Author: kannadanewsnow57

ನವದೆಹಲಿ : ಹರಿದ್ವಾರದಲ್ಲಿ ಗಂಗಾ ನದಿಯ ನೀರು ಕುಡಿಯಲು ಯೋಗ್ಯವಲ್ಲ ಎಂದು ಉತ್ತರಾಖಂಡ ಮಾಲಿನ್ಯ ನಿಯಂತ್ರಣ ಮಂಡಳಿ ವರದಿಯಲ್ಲಿ ತಿಳಿಸಿದೆ.  ಹರಿದ್ವಾರದ ಗಂಗಾ ನದಿ ನೀರು ‘ಬಿ’ ವರ್ಗದಲ್ಲಿ ಇರುವುದು ಕಂಡುಬಂದಿದ್ದು, ಇದು ಕುಡಿಯಲು ಅಸುರಕ್ಷಿತವಾಗಿದೆ, ಆದರೆ ಸ್ನಾನಕ್ಕೆ ಸೂಕ್ತವಾಗಿದೆ.  ಉತ್ತರಾಖಂಡ ಮಾಲಿನ್ಯ ನಿಯಂತ್ರಣ ಮಂಡಳಿಯು ಉತ್ತರ ಪ್ರದೇಶದ ಗಡಿಯುದ್ದಕ್ಕೂ ಹರಿದ್ವಾರದ ಸುತ್ತಮುತ್ತಲಿನ ಸುಮಾರು ಎಂಟು ಸ್ಥಳಗಳಲ್ಲಿ ಪ್ರತಿ ತಿಂಗಳು ಗಂಗಾ ನೀರನ್ನು ಪರೀಕ್ಷಿಸುತ್ತದೆ. ಇತ್ತೀಚೆಗೆ ನಡೆಸಿದ ಪರೀಕ್ಷೆಯಲ್ಲಿ ನವೆಂಬರ್ ತಿಂಗಳ ಗಂಗಾ ನದಿಯ ನೀರು ‘ಬಿ’ ವರ್ಗಕ್ಕೆ ಸೇರಿದೆ ಎಂದು ಕಂಡುಬಂದಿದೆ. ನದಿ ನೀರನ್ನು ಐದು ವಿಭಾಗಗಳಾಗಿ ವಿಂಗಡಿಸಲಾಗಿದೆ, ‘ಎ’ ಅತ್ಯಂತ ಕಡಿಮೆ ವಿಷಕಾರಿಯಾಗಿದೆ, ಮತ್ತು ‘ಇ’ ಅತ್ಯಂತ ವಿಷಕಾರಿಯಾಗಿದೆ . ಸ್ಥಳೀಯ ಅರ್ಚಕ ಉಜ್ವಲ್ ಪಂಡಿತ್ ಕೂಡ ನೀರಿನಲ್ಲಿ ಹೆಚ್ಚುತ್ತಿರುವ ಮಾಲಿನ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಮಾನವ ತ್ಯಾಜ್ಯದಿಂದಾಗಿ ಗಂಗಾ ನೀರಿನ ಶುದ್ಧತೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ತಿಳಿಸಿದ್ದಾರೆ.

Read More

ಮಂಡ್ಯ : ಸಚಿವ ಸಂಪುಟದ ಕುರಿತಂತೆ ಸಿಎಂ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದು, ಸಚಿವ ಸಂಪುಟ ಬಗ್ಗೆ ಯಾರು ಹೇಳುತ್ತಾರೆ ಅನ್ನೋದು ಮುಖ್ಯ ಅಲ್ಲ. ಹೈಕಮಾಂಡ್ ಅದಕ್ಕೆ ಸೂಚನೆ ನೀಡಬೇಕು.ಬಳಿಕ ನಾನು ನಿರ್ಧರಿಸುತ್ತೇನೆ ಹೈಕಮಾಂಡ್ ಹೇಳಿಲ್ಲ ನಾನು ತೀರ್ಮಾನವನ್ನು ತೆಗೆದುಕೊಂಡಿಲ್ಲ. ಹಾಗಾಗಿ ಸಚಿವ ಸಂಪುಟ ಪುನಾರಚನೆ ಸದ್ಯಕ್ಕೆ ಇಲ್ಲ ಎಂದು ಸ್ಪಷ್ಟನೆ ನೀಡಿದರು. ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ಬಂಡಬೋಯಿನಹಳ್ಳಿ ಮಾತನಾಡಿದ ಅವರು, ಮುಡಾ ಹಗರಣಕ್ಕೆ ಸಂಬಂಧ ಪಟ್ಟಂತೆ ED ಅಧಿಕಾರಿಗಳು ಲೋಕಾಯುಕ್ತ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ನಾಳೆ ಹೈ ಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ. ಒಂದಿನ ಮುಂಚಿತವಾಗಿ ಲೋಕಾಯುಕ್ತಕ್ಕೆ ಪತ್ರ ಬರೆದಿದ್ದರ ಉದ್ದೇಶವೇನು? ED ಅಧಿಕಾರಿಗಳು ದುರುದ್ದೇಶ ಪೂರಕವಾಗಿ ತನಿಖೆ ನಡೆಸುತ್ತಿದ್ದಾರೆ. ಆದರೆ ಅವರಿಗೆ ತನಿಖೆ ಮಾಡುವ ಅಧಿಕಾರವೇ ಇಲ್ಲ ಎಂದು ಕಿಡಿಕಾರಿದರು.

Read More

ಬೆಂಗಳೂರು : ರಾಜ್ಯದಲ್ಲಿ ರಮ್ಮಿ ಆಟದ ಚಟಕ್ಕೆ ಬಿದ್ದಿದ್ದ ವ್ಯಕ್ತಿಯೊಬ್ಬ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.  ಗದಗ ನಗರದ ಹೋಟೆಲ್ ವೊಂದರಲ್ಲಿ ಜಗದೀಶ್ ಹಳೇಮನೆ (37) ಎಂಬಾತ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.  ಜಗದೀಶ್ ಶಿರಹಟ್ಟಿ ಮೂಲದವರು ಎಂದು ಗುರುತಿಸಲಾಗಿದ್ದು, ಸಾವಿಗೂ ಮುನ್ನ ಡೆತ್ ನೋಟ್ ಸಹ ಬರೆದಿಟ್ಟಿದ್ದಾರೆ. ರಾಜ್ಯದಲ್ಲಿ ಆನ್ ಲೈನ್ ರಮ್ಮಿ ಗೇಮ್ ನಿಷೇಧ ಮಾಡಬೇಕು ಎಂದು ಡೆತ್ ನೋಟ್ ನಲ್ಲಿ ಬರೆದು ಸೂಸೈಡ್ ಮಾಡಿಕೊಂಡಿದ್ದಾರೆ. ಜಗದೀಶ್ ಶಿರಹಟ್ಟಿಯಲ್ಲಿ ಪಾತ್ರೆ ವ್ಯಾಪಾರ ಮಾಡುತ್ತಿದ್ದರು. ಆನ್ ಲೈನ್ ರಮ್ಮಿ ಗೇಮ್ ನಿಂದ ಹಣ ಕಳೆದುಕೊಂಡು ಖಿನ್ನತೆಗೆ ಜಾರಿದ್ದರು. ಡಿಸೆಂಬರ್ 1 ರಂದು ಗದಗದ ಹೋಟೆಲ್ ನಲ್ಲಿ ನೇಣಿಗೆ ಶರಣಾಗಿದ್ದರು. ಡೆತ್ ನೋಟ್ ನಲ್ಲಿ ಆನ್ ಲೈನ್ ರಮ್ಮಿ ಬಂದ್ ಮಾಡುವಂತೆ ಉಲ್ಲೇಖಿಸಿದ್ದಾರೆ.

Read More

ನವದೆಹಲಿ : ಭಾರತೀಯ ಬ್ಯಾಂಕ್‌ಗಳು ಹೊಸ ನೀತಿಯನ್ನು ಪರಿಚಯಿಸಿದ್ದು, ಬ್ಯಾಂಕ್ ಖಾತೆದಾರರು ತಮ್ಮ ಖಾತೆಗಳಲ್ಲಿ ಸಮತೋಲನವನ್ನು ಕಾಯ್ದುಕೊಳ್ಳಬೇಕು. ಈ ಅಗತ್ಯವನ್ನು ಪೂರೈಸಲು ವಿಫಲವಾದರೆ ಶಾಶ್ವತ ಖಾತೆ ಮುಚ್ಚುವಿಕೆಗೆ ಕಾರಣವಾಗಬಹುದು. ಹೊಸ ನೀತಿಯ ಪ್ರಕಾರ, ಗ್ರಾಹಕರು ತಮ್ಮ ಖಾತೆಗಳಲ್ಲಿ ಎಲ್ಲಾ ಸಮಯದಲ್ಲೂ ಸೀಮಿತ ಕನಿಷ್ಠ ಬ್ಯಾಲೆನ್ಸ್ ಅನ್ನು ನಿರ್ವಹಿಸಬೇಕಾಗುತ್ತದೆ. ಬ್ಯಾಂಕ್ ಬ್ಯಾಲೆನ್ಸ್ ಮೊತ್ತದ ಅವಶ್ಯಕತೆಯು ಬ್ಯಾಂಕುಗಳು ಮತ್ತು ಖಾತೆ ಪ್ರಕಾರಗಳಲ್ಲಿ ಬದಲಾಗುತ್ತದೆ. ಖಾತೆದಾರರು ತಮ್ಮ ಖಾತೆಗಳನ್ನು ಸಕ್ರಿಯವಾಗಿ ಬಳಸುತ್ತಾರೆ ಮತ್ತು ಬ್ಯಾಂಕಿಂಗ್ ಕ್ಷೇತ್ರದ ಸ್ಥಿರತೆಗೆ ಕೊಡುಗೆ ನೀಡುವುದನ್ನು ಖಚಿತಪಡಿಸಿಕೊಳ್ಳುವುದು ಇದರ ಉದ್ದೇಶವಾಗಿದೆ. ಭಾರತೀಯ ರಿಸರ್ವ್ ಬ್ಯಾಂಕ್ (RBI) ಮತ್ತು ದೇಶದ ಬ್ಯಾಂಕಿಂಗ್ ಸಂಸ್ಥೆಗಳ ನಡುವಿನ ಚರ್ಚೆಯ ನಂತರ ಈ ನೀತಿಯನ್ನು ಪ್ರಾರಂಭಿಸಲಾಗಿದೆ. ದೇಶದ ಕೇಂದ್ರ ಬ್ಯಾಂಕಿಂಗ್ ಪ್ರಾಧಿಕಾರವಾಗಿ, ಗ್ರಾಹಕರು ಮತ್ತು ಬ್ಯಾಂಕ್‌ಗಳನ್ನು ಗಮನದಲ್ಲಿಟ್ಟುಕೊಂಡು ಆರ್‌ಬಿಐ ಈ ಕ್ರಮ ಕೈಗೊಂಡಿದೆ. ಬ್ಯಾಂಕ್ ಖಾತೆಗಳಲ್ಲಿ ಕನಿಷ್ಟ ಬ್ಯಾಲೆನ್ಸ್ ಅನ್ನು ನಿರ್ವಹಿಸುವುದು ಅನೇಕ ಪ್ರಯೋಜನಗಳನ್ನು ಒದಗಿಸುತ್ತದೆ. ಬ್ಯಾಂಕ್‌ಗಳು ತಮ್ಮ ಗ್ರಾಹಕರಿಗೆ ಉತ್ತಮ ಸೇವೆಗಳನ್ನು ಒದಗಿಸಲು ಇದು ಸಹಾಯ…

Read More

ಬಾಬಾ ರಾಮದೇವ್ ಸಾಮಾಜಿಕ ಜಾಲತಾಣಗಳಲ್ಲಿ ಆಗಾಗ ಸುದ್ದಿಯಲ್ಲಿರುತ್ತಾರೆ. ಇತ್ತೀಚಿನ ದಿನಗಳಲ್ಲಿ ಕತ್ತೆ ಹಾಲು ಕುಡಿದ ಕಾರಣ ವೈರಲ್ ಆಗುತ್ತಿದೆ. ಈ ವಿಡಿಯೋ ಹರಿದ್ವಾರದಲ್ಲಿರುವ ಪತಂಜಲಿ ಯೋಗ ಪೀಠದಿಂದ ಬಂದಿದೆ. ಬಾಬಾ ರಾಮದೇವ್ ಕತ್ತೆಯ ಹಾಲು ಕರೆದು ನಂತರ ಕುಡಿದಿದ್ದಾರೆ. ಅದನ್ನು ಕುಡಿದ ನಂತರ ಅದರ ರುಚಿಯನ್ನು ಹೊಗಳಿ ಅದರ ಗುಣಗಳ ಬಗ್ಗೆ ತಿಳಿಸಿದರು. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ವಾಸ್ತವವಾಗಿ, ವೈರಲ್ ವೀಡಿಯೊದಲ್ಲಿ, ಯೋಗ ಗುರುಗಳು ಕತ್ತೆ ಹಾಲು ಕುಡಿಯುವುದರಿಂದ ಆಗುವ ಪ್ರಯೋಜನಗಳನ್ನು ವಿವರಿಸುತ್ತಿದ್ದಾರೆ. ಯೋಗ ಗುರುಗಳು ಸ್ಥಳೀಯ ಗಿಡಮೂಲಿಕೆಗಳು ಮತ್ತು ಆಹಾರದಿಂದ ಅನೇಕ ರೋಗಗಳನ್ನು ಗುಣಪಡಿಸುತ್ತಾರೆ ಎಂದು ಹೇಳುತ್ತಾರೆ. ವಿಡಿಯೋದಲ್ಲಿ ಕತ್ತೆ ಹಾಲನ್ನು ವೈಭವೀಕರಿಸುತ್ತಿದ್ದಾರೆ. ಕತ್ತೆ ಹಾಲು ಕುಡಿದ ನಂತರ ಅದರ ರುಚಿಯನ್ನು ತುಂಬಾ ಹೊಗಳಿದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಬಾಬಾ ರಾಮ್‌ದೇವ್ X ನಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ ಈ ವಿಡಿಯೋವನ್ನು ಸ್ವತಃ ಬಾಬಾ ರಾಮ್‌ದೇವ್ ತಮ್ಮ ಎಕ್ಸ್ ಹ್ಯಾಂಡಲ್‌ನಲ್ಲಿ…

Read More

ಬೆಂಗಳೂರು : ಅಡುಗೆ ಎಣ್ಣೆ, ಇಂಧನ, ಗ್ಯಾಸ್‌ ಸಿಲಿಂಡರ್‌ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಹೊತ್ತಲ್ಲೆ, ನಂದಿನಿ ಹಾಲಿನ ದರ ಕೂಡ ಶೀಘ್ರವೇ ಏರಿಕೆಯಾಗಲಿದೆ ಎಂದು ಹೇಳಲಾಗಿತ್ತು. ಆದರೆ ಇದೀಗ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಅವರು ಸದ್ಯಕ್ಕೆ ನಂದಿನಿ ಹಾಲಿನ ದರದಲ್ಲಿ ಯಾವುದೇ ಏರಿಕೆ ಮಾಡಲ್ಲ ಎಂದು ಸ್ಪಷ್ಟಪಡಿಸಿದರು. ಬೆಂಗಳೂರಿನ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೆಲ ದಿನಗಳ ಹಿಂದೆ ರಾಮನಗರದಲ್ಲಿ ವೇದಿಕೆ ಮೇಲೆ ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಎಲ್ಲಾ ಅಧಿಕಾರಿಗಳ ಜೊತೆಗೆ ಚರ್ಚಿಸಿ ತೀರ್ಮಾನಿಸುತ್ತೇವೆ ಅಂತ ಹೇಳಿದ್ದಾರೆ. ಸದ್ಯಕ್ಕೆ ಹಾಲಿನ ದರ ಏರಿಕೆ ಬಗ್ಗೆ ಮಾಹಿತಿ ಇಲ್ಲ. ಆದರೆ ನಂದಿನಿ ಹಾಲಿನ ದರ ಏರಿಕೆಗೆ ರಾಜ್ಯದ ರೈತರ ಬೇಡಿಕೆ ಇದೆ ಕೆಎಂಎಫ್ ಎಂಡಿ ವರ್ಗಾವಣೆ ಆಡಳಿತಾತ್ಮಕ ತೀರ್ಮಾನ ಅಷ್ಟೇ ಎಂದು ವಿಧಾನಸೌಧದಲ್ಲಿ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ತಿಳಿಸಿದರು. ಸದ್ಯಕ್ಕೆ ನಂದಿನಿ ಹಾಲಿನ ದರ ಏರಿಕೆ ಇಲ್ಲ,ಹಾಲಿನ ದರ ಏರಿಕೆಗೆ ಯಾವುದೇ ಪ್ರಸ್ತಾವನೆ ಬಂದಿಲ್ಲ, ಈ ಬಗ್ಗೆ…

Read More

ಬೆಂಗಳೂರು : ಇಷ್ಟು ದಿನ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ಸಿನಲ್ಲಿ ಜನರು ನಗದು ಹಣ ನೀಡಿ ಟಿಕೆಟ್ ಪಡೆಯುತ್ತಿದ್ದರು. ಈ ವೇಳೆ ಕಂಡಕ್ಟರ್ ಮತ್ತು ಪ್ರಯಾಣಿಕರ ನಡುವೆ ಚಿಲ್ಲರೆ ವಿಷಯವಾಗಿ ಗಲಾಟೆ ನಡೆಯುತ್ತಿತ್ತು. ಆದರೆ ಇದೀಗ ಪ್ರಯಾಣಿಕರ ಬೇಡಿಕೆಯಂತೆ ಕೆಎಸ್ಆರ್ಟಿಸಿಯು ಇನ್ನು ಮುಂದೆ ಬಸ್ಗಳಲ್ಲಿ ಯುಪಿಐ ಮೂಲಕ ಹಣ ಪೇ ಮಾಡಿ ಟಿಕೆಟ್ ಪಡೆದುಕೊಳ್ಳುವ ಅವಕಾಶವನ್ನು ಕಲ್ಪಿಸಿದೆ. ಹೌದು ಪ್ರಯಾಣಿಕರ ಬಹುದಿನಗಳ ಬೇಡಿಕೆಯಂತೆ ಇದೀಗ KSRTC ಸಂಸ್ಥೆಯು ಒಂದು ಹೆಜ್ಜೆ ಮುಂದೆ ಹೋಗಿ, ದುಡ್ಡು ಕೊಟ್ಟು ಚಿಲ್ಲರೆ ವಿಚಾರವಾಗಿ ಕಂಡಕ್ಟರ್ ಜೊತೆಗೆ ಸಣ್ಣಪುಟ್ಟ ಕಿರಿಕ್ ಆಗುತ್ತಿದ್ದವು. ಆದರೆ ಇದೀಗ ಆ ಚಿಂತೆ ಬಿಟ್ಟುಬಿಡಿ. ಡೈನಮಿಕ್ ಕ್ಯೂಆರ್ ಕೋಡ್ ಮೂಲಕ ಹಣ ಪಾವತಿ ಮಾಡಬಹುದಾಗಿದೆ. ರಾಜ್ಯದ 8800 ಬಸ್ಗಳಲ್ಲಿ ಯುಪಿಐ ಮೂಲಕ ಹಣ ಪಾವತಿಸಬಹುದಾಗಿದೆ ಆನ್ಲೈನ್ ಹಣ ಸಂದಾಯ ಮಾಡುವ ಆಪ್ ಗಳಾದ ಗೂಗಲ್ ಪೇ, ಫೋನ್ ಪೇ, ಪೇಟಿಎಂ ಹಾಗೂ ಭೀಮ್ ಆಪ್ ಮೂಲಕ ಹಣ ಪಾವತಿಸಬಹುದಾಗಿದೆ. ಮುಂದಿನ ದಿನಗಳಲ್ಲಿ ಎಟಿಎಂ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಕಾರ್ಖಾನೆಯಲ್ಲಿ ಕಳ್ಳತನಕ್ಕೆ ಬಂದಿದ್ದ ಕಳ್ಳನ ಮೇಲೆ ಸೆಕ್ಯೂರಿಟಿ ಗಾರ್ಡ್ ಫೈರಿಂಗ್ ಮಾಡಿರುವ ಘಟನೆ ನಡೆದಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿಯ ಸದರನ್ ಕಾರ್ಖಾನೆಯಲ್ಲಿ ಕಳ್ಳತನಕ್ಕೆ ಬಂದಿದ್ದ ಕಳ್ಳನ ಮೇಲೆ ಸೆಕ್ಯೂರಿಟಿ ಗಾರ್ಡ್ ಆಗಿದ್ದ ಸುರೇಶ್ ಅವರು ಫೈರಿಂಗ್ ಮಾಡಿದ್ದಾರೆ. ತಡರಾತ್ರಿ 2.30 ರ ಸುಮಾರಿಗೆ ಕಾರ್ಖಾನೆಗೆ ನುಗ್ಗಿ ತಾಮ್ರ, ಬ್ಯಾಟರಿ ಕದಿಯಲು ಕಳ್ಳ ಯತ್ನಿಸಿದ್ದಾನೆ. ಈ ವೇಳೆ ಸೆಕ್ಯೂರಿಟ ಗಾರ್ಡ್ ಎಚ್ಚರಿಕೆ ನೀಡಿದ್ದಾರೆ. ಆದರೆ ಕಳ್ಳ ಕದ್ದ ಮಾಲ್ ಜೊತೆಗೆ ಎಸ್ಕೇಪ್ ಆಗುವಾಗ ಸುರೇಶ್ ಕಳ್ಳನ ಕಾಲಿಗೆ ಗುಂಡು ಹಾರಿಸಿದ್ದಾರೆ. ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ನವದೆಹಲಿ : ಸಾಮಾಜಿಕ ಭದ್ರತೆಯನ್ನು ಬಲಪಡಿಸಲು, ಉದ್ಯೋಗಿಗಳ ಭವಿಷ್ಯ ನಿಧಿ ಸಂಘಟನೆಯ (ಇಪಿಎಫ್‌ಒ) ಪಿಂಚಣಿಯಲ್ಲಿ ಪ್ರಮುಖ ಬದಲಾವಣೆಗಳೊಂದಿಗೆ ಆಕರ್ಷಕವಾಗಿಸುವ ಪ್ರಸ್ತಾಪಗಳನ್ನು ಗಂಭೀರವಾಗಿ ಪರಿಗಣಿಸಲಾಗುತ್ತಿದೆ. ಇಪಿಎಫ್ ಪಿಂಚಣಿದಾರರ ಮಕ್ಕಳು ಮತ್ತು ಅವರ ಜೀವನ ಸಂಗಾತಿಯ ಮರಣದ ನಂತರ ಪಿಂಚಣಿ ನಿಧಿಯಲ್ಲಿ ಠೇವಣಿ ಮಾಡಿದ ಮೊತ್ತವನ್ನು ನೀಡುವುದು ಪ್ರಮುಖ ಪ್ರಸ್ತಾಪವಾಗಿದೆ. ಇಪಿಎಫ್ ಸದಸ್ಯರನ್ನು ಪಿಂಚಣಿ ಯೋಜನೆಗೆ ಸೇರಲು ಪ್ರೋತ್ಸಾಹಿಸಲು ಕಾರ್ಮಿಕ ಸಚಿವಾಲಯವು ಈ ಪ್ರಸ್ತಾಪವನ್ನು ಬಹಳ ಮುಖ್ಯವೆಂದು ಪರಿಗಣಿಸುತ್ತಿದೆ. ಸುದೀರ್ಘ ಸೇವಾ ಅವಧಿಯ ನಂತರ ಕಡಿಮೆ ಪಿಂಚಣಿಯನ್ನು ತರ್ಕಬದ್ಧಗೊಳಿಸಲು ಸಚಿವಾಲಯವು ನೋಡುತ್ತಿದೆ, ಇದರಲ್ಲಿ ಕನಿಷ್ಠ ಪಿಂಚಣಿ ಮೊತ್ತವನ್ನು ಪ್ರಸ್ತುತ 1,000 ರೂ.ಗಳಿಂದ ಹೆಚ್ಚಿಸುವ ಪ್ರಸ್ತಾಪವೂ ಸೇರಿದೆ. EPF ಅಡಿಯಲ್ಲಿ ಸಾಮಾಜಿಕ ಭದ್ರತಾ ರಚನೆಯನ್ನು ಬಲಪಡಿಸುವ ಸಲುವಾಗಿ, EPS-1995 ಯೋಜನೆಯ ಅಡಿಯಲ್ಲಿ ಹೆಚ್ಚಿನ ಪಿಂಚಣಿಗಾಗಿ EPS ನಿಧಿಗೆ ತಮ್ಮ ಕೊಡುಗೆಯನ್ನು ಹೆಚ್ಚಿಸುವ ಆಯ್ಕೆಯನ್ನು ನೀಡುವ ಬಗ್ಗೆ ಕಾರ್ಮಿಕ ಸಚಿವಾಲಯವು ಗಂಭೀರವಾಗಿ ಸಮಾಲೋಚನೆ ನಡೆಸುತ್ತಿದೆ. ಮೂಲಗಳ ಪ್ರಕಾರ, ಪಿಂಚಣಿ ಸುಧಾರಣೆಗಳಿಗೆ ಸಂಬಂಧಿಸಿದ ಈ ಸಮಾಲೋಚನೆಗಳಲ್ಲಿ, ನೌಕರರ ಭವಿಷ್ಯ…

Read More

ಬೆಂಗಳೂರು : ರಾಜ್ಯದಲ್ಲಿ ನೂತನ ಕೈಗಾರಿಕೆ ನೀತಿ 2025 ರ ಜನವರಿಯಲ್ಲಿ ಜಾರಿಗೆ ಬರಲಿದ್ದು, ರಾಜ್ಯದೆಲ್ಲೆಡೆ ಉದ್ಯಮ ಸ್ಥಾಪಿಸಿ, ಉದ್ಯೋಗ ಸೃಷ್ಟಿಸಲಾಗುವುದು ಎಂದು ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಸಚಿವರು, ರಾಜ್ಯದೆಲ್ಲೆಡೆ ಉದ್ಯಮ ಸ್ಥಾಪನೆ-ಉದ್ಯೋಗ ಸೃಷ್ಟಿ ಮಾಡಲಾಗುವುದು. ಮುಂದಿನ 5 ವರ್ಷಗಳ ಅವಧಿಯಲ್ಲಿ ರೂ. 7.5 ಲಕ್ಷ ಕೋಟಿ ಹೂಡಿಕೆ, 20ಲಕ್ಷ ನೂತನ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಹೇಳಿದ್ದಾರೆ. ಬೆಳವಣಿಗೆ ಗುರಿ ಹೊಂದಲಾಗಿದೆ. 5 ವರ್ಷದಲ್ಲಿ 7.5 ಲಕ್ಷ ಕೋಟಿ ರೂ. ಬಂಡವಾಳದ ನಿರೀಕ್ಷೆ ಮಾಡಲಾಗುತ್ತಿದೆ. ಇದರಿಂದ 20 ಲಕ್ಷ ಉದ್ಯೋಗ ಸೃಷ್ಟಿಯಾಗಬಹುದೆಂದು ಅಂದಾಜು ಮಾಡಲಾಗಿದೆ. ಕೈಗಾರಿಕೆಗಳ ಅಭಿವೃದ್ಧಿಯಲ್ಲಿ ಪ್ರಾದೇಶಿಕ ಅಸಮತೋಲನ ಕಡೆಗಾಣಿಸುವ ಮಹತ್ವಕಾಂಕ್ಷೆ ಇದೆ. ಏಕಗವಾಕ್ಷಿ ಪದ್ಧತಿಯಲ್ಲಿ ಡಿಜಿಟಲೀಕರಣ ಉದ್ದೇಶವನ್ನು ಹೊಸ ನೀತಿ ಒಳಗೊಂಡಿದೆ.

Read More