Author: kannadanewsnow57

ಬೆಂಗಳೂರು : ಹೃದಯಾಘಾತದಿಂದ ಚಿಕ್ಕಮಗಳೂರಿನಲ್ಲಿ ಜೆಡಿಎಸ್ ಪಕ್ಷದ ನಾಯಕ ಹೆಚ್.ಟಿ ರಾಜೇಂದ್ರ (72) ಸಾವನ್ನಪ್ಪಿದ್ದಾರೆ. NR ಪುರ ತಾಲೂಕಿನ ಮುತ್ತಿನಕೊಪ್ಪ ಗ್ರಾಮದಲ್ಲಿ JDS ಪಕ್ಷದ ನಾಯಕ ಹೆಚ್.ಟಿ ರಾಜೇಂದ್ರ ಕೊನೆಯುಸಿರೆಳೆದಿದ್ದಾರೆ. ಹೃದಯಾಘಾತದಿಂದ ಮೃತಪಟ್ಟಿರುವ JDS ಮುಖಂಡ ರಾಜೇಂದ್ರ ಅವರು HD ದೇವೇಗೌಡರ ಕುಟುಂಬದ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು. ಜೆಡಿಎಸ್ ಪಕ್ಷದಿಂದ MLA ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ರು. ಶೃಂಗೇರಿ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ರು. ಮನೆಯಲ್ಲಿದ್ದ JDS ಮುಖಂಡ ರಾಜೇಂದ್ರ ಅವರಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದೆ. ನೋವಿನಿಂದ ರಾಜೇಂದ್ರ ಅವರು ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ ಎನ್ನಲಾಗ್ತಿದೆ. ಜೆಡಿಎಸ್ ಮುಖಂಡನ ನಿಧನಕ್ಕೆ ಮಾಜಿ ಪ್ರಧಾನಿ ದೇವೇಗೌಡರು ಹಾಗೂ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ. ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡರ ಆಪ್ತರು, ಜೆಡಿಎಸ್ ಪಕ್ಷದ ರಾಜ್ಯ ಉಪಾಧ್ಯಕ್ಷರು, ಶೃಂಗೇರಿ ವಿಧಾನಸಭೆ ಕ್ಷೇತ್ರದ ಹಿರಿಯ ನೇತಾರರು ಆಗಿದ್ದ ಹೆಚ್.ಟಿ. ರಾಜೇಂದ್ರ ಅವರ ನಿಧನದ ವಾರ್ತೆ ಕೇಳಿ ತೀವ್ರ ಆಘಾತವಾಗಿದೆ. ಅತ್ಯಂತ ನಿಷ್ಠಾವಂತ ಸೇನಾನಿಯಾಗಿ, ತಳಮಟ್ಟದಿಂದ ಸಂಘಟನೆಯನ್ನು…

Read More

ನವದೆಹಲಿ : ಮುಂದಿನ 25 ವರ್ಷಗಳಲ್ಲಿ ಭಾರತವು ವಿಶ್ವದ ಅತಿ ಹೆಚ್ಚು ಮುಸ್ಲಿಂ ಜನಸಂಖ್ಯೆ ಹೊಂದಿರುವ ದೇಶವಾಗುವ ನಿರೀಕ್ಷೆಯಿದೆ. ಪ್ಯೂ (ಪಿಇಡಬ್ಲ್ಯೂ) ಎಂಬ ಅಂತರರಾಷ್ಟ್ರೀಯ ಸಂಸ್ಥೆಯ ಆಘಾತಕಾರಿ ವರದಿಯ ಪ್ರಕಾರ, 2010 ಮತ್ತು 2020 ರ ನಡುವೆ ಮುಸ್ಲಿಂ ಜನಸಂಖ್ಯೆಯಲ್ಲಿ ಗಮನಾರ್ಹ ಜಾಗತಿಕ ಹೆಚ್ಚಳ ಕಂಡುಬಂದಿದೆ, ಇದು ಇತರ ಎಲ್ಲಾ ಧರ್ಮಗಳ ಒಟ್ಟಾರೆ ಬೆಳವಣಿಗೆಯ ದರವನ್ನು ಮೀರಿದೆ. ಈ ದಶಕದಲ್ಲಿ, ಮುಸ್ಲಿಮರ ಪ್ರಮಾಣವು ಶೇಕಡಾ 23.9 ರಿಂದ ಶೇಕಡಾ 25.6 ಕ್ಕೆ ಏರಿತು, ಇದು ಮುಖ್ಯವಾಗಿ ಹೆಚ್ಚಿನ ಜನನ ದರಗಳಿಂದಾಗಿ. 2050 ರ ವೇಳೆಗೆ, ಜಾಗತಿಕ ಮುಸ್ಲಿಂ ಜನಸಂಖ್ಯೆಯು 2.8 ಬಿಲಿಯನ್ ತಲುಪುತ್ತದೆ, ಭಾರತವು ಇಂಡೋನೇಷ್ಯಾವನ್ನು ಹಿಂದಿಕ್ಕಿ ಅಗ್ರಸ್ಥಾನ ಪಡೆಯುತ್ತದೆ ಎಂದು ವರದಿ ಹೇಳುತ್ತದೆ. ಅದೇ ಸಮಯದಲ್ಲಿ, ಭಾರತದಲ್ಲಿ, ಹಿಂದೂ ಜನಸಂಖ್ಯೆಯು ಸ್ವಲ್ಪ ಕಡಿಮೆಯಾಗಿದೆ (80% ರಿಂದ 79% ಕ್ಕೆ), ಆದರೆ ಮುಸ್ಲಿಂ ಜನಸಂಖ್ಯೆಯು 14.3% ರಿಂದ 15.2% ಕ್ಕೆ ಏರಿದೆ. ಈ 10 ವರ್ಷಗಳ ಅವಧಿಯಲ್ಲಿ ಭಾರತದ ಮುಸ್ಲಿಂ ಜನಸಂಖ್ಯೆಯಲ್ಲಿ…

Read More

ಹೊಸಪೇಟೆ: ಹೊಸಪೇಟೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ನಗರದ ಚಲುವಾದಿ ಕೇರಿಯಲ್ಲಿ ಕೋತಿ ದಾಳಿಯಿಂದ ಮೂರೂವರೆವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ನಡೆದಿದೆ. ಕೋತಿ ದಾಳಿಯಿಂದ ಮೂರುವರೆ ವರ್ಷದ ಬಾಲಕಿ ಅನನ್ಯಾ ಮೃತಪಟ್ಟಿದ್ದು, ಮುನಿಯಪ್ಪ ಎಂಬುವರ ಪುತ್ರಿ ಅನನ್ಯಾ ಜೂ.28ರಂದು ಮೊಸರು ತರಲೆಂದು ಅಂಗಡಿಗೆ ಹೋಗುತ್ತಿದ್ದಾಗ ಕೋತಿ ದಾಳಿ ಮಾಡಿದೆ. ಅಂದು ರಾತ್ರಿಯೇ ಬಾಲಕಿಯ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಹೆಚ್ಚಿನ ಚಿಕಿತ್ಸೆಗೆ ಜು.2ರಂದು ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲಿಸಿದಾಗ ಬಾಲಕಿ ಕೋಮಾಗೆ ಹೋಗಿದ್ದಳು. ಚಿಕಿತ್ಸೆ ಮುಂದುವರಿಸಿದ್ದರೂ ಫಲಕಾರಿ ಆಗದೆ ಜು.7ರಂದು ಮೃತಪಟ್ಟಿದ್ದಾಳೆ. ಕೋತಿ ದಾಳಿಗೆ ಬಾಲಕಿ ಮೃತಪಟ್ಟಿರುವ ಮಾಹಿತಿ ಇಲ್ಲ ಎಂದು ವಿಜಯನಗರ ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಚ್.ಅನುಪಮಾ ತಿಳಿಸಿದ್ದಾರೆ.

Read More

ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ತಮ್ಮ ದೀರ್ಘಕಾಲದ ಸಂಗಾತಿ ಪರುಪಳ್ಳಿ ಕಶ್ಯಪ್ ಅವರಿಂದ ಬೇರ್ಪಡುವ ನಿರ್ಧಾರವನ್ನು ಘೋಷಿಸಿದ್ದಾರೆ. ಸೈನಾ ಇನ್ಸ್ಟಾಗ್ರಾಮ್ ನಲ್ಲಿ ತಮ್ಮ ನಿರ್ಧಾರವನ್ನು ಸಂಕ್ಷಿಪ್ತ ಹೇಳಿಕೆಯ ಮೂಲಕ ಪ್ರಕಟಿಸಿದರು. ಸುಮಾರು 7 ವರ್ಷಗಳ ದಾಂಪತ್ಯದ ನಂತರ ಸೈನಾ ಮತ್ತು ಪರುಪಳ್ಳಿ ಬೇರ್ಪಡಲಿದ್ದಾರೆ. ಸೈನಾ ಮತ್ತು ಪರುಪಳ್ಳಿ ಹೈದರಾಬಾದ್ ನ ಪುಲ್ಲೇಲ ಗೋಪಿಚಂದ್ ಅಕಾಡೆಮಿಯಲ್ಲಿ ಭಾರತೀಯ ಬ್ಯಾಡ್ಮಿಂಟನ್ ಶ್ರೇಯಾಂಕಗಳ ಮೂಲಕ ಒಟ್ಟಿಗೆ ಬೆಳೆದರು. ಸೈನಾ ತಮ್ಮ ಒಲಿಂಪಿಕ್ ಕಂಚು ಮತ್ತು ವಿಶ್ವದ ನಂ. 1 ಶ್ರೇಯಾಂಕದೊಂದಿಗೆ ಜಾಗತಿಕ ಐಕಾನ್ ಆದರು, ಕಶ್ಯಪ್ ಕಾಮನ್ವೆಲ್ತ್ ಕ್ರೀಡಾಕೂಟದ ಚಿನ್ನ ಮತ್ತು ಅಂತರರಾಷ್ಟ್ರೀಯ ವೇದಿಕೆಯಲ್ಲಿ ಸ್ಥಿರ ಪ್ರದರ್ಶನ ನೀಡುವ ಮೂಲಕ ತಮ್ಮದೇ ಆದ ಪರಂಪರೆಯನ್ನು ರೂಪಿಸಿದ್ದರು. ಜೀವನವು ಕೆಲವೊಮ್ಮೆ ನಮ್ಮನ್ನು ವಿಭಿನ್ನ ದಿಕ್ಕುಗಳಲ್ಲಿ ಕರೆದೊಯ್ಯುತ್ತದೆ. ಸಾಕಷ್ಟು ಚಿಂತನೆ ಮತ್ತು ಪರಿಗಣನೆಯ ನಂತರ, ಕಶ್ಯಪ್ ಪರುಪಳ್ಳಿ ಮತ್ತು ನಾನು ಬೇರ್ಪಡಲು ನಿರ್ಧರಿಸಿದ್ದೇವೆ. ನಾವು ನಮಗಾಗಿ ಮತ್ತು ಪರಸ್ಪರ ಶಾಂತಿ, ಬೆಳವಣಿಗೆ ಮತ್ತು ಗುಣಪಡಿಸುವಿಕೆಯನ್ನು ಆರಿಸಿಕೊಳ್ಳುತ್ತಿದ್ದೇವೆ. ಈ…

Read More

ನವದೆಹಲಿ : ರೈಲ್ವೆ ನೇಮಕಾತಿ ಮಂಡಳಿ (RRB) 6238 ತಂತ್ರಜ್ಞ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ RRB ವೆಬ್ಸೈಟ್ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ನಮೂನೆಯನ್ನು ಸಲ್ಲಿಸಲು ಕೊನೆಯ ದಿನಾಂಕ 28-07-2025. ಆಗ್ನೇಯ ರೈಲ್ವೆ (SER) 1,215 ನಲ್ಲಿ ಅತಿ ಹೆಚ್ಚು ಮತ್ತು ಪೂರ್ವ ಮಧ್ಯ ರೈಲ್ವೆ (ECR) 31 ನಲ್ಲಿ ಕಡಿಮೆ ಹೊಂದಿದೆ. 18 ವಲಯಗಳು ಮತ್ತು ಬಹು ಉತ್ಪಾದನಾ ಘಟಕಗಳನ್ನು ಒಳಗೊಂಡಿರುವ ಭಾರತೀಯ ರೈಲ್ವೆ ಈ ತಾತ್ಕಾಲಿಕ ಹುದ್ದೆಗಳನ್ನು ಅನುಮೋದಿಸಿದೆ ಮತ್ತು ವಿವರವಾದ ಕೇಂದ್ರೀಕೃತ ಉದ್ಯೋಗ ಅಧಿಸೂಚನೆ (CEN) ಶೀಘ್ರದಲ್ಲೇ ಎಲ್ಲಾ ಪ್ರಾದೇಶಿಕ RRB ವೆಬ್ಸೈಟ್ಗಳಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ. ಮುಂಬರುವ ಅಧಿಸೂಚನೆಯಲ್ಲಿ ಅಂತಿಮ ಹುದ್ದೆಯ ವಿವರಗಳನ್ನು ಅಧಿಕೃತವಾಗಿ ದೃಢೀಕರಿಸಲಾಗುವುದರಿಂದ ಅಭ್ಯರ್ಥಿಗಳು ನವೀಕೃತವಾಗಿರಲು ಸೂಚಿಸಲಾಗಿದೆ. ಹುದ್ದೆಯ ಹೆಸರು: RRB ತಂತ್ರಜ್ಞ ಆನ್ಲೈನ್ ಫಾರ್ಮ್ 2025 ಒಟ್ಟು ಖಾಲಿ ಹುದ್ದೆಗಳು: 6238 ಸಂಕ್ಷಿಪ್ತ ಮಾಹಿತಿ: ರೈಲ್ವೆ ನೇಮಕಾತಿ ಮಂಡಳಿ (RRB)…

Read More

ನವದೆಹಲಿ: ದೇಶದಲ್ಲಿ ಶೀಘ್ರದಲ್ಲಿಯೇ 500 ರು. ಮುಖಬೆಲೆಯ ನೋಟುಗಳು ರದ್ದಾಗಲಿವೆ’ ಎಂಬ ಸಂದೇಶ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಕುರಿತು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದ್ದು, ‘ಯಾವುದೇ ಕಾರಣಕ್ಕೂ 500 ರು. ನೋಟು ರದ್ದತಿಯಾಗುವುದಿಲ್ಲ. ನೋಟು ಚಾಲ್ತಿ ಯಲ್ಲಿಯೇ ಇರಲಿದೆ’ ಎಂದು ಸ್ಪಷ್ಟಪಡಿಸಿದೆ.  ಈ ಬಗ್ಗೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಅಧೀನದ ಪಿಐಬಿ ಫ್ಯಾಕ್ಟ್ ಚೆಕ್ ಸತ್ಯಾಸತ್ಯತೆ ಪರೀಕ್ಷೆ ಅಥವಾ ಕೇಂದ್ರ ನಡೆಸಿದೆ.  ಸರ್ಕಾರವಾಗಲಿ ಅಂತಹ ಯಾವುದೇ ಆದೇಶ/ಸೂಚನೆಗಳನ್ನು ನೀಡಿಲ್ಲ. ಜನರು ಇಂತಹ ಸುಳ್ಳು ಸುದ್ದಿ ಕುರಿತು ಗಮನ ಕೊಡಬಾರದು ಎಂದು ಹೇಳಿದೆ. ಮಾರ್ಚ್ 2026 ರ ವೇಳೆಗೆ 500 ರೂ. ನೋಟುಗಳನ್ನು ಹಂತಹಂತವಾಗಿ ರದ್ದುಗೊಳಿಸಲಾಗುವುದು ಎಂದು ವೈರಲ್ ಆದ ವೀಡಿಯೊದ ನಂತರ ಸಾಮಾಜಿಕ ಮಾಧ್ಯಮಗಳಲ್ಲಿ 500 ರೂ. ನೋಟಿನ ಭವಿಷ್ಯದ ಬಗ್ಗೆ ಊಹಾಪೋಹಗಳು ಹರಡಿವೆ. ಆದಾಗ್ಯೂ, ಭಾರತೀಯ ರಿಸರ್ವ್ ಬ್ಯಾಂಕ್ (RBI) ಅಂತಹ ಯಾವುದೇ ನಿರ್ದೇಶನವನ್ನು ನೀಡಿಲ್ಲ ಮತ್ತು ಪತ್ರಿಕಾ ಮಾಹಿತಿ ಬ್ಯೂರೋ (PIB) ಈ ಹೇಳಿಕೆಯನ್ನು ಸುಳ್ಳು…

Read More

ಬೆಂಗಳೂರು : ಮಳೆ ಬರುವ ಸಂದರ್ಭದಲ್ಲಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಕೈಗೊಳ್ಳಬೇಕಾದ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಶಿಕ್ಷಣ ಇಲಾಖೆ ಮಹತ್ವದ  ಆದೇಶ ಹೊರಡಿಸಿದೆ. 2025-26ನೇ ಶೈಕ್ಷಣಿಕ ವರ್ಷದಲ್ಲಿ ರಾಜ್ಯಾದ್ಯಂತ ಈಗಾಗಲೇ ಶಾಲೆಗಳು ಪ್ರಾರಂಭವಾಗಿದ್ದು, ದಿನಾಂಕ 15.06.2024 ರ ಉಲ್ಲೇಖಿತ 1 ರ ಪತ್ರದಲ್ಲಿ, ಮಳೆಗಾಲದಲ್ಲಿ ವಿದ್ಯಾರ್ಥಿಗಳ ಸುರಕ್ಷತೆಗಾಗಿ ಪ್ರತಿ ಶಾಲೆಗಳಲ್ಲಿ ಪಾಲಿಸಬೇಕಾದ 7 ಅಂಶಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚಿಸಲಾಗಿರುತ್ತದೆ. ಪ್ರಸ್ತುತ ರಾಜ್ಯದ ಬಹುತೇಕ ಕಡೆಗಳಲ್ಲಿ ತೀವ್ರವಾಗಿ ಮಳೆಯುಂಟಾಗುತ್ತಿದ್ದು, ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ಸುರಕ್ಷತೆಯ ಹಿತದೃಷ್ಟಿಯಿಂದ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವ ಕುರಿತು ಉಲ್ಲೇಖ(1)ರ ಪತ್ರದಲ್ಲಿ ತಿಳಿಸಲಾಗಿರುವ ಮುನ್ನೆಚ್ಚರಿಕಾ ಕ್ರಮಗಳನ್ನು ತಪ್ಪದೇ ಪಾಲಿಸಲು ಸೂಚಿಸಿದೆ. ಮುಂದುವರೆದು, ರಾಜ್ಯದಲ್ಲಿ ನಡೆಯುತ್ತಿರುವ ಸರ್ಕಾರಿ ಶಾಲೆಗಳ ಕಟ್ಟಡಗಳಲ್ಲಿನ ಸಮಸ್ಯೆಗಳ ಬಗ್ಗೆ ಇತ್ತೀಚಿಗೆ ಪತ್ರಿಕೆಗಳು ಮತ್ತು ಸುದ್ದಿ ಮಾಧ್ಯಮಗಳಲ್ಲಿ ಸುದ್ದಿಗಳು ಪ್ರಕಟವಾಗುತ್ತಿದ್ದು, ಈ ವಿಷಯವಾಗಿ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವ ಬಗ್ಗೆ ಈಗಾಗಲೇ ಸಾಕಷ್ಟು ನಿರ್ದೇಶನಗಳನ್ನು ಸರ್ಕಾರದಿಂದ ನೀಡಲಾಗಿದೆ. ಪ್ರಸ್ತುತ ರಾಜ್ಯದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಶಾಲೆಗಳ…

Read More

ಬೆಂಗಳೂರು : ಬೆಂಗಳೂರು: ನಾಡಿನ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಗೆ ತಂದ ಶಕ್ತಿ ಯೋಜನೆಯು ಯಶಸ್ವಿಯಾಗಿ 2 ವರುಷ ಪೂರೈಸಿದ್ದು, ಈ ಹೊತ್ತಿನಲ್ಲಿ ಬರೋಬ್ಬರಿ 500 ಕೋಟಿ ಮಹಿಳೆಯರು ಶಕ್ತಿ ಯೋಜನೆಯ ಅಡಿಯಲ್ಲಿ ಉಚಿತವಾಗಿ ಪ್ರಯಾಣ ಬೆಳೆಸಿದ್ದಾರೆ. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಶಕ್ತಿ’ ಯೋಜನೆಯಡಿ ಉಚಿತ ಬಸ್ ಪ್ರಯಾಣದ ಮಹಿಳಾ ಫಲಾನುಭವಿಗಳ ಸಂಖ್ಯೆ 500 ಕೋಟಿ ದಾಟಿರುವ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 500ನೇ ಕೋಟಿಯ ವಿಶೇಷ ಟಿಕೆಟ್ ನ್ನು ವಿತರಣೆ ಮಾಡಲಿದ್ದಾರೆ. ಬಿಎಂಟಿಸಿ ವತಿಯಿಂದ ಕುಮಾರಪಾರ್ಕ್ ಈಸ್ಟ್ ಬಳಿಯ ವಿಂಡ್ಲರ್ ವೃತ್ತದ ಬಳಿ ಬೆಳಗ್ಗೆ 10 ಗಂಟೆಗೆ ಕಾರ್ಯಕ್ರಮ ಏರ್ಪಡಿಸಲಾಗಿದೆ. ಕಾಂಗ್ರೆಸ್ ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಉಚಿತ ಪ್ರಯಾಣ ಸ್ಕಿಮ್ಗೆ 2023ರ ಜೂ.11ರಂದು ಚಾಲನೆ ನೀಡಲಾಗಿತ್ತು, ಯೋಜನೆ ಆರಂಭವಾದ 2 ವರ್ಷದಲ್ಲೇ 500 ಕೋಟಿ ಟಿಕೆಟ್ ವಿತರಣೆಯಾಗಿದೆ. ಶಕ್ತಿ ಯೋಜನೆಯಡಿ ಉಚಿತ ಪ್ರಯಾಣದ ಮಹಿಳಾ ಫಲಾನುಭವಿಗಳ ಸಂಖ್ಯೆ 500 ಕೋಟಿ ದಾಟಿರುವ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ…

Read More

ಶಿವಮೊಗ್ಗ : ದೇಶದ ಎರಡನೇ ಅತಿ ಉದ್ದದ ತೂಗು ಸೇತುವೆ ಸಿಗಂದೂರು ಸೇತುವೆ ಇಂದು ಲೋಕಾರ್ಪಣೆ ಆಗಲಿದೆ. ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಸೇತುವೆ ಉದ್ಘಾಟಿಸಲಿದ್ದಾರೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಶರಾವತಿ ಹಿನ್ನೀರಿನಲ್ಲಿ ಅಂಬಾರಗೋಡ್ಲು-ಕಳಸವಳ್ಳಿ ನಡುವೆ ನಿರ್ಮಾಣ ಮಾಡಲಾಗಿರುವ ಸೇತುವೆ ಯನ್ನು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಇಂದು ಲೋಕಾರ್ಪಣೆ ಮಾಡಲಿದ್ದಾರೆ. ಸೇತುವೆಯು 2.44 ಕಿ.ಮೀ. ಉದ್ದವಿದ್ದು, ವಿಜಯಪುರದ ಕೊಲ್ಲಾರ ಬ್ರಿಜ್ (3 ಕಿ.ಮೀ.) ನಂತರ ರಾಜ್ಯದ 2ನೇ ಉದ್ದದ ಸೇತುವೆಯಾಗಿದೆ. ಕೇಬಲ್ ಬ್ರಿಜ್ 740 ಮೀ.ಉದ್ದವಿದ್ದು, ಇದು ರಾಜ್ಯದ ಅತಿ ಉದ್ದದ ಒಳನಾಡ ತೂಗು ಸೇತುವೆ. ದೇಶದಲ್ಲೇ 2ನೆಯದ್ದು ಆಗಿದೆ. ಸೇತುವೆ ನಿರ್ಮಾಣಕ್ಕೆ 473 ಕೋಟಿ ರೂ. ವೆಚ್ಚವಾಗಿದೆ. ಸಾಗರದಿಂದ ತುಮರಿ ಅಥವಾ ಸಿಗಂದೂರಿಗೆ ತೆರಳಲು ರಸ್ತೆ ಮಾರ್ಗವಾಗಿ 100 ಕಿ.ಮೀ. ಸುತ್ತಿ ಬಳಸಿ ಹೋಗಬೇಕಿತ್ತು. ಇಲ್ಲವೇ ಲಾಂಚ್ನಲ್ಲಿ ತೆರಳಬೇಕಿತ್ತು. ಹೊಸ ಸೇತುವೆಯಿಂದ ಅಂತರ ಅರ್ಧದಷ್ಟು ತಗ್ಗಲಿದೆ. ಶರಾವತಿ ಹಿನ್ನೀರ ಪ್ರದೇಶದ ಜನರ ಬವಣೆ…

Read More

ಬೆಂಗಳೂರು: ಸರ್ಕಾರಿ ಸಾರಿಗೆ ಬಸ್ಸುಗಳಲ್ಲಿ ಈಗಾಗಲೇ ಪ್ರಾಣಿಗಳನ್ನು ಸಾಗಿಸಲು ಅವಕಾಶ ನೀಡಲಾಗಿದೆ. ಈಗ ಪ್ರಾಣಿಗಳಲ್ಲದೇ ಫ್ರಿಡ್ಜ್, ವಾಷಿಂಗ್ ಮೆಷಿನ್ ಸೇರಿದಂತೆ ಇತರೆ ವಸ್ತುಗಳನ್ನು ಸಾಗಿಸಲು ಅವಕಾಶ ನೀಡಲಾಗಿದೆ. ಈ ಮೂಲಕ ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಕುರಿತಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮುಖ್ಯ ಸಂಚಾರ ವ್ಯವಸ್ಥಾಪಕರು ವ್ಯಕ್ತಿಯೊಬ್ಬರು ಕೇಳಿದಂತ ಮಾಹಿತಿ ಹಕ್ಕು ಅಧಿನಿಯಮ 2005ರ ಅರ್ಜಿಗೆ ಮಾಹಿತಿ ನೀಡಿದ್ದಾರೆ. ಅದರಲ್ಲಿ ವಾಷಿಂಗ್ ಮೆಷಿನ್, ಫ್ರಿಡ್ಜ್, ಟ್ರಕ್ ಟಯರ್, ಅನ್ಯೂಮಿನಿಯಂ ಪೈಪ್, ಪಾತ್ರೆ, ಕಬ್ಬಿಣದ ಪೈಪ್, ಬೆಕ್ಕು, ನಾಯಿ, ಮೊಲವನ್ನು ಸಾಗಿಸಬಹುದಾಗಿದೆ ಎಂಬುದಾಗಿ ತಿಳಿಸಿದ್ದಾರೆ. ಎಷ್ಟು ದರ ನಿಗದಿ? ಟ್ರಕ್ ಟೈರ್ ಮೂರು ಯೂನಿಟ್ ಗಳೆಂದು ಪರಿಗಣಿಸಲಾಗುತ್ತದೆ. 60 ಕೆಜಿ ವರೆಗಿನವುಗಳು ಕೊಂಡೊಯ್ಯಬಹುದು. ರೆಫ್ರಿಜರೇಟರ್, ಬೈಸಿಕಲ್, ವಾಶಿಂಗ್ ಮೆಷಿನ್, ವೀಣೆ, ಕಾರ್ ಟೈರ್ ಗಳನ್ನು 2 ಯೂನಿಟ್ ಎಂಬುದಾಗಿ ಪರಿಗಣಿಸಲಾಗುತ್ತದೆ. ಟೇಬಲ್ ಫ್ಯಾನ್, ಹಾರ್ಮೋನಿಯಂ, ಟಿವಿ, ಕಂಪ್ಯೂಟರ್ ಮಾನಿಟರ್, ಸಿಪಿಯು, ಬ್ಯಾಟರಿ, 25 ಲೀಟರ್ ಖಾಲಿ ಕಂಟೈನರ್ ಗಳನ್ನು…

Read More