Author: kannadanewsnow57

ಬೆಂಗಳೂರು : ಯುವ ಸಮೂಹಕ್ಕೆ ಕೌಶಲ್ಯದ ತರಬೇತಿ ನೀಡಿ, ಸಬಲೀಕರಣ ಮಾಡಲು ಸರ್ಕಾರ ಈಗಾಗಲೇ ಹಲವು ಯೋಜನೆ ಕೈಗೊಂಡಿದೆ. ಕಾರ್ಪೊರೇಟ್ ಸಂಸ್ಥೆಗಳು ಕೂಡ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳನ್ನು (ಐಟಿಐ) ದತ್ತು ತೆಗೆದುಕೊಂಡು ಅಭಿವೃದ್ಧಿಪಡಿಸಬೇಕು ಮತ್ತು ಉದ್ಯೋಗಾಧರಿತ ಕೌಶಲ್ಯ ತರಬೇತಿ ಕೊಡಿಸಲು ಮುಂದಾಗಬೇಕು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ್ ಪಾಟೀಲ್ ಅವರು ತಿಳಿಸಿದರು. ಬೆಂಗಳೂರಿ ಐಎಎಸ್ ಆಫೀಸರ್ಸ್ ಅಸೋಸಿಯೇಷನ್ ಸಭಾಂಗಣದಲ್ಲಿ ಬುಧವಾರ ನಡೆದ ಸಮಾರಂಭದಲ್ಲಿ ಸಚಿವರ ಸಮ್ಮುಖದಲ್ಲಿ ತರಬೇತಿ ಹಾಗೂ ಉದ್ಯೋಗಾವಕಾಶಗಳಿಗೆ ಸಂಬಂಧಿಸಿದಂತೆ ವಿವಿಧ ಸಂಸ್ಥೆಗಳ ಜೊತೆಗೆ ಒಪ್ಪಂದಕ್ಕೆ ಸಹಿ ಹಾಕಲಾಯಿತು. ನಂತರ ಮಾತನಾಡಿದ ಸಚಿವರು, ರಾಜ್ಯದ ಹತ್ತು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳ ಆಧುನೀಕರಣಕ್ಕೆ ನಮ್ಮ ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ಕೆಲವು ಸಂಸ್ಥೆಗಳ ಜೊತೆಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಐಟಿಐ ಸಂಸ್ಥೆಗಳ ಉನ್ನತೀಕರಣಕ್ಕೂ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು. ಐಟಿಐಗಳಲ್ಲಿರುವ ಹಳೆಯ ಉಪಕರಣಗಳನ್ನು ಬದಲಾವಣೆ ಮಾಡಿ ಹೊಸ ಉಪಕರಣಗಳನ್ನು…

Read More

ಕೆ.ಆರ್.ಪೇಟೆ: ನಾನು ಬಡತನ ರೇಖೆಗಿಂತ ಕೆಳಗಿಲ್ಲ. ಹೀಗಾಗಿ ಅನ್ನಭಾಗ್ಯ ನನಗೆ ಸಿಗಬಾರದು. ನನ್ನಂಥವರಿಗೆ ಅನ್ನಭಾಗ್ಯ ಸಿಗಬಾರದು ಎನ್ನುವ ಉದ್ದೇಶಕ್ಕಷ್ಟೆ ಅನರ್ಹರ ಬಿಪಿಎಲ್ ಕಾರ್ಡ್ ಎಪಿಎಲ್ ಗೆ ಬದಲಾಗಿದೆ ಅಷ್ಟೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕೆ.ಆರ್.ಪೇಟೆಯಲ್ಲಿ ಕಸಬಾ ಪ್ರಾಥಮಿಕ‌ ಕೃಷಿ ಪತ್ತಿನ ಸಹಕಾರ ಸಂಘದ ಕಟ್ಟಡವನ್ನು ಉದ್ಘಾಟಿಸಿ ಹಲವು ಫಲಾನುಭವಿಗಳಿಗೆ ಸಾಲದ ಚೆಕ್ ವಿತರಿಸಿ ಮಾತನಾಡಿದರು. GDP ಯಲ್ಲಿ ಇಡೀ ದೇಶದಲ್ಲಿ ನಾವೇ ನಂಬರ್ ಒನ್. ಇದಕ್ಕೆ ಸಹಕಾರ ಕ್ಷೇತ್ರದ ಕೊಡುಗೆ ಅಪಾರ. ರೈತರ ಶ್ರಮಕ್ಕೆ ತಕ್ಕ ಫಲ ಸಿಗಬೇಕು. ನಮ್ಮ ಉತ್ಪಾದನೆಗೆ ನಾವೇ ಬೆಲೆ ನಿಗಧಿ ಮಾಡುವಂತಾಗಬೇಕು ಎಂದರು. ಕೈಗಾರಿಕೋದ್ಯಮಿಗಳು ಅವರು ತಯಾರಿಸಿದ ವಸ್ತುಗೆ ಅವರೇ ಬೆಲೆ ನಿಗಧಿ ಮಾಡ್ತಾರೆ. ಇದೇ ಅಧಿಕಾರ ನಮ್ಮ‌ ರೈತರಿಗೂ ಸಿಗಬೇಕು. ನಾವು ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ. ಒಕ್ಕೂಟ ವ್ಯವಸ್ಥೆ ಯಶಸ್ವಿ ಆಗಬೇಕಾದರೆ ದೇಶದ 140 ಕೋಟಿ ಜನರಿಗೂ ಸಕಲ ಸಹಕಾರ ಕೊಡಬೇಕು. ನಮ್ಮ ರೈತ ಸಮುದಾಯಕ್ಕೆ ಬೆಲೆ ಫಿಕ್ಸ್ ಮಾಡುವ ಅಧಿಕಾರ ಬರಬೇಕು. ಆಗ…

Read More

ಹಾಸನ : ಹಾಸನದಲ್ಲಿ ಇಂದು ಕಾಂಗ್ರೆಸ್ ನಿಂದ ಜನಕಲ್ಯಾನ ಸ್ವಾಭಿಮಾನಿ ಸಮಾವೇಶ ಆಯೋಜಿಸಲಾಗಿದ್ದು, ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರು, ಕಾಂಗ್ರೆಸ್ ನಾಯಕರು ಪಾಲ್ಗೊಳ್ಳಲಿದ್ದಾರೆ. ಜೆಡಿಎಸ್ ಭದ್ರಕೋಟೆಯಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನಕ್ಕೆ ನಾಯಕರು ಸಜ್ಜಾಗಿದ್ದು, ಅರೀಕೆರೆ ರಸ್ತೆಯ ಎಸ್.ಎಂ.ಕೃಷ್ಣ ಬಡಾವಣೆಯ ಕ್ರೀಡಾಂಗಣದಲ್ಲಿ ನಡೆಯಲಿರುವ ಸಮಾವೇಶಕ್ಕಾಗಿ ಬೃಹತ್ ವೇದಿಕೆ ಸಿದ್ದಗೊಂಡಿದೆ. ಸಮಾವೇಶದ ಹಿನ್ನೆಲೆಯಲ್ಲಿ ಹಾಸನ ನಗರದಲ್ಲಿ ಕಾಂಗ್ರೆಸ್ ನಾಯಕರು, ಪಕ್ಷದ ಫ್ಲೆಕ್ಸ್ ಹಾಗೂ ಬ್ಯಾನರ್ ಗಳು ರಾರಾಜಿಸುತ್ತಿವೆ. ಸಮಾವೇಶಕ್ಕೆ 3 ಲಕ್ಷ ಜನರು ಸೇರುವ ನಿರೀಕ್ಷೆ ಇಟ್ಟುಕೊಂಡು ತಯಾರಿ ನಡೆಸಲಾಗಿದ್ದು, ಸಮಾವೇಶಕ್ಕೆ ನಾನಾ ಕಡೆಯಿಂದ ಜನರನ್ನು ಕರೆತರಲು 1,500 ಬಸ್ ಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.

Read More

ನವದೆಹಲಿ : ಆಸ್ತಿಯ ಮಾಲೀಕತ್ವ ಪಡೆಯಲು ಕೇವಲ ಮಾರಾಟ ಒಪ್ಪಂದ ಅಥವಾ ವಕೀಲರ ಅಧಿಕಾರ ಸಾಕಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪಿನಲ್ಲಿ ಸ್ಪಷ್ಟಪಡಿಸಿದೆ. ಮಾಲೀಕತ್ವದ ಹಕ್ಕುಗಳನ್ನು ಪಡೆಯಲು ನೋಂದಾಯಿತ ಪತ್ರದ ಅಗತ್ಯವಿದೆ ಎಂದು ಸುಪ್ರೀಂಕೋರ್ಟ್ ತಿಳಿಸಿದೆ. ಭಾರತದಲ್ಲಿ ಹೆಚ್ಚುತ್ತಿರುವ ಆಸ್ತಿ ವಿವಾದಗಳ ದೃಷ್ಟಿಯಿಂದ ಪಾರದರ್ಶಕತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ನೋಂದಣಿ ಕಾಯಿದೆ, 1908 ರ ಅಡಿಯಲ್ಲಿ ಆಸ್ತಿಯ ಮಾಲೀಕತ್ವದ ವರ್ಗಾವಣೆಯು ನೋಂದಾಯಿತ ದಾಖಲೆಯಿದ್ದರೆ ಮಾತ್ರ ಮಾನ್ಯವಾಗಿರುತ್ತದೆ ಎಂದು ನ್ಯಾಯಾಲಯ ಹೇಳಿದೆ. ಪವರ್ ಆಫ್ ಅಟಾರ್ನಿ: ಇದು ಆಸ್ತಿಯ ಬಗ್ಗೆ ನಿರ್ಧಾರಗಳನ್ನು ತೆಗೆದುಕೊಳ್ಳಲು ಇನ್ನೊಬ್ಬ ವ್ಯಕ್ತಿಗೆ ಆಸ್ತಿಯ ಮೂಲ ಮಾಲೀಕರು ನೀಡಿದ ಅಧಿಕಾರವಾಗಿದೆ, ಆದರೆ ಮಾಲೀಕತ್ವದ ಹಕ್ಕುಗಳನ್ನು ನೀಡುವುದಿಲ್ಲ. ಮಾರಾಟ ಒಪ್ಪಂದ: ಇದು ಆಸ್ತಿಯ ಮಾರಾಟದ ಒಪ್ಪಂದವಾಗಿದೆ, ಆದರೆ ನೋಂದಾಯಿತ ಪತ್ರವಿಲ್ಲದೆ ಅದನ್ನು ಆಸ್ತಿಯ ಕಾನೂನು ಮಾಲೀಕತ್ವವೆಂದು ಪರಿಗಣಿಸಲಾಗುವುದಿಲ್ಲ ಎಂದು ತಿಳಿಸಿದೆ. ಗಿಫ್ಟ್ ಡೀಡ್ ಮೂಲಕ ಆಸ್ತಿ ಹಕ್ಕು ಪಡೆದಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅರ್ಜಿದಾರರ ಪರವಾಗಿ…

Read More

ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅವರು ಮೇಲ್ಮನವಿ ಸಲ್ಲಿಸಿದ್ದರು. ಇಂದು ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ ಮೇಲ್ಮನವಿ ವಿಚಾರಣೆ ನಡೆಯಲಿದೆ. ಈ ಮಧ್ಯೆ ಇಡಿಯಿಂದ ಲೋಕಾಯುಕ್ತ ಪೊಲೀಸ್ ಎಡಿಜಿಪಿಗೆ ಪತ್ರ ಬರೆದಿದ್ದು ಪಿಎಂಎಲ್ಐ ಕಾಯ್ದೆಯ ಸೆಕ್ಷನ್ 66 (2) ಅಡಿ ಮಾಹಿತಿ ಹಂಚಿಕೆಯಾಗಿದೆ. ಇಡಿಗೆ ಮಾಹಿತಿ ಹಂಚಿಕೊಳ್ಳುವ ಕಾನೂನಾತ್ಮಕ ಅಧಿಕಾರವಿದೆ. ತನಿಖೆಯ ವೇಳೆ ಇತರ ಕಾಯ್ದೆಗಳ ಉಲ್ಲಂಘನೆಯಾಗಿದ್ದರೆ ಮಾಹಿತಿ ಹಂಚಿಕೊಳ್ಳುವ ಅಧಿಕಾರವಿದೆ. ಸಂಬಂಧಪಟ್ಟಂತಹ ತನಿಖಾ ಸಂಸ್ಥೆಗಳೊಂದಿಗೆ ಇಡಿ ಮಾಹಿತಿ ಹಂಚಿಕೊಳ್ಳಬಹುದು. ಸದ್ಯ ಲೋಕಾಯುಕ್ತ ಪೊಲೀಸರು ಮುಡಾ ಹಗರಣದ ತನಿಖೆ ನಡೆಸುತ್ತಿದ್ದಾರೆ. ಭ್ರಷ್ಟಾಚಾರ ತಡೆ ಕಾಯ್ದೆಯ ಅಡಿ ತನಿಖೆ ನಡೆಸುತ್ತಿದ್ದಾರೆ. ಹೀಗಾಗಿ ಮುಡಾ ಪ್ರಕರಣದ ಮಾಹಿತಿ ಇಡಿ ಹಂಚಿಕೊಂಡಿದೆ. ಇಂದು ಹೈ ಕೋರ್ಟ್ ವಿಭಾಗೀಯ ಪೀಠದಲ್ಲಿ ಇಡಿಗೆ ಸಂಬಂಧಿಸಿದ ವಿಚಾರಣೆ ಇಲ್ಲ. ಆದರೆ ಇಡಿಯ ಪತ್ರವನ್ನು ಸಿಎಂ ಪರ ವಕೀಲರು ಪ್ರಸ್ತಾಪಿಸಬಹುದು. ಇಡಿ ನಡೆ ರಾಜಕೀಯ ಪ್ರೇರಿತವೆಂದು…

Read More

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದಿಂದ ಡಿಸೆಂಬರ್ 7 ಮತ್ತು 8 ರಂದು ಗ್ರಾಮೀಣ ಅಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಗ್ರೂಪ್ ಸಿ ಹುದ್ದೆಗಳಾದ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳ 150 ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಪರೀಕ್ಷೆ ವೇಳೆ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಪರೀಕ್ಷಾ ಅವ್ಯವಹಾರಕ್ಕೆ ಅವಕಾಶ ನೀಡದೆ ಕಟ್ಟುನಿಟ್ಟಿನ ಪರೀಕ್ಷೆ ಸೂಚನೆ ನೀಡಲಾಗಿದೆ. ಪರೀಕ್ಷೆಯಲ್ಲಿ ಭಾಗವಹಿಸಲಿರುವ ಎಲ್ಲಾ ಪರೀಕ್ಷಾರ್ಥಿಗಳು ಪರೀಕ್ಷಾ ಕೇಂದ್ರದೊಳಗೆ ಸ್ಮಾರ್ಟ್ ವಾಚ್, ಮೊಬೈಲ್, ಕ್ಯಾಲ್ಕ್ಯುಲೇಟರ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ಪರೀಕ್ಷಾ ಕೇಂದ್ರದೊಳಗೆ ಕೊಂಡೊಯ್ಯುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ. ಡಿ.7 ರಂದು ಮಧ್ಯಾಹ್ನ 2 ರಿಂದ 4 ಗಂಟೆಯವರೆಗೆ ಕನ್ನಡ ಭಾಷಾ ಪರೀಕ್ಷೆ, ಡಿ.8 ರಂದು ಬೆಳಿಗ್ಗೆ 10 ರಿಂದ 11.30 ರವರೆಗೆ ಪತ್ರಿಕೆ-1 ಸಾಮಾನ್ಯ ಜ್ಞಾನ, ಮಧ್ಯಾಹ್ನ 2 ರಿಂದ 4 ಗಂಟೆಯವರೆಗೆ ಪತ್ರಿಕೆ-2, ಸಾಮಾನ್ಯ ಕನ್ನಡ, ಸಾಮಾನ್ಯ ಇಂಗ್ಲೀಷ್, ಕಂಪ್ಯೂಟರ್ ಜ್ಞಾನ ವಿಷಯದ ಕುರಿತು ಪರೀಕ್ಷೆ ಇರುತ್ತದೆ. ಪರೀಕ್ಷೆಗಳು ನಡೆಯುವ ದಿನಗಳಂದು…

Read More

ನವದೆಹಲಿ : ಬೆನ್ನು ನೋವಿನ ಕಾರಣಕ್ಕೆ ಮಧ್ಯಂತರ ಜಾಮೀನು ಪಡೆದು ಆಸ್ಪತ್ರೆಗೆ ದಾಖಲಾಗಿರುವ ಕೊಲೆ ಆರೋಪಿ ನಟ ದರ್ಶನ್ ಜಾಮೀನು ರದ್ದು ಮಾಡುವಂತೆ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಎ2 ಆರೋಪಿ ನಟ ದರ್ಶನ್ ಅವರಿಗೆ ಹೈಕೋರ್ಟ್ ನೀಡಿರುವ ಮಧ್ಯಂತರ ಜಾಮೀನು ರದ್ದು ಮಾಡುವಂತೆ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಡಿಸೆಂಬರ್ 6 ಅಥವಾ 9 ರಂದು ವಿಚಾರಣೆಗೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ. ಬಳ್ಳಾರಿ ಜೈಲಿನಲ್ಲಿ ಬೆನ್ನುನೋವು ಕಾಣಿಸಿಕೊಂಡ ಕಾರಣ ಚಿಕಿತ್ಸೆಗಾಗಿ ಜಾಮೀನು ನೀಡುವಂತೆ ದರ್ಶನ್ ಹೈಕೋರ್ಟ್ ಮೊರೆ ಹೋಗಿದ್ದರು. ಕೋರ್ಟ್ 6 ವಾರ ಷರತ್ತುಬದ್ದ ಜಾಮೀನು ನೀಡಿತ್ತು ಜೈಲಿನಿಂದ ಹೊರಬಂದ ಬಳಿಕ ದರ್ಶನ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಇದುವರೆಗೂ ಶಸ್ತ್ರಚಿಕಿತ್ಸೆ ಪಡೆದಿಲ್ಲ. ಹೀಗಾಗಿ ಕರ್ನಾಟಕ ಸರ್ಕಾರ ಪ್ರಾಸಿಕ್ಯೂಷನ್ ಪರ ವಕ ಪರ ವಕೀಲರು ಜಾಮೀನು ರದ್ದು ಕೋರಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

Read More

ನವದೆಹಲಿ : ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ (PM Kisan Yojana) ಫಲಾನುಭವಿಗಳಾಗಿರುವ ರೈತರಿಗೆ ಪ್ರಮುಖವಾದ ನವೀಕರಣವನ್ನು ನೀಡಲಾಗಿದೆ. ಈಗ, ಈ ಯೋಜನೆಯ ಪ್ರಯೋಜನಗಳನ್ನು ಪಡೆಯಲು, ರೈತರು ಹೊಸ ಅರ್ಹತಾ ಮಾನದಂಡಗಳನ್ನು ಪೂರೈಸಬೇಕಾಗುತ್ತದೆ. ನೀವು PM ಕಿಸಾನ್ ಯೋಜನೆಯ 19 ನೇ ಕಂತನ್ನು ಪಡೆಯಲು ಬಯಸಿದರೆ, ನೀವು ಯಾವುದೇ ವಿಳಂಬವಿಲ್ಲದೆ ಈ ಷರತ್ತುಗಳನ್ನು ಪೂರೈಸಬೇಕು. ಇನ್ನು ಮುಂದೆ ರೈತ ನೋಂದಣಿಯಲ್ಲಿ ನೋಂದಾಯಿಸಿಕೊಂಡ ರೈತರಿಗೆ ಮಾತ್ರ ಪ್ರಧಾನಮಂತ್ರಿ ಕಿಸಾನ್ ಯೋಜನೆಯ ಲಾಭ ಸಿಗಲಿದೆ. ಕೇಂದ್ರ ಸರ್ಕಾರವು ಡಿಸೆಂಬರ್ 31, 2024 ರ ನಂತರ ಬಿಡುಗಡೆಯಾದ ಕಂತುಗಳಿಗೆ ರೈತ ನೋಂದಣಿಯಲ್ಲಿ ನೋಂದಣಿಯನ್ನು ಕಡ್ಡಾಯಗೊಳಿಸಿದೆ. ಈ ನೋಂದಣಿಗೆ ಸೇರಿದ ನಂತರ, ರೈತರು ಪ್ರಧಾನ ಮಂತ್ರಿ ಕಿಸಾನ್ ಯೋಜನೆ ಮತ್ತು ಇತರ ಸರ್ಕಾರಿ ಯೋಜನೆಗಳ ಪ್ರಯೋಜನಗಳನ್ನು ಪಡೆಯುತ್ತಾರೆ. ಸರ್ಕಾರವು ರೈತರಿಗೆ ಪ್ರತಿ ವರ್ಷ ₹ 6000 ಅನ್ನು ಮೂರು ಕಂತುಗಳಲ್ಲಿ ನೀಡುತ್ತದೆ, ಅದನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗುತ್ತದೆ. ಆದರೆ ಈಗ, ಯೋಜನೆಯ…

Read More

ಮುಂಬೈ : ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಮಹಾರಾಷ್ಟ್ರದ ಮುಂದಿನ ಸಿಎಂ ಆಗಲಿದ್ದಾರೆ. ದೇವೇಂದ್ರ ಫಡ್ನವೀಸ್ ಅವರ ಹೆಸರನ್ನು ಅನುಮೋದಿಸಲಾಗಿದೆ. ಬುಧವಾರ ದೇವೇಂದ್ರ ಫಡ್ನವೀಸ್ ಅವರು ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ. ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್ ಅವರನ್ನು ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಮಾಡಲು ಒಪ್ಪಿಗೆ ನೀಡಲಾಗಿದೆ. ಈ ನಿರ್ಧಾರದ ನಂತರ, ಈಗ ದೇವೇಂದ್ರ ಫಡ್ನವೀಸ್ ಅವರು ಬೆಂಬಲಿಗ ಶಾಸಕರ ಹೆಸರುಗಳೊಂದಿಗೆ ಮಹಾರಾಷ್ಟ್ರ ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ. ಮಧ್ಯಾಹ್ನ 3.30ಕ್ಕೆ ಮಹಾಯುತಿ ನಾಯಕರು ರಾಜಭವನಕ್ಕೆ ತೆರಳಲಿದ್ದಾರೆ. ಡಿಸೆಂಬರ್ 5 ರಂದು ಮಹಾರಾಷ್ಟ್ರದ ಆಜಾದ್ ಮೈದಾನದಲ್ಲಿ ಪ್ರಮಾಣ ವಚನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಬಿಜೆಪಿಯ ಹಲವು ಹಿರಿಯ ನಾಯಕರು ಇದರಲ್ಲಿ ಭಾಗಿಯಾಗಲಿದ್ದಾರೆ. ದೇವೇಂದ್ರ ಫಡ್ನವೀಸ್ ಈ ಹಿಂದೆಯೂ ಸಿಎಂ ಆಗಿದ್ದರು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸೀಟು ಸಿಕ್ಕಿದ ರೀತಿಯಲ್ಲಿ ಮುಂದಿನ ಸಿಎಂ ಬಿಜೆಪಿಯವರೇ ಎಂಬ ನಂಬಿಕೆ ಇತ್ತು. ದೇವೇಂದ್ರ ಫಡ್ನವಿಸ್ ನಾಗ್ಪುರ ನೈಋತ್ಯ ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ.…

Read More

ನವದೆಹಲಿ : ಮಧ್ಯಪ್ರದೇಶ ರಾಜ್ಯದ ಆರು ಮಹಿಳಾ ಸಿವಿಲ್ ನ್ಯಾಯಾಧೀಶರನ್ನು ಮಧ್ಯಪ್ರದೇಶ ಹೈಕೋರ್ಟ್ ವಜಾಗೊಳಿಸಿದ್ದಕ್ಕೆ ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಮಂಗಳವಾರ ನಡೆದ ವಿಚಾರಣೆಯಲ್ಲಿ ಮಹಿಳಾ ನ್ಯಾಯಾಧೀಶರ ಸೇವೆಯನ್ನು ವಜಾಗೊಳಿಸುವ ನಿರ್ಧಾರದ ಬಗ್ಗೆ ನ್ಯಾಯಾಲಯವು ಪ್ರಶ್ನೆಗಳನ್ನು ಎತ್ತಿತು ಮತ್ತು ಅವರನ್ನು ಮರುನೇಮಕಗೊಳಿಸಲು ನಿರಾಕರಿಸಿತು. ನ್ಯಾಯಮೂರ್ತಿ ಬಿ.ವಿ.ನಾಗರತ್ನ ಮತ್ತು ನ್ಯಾಯಮೂರ್ತಿ ಎನ್.ಕೋಟೀಶ್ವರ್ ಸಿಂಗ್ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ಪೀಠವು, “ಪುರುಷರಿಗೂ ಋತುಚಕ್ರದ ಸಮಸ್ಯೆ ಇರುತ್ತಿದ್ದರೆ ಮಹಿಳೆಯರ ಕಷ್ಟ ಅರ್ಥಮಾಡಿಕೊಳ್ಳುತಿದ್ದರು ಎಂದು ಹೇಳಿದರು. https://twitter.com/barandbench/status/1863923191548448877?ref_src=twsrc%5Etfw%7Ctwcamp%5Etweetembed%7Ctwterm%5E1863923191548448877%7Ctwgr%5E21233e5b7d62605e601ece90c59cbbcebbaab451%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fhindi%2Flatestlyhindi-epaper-dh9be9acbd9792411390454cf890a581ca%2Fpurushokopiriyadshotatounhemahilaokakashtsamajhaatasuprimkortnemadhypradeshhckolagaiphatakar-newsid-n641937936 ಮಹಿಳಾ ನ್ಯಾಯಾಧೀಶರ ದೈಹಿಕ ಮತ್ತು ಮಾನಸಿಕ ಸ್ಥಿತಿಯನ್ನು ಸರಿಯಾಗಿ ಅರ್ಥಮಾಡಿಕೊಳ್ಳದಿರುವಾಗ ಅವರನ್ನು ವಜಾಗೊಳಿಸುವ ನಿರ್ಧಾರವನ್ನು ತೆಗೆದುಕೊಂಡಿರುವ ಮಧ್ಯಪ್ರದೇಶ ಹೈಕೋರ್ಟ್‌ನ ಅಸಡ್ಡೆ ವರ್ತನೆಯ ಬಗ್ಗೆ ನ್ಯಾಯಾಲಯವು ಪರೋಕ್ಷವಾಗಿ ಈ ಅಭಿಪ್ರಾಯವನ್ನು ನೀಡಿದೆ. ವಿಚಾರಣೆ ವೇಳೆ ನ್ಯಾಯಮೂರ್ತಿ ನಾಗರತ್ನ ಅವರು, ”ಮಹಿಳೆಯರು ಮಾನಸಿಕವಾಗಿ ಮತ್ತು ದೈಹಿಕವಾಗಿ ಬಳಲುತ್ತಿದ್ದರೆ, ನಿಧಾನವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳುವುದು ತಪ್ಪು, ಪುರುಷ ನ್ಯಾಯಾಧೀಶರು ಮತ್ತು ನ್ಯಾಯಾಂಗ ಅಧಿಕಾರಿಗಳಿಗೆ ಇದೇ ವೇಳೆ, ನಿಯತಾಂಕಗಳಿದ್ದರೆ, ಏನಾಗುತ್ತದೆ ಎಂದು…

Read More