Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ರಾಜ್ಯ ಸರ್ಕಾರವು ರೈತರಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಕುಸುಮ್ ಬಿ ಯೋಜನೆಯಡಿ ಜಾಲ ಮುಕ್ತ ಸೌರ ಕೃಷಿ ಪಂಪ್ಸೆಟ್ ಅಳವಡಿಸಲು ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯ ಸರ್ಕಾರದಿಂದ ರೈತರಿಗೆ ಹಗಲು ವೇಳೆಯಲ್ಲಿ ನೀರಾವರಿ ಸೌಕರ್ಯವನ್ನು ಒದಗಿಸುವ ಮಹತ್ವಾಕಾಂಕ್ಷಿ ಸೋಲಾರ್ ಪಂಪ್ಸೆಟ್ ಯೋಜನೆ ಇದಾಗಿದೆ.. ನೀರಾವರಿಗೆ ಸಾಂಪ್ರದಾಯಿಕ ವಿದ್ಯುತ್ ಅವಲಂಬನೆಯನ್ನು ಕಡಿಮೆ ಮಾಡಿ, ಸೌರಶಕ್ತಿಯ ಬಳಕೆ ಮೂಲಕ ರೈತರು ಸ್ವಾವಲಂಬನೆ ಸಾಧಿಸಲು ಕುಸುಮ್ ಬಿ ಯೋಜನೆ ರೂಪಿಸಲಾಗಿದೆ. ಕೃಷಿ ಕ್ಷೇತ್ರವನ್ನು ಲಾಭದಾಯಕವಾಗಿಸಲು, ಸೌರಶಕ್ತಿ ಬಳಕೆಯ ಉತ್ತೇಜನಕ್ಕೆ ಸರ್ಕಾರದಿಂದ ಶೇ.80 ರಷ್ಟು ಹೆಚ್ಚಿನ ಸಹಾಯಧನ ನೀಡಲಾಗುತ್ತಿದೆ. ಕುಸುಮ್ ಬಿ ಯೋಜನೆಯಡಿ ಜಾಲ ಮುಕ್ತ ಸೌರ ಕೃಷಿ ಪಂಪ್ಸೆಟ್ ಅಳವಡಿಸಲು ಒತ್ತು ನೀಡಿ ರಾಜ್ಯ ಸರ್ಕಾರವುಸಬ್ಸಿಡಿ ಮೊತ್ತವನ್ನು ಶೇ. 30 ರಿಂದ ಶೇ. 50ಕ್ಕೆ ಹೆಚ್ಚಿಸಿದೆ.ಕುಸುಮ್ ಬಿ ಯೋಜನೆಯಡಿ ರೈತರಿಗೆ ಸೌರ ಫಲಕಗಳು, ಸಬ್ಮರ್ಸಿಬಲ್/ಸರ್ಫೇಸ್ ಡಿಸಿ ಪಂಪ್ಗಳು, ಮೌಂಟಿಂಗ್ ಸ್ಟ್ರಕ್ಟರ್, ಪ್ಯಾನಲ್ ಬೋರ್ಡ್, ಪೈಪ್ ಮತ್ತು ಕೇಬಲ್ ಸರಬರಾಜು ಮಾಡಲಾಗುತ್ತದೆ. ಸೌರ ಪಂಪ್ಸೆಟ್ಗಳ ಸ್ಥಾಪನೆ ಸುಲಭವಾಗಿದ್ದು,…
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಸೂಸೈಡ್ ಪ್ರಕರಣ ಬೆಳಕಿಗೆ ಬಂದಿದ್ದು, 24 ವರ್ಷದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬೆಂಗಳೂರಿನ ಬಾಗಲಗುಂಟೆಯಲ್ಲಿ ಸ್ಪಾದಲ್ಲಿ ಕೆಲಸ ಮಾಡುತ್ತಿದ್ದ ಯುವತಿ ನಿನ್ನೆ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಸೋನಿಯಾ (24) ಎಂದು ಗುರುತಿಸಲಾಗಿದೆ. ಮನೆಯ ಆರ್ಥಿಕ ಒತ್ತಡದಿಂದ ಮನನೊಂದು ಈಕೆ ಸೂಸೈಡ್ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಈ ಒಂದು ಪ್ರಕಾರಣವನ್ನು ರದ್ದು ಮಾಡುವಂತೆ ಕೋರಿ ಯಡಿಯೂರಪ್ಪ ಅವರ ಅರ್ಜಿ ವಿಚಾರಣೆ ನಡೆದಿದ್ದು, ವಿಚಾರಣೆ ವೇಳೆ ಖುದ್ದು ಹಾಜರಾತಿಯನ್ನು ವಿಸ್ತರಿಸಿ, ವಿಚಾರಣೆಯನ್ನು ಡಿಸೆಂಬರ್ 2 ರಂದು ನಿಗದಿಪಡಿಸಿ ಕೋರ್ಟ್ ಆದೇಶ ಹೊರಡಿಸಿತು. ಪೋಕ್ಸೋ ಪ್ರಕರಣಕ್ಕೆ ಸಂಬಂಧಸಿದಂತೆ ಮಧ್ಯಂತರ ಆದೇಶ ಇರುವುದರಿಂದ ವಿಚಾರಣೆ ಸ್ಥಗಿತವಾಗಿದೆ. ಪೋಕ್ಸೋ ಕೇಸ್ ಆಗಿರುವುದರಿಂದ ತುರ್ತು ವಿಚಾರಣೆ ಮಾಡಿ ಎಂದು ಮನವಿ ಮಾಡಿಕೊಳ್ಳಲಾಗಿತ್ತು. ಸರ್ಕಾರದ ಎಸ್ಪಿಪಿ ರವಿವರ್ಮ ಕುಮಾರ್ ಮನವಿ ಮಾಡಿಕೊಂಡಿದ್ದರು. ಈ ವೇಳೆ ಡಿಸೆಂಬರ್ 2ರ ಮಧ್ಯಾಹ್ನ 2:30 ಕ್ಕೆ ವಿಚಾರಣೆ ನಿಗದಿ ಪಡಿಸಿ ಹೈಕೋರ್ಟ್ ಅದೇಶಿಸಿದೆ. ಅಲ್ಲದೇ ಬಿಎಸ್ ಯಡಿಯೂರಪ್ಪ ಖುದ್ದು ಹಾಜರಾತಿಗೆ ವಿನಾಯಿತಿ ನೀಡಿದ್ದ ಆದೇಶ ಕೂಡ ವಿಸ್ತರಣೆಯಾಗಿದೆ. ಪ್ರಕರಣದ ಹಿನ್ನೆಲೆ ಈ ವರ್ಷದ ಮಾರ್ಚ್ 3 ರಂದು ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಯಡಿಯೂರಪ್ಪ ವಿರುದ್ಧ ಪೋಕ್ಸೋ…
ಶಿವಮೊಗ್ಗ : ಮಲೆನಾಡಿನ ಜನರ ಆರಾಧ್ಯದೈವ ಶ್ರೀ ರೇಣುಕಾದೇವಿ ಚಂದ್ರಗುತ್ತಿ ಕ್ಷೇತ್ರದ ವಿಕಾಸಕ್ಕೆ ಅಭಿವೃದ್ಧಿ ಪ್ರಾಧಿಕಾರ ರಚನೆ, 12ನೇ ಶತಮಾನದ ಪ್ರಸಿದ್ಧ ಶರಣ ಹಾಗೂ ಮೊದಲ ಸಂಸತ್ತಿನ ಮೊದಲ ಪೀಠಾಧ್ಯಕ್ಷ ಅಲ್ಲಮಪ್ರಭುದೇವರ ಜನ್ಮಸ್ಥಳ ಬಳ್ಳಿಗಾವೆ ಹಾಗೂ ಶಿವಮೊಗ್ಗ ನಗರದಲ್ಲಿ ನೂತನವಾಗಿ ಹೆಸರಿಸಲಾದ ಅಲ್ಲಮಪ್ರಭು(ಪ್ರೀಡಂ ಪಾರ್ಕ್) ಮೈದಾನವನ್ನು ಅತ್ಯಾಧುನಿಕ ರೀತಿಯಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಿರುವುದಾಗಿ ರಾಜ್ಯ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಅವರು ಹೇಳಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಈಗಾಗಲೇ ಸಮಾಲೋಚನೆ ನಡೆಸಿದಂತೆ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿ ಕಟ್ಟಡ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿ ಕಟ್ಟಡ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಕಟ್ಟಡಗಳನ್ನು ಒಂದೇ ಕಟ್ಟಡ ಸಂಕೀರ್ಣದಲ್ಲಿ ನಿರ್ಮಿಸಲು ಈಗಾಗಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯ ಹಿಂದಿನ ನಿವೇಶನವನ್ನು ಕಾಯ್ದಿರಿಸಲಾಗಿದ್ದು, ಜಿಲ್ಲೆಯ ಜನರಿಗೆ ಎಲ್ಲಾ ರೀತಿಯ ಅನುಕೂಲವಾಗುವಂತೆ…
ಬೆಂಗಳೂರು : ರಾಜ್ಯ ಸರ್ಕಾರವು ರೈತರಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಕುಸುಮ್ ಬಿ ಯೋಜನೆಯಡಿ ಜಾಲ ಮುಕ್ತ ಸೌರ ಕೃಷಿ ಪಂಪ್ಸೆಟ್ ಅಳವಡಿಸಲು ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯ ಸರ್ಕಾರದಿಂದ ರೈತರಿಗೆ ಹಗಲು ವೇಳೆಯಲ್ಲಿ ನೀರಾವರಿ ಸೌಕರ್ಯವನ್ನು ಒದಗಿಸುವ ಮಹತ್ವಾಕಾಂಕ್ಷಿ ಸೋಲಾರ್ ಪಂಪ್ಸೆಟ್ ಯೋಜನೆ ಇದಾಗಿದೆ.. ನೀರಾವರಿಗೆ ಸಾಂಪ್ರದಾಯಿಕ ವಿದ್ಯುತ್ ಅವಲಂಬನೆಯನ್ನು ಕಡಿಮೆ ಮಾಡಿ, ಸೌರಶಕ್ತಿಯ ಬಳಕೆ ಮೂಲಕ ರೈತರು ಸ್ವಾವಲಂಬನೆ ಸಾಧಿಸಲು ಕುಸುಮ್ ಬಿ ಯೋಜನೆ ರೂಪಿಸಲಾಗಿದೆ. ಕೃಷಿ ಕ್ಷೇತ್ರವನ್ನು ಲಾಭದಾಯಕವಾಗಿಸಲು, ಸೌರಶಕ್ತಿ ಬಳಕೆಯ ಉತ್ತೇಜನಕ್ಕೆ ಸರ್ಕಾರದಿಂದ ಶೇ.80 ರಷ್ಟು ಹೆಚ್ಚಿನ ಸಹಾಯಧನ ನೀಡಲಾಗುತ್ತಿದೆ. ಕುಸುಮ್ ಬಿ ಯೋಜನೆಯಡಿ ಜಾಲ ಮುಕ್ತ ಸೌರ ಕೃಷಿ ಪಂಪ್ಸೆಟ್ ಅಳವಡಿಸಲು ಒತ್ತು ನೀಡಿ ರಾಜ್ಯ ಸರ್ಕಾರವುಸಬ್ಸಿಡಿ ಮೊತ್ತವನ್ನು ಶೇ. 30 ರಿಂದ ಶೇ. 50ಕ್ಕೆ ಹೆಚ್ಚಿಸಿದೆ.ಕುಸುಮ್ ಬಿ ಯೋಜನೆಯಡಿ ರೈತರಿಗೆ ಸೌರ ಫಲಕಗಳು, ಸಬ್ಮರ್ಸಿಬಲ್/ಸರ್ಫೇಸ್ ಡಿಸಿ ಪಂಪ್ಗಳು, ಮೌಂಟಿಂಗ್ ಸ್ಟ್ರಕ್ಟರ್, ಪ್ಯಾನಲ್ ಬೋರ್ಡ್, ಪೈಪ್ ಮತ್ತು ಕೇಬಲ್ ಸರಬರಾಜು ಮಾಡಲಾಗುತ್ತದೆ. ಸೌರ ಪಂಪ್ಸೆಟ್ಗಳ ಸ್ಥಾಪನೆ ಸುಲಭವಾಗಿದ್ದು,…
ನವದೆಹಲಿ : ಒಪ್ಪಿಗೆಯ ದೈಹಿಕ ಸಂಬಂಧವನ್ನು ಅಪರಾಧೀಕರಣಗೊಳಿಸುವ ಆತಂಕಕಾರಿ ಪ್ರವೃತ್ತಿಯ ಬಗ್ಗೆ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ವಿವಾಹದ ಸುಳ್ಳು ಭರವಸೆಯ ಮೇಲೆ ತನ್ನೊಂದಿಗೆ ಲೈಂಗಿಕ ಸಂಬಂಧ ಹೊಂದಿದ್ದಾನೆ ಎಂದು ಆರೋಪಿಸಿ ವರ್ಷಗಳ ಕಾಲ ವಿವಾಹೇತರ ಸಂಬಂಧ ಹೊಂದಿರುವ ಮಹಿಳೆ ಅತ್ಯಾಚಾರದ ಆರೋಪವನ್ನು ಹೊರಿಸುವಂತಿಲ್ಲ ಎಂದು ಹೇಳಿದೆ. ಮುಂಬೈನ ಖಾರ್ಘರ್ ಪೊಲೀಸ್ ಠಾಣೆಯಲ್ಲಿ ಮಹೇಶ್ ದಾಮು ಖರೆ ವಿರುದ್ಧ ವನಿತಾ ಎಸ್ ಜಾಧವ್ ಎಂಬುವರು ದಾಖಲಿಸಿದ ಏಳು ವರ್ಷಗಳ ಹಳೆಯ ಎಫ್ಐಆರ್ ಅನ್ನು ರದ್ದುಗೊಳಿಸಿದ ನ್ಯಾಯಮೂರ್ತಿಗಳಾದ ಬಿ ವಿ ನಾಗರತ್ನ ಮತ್ತು ಎನ್ ಕೋಟೀಶ್ವರ್ ಸಿಂಗ್ ಅವರ ಪೀಠವು, ಒಮ್ಮತದ ಸಂಬಂಧಗಳು ದೀರ್ಘಕಾಲದವರೆಗೆ ನಡೆಯುತ್ತಿರುವುದು ಆತಂಕಕಾರಿ ಪ್ರವೃತ್ತಿಯಾಗಿದೆ. ಅವಧಿಗಳು, ಹುಳಿಯಾಗಿ ಪರಿಣಮಿಸಿದ ನಂತರ, ಕ್ರಿಮಿನಲ್ ಎಂದು ಪರಿಗಣಿಸಲಾಗಿದೆ.ಲೈಂಗಿಕ ಸಂಬಂಧದ ಒಪ್ಪಿಗೆಯ ಆಧಾರದ ಮೇಲೆ ಮದುವೆಯಾಗುವ ಭರವಸೆಯ ಉಲ್ಲಂಘನೆಯ ದೂರನ್ನು ಪಡೆದ ವಂಚನೆಗೊಳಗಾದ ಮಹಿಳೆಯು ತ್ವರಿತವಾಗಿ ಸಲ್ಲಿಸಬೇಕು ಮತ್ತು ವರ್ಷಗಳ ಕಾಲ ದೈಹಿಕ ಸಂಬಂಧವನ್ನು ಮುಂದುವರೆಸಿದ ನಂತರ ಅಲ್ಲ ಎಂದು ಹೇಳಿದೆ. ವಿವಾಹಿತ…
ರಾಮನಗರ : ರಾಜ್ಯದಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ರಾಮನಗರ ಜಿಲ್ಲೆಯ ದಯಾನಂದ್ ಸಾಗರ ಆಸ್ಪತ್ರೆಯಲ್ಲಿ ತಾಯಿ ಒಬ್ಬಳು ಕ್ರೂರವಾಗಿ ವರ್ತಿಸಿದ್ದು ಎರಡು ದಿನದ ಮಗುವನ್ನು ಟಾಯ್ಲೆಟ್ ನಲ್ಲಿ ಹಾಕಿ ಫ್ಲಶ್ ಒತ್ತಿರುವ ಅಮಾನವೀಯ ಘಟನೆ ರಾಮನಗರ ಜಿಲ್ಲೆಯ ದಯಾನಂದ್ ಸಾಗರ ಆಸ್ಪತ್ರೆಯಲ್ಲಿ ನಡೆದಿದೆ. ಹೌದು ರಾಮನಗರದಲ್ಲಿ ಅಮಾನವೀಯ ಘಟನೆ ನಡೆದಿದ್ದು, ಹೆತ್ತ ತಾಯಿ ಕ್ರೂರಿಯಾಗಿ ವರ್ತಿಸಿದ ಘಟನೆ ನಡೆದಿದೆ. ಹುಟ್ಟಿದ ಮಗುವನ್ನೇ ಟಾಯ್ಲೆಟ್ ಗೆ ಹಾಕಿ ಫ್ಲೆಶ್ ಮಾಡಿರುವ ಅಮಾನವೀಯ ಘಟನೆ ನಡೆದಿದೆ. ದಯಾನಂದ ಸಾಗರ್ ಆಸ್ಪತ್ರೆಯಲ್ಲಿ ಈ ಒಂದು ಕೃತ್ಯ ನಡೆದಿದೆ. ಟಾಯ್ಲೆಟ್ ಪರಿಶೀಲನೆ ಮಾಡುವ ವೇಳೆ ಗಂಡು ಶಿಶು ಪತ್ತೆಯಾಗಿದೆ. ಎರಡು ದಿನದ ನವಜಾತ ಕಂಡು ಶಿಶು ಪತ್ತೆಯಾಗಿದೆ. ಪತ್ತೆಯಾದ ನವಜಾತ ಶಿಶುವಿನ ನೋಡಿ ಆಸ್ಪತ್ರೆಯ ಸಿಬ್ಬಂದಿಗಳೇ ಶಾಕ್ ಆಗಿದ್ದಾರೆ. ರಾಮನಗರ ಜಿಲ್ಲೆಯ ದನ ದಯಾನಂದ್ ಸಾಗರ ಆಸ್ಪತ್ರೆಯಲ್ಲಿ ಈ ಒಂದು ಅಮಾನವೀಯ ಘಟನೆ ನಡೆದಿದೆ. ಆದರೆ ಈ ಒಂದು ನವಜಾತ ಶಿಶು ಯಾರದ್ದು, ಯಾರು ಈ…
ಮುಂಬೈ: ಇತ್ತೀಚೆಗೆ ದುಬೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಐಶ್ವರ್ಯಾ ರೈ ಹೆಸರನ್ನು ‘ಬಚ್ಚನ್’ ಉಪನಾಮವಿಲ್ಲದೆ ಪ್ರದರ್ಶಿಸಲಾಯಿತು. ಬಾಲಿವುಡ್ ನಟಿ ದುಬೈನಲ್ಲಿ ನಡೆದ ಗ್ಲೋಬಲ್ ವುಮೆನ್ಸ್ ಫೋರಂನಲ್ಲಿ ಭಾಗವಹಿಸಿದರು, ಅಲ್ಲಿ ಅವರು ನಾವೀನ್ಯತೆ ಮತ್ತು ಮಹಿಳಾ ಸಬಲೀಕರಣದ ಕುರಿತು ಸ್ಪೂರ್ತಿದಾಯಕ ಭಾಷಣ ಮಾಡಿದರು. ಈ ಸಂದರ್ಭದಲ್ಲಿ, ದುಬೈ ವುಮೆನ್ ಎಸ್ಟಾಬ್ಲಿಷ್ಮೆಂಟ್ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ವೀಡಿಯೊಗಳು ಐಶ್ವರ್ಯಾ ಮಹಿಳೆಯರನ್ನು ಪ್ರೋತ್ಸಾಹಿಸುವುದನ್ನು ಮತ್ತು ನಿರ್ಣಯದ ಮಹತ್ವವನ್ನು ಎತ್ತಿ ತೋರಿಸಿದವು. ಆದರೆ, ವೀಕ್ಷಕರ ಗಮನ ಸೆಳೆದದ್ದು ಆಕೆಯ ಹೆಸರು ಪರದೆಯ ಮೇಲೆ ಕಾಣಿಸಿಕೊಂಡ ರೀತಿ – ಸರಳವಾಗಿ ‘ಐಶ್ವರ್ಯಾ ರೈ – ಇಂಟರ್ನ್ಯಾಷನಲ್ ಸ್ಟಾರ್.’ ‘ಬಚ್ಚನ್’ ಉಪನಾಮದ ಈ ಲೋಪವು ಆನ್ಲೈನ್ನಲ್ಲಿ ವ್ಯಾಪಕ ಚರ್ಚೆಗಳಿಗೆ ಕಾರಣವಾಯಿತು. https://youtube.com/shorts/ghp2dBseUjI?si=QVv41Ny10tQa3KE-
ನವದೆಹಲಿ : ಗೂಗಲ್ ಮ್ಯಾಪ್ ಬಳಕೆದಾರರಿಗೆ ಗೂಗಲ್ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಕಂಪನಿಯು ಸ್ಥಳ ಇತಿಹಾಸವನ್ನು ಉಳಿಸುವ ವಿಧಾನವನ್ನು ಬದಲಾಯಿಸಲಿದೆ. ಬಳಕೆದಾರರು ತಮ್ಮ ಟೈಮ್ಲೈನ್ ಡೇಟಾವನ್ನು ಸಾಧನದಲ್ಲಿ ಉಳಿಸಬಹುದು ಅಥವಾ ಕ್ಲೌಡ್ನಲ್ಲಿ ಎನ್ಕ್ರಿಪ್ಟ್ ಮಾಡಿದ ರೂಪದಲ್ಲಿ ಬ್ಯಾಕಪ್ ಮಾಡಬಹುದು ಎಂದು ಗೂಗಲ್ ಘೋಷಿಸಿದೆ. ಇಮೇಲ್ ಮೂಲಕ ಎಚ್ಚರಿಕೆಯನ್ನು ಸ್ವೀಕರಿಸಲಾಗುತ್ತಿದೆ ಇಷ್ಟು ಮಾತ್ರವಲ್ಲದೆ, ತಮ್ಮ ಸ್ಥಳ ಇತಿಹಾಸವನ್ನು ಉಳಿಸಲು ಬಯಸಿದರೆ, ಅವರು ತಕ್ಷಣ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಗೂಗಲ್ ಈಗ ಇಮೇಲ್ ಮೂಲಕ ಬಳಕೆದಾರರಿಗೆ ತಿಳಿಸುತ್ತಿದೆ. ಇಲ್ಲದಿದ್ದರೆ ಅವರ ಡೇಟಾವನ್ನು ಅಳಿಸಲಾಗುತ್ತದೆ. ಆದಾಗ್ಯೂ, ಪ್ರತಿ ಬಳಕೆದಾರರಿಗೆ ಅಳಿಸುವಿಕೆಯ ಗಡುವು ವಿಭಿನ್ನವಾಗಿರಬಹುದು. ಇತಿಹಾಸವನ್ನು ಸ್ಥಳೀಯವಾಗಿ ಉಳಿಸಲಾಗುತ್ತದೆ Google ಈಗ ಪ್ರತಿ ಸಾಧನಕ್ಕೆ ಪ್ರತ್ಯೇಕವಾಗಿ ಸ್ಥಳ ಡೇಟಾವನ್ನು ಉಳಿಸುತ್ತದೆ. ಇದರರ್ಥ ನಿಮ್ಮ ಟೈಮ್ಲೈನ್ ಇನ್ನು ಮುಂದೆ ವೆಬ್ನೊಂದಿಗೆ ಸಂಯೋಜಿಸಲ್ಪಡುವುದಿಲ್ಲ. ನೀವು ಯಾವುದೇ ಕ್ರಮ ಕೈಗೊಳ್ಳದಿದ್ದರೆ, Google ಮೊದಲು ಕಳೆದ 3 ತಿಂಗಳ ಡೇಟಾವನ್ನು ಅಳಿಸುತ್ತದೆ. ಇದರ ನಂತರ ಹೊಸ ಸ್ಥಳ ಇತಿಹಾಸವನ್ನು ಸಾಧನದಲ್ಲಿ ಮಾತ್ರ ಸ್ಥಳೀಯವಾಗಿ…
ನವದೆಹಲಿ : ವಯನಾಡು ಲೋಕಸಭೆ ಕ್ಷೇತ್ರದಲ್ಲಿ ಭರ್ಜರಿ ಗೆಲುವು ಸಾಧಿಸಿದ ಪ್ರಿಯಾಂಕಾ ಗಾಂಧಿ ಇಂದು ನೂತನ ಸಂಸದೆಯಾಗಿ ಪ್ರಿಯಾಂಗಾ ಗಾಂಧಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. https://twitter.com/i/status/1862006993122410739 ಸಂವಿಧಾನದ ಪುಸ್ತಕವನ್ನು ಕೈಯಲ್ಲಿ ಹಿಡಿದು ಪ್ರಿಯಾಂಕಾ ಗಾಂಧಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಭಾರತೀಯ ಕಮ್ಯುನಿಸ್ಟ್ ಪಕ್ಷದ (ಸಿಪಿಐ) ಸತ್ಯನ್ ಮೊಕೇರಿ ಅವರನ್ನು 4,10,931 ಮತಗಳ ಅಂತರದಿಂದ ಸೋಲಿಸಿದ್ದಾರೆ. ಕಾಂಗ್ರೆಸ್ ಭದ್ರಕೋಟೆಯಾಗಿರುವ ವಯನಾಡ್ ನಲ್ಲಿ ಪ್ರಿಯಾಂಕಾ ಗಾಂಧಿ, ಬಿಜೆಪಿಯ ನವ್ಯಾ ಹರಿದಾಸ್ ಮತ್ತು ಸಿಪಿಐನ ಸತ್ಯನ್ ಮೊಕೇರಿ ನಡುವೆ ತ್ರಿಕೋನ ಸ್ಪರ್ಧೆ ಇತ್ತು.ಏತನ್ಮಧ್ಯೆ, ಕಾಂಗ್ರೆಸ್ ಮುಖಂಡ ರವೀಂದ್ರ ವಸಂತರಾವ್ ಚವಾಣ್ ಅವರು ಲೋಕಸಭೆಯಲ್ಲಿ ಸಂಸತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.













