Author: kannadanewsnow57

ನವದೆಹಲಿ : ಹಾಲು ಉತ್ಪಾದನೆಯಲ್ಲಿ ಭಾರತ ಇಡೀ ವಿಶ್ವದಲ್ಲೇ ಮುಂಚೂಣಿಯಲ್ಲಿದೆ. ಪ್ರಸ್ತುತ ನಮ್ಮ ದೇಶದಲ್ಲಿ 239 ಮಿಲಿಯನ್ ಮೆಟ್ರಿಕ್ ಟನ್ ಹಾಲು ಉತ್ಪಾದಿಸಲಾಗುತ್ತಿದೆ. ಇದನ್ನು ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ. ಭಾರತೀಯ ಪಶುಸಂಗೋಪನಾ ಸಚಿವಾಲಯವು ಮುಂದಿನ 5 ವರ್ಷಗಳಲ್ಲಿ ಹಾಲು ಉತ್ಪಾದನೆಯನ್ನು 300 ಮಿಲಿಯನ್ ಮೆಟ್ರಿಕ್ ಟನ್‌ಗಳಿಗೆ ಹೆಚ್ಚಿಸುವ ಗುರಿಯನ್ನು ಹೊಂದಿದೆ. ಇದು ಭಾರತೀಯ ಆರ್ಥಿಕತೆಗೆ ಮಾತ್ರವಲ್ಲದೆ ಪಶುಸಂಗೋಪನಾ ರೈತರಿಗೂ ಹೆಚ್ಚಿನ ಪ್ರಯೋಜನವನ್ನು ನೀಡುತ್ತದೆ. ಮಂಗಳವಾರ, ಭಾರತದ ಪಶುಸಂಗೋಪನಾ ಸಚಿವಾಲಯದ ಕೇಂದ್ರ ಸಚಿವ ರಾಜೀವ್ ರಂಜನ್ ಸಿಂಗ್ ಅವರು ಲೋಕಸಭೆಯಲ್ಲಿ ಭಾರತೀಯ ಹಾಲು ಉತ್ಪಾದನೆಗೆ ಸಂಬಂಧಿಸಿದ ಹಲವು ವಿಷಯಗಳನ್ನು ಹೇಳಿದರು. ಭಾರತೀಯ ಪಶುಸಂಗೋಪನಾ ಸಚಿವಾಲಯ ಏನು ಹೇಳಿದೆ? ನಿನ್ನೆ ಅಂದರೆ ಮಂಗಳವಾರ ನಡೆದ ಲೋಕಸಭಾ ಸಭೆಯಲ್ಲಿ, ಭಾರತದ ಪಶುಸಂಗೋಪನಾ ಸಚಿವಾಲಯದ ಕೇಂದ್ರ ಸಚಿವ ರಾಜೀವ್ ರಂಜನ್ ಸಿಂಗ್, ಹಾಲು ಉತ್ಪಾದನೆಗೆ ಸಂಬಂಧಿಸಿದಂತೆ ಹಲವು ವಿಷಯಗಳನ್ನು ಹೇಳಿದರು. ಮೋದಿ ಸರ್ಕಾರ ರಾಷ್ಟ್ರೀಯ ಗೋಕುಲ್ ಮಿಷನ್ ಅನ್ನು ಪ್ರಾರಂಭಿಸಿದಾಗಿನಿಂದ ರಾಜೀವ್ ಹೇಳಿದರು. ಅಂದಿನಿಂದ, ಭಾರತೀಯ ಹಾಲು…

Read More

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್ ಆಗಿದ್ದು, ಪತ್ನಿಯನ್ನು ಕೊಂದು ಬಳಿಕ ಪತಿಯೇ ಪೊಲೀಸ್ ಠಾಣೆಗೆ ಬಂದು ಶರಣಾಗಿರುವ ಘಟನೆ ನಡೆದಿದೆ. ಬೆಂಗಳೂರಿನ ಹೆಗ್ಗಡೆ ನಗರದಲ್ಲಿ ಪತ್ನಿಯನ್ನು ಕತ್ತು ಹಿಸುಕಿ ಕೊಂದು ಬಳಿಕ ಆರೋಪಿ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಮೇಲಾರಮಣಿ (35) ಕೊಲೆಯಾದ ಮಹಿಳೆ. ಚಂದ್ರಶೇಖರ್ ಪತ್ನಿಯನ್ನೇ ಕೊಲೆಗೈದ ಪತಿ. ಖಾಸಗಿ ಕಂಪನಿಯಲ್ಲಿ ಅಕೌಂಟೆಂಟ್ ಆಗಿದ್ದ ಪತ್ನಿ ಯಾವಾಗಲೂ ಫೋನ್ ನಲ್ಲಿ ಮಾತನಾಡುತ್ತಿದ್ದಳು. ಇದರಿಂದ ಹೆಂಡತಿ ಮೇಲೆ ಅನುಮಾನಗೊಂಡು ಆಕೆಯನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಬಳಿಕ ಸಂಪಿಗೆಹಳ್ಳಿ ಪೊಲಿಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ಬೆಂಗಳೂರು : ಬಿಗ್ ಬಾಸ್ ಮಾಜಿ ಸ್ಪರ್ಧಿ ರಕ್ಷಕ್ ಬುಲೆಟ್ ಅವರು ನಾಡದೇವಿ ಚಾಮುಂಡೇಶ್ವರಿಗೆ ಅವಹೇಳನ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಇದೀಗ ರಕ್ಷಕ್ ಬುಲೆಟ್ ವಿರುದ್ಧ ದೂರು ದಾಖಲಾಗಿದೆ. ಹಿಂದೂ ಸಂಘಟನೆಗಳು ಇಂದು ರಕ್ಷಕ್ ಬುಲೆಟ್‌ ವಿರುದ್ಧ ದೂರು ನೀಡಲು ಸಜ್ಜಾಗಿವೆ. ಖಾಸಗಿ ವಾಹಿನಿಯ ಕಾರ್ಯಕ್ರಮವೊಂದರಲ್ಲಿ ರಕ್ಷಕ್‌ ಹುಡುಗಿಯನ್ನು ಹೊಗಳುವ ಭರದಲ್ಲಿ ನಾಡದೇವಿ ಚಾಮುಂಡೇಶ್ವರಿಗೆ ಅವಹೇಳನಕಾರಿಯಾಗಿ ಮಾತನಾಡಿದ್ದು ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿದೆ. ರಕ್ಷಕ್ ಬುಲೆಟ್ ವಿರುದ್ಧ ಇಂದು ಹಿಂದೂ ಕಾರ್ಯಕರ್ತ ಮಹೇಶ್ ಎಂಬುವವರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ಅವರಿಗೆ ದೂರು ಸಲ್ಲಿಸಿದ್ದಾರೆ. ಇತ್ತೀಚೆಗೆ ಖಾಸಗಿ ವಾಹಿನಿ ರಿಯಾಲಿಟಿ ಶೋನಲ್ಲಿ ರಕ್ಷಕ್‌ ಬುಲೆಟ್ ಅವರು ಸಹಸ್ಪರ್ಧಿ, ಪಕ್ಕದಲ್ಲಿದ್ದ ಹುಡುಗಿಯನ್ನು ಹೊಗಳುವ ಭರದಲ್ಲಿ ಯಡವಟ್ಟು ಮಾಡಿಕೊಂಡಿದ್ದಾರೆ. ರಕ್ಷಕ್ ಬುಲೆಟ್ ಅವರ ಅವಹೇಳನ ವಿಡಿಯೋ ವೈರಲ್ ಆಗಿದ್ದು, ಭಾರೀ ಟೀಕೆ ವ್ಯಕ್ತವಾಗಿದೆ. ರಕ್ಷಕ್ ಬುಲೆಟ್ ಹೇಳಿದ್ದೇನು? ಭರ್ಜರಿ ಬ್ಯಾಚುಲರ್ಸ್ ವೇದಿಕೆಯಲ್ಲಿ ರಕ್ಷಕ್ ಬುಲೆಟ್‌ ಅವರು ದರ್ಶನ್ ಹಾಗೂ ರಚಿತಾ ರಾಮ್ ಅಭಿನಯದ ಬುಲ್…

Read More

ನವದೆಹಲಿ : ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡುತ್ತಿರುವ ಹನಿಟ್ರ್ಯಾಪಿಂಗ್ ಆರೋಪಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನಲ್ಲಿ ಸಲ್ಲಿಸಲಾಗಿದ್ದ ಪಿಐಎಲ್ ಅನ್ನು ವಜಾಗೊಳಿಸಿದೆ. ರಾಜಕೀಯ ನಾಯಕರು ಸೇರಿದಂತೆ ಹಲವರ ಹನಿಟ್ರ್ಯಾಪಿಂಗ್ ಆರೋಪಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಸಲಾಗಿತ್ತು. ಆದರೆ ಇಂದು ಸುಪ್ರೀಂಕೋರ್ಟ್ ಪಿಐಎಲ್ ವಜಾಗೊಳಿಸಿದೆ. ಹನಿಟ್ರ್ಯಾಪ್ ಪ್ರಕರಣದ ಕುರಿತ ಪಿಐಎಲ್​ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಇದೇ ವೇಳೆ ದೂರದಾರನನ್ನು ತರಾಟೆಗೆ ತೆಗೆದುಕೊಂಎಇದೆ. ಹನಿಟ್ರ್ಯಾಪ್ ಆಗಿದ್ದರೆ ಅದನ್ನು ಜಡ್ಡ್ ಗಳು ನೋಡಿಕೊಳ್ಳುತ್ತಾರೆ. ಇದಕ್ಕೂ ನಿಮಗೂ ಏನು ಸಂಬಂಧ ಎಂದು ಅರ್ಜಿದಾರರಿಗೆ ನ್ಯಾಯಮೂರ್ತಿಗಳು ಪ್ರಶ್ನೆ ಮಾಡಿದ್ದಾರೆ.

Read More

ನವದೆಹಲಿ : ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡುತ್ತಿರುವ ಹನಿಟ್ರ್ಯಾಪಿಂಗ್ ಆರೋಪಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನಲ್ಲಿ ಸಲ್ಲಿಸಲಾಗಿದ್ದ ಪಿಐಎಲ್ ಅನ್ನು ವಜಾಗೊಳಿಸಿದೆ. ರಾಜಕೀಯ ನಾಯಕರು ಸೇರಿದಂತೆ ಹಲವರ ಹನಿಟ್ರ್ಯಾಪಿಂಗ್ ಆರೋಪಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಸಲಾಗಿತ್ತು. ಆದರೆ ಇಂದು ಸುಪ್ರೀಂಕೋರ್ಟ್ ಪಿಐಎಲ್ ವಜಾಗೊಳಿಸಿದೆ.

Read More

ತುಮಕೂರು: ಮಕ್ಕಳನ್ನು ಮನೆಯ ಹೊರಗೆ ಆಟ ಆಡಲು ಬಿಡುವ ಪೋಷಕರೇ ಎಚ್ಚರ, ಮನೆ ಮುಂದೆ ಟ್ರ್ಯಾಕ್ಟರ್ ಹರಿದು 5 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ತಿಮ್ಮನಹಳ್ಳಿಯಲ್ಲಿ ನಡೆದಿದೆ. ಮನೆ ಮುಂದೆ ಆಟವಾಡುತ್ತಿದ್ದ 5 ವರ್ಷದ ಬಾಲಕ ವರುಣ್ (5) ಮೇಲೆ ಟ್ರ್ಯಾಕ್ಟರ್ ಹರಿದು, ಸ್ಥಳದಲ್ಲೇ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಮಣ್ಣು ತುಂಬಿದ್ದ ಟ್ರ್ಯಾಕ್ಟರ್ ಬಾಲಕನ ಮೇಲೆಯೇ ಹರಿದು ಹೋಗಿದ್ದು, ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ವೈ.ಎನ್.ಕೋಟೆ ಪೊಲ್ಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

Read More

ಕೆಎನ್ಎನ್ ಡಿಜಿಟಲ್ ಡೆಸ್ಕ್ : ಇತ್ತೀಚಿನ ದಿನಗಳಲ್ಲಿ ಸ್ಮಾರ್ಟ್‌ಫೋನ್ ಪ್ರತಿಯೊಬ್ಬರ ಅಗತ್ಯವಾಗಿದೆ. ಜನರು ಇದಕ್ಕೆ ಎಷ್ಟು ವ್ಯಸನಿಯಾಗಿದ್ದಾರೆ ಎಂದರೆ ಅದು ಇಲ್ಲದೆ ನಾವು ಆತ್ಮವಿಶ್ವಾಸವನ್ನು ಅನುಭವಿಸುವುದಿಲ್ಲ. ಸ್ಮಾರ್ಟ್‌ಫೋನ್‌ಗಳು ನಮ್ಮ ಜೀವನವನ್ನು ಸುಲಭಗೊಳಿಸಿವೆ ಎಂಬುದರಲ್ಲಿ ಸಂದೇಹವಿಲ್ಲ. ಆದರೆ ಅದೇ ಸಮಯದಲ್ಲಿ ಇದು ಹಲವಾರು ಹೊಸ ಸಮಸ್ಯೆಗಳನ್ನು ಸಹ ಸೃಷ್ಟಿಸುತ್ತಿದೆ. ಅದರಲ್ಲೂ ಫೋನ್ ನಮ್ಮ ಆರೋಗ್ಯದ ಮೇಲೆ ಹಲವು ರೀತಿಯಲ್ಲಿ ಪರಿಣಾಮ ಬೀರುತ್ತದೆ. ಪ್ರತಿದಿನ ಮತ್ತು ನಿರಂತರವಾಗಿ ಫೋನ್ ಬಳಸುವುದರಿಂದ ನಮ್ಮ ದೇಹವು ಒತ್ತಡಕ್ಕೆ ಒಳಗಾಗುತ್ತದೆ. ಅದಕ್ಕೆ ಸರಿಯಾದ ವಿಶ್ರಾಂತಿ ಸಿಗುವುದಿಲ್ಲ ಮತ್ತು ದೇಹದ ಅನೇಕ ಭಾಗಗಳಲ್ಲಿ ಈ ಆಯಾಸದ ಪರಿಣಾಮ ಕಂಡುಬರುತ್ತದೆ. ಸ್ಮಾರ್ಟ್‌ಫೋನ್‌ಗಳ ಬಳಕೆಯಿಂದ ಉಟಾಗುವ ಸಮಸ್ಯೆಗಳು   ಕೈ ಕಿರುಬೆರಳಿನಲ್ಲಿ ನೋವು ಇತ್ತೀಚಿನ ದಿನಗಳಲ್ಲಿ ಬರುವ ಸ್ಮಾರ್ಟ್‌ಫೋನ್‌ಗಳ ಗಾತ್ರವು ಸಾಕಷ್ಟು ದೊಡ್ಡದಾಗಿದೆ. ದಿನವಿಡೀ ಸೋಷಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವುದರಿಂದ ನಮ್ಮ ಕೈಯ ಕಿರುಬೆರಳು ತುಂಬಾ ಬಾಗುತ್ತದೆ. ಇದರಿಂದ ನೋವು ಉಂಟಾಗುತ್ತದೆ. ಕುತ್ತಿಗೆ ನೋವು ಫೋನ್ ಅನ್ನು ನಿರಂತರವಾಗಿ ನೋಡುವುದು ಕುತ್ತಿಗೆಯನ್ನು ನಿರಂತರವಾಗಿ…

Read More

ಬೆಂಗಳೂರು: ಕಂದಾಯ ಇಲಾಖೆಯಿಂದ ಸಾರ್ವಜನಿಕರ ಅನುಕೂಲಕ್ಕಾಗಿ ಆಯಾ ಊರಿನ ವ್ಯಾಪ್ತಿಯ ನಕ್ಷೆಯನ್ನು ಆನ್ ಲೈನ್ ನಲ್ಲಿ ಡೌನ್ ಲೋಡ್ ಮಾಡಲು ಅವಕಾಶ ನೀಡಲಾಗುತ್ತಿದೆ. ನೀವು ನಿಮ್ಮೂರಿನ ಕಂದಾಯ ನಕ್ಷೆಯನ್ನು ಕುಳಿತಲ್ಲೇ ಡೌನ್ ಲೋಡ್ ಮಾಡಿಕೊಳ್ಳಲು ಮುಂದಿನ ಹಂತಗಳನ್ನು ಅನುಸರಿಸಿ. ಅತಿ ಪುರಾತನ ಕಾಲದಿಂದಲೂ ಯಾವುದೇ ರೀತಿಯ ಸರ್ಕಾರದಲ್ಲಾಗಲೀ, ಅಂದರೆ, ಚಕ್ರಾದಿsಪತ್ಯ, ರಾಜಪ್ರಭುತ್ವ, ನಿರಂಕುಶಪ್ರಭುತ್ವ ಅಥವಾ ಪ್ರಜಾಪ್ರಭುತ್ವ ಕಾಲದಿಂದಲೂ ಭೂನಿರ್ವಹಣೆ, ಭೂಕಂದಾಯ ಸಂಗ್ರಹಣೆ, ಭೂಮಾಲಿಕತ್ವ ನಿರ್ಬಂಧನೆ ಮತ್ತು ಭೂ ಉಪಯೋಗ ಮತ್ತು ಭೂಸ್ವಾಧೀನ ಹಕ್ಕುಗಳು ಮುಂತಾದವುಗಳೆಲ್ಲವೂ ರಾಜ್ಯ ಸರ್ಕಾರದ ಪ್ರಮುಖ ಜವಾಬ್ದಾರಿಗಳಾಗಿದ್ದವು. ಪ್ರಾಚೀನ ಭಾರತದಲ್ಲಿ ವಾಸ್ತವವಾಗಿ ಸರ್ಕಾರದಲ್ಲಿ ಎರಡು ಇಲಾಖೆಗಳು ಮಾತ್ರ ಅಸ್ತಿತ್ವದಲ್ಲಿರುತ್ತಿದ್ದವು. ಮೊದಲನೆಯದೆಂದರೆ ಭೂನಿರ್ವಹಣೆ ಮತ್ತು ಭೂಕಂದಾಯ ಇಲಾಖೆ ಮತ್ತು ಎರಡನೆಯದೆಂದರೆ ರಾಜ್ಯವನ್ನು ಬಾಹ್ಯ ದಾಳಿಯ ವಿರುದ್ಧ ಹೋರಾಡಲು ಅಗಾಧವಾದ ಭೂಸೇನೆಯ ರಕ್ಷಣಾ ಇಲಾಖೆ. ಮೊದಲನೇ ಇಲಾಖೆಯು ರಾಜಸ್ವ ಸಂಗ್ರಹಣೆ ಹಾಗೂ ಒಳಾಡಳಿತ ನಿರ್ವಹಣೆಯನ್ನು ಹಾಗೂ ಎರಡನೇ ಇಲಾಖೆಯು ಪ್ರಾಂತ್ಯಗಳ ರಕ್ಷಣೆ ಮತ್ತು ಸಮಗ್ರತೆಯನ್ನು ಬಾಹ್ಯದಾಳಿಗೀಡಾಗುವುದರಿಂದ ರಕ್ಷಿಸುವ ಕಾರ್ಯವನ್ನು ನಿರ್ವಹಿಸುತ್ತಿದ್ದವು. ಸಮಾಜವು…

Read More

ನವದೆಹಲಿ : ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಅವರು ದೆಹಲಿಯಲ್ಲಿ ಒಟ್ಟಿಗೆ ಡಿನ್ನರ್ ನಲ್ಲಿ ಭಾಗಿಯಾಗಿದ್ದು, ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ದೆಹಲಿಯ ಹೆಚ್.ಡಿ.ಕುಮಾರಸ್ವಾಮಿ ಅವರ ನಿವಾಸದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರು ಡಿನ್ನರ್ ನಲ್ಲಿ ಭಾಗಿಯಾಗಿದ್ದು, ತೀವ್ರ ಕುತೂಹಲ ಮೂಡಿಸಿದೆ. ಡಿನ್ನರ್ ಗೆ ಬರುವಂತೆ ಹೆಚ್.ಡಿ.ಕುಮಾರಸ್ವಾಮಿ ಅವರೇ ಸತೀಶ್ ಜಾರಕಿಹೊಳಿ ಅವರನ್ನು ಆಹ್ವಾನಿಸಿದ್ದರು ಎನ್ನಲಾಗಿದ್ದು, ಈ ವೇಳೆ ಹಲವು ಮಹತ್ವದ ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

Read More

ಬೆಂಗಳೂರು : ಬೇಡಿಕೆಗಳ ಈಡೇರಿಕೆಗಾಗಿ ಸಾರಿಗೆ ನೌಕರರು ಮತ್ತೆ ಮುಷ್ಕರಕ್ಕೆ ಮುಂದಾಗಿದ್ದು, ಏಪ್ರಿಲ್ 15 ರಂದು ಸಿಎಂ ನಿವಾಸದ ಮುಂದೆ ಧರಣಿ ನಡೆಸಲು ನಿರ್ಧರಿಸಲಾಗಿದೆ. ಡಿಸೆಂಬರ್ 31 ರಂದು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರಕ್ಕೆ ಮುಂದಾಗಿದ್ದರು. ಈ ವೇಳೆ ನೌಕರರ ಬೇಡಿಕೆ ಈಡೇರಿಸುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದರು, ಸಂಕ್ರಾಂತಿ ಹಬ್ಬದ ಬಳಿಕ ಕರೆದು ಸಭೆ ನಡೆಸುವುದಾಗಿ ಹೇಳಿದ್ದರು. ಈಗಾಗಲೇ ಸಾರಿಗೆ ಬಸ್ ಟಿಕೆಟ್ ದರ ಏರಿಕೆ ಮಾಡಲಾಗಿದೆ. ಆದರೆ ಕೊಟ್ಟ ಮಾತಿನಂತೆ ನೌಕರರ ಜೊತೆಗೆ ಸಿಎಂ ಸಿದ್ದರಾಮಯ್ಯ ಸಭೆ ಕರೆದಿಲ್ಲ. 2 ತಿಂಗಳು ಕಳೆದ್ರೂ ನೌಕರರನ್ನು ಮಾತುಕತೆಗೆ ಕರೆಯದ ಹಿನ್ನೆಲೆಯಲ್ಲಿ ಏಪ್ರಿಲ್ 15 ರ ಬೆಳಗ್ಗೆ11 ರಿಂದ ಸಂಜೆ 5 ಗಂಟೆಯವರೆಗೆ ಸಿಎಂ ಸಿದ್ದರಾಮಯ್ಯ ನಿವಾಸದ ಮುಂದೆ ಧರಣಿ ಸತ್ಯಾಗ್ರಹಕ್ಕೆ ನೌಕರರು ಮುಂದಾಗಿದ್ದಾರೆ.

Read More