Subscribe to Updates
Get the latest creative news from FooBar about art, design and business.
Author: kannadanewsnow57
ಚಿತ್ರದುರ್ಗ : ಬೆಲೆ ಏರಿಕೆ, ಹಣದುಬ್ಬರ, ನಿರುದ್ಯೋಗದ ಸಮಸ್ಯೆಯಿಂದ ಬಳಲುತ್ತಿದ್ದ ಜನತೆಗೆ ರಾಜ್ಯ ಸರ್ಕಾರದ ಪಂಚ ಗ್ಯಾರೆಂಟಿ ಯೋಜನೆಗಳು ಆಸರೆಯಾಗಿವೆ. ಪದೇ ಪದೇ ಬರಗಾಲಕ್ಕೆ ತುತ್ತಾಗುವ ಚಿತ್ರದುರ್ಗ ಜಿಲ್ಲೆಯ ಮಹಿಳೆಯರ ಸ್ವಾವಲಂಬಿ ಬದುಕಿಗೆ ಗೃಹಲಕ್ಷ್ಮೀ ಯೋಜನೆ ವರದಾನವಾಗಿದೆ. ಮಕ್ಕಳ ಶಾಲೆ ಶುಲ್ಕ, ವೈದ್ಯಕೀಯ ಖರ್ಚು, ದಿನಸಿ ಖರೀದಿ ಹೀಗೆ ನಾನಾ ರೀತಿಯಲ್ಲಿ ಗೃಹಲಕ್ಷ್ಮೀ ಯೋಜನೆಯಡಿ ಮನೆಯ ಯಜಮಾನಿಗೆ ಪ್ರತಿ ತಿಂಗಳು ನೀಡುವ ರೂ.2000 ಸದ್ಬಳಕೆಯಾಗುತ್ತಿದೆ. ಇದರೊಂದಿಗೆ ಕೆಲ ಮಹಿಳೆಯರು ಸ್ವಂತ ವ್ಯಾಪಾರ, ಹೊಲಿಗೆ ಯಂತ್ರ ಖರೀದಿ, ಹೈನುಗಾರಿಕೆ, ಮನೆಗೆ ಪ್ರಿಡ್ಜ್ ಖರೀದಿಸಿ ಗೃಹಲಕ್ಷ್ಮೀ ಯೋಜನೆಯ ಸದುಯೋಗ ಪಡೆದುಕೊಂಡಿದ್ದಾರೆ. ಜಿಲ್ಲೆಯಲ್ಲಿ ಕಳೆದ 2023 ರ ಆಗಸ್ಟ್ 30 ರಂದು ರಾಜ್ಯ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಅವರ ನೇತೃತ್ವದಲ್ಲಿ ಜರುಗಿದ ಸಮಾರಂಭದಲ್ಲಿ ಗೃಹಲಕ್ಷ್ಮಿ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಲಾಗಿತ್ತು. ಇದೀಗ ಈ ಯೋಜನೆಯ ಸದ್ವಿನಿಯೋಗದ ಪರಿಣಾಮಗಳು ಜಿಲ್ಲೆಯಲ್ಲಿ ಗೋಚರಿಸಲಾರಂಭಿಸಿದ್ದು, ಮಹಿಳೆಯರ ಪಾಲಿಗೆ ಈ ಯೋಜನೆ…
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ 2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ತುಟ್ಟಿ ಭತ್ಯೆಯ ದರಗಳನ್ನು ಪರಿಷ್ಕರಿಸಿ ಅಧಿಕೃತ ಆದೇಶವನ್ನು ಹೊರಡಿಸಿದೆ. ಇಂದು ರಾಜ್ಯ ಸರ್ಕಾರದಿಂದ ನಡವಳಿಯನ್ನು ಹೊರಡಿಸಲಾಗಿತ್ತು, ದಿನಾಂಕ: 23.08.2024ರ ಸರ್ಕಾರಿ ಆದೇಶದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ 2024ರ ಪರಿಷ್ಕೃತ ವೇತನ ಶ್ರೇಣಿಗಳ ಸೌಲಭ್ಯಗಳನ್ನು ದಿನಾಂಕ: 01.08.2024 ರಿಂದ ಜಾರಿಗೆ ಬರುವಂತೆ ಅನುಷ್ಠಾನಗೊಳಿಸಿ ಆದೇಶಗಳನ್ನು ಹೊರಡಿಸಲಾಗಿರುತ್ತದೆ ಎಂದು ಹೇಳಿದೆ. ಮುಂದುವರೆದು, ಸದರಿ ಸರ್ಕಾರಿ ಆದೇಶದಲ್ಲಿ ರಾಜ್ಯ ಸರ್ಕಾರಿ ನೌಕರರು ಮತ್ತು ರಾಜ್ಯ ಸರ್ಕಾರದ ನಿವೃತ್ತಿ ವೇತನದಾರರಿಗೆ 2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ತುಟ್ಟಿ ಭತ್ಯೆ ಮಂಜೂರಾತಿಯನ್ನು ಕ್ರಮಬದ್ಧಗೊಳಿಸಲು ಅವಕಾಶಗಳನ್ನು ಕಲ್ಪಿಸಲಾಗಿರುತ್ತದೆ ಎಂದಿದೆ. ಭಾರತ ಸರ್ಕಾರದ ಆದೇಶವನ್ನು ರಾಜ್ಯ ವೇತನ ಆಯೋಗದ ಶಿಫಾರಸ್ಸುಗಳ ಬೆಳಕಿನಲ್ಲಿ ಸರ್ಕಾರವು ಪರಿಗಣಿಸಿರುತ್ತದೆ ಮತ್ತು 6ನೇ ರಾಜ್ಯ ಈ ಕೆಳಕಂಡ ಆದೇಶಗಳನ್ನು ಹೊರಡಿಸಿದೆ ಎಂದು ತಿಳಿಸಿದೆ. 2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿದ್ದ ರಾಜ್ಯ ಸರ್ಕಾರಿ ನೌಕರರುಗಳಿಗೆ ಜುಲೈ 2024ರ ಮಾಹೆಗೆ ಅನ್ವಯವಾಗುವಂತೆ ತುಟ್ಟಿ ಭತ್ಯೆಯ ದರಗಳನ್ನು…
ನವದೆಹಲಿ : ಉದ್ಯೋಗಾಕಾಂಕ್ಷಿಗಳಿಗೆ ಭಾರತೀಯ ರೈಲ್ವೆ ಇಲಾಖೆಯು ಸಿಹಿಸುದ್ದಿ ನೀಡಿದ್ದು, 1,785 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, 10ನೇ ಅಥವಾ ಐಟಿಐ ಉತ್ತೀರ್ಣರಾದವರು ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿಯ ಪ್ರಾರಂಭ ದಿನಾಂಕವನ್ನು ನವೆಂಬರ್ 28, 2024 ರಿಂದ ಇರಿಸಲಾಗಿದೆ ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಡಿಸೆಂಬರ್ 27, 2024 ರವರೆಗೆ ನಿಗದಿಪಡಿಸಲಾಗಿದೆ. ಅತ್ಯಂತ ಸುವರ್ಣಾವಕಾಶವಿದ್ದು, ಆದ್ದರಿಂದ ಸಾಧ್ಯವಾದಷ್ಟು ಬೇಗ ಅರ್ಜಿ ಸಲ್ಲಿಸಿ. ಈ ಹುದ್ದೆಯಲ್ಲಿ ವಯೋಮಿತಿ, ಶೈಕ್ಷಣಿಕ ಅರ್ಹತೆ, ಅರ್ಜಿ ಶುಲ್ಕ, ವೇತನದ ವಿವರಗಳಂತಹ ನೇಮಕಾತಿ ಕುರಿತು ಸಂಪೂರ್ಣ ಮಾಹಿತಿಯನ್ನು ನೀವು ಪಡೆಯುತ್ತೀರಿ. ರೈಲ್ವೆ ಎಸ್ಇಆರ್ ಹುದ್ದೆ ರೈಲ್ವೇ ನೇಮಕಾತಿ ಕೋಶ, ಆಗ್ನೇಯ ರೈಲ್ವೆಯು ಈ ಅಪ್ರೆಂಟಿಸ್ ನೇಮಕಾತಿಯ ಅಧಿಕೃತ ಅಧಿಸೂಚನೆಯನ್ನು 27 ನವೆಂಬರ್ 2024 ರಂದು PDF ರೂಪದಲ್ಲಿ ಬಿಡುಗಡೆ ಮಾಡಿದೆ. ಹೊರಡಿಸಿದ ಜಾಹೀರಾತಿನ ಪ್ರಕಾರ, ವಿವಿಧ ಕಾರ್ಯಾಗಾರಗಳು ಮತ್ತು ಘಟಕಗಳ ಹೆಸರುಗಳನ್ನು ಒಳಗೊಂಡಿರುವ ವಿವಿಧ ಅಪ್ರೆಂಟಿಸ್ ಹುದ್ದೆಗಳಿಗೆ ಒಟ್ಟು 1785 ಖಾಲಿ ಹುದ್ದೆಗಳನ್ನು ಬಿಡುಗಡೆ ಮಾಡಲಾಗಿದೆ. ನೀವು…
ಬೆಂಗಳೂರು : ಬೆಂಗಳೂರಿನ ಹಲವಾರು ಪಾಕೆಟ್ಗಳಲ್ಲಿ ಶುಕ್ರವಾರ (ನವೆಂಬರ್ 29) ನಿರ್ವಹಣಾ ಕಾರ್ಯದಿಂದಾಗಿ ವಿದ್ಯುತ್ ಕಡಿತಗೊಳ್ಳಲಿದೆ. ಬೆಳಗ್ಗೆ 10:00 ರಿಂದ ಸಂಜೆ 4:00 ಗಂಟೆಯವರೆಗೆ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಸ್ಥಗಿತಗಳು ನಗರದಾದ್ಯಂತ ವಿವಿಧ ಸ್ಥಳಗಳು ಮತ್ತು ಕೆಲವು ಗ್ರಾಮೀಣ ಪ್ರದೇಶಗಳ ಮೇಲೆ ಪರಿಣಾಮ ಬೀರುತ್ತವೆ. ನವೆಂಬರ್ 29 ರ ಇಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ದೂರದರ್ಶನಕೇಂದ್ರ, ಮುನ್ಸಿಪಲ್ ಕಾರ್ಪೊರೇಷನ್, ಸರ್ಕ್ಯೂಟ್ ಹೌಸ್, ಪಿಜೆ ಬಡವಣೆ (ಪ್ರದೇಶ 1, 6, 7, 8), ಎಂಸಿಸಿ ಎ ಬ್ಲಾಕ್, ವಿನೋಭಾ ನಗರ (ಪ್ರದೇಶ 1, 2, 3), ಸೂಪರ್ ಮಾರ್ಕೆಟ್, ಪಿಜೆ ವಿಸ್ತರಣೆ (ಪ್ರದೇಶ 2, 3 , 4, 5, 6, 7), ರಾಮ್ & ಕೋ ಸರ್ಕಲ್, ಅರುಣಾ ಥಿಯೇಟರ್, ಪೊಲೀಸ್ ಕ್ವಾರ್ಟರ್ಸ್, MS ಕಟ್ಟಡದ ಸುತ್ತಮುತ್ತಲಿನ ಪ್ರದೇಶ, ಎಸ್ಎಸ್ ಲೇಔಟ್ ಎ ಬ್ಲಾಕ್, ಎಸ್ಎಸ್ ಮಾಲ್, ಗ್ಲಾಸ್ ಹೌಸ್ ಏರಿಯಾ, ಶಾಮನೂರು ರಸ್ತೆ, ಲಕ್ಷ್ಮಿ ಫ್ಲೋರ್ ಮಿಲ್, ಸಿದ್ದವೀರಪ್ಪ ಬಡವಣೆ,…
ನವದೆಹಲಿ: ರಾಷ್ಟ್ರವನ್ನು ಆವರಿಸಿದ ಭಾವನಾತ್ಮಕ ಚರ್ಚೆಯ ನಂತರ ಆಸ್ಟ್ರೇಲಿಯಾ ಗುರುವಾರ 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ನಿಷೇಧವನ್ನು ಕಾನೂನಾಗಿ ಅಂಗೀಕರಿಸಿತು, ಇದು ಬಿಗ್ ಟೆಕ್ ಅನ್ನು ಗುರಿಯಾಗಿಸಿಕೊಂಡು ಕಠಿಣ ನಿಯಮಗಳಲ್ಲಿ ಒಂದಾಗಿದೆ. ಇನ್ಸ್ಟಾಗ್ರಾಮ್ ಮತ್ತು ಫೇಸ್ಬುಕ್ ಮಾಲೀಕ ಮೆಟಾದಿಂದ ಟಿಕ್ಟಾಕ್ವರೆಗೆ ಟೆಕ್ ದೈತ್ಯರು ಅಪ್ರಾಪ್ತ ವಯಸ್ಕರು ಲಾಗಿನ್ ಆಗುವುದನ್ನು ನಿಲ್ಲಿಸಲು ಅಥವಾ 49.5 ಮಿಲಿಯನ್ ಡಾಲರ್ (ಯುಎಸ್ಡಿ 32 ಮಿಲಿಯನ್) ವರೆಗೆ ದಂಡವನ್ನು ಎದುರಿಸಲು ಕಾನೂನು ಒತ್ತಾಯಿಸುತ್ತದೆ. ಇದನ್ನು ಜಾರಿಗೊಳಿಸುವ ವಿಧಾನಗಳ ಪ್ರಯೋಗವು ಜನವರಿಯಲ್ಲಿ ಪ್ರಾರಂಭವಾಗಲಿದ್ದು, ನಿಷೇಧವು ಒಂದು ವರ್ಷದಲ್ಲಿ ಜಾರಿಗೆ ಬರಲಿದೆ. ಸಾಮಾಜಿಕ ಮಾಧ್ಯಮ ಕನಿಷ್ಠ ವಯಸ್ಸಿನ ಮಸೂದೆಯು ಯುವಜನರ ಮೇಲೆ ಮಾನಸಿಕ ಆರೋಗ್ಯದ ಪರಿಣಾಮದ ಬಗ್ಗೆ ಕಳವಳದ ನಡುವೆ ಸಾಮಾಜಿಕ ಮಾಧ್ಯಮದಲ್ಲಿ ವಯಸ್ಸಿನ ನಿರ್ಬಂಧವನ್ನು ಶಾಸನ ಮಾಡಲು ಯೋಜಿಸಿರುವ ಅಥವಾ ಕಾನೂನು ಮಾಡಲು ಯೋಜಿಸಿರುವ ಹೆಚ್ಚುತ್ತಿರುವ ಸರ್ಕಾರಗಳಿಗೆ ಆಸ್ಟ್ರೇಲಿಯಾವನ್ನು ಪರೀಕ್ಷಾ ಪ್ರಕರಣವಾಗಿ ರೂಪಿಸುತ್ತದೆ. ಫ್ರಾನ್ಸ್ ಮತ್ತು ಕೆಲವು ಯುಎಸ್ ರಾಜ್ಯಗಳು ಸೇರಿದಂತೆ ದೇಶಗಳು ಪೋಷಕರ…
ಬೆಂಗಳೂರು : 2024-25ನೇ ಸಾಲಿನಲ್ಲಿ ಮೆಟ್ರಿಕ ನಂತರದ ಕೋರ್ಸಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಸ್ನಾತಕೋತ್ತರ ಪದವಿ, ವೃತ್ತಿ ಪರ ಪದವಿ ಹಾಗೂ ವೃತ್ತಿ ಪರ ಸ್ನಾತಕೋತ್ತರ ಪದವಿಗಳ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮೆಟ್ರಿಕ-ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ, ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸುವಂತೆ ಪೋಷಕರು, ವಿದ್ಯಾರ್ಥಿಗಳು, ಶಿಕ್ಷಣ ಸಂಸ್ಥೆಗಳು ಮನವಿ ಸಲ್ಲಿಸಿದ್ದು, ಪ್ರಯುಕ್ತ ವಿದ್ಯಾರ್ಥಿಗಳ ಹಿತದೃಷ್ಟಿಯಿಚಿದ ನವೆಂಬರ 30, 2024 ರವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ ದೂರವಾಣಿ ಸಂಖ್ಯೆ: 8050770005, ಅಥವಾ bcwdhelpline@gmail.com ಗೆ ಭೇಟಿ ನೀಡಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಳ್ಳಾರಿ : ಪ್ರಸ್ತಕ ಸಾಲಿನಲ್ಲಿ ಮುಂಗಾರು ಋತುವಿನ ಕನಿಷ್ಠ ಬೆಂಬಲ ಯೋಜನೆಯಡಿ ಭತ್ತ, ರಾಗಿ, ಜೋಳ ಖರೀದಿ ಮಾಡಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರಾದ ಸಕೀನ ಅವರು ತಿಳಿಸಿದ್ದಾರೆ. ಭತ್ತ ಕ್ವಿಂಟಾಲ್ಗೆ ರೂ.2300, ರಾಗಿ ಕ್ವಿಂಟಾಲ್ಗೆ ರೂ.4290, ಬಿಳಿ ಜೋಳ(ಮಾಲ್ದಂಡಿ) ಕ್ವಿಂಟಾಲ್ಗೆ ರೂ.3421, ಬಿಳಿಜೋಳ (ಹೈಬ್ರಿಡ್ ) ಕ್ವಿಂಟಾಲ್ಗೆ ರೂ.3371 ನಂತೆ ಖರೀದಿಸಲು ನಿಗದಿಯಾಗಿರುತ್ತದೆ. ಖರೀದಿ ಕೇಂದ್ರ: ಜಿಲ್ಲೆಯಲ್ಲಿ ಬಳ್ಳಾರಿಯ ಎಪಿಎಂಸಿ, ಮೋಕಾ, ಕುರುಗೋಡು, ಕಂಪ್ಲಿ, ಸಿರುಗುಪ್ಪ, ಕರೂರು ಮತ್ತು ಹಚ್ಚೋಳ್ಳಿ ಸೇರಿದಂತೆ ಒಟ್ಟು 08 ಖರೀದಿ ಕೇಂದ್ರಗಳನ್ನು ಗುರುತಿಸಲಾಗಿದೆ. ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಈಗಾಗಲೇ ಟಾಸ್ಕ್ಫೋರ್ಸ್ ಸಮಿತಿ ಸಭೆ ನಡೆಸಿ ಸಿದ್ಧತೆ ಮಾಡಿಕೊಳ್ಳಲು ಸಂಬAಧಪಟ್ಟ ಏಜೆನ್ಸಿಯವರಿಗೆ ಸೂಚನೆ ನೀಡಲಾಗಿದೆ. ಖರೀದಿ ಕೇಂದ್ರ ಮತ್ತು ಉಗ್ರಾಣ ಕೇಂದ್ರಗಳಿಗೆ ಗ್ರೇಡರ್ಗಳನ್ನು ನೇಮಿಸಿಕೊಳ್ಳಲಾಗಿದ್ದು, ತರಬೇತಿ ಕಾರ್ಯ ಪ್ರಾರಂಭವಾಗಿದೆ. ಗೋಣಿಚೀಲ, ಸಾಗಾಣಿಕೆ ಕುರಿತು ಸೂಕ್ತ ನಿರ್ದೇಶನ ನೀಡಲಾಗಿದೆ. ನೋಂದಣಿಗೆ ಎನ್ಐಸಿ ತಂತ್ರಾAಶವನ್ನು ಅಭಿವೃದ್ಧಿಗೊಳಿಸಲಾಗುತ್ತಿದ್ದು, ಮುಂದಿನ ಮೂರು ದಿನಗಳೊಗಾಗಿ ಎಲ್ಲಾ ಖರೀದಿ…
ಬಳ್ಳಾರಿ : ರಾಜ್ಯ ವಿಧಾನಮಂಡಲ ಚಳಿಗಾಲದ ಅಧಿವೇಶನ ಡಿಸೆಂಬರ್ 9 ರಿಂದ 19 ರವರೆಗೆ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯಲಿದೆ ಎಂದು ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ತಿಳಿಸಿದರು. ಅವರು ಗುರುವಾರ ಮಂಗಳೂರಿನ ಸರ್ಕ್ಯೂಟ್ಹೌಸ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಮಂಡ್ಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಇರುವುದರಿಂದ ಅಧಿವೇಶನವನ್ನು ಡಿಸೆಂಬರ್ 19 ಕ್ಕೆ ಮುಕ್ತಾಯಗೊಳಿಸಲು ಸರ್ಕಾರವು ನಿರ್ಧರಿಸಿದೆ. ಅಧಿವೇಶನ ಮುಂದುವರಿಸುವ ಕುರಿತು ಡಿಸೆಂಬರ್ 9ರಂದು ಸ್ಪೀಕರ್ ಅಧ್ಯಕ್ಷತೆಯಲ್ಲಿ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಕಾನೂನು ಸಚಿವರು, ಎಲ್ಲಾ ರಾಜಕೀಯ ಮುಖಂಡರು, ವಿರೋಧ ಪಕ್ಷದ ಮುಖಂಡರು ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು. ಅಧಿವೇಶನದಲ್ಲಿ ರಾಜ್ಯದ ಅಭಿವೃದ್ಧಿ ಅದರಲ್ಲೂ ವಿಶೇಷವಾಗಿ ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತು ಚರ್ಚೆಯಾಗಬೇಕಿದೆ. ಇದರಿಂದ ಆ ಭಾಗದ ಜನರ ಭಾವನೆಗಳನ್ನು ಗೌರವಿಸಿದಂತಾಗುತ್ತದೆ. ಈ ನಿಟ್ಟಿನಲ್ಲಿ ಆಡಳಿತ ಪಕ್ಷ ಹಾಗೂ ಪ್ರತಿಪಕ್ಷ ಸಹಕರಿಸಬೇಕು ಎಂದು ಸ್ಪೀಕರ್ ಮನವಿ ಮಾಡಿದರು.
ಬೆಂಗಳೂರು : ಭಾರತದಲ್ಲಿ ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಎಂಬ ಹೇಳಿಕೆ ನೀಡಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನದ ಮಠದ ಪೀಠಾಧ್ಯಕ್ಷ ಚಂದ್ರಶೇಖರ್ ಸ್ವಾಮೀಜಿ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಚಾಮರಾಜಪೇಟೆಯ ವಾಲ್ಮೀಕಿ ನಗರದ ನಿವಾಸಿ ಸೈಯದ್ ಅಬ್ಬಾಸ್ ಅವರು ನೀಡಿದ ದೂರಿನ ಮೇರೆಗೆ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಚಂದ್ರಶೇಖರ್ ಸ್ವಾಮೀಜಿ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಭಾರತೀಯ ನ್ಯಾಯ ಸಂಹಿತ ಕಲಂ 299 (ಧಾರ್ಮಿಕ ಭಾವನೆಗಳಿಗೆ ಧಕ್ಕೆ) ಅಡಿ ದೂರು ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾರತೀಯ ಕಿಸಾನ್ ಸಂಘ ನವೆಂಬರ್ 26 ರಂದು ಸ್ವಾತಂತ್ರ್ಯ ಉದ್ಯಾನದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ವಿಶ್ವ ಒಕ್ಕಳಿಗರ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಚಂದ್ರಶೇಖರ ಸ್ವಾಮೀಜಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡುವಾಗ ಮುಸ್ಲಿಮರಿಗೆ ಮತದಾನ ಹಕ್ಕು ಇಲ್ಲದಂತೆ ಮಾಡಬೇಕು. ದೇಶದಲ್ಲಿ ವಕ್ಫ ಮಂಡಳಿಯೇ ಇಲ್ಲದಂತೆ ಮಾಡಿದ್ರೆ ಆಗ ಭಾರತೀಯರೆಲ್ಲರೂ ನೆಮ್ಮದಿಯಿಂದ ಇರಲು ಸಾಧ್ಯ ಎಂದು ಸ್ವಾಮೀಜಿ ದ್ವೇಷ ಭಾಷಣ ಮಾಡಿದ್ದಾರೆ ಎಂದು…
ಬೆಂಗಳೂರು : ₹108.36 ಕೋಟಿ ವೆಚ್ಚದಲ್ಲಿ 254 ನಗರ ಆರೋಗ್ಯ ಕ್ಷೇಮ ಕೇಂದ್ರಗಳಲ್ಲಿ ಹಾಗೂ 39 ಕೆಎಸ್ಆರ್ಟಿಸಿ ಬಸ್ ನಿಲ್ದಾಣಗಳಲ್ಲಿ ನಮ್ಮ ಕ್ಲಿನಿಕ್ಗಳ ಸ್ಥಾಪನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು ನಿರ್ಧರಿಸಿದೆ. 2024-25ನೇ ಸಾಲಿನಲ್ಲಿ ಕಾರ್ಯಕ್ರಮಗಳಡಿ 15 ವಿವಿಧ ಹಣಕಾಸು ಆಯೋಗದ ಅನುದಾನದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ರೋಗ ಪತ್ತೆ ಮೂಲ ಸೌಕರ್ಯಗಳನ್ನು ಒದಗಿಸಲು ರೂ. 145.99 ಕೋಟಿಗಳಲ್ಲಿ ಉಪಕರಣಗಳನ್ನು ಖರೀದಿಸಲು ಹಾಗೂ ರೂ. 84.88 ಕೋಟಿಗಳ ಅಂದಾಜು ಮೊತ್ತದಲ್ಲಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ನಗರ ಆರೋಗ್ಯ ಕ್ಷೇಮ ಕೇಂದ್ರ – ನಮ್ಮ ಕ್ಲಿನಿಕ್ ಗಳಲ್ಲಿನ ಪ್ರಯೋಗಾಲಯಗಳನ್ನು ಮತ್ತು ಆರೋಗ್ಯ ಸೇವೆಗಳನ್ನು ಬಲಪಡಿಸಲು ಉಪಕರಣಗಳನ್ನು ಖರೀದಿಸಲು ಹಾಗೂ 5 ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳ ನಿರ್ಮಾಣ ಕಾಮಗಾರಿಗಳನ್ನು ಕೈಗೊಳ್ಳಲು ಮತ್ತು ರೂ. 72.96 ಕೋಟಿಗಳ ಅಂದಾಜು ಮೊತ್ತದಲ್ಲಿ ನಮ್ಮ ಕ್ಲಿನಿಕ್ಗಳಿಗೆ ಅಗತ್ಯವಿರುವ ಔಷಧಿ ಮತ್ತು ರಾಸಾಯನಿಕಗಳನ್ನು PM-…








