Author: kannadanewsnow57

ಬೆಂಗಳೂರು : ಮಂಗನ ಕಾಯಿಲೆ ತಡೆಗೆ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ಪೀಡಿತ ಪ್ರದೇಶಗಳಲ್ಲಿ ಸಂಚಾರಿ ಮೊಬೈಲ್ ಕ್ಲಿನಿಕ್ ಆರಂಭಿಸಲಾಗುವುದು ಎಂದು ಅರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರು ಹೇಳಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಸಚಿವರು, ಮಲೆನಾಡು ಪ್ರದೇಶವನ್ನು ಬಹುವರ್ಷಗಳಿಂದ ಕಾಡುತ್ತಿರುವ ಮಂಗನ ಕಾಯಿಲೆ ತಡೆಗೆ ನಮ್ಮ ಸರ್ಕಾರವು ನಿರ್ಣಾಯಕ ಹೆಜ್ಜೆಯಿಟ್ಟಿದ್ದು, 2026ರ ವೇಳೆಗೆ ಕೆಎಫ್‌ಡಿ ಲಸಿಕೆ ಲಭ್ಯವಾಗಲಿದೆ. ಅಷ್ಟರೊಳಗೆ ಕಾಯಿಲೆಯನ್ನು ತಹಬದಿಗೆ ತರಲು ಒಂದೂವರೆ ತಿಂಗಳಲ್ಲಿ ಕೆಎಫ್‌ಡಿ ಪೀಡಿತ ಪ್ರದೇಶಗಳಲ್ಲಿ ಪ್ರತ್ಯೇಕ ಸಂಚಾರಿ ಮೊಬೈಲ್ ಕ್ಲಿನಿಕ್ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ. https://twitter.com/KarnatakaVarthe/status/1862426767572836825

Read More

2024-25ನೇ ಸಾಲಿಗೆ 5 ವಾರದ ಕೋಳಿ ಮರಿಗಳನ್ನು ಉತ್ಪಾದಿಸಿ ಗ್ರಾಮೀಣ ಭಾಗದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದ ರೈತ ಮಹಿಳೆಯರಿಗೆ ತಲಾ 20ರಂತೆ ಕೋಳಿ ಮರಿಗಳನ್ನು ವಿತರಿಸಿ ಆದಾಯ ಹೆಚ್ಚಿಸುವ ಕಾರ್ಯಕ್ರಮ ಅನುಷ್ಟಾನಗೊಳಿಸುತ್ತಿದ್ದು, ಈ ಸಂಬಂಧ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿ.15 ಕೊನೆಯ ದಿನ. ರೈತ ಮಹಿಳೆಯರು, ಸ್ವ-ಸಹಾಯ ಗುಂಪಿನ ಸದಸ್ಯರು, ಪ್ರಾಥಮಿಕ ಕೋಳಿ ಸಹಕಾರ ಸಂಘಗಳಲ್ಲಿರುವ ಮಹಿಳಾ ಸದಸ್ಯರು ಮತ್ತು ರೈತ ಉತ್ಪಾದಕ ಸಂಸ್ಥೆಯ ಅರ್ಹ ಫಲಾನುಭವಿಗಳು ಅರ್ಜಿಗಳನ್ನು ಅಗತ್ಯ ಸೂಕ್ತ ದಾಖಲೆಗಳೊಂದಿಗೆ ಆಯಾ ತಾಲ್ಲೂಕಿನ ಪಶು ವೈದ್ಯಾಧಿಕಾರಿ(ಆಡಳಿತ) ಅಥವಾ ಸಹಾಯಕ ನಿರ್ದೇಶಕರಿಗೆ ಸಲ್ಲಿಸಲು ಸೂಚಿಸಿದೆ. ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ಪಶುವೈದ್ಯಾಧಿಕಾರಿ 9482943111, ಚಳ್ಳಕೆರೆ 9448816499, ಹೊಳಲ್ಕೆರೆ 9972965479, ಹೊದುರ್ಗ 9945298407, ಹಿರಿಯೂರು 9483451044, ಮೊಳಕಾಲ್ಮೂರು 9900964820 ಗೆ ಸಂಪರ್ಕಿಸಬಹುದು ಎಂದು ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮತ್ತೊಮ್ಮೆ ಸರ್ಜರಿ ಮಾಡಿದ್ದು, ಇಬ್ಬರು ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸ್ಥಳ ನಿರೀಕ್ಷಣೆಯಲ್ಲಿರುವ ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ಸ್ಥಳನಿಯುಕ್ತಿಗೊಳಿಸಿ ಆದೇಶಿಸಿದೆ ವರ್ಗಾವಣೆಗೊಂಡ ಅಧಿಕಾರಿಗಳು ಸುರೇಕಾ : ಕೆಎಎಸ್ (ಹಿ.ಶ್ರೇ) ಅಧಿಕಾರಿ- ಕುಲಸಚಿವರು (ಆಡಳಿತ) ಬೀದರ್ ವಿಶ್ವವಿದ್ಯಾಲಯ ಬೀದರ್-ಹುದ್ದೆಗೆ ರಜನಿಕಾಂತ : ಕೆಎಎಸ್ (ಕಿ.ಶ್ರೇ) ಅಧಿಕಾರಿ- ಆಡಳಿತ ತಾಂತ್ರಿಕ ಶಿಕ್ಷಣ ಇಲಾಖೆ ಬೆಂಗಳೂರು-ಹುದ್ದೆಗೆ

Read More

ಬೆಂಗಳೂರು: 384 ಕೆಎಎಸ್ ಅಧಿಕಾರಿಗಳ ಹುದ್ದೆ ನೇಮಕಾತಿಗಾಗಿ ಪೂರ್ವಭಾವಿ ಮರು ಪರೀಕ್ಷೆಗೆ ಡೇಟ್ ಫೀಕ್ಸ್ ಮಾಡಲಾಗಿದೆ. ಡಿ.29, 2024ರಂದು ಪರೀಕ್ಷೆ ನಡೆಸಲು ನಿಗದಿ ಪಡಿಸಲಾಗಿದೆ. ಆಯೋಗವು 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಗೆ ಸಂಖ್ಯೆ : ಪಿಎಸ್ ಸಿ 509 ಇ(1)/2023-24, ದಿನಾಂಕ 26-02-2024 ರಂದು ನಡೆಸಲು ಅಧಿಸೂಚನೆ ಹೊರಡಿಸಿದ್ದು, ಪೂರ್ವಭಾವಿ ಮರುಪರೀಕ್ಷೆಯನ್ನು ದಿನಾಂಕ:29-12-2024ರಂದು ನಡೆಸಲು ನಿಗದಿಪಡಿಸಿರುತ್ತದೆ. ಸದರಿ ಪರೀಕ್ಷೆಗೆ ಸಂಬಂಧಿಸಿದಂತೆ ಕೆಲವು ಅಭ್ಯರ್ಥಿಗಳು ಆಯೋಗದ ವೆಬ್ ಸೈಟ್ನ Applicant Login ನಿಂದ ದಿನಾಂಕ:26-11-2024ರಂದು ತಂತ್ರಾಂಶದಲಿನ ದೋಷದಿಂದಾಗಿ ಪ್ರವೇಶ ಪತ್ರವನ್ನು Download ಮಾಡಿಕೊಂಡಿರುತ್ತಾರೆಂದು ತಿಳಿದುಬಂದಿರುತ್ತದೆ, ಆಯೋಗವು ದಿನಾಂಕ:29-12-2024ರ ಪೂರ್ವಭಾವಿ ಮರುಪರೀಕ್ಷೆಯ ಸಂಬಂಧ ಯಾವುದೇ ಪ್ರವೇಶ ಪತ್ರವನ್ನು ಆಯೋಗದ ವೆಬ್‌ಸೈಟ್‌ನಲ್ಲಿ.. ಅಧಿಕೃತವಾಗಿ ಬಿಡುಗಡೆ ಮಾಡಿರುವುದಿಲ್ಲವಾದ ಕಾರಣ ತಾಂತ್ರಿಕ ದೋಷದಿಂದಾಗಿ ಪ್ರಸ್ತುತ Download ಮಾಡಿಕೊಂಡಿರುವ ಪ್ರದೇಶ ಪತ್ರಗಳನ್ನು ಅಸಿಂಧುಗೊಳಿಸಿದೆ. ಮುಂದುವರೆದು, ಎಲಾ., ಅಭ್ಯರ್ಥಿಗಳಿಗೆ ಪೂರ್ವಭಾವಿ ಮರುಪರೀಕ್ಷೆಯ ಪ್ರವೇಶಪತ್ರವನ್ನು Download ಮಾಡಿಕೊಳ್ಳುವ ಕುರಿತು ತಿಳಿಸಲಾಗಿದೆ.

Read More

ಬೆಂಗಳೂರು : ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ತುಟ್ಟಿ ಭತ್ಯೆಯ ದರಗಳನ್ನು 1ನೇ ಜುಲೈ 2024 ರಿಂದ ಜಾರಿಗೆ ಬರುವಂತೆ ಪ್ರಸ್ತುತ ಮೂಲ ವೇತನದ 8.50% ರಿಂದ 10.75% ಕ್ಕೆ ಪರಿಷ್ಕರಿಸಿ ಹೆಚ್ಚಳ ಮಾಡಿ ಅಧಿಕೃತ ಆದೇಶ ಹೊರಡಿಸಿದೆ. ಕೇಂದ್ರ ಸರ್ಕಾರದ ತುಟ್ಟಿ ಭತ್ಯೆ ದಿನಾಂಕ: 01.07.2024 ರಿಂದ ಶೇ. 3% (ಶೇ. 50% ರಿಂದ 53%) ಹೆಚ್ಚಳ ಮಾಡಲಾಗಿದು. ಆರನೇ ವೇತನ ಆಯೋಗದ ವರದಿಯಂತೆ 2024 ರ ವೇತನ ಶ್ರೇಣಗಳ ಮೇಲೆ ಕರ್ನಾಟಕ ರಾಜ್ಯ ಸರ್ಕಾರ ದಿನಾಂಕ 01.07.2024 ಮಾಹೆಗೆ ಮಾತ್ರ 2.25% (. 42.5% 0 45.25%) 2018 ರ ವೇತನ ಶ್ರೇಣಗಳ ಮೇಲೆ ಹೆಚ್ಚಾಗಿರುವ ತುಟ್ಟಿ ಭತ್ಯೆ ಮೊತ್ತ ಈ ಕೇಳಗೆ ತೋರಿಸಲಾಗಿದೆ. ಈ ಹೆಚ್ಚಳವು ಕೇವಲ ಜುಲೈ-2024 ರ ಮಾಹೆಗೆ ಮಾತ್ರ ಮತ್ತು ಹಿಂಬಾಕಿಗೆ ಅನ್ವಯವಾಗುತ್ತದೆ.

Read More

ಬೆಂಗಳೂರು : ನೋಂದಾಯಿತ ಕಾರ್ಮಿಕರ ಪತಿ ಅಥವಾ ಪತ್ನಿಗೆ ಮಂಡಳಿಯು ಮಾಸಿಕ ಪಿಂಚಣಿ ಸೌಲಭ್ಯವನ್ನು ನೀಡುತ್ತದೆ. ಪಿಂಚಣಿದಾರರು ಮಂಡಳಿಯಿಂದ ಪಿಂಚಣಿ ಪಡೆಯುತ್ತಿದ್ದ ಅವಧಿಯಲ್ಲಿ ಮರಣ ಹೊಂದಿದ್ದಲ್ಲಿ ಮಾತ್ರ ಅವರ ಪತಿ/ ಪತ್ನಿ ಈ ಸೌಲಭ್ಯವನ್ನು ಪಡೆಯಲು ಅರ್ಹರಾಗಿರುತ್ತಾರೆ. ಅರ್ಜಿಯೊಂದಿಗೆ ಸಲ್ಲಿಸಬೇಕಾದ ಅಗತ್ಯ ದಾಖಲೆಗಳು ಮಂಡಳಿಯಿಂದ ನೀಡಿರುವ ಮೃತ ಫಲಾನುಭವಿಯ ಗುರುತಿನ ಚೀಟಿಯ ನಕಲು ಪ್ರತಿ ಪಿಂಚಣಿ ಮಂಜೂರಾತಿ ಆದೇಶ ರೇಷನ್ ಕಾರ್ಡ್ ಪ್ರತಿ ನೋಂದಣಿದಾರರ ಆಧಾರ್ ಕಾರ್ಡ್ ಪ್ರತಿ ಅವಲಂಬಿತರ ಬ್ಯಾಂಕ್ ಖಾತೆ ವಿವರ ಮರಣ ಪ್ರಮಾಣ ಪತ್ರ ಮೃತರ ಪತಿ ಅಥವಾ ಪತ್ನಿಯ ಆಧಾರ್ ಕಾರ್ಡ್ ಪ್ರತಿ ಅವಲಂಬಿತರ ವಾಸಸ್ಥಳ ಪ್ರಮಾಣ ಪತ್ರ ಅರ್ಜಿದಾರರ ಕೋರಿಕೆ ಪತ್ರ

Read More

ಮುಂಬೈ : ಮಹಾರಾಷ್ಟ್ರ ಕಾಂಗ್ರೆಸ್ ಎಂಎಲ್ ಸಿ ಭಾಯಿ ಜಗತಾಪ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಚುನಾವಣಾ ಆಯೋಗವನ್ನು ‘ನಾಯಿ ಇದ್ದಂತೆ’ ಎಂದು. ಚುನಾವಣಾ ಆಯೋಗ ಮತ್ತು ಎಲ್ಲಾ ಸಂಸ್ಥೆಗಳು ನರೇಂದ್ರ ಮೋದಿಯವರ ಬಂಗಲೆಯ ಹೊರಗೆ ನಾಯಿಗಳಂತೆ ಕುಳಿತಿವೆ ಎಂದು ಹೇಳಿದ್ದಾರೆ. ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಫಲಿತಾಂಶದ ಕುರಿತು ಪ್ರತಿಕ್ರಿಯಿಸಿದ ಅವರು, ನಾನು 45-47 ವರ್ಷ ರಾಜಕೀಯದಲ್ಲಿ ಕಳೆದಿದ್ದೇನೆ. ಮಹಾರಾಷ್ಟ್ರದಲ್ಲಿ ಅಂತಹ ಫಲಿತಾಂಶಗಳು… ಅವರು (ಮಹಾಯುತಿ) ಅಂತಹ ಯಾವುದೇ ಕೆಲಸವನ್ನು ಮಾಡಿಲ್ಲ, ಅಥವಾ ಕೇಂದ್ರವು ಯಾವುದೇ ಕೆಲಸವನ್ನು ಮಾಡಿಲ್ಲ. ನಾಲ್ಕಾರು ತಿಂಗಳ ಹಿಂದೆ ಲೋಕಸಭೆ ದಿನಾಂಕ ಘೋಷಣೆಯಾಗಿದೆ. ಇದು ಇವಿಎಂಗಳ ಆಟ ಎಂದು ನಾನು ಮೊದಲೇ ಹೇಳಿದ್ದೇನೆ, ಅದರ ಬಗ್ಗೆ ಏನಾದರೂ ಪ್ರಶ್ನೆ ಉದ್ಭವಿಸಿದರೆ ಅದನ್ನು ಆಯೋಗ ಮತ್ತು ಸರ್ಕಾರಕ್ಕೆ ನಾಳೆ ಚರ್ಚಿಸಬೇಕು ಎಂದು ಹೇಳಿದ್ದಾರೆ. https://twitter.com/i/status/1862465527081574604 ನಮ್ಮ ಪ್ರಜಾಪ್ರಭುತ್ವವನ್ನು ಬಲಪಡಿಸುವುದು ಎಲ್ಲಾ ಸಂಸ್ಥೆಗಳ ಕೆಲಸವಾಗಿದೆ, ದುರದೃಷ್ಟವಶಾತ್ ಅದನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ. ಮಹಾರಾಷ್ಟ್ರದಲ್ಲಿ ಮಾತ್ರವಲ್ಲ ಇಡೀ ದೇಶದಲ್ಲಿ ‘ಘಟನೆಗಳು’ ನಡೆಯುತ್ತಿವೆ ಎಂದು ಆರೋಪಿಸಿದ್ದಾರೆ.

Read More

ನವದೆಹಲಿ : ಇಂಟರ್‌ನೆಟ್ ಮತ್ತು ಸ್ಮಾರ್ಟ್‌ಫೋನ್‌ಗಳ ಬಳಕೆ ಹೆಚ್ಚಾದಂತೆ ಹಲವು ರೀತಿಯ ಅಪಾಯಗಳೂ ಹೆಚ್ಚಿವೆ. ಸ್ಮಾರ್ಟ್‌ಫೋನ್‌ಗಳು ನಮ್ಮ ಅನೇಕ ಕಷ್ಟಕರವಾದ ಕಾರ್ಯಗಳನ್ನು ಸುಲಭಗೊಳಿಸಿರುವುದು ಮಾತ್ರವಲ್ಲದೆ ಇದು ಸ್ಕ್ಯಾಮರ್‌ಗಳು ಮತ್ತು ಸೈಬರ್ ಕ್ರಿಮಿನಲ್‌ಗಳಿಗೆ ಜನರನ್ನು ಮೋಸ ಮಾಡಲು ಉತ್ತಮ ಮಾರ್ಗವನ್ನು ನೀಡಿದೆ. ವಂಚನೆಗಳು ಮತ್ತು ಆನ್‌ಲೈನ್ ವಂಚನೆಯಿಂದ ಜನರನ್ನು ರಕ್ಷಿಸಲು ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ಇತ್ತೀಚಿನ ದಿನಗಳಲ್ಲಿ ಹಲವು ಕ್ರಮಗಳನ್ನು ಕೈಗೊಂಡಿದೆ. ಇತ್ತೀಚೆಗಷ್ಟೇ ಆನ್‌ಲೈನ್ ವಂಚನೆ ತಡೆಯಲು ಟ್ರೇಸಬಿಲಿಟಿ ಅಳವಡಿಸುವಂತೆ ಟೆಲಿಕಾಂ ಕಂಪನಿಗಳಿಗೆ TRAI ಸೂಚನೆ ನೀಡಿತ್ತು. ಇದೊಂದು ದೊಡ್ಡ ನಿರ್ಧಾರವಾಗಿತ್ತು. ವಾಣಿಜ್ಯ ಸಂದೇಶಗಳು ಮತ್ತು OTP ಗೆ ಸಂಬಂಧಿಸಿದ ಪತ್ತೆಹಚ್ಚುವಿಕೆ ನಿಯಮಗಳನ್ನು ಅಳವಡಿಸಲು TRAI ಆಗಸ್ಟ್‌ನಲ್ಲಿ ಸೂಚನೆಗಳನ್ನು ನೀಡಿದೆ. TRAI ತನ್ನ ಅನುಷ್ಠಾನದ ದಿನಾಂಕವನ್ನು ಹಲವಾರು ಬಾರಿ ಬದಲಾಯಿಸಿದೆ. TRAI ಗಡುವನ್ನು ವಿಸ್ತರಿಸಿದೆ ಈ ಹಿಂದೆ ಟೆಲಿಕಾಂ ಕಂಪನಿಗಳು TRAI OTP ಸಂದೇಶವನ್ನು ಪತ್ತೆಹಚ್ಚಲು ಅಕ್ಟೋಬರ್ 31 ರವರೆಗೆ ಸಮಯವನ್ನು ಹೊಂದಿದ್ದವು. Jio, Airtel, Vi ಮತ್ತು BSNL…

Read More

ನವದೆಹಲಿ : ಡಿಸೆಂಬರ್ 1, 2024 ರಿಂದ ಭಾರತದಲ್ಲಿ ಕೆಲವು ಪ್ರಮುಖ ನಿಯಮಗಳು ಜಾರಿಗೆ ಬರಲಿವೆ, ಇದು ಟೆಲಿಕಾಂ ವಲಯ ಮತ್ತು ಕ್ರೆಡಿಟ್ ಕಾರ್ಡ್ ಬಳಕೆದಾರರ ಮೇಲೆ ಪರಿಣಾಮ ಬೀರುತ್ತದೆ. ಈ ಬದಲಾವಣೆಗಳ ಉದ್ದೇಶವು ಗ್ರಾಹಕರಿಗೆ ಉತ್ತಮ ಸೇವೆಗಳನ್ನು ಒದಗಿಸುವುದು ಮತ್ತು ಅವರ ಸುರಕ್ಷತೆಯನ್ನು ಹೆಚ್ಚಿಸುವುದು. ಬನ್ನಿ, ಈ ಬದಲಾವಣೆಗಳ ಬಗ್ಗೆ ವಿವರವಾಗಿ ತಿಳಿದುಕೊಳ್ಳೋಣ. LPG ಸಿಲಿಂಡರ್ ಬೆಲೆ ಪ್ರತಿ ತಿಂಗಳು, ಮೊದಲ ದಿನ, ತೈಲ ಮಾರುಕಟ್ಟೆ ಕಂಪನಿಗಳು ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು ನಿಗದಿಪಡಿಸುತ್ತವೆ. ಡಿಸೆಂಬರ್ 1 ರಂದು LPG ಸಿಲಿಂಡರ್ ಬೆಲೆಗಳಲ್ಲಿ ಹೆಚ್ಚಳ ಅಥವಾ ಇಳಿಕೆ ಕಂಡುಬರಬಹುದು. ಟೆಲಿಕಾಂ ಕ್ಷೇತ್ರದಲ್ಲಿ ಬದಲಾವಣೆ ಡಿಸೆಂಬರ್ 1 ರಿಂದ ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರದ (TRAI) ಹೊಸ ನಿಯಮಗಳ ಪ್ರಕಾರ, ಎಲ್ಲಾ ವಾಣಿಜ್ಯ ಸಂದೇಶಗಳನ್ನು ಪತ್ತೆಹಚ್ಚುವುದು ಕಡ್ಡಾಯವಾಗಿದೆ. ಸ್ಪ್ಯಾಮ್ ಮತ್ತು ಮೋಸದ ಸಂದೇಶಗಳನ್ನು ಕಡಿಮೆ ಮಾಡುವುದು ಇದರ ಮುಖ್ಯ ಉದ್ದೇಶವಾಗಿದೆ, ವಿಶೇಷವಾಗಿ OTP ಅನ್ನು ದುರುಪಯೋಗಪಡಿಸಿಕೊಳ್ಳುವುದು. ಪತ್ತೆಹಚ್ಚುವಿಕೆಯ ಈ ಅವಶ್ಯಕತೆಯು ಟೆಲಿಮಾರ್ಕೆಟರ್‌ಗಳು…

Read More

ಬೆಂಗಳೂರು : ಪಡಿತರ ಚೀಟಿ ಹೊಂದಿರುವವರಾಗಿದ್ದರೆ, ಡಿಸೆಂಬರ್ 1 ರ ಮೊದಲು ನಿಮ್ಮ ಇ-ಕೆವೈಸಿ ಪೂರ್ಣಗೊಳಿಸುವುದು ಬಹಳ ಮುಖ್ಯ. ಇದನ್ನು ಮಾಡದಿದ್ದರೆ ನಿಮ್ಮ ಪಡಿತರ ಚೀಟಿ ರದ್ದಾಗಬಹುದು. ಸರ್ಕಾರವು ಈಗಾಗಲೇ ಎಲ್ಲಾ ಪಡಿತರ ಚೀಟಿದಾರರಿಗೆ ಇ-ಕೆವೈಸಿ ಮಾಡುವಂತೆ ಸೂಚನೆಗಳನ್ನು ನೀಡಿದ್ದು, ಸೆಪ್ಟೆಂಬರ್ 1 ಕೊನೆಯ ದಿನಾಂಕವಾಗಿತ್ತು. ಆದರೆ, ಇ-ಕೆವೈಸಿ ಮಾಡದವರಿಗೆ ಸರ್ಕಾರ ಒಂದು ತಿಂಗಳು ವಿಸ್ತರಿಸಿತ್ತು. ಈಗ ಈ ದಿನಾಂಕವನ್ನು ನವೆಂಬರ್ 30 ರವರೆಗೆ ವಿಸ್ತರಿಸಲಾಗಿದೆ. ಈ ದಿನಾಂಕದೊಳಗೆ ಇ-ಕೆವೈಸಿ ಪೂರ್ಣಗೊಳಿಸಲು ನಿಮಗೆ ಸಾಧ್ಯವಾಗದಿದ್ದರೆ, ನಿಮ್ಮ ಪಡಿತರ ಚೀಟಿಯನ್ನು ರದ್ದುಗೊಳಿಸಲಾಗುತ್ತದೆ. ಪಡಿತರ ಚೀಟಿದಾರರು ತಮ್ಮ ಗುರುತು ನೋಂದಣಿ ಅಥವಾ ಮರುನೋಂದಣಿ ಮಾಡಿಸದೇ ಇರುವ ಎಲ್ಲಾ ಸದಸ್ಯರು ನವೆಂಬರ್ 30 ರೊಳಗೆ ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ತಮ್ಮ ಬೆರಳಚ್ಚು ನೀಡಿ ಭಯೋಸಂಗ್ರಹಣೆ (ಇ-ಕೆವೈಸಿ) ಸಂಗ್ರಹಣೆ ಕಾರ್ಯ ಮಾಡಿಸಿಕೊಳ್ಳಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ತಿಳಿಸಿದೆ. ಇದಕ್ಕೆ ಯಾವುದೇ ಹಣ ನೀಡುವಂತಿಲ್ಲ. ಆಧಾರ್ ದೃಢೀಕರಣ(ಇ-ಕೆವೈಸಿ)…

Read More