Author: kannadanewsnow57

ಬೆಂಗಳೂರು : ರೈತರ ಅನುಕೂಲಕ್ಕಾಗಿ ಆಯಾ ಊರಿನ ವ್ಯಾಪ್ತಿಯ ಪೋಡಿ ನಕ್ಷೆಯನ್ನು ಆನ್ ಲೈನ್ ನಲ್ಲಿ ಡೌನ್ ಲೋಡ್ ಮಾಡಲು ರಾಜ್ಯ ಸರ್ಕಾರವು ಅವಕಾಶ ನೀಡಲಾಗುತ್ತಿದೆ. ನೀವು ಪೋಡಿ ನಕ್ಷೆಯನ್ನು ಕುಳಿತಲ್ಲೇ ಡೌನ್ ಲೋಡ್ ಮಾಡಿಕೊಳ್ಳಲು ಮುಂದಿನ ಹಂತಗಳನ್ನು ಅನುಸರಿಸಿ. ಡಿಜಿಟಲ್‌ ಆ್ಯಪ್ ಮುಖಾಂತರ ಮಾಡುವುದರಿಂದ ಸರಳ, ವೇಗವಾಗಿ ಕಡತಗಳನ್ನು ತಯಾರಿಸಬಹುದು. ಯಾರ ಬಳಿ ವಿಳಂಬವಾಗಿದೆ ಎಂಬುದು ಪಾರದರ್ಶಕವಿರುವುದರಿಂದ, ವೇಗವಾಗಿ ಕೆಲಸವಾಗಬಹುದು. ಮೂಲ ಮಂಜೂರಿ ದಾಖಲೆಗಳನ್ನು ಸುರಕ್ಷಿತವಾಗಿಡಬಹುದು. ಮುಂದೆ ತಿದ್ದಲು, ನಕಲು ಮಾಡಲು ಸಾಧ್ಯವಿಲ್ಲ. ಒಬ್ಬ ರೈತನಿಗೆ ತಯಾರು ಮಾಡಿದ 1-5 (ನಮೂನೆ)ಕಡತ, ಆ ಸರ್ವೆ ನಂಬರಿನ ಎಲ್ಲಾ ರೈತರಿಗೂ ಅದೇ ಕಡತ ಅನುಕೂಲವಾಗುತ್ತದೆ. 1-5(ನಮೂನೆ)ಕಡತ ಕಾಣೆಯಾಗಲು ಅಥವಾ ಕಳೆದು ಹೋಗಲು ಸಾಧ್ಯವಿಲ್ಲ. ಕುಟುಂಬದ ಸದಸ್ಯರ ಪಾಲುಗಾರಿಕೆ, ಭೂ ಆಸ್ತಿಯ ಕೆಲವು ಭಾಗ ಮಾರಾಟ, ದಾನಪತ್ರ, ನಿವೇಶನಕ್ಕೆ ಬಳಕೆ, ಭೂ ಪರಿವರ್ತನೆ ಸೇರಿ ಹಲವು ಚಟುವಟಿಕೆಗಳಿಗೆ ಪೋಡಿ ನಕ್ಷೆ ಅವಶ್ಯಕವಾಗಿದೆ. ಒಂದು ಸರ್ವೇ ನಂಬರಿನಲ್ಲಿ ಹಲವರ ಹೆಸರಿದ್ದರೆ ಮುಂದೆ ಸರ್ಕಾರದಿಂದ ಸೌಲಭ್ಯ…

Read More

ನವದೆಹಲಿ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ದೆಹಲಿಯ ಅವರ ನಿವಾಸದಲ್ಲಿ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿವಾಸಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮಿಸಿದ್ದು, ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದುಕೊಂಡಿದ್ದಾರೆ. ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದುಕೊಂಡಿದ್ದು, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಡಿಸೆಂಬರ್ 27 ರಂದು ನಡೆಯಬೇಕಿದ್ದ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ಅಲ್ಲದೆ, ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಸರ್ಕಾರ 7 ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿದೆ. ಮತ್ತೊಂದೆಡೆ, ಕಾಂಗ್ರೆಸ್ ಕೂಡ ಇಂದು ತನ್ನ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿದೆ. https://twitter.com/ANI/status/1872538668101234954

Read More

ನವದೆಹಲಿ : ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ಸೋದರ ಮಾವ ಮತ್ತು ನಿಷೇಧಿತ ಜಮಾತ್-ಉದ್-ದವಾ ಉಪ ಮುಖ್ಯಸ್ಥ ಹಫೀಜ್ ಅಬ್ದುಲ್ ರಹಮಾನ್ ಮಕ್ಕಿ ಶುಕ್ರವಾರ ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಜಮಾತ್-ಉದ್-ದವಾ (JuD) ಪ್ರಕಾರ, ಪ್ರೊ.ಅಬ್ದುಲ್ ರಹಮಾನ್ ಮಕ್ಕಿ ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಮತ್ತು ಹೆಚ್ಚಿನ ಮಧುಮೇಹದ ನಂತರ ಲಾಹೋರ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಮುಂಜಾನೆ ಮಕ್ಕಿ ಹೃದಯ ಸ್ತಂಭನಕ್ಕೆ ಒಳಗಾಗಿದ್ದರು ಮತ್ತು ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು” ಎಂದು ಜೆಯುಡಿ ಅಧಿಕಾರಿಯೊಬ್ಬರು ತಿಳಿಸಿದರು. ಜೆಯುಡಿ ಮುಖ್ಯಸ್ಥ ಹಫೀಜ್ ಸಯೀದ್‌ನ ಸೋದರ ಮಾವನಿಗೆ 2020 ರಲ್ಲಿ ಭಯೋತ್ಪಾದನೆ ನಿಗ್ರಹ ನ್ಯಾಯಾಲಯವು ಆರು ತಿಂಗಳ ಜೈಲು ಶಿಕ್ಷೆಯನ್ನು ವಿಧಿಸಿತು. ಜೆಯುಡಿ ಉಪ ಮುಖ್ಯಸ್ಥರಾದ ಮಕ್ಕಿ ಅವರು ಭಯೋತ್ಪಾದನೆಗೆ ಹಣಕಾಸು ಒದಗಿಸಿದ ಆರೋಪದಲ್ಲಿ ಶಿಕ್ಷೆಗೆ ಗುರಿಯಾದ ನಂತರ ಗೌಪ್ಯತೆಯನ್ನು ಇಟ್ಟುಕೊಂಡಿದ್ದರು. ಪಾಕಿಸ್ತಾನ್ ಮುತಾಹಿದಾ ಮುಸ್ಲಿಂ ಲೀಗ್ (ಪಿಎಂಎಂಎಲ್) ಹೇಳಿಕೆಯಲ್ಲಿ ಮಕ್ಕಿ ಪಾಕಿಸ್ತಾನದ ಸಿದ್ಧಾಂತದ ಪ್ರತಿಪಾದಕ ಎಂದು ಹೇಳಿದೆ. 2023…

Read More

ನವದೆಹಲಿ : 2023-24 ಹಣಕಾಸು ವರ್ಷಕ್ಕೆ (AY 2024-25) ವಿಳಂಬವಾದ ಮತ್ತು ಪರಿಷ್ಕೃತ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 31, 2024 ಆಗಿದೆ. ವಿವಿಧ ವರ್ಗದ ತೆರಿಗೆದಾರರಿಗೆ ITR ಸಲ್ಲಿಸಲು ವಿಭಿನ್ನ ಗಡುವುಗಳಿವೆ. ತಡವಾದ ಮತ್ತು ಪರಿಷ್ಕೃತ ರಿಟರ್ನ್ಸ್‌ಗಳಿಗೆ ಕೊನೆಯ ದಿನಾಂಕ ಒಂದೇ ಆಗಿರುತ್ತದೆ. ಒಬ್ಬ ವ್ಯಕ್ತಿಯು ಡಿಸೆಂಬರ್ 31, 2024 ರೊಳಗೆ ಸಲ್ಲಿಸಿದ ರಿಟರ್ನ್ ಅನ್ನು ಸಲ್ಲಿಸಲು ವಿಫಲವಾದರೆ, ಭಾರೀ ನಷ್ಟ ಉಂಟಾಗಬಹುದು. ಆದಾಯ ತೆರಿಗೆ ಕಾಯಿದೆಯ ಸೆಕ್ಷನ್ 139(4) ರ ಅಡಿಯಲ್ಲಿ, ವಿಳಂಬವಾದ ರಿಟರ್ನ್ಸ್‌ಗೆ ಬಾಕಿ ಇರುವ ತೆರಿಗೆಯ ಮೇಲೆ ರೂ 5,000 ದಂಡವನ್ನು ವಿಧಿಸಲಾಗುತ್ತದೆ. ಕಡಿಮೆ ತೆರಿಗೆಗೆ ಒಳಪಡುವ ಆದಾಯಕ್ಕೆ 1,000 ರೂ.ಗಳ ಕಡಿಮೆ ದಂಡವಿದೆ. ಆದಾಗ್ಯೂ, ಮೂಲ ವಿನಾಯಿತಿ ಮಿತಿ ರೂ 3 ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿರುವ ಜನರು ಯಾವುದೇ ದಂಡವನ್ನು ಪಾವತಿಸಬೇಕಾಗಿಲ್ಲ. ಬಿಲ್ ಮಾಡಿದ ರಿಟರ್ನ್ಸ್ ತೆರಿಗೆದಾರರಿಗೆ ಐಟಿಆರ್ ಸಲ್ಲಿಸಲು ಮತ್ತು ಮರುಪಾವತಿ ಮತ್ತು ಕೆಲವು ನಷ್ಟಗಳನ್ನು ಪಡೆಯಲು…

Read More

ಬೆಳಗಾವಿ : ಡಾ. ಮನಮೋಹನಸಿಂಗ್ ಅವರು ವಿಶ್ವಶ್ರೇಷ್ಠ ಆರ್ಥಿಕ ತಜ್ಞರಾಗಿ, ದೇಶದ ಮಧ್ಯಮ ಮತ್ತು ಬಡ ಜನರ ಹಿತಕ್ಕಾಗಿ ದೇಶದ ಆರ್ಥಿಕತೆಯನ್ನು ರೂಪಿಸಿದ ತಜ್ಞರಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಸಿಪಿಇಡಿ ಮೈದಾನದಲ್ಲಿ ಕೆಪಿಸಿಸಿ ವತಿಯಿಂದ ಆಯೋಜಿಸಲಾಗಿದ್ದ ಮಾಜಿ ಪ್ರಧಾನಿ ದಿ.ಮನಮೋಹನ್ ಸಿಂಗ್ ಅವರ ಸಂತಾಪ ಸಭೆಯಲ್ಲಿ ಮಾತನಾಡಿದರು. ಮುಖ್ಯಾಂಶಗಳು: *ಮನಮೋಹನ್ ಸಿಂಗ್ ಅವರ ಬದುಕಿನ ಮಾರ್ಪಾಡು ನೋಡಿದಾಗ ಆಶ್ಚರ್ಯ ಆಗತ್ತೆ. ಅತ್ಯಂತ ಕಡುಬಡತನದ ಕುಟುಂಬದಲ್ಲಿ ಜನಿಸಿ, ದೇಶ ಕಂಡ ವಿಶ್ವಶ್ರೇಷ್ಠ ಆರ್ಥಿಕ ತಜ್ಞರಾಗಿ ಎರಡು ಬಾರಿ ದೇಶದ ಪ್ರಧಾನಿಯಾದರು. ಇವರಿಗಿಂತ ದೊಡ್ಡ ಆರ್ಥಿಕ ತಜ್ಞರು ಇರಬಹುದು. ಆದರೆ, ಬಹಳ ಮೃದು ಸ್ವಭಾವದ, ಮಿತ ಭಾಷಿಯಾಗಿ ಮಧ್ಯಮ ಮತ್ತು ಬಡ ಜನರ ದೃಷ್ಟಿಯಿಂದ ಈ ಜನರ ಹಿತಕ್ಕಾಗಿ ದೇಶದ ಆರ್ಥಿಕತೆಯನ್ನು ರೂಪಿಸಿದವರು. ನಾನು ಹಲವು ಬಾರಿ ಇವರನ್ನು ಭೇಟಿಯಾಗಿದ್ದೆ. ಸಂಯಮದಿಂದ ನಮ್ಮ ಮಾತನ್ನು ಕೇಳಿಸಿಕೊಂಡು ಬಳಿಕ ಪ್ರಾಮಾಣಿಕ ಅಭಿಪ್ರಾಯ ನೀಡುತ್ತಿದ್ದರು. ತಾವು ಅಲಂಕರಿಸಿದ ಎಲ್ಲಾ ಹುದ್ದೆಗಳಿಗೂ ನ್ಯಾಯ ಒದಗಿಸಿದವರು. RBI…

Read More

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿಜಯಪುರ ಬೈಪಾಸ್ ಬಳಿ ವ್ಹೀಲಿಂಗ್ ಕ್ರೇಜ್ ಗೆ ಇಬ್ಬರು ಯುವಕರು ಬಲಿಯಾಗಿರುವ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿಜಯಪುರದಲ್ಲಿ ಬೈಕ್ ವ್ಹೀಲಿಂಗ್ ಮಾಡುವಾಗ ಟ್ಯಾಂಕರ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ.ಮೃತ ಯುವಕರನ್ನು ಅರ್ಫಾಜ್ (22) ಮನೋಜ್ (22) ಎಂದು ಗುರುತಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಬೈಪಾಸ್ ನಲ್ಲಿ ಅರ್ಫಾಜ್ ಮತ್ತು ಮನೋಜ್ ವ್ಹೀಲಿಂಗ್ ಮಾಡುತ್ತಿದ್ದಾಗ ಕ್ಯಾಂಟರ್ ಗೆ ಬೈಕ್ ಡಿಕ್ಕಿ ಹೊಡೆ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

Read More

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಕಟೀಲು ದುರ್ಗಾ ಪರಮೇಶ್ವರಿಯನ್ನು, ಶಕ್ತಿ ದೇವತೆಯ ಅವತಾರವೆಂದೇ ನಂಬಲಾಗಿದೆ. ದುರ್ಗೆ, ಕಟೀಲಿನಲ್ಲಿ ನೆಲೆಸಲು ಕಾರಣವೇನು ಎಂಬುದಕ್ಕೆ ಪೌರಾಣಿಕ ಹಿನ್ನೆಲೆಯ ಕಥೆಯೊಂದಿದೆ. ಶರನ್ನವರಾತ್ರಿಯ ಉತ್ಸವವನ್ನು ಇಲ್ಲಿ ಅದ್ದೂರಿಯಿಂದ ಆಚರಿಸಲಾಗುತ್ತದೆ. ದಕ್ಷಿಣ ಕನ್ನಡ ಜಿಲ್ಲೆ ಸಾಕಷ್ಟು ಪವಿತ್ರ ಪುಣ್ಯಕ್ಷೇತ್ರಗಳನ್ನು ಹೊಂದಿದೆ. ಅವುಗಳಲ್ಲಿ ನಂದಿನಿ ನದಿಯ ತಟದಲ್ಲಿರುವ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನವೂ ಒಂದು. ಈ ದೇಗುಲವು, ನಂದಿನಿ ಎಂಬ ನದಿಯ ಮಧ್ಯದಲ್ಲಿರುವ ಸಣ್ಣ ದ್ವೀಪದಲ್ಲಿ ನೆಲೆಗೊಂಡಿದೆ. ಪ್ರತಿ ವರ್ಷ ಲಕ್ಷಾಂತರ ಯಾತ್ರಾರ್ಥಿಗಳು ಇಲ್ಲಿಗೆ ಬಂದು ತಾಯಿ ದುರ್ಗಾ ಪರಮೇಶ್ವರಿಯ ದರ್ಶನ ಭಾಗ್ಯ ಪಡೆದು ಪುನೀತರಾಗುತ್ತಿದ್ದಾರೆ. ಈ ಕ್ಷೇತ್ರದಲ್ಲಿ ದುರ್ಗಾಪರಮೇಶ್ವರಿ ಬಂದು ನೆಲೆಸಲು ಕಾರಣವೇನು ಎಂಬ ಕುರಿತಾಗಿ ಒಂದು ಪೌರಾಣಿಕ ಕಥೆಯೇ ಇದೆ. ಶುಂಭ ಮತ್ತು ನಿಶುಂಭರೆಂಬ ಎಂಬ ಇಬ್ಬರು ರಾಕ್ಷಸರನ್ನು ದುರ್ಗಾದೇವಿ ಸಂಹರಿಸಿದ ನಂತರ ಅವರ ಮಂತ್ರಿಗಳಲ್ಲಿ ಒಬ್ಬನಾದ ಅರುಣಾಸುರನು ಯುದ್ಧಭೂಮಿಯಿಂದ ಓಡಿಹೋಗುತ್ತಾನೆ. ಆನಂತರ…

Read More

ಬೆಳಗಾವಿ : ಮನಮೋಹನಸಿಂಗ್ ಅವರು ವಿಶ್ವಶ್ರೇಷ್ಠ ಆರ್ಥಿಕ ತಜ್ಞಾರಾಗಿ, ದೇಶದ ಮಧ್ಯಮ ಮತ್ತು ಬಡ ಜನರ ಹಿತಕ್ಕಾಗಿ ದೇಶದ ಆರ್ಥಿಕತೆಯನ್ನು ರೂಪಿಸಿದ ತಜ್ಞರಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಸಿಪಿಇಡಿ ಮೈದಾನದಲ್ಲಿ ಕೆಪಿಸಿಸಿ ವತಿಯಿಂದ ಆಯೋಜಿಸಲಾಗಿದ್ದ ಮಾಜಿ ಪ್ರಧಾನಿ ದಿ.ಮನಮೋಹನ್ ಸಿಂಗ್ ಅವರ ಸಂತಾಪ ಸಭೆಯಲ್ಲಿ ಮಾತನಾಡಿದರು. ಸಭೆಯಲ್ಲಿ ಸಿಎಂ ಮಾತುಗಳ ಹೈಲೈಟ್ಸ್… *ಮನಮೋಹನ್ ಸಿಂಗ್ ಅವರ ಬದುಕಿನ ಮಾರ್ಪಾಡು ನೋಡಿದಾಗ ಆಶ್ಚರ್ಯ ಆಗತ್ತೆ. ಅತ್ಯಂತ ಕಡುಬಡತನದ ಕುಟುಂಬದಲ್ಲಿ ಜನಿಸಿ, ದೇಶ ಕಂಡ ವಿಶ್ವಶ್ರೇಷ್ಢ ಆರ್ಥಿಕ ತಜ್ಞರಾಗಿ ಎರಡು ಬಾರಿ ದೇಶದ ಪ್ರಧಾನಿಯಾದರು. ಇವರಿಗಿಂತ ದೊಡ್ಡ ಆರ್ಥಿಕ ತಜ್ಞರು ಇರಬಹುದು. ಆದರೆ, ಬಹಳ ಮೃದು ಸ್ವಭಾವದ, ಮಿತ ಭಾಷಿಯಾಗಿ ಮಧ್ಯಮ ಮತ್ತು ಬಡ ಜನರ ದೃಷ್ಟಿಯಿಂದ ಈ ಜನರ ಹಿತಕ್ಕಾಗಿ ದೇಶದ ಆರ್ಥಿಕತೆಯನ್ನು ರೂಪಿಸಿದವರು. ನಾನು ಹಲವು ಬಾರಿ ಇವರನ್ನು ಭೇಟಿಯಾಗಿದ್ದೆ. ಸಂಯಮದಿಂದ ನಮ್ಮ ಮಾತನ್ನು ಕೇಳಿಸಿಕೊಂಡು ಬಳಿಕ ಪ್ರಾಮಾಣಿಕ ಅಭಿಪ್ರಾಯ ನೀಡುತ್ತಿದ್ದರು. ತಾವು ಅಲಂಕರಿಸಿದ ಎಲ್ಲಾ ಹುದ್ದೆಗಳಿಗೂ ನ್ಯಾಯ…

Read More

ಬೆಳಗಾವಿ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಬದುಕು , ಆರ್ಥಿಕ ನೀತಿಗಳು ನಮ್ಮೆಗೆಲ್ಲ ಪ್ರೇರಣೆ. ಶ್ರೇಷ್ಠ ಆರ್ಥಿಕ ತಜ್ಞರಾಗಿದ್ದ ಅವರು, 2013-18 ರವರೆಗೆ ಕರ್ನಾಟಕದ ಆರ್ಥಿಕ ಸ್ಥಿತಿ ಉತ್ತಮವಾಗಿದೆ ಎಂದು ಬಣ್ಣಿಸಿದ್ದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಮರಿಸಿದರು. ಅವರು ಇಂದು ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ನಿಧನಕ್ಕೆ ಸಂತಾಪ ಸೂಚಿಸಿದ ಮುಖ್ಯಮಂತ್ರಿಗಳು, ಈಗಿನ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಜನಿಸಿದ ಮನಮೋಹನ್ ಸಿಂಗ್ ರವರು ಜಗತ್ತಿನ ಖ್ಯಾತ ಅರ್ಥಶಾಸ್ತ್ರಜ್ಞರಾಗಿ ಬೆಳೆದವರು. ಪಿ.ವಿ. ನರಸಿಂಹರಾವ್ ಅವರ ಸಂಪುಟದಲ್ಲಿ ಆರ್ಥಿಕ ಕಾರ್ಯದರ್ಶಿಗಳಾಗಿ ಸೇವೆ ಸಲ್ಲಿಸಿದ್ದರು. ಉದಾರೀಕರಣದ ಮೂಲಕ ಭಾರತವನ್ನು ವಿಶ್ವಮಟ್ಟಕ್ಕೆ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರ ವಹಿಸಿದವರು. ಅವರ ಅಪಾರ ಜ್ಞಾನ ಹಾಗೂ ದೂರದೃಷ್ಟಿಯ ಯೋಜನೆಗಳು, ಭಾರತವು ಆರ್ಥಿಕ ಮುಗ್ಗಟ್ಟಿನಿಂದ ಹೊರಬರಲು ಕಾರಣವಾಯಿತು ಎಂದರು. ದೇಶದ ಆರ್ಥಿಕತೆಯಲ್ಲಿ ಮನಮೋಹನ್ ಸಿಂಗ್ ರ ಹೆಜ್ಜೆಗುರುತು 2004 ರಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಸಾಧಿಸಿ, ಸೋನಿಯಾ ಗಾಂಧಿಯವರು ಪ್ರಧಾನಿಯಾಗಲು ನಿರಾಕರಿಸಿದ ಸಂದರ್ಭದಲ್ಲಿ ಮನಮೋಹನ್…

Read More

ನವದೆಹಲಿ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ದೆಹಲಿಯ ಅವರ ನಿವಾಸದಲ್ಲಿ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿದೆ. ಭಾರತದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನರಾಗಿದ್ದು, ರಾಷ್ಟ್ರೀಯ ಸ್ವಯಂ ಸೇವಾ ಸಂಘ ಸಂತಾಪ ಸೂಚಿಸಿದ್ದು, ಡಾ.ಮನಮೋಹನ್ ಸಿಂಗ್ ಅವರ ಕೊಡುಗೆಗಳನ್ನು ಭಾರತ ಸದಾ ನೆನಪಿಸಿಕೊಳ್ಳುತ್ತದೆ ಎಂದು ಹೇಳಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘ ಸಂತಾಪ ವ್ಯಕ್ತಪಡಿಸಿದೆ. ಮನಮೋಹನ್ ಸಿಂಗ್ ಅವರ ನಿಧನದಿಂದ ಇಡೀ ದೇಶವೇ ದುಃಖಿತವಾಗಿದೆ ಎಂದು ಸಂಘ ಹೇಳಿದೆ. ಮನಮೋಹನ್ ಸಿಂಗ್ ದೇಶದ ಅತ್ಯುನ್ನತ ಹುದ್ದೆಯನ್ನು ಅಲಂಕರಿಸಿದರು. ಅವರ ಕೊಡುಗೆ ಸದಾ ಸ್ಮರಣೀಯ. ರಾಷ್ಟ್ರೀಯ ಸ್ವಯಂಸೇವಕ ಸಂಘವು ಅವರ ಕುಟುಂಬಕ್ಕೆ ಮತ್ತು ಅವರ ಹಲವಾರು ಪ್ರೀತಿಪಾತ್ರರಿಗೆ ಮತ್ತು ಅಭಿಮಾನಿಗಳಿಗೆ ತನ್ನ ಆಳವಾದ ಸಂತಾಪವನ್ನು ವ್ಯಕ್ತಪಡಿಸುತ್ತದೆ ಎಂದು ಹೇಳಿದೆ.

Read More