Author: kannadanewsnow57

ಶ್ರೀನಗರ : ಜಮ್ಮುಕಾಶ್ಮೀರದ ಎಲ್ ಒಸಿಯಲ್ಲಿ ಪಾಕಿಸ್ತಾನ ಮತ್ತೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಗುಂಡಿನ ದಾಳಿ ಮುಂದುವರೆಸಿದೆ. ಭಾರತ-ಪಾಕ್ ನಡುವಿನ ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆಯಲ್ಲಿ ಭಾರತದ ಗಡಿಗಳ ಮೇಲೆ ಪಾಕ್ ಸೇನೆಯಿಂದ ಅಪ್ರಚೋದಿತ ಗುಂಡಿನ ದಾಳಿ ನಡೆದಿದೆ. ಪಾಕಿಸ್ತಾನ ಸೇನೆ ದಾಳಿಗೆ ಭಾರತೀಯ ಸೇನೆಯು ತಕ್ಕ ಪ್ರತ್ಯುತ್ತರ ನೀಡಿದೆ.

Read More

ಶ್ರೀನಗರ : ಜಮ್ಮು-ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿ ಬೆನ್ನಲ್ಲೇ ಮತ್ತೆ ಜಮ್ಮುಕಾಶ್ಮೀರದಲ್ಲಿ ನಾಗರಿಕರ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಜುಮ್ಮು-ಕಾಶ್ಮೀರದ ಕುಪ್ವಾರದಲ್ಲಿ ನಾಗರಿಕರ ಮೇಲೆ ಉಗ್ರರು ಫೈರಿಂಗ್ ಮಾಡಿ ಪರಾರಿಯಾಗಿದ್ದು, ಘಟನೆಯಲ್ಲಿ 43 ವರ್ಷದ ಓರ್ವ ನಾಗಕರಿಕ ಗಾಯಗೊಂಡಿದ್ದಾರೆ. ಉಗ್ರರಿಗಾಗಿ ಪೊಲೀಸರು, ಸೇನೆ ಕಾರ್ಯಾಚರಣೆ ನಡೆಸಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Read More

ನವದೆಹಲಿ : ಕಲ್ಕತ್ತಾ ಹೈಕೋರ್ಟ್ ಗಂಭೀರ ಲೈಂಗಿಕ ದೌರ್ಜನ್ಯ ಮತ್ತು ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದಲ್ಲಿ ವಿಚಾರಣಾ ನ್ಯಾಯಾಲಯದಿಂದ ತಪ್ಪಿತಸ್ಥನೆಂದು ಸಾಬೀತಾದ ವ್ಯಕ್ತಿಯ ಶಿಕ್ಷೆಯನ್ನು ಅಮಾನತುಗೊಳಿಸಿದೆ. ನ್ಯಾಯಮೂರ್ತಿಗಳಾದ ಅರಿಜಿತ್ ಬ್ಯಾನರ್ಜಿ ಮತ್ತು ಬಿಸ್ವರೂಪ್ ಚೌಧರಿ ಅವರ ಪೀಠವು, ಬಲಿಪಶುವಿನ ಸ್ತನಗಳನ್ನು ಮುಟ್ಟುವ ಪ್ರಯತ್ನವು ಅತ್ಯಾಚಾರಕ್ಕೆ ಯತ್ನಿಸಿದ ಅಪರಾಧವಲ್ಲ, ಬದಲಾಗಿ ತೀವ್ರ ಲೈಂಗಿಕ ದೌರ್ಜನ್ಯದ ಆರೋಪವನ್ನು ಮಾತ್ರ ಬೆಂಬಲಿಸುತ್ತದೆ ಎಂದು ತನ್ನ ಆದೇಶದಲ್ಲಿ ಪ್ರಾಥಮಿಕವಾಗಿ ತಿಳಿಸಿದೆ. “ಸಂತ್ರಸ್ತ ಹುಡುಗಿಯ ಸಾಕ್ಷ್ಯ ಮತ್ತು ವೈದ್ಯಕೀಯ ಪರೀಕ್ಷಾ ವರದಿಯು ಪ್ರಾಥಮಿಕವಾಗಿ ಅರ್ಜಿದಾರರು ಸಂತ್ರಸ್ತ ಹುಡುಗಿಯ ಮೇಲೆ ಯಾವುದೇ ಒಳನುಸುಳುವಿಕೆ ಅಥವಾ ಅತ್ಯಾಚಾರ ನಡೆಸಿದ್ದಾರೆ ಅಥವಾ ಅವರು ಒಳನುಸುಳಲು ಪ್ರಯತ್ನಿಸಿದ್ದಾರೆ ಎಂದು ಸೂಚಿಸುವುದಿಲ್ಲ. ಅರ್ಜಿದಾರರು ಮದ್ಯದ ಪ್ರಭಾವದಲ್ಲಿದ್ದಾರೆ ಮತ್ತು ಅವರ ಸ್ತನಗಳನ್ನು ಮುಟ್ಟಲು ಪ್ರಯತ್ನಿಸಿದ್ದಾರೆ ಎಂದು ಸಂತ್ರಸ್ತ ಹುಡುಗಿ ವಾದಿಸಿದ್ದಾರೆ. ಅಂತಹ ಪುರಾವೆಗಳು POCSO ಕಾಯ್ದೆ, 2012 ರ ಸೆಕ್ಷನ್ 10 ರ ಅಡಿಯಲ್ಲಿ ತೀವ್ರ ಲೈಂಗಿಕ ದೌರ್ಜನ್ಯದ ಆರೋಪವನ್ನು ಬೆಂಬಲಿಸಬಹುದು, ಆದರೆ ಪ್ರಾಥಮಿಕವಾಗಿ…

Read More

ಬೆಂಗಳೂರು: ದಿನಾಂಕ: 27.04.2025 ರಂದು ಬೆಳಗ್ಗೆ 05:00 ಗಂಟೆಯಿಂದ 10:00 ಗಂಟೆಯವರೆಗೆ ಟಿ.ಸಿ.ಎಸ್. ವರ್ಲ್ಡ್ 10ಕೆ ಮ್ಯಾರಥಾನನ್ನು ಆಯೋಜಿಸಲಾಗಿದ್ದು, ಸದರಿ ಮ್ಯಾರಥಾನ್‌ಗೆ ಸುಮಾರು 30000 ಜನರು ಭಾಗವಹಿಸಲಿದ್ದಾರೆ. ಈ ಮ್ಯಾರಥಾನ್ ಸಲುವಾಗಿ ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ಸೂಕ್ತ ಸಂಚಾರ ಬಂದೋಬಸ್ತ್ ಏರ್ಪಡಿಸಿದ್ದು, ವಿವರಗಳು ಈ ಕೆಳಕಂಡಂತಿವೆ. ವಾಹನ ನಿಲುಗಡೆ ನಿರ್ಬಂಧಿತ ಸ್ಥಳಗಳು 1. ವಾರ್ ಮೆಮೋರಿಯಲ್ ಜಂಕ್ಷನ್, 2. ಅಣ್ಣಸ್ವಾಮಿ ಮುದಲಿಯಾರ್ ರಸ್ತೆ, 3. ಸೆಂಟ್ ಜಾನ್ಸ್ ರಸ್ತೆ, 4. ಸೆಂಟ್ ಜಾನ್ಸ್ ಚರ್ಚ್ ರಸ್ತೆ, 5. ಅಸ್ಸಯೇ ರಸ್ತೆ, ವೀಲರ್ ರಸ್ತೆ, 6. ಅಜಂತಾ ರಸ್ತೆ, 7. ಕಾಮರಾಜರಸ್ತೆ 8. ಕಸ್ತೂರಿಬಾ ರಸ್ತೆ, (ಹಲ್ಸನ್ ವೃತ್ತದಿಂದ ಕ್ಲೀನ್ ವೃತ್ತದ ವರೆಗೆ) 9. ಎಂ.ಜಿ.ರಸ್ತೆ, (ಕ್ಲೀನ್ಸ್ ವೃತ್ತದಿಂದ ವೆಬ್ ಜಂಕ್ಷನ್ ವರೆಗೆ ಎರಡೂ ಬದಿ) 10. ಡಿಕನ್ಸನ್ ರಸ್ತೆ (ವೆಬ್ ಜಂಕ್ಷನ್ ನಿಂದ ಹಲಸೂರು ರಸ್ತೆ ವರೆಗೆ) 11. ಕಬ್ಬನ್‌ರಸ್ತೆ (ಮಣಿಪಾಲ್ ಸೆಂಟರ್ ನಿಂದ ಸಿ.ಟಿ.ಓ. ವೃತ್ತದ ವರೆಗೆ) 12. ಸೆಂಟ್ರಲ್…

Read More

ಚಾಮರಾಜನಗರ : ಈ ಸರಿಯಾದ ಹತ ಎನ್ನುವುದು ಇತ್ತೀಚಿನ ದಿನಗಳಲ್ಲಿ ಸಾಮಾನ್ಯವಾದ ಕಾಯಿಲೆ ಆಗಿಬಿಟ್ಟಿದೆ. ವಯಸ್ಸಿನ ಮಿತಿಯಿಲ್ಲದೆ ಎಲ್ಲರಲ್ಲೂ ಹೃದಯಘಾತ ಕಾಣಿಸಿಕೊಳ್ಳುತ್ತಿದೆ. ಇದೀಗ ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್ಸ್‌ಟೇಬಲ್​​ವೊಬ್ಬರು ಹೃದಯಘಾತದಿಂದ ಕೊನೆಯುಸಿರೆಳೆದ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ಜರುಗಿದೆ. ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಆಲಬಾವಿ ಗ್ರಾಮದ ಪರಶುರಾಮ್ (31) ಮೃತಪಟ್ಟ ಕಾನ್ಸ್‌ಟೇಬಲ್. ಹನೂರು ತಾಲೂಕಿನ ರಾಮಪುರ ಪೊಲೀಸ್ ಠಾಣೆಯಲ್ಲಿ ಪರಶುರಾಮ್ ಮೂರು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದರು. ಕಳೆದ ಮೂರು ತಿಂಗಳಿನಿಂದ ಎಸ್.ಬಿ ಕರ್ತವ್ಯ ಮಾಡುತ್ತಿದ್ದರು. ಬೆಳಗ್ಗೆ ಕರ್ತವ್ಯದಲ್ಲಿದ್ದಾಗಲೇ ಹೃದಯಘಾತ ಸಂಭವಿಸಿದೆ. ತಕ್ಷಣ ಸಹೋದ್ಯೋಗಿಗಳು ರಾಮಪುರ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ವೈದ್ಯರು ಜಿಲ್ಲಾಸ್ಪತ್ರೆಗೆ ಕರೆದ್ಯೂಯುವಂತೆ ಸಲಹೆ ನೀಡಿದ್ದಾರೆ. ಕಾರಿನಲ್ಲಿ ಚಿಕಿತ್ಸೆಗೆ ಕರೆ ತರುತ್ತಿದ್ದಾಗಲೇ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ

Read More

ಮಸ್ಕತ್ : ದಕ್ಷಿಣ ಇರಾನ್‌ನ ಹಾರ್ಮೋಜ್ಗನ್ ಪ್ರಾಂತ್ಯದ ಬಂದರ್ ಅಬ್ಬಾಸ್ ನಗರದ ಶಾಹಿದ್ ರಾಜೈ ಬಂದರಿನಲ್ಲಿ ಶನಿವಾರ ಸಂಭವಿಸಿದ ಭಾರಿ ಸ್ಫೋಟದಲ್ಲಿ ಕನಿಷ್ಠ 14 ಜನರು ಸಾವನ್ನಪ್ಪಿ, 750 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಸ್ಫೋಟ ಹೇಗೆ ಸಂಭವಿಸಿತು ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ. ಕ್ಷಿಪಣಿ ಪ್ರೊಪೆಲ್ಲಂಟ್‌ಗಳನ್ನು ತಯಾರಿಸಲು ಬಳಸುವ ರಾಸಾಯನಿಕಗಳ ಸಾಗಣೆಗೆ ಈ ಸ್ಫೋಟ ಸಂಬಂಧಿಸಿರಬಹುದು ಎಂದು ನಂಬಲಾಗಿದೆ. ಆದರೆ ಸ್ಫೋಟವು ದಾಳಿಯಿಂದ ಉಂಟಾಗಿದೆಯೇ ಎಂದು ಇರಾನ್‌ನಲ್ಲಿ ಯಾರೂ ನೇರವಾಗಿ ಹೇಳಿಲ್ಲ. ಈ ಸ್ಫೋಟದಿಂದಾಗಿ ಆಕಾಶಕ್ಕೆ ದೊಡ್ಡ ಹೊಗೆಯ ರಾಶಿ ಬಿದ್ದಿದ್ದು, ಹತ್ತಿರದ ಕಟ್ಟಡಗಳು ಮತ್ತು ಕಾರುಗಳಿಗೆ ವ್ಯಾಪಕ ಹಾನಿಯಾಗಿದೆ. ಟೆಹ್ರಾನ್‌ನ ವೇಗವಾಗಿ ಚಲಿಸುತ್ತಿರುವ ಪರಮಾಣು ಕಾರ್ಯಕ್ರಮದ ಕುರಿತು ಮೂರನೇ ಸುತ್ತಿನ ಮಾತುಕತೆಗಾಗಿ ಇರಾನ್ ಮತ್ತು ಅಮೆರಿಕದ ಅಧಿಕಾರಿಗಳು ಒಮಾನ್‌ನಲ್ಲಿ ಶನಿವಾರ ಭೇಟಿಯಾದಾಗ ಈ ಸ್ಫೋಟ ಸಂಭವಿಸಿದೆ. ಆದಾಗ್ಯೂ, ಮಾತುಕತೆಗಳನ್ನು ಮುನ್ನಡೆಸುತ್ತಿರುವ ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಅವರು ಬುಧವಾರ “ನಮ್ಮ ಭದ್ರತಾ ಸೇವೆಗಳು ಹಿಂದಿನ ಉದಾಹರಣೆಗಳನ್ನು ಪರಿಗಣಿಸಿ…

Read More

ನವದೆಹಲಿ : 2025 ರ ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ ನಂತರ, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಪ್ರಕರಣದ ತನಿಖೆಯನ್ನು ವಹಿಸಿಕೊಂಡಿದೆ. ಈ ದಾಳಿಯಲ್ಲಿ 25 ಭಾರತೀಯರು ಮತ್ತು ಒಬ್ಬ ನೇಪಾಳಿ ಪ್ರಜೆ ಸಾವನ್ನಪ್ಪಿದರು, ಮತ್ತು 17 ಜನರು ಗಾಯಗೊಂಡರು. ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾದ ಅಂಗಸಂಸ್ಥೆ ಎಂದು ನಂಬಲಾದ ‘ದಿ ರೆಸಿಸ್ಟೆನ್ಸ್ ಫ್ರಂಟ್’ (ಟಿಆರ್ಎಫ್) ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ. NIA ತನಿಖಾ ಪ್ರಕ್ರಿಯೆ ಗೃಹ ಸಚಿವಾಲಯದ ನಿರ್ದೇಶನದ ಮೇರೆಗೆ, NIA ಯ ವಿಶೇಷ ತಂಡವು ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿರುವ ದಾಳಿಯ ಸ್ಥಳಕ್ಕೆ ಭೇಟಿ ನೀಡಿತು. ತಂಡವು ಘಟನಾ ಸ್ಥಳದಿಂದ ವಿಧಿವಿಜ್ಞಾನ ಸಾಕ್ಷ್ಯಗಳನ್ನು ಸಂಗ್ರಹಿಸಿ, ಸ್ಥಳೀಯ ಪೊಲೀಸರ ಸಹಯೋಗದೊಂದಿಗೆ ತನಿಖೆಯ ಹಾದಿಯನ್ನು ನಿರ್ಧರಿಸಿತು. ಪ್ರಾಥಮಿಕ ತನಿಖೆಯಲ್ಲಿ ಇಬ್ಬರು ಸ್ಥಳೀಯ ಭಯೋತ್ಪಾದಕರಾದ ಆದಿಲ್ ಗುರಿ ಮತ್ತು ಆಸಿಫ್ ಶೇಖ್ ಅವರ ಹೆಸರುಗಳು ಬಹಿರಂಗಗೊಂಡಿದ್ದು, ಅವರು ದಾಳಿಯಲ್ಲಿ ಭಾಗಿಯಾಗಿರಬಹುದು. NIA ತಂಡವು ಬದುಕುಳಿದ…

Read More

ಹಾವೇರಿ : ಇತ್ತೀಚಿಗೆ ಈ ಸಂಬಂಧ ಎನ್ನುವುದಕ್ಕೆ ಅರ್ಥವೇ ಇಲ್ಲದಂತಾಗಿದೆ. ಏಕೆಂದರೆ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಅತ್ಯಾಚಾರ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇವೆ. ಹಿರಿದ ಹಾವೇರಿಯಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು ಮನೆ ಮುಂದೆ ಆಟ ಆಡುತ್ತಿದ್ದ 7 ವರ್ಷದ ಬಾಲಕಿಯ ಮೇಲೆ ವೃದ್ಧ ಒಬ್ಬ ಲೈಂಗಿಕ ದೌರ್ಜನ ಎಸಗಿರುವ ಘಟನೆ ಬೆಳಕಿಗೆ ಬಂದಿದೆ. ಹೌದು ಜಿಲ್ಲೆಯ ಶಿಗ್ಗಾವಿ ತಾಲೂಕು ಹುಲಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ಘಟನೆ ನಡೆದಿದೆ. ಬಾಲಕಿಗೆ ಮಾವಿನಹಣ್ಣು ಕೊಡುವುದಾಗಿ ಆಮಿಷವೊಡ್ಡಿರುವ ಆರೋಪಿ, ಆಕೆಯನ್ನು ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ದೂರು ನೀಡಲಾಗಿದೆ. ಹುಲಗೂರು ಪೊಲೀಸ್ ಠಾಣೆಯಲ್ಲಿ ಶನಿವಾರ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇತ್ತೀಚಿಗೆ ಹುಬ್ಬಳ್ಳಿಯಲ್ಲಿ ಇಡೀ ರಾಜ್ಯವೇ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿತ್ತು. ಚಾಕ್ಲೇಟ್ ಕೊಡಿಸುವ ನೆಪದಲ್ಲಿ ಬಿಹಾರ್ ಮೂಲದ ಪ್ರತಿಯೊಬ್ಬ ಹರಿಸಿ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ. ಬಳಿಕ…

Read More

ಬೆಂಗಳೂರು : ಬಿಪಿಎಲ್ ಸೇರಿ ರಾಜ್ಯದ ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಮೇ ತಿಂಗಳಿಂದ ಅನ್ನಭಾಗ್ಯ ಯೋಜನೆಯಡಿ ಅಕ್ಕಿಯ ಜತೆಗೆ ರಾಗಿ ಮತ್ತು ಜೋಳವನ್ನು ವಿತರಿಸಲು ನಿರ್ಧರಿಸಲಾಗಿದೆ. ಅನ್ನಭಾಗ್ಯ ಯೋಜನೆಯಡಿ ಪ್ರಸ್ತುತ ಪ್ರತಿ ವ್ಯಕ್ತಿಗೆ ರಾಜ್ಯದಿಂದ 5 ಕೆಜಿ, ಕೇಂದ್ರದಿಂದ 5 ಕೆಜಿ ಸೇರಿ ಒಟ್ಟು 10 ಕೆಜಿ ಅಕ್ಕಿ ವಿತರಿಸಲಾಗುತ್ತಿದೆ. ಈ ಪೈಕಿ ಪಡಿತರ ಚೀಟಿದಾರರಿಗೆ ಎರಡು ಅಥವಾ ಮೂರು ಕೆಜಿ ರಾಗಿ ಅಥವಾ ಜೋಳ ನೀಡಲು ಆಹಾರ ಇಲಾಖೆ ನಿರ್ಧರಿಸಿದೆ ಎನ್ನಲಾಗಿದ್ದು, ಫಲಾನುಭವಿಗಳಿಗೆ ನೀಡುತ್ತಿರುವ ಒಟ್ಟು ಪ್ರಮಾಣದಲ್ಲಿ ಪದಾರ್ಥಗಳನ್ನು ಬದಲಾವಣೆ ಮಾಡಲಾಗುತ್ತದೆ. ಕೆಲವು ಭಾಗದಲ್ಲಿ ರಾಗಿ ಮತ್ತೆ ಕೆಲವು ಕಡೆ ಜೋಳ ನೀಡಲಾಗುವುದು ಎಂದು ಹೇಳಲಾಗಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯಡಿ ಜನರಿಗೆ ಉಚಿತವಾಗಿ ತಲಾ 10 ಕೆಜಿ ಅಕ್ಕಿ ವಿತರಿಸುತ್ತಿದ್ದು, ಇದರೊಂದಿಗೆ ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 3 ಕೆಜಿ ರಾಗಿ ಹಾಗೂ 2 ಕೆಜಿ ಅಕ್ಕಿ,…

Read More

ಬೆಂಗಳೂರು : ಇಸ್ರೋ ಮಾಜಿ ಅಧ್ಯಕ್ಷ, ಎನ್​​ಇಪಿ ಕರಡು ಸಮಿತಿ ಅಧ್ಯಕ್ಷರಾಗಿದ್ದ ಪದ್ಮವಿಭೂಷಣ ಡಾ.ಕೆ.ಕಸ್ತೂರಿರಂಗನ್ ಅವರ ಅವರ ನಿಧನಕ್ಕೆ ರಾಜ್ಯ ಸರ್ಕಾರ ತೀವ್ರ ಸಂತಾಪ ವ್ಯಕ್ತಪಡಿಸಿದೆ. ಹಾಗಾಗಿ ಇಂದು ನಡೆಯಲಿರುವ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೇರವೇರಿಸಲು ಸರ್ಕಾರ ಆದೇಶ ಹೊರಡಿಸಿದೆ. ಕಸ್ತೂರಿರಂಗನ್ ಅವರ ಪಾರ್ಥಿವ ಶರೀರದ ದರ್ಶನಕ್ಕೆ ಭಾನುವಾರ ಬೆಳಗ್ಗೆ 10ರಿಂದ ಮಧ್ಯಾಹ್ನ 12 ಗಂಟೆವರೆಗೆ ಬೆಂಗಳೂರಿನ ರಾಮನ್ ಸಂಶೋಧನಾ ಸಂಸ್ಥೆಯಲ್ಲಿ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗುತ್ತಿದೆ. 1940ರ ಅಕ್ಟೋಬರ್ 24ರಂದು ಕೇರಳದ ಎರ್ನಾಕುಲಂನಲ್ಲಿ ಜನಿಸಿದ ಕಸ್ತೂರಿರಂಗನ್ ಅವರು ಮೂರು ದಶಕಗಳ ಕಾಲ ಭಾರತೀಯ ಬಾಹ್ಯಾಕಾಶ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಕೇವಲ ಬಾಹ್ಯಾಕಾಶ ಕ್ಷೇತ್ರದಲ್ಲಷ್ಟೇ ಅಲ್ಲದೆ, ಪರಿಸರ, ಶಿಕ್ಷಣ ಮತ್ತು ಯೋಜನಾ ಆಯೋಗದಲ್ಲಿಯೂ ಇವರ ಕೊಡುಗೆ ಸ್ಮರಣೀಯವಾದದ್ದು. ಕಸ್ತೂರಿರಂಗನ್ 2003ರವರೆಗೆ ೯ಕ್ಕೂ ಹೆಚ್ಚು ವರ್ಷಗಳ ಕಾಲ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ)ಯ ನೇತೃತ್ವ ವಹಿಸಿದ್ದರು. ಬಾಹ್ಯಾಕಾಶ ಆಯೋಗದ ಅಧ್ಯಕ್ಷರಾಗಿ ಮತ್ತು ಬಾಹ್ಯಾಕಾಶ ಇಲಾಖೆಯಲ್ಲಿ ಭಾರತ ಸರ್ಕಾರಕ್ಕೆ ಕಾರ್ಯದರ್ಶಿಯಾಗಿ ಭಾರತೀಯ…

Read More