Author: kannadanewsnow57

ತೆಲಂಗಾಣ : ದೇಶಾದ್ಯಂತ ಆತ್ಮಹತ್ಯೆಯ ಘಟನೆಗಳು ವೇಗವಾಗಿ ಹೆಚ್ಚುತ್ತಿವೆ. ಸಣ್ಣ ಪುಟ್ಟ ವಿಷಯಗಳಿಗೆ ಜನರು ಆತ್ಮಹತ್ಯೆ ಮಾಡಿಕೊಳ್ಳಲು ಆರಂಭಿಸಿದ್ದಾರೆ. ತೆಲಂಗಾಣದ ಮಂಚೇರಿಯಲ್ ಜಿಲ್ಲೆಯಲ್ಲಿ ಇಂತಹದೊಂದು ಪ್ರಕರಣ ಬೆಳಕಿಗೆ ಬಂದಿದ್ದು, ಆಂಗ್ಲ ಮಾಧ್ಯಮ ವ್ಯಾಸಂಗಕ್ಕೆ ಮನನೊಂದು 11ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆಂಗ್ಲ ಮಾಧ್ಯಮದಲ್ಲಿ ಓದಲು ಸಾಧ್ಯವಾಗುತ್ತಿಲ್ಲ ಎಂದು ವಿದ್ಯಾರ್ಥಿನಿ ಮನೆಯವರಿಗೆ ತಿಳಿಸಿದ್ದಳು ಆದರೆ ಮುಂದಿನ ವರ್ಷ ನೋಡೋಣ ಎಂದು ಮನೆಯವರು ಮುಂದೂಡಿದ್ದರು. ಬಳಿಕ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಂಚೇರಿಯಲ್ ಜಿಲ್ಲೆಯ ಪೋತನಪಲ್ಲಿ ಗ್ರಾಮದ ನಿವಾಸಿಗಳಾದ ನಲತುಕುರಿ ಬನೇಶ್ ಮತ್ತು ಕವಿತಾ ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಹಿರಿಯ ಮಗಳ ಹೆಸರು ಅನುಶ್ರೀ (16). ಅನುಶ್ರೀ ರಾಮಕೃಷ್ಣಾಪುರದ ಕಸ್ತೂರಬಾ ಶಾಲೆಯಲ್ಲಿ ಪ್ರಥಮ ವರ್ಷದ ಇಂಟರ್ ಮೀಡಿಯೇಟ್ ಓದುತ್ತಿದ್ದಳು. ವಿದ್ಯಾರ್ಥಿನಿ 10ನೇ ತರಗತಿವರೆಗೆ ತೆಲುಗು ಮಾಧ್ಯಮದಲ್ಲಿ ಓದಿದ್ದಳು. ಅದೇ ವೇಳೆಗೆ ಇಂಟರ್ ಮೀಡಿಯೇಟ್ ಪ್ರಥಮ ವರ್ಷದಲ್ಲಿ ಆಂಗ್ಲ ಮಾಧ್ಯಮ ಶಾಲೆಗೆ ಪ್ರವೇಶ ಸಿಕ್ಕಿತು. ತರಗತಿಯಲ್ಲಿ ವಿದ್ಯಾರ್ಥಿಗೆ ಏನೂ ಅರ್ಥವಾಗುತ್ತಿರಲಿಲ್ಲ. ತರಗತಿಯಲ್ಲಿ ಅವಳು…

Read More

ಬಳ್ಳಾರಿ : ಜಿಲ್ಲೆಯಲ್ಲಿ ಭತ್ತ ಕಟಾವು ಯಂತ್ರಕ್ಕೆ ಪ್ರತಿ ಗಂಟೆಗೆ ಗರಿಷ್ಠ ರೂ.2,300 ಮೀರದಂತೆ ಬಾಡಿಗೆಯನ್ನು ನಿಗದಿಪಡಿಸಲಾಗಿದ್ದು, ಹೆಚ್ಚಿನ ದರ ಪಡೆಯಲು ಮುಂದಾದರೆ ಅಂತಹವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ. ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ 91,225 ಹೆಕ್ಟೇರ್ ಪ್ರದೇಶದಲ್ಲಿ ಭತ್ತದ ಬೆಳೆಯ ಕ್ಷೇತ್ರ ಆವರಿಸಿದ್ದು, ಈಗಾಗಲೇ ಹಲವು ಕಡೆ ಕಟಾವು ಪ್ರಾರಂಭವಾಗಿದೆ. ಜಿಲ್ಲೆಯಲ್ಲಿ ಶೇ.95 ರಷ್ಟು ರೈತರು ಭತ್ತದ ಬೆಳೆಯನ್ನು ಭತ್ತ ಕಟಾವು ಯಂತ್ರಗಳ ಮೂಲಕ ಕಟಾವು ಮಾಡುತ್ತಿದ್ದು, ಪ್ರಸಕ್ತ ಸಾಲಿನಲ್ಲಿ ಬೆಳೆದ ಭತ್ತಕ್ಕೆ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಇಲ್ಲದ ಕಾರಣ ಹಾಗೂ ಅಕಾಲಿಕ ಮಳೆಯಿಂದ ರೈತರು ಸಂಕಷ್ಟದಲ್ಲಿರುವ ಪ್ರಯುಕ್ತ ಜಿಲ್ಲೆಯಲ್ಲಿ ಭತ್ತ ಬೆಳೆದ ರೈತರಿಗೆ ಹೆಚ್ಚಿನ ಆರ್ಥಿಕ ಹೊರೆಯಾಗಲಿದೆ. ಕಂಪ್ಲಿ ಮತ್ತು ಸಿರುಗುಪ್ಪ ತಾಲ್ಲೂಕುಗಳಲ್ಲಿ ಖಾಸಗಿ ಭತ್ತ ಕಟಾವು ಯಂತ್ರಗಳ ಮಾಲೀಕರು ರೈತರಿಂದ ಪ್ರತಿ ಗಂಟೆಗೆ ರೂ.2,500 ರಿಂದ ರೂ.3,000 ಗಳವರೆಗೆ ಬಾಡಿಗೆ ಹಣ ವಸೂಲಿ ಮಾಡುತ್ತಿರುವ…

Read More

ಬೆಂಗಳೂರು: ರಾಜ್ಯದಲ್ಲಿ ರೈತರ ಪೋಡಿ ಸಮಸ್ಯೆ ನಿವಾರಣೆಗೆ ಮಹತ್ವದ ಕ್ರಮ ವಹಿಸಲಾಗುತ್ತಿದೆ. ನವೆಂಬರ್.30ರ ಇಂದಿನಿಂದ ಡಿಜಿಟಲ್ ಪೋಡಿ ಅಭಿಯಾನ ಆರಂಭಗೊಳ್ಳುತ್ತಿದ್ದು, ರೈತರ ಪೋಡಿ ದುರಸ್ಥಿ ಸಮಸ್ಯೆ ಸಂಪೂರ್ಣ ಕ್ಲಿಯರ್ ಆಗಲಿದೆ ಅಂತ ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, “ರಾಜ್ಯದಲ್ಲಿ ಒಟ್ಟು 1,96,000 ಸರ್ಕಾರಿ ಸರ್ವೇ ನಂಬರ್ ಇದ್ದು, ನಾನಾ ಸರ್ಕಾರಿ ಯೋಜನೆಗಳ ಅಡಿ ಕಳೆದ 30-40 ವರ್ಷಗಳಿಂದ ಲಕ್ಷಾಂತರ ಜನರಿಗೆ ಸರ್ಕಾರಿ ಜಮೀನು ಮಂಜೂರಾಗಿದೆ. ಆದರೆ, 30-40 ವರ್ಷ ಆಗಿದ್ದರೂ ಜಮೀನಿಗೆ ಪೋಡಿ ದುರಸ್ಥಿ ಆಗಿಲ್ಲ. ದಾಖಲೆ ಪಕ್ಕ ಆಗಿಲ್ಲ. ಇಂತಹ ಪ್ರಕರಣಗಳೇ ರಾಜ್ಯದಲ್ಲಿ ಕನಿಷ್ಟ 25 ಲಕ್ಷ ಇರಬಹುದು. ಪಕ್ಕ ಪೋಡಿ ದುರಸ್ಥಿ ಮಾಡಲು ನಮೂನೆ 1 ರಿಂದ 5 ಹಾಗೂ 5 ರಿಂದ 10 ದಾಖಲೆ ಲಭ್ಯವಿರಬೇಕು. ಆದರೆ, ಈ ದಾಖಲೆಗಳಿಲ್ಲದೆ ಲಕ್ಷಾಂತರ ರೈತರು ಸಂಕಷ್ಟಕ್ಕೆ ಒಳಗಾದ್ದಾರೆ. ಸರ್ಕಾರಿ ಕಚೇರಿಗಳಿಗೆ ದಶಕಗಳಿಂದ ಅಲೆಯುತ್ತಿದ್ದರೂ ಪರಿಹಾರ ಮಾತ್ರ ಲಭ್ಯವಾಗಿಲ್ಲ” ಎಂದು ವಿಷಾದಿಸಿದರು. ಮುಂದುವರೆದು, “…

Read More

ನವದೆಹಲಿ : ಹಾವು ಕಡಿತವನ್ನು ಘೋಷಿತ ಕಾಯಿಲೆ ಎಂದು ಕೇಂದ್ರ ಸರ್ಕಾರವು ಘೋಷಿಸಿದ್ದು, ಜನತೆಗೆ ಇದುವರೆಗೂ ಇಂಥ ಘೋಷಣೆ ಮಾಡದ ರಾಜ್ಯಗಳಿಗೆ ಇಂಥ ಘೋಷಣೆ ಮಾಡುವಂತೆ ಸರ್ಕಾರ ತಿಳಿಸಿದೆ. ಹಾವು ಕಡಿತದಿಂದ ಪ್ರತಿವರ್ಷ ದೇಶದಲ್ಲಿ 50000 ಕ್ಕೂ ಹೆಚ್ಚು ಜನರು ಬಲಿಯಾಗುತ್ತಿದ್ದು, ಇದನ್ನು ತಡೆಯಲು ಕೇಂದ್ರ ಸರ್ಕಾರ ಈ ಘೋಷಣೆ ಮಾಡಿದೆ. ಹಾವು ಕಡಿತದ ಪ್ರಕರಣಗಳು ಮತ್ತು ಸಾವುಗಳನ್ನು ರಾಜ್ಯ ಸಾರ್ವಜನಿಕ ಆರೋಗ್ಯ ಕಾಯಿದೆಯ ಸಂಬಂಧಿತ ನಿಬಂಧನೆಗಳು ಅಥವಾ ಇತರ ಅನ್ವಯವಾಗುವ ಶಾಸನಗಳ ಅಡಿಯಲ್ಲಿ ಎಲ್ಲಾ ರಾಜ್ಯಗಳು “ಅಧಿಸೂಚಿಸಬಹುದಾದ ರೋಗ” ವನ್ನಾಗಿ ಮಾಡಲು ಕೇಂದ್ರವು ಎಲ್ಲಾ ರಾಜ್ಯಗಳನ್ನು ಒತ್ತಾಯಿಸಿದೆ, ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆರೋಗ್ಯ ಸೌಲಭ್ಯಗಳು (ವೈದ್ಯಕೀಯ ಕಾಲೇಜುಗಳು ಸೇರಿದಂತೆ) ಎಲ್ಲಾ ಶಂಕಿತ ವರದಿಗಳನ್ನು ಕಡ್ಡಾಯವಾಗಿ ವರದಿ ಮಾಡುತ್ತವೆ, ಸಂಭವನೀಯ ಹಾವು ಕಡಿತ ಪ್ರಕರಣಗಳು ಮತ್ತು ಸಾವುಗಳು. ಹಾವು ಕಡಿತವು ಸಾರ್ವಜನಿಕ ಆರೋಗ್ಯದ ಕಾಳಜಿಯ ವಿಷಯವಾಗಿದೆ ಮತ್ತು ಕೆಲವು ಸಂದರ್ಭಗಳಲ್ಲಿ ಅವು ಮರಣ, ರೋಗ ಮತ್ತು ಅಂಗವೈಕಲ್ಯಕ್ಕೆ ಕಾರಣವಾಗುತ್ತವೆ ಎಂದು…

Read More

ಬೆಂಗಳೂರು : ರಾಜ್ಯ ಸರ್ಕಾರವು ರೈತರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಒಂದು ವಾರದಲ್ಲಿ ಬೆಳೆಹಾನಿಯಾದ ರೈತರ ಖಾತೆಗೆ ಪರಿಹಾರ ಮೊತ್ತ ಜಮಾ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಹಿಂಗಾರು ಮಳೆ ಅವಧಿಯಲ್ಲಿ 1.58 ಲಕ್ಷ ಹೆಕ್ಟರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ಜಂಟಿ ಸಮೀಕ್ಷೆ ನಡೆಸಲಾಗಿದೆ. ಹಿಂಗಾರು ಮಳೆಯಿಂದ ಅಂದಾಜು 120 ಕೋಟಿ ರೂ.ನಷ್ಟು ನಷ್ಟ ಉಂಟಾಗಿದೆ. ರೈತರಿಗೆ ಪರಿಹಾರ ನೀಡುವಂತೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಪ್ರಸಕ್ತ ಸಾಲಿನಲ್ಲಿ 24,500 ಕೋಟಿ ರೂ. ಆದಾಯ ಸಂಗ್ರಹ ಗುರಿ ಹೊಂದಿದ್ದು, ಆದಾಯ ಸಂಗ್ರಹದಲ್ಲಿ ಕಂದಾಯ ಇಲಾಖೆ ಶೇಕಡ 26ರಷ್ಟು ಬೆಳವಣಿಗೆ ದರ ಹೊಂದಿದೆ. ಅಕ್ಟೋಬರ್ ಅಂತ್ಯದ ವೇಳೆಗೆ ಸ್ಟ್ಯಾಂಪ್ಸ್, ರಿಜಿಸ್ಟ್ರೇಷನ್ ಸೇರಿದಂತೆ ವಿವಿಧ ಮೂಲಗಳಿಂದ 15000 ಕೋಟಿ ರೂ. ಸಂಗ್ರಹಿಸಲಾಗಿದೆ. ಮುಂದಿನ ಐದು ತಿಂಗಳಲ್ಲಿ ಗುರಿ ತಲುಪಲಿದೆ ಎಂದು ತಿಳಿಸಿದ್ದಾರೆ.

Read More

ಬೆಂಗಳೂರು : ಸರ್ಕಾರದ ವತಿಯಿಂದ ಒಂದು ಬಾರಿ ಪರಿಹಾರ(OTS) ಯೋಜನೆಯನ್ನು ಬಿಬಿಎಂಪಿಯಲ್ಲಿ ದಿನಾಂಕ:30-11-2024 ರವರೆಗೆ ಅವಕಾಶ ಇದ್ದು, ಬಿಬಿಎಂಪಿ ಐತಿಹಾಸಿಕ ಒಂದು ಬಾರಿ ಪರಿಹಾರ(OTS) ಯೋಜನೆಯಡಿ ಆಸ್ತಿ ತೆರಿಗೆಯ ಬಾಕಿದಾರರಿಗೆ ಬಡ್ಡಿ ಮತ್ತು ದಂಡ ಮನ್ನಾ ಮಾಡಲಾಗಿದೆ. ಒಂದು ಬಾರಿ ಪರಿಹಾರ ಯೋಜನೆ (ಒಟಿಎಸ್‌) ನವೆಂಬರ್‌ 30 ರ ಇಂದು ಮುಕ್ತಾಯಗೊಳ್ಳಲಿದ್ದು, ಆ ವೇಳೆಗೆ ಒಟ್ಟು ₹4 ಸಾವಿರ ಕೋಟಿ ಆಸ್ತಿ ತೆರಿಗೆ ಸಂಗ್ರಹಿಸುವ ಗುರಿ ಹೊಂದಲಾಗಿದೆ. ಬಡ್ಡಿ ಮತ್ತು ದಂಡಕ್ಕೆ ವಿನಾಯಿತಿ ನೀಡಲಾಗಿರುವ ಒಟಿಎಸ್‌ ಯೋಜನೆಯನ್ನು ನಾಗರಿಕರು ಸದುಪಯೋಗಪಡಿಸಿಕೊಳ್ಳಬೇಕು. ಇಲ್ಲದಿದ್ದರೆ ಡಿಸೆಂಬರ್‌ 1 ರಿಂದ ಸುಮಾರು ಎರಡು ಪಟ್ಟು ಹೆಚ್ಚು ಪಾವತಿಸಬೇಕಾಗುತ್ತದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್‌ ಗಿರಿನಾಥ್‌ ತಿಳಿಸಿದ್ದಾರೆ. ಆದರೆ ಆಸ್ತಿ ತೆರಿಗೆ ಬಾಕಿ ಇರುವ ನಾಗರೀಕರು ಇದರ ಲಾಭವನ್ನು ಸರಿಯಾಗಿ ಪಡೆಯುತ್ತಿಲ್ಲ. 250 ಕೋಟಿ ರೂ.ಗಿಂತ ಹೆಚ್ಚು ಬಾಕಿ ಇರುವ 1,6000ಕ್ಕೂ ಹೆಚ್ಚು ಪರಿಷ್ಕರಣೆ ಪ್ರಕರಣಗಳು ಮತ್ತು 400 ಕೋಟಿ ರೂ.ಗಿಂತ ಹೆಚ್ಚು ಬಾಕಿ ಇರುವ…

Read More

ಬೆಂಗಳೂರು : ರಾಜ್ಯ ಸರ್ಕಾರವು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 34 ಭೂ ದಾಖಲೆಯ ಸಹಾಯಕ ನಿರ್ದೇಶಕರು, 746 ಸರ್ಕಾರಿ ಸರ್ವೆಯರ್ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಇದರೊಂದಿಗೆ 1191 ಪರವಾನಿಗೆ ಹೊಂದಿದ ಸರ್ವೆಯರ್ ಗಳನ್ನು ಹೊರಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗಿದೆ. ಇನ್ನೂ ಒಂದು ಸಾವಿರ ಪರವಾನಿಗೆ ಹೊಂದಿದ ಸರ್ವೆಯರ್ ಗಳನ್ನು ನೇಮಿಸಿಕೊಳ್ಳುವಂತೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ. ಇನ್ನು ರಾಜ್ಯದಲ್ಲಿ ಒಟ್ಟು 1,96,000 ಸರ್ಕಾರಿ ಸರ್ವೇ ನಂಬರ್ ಇದ್ದು, ನಾನಾ ಸರ್ಕಾರಿ ಯೋಜನೆಗಳ ಅಡಿ ಕಳೆದ 30-40 ವರ್ಷಗಳಿಂದ ಲಕ್ಷಾಂತರ ಜನರಿಗೆ ಸರ್ಕಾರಿ ಜಮೀನು ಮಂಜೂರಾಗಿದೆ. ಆದರೆ, 30-40 ವರ್ಷ ಆಗಿದ್ದರೂ ಜಮೀನಿಗೆ ಪೋಡಿ ದುರಸ್ಥಿ ಆಗಿಲ್ಲ. ದಾಖಲೆ ಪಕ್ಕ ಆಗಿಲ್ಲ. ಇಂತಹ ಪ್ರಕರಣಗಳೇ ರಾಜ್ಯದಲ್ಲಿ ಕನಿಷ್ಟ 25 ಲಕ್ಷ ಇರಬಹುದು.…

Read More

ಬೆಂಗಳೂರು: ಕೆ ಎಸ್ ಆರ್ ಟಿಸಿ ಅಂತರ ನಿಗಮ ವರ್ಗಾವಣೆ ನಿರೀಕ್ಷೆಯಲ್ಲಿ ಇದ್ದಂತ ನೌಕರರಿಗೆ ರಾಜ್ಯದ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಅದೇ ಅಂತರ ನಿಗಮ ವರ್ಗಾವಣೆಗೆ ಗ್ರೀನ್ ಸಿಗ್ನಲ್ ನೀಡಿದೆ. ಈ ಕುರಿತು ಸಾರಿಗೆ ಮತ್ತು ಮುಜರಾಯಿ ಇಲಾಖೆಯ ಸಚಿವ ರಾಮಲಿಂಗಾರೆಡ್ಡಿ ಮಾಹಿತಿ ಹಂಚಿಕೊಂಡಿದ್ದು, ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ನೌಕರರ 2023ನೇ ಸಾಲಿನ ಅಂತರ ನಿಗಮ ವರ್ಗಾವಣೆ ಪ್ರಕ್ರಿಯೆ ದಿನಾಂಕ: 05-07-2023 ರ ಬೆಳಿಗ್ಗೆ 11:00 ಗಂಟೆಯಿಂದ ಪ್ರಾರಂಭವಾಗಿದ್ದು, ದಿನಾಂಕ:31-12-2023 ರ ಸಂಜೆ 5:30 ರವರೆಗೆ ಆನ್-ಲೈನ್ ಮೂಲಕ www.ksrtc.org/transfer ರಲ್ಲಿ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿರುತ್ತೆ ಎಂದಿದ್ದಾರೆ. ಇದೇ ಪ್ರಥಮ ಬಾರಿಗೆ ಶೇ.40ಕ್ಕಿಂತ ಹೆಚ್ಚಿನ ಅಂಗವಿಕಲತೆ ಹೊಂದಿರುವ ನೌಕರರು ಹಾಗೂ ತೀವ್ರ ತರಹದ ಅನಾರೋಗ್ಯ (ಹೃದಯ ರೋಗ, ಕ್ಯಾನ್ಸರ್, ಸ್ಪಯಿನಾಲ್ ಕಾರ್ಡ್, ಕಿಡ್ನಿ ವೈಪಲ್ಯ ಹಾಗೂ ಮೆದಳು ಸಂಭಂದಿಸಿದ ಖಾಯಿಲೆಗಳು) ನೌಕರರ ಪ್ರಕರಣಗಳಿಗೆ ಅಂತರ ನಿಗಮ ವರ್ಗಾವಣೆಯ ಶೇ 5 ರಷ್ಟು ಹುದ್ದೆಗಳನ್ನು ಮೀಸಲಿರಿಸಲಾಗಿದೆ ಎಂದು…

Read More

ನವದೆಹಲಿ : ನೀವು ಪ್ರತಿ ತಿಂಗಳು ಪಿಂಚಣಿ ಪಡೆಯುತ್ತಿದ್ದರೆ ನಿಮಗೆ ಒಂದು ಪ್ರಮುಖ ಸುದ್ದಿ ಬಂದಿದೆ. ನವೆಂಬರ್ 30 ರೊಳಗೆ ನೀವು ಜೀವನ ಪ್ರಮಾಣಪತ್ರವನ್ನು ಸಲ್ಲಿಸದಿದ್ದರೆ, ನಿಮ್ಮ ಪಿಂಚಣಿ ನಿಲ್ಲಬಹುದು. ಪಿಂಚಣಿ ಪಡೆಯಲು, ಪಿಂಚಣಿದಾರರು ಪ್ರತಿ ವರ್ಷ ಜೀವನ ಪ್ರಮಾಣಪತ್ರವನ್ನು ಸಲ್ಲಿಸಬೇಕಾಗುತ್ತದೆ. ಲೈಫ್ ಸರ್ಟಿಫಿಕೇಟ್ ಏಕೆ ತುಂಬಾ ಮುಖ್ಯ ಮತ್ತು ಅದನ್ನು ಸಲ್ಲಿಸುವ ವಿಧಾನ ಏನು ಎಂದು ತಿಳಿಯಿರಿ. ಡಿಜಿಟಲ್ ಲೈಫ್ ಸರ್ಟಿಫಿಕೇಟ್ ಎಂದರೇನು? ಈ ಡಿಜಿಟಲ್ ಲೈಫ್ ಪ್ರಮಾಣಪತ್ರವು ಬಯೋಮೆಟ್ರಿಕ್ ಸೇವೆಯಾಗಿದೆ, ಇದರಲ್ಲಿ ಪಿಂಚಣಿದಾರರು ತಮ್ಮ ಗುರುತನ್ನು ಪರಿಶೀಲಿಸಲು ಮುಖ, ಫಿಂಗರ್‌ಪ್ರಿಂಟ್ ಅಥವಾ ಐರಿಶ್ ಬಯೋಮೆಟ್ರಿಕ್ ತಂತ್ರಜ್ಞಾನವನ್ನು ಬಳಸಬೇಕಾಗುತ್ತದೆ. ಮೊದಲು ಪಿಂಚಣಿ ವಿತರಣಾ ಕೇಂದ್ರದಲ್ಲಿ ವೈಯಕ್ತಿಕವಾಗಿ ಠೇವಣಿ ಇಡಬೇಕಿತ್ತು. ಈ ರೀತಿಯಲ್ಲಿ ಜೀವನ ಪ್ರಮಾಣಪತ್ರವನ್ನು ಸಲ್ಲಿಸಿ ಕೇಂದ್ರ ಸರ್ಕಾರವು ಡಿಜಿಟಲ್ ಲೈಫ್ ಸರ್ಟಿಫಿಕೇಟ್ ಸೌಲಭ್ಯವನ್ನು ಪ್ರಾರಂಭಿಸಿದ್ದು, ಪಿಂಚಣಿದಾರರು ಈ ಕೆಲಸವನ್ನು ಆನ್‌ಲೈನ್‌ನಲ್ಲಿ ಮತ್ತು ಅವರ ಮನೆಯ ಸೌಕರ್ಯದಿಂದ ಸುಲಭವಾಗಿ ಪೂರ್ಣಗೊಳಿಸಲು ಅವಕಾಶವನ್ನು ನೀಡುತ್ತದೆ. ಕೆಲವು ಮುಖ್ಯ ಸ್ಥಳಗಳಿಗೆ ಭೇಟಿ ನೀಡುವ…

Read More

ಬೆಂಗಳೂರು : 2024-25ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು ಮಹತ್ವದ ಬದಲಾವಣೆ ಮಾಡಿರುವುದಾಗಿ ದಿನಪತ್ರಿಕೆಗಳಲ್ಲಿ ಸುದ್ದಿ ಪ್ರಕಟವಾಗಿರುತ್ತದೆ. ಆದರೆ 2024-25ನೇ ಸಾಲಿನ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಮಂಡಳಿಯು ಯಾವುದೇ ಬದಲಾವಣೆ ಮಾಡಿರುವುದಿಲ್ಲ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಅಧ್ಯಕ್ಷರು ತಿಳಿಸಿದ್ದಾರೆ. ಮುಂದಿನ ಶೈಕ್ಷಣಿಕ ವರ್ಷದಲ್ಲಿ ವಿಷಯ ತಜ್ಞರ ಸಮಿತಿ ರಚಿಸಿ, ಸದರಿ ಸಮಿತಿ ನೀಡುವ ವರದಿಯಂತೆ ಕ್ರಮವಹಿಸಲಾಗುವುದು. ಹಾಗಾಗಿ ಈ ಸಾಲಿನ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿ ಯಾವುದೇ ಬದಲಾವಣೆ ಇಲ್ಲದೆ ಕಳೆದ ಸಾಲಿನಂತೆಯೇ ಮುಂದುವರಿಸಲಾಗಿದ್ದು, ಸದ್ಯದಲ್ಲೇ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಮಂಡಳಿಯ ಜಾಲತಾಣದಲ್ಲಿ ಪ್ರಕಟಿಸಲಾಗುವುದು. ಈ ಬಗ್ಗೆ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪೋಷಕರು ಯಾವುದೇ ಗೊಂದಲ ಹಾಗೂ ಆತಂಕಕ್ಕೆ ಒಳಗಾಗಬಾರದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಅಧ್ಯಕ್ಷರು ಸ್ಪಷ್ಠೀಕರಣ ನೀಡಿದ್ದಾರೆ. https://twitter.com/KarnatakaVarthe/status/1862141099646792168

Read More