಲಾ ತೊಂದರೆಗಳಿಂದ ಮುಕ್ತಿಯನ್ನು ಪಡೆದುಕೊಳ್ಳಬಹುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ…
ಬೆಂಗಳೂರು : 2025-26 ನೇ ಶೈಕ್ಷಣಿಕ ಸಾಲಿಗೆ ಪಠ್ಯಪುಸ್ತಕಗಳನ್ನು ಶಾಲೆಗಳಿಗೆ ರವಾನಿಸುವ ಸಂಬಂಧ ಬೇಡಿಕೆ ಸಲ್ಲಿಸುವ ಕುರಿತಂತೆ ಶಾಲೆಯ ಮುಖ್ಯ ಶಿಕ್ಷಕರಿಗೆ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯ ಹಾಗೂ ಉಲ್ಲೇಖಗಳಿಗೆ ಸಂಬಂಧಿಸಿದಂತೆ, 2025-26 ನೇ ಶೈಕ್ಷಣಿಕ ಸಾಲಿಗೆ ಪಠ್ಯಪುಸ್ತಕಗಳನ್ನು ಶಾಲೆಗಳಿಗೆ ರವಾನಿಸುವ ಸಂಬಂಧ ಬೇಡಿಕೆ ಸಲ್ಲಿಸುವ ಪ್ರಕ್ರಿಯೆಯು ಈಗಾಗಲೇ ಚಾಲ್ತಿಯಲ್ಲಿದೆ. ಶಾಲೆಗಳ ಮುಖ್ಯಶಿಕ್ಷಕರು ಬೇಡಿಕೆ ಸಲ್ಲಿಸುವ ಸಂದರ್ಭದಲ್ಲಿ ಶಾಲೆಗೆ ಅಗತ್ಯವಿರುವ ಪಠ್ಯಪುಸ್ತಕಗಳನ್ನು ಮಾತ್ರವೇ ಸರಿಯಾದ ಸಂಖ್ಯೆಯಲ್ಲಿ ಬೇಡಿಕೆ ಸಲ್ಲಿಸಲು ತಿಳಿಸಲಾಗಿದ್ದು, ಈ ಸಂಬಂಧ ಅಡಕಗೊಳಿಸಿರುವ ಅನುಬಂಧ-1 ರಿಂದ 4 ಅನ್ನು ಅಧ್ಯಯನ ಮಾಡಿಕೊಂಡು ಶಾಲೆಗಳಿಗೆ ಅಗತ್ಯವಿರುವ ಶೀರ್ಷಿಕೆಗಳನ್ನು ಮಾತ್ರವೇ ಬೇಡಿಕೆ ಸಲ್ಲಿಸಲು ತಿಳಿಸಿದೆ.
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ರಾಜ್ಯಪಾಲರು ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ಧರಾಮಯ್ಯ ಅವರು ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಸಿದ್ದರಾಮಯ್ಯ ಅವರು ಸಲ್ಲಿಸಿದ ಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿ ಎನ್.ವಿ ಅಂಜಾರಿಯ, ಹೈಕೋರ್ಟ್ ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಲು ಸಾಧ್ಯವಿಲ್ಲ ಎಂದು ಹೈ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ ಅಂಜಾರಿಯ ಅಭಿಪ್ರಾಯ ತಿಳಿಸಿದರು. ಮುಡಾ ಹಗರಣದ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿದ್ದನ್ನು ಪ್ರಶ್ನಿಸಿ, ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸಲ್ಲಿಸಿದ ಮೇಲ್ಮನವಿ ಅರ್ಜಿ ವಿಚಾರಣೆ ಆರಂಭವಾದ ವೇಳೆ ಮೇಲ್ಮನವಿಯಲ್ಲಿ ನೋಟಿಸ್ ಇನ್ನೂ ಜಾರಿಯಲಿಲ್ಲ. ಮೊದಲು ಪ್ರತಿವಾದಿಗಳಿಗೆ ನೋಟಿಸ್ ಜಾರಿಯಾಗಬೇಕು ಎಂದು ಎಜಿ ಶಶಿಕಿರಣ್ ಶೆಟ್ಟಿ ತಿಳಿಸಿದರು. ಇದೆ ಸಂದರ್ಭದಲ್ಲಿ ದೂರುದಾರ ಸ್ನೇಹಮಯಿ ಕೃಷ್ಣ ಅವರ ಪರ ವಕೀಲರು, ಹೈಕೋರ್ಟ್ ಏಕ ಸದಸ್ಯ ಪೀಠ ಕೇವಲ ನೋಟಿಸ್ ಜಾರಿಗೊಳಿಸಿದೆ. ಅಲ್ಲಿನ ವಿಚಾರಣೆಗೂ ಈ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ…
ನವದೆಹಲಿ : ಜಗತ್ತನ್ನು ಕಾಡುತ್ತಿರುವ ಮಹಾಮಾರಿ HIV ಏಡ್ಸ್ ಗೆ ಕೊನೆಗೂ ವಿಜ್ಞಾನಿಗಳು ಲಸಿಕೆ ಕಂಡು ಹಿಡಿದಿದ್ದಾರೆ. ಅಮೆರಿಕದ ಗಿಲಿಯಾಡ್ ಎಂಬ ಅಮೆರಿಕದ ಫಾರ್ಮಾ ಸುಟಿಕಲ್ ಕಂಪನಿ ಈ ಲಸಿಕೆ ಸಿದ್ದಪಡಿಸಿದೆ. ವಿಜ್ಞಾನಿಗಳ ಪ್ರಕಾರ, ಲೆಂಕಾವಿರ್ ಲಸಿಕೆ ಪುರುಷರಲ್ಲಿಯೂ ಸಹ HIV ಸೋಂಕನ್ನು ಬಹುತೇಕ ತೊಡೆದುಹಾಕುತ್ತದೆ. ಕ್ಲಿನಿಕಲ್ ಪ್ರಯೋಗದಲ್ಲಿ ಐದು ಸಾವಿರ ಜನರನ್ನು ಸೇರಿಸಲಾಯಿತು. ಈ ಅವಧಿಯಲ್ಲಿ, ಲಸಿಕೆ ತೆಗೆದುಕೊಂಡ ಯಾವುದೇ ಮಹಿಳೆಯರು ಸೋಂಕಿಗೆ ಬಲಿಯಾಗಲಿಲ್ಲ. ಈ ಲಸಿಕೆಯನ್ನು ಆರು ತಿಂಗಳ ಮಧ್ಯಂತರದಲ್ಲಿ ನೀಡಲಾಗುತ್ತದೆ. ವರ್ಷಕ್ಕೆ ಎರಡು ಬಾರಿ ‘ಲೆನಾಕಾವಿರ್’ ಎಂಬ ಹೊಸ ರೋಗನಿರೋಧಕ ಔಷಧದೊಂದಿಗೆ ಲಸಿಕೆಯನ್ನು ಪಡೆಯುವುದು HIV ಸೋಂಕನ್ನು ತಡೆಗಟ್ಟುವಲ್ಲಿ ಸಹಾಯ ಮಾಡುತ್ತದೆ. ದಕ್ಷಿಣ ಆಫ್ರಿಕಾದಲ್ಲಿ ನಡೆಸಿದ ಕ್ಲಿನಿಕಲ್ ಪ್ರಯೋಗದಲ್ಲಿ ವಿಜ್ಞಾನಿಗಳು ಈ ಹೇಳಿಕೆ ನೀಡಿದ್ದಾರೆ. ಮಹಿಳೆಯರ ಮೇಲೆ ನಡೆಸಲಾದ ಪರೀಕ್ಷೆಗಳಲ್ಲಿ ಇದು 100 ಪ್ರತಿಶತ ಪರಿಣಾಮಕಾರಿ ಎಂದು ಪರೀಕ್ಷೆಯಲ್ಲಿ ಹೇಳಲಾಗಿದೆ. ವಿಜ್ಞಾನಿಗಳ ಪ್ರಕಾರ, ಈ ಲಸಿಕೆಯು ಪುರುಷರಲ್ಲಿ HIV ಸೋಂಕನ್ನು ಬಹುತೇಕ ನಿವಾರಿಸುತ್ತದೆ. ಕ್ಲಿನಿಕಲ್ ಪ್ರಯೋಗದಲ್ಲಿ ಐದು…
ದಕ್ಷಿಣಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಕೊಲೆ ಆರೋಪಿ ನೌಷದ್ ಮನೆಯ ಮೇಲೆ ಐವರು NIA ಅಧಿಕಾರಿಗಳು ದಾಳಿ ಮಾಡಿದ್ದಾರೆ. ಅಧಿಕಾರಿಗಳ ದಾಳಿಯ ಮಾಹಿತಿಯನ್ನು ತಿಳಿದ ಆರೋಪಿಯ ಕುಟುಂಬಸ್ಥರು ಮನೆ ಲಾಕ್ ಮಾಡಿ ಪರಾರಿಯಾಗಿದ್ದಾರೆ. ಹೌದು ಪ್ರವೀಣ್ ನೆಟ್ಟಾರು ಕೊಲೆ ಆರೋಪಿ ನೌಷದ್ ಮನೆಯ ಮೇಲೆ ಎನ್ಐಎ ಅಧಿಕಾರಿಗಳು ದಾಳಿ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪಡಂಗಡಿಯ ಮನೆಯ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಐವರು ಅಧಿಕಾರಿಗಳಿಂದ ಮನೆಯ ಮೇಲೆ ದಾಳಿ ಮಾಡಲಾಗಿದೆ ಎಂದು ತಿಳಿದುಬಂದಿದೆ. ದಾಳಿ ವಿಚಾರ ತಿಳಿದು ಮನೆಯನ್ನು ಲಾಕ್ ಮಾಡಿಕೊಂಡು ಕುಟುಂಬ ಪರಾರಿಯಾಗಿದೆ. ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿಯಾಗಿರುವ ನೌಷದ, ಬೆಳ್ತಂಗಡಿ ಠಾಣೆಯ ಇಬ್ಬರು ಪೊಲೀಸರ ಜೊತೆಗೆ ಎನ್ಐಎ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಅಲ್ಲದೇ ಆರೋಪಿ ನೌಷದ್ ಪತ್ತೆಗಾಗಿ 2 ಲಕ್ಷ ರಿವಾರ್ಡ್ ಘೋಷಿಸಿದ್ದಾರೆ.
ನವದೆಹಲಿ : ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ (PM Kisan Yojana) ಫಲಾನುಭವಿಗಳಾಗಿರುವ ರೈತರಿಗೆ ಪ್ರಮುಖವಾದ ನವೀಕರಣವನ್ನು ನೀಡಲಾಗಿದೆ. ಈಗ, ಈ ಯೋಜನೆಯ ಪ್ರಯೋಜನಗಳನ್ನು ಪಡೆಯಲು, ರೈತರು ಹೊಸ ಅರ್ಹತಾ ಮಾನದಂಡಗಳನ್ನು ಪೂರೈಸಬೇಕಾಗುತ್ತದೆ. ನೀವು PM ಕಿಸಾನ್ ಯೋಜನೆಯ 19 ನೇ ಕಂತನ್ನು ಪಡೆಯಲು ಬಯಸಿದರೆ, ನೀವು ಯಾವುದೇ ವಿಳಂಬವಿಲ್ಲದೆ ಈ ಷರತ್ತುಗಳನ್ನು ಪೂರೈಸಬೇಕು. ಇನ್ನು ಮುಂದೆ ರೈತ ನೋಂದಣಿಯಲ್ಲಿ ನೋಂದಾಯಿಸಿಕೊಂಡ ರೈತರಿಗೆ ಮಾತ್ರ ಪ್ರಧಾನಮಂತ್ರಿ ಕಿಸಾನ್ ಯೋಜನೆಯ ಲಾಭ ಸಿಗಲಿದೆ. ಕೇಂದ್ರ ಸರ್ಕಾರವು ಡಿಸೆಂಬರ್ 31, 2024 ರ ನಂತರ ಬಿಡುಗಡೆಯಾದ ಕಂತುಗಳಿಗೆ ರೈತ ನೋಂದಣಿಯಲ್ಲಿ ನೋಂದಣಿಯನ್ನು ಕಡ್ಡಾಯಗೊಳಿಸಿದೆ. ಈ ನೋಂದಣಿಗೆ ಸೇರಿದ ನಂತರ, ರೈತರು ಪ್ರಧಾನ ಮಂತ್ರಿ ಕಿಸಾನ್ ಯೋಜನೆ ಮತ್ತು ಇತರ ಸರ್ಕಾರಿ ಯೋಜನೆಗಳ ಪ್ರಯೋಜನಗಳನ್ನು ಪಡೆಯುತ್ತಾರೆ. ಸರ್ಕಾರವು ರೈತರಿಗೆ ಪ್ರತಿ ವರ್ಷ ₹ 6000 ಅನ್ನು ಮೂರು ಕಂತುಗಳಲ್ಲಿ ನೀಡುತ್ತದೆ, ಅದನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗುತ್ತದೆ. ಆದರೆ ಈಗ, ಯೋಜನೆಯ…












