Author: kannadanewsnow57

ನವದೆಹಲಿ : 2024 ರ ಮೊದಲ ಒಂಬತ್ತು ತಿಂಗಳಲ್ಲಿ ಭಾರತವು ಸೈಬರ್ ಹಗರಣಗಳಿಂದ ಸುಮಾರು ₹ 11,333 ಕೋಟಿ ನಷ್ಟವನ್ನು ಅನುಭವಿಸಿದೆ ಎಂದು ಇತ್ತೀಚಿನ ವರದಿಯೊಂದು ತಿಳಿಸಿದೆ.  ಸ್ಟಾಕ್ ಟ್ರೇಡಿಂಗ್ ವಂಚನೆಗಳು ಕಳೆದುಹೋದ ಹಣದ ಮೊತ್ತದಲ್ಲಿ ಹಗರಣಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಇದರ ನಂತರ ಹೂಡಿಕೆ ವಂಚನೆಗಳು ನಡೆದಿದ್ದು, 1 ಲಕ್ಷಕ್ಕೂ ಹೆಚ್ಚು ದೂರುಗಳಿಂದ ₹3,216 ಕೋಟಿ ನಷ್ಟವಾಗಿದೆ. ಏತನ್ಮಧ್ಯೆ, ಅಧಿಕಾರಿಗಳು ಏರಿಕೆ ಕಂಡಿರುವ ಡಿಜಿಟಲ್ ಬಂಧನ ಪ್ರಕರಣಗಳು ಸುಮಾರು 63,481 ದೂರುಗಳಿಂದ ₹1,616 ಕೋಟಿ ನಷ್ಟವನ್ನು ಉಂಟುಮಾಡಿದೆ ಎಂದು ಗೃಹ ಸಚಿವಾಲಯದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ (I4C) ವಿಭಾಗದ ಡೇಟಾ ವರದಿ ತಿಳಿಸಿದೆ. ಅಕ್ಟೋಬರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ‘ಮನ್ ಕಿ ಬಾತ್’ ರೇಡಿಯೋ ಕಾರ್ಯಕ್ರಮದಲ್ಲಿ ‘ಡಿಜಿಟಲ್ ಬಂಧನ’ದ ಬಗ್ಗೆ ರಾಷ್ಟ್ರಕ್ಕೆ ಎಚ್ಚರಿಕೆ ನೀಡಿದ್ದರು. ಯಾವುದೇ ಸರ್ಕಾರಿ ಸಂಸ್ಥೆಗಳು ದೂರವಾಣಿ ಮೂಲಕ ಜನರನ್ನು ಬೆದರಿಸಿ ಹಣಕ್ಕೆ ಬೇಡಿಕೆ ಇಡುವುದಿಲ್ಲ ಎಂದರು. ಡಿಜಿಟಲ್ ಬಂಧನದ ಕಾರ್ಯವೈಖರಿಯನ್ನು ವಿವರಿಸಿದ…

Read More

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತ ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಲೀಲಾ ವೆಂಚ್ಯೂರ್ ಸ್ಟೇಷನ್ ನ ಈ ಕೆಳಕಂಡ ಪ್ರದೇಶಗಳಲ್ಲಿ ಗುರುವಾರ (28.11.2024) ಬೆಳಗ್ಗೆ 09:00 ರಿಂದ ಮಧ್ಯಾಹ್ನ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಇಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಏರ್ಪೋರ್ಟ್ ರಸ್ತೆ, ಕೋಡಿಹಳ್ಳಿ, 16 ಮತ್ತು 19ನೇ ಮುಖ್ಯ ರಸ್ತೆ, ಎಚ್ಎಎಲ್ 2ನೇ ಹಂತ, ಕಾಲ್ಪನ್ ಟವರ್ಸ್, ಎನ್ಎಎಲ್ ಕಾಂಪೌಂಡ್, ಕೋಡಿಹಳ್ಳಿ, ರಾಮಟೆಂಪಲ್ ರಸ್ತೆ, ವೆಂಕಟೇಶ್ವರ ಕಾಲೋನಿ, ಬೂಮರೆಡ್ಡಿ ಕಾಲೋನಿ, 515 ಕಾಲೋನಿ, ಕೋಡಿಹಳ್ಳಿ ಗ್ರಾಮ, 17,18ನೇ ಮತ್ತು 19ನೇ ಅಡಿ ಮುಖ್ಯ ರಸಸ್ತೆ, ಸರ್ವೀಸ್ ರಸ್ತೆ100, 13ನೇ ಎಸ್, 12ನೇ ಮುಖ್ಯ, ದೊಮ್ಮಲೂರು 2ನೇ ಹಂತ, 6ನೇ ಮುಖ್ಯ ಡಿಫೈನ್ಸ್ ಕಾಲೋನಿ, 80 ಅಡಿ ರಸ್ತೆ, 11ಮುಖ್ಯ ರಸ್ತೆ, ಹಳೆ ತಪ್ಪಸಂದ್ರ, ಹೊಸ ತಪ್ಪಸಂದ್ರ, ಎಂ.ಜಿ.ರಸ್ತೆ, ಚರ್ಚರಸ್ತೆ, ಸ್ಟ್ರೀಟ್, ಸೇಂಟ್ ಮಾರ್ಕ್ಸ್ ರಸ್ತೆ ಪವರ್ ಇರೋದಿಲ್ಲ. ಲ್ಯಾವೆಲ್ಲೆ ರಸ್ತೆ, ಮ್ಯೂಸಿಯಂ ರಸ್ತೆ, ರೆಸ್ಟ್ ಹೌಸ್ ರಸ್ತೆ,…

Read More

ಬೆಂಗಳೂರು: ರಾಜ್ಯದ 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಸರ್ಕಾರಿ ಶಾಲಾ ಮಕ್ಕಳಿಗೆ ಎರಡು ಜೊತೆ ಸಮವಸ್ತ್ರ ವಿತರಣೆ ಮಾಡಲಾಗುತ್ತಿದೆ. ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, 2024-25ನೇ ಸಾಲಿಗೆ ರಾಜ್ಯದಲ್ಲಿ ಎಲ್ಲಾ ಜಿಲ್ಲೆಗಳ 1 ರಿಂದ 10ನೇ ತರಗತಿಯ ಸರ್ಕಾರಿ ಶಾಲಾ ಮಕ್ಕಳಿಗೆ ಎರಡು ಜೊತೆ ಸಮವಸ್ತ್ರಗಳನ್ನು ಸರಬರಾಜು ಮಾಡಲಾಗಿರುತ್ತದೆ ಎಂದಿದ್ದಾರೆ. ಇನ್ನೂ ಸರ್ಕಾರಿ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆಯಲ್ಲಿ ಯಾವುದೇ ಸಮಸ್ಯೆ ಆಗಿಲ್ಲ. ದೂರುಗಳು ಕೂಡ ಸ್ವೀಕೃತವಾಗಿಲ್ಲ. 2024-25ನೇ ಸಾಲಿನಲ್ಲಿ 1 ರಿಂದ 10ನೇ ತರಗತಿ ಎಲ್ಲಾ ಮಕ್ಕಳಿಗೆ ಎರಡು ಜೊತೆ ಸಮವಸ್ತ್ರ ವಿತರಣೆ ಮಾಡಲಾಗಿದೆ ಅಂತ ತಿಳಿಸಿದೆ.

Read More

ಬೆಂಗಳೂರು : ಭೂಮಂಜೂರಿ ಪ್ರಕರಣಗಳ ದರಖಾಸ್ತು ಪೋಡಿ ದುರಸ್ತಿ ಸಂಬಂಧ ನಮೂನೆ-1 ರಿಂದ 5 ಮತ್ತು ನಮೂನೆ-6 ರಿಂದ 10 ಪ್ರಕ್ರಿಯೆ ಸರಳೀಕರಣ ಮಾಡುವ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆದೇಶದಲ್ಲಿ ಏನಿದೆ? ಮೇಲೆ ಓದಲಾದ ಕ್ರಮ ಸಂಖ್ಯೆ: (1) ರಲ್ಲಿನ ಆಯವ್ಯಯ ಭಾಷಣದ ಕಂಡಿಕೆ 395 ರಲ್ಲಿ “ದರಖಾಸ್ತು ಪೋಡಿ ಅಭಿಯಾನದಡಿ ರೈತರ ಜಮೀನಿನ ದುರಸ್ತಿ ಪ್ರಕ್ರಿಯೆಯನ್ನು ಸುಗಮಗೊಳಿಸಲು, ಸರ್ಕಾರಿ ಜಮೀನುಗಳಿಗೆ ಸರ್ಕಾರದಿಂದ ಸ್ವಯಂ ಪ್ರೇರಿತವಾಗಿ ನಮೂನೆ-1 ರಿಂದ 5 ರವರೆಗಿನ ದಾಖಲೆಗಳನ್ನು ಸಿದ್ಧಪಡಿಸಲಾಗುವುದು’ ಎಂದು ಘೋಷಿಸಲಾಗಿರುತ್ತದೆ. ಮೇಲೆ ಓದಲಾದ ಕ್ರಮ ಸಂಖ್ಯೆ (27) ರ ಘನ ಉಚ್ಚ ನ್ಯಾಯಾಲಯದ ಆದೇಶದಲ್ಲಿ ಪೋಡಿ ದುರಸ್ತಿ ವಿಚಾರವಾಗಿ ನಮೂನೆ 1-5 ಮತ್ತು 6-10 ಕ್ಕೆ ಸಂಬಂಧಪಟ್ಟಂತೆ ಘನ ನ್ಯಾಯಾಲಯದ ರಿಟ್ ಅರ್ಜಿ ಸಂಖ್ಯೆ 21276/2021 ದಿನಾಂಕ 10-01-2022 ರ ಆದೇಶವನ್ನು ಸಂಬಂಧಪಟ್ಟ ಅಧಿಕಾರಿಗಳು ಅನುಷ್ಠಾನಗೊಳಿಸದೇ ಇರುವುದನ್ನು ಗಂಭೀರವಾಗಿ ಪರಿಗಣಿಸಿ ಈ ರೀತಿಯ ಪ್ರಕರಣಗಳು ಪುನರಾವರ್ತಿಸದಂತೆ ಹಾಗೂ ನ್ಯಾಯಾಲಯದ ಆದೇಶಗಳನ್ನು ಕೂಡಲೇ…

Read More

ಬೆಂಗಳೂರು : ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ತುಟ್ಟಿ ಭತ್ಯೆಯ ದರಗಳನ್ನು 1ನೇ ಜುಲೈ 2024 ರಿಂದ ಜಾರಿಗೆ ಬರುವಂತೆ ಪ್ರಸ್ತುತ ಮೂಲ ವೇತನದ 8.50% ರಿಂದ 10.75% ಕ್ಕೆ ಪರಿಷ್ಕರಿಸಿ ಹೆಚ್ಚಳ ಮಾಡಿ ಅಧಿಕೃತ ಆದೇಶ ಹೊರಡಿಸಿದೆ. ಆದೇಶದಲ್ಲಿ ಏನಿದೆ? ರಾಜ್ಯ ಸರ್ಕಾರದಿಂದ ರಚಿಸಲ್ಪಟ್ಟ 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸುಗಳ ಬೆಳಕಿನಲ್ಲಿ ವೇತನ ಶ್ರೇಣಿಗಳು ಮತ್ತು ಪಿಂಚಣಿ ಪರಿಷ್ಕರಣೆ ಕುರಿತ ವೇತನ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಲು ನೀತಿ ನಿರ್ಣಯವನ್ನು ಕೈಗೊಳ್ಳಲಾಗಿರುತ್ತದೆ. ಅದರಂತೆ, ಕ್ರಮವಾಗಿ ಮೇಲೆ (1) ಮತ್ತು (2)ರಲ್ಲಿ ಓದಲಾದ ದಿನಾಂಕ: 23.08.2024 ಮತ್ತು 28.08.2024ರ ಸರ್ಕಾರಿ ಆದೇಶಗಳಲ್ಲಿ 2024ರ ಪರಿಷ್ಕೃತ ವೇತನ ಶ್ರೇಣಿಗಳನ್ನು ಮತ್ತು ಪರಿಷ್ಕೃತ ಪಿಂಚಣಿಯನ್ನು ದಿನಾಂಕ: 01.08.2024ರಿಂದ ಅನ್ವಯವಾಗುವಂತೆ ಅನುಷ್ಠಾನಗೊಳಿಸಿ ವಿಸ್ತ್ರತವಾದ ಅದೇಶಗಳನ್ನು ಹೊರಡಿಸಲಾಗಿರುತ್ತದೆ. ದಿನಾಂಕ: 23.08.2024ರ ಸರ್ಕಾರಿ ಆದೇಶದಲ್ಲಿ ರಾಜ್ಯ ಸರ್ಕಾರಿ ನೌಕರರು ಮತ್ತು ರಾಜ್ಯ ಸರ್ಕಾರದ ನಿವೃತ್ತಿ ವೇತನದಾರರಿಗೆ ತುಟ್ಟಿ ಭತ್ಯೆ ಮಂಜೂರಾತಿಯನ್ನು ಕ್ರಮಬದ್ಧಗೊಳಿಸುವ ಬಗ್ಗೆ ಅವಕಾಶಗಳನ್ನು…

Read More

ಬೆಂಗಳೂರು : ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ತುಟ್ಟಿ ಭತ್ಯೆಯ ದರಗಳನ್ನು 1ನೇ ಜುಲೈ 2024 ರಿಂದ ಜಾರಿಗೆ ಬರುವಂತೆ ಪ್ರಸ್ತುತ ಮೂಲ ವೇತನದ 8.50% ರಿಂದ 10.75% ಕ್ಕೆ ಪರಿಷ್ಕರಿಸಿ ಹೆಚ್ಚಳ ಮಾಡಿ ಅಧಿಕೃತ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದಿಂದ ರಚಿಸಲ್ಪಟ್ಟ 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸುಗಳ ಬೆಳಕಿನಲ್ಲಿ ವೇತನ ಶ್ರೇಣಿಗಳು ಮತ್ತು ಪಿಂಚಣಿ ಪರಿಷ್ಕರಣೆ ಕುರಿತ ವೇತನ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಲು ನೀತಿ ನಿರ್ಣಯವನ್ನು ಕೈಗೊಳ್ಳಲಾಗಿರುತ್ತದೆ. ಅದರಂತೆ, ಕ್ರಮವಾಗಿ ಮೇಲೆ (1) ಮತ್ತು (2)ರಲ್ಲಿ ಓದಲಾದ ದಿನಾಂಕ: 23.08.2024 ಮತ್ತು 28.08.2024ರ ಸರ್ಕಾರಿ ಆದೇಶಗಳಲ್ಲಿ 2024ರ ಪರಿಷ್ಕೃತ ವೇತನ ಶ್ರೇಣಿಗಳನ್ನು ಮತ್ತು ಪರಿಷ್ಕೃತ ಪಿಂಚಣಿಯನ್ನು ದಿನಾಂಕ: 01.08.2024ರಿಂದ ಅನ್ವಯವಾಗುವಂತೆ ಅನುಷ್ಠಾನಗೊಳಿಸಿ ವಿಸ್ತ್ರತವಾದ ಅದೇಶಗಳನ್ನು ಹೊರಡಿಸಲಾಗಿರುತ್ತದೆ. ದಿನಾಂಕ: 23.08.2024ರ ಸರ್ಕಾರಿ ಆದೇಶದಲ್ಲಿ ರಾಜ್ಯ ಸರ್ಕಾರಿ ನೌಕರರು ಮತ್ತು ರಾಜ್ಯ ಸರ್ಕಾರದ ನಿವೃತ್ತಿ ವೇತನದಾರರಿಗೆ ತುಟ್ಟಿ ಭತ್ಯೆ ಮಂಜೂರಾತಿಯನ್ನು ಕ್ರಮಬದ್ಧಗೊಳಿಸುವ ಬಗ್ಗೆ ಅವಕಾಶಗಳನ್ನು ಕಲ್ಪಿಸಲಾಗಿರುತ್ತದೆ. ಮೇಲೆ…

Read More

ಜಗತ್ತಿನಲ್ಲಿ ಒಂದು ಅನಿರೀಕ್ಷಿತ ಘಟನೆ ಎಂದರೆ ಅದು ಸಾವು. ಅದು ಯಾವಾಗ ಹೇಗೆ ಬರುತ್ತದೆ ಎಂದು ಯಾರೂ ಹೇಳಲಾರರು. ಇಂದು ನಮ್ಮೊಂದಿಗೆ ನಗುನಗುತ್ತಾ ಮಾತನಾಡುವವನು ನಾಳೆ ಬದುಕಿರುತ್ತಾನೆಯೇ ಎಂದು ಹೇಳಲು ಸಾಧ್ಯವಿಲ್ಲ. ಜನನ ಯಾವಾಗ ಸಂಭವಿಸುತ್ತದೆ ಎಂದು ನಾವು ಹೇಳಬಹುದು, ಆದರೆ ಮರಣವನ್ನು ಊಹಿಸಲು ಯಾರ ವ್ಯವಹಾರವೂ ಇಲ್ಲ. ಆದರೆ AI ಈ ಅಸಾಧ್ಯ ಕೆಲಸವನ್ನು ಸಾಧ್ಯವಾಗಿಸುತ್ತಿದೆ. ಲ್ಯಾನ್ಸೆಟ್ ಸಂಶೋಧಕರು ಸಾವನ್ನು ಮೊದಲೇ ಊಹಿಸುವ AI ಅನ್ನು ಅಭಿವೃದ್ಧಿಪಡಿಸಿದ್ದಾರೆ. ಇದು ಶೀಘ್ರದಲ್ಲೇ ಲಭ್ಯವಾಗಲಿದೆ. ಇದರ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ. ನಿಖರವಾಗಿ ಈ AI ಸಾಧನ ಯಾವುದು? ಲ್ಯಾನ್ಸೆಟ್ ಸಂಶೋಧಕರು ಈ ಎಐ-ಇಸಿಜಿ ರಿಸ್ಕ್ ಎಸ್ಟಿಮೇಟರ್ ಅನ್ನು ಅಭಿವೃದ್ಧಿಪಡಿಸಿದ್ದು, ಆರೋಗ್ಯ ಸಮಸ್ಯೆಗಳನ್ನು ಮೊದಲೇ ಪತ್ತೆಹಚ್ಚಲು ಮತ್ತು ನಾವು ಸಾವಿಗೆ ಎಷ್ಟು ಹತ್ತಿರವಾಗಿದ್ದೇವೆ ಎಂಬುದನ್ನು ಊಹಿಸಲು. ಈ ಉಪಕರಣವು ರೋಗಗಳನ್ನು ಮೊದಲೇ ಊಹಿಸಬಹುದು. ಅಲ್ಲದೆ ವ್ಯಕ್ತಿಯು ಹೃದಯಾಘಾತದಿಂದ ಬಳಲುತ್ತಿದ್ದಾನೆಯೇ ಅಥವಾ ಇಲ್ಲವೇ? ಅದನ್ನು ಗುರುತಿಸುವುದರ ಜೊತೆಗೆ ಅವರ ಸಾವನ್ನು ಕೂಡ ಗುರುತಿಸಲಾಗುವುದು ಎಂದು…

Read More

16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಮಾಧ್ಯಮ ಬಳಸುವುದನ್ನು ನಿಷೇಧಿಸುವ ಹೊಸ ಕಾನೂನನ್ನು ಆಸ್ಟ್ರೇಲಿಯಾ ಸರ್ಕಾರ ಪರಿಚಯಿಸಲಾಗಿದೆ. ಈ ಮೂಲಕ ಆಸ್ಟ್ರೇಲಿಯಾ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಆಸ್ಟ್ರೇಲಿಯಾದ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ಇಂದು ಆ ಮಸೂದೆಗೆ ಅನುಮೋದನೆಯ ಮುದ್ರೆಯನ್ನು ನೀಡಿತು. ಬುಧವಾರ ಸದನದಲ್ಲಿ ವಿಧೇಯಕ ಮಂಡಿಸಿದಾಗ 102 ಸದಸ್ಯರು ಪರವಾಗಿ ಮತ ಚಲಾಯಿಸಿದರು. ಎಲ್ಲಾ ಬಹುಮತದ ಪಕ್ಷಗಳು ಮಸೂದೆಯ ಪರವಾಗಿ ಮತ ಚಲಾಯಿಸಿದರೆ, 13 ಸದಸ್ಯರು ಅದನ್ನು ವಿರೋಧಿಸಿದರು. ಸೆನೆಟ್ ಅಂಗೀಕರಿಸಿದ ತಕ್ಷಣ ಮಸೂದೆ ಕಾನೂನಾಗಲಿದೆ. ಇದಾದ ಬಳಿಕ ಸರ್ಕಾರ ಸಾಮಾಜಿಕ ಜಾಲತಾಣಗಳಿಗೆ ಆದೇಶ ಹೊರಡಿಸಲಿದೆ. 16 ವರ್ಷದೊಳಗಿನ ಮಕ್ಕಳ ಸಾಮಾಜಿಕ ಮಾಧ್ಯಮ ಖಾತೆಗಳನ್ನು ವ್ಯವಸ್ಥಿತವಾಗಿ ನಿರ್ಬಂಧಿಸಲು ವಿಫಲವಾದರೆ ಸಾಮಾಜಿಕ ಮಾಧ್ಯಮ ಕಂಪನಿಗಳಿಗೆ $ 50 ಮಿಲಿಯನ್ ವರೆಗೆ ದಂಡ ವಿಧಿಸಬಹುದು ಎಂದು ಸರ್ಕಾರ ಎಚ್ಚರಿಸಿದೆ. ಅಂದರೆ ನಮ್ಮ ಭಾರತೀಯ ಕರೆನ್ಸಿ ಪ್ರಕಾರ ರೂ.273 ಕೋಟಿಗೂ ಹೆಚ್ಚು. ಈ ಕಾನೂನು Facebook, X, Instagram, TikTok, Snapchat, Reddit ಮತ್ತು ಇತರ…

Read More

ಶಿವಮೊಗ್ಗ : :ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ನಿರ್ದೇಶಕರಾದ(ಪುರಾತತ್ತ್ವ)(ಪ್ರ) ಡಾ.ಆರ್.ಶೇಜೇಶ್ವರ ಮತ್ತು ಮಂಜಪ್ಪ ಚುರ್ಚಿಗುಂಡಿ ಇವರು ಕ್ಷೇತ್ರ ಕಾರ್ಯ ಕೈಗೊಂಡಾಗ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಕಲ್ಮನೆ ಗ್ರಾಮದ ಬನ್ನಿಕಾಳಮ್ಮನ ಗುಡಿಯ ಹತ್ತಿರ ಕಲ್ಯಾಣ ಚಾಲುಕ್ಯರ ಎರಡು ಶಾಸನಗಳು ಪತ್ತೆಯಾಗಿವೆ. ಈ ಎರಡು ಶಾಸನಗಳು ಕಲ್ಲಿನ ಶಾಸನಗಳಾಗಿದ್ದು ಕಲ್ಯಾಣ ಚಾಲುಕ್ಯ ಅರಸ ಆರನೆಯ ವಿಕ್ರಮಾದಿತ್ಯನ ಕ್ರಿ.ಶ.1084 ಹಾಗೂ 1096 ರ ಕಾಲಕ್ಕೆ ಸೇರಿದವುಗಳಾಗಿವೆ. ಒಂದನೇ ಶಾಸನವು ಕ್ರಿ.ಶ 1084 ಕ್ಕೆ ಸೇರಿದ್ದಾಗಿದೆ. ಕಲ್ಮನೆಯ ಮಲ್ಲಿಕಾರ್ಜುನ ದೇವರಿಗೆ ದಾನ ಬಿಟ್ಟ ವಿಷಯವಿದ್ದು ಶಾಸನದ ಮೇಲ್ಬಾಗದಲ್ಲಿ ಸೂರ್ಯ ಚಂದ್ರ. ಲಿಂಗ ಪೂಜೆ ಮಾಡುತ್ತಿರುವ ಯತಿ, ನೀರಿನ ಕೊಡ, ಹಸು ಮತ್ತು ಕರುವಿನ ಉಬ್ಬು ಶಿಲ್ಪ ಇದೆ. ಸಂಕಗೊಣ್ಣನ ಹೆಂಡತಿ ಬೆಳೆಂಬೆ ಭೂಮಿ ದಾನ ನೀಡಿದ ವಿಷಯ ಇದೆ. ಎರಡನೇ ಶಾಸನವು 18 ಸಾಲುಗಳಿಂದ ಕೂಡಿದೆ. ಕಲ್ಯಾಣ ಚಾಲುಕ್ಯ ಅರಸ ಆರನೆಯ ವಿಕ್ರಮಾದಿತ್ಯನ ಕ್ರಿ.ಶ 1096 ಕ್ಕೆ ಸೇರಿದ ಶಾಸನವಾಗಿದ್ದು ಇದರ ಮೇಲ್ಬಾಗದಲ್ಲೂ ಶಿವಲಿಂಗ…

Read More

ಬೆಂಗಳೂರು : ರಾಜ್ಯ ಸರ್ಕಾರವು 2025ನೇ ಸಾಲಿಗೆ ಮಂಜೂರು ಮಾಡಿರುವ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ಸಾರ್ವಜನಿಕ ಮಾಹಿತಿಗಾಗಿ ಈ ಕೆಳಕಂಡಂತೆ ಪ್ರಕಟಿಸಲಾಗಿದೆ. ಎಲ್ಲಾ ಎರಡನೇ ಶನಿವಾರ, ನಾಲ್ಕನೇ ಶನಿವಾರ ಮತ್ತು ಭಾನುವಾರಗಳು ಹಾಗೂ ಈ ಕೆಳಕಂಡ ದಿನಗಳು ರಜೆ ಇರಲಿವೆ. ಸೂಚನೆ: 1. ಈ ರಜಾ ಪಟ್ಟಿಯಲ್ಲಿ ಭಾನುವಾರಗಳಂದು ಬರುವ ಗಣರಾಜ್ಯೋತ್ಸವ (26.01.2025), ಯುಗಾದಿ ಹಬ್ಬ (30.03.2025), ಮೊಹರಂ ಕಡೆ ದಿನ (06.07.2025) ಮತ್ತು ಮಹಾಲಯ ಅಮವಾಸ್ಯೆ (21.09.2025) ಹಾಗೂ ಎರಡನೇ ಶನಿವಾರದಂದು ಬರುವ ಕನಕದಾಸ ಜಯಂತಿ (08.11.2025) ಈ ರಜೆ ಪಟ್ಟಿಯಲ್ಲಿ ನಮೂದಿಸಿರುವುದಿಲ್ಲ. 2. ಸಾರ್ವತ್ರಿಕ ರಜಾ ದಿನಗಳಲ್ಲಿ ರಾಜ್ಯಾದ್ಯಂತ ಸರ್ಕಾರಿ ಕಛೇರಿಗಳು ಮುಚ್ಚಲ್ಪಡುತ್ತವೆ. ಕಛೇರಿಯ ಜರೂರು ಕೆಲಸವನ್ನು ವಿಲೇವಾರಿ ಮಾಡುವ ಬಗ್ಗೆ ಇಲಾಖಾ ಮುಖ್ಯಸ್ಥರುಗಳು ಸೂಕ್ತ ವ್ಯವಸ್ಥೆ ಮಾಡತಕ್ಕದ್ದು. 3. ಈ ಪಟ್ಟಿಯಲ್ಲಿ ಸೇರಿಸಲಾಗಿರುವ ಮುಸಲ್ಮಾನ ಬಾಂಧವರ ಹಬ್ಬಗಳು ನಿಗಧಿತ ದಿನಾಂಕದಂದು ಬೀಳದಿದ್ದರೆ ಸರ್ಕಾರಿ ಸೇವೆಯಲ್ಲಿರುವ ಮುಸಲ್ಮಾನ ಬಾಂಧವರಿಗೆ ನಿಗಧಿತ ರಜೆಗೆ ಬದಲಾಗಿ ಹಬ್ಬದ ದಿವಸ ರಜಾ…

Read More