Author: kannadanewsnow57

ಬೆಂಗಳೂರು : ಭಾರತದಲ್ಲಿ ಮುಸ್ಲಿಮರಿಗೆ ಮತದಾನದ ಹಕ್ಕು ರದ್ದು ಮಾಡಬೇಕು ಎಂಬ ವಿಶ್ವ ಒಕ್ಕಲಿಗರ ಮಠದ ಪೀಠಾಧ್ಯಕ್ಷ ಚಂದ್ರಶೇಖರನಾಥ ಸ್ವಾಮೀಜಿ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾದ ಬೆನ್ನಲ್ಲೇಚಂದ್ರಶೇಖರನಾಥ ಸ್ವಾಮೀಜಿ ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸ್ವಾಮೀಜಿ, ಬೆಂಗಳೂರು ನಗರದ ಫ್ರೀಡಂ ಪಾರ್ಕ್ ನಲ್ಲಿ ನಡೆದ ಭಾರತೀಯ ಕಿಸಾನ್ ಸಂಘ ಆಯೋಜಿಸಿದ್ದ ಸಾರ್ವಜನಿಕ ಸಮಾವೇಶದಲ್ಲಿ ಮುಸಲ್ಮಾನರಿಗೆ ಮತದಾನದ ಹಕ್ಕು ರದ್ದುಪಡಿಸಬೇಕು ಎಂಬ ನನ್ನ ಹೇಳಿಕೆ ಚರ್ಚೆಗೆ ಕಾರಣವಗಿದೆ. ಬಾಯಿತಪ್ಪಿನಿಂದ ನೀಡಿರುವ ಹೇಳಿಕೆಯಿಂದ ಮುಸಲ್ಮಾನ ಸಹೋದರರಿಗೆ ಬೇಸರವಾಗಿದ್ದರೆ ವಿಷಾದ ವ್ಯಕ್ತಪಡಿಸುವುದಾಗಿ ತಿಳಿಸಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯ ಕಿಸಾನ್‌ ಸಂಘಟನೆ ನಡೆಸಿದ ಪ್ರತಿಭಟನೆಯಲ್ಲಿ ಚಂದ್ರಶೇಖರ ಸ್ವಾಮೀಜಿಯೂ ಪಾಲ್ಗೊಂಡಿದ್ದರು. ಈ ವೇಳೆ ಸ್ವಾಮೀಜಿ ವಿವಾದಾತ್ಮಕ ಹೇಳಿಕೆಯನ್ನ ನೀಡಿದ್ದಾರೆ. ಒಕ್ಕಲಿಗರ ಮಠದ ಚಂದ್ರಶೇಖರನಾಥ ಸ್ವಾಮೀಜಿ, ವಕ್ಫ್ ಬೋರ್ಡ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ಪಾಕಿಸ್ತಾನ ರೀತಿಯಲ್ಲಿ ಭಾರತದಲ್ಲೂ ಕಾನೂನು‌ ಜಾರಿಯಾಗಬೇಕು. ಭಾರತದಲ್ಲಿ ಮುಸ್ಲಿಮರಿಗೆ ಮತ ಚಲಾಯಿಸುವ ಹಕ್ಕನ್ನ ರದ್ದು ಮಾಡಬೇಕು ಎಂಬ ವಿವಾದಾತ್ಮಕ…

Read More

ನವದೆಹಲಿ : ಭಾರತ ಸರ್ಕಾರವು ಇತ್ತೀಚೆಗೆ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ, ಇದು ದೇಶದ ಕೋಟ್ಯಂತರ ನಾಗರಿಕರ ದೈನಂದಿನ ಜೀವನದ ಮೇಲೆ ಪರಿಣಾಮ ಬೀರಲಿದೆ. ಸರ್ಕಾರ ಹೊರಡಿಸಿದ ಹೊಸ ಅಧಿಸೂಚನೆಯ ಪ್ರಕಾರ, ಉಚಿತ ಪಡಿತರ ಯೋಜನೆಯಡಿ ಪ್ರಯೋಜನಗಳನ್ನು ಪಡೆಯುವ ಜನರು ಈಗ ತಮ್ಮ eKYC ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕಾಗುತ್ತದೆ. ಯೋಜನೆಯಲ್ಲಿ ಪಾರದರ್ಶಕತೆ ಹೆಚ್ಚಿಸುವ ಮತ್ತು ಅನರ್ಹ ಫಲಾನುಭವಿಗಳನ್ನು ಹೊರಹಾಕುವ ಉದ್ದೇಶದಿಂದ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಉಚಿತ ಪಡಿತರ ಅವಧಿ ಈ ಉಚಿತ ಪಡಿತರ ಯೋಜನೆ ಮುಂದಿನ ಐದು ವರ್ಷಗಳವರೆಗೆ ಮುಂದುವರಿಯುತ್ತದೆ ಎಂದು ಸರ್ಕಾರ ಘೋಷಿಸಿದೆ. ಈ ಯೋಜನೆಯು ವಿಶೇಷವಾಗಿ ಆಹಾರ ಭದ್ರತೆಯ ಅಗತ್ಯವಿರುವ ದೇಶದ ಬಡ ಮತ್ತು ನಿರ್ಗತಿಕ ನಾಗರಿಕರಿಗೆ. ಸರ್ಕಾರದ ಈ ಉಪಕ್ರಮವು ಸುಮಾರು 80 ಕೋಟಿ ಜನರಿಗೆ ಪ್ರಯೋಜನವನ್ನು ನೀಡುತ್ತದೆ, ಅವರಿಗೆ ಉಚಿತ ಪಡಿತರವಾಗಿ ಗೋಧಿ, ಅಕ್ಕಿ ಮತ್ತು ಇತರ ಅಗತ್ಯ ಆಹಾರಗಳನ್ನು ನೀಡಲಾಗುತ್ತದೆ. ನಕಲಿ ಪಡಿತರ ಚೀಟಿಗಳ ಬಗ್ಗೆ ಆತಂಕ ಸರಕಾರ ವಿಶೇಷ ಗಮನ ಹರಿಸುತ್ತಿರುವ ದೊಡ್ಡ ಸಮಸ್ಯೆ…

Read More

ನವದೆಹಲಿ : ಭಾರತದಲ್ಲಿ ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಎಂಬ ವಿಶ್ವ ಒಕ್ಕಲಿಗರ ಮಠದ ಚಂದ್ರಶೇಖರನಾಥ ಸ್ವಾಮೀಜಿ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಸ್ವಾಮೀಜಿಗಳು ಯಾವುದೇ ಕಾರಣಕ್ಕೂ ವಿವಾದಾತ್ಮಕ ಹೇಳಿಕೆ ನೀಡಬಾರದು ಎಂದು ಹೇಳಿದ್ದಾರೆ. ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಾಮೀಜಿಗಳು ರಾಜಕೀಯದಿಂದ ದೂರ ಇರಬೇಕು. ವಿವಾದಾತ್ಮಕ ಹೇಳಿಕೆ ನೀಡಬಾರದು. ಸಂವಿಧಾನ ಎಲ್ಲರಿಗೂ ಮತದಾನದ ಹಕ್ಕು ನೀಡಿದೆ. ಸ್ವಾಮೀಜಿಗಳಿಗೆ ನಾನು ಮನವಿ ಮಾಡುತ್ತೇನೆ. ವಿವಾದಾತ್ಮಕ ಹೇಳಿಕೆ ನೀಡಬೇಡಿ ಎಂದು ತಿಳಿಸಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯ ಕಿಸಾನ್‌ ಸಂಘಟನೆ ನಡೆಸಿದ ಪ್ರತಿಭಟನೆಯಲ್ಲಿ ಚಂದ್ರಶೇಖರ ಸ್ವಾಮೀಜಿಯೂ ಪಾಲ್ಗೊಂಡಿದ್ದರು. ಈ ವೇಳೆ ಸ್ವಾಮೀಜಿ ವಿವಾದಾತ್ಮಕ ಹೇಳಿಕೆಯನ್ನ ನೀಡಿದ್ದಾರೆ. ಒಕ್ಕಲಿಗರ ಮಠದ ಚಂದ್ರಶೇಖರನಾಥ ಸ್ವಾಮೀಜಿ, ವಕ್ಫ್ ಬೋರ್ಡ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ಪಾಕಿಸ್ತಾನ ರೀತಿಯಲ್ಲಿ ಭಾರತದಲ್ಲೂ ಕಾನೂನು‌ ಜಾರಿಯಾಗಬೇಕು. ಭಾರತದಲ್ಲಿ ಮುಸ್ಲಿಮರಿಗೆ ಮತ ಚಲಾಯಿಸುವ ಹಕ್ಕನ್ನ ರದ್ದು ಮಾಡಬೇಕು ಎಂಬ ವಿವಾದಾತ್ಮಕ ಹೇಳಿಕೆಯನ್ನ ನೀಡಿದ್ದಾರೆ. ಹೌದು ಭಾರತದಲ್ಲಿ ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು.…

Read More

ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಸಾರಿಗೆ ಇಲಾಖೆಯ ನೌಕರರು ಸರ್ಕಾರದ ವಿರುದ್ಧ ಸಿಡಿದೆದ್ದಿದ್ದು. ಡಿ.31 ರಿಂದ ಮುಷ್ಕರಕ್ಕೆ ಕರೆ ಕೊಟ್ಟಿದ್ದು, ಬಸ್ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ. ಸಾರಿಗೆ ನೌಕರರ ಹಿರಿಯ ಮುಖಂಡ ಅನಂತ ಸುಬ್ಬರಾವ್ ಅವರು ಈಗಾಗಲೇ ಡಿಸೆಂಬರ್ 31 ರಿಂದ ಸಾರಿಗೆ ಮುಷ್ಕರಕ್ಕೆ ಈಗಾಗಲೇ ಕರೆ ನೀಡಿದ್ದಾರೆ. ಬೆಳಗಾವಿಯಲ್ಲಿ  ಡಿಸೆಂಬರ್  9ರಿಂದ ಚಳಿಗಾಲದ ಅಧಿವೇಶನ ನಡೆಯಲಿದ್ದು, ಅಂದು ಸಾರಿಗೆ ನೌಕರರು ಬೆಳಗಾವಿ ಚಲೋ ನಡೆಸಲಿದ್ದು, ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ನೋಟಿಸ್ ನೀಡಲಾಗುವುದು.  ಬಳಿಕ ಡಿಸೆಂಬರ್ 31ರಿಂದ ಸಾರಿಗೆ ಮುಷ್ಕರ ಆರಂಭಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ. ರಾಜ್ಯದ 6 ಸಾರಿಗೆ ನೌಕರರ ಸಂಘಟನೆಗಳ ಒಕ್ಕೂಟ ಸೇರಿ ಜಂಟಿ ಕ್ರಿಯಾ ಸಮಿತಿ ಮಾಡಿಕೊಂಡಿದ್ದು, 6 ಸಂಘಟನೆಗಳು ಮುಷ್ಕರಕ್ಕೆ ಬೆಂಬಲ ಘೋಷಿಸಿವೆ. ಸಾರಿಗೆ ನೌಕರರ ಬೇಡಿಕೆಗಳನ್ನು ಸರ್ಕಾರ ನಿರ್ಲಕ್ಷ್ಯ ಮಾಡಿದರೆ ಸಾರಿಗೆ ಸಂಚಾರ ಸಂಪೂರ್ಣ ಸ್ಥಗಿತಗೊಳಿಸಲಾಗುವುದು ಎಂದು ಸಾರಿಗೆ ನೌಕರರು ಎಚ್ಚರಿಕೆ ನೀಡಿದ್ದಾರೆ.

Read More

ಪ್ರಸಕ್ತ (2024-25) ಸಾಲಿನಲ್ಲಿ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಕಾರ್ಯಕ್ರಮದಲ್ಲಿ ಸಾಮಾನ್ಯ ವರ್ಗದ ರೈತರಿಗೆ ಶೇ.50ರ ರಿಯಾಯಿತಿಯಲ್ಲಿ ಕೃಷಿ ಯಂತ್ರೋಪಕರಣಗಳು ಲಭ್ಯವಿರುತ್ತವೆ. ಆಸಕ್ತ ರೈತರು ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿಯೊಂದಿಗೆ ಪಹಣಿ(ಆರ್ಟಿಸಿ), ಆಧಾರ್ ಕಾರ್ಡ್ನ ಜೆರಾಕ್ಸ್, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್, ಒಂದು ಭಾವಚಿತ್ರ ರೂ.100ರ ಛಾಪಾ ಕಾಗದ ದಾಖಲಾತಿಗಳನ್ನು ಸಲ್ಲಿಸಿ ಇಲಾಖೆಯಲ್ಲಿ ಸಿಗುವ ಕೃಷಿ ಯಂತ್ರೋಪಕರಣಗಳ ಸದುಪಯೋಗವನ್ನು ಪಡೆದುಕೊಳ್ಳುವಂತೆ ಕೋರಿದೆ. ಕೃಷಿ ಉಪಕರಣಗಳಾದ ಮಿನಿ ಟ್ರ್ಯಾಕ್ಟರ್, ಪವರ್ ಟಿಲ್ಲರ್, ಕಲ್ಟಿವೇಟರ್, ರೋಟವೇಟರ್, ಎಂ.ಬಿ.ಪ್ಲೂ, ಡಿಸ್ಕ್ ಪ್ಲೋ, ಕಳೆಕೊಚ್ಚುವ ಯಂತ್ರ, ಕಳೆ ತೆಗೆಯುವ ಯಂತ್ರ, ಡಿಸೇಲ್ ಪಂಪ್ ಸೆಟ್, ಪವರ್ ಸ್ಪ್ರೇಯರ್, ಮೇವು ಕತ್ತರಿಸುವ ಯಂತ್ರ, ಭತ್ತದ ಒಕ್ಕಣೆ ಯಂತ್ರ, ಭತ್ತ ಕಟಾವು ಯಂತ್ರ, ಮುಸುಕಿನ ಜೋಳ ಒಕ್ಕಣೆ ಯಂತ್ರ, ಕೃಷಿ ಉತ್ಪನ್ನಗಳ ಸಂಸ್ಕರಣೆ ಯಂತ್ರಗಳಾದ, ರಾಗಿ ಕ್ಲೀನಿಂಗ್ ಯಂತ್ರ, ಹಿಟ್ಟು ಮಾಡುವ ಯಂತ್ರ, ಮೆಣಸಿನ ಕಾಯಿ ಪುಡಿ ಮಾಡುವ ಯಂತ್ರ ಹಾಗೂ…

Read More

ಬೆಂಗಳೂರು: ಆದಿವಾಸಿ, ಬುಡಕಟ್ಟು ಜನರನ್ನು ಮುಖ್ಯವಾಹಿನಿಗೆ ತರುವುದೆಂದರೆ ಅವರ ಸಂಸ್ಕೃತಿ, ಪರಂಪರೆಯನ್ನು ನಾಶಗೊಳಿಸುವುದಲ್ಲ. ಬದಲಾಗಿ ಸೌಲಭ್ಯ ವಂಚಿತರಾಗಿರುವ ಅವರಿಗೆ ಮೂಲಭೂತ ಸೌಕರ್ಯವನ್ನು ಒದಗಿಸುವುದು ಮತ್ತು ಅವರ ಸಂಸ್ಕೃತಿಯನ್ನು ಉಳಿಸುತ್ತಲೇ ಅವರನ್ನು ಆಧುನಿಕ ಬದುಕಿನ ಅಗತ್ಯ ಸೌಲಭ್ಯಗಳನ್ನು ಒದಗಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ. ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಕೊಡಗು , ಮೈಸೂರು ಚಾಮರಾಜನಗರ, ಶಿವಮೊಗ್ಗ, ಹಾಗೂ ಹಾಸನ ಜಿಲ್ಲೆಗಳ ಅಳಿವಿನಂಚಿನಲ್ಲಿರುವ ಆದಿವಾಸಿ,ಬುಡಕಟ್ಟು ಜನರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಸುದೀರ್ಘವಾಗಿ ಚರ್ಚಿಸಲಾಯಿತು. ಇದರಲ್ಲಿ, ಗ್ರಾಮೀಣಾಭಿವೃದ್ಧಿಗೆ ಸಂಬಂಧಿಸಿದಂತೆ ಮತ್ತು ಹಾಡಿಗಳು ಹಾಗೂ ಬುಡಕಟ್ಟು ವಸತಿಗಳಿಗೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚಿಸಲಾಯಿತು. – ಕುಡಿಯುವ ನೀರಿನ ವ್ಯವಸ್ಥೆ ಹಾಡಿಗಳು ಮತ್ತು ಬುಡಕಟ್ಟು ವಸತಿ ಪ್ರದೇಶಗಳಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸಲು ವಿಶೇಷ ಯೋಜನೆ ರೂಪಿಸಲಾಗುವುದು. ಇದರಲ್ಲಿ ಬೋರ್‌ವೆಲ್‌ಗಳ ಕೊರೆಯುವಿಕೆ, ನೀರಿನ ಶುದ್ಧೀಕರಣ ಘಟಕಗಳ ಸ್ಥಾಪನೆ, ಮತ್ತು ಪೈಪ್‌ಲೈನ್ ಜಾಲದ ನಿರ್ಮಾಣ ಸೇರಿವೆ. ಮೈಸೂರು ಜಿಲ್ಲೆಯಲ್ಲಿ 12 ಹಾಗೂ ಚಾಮರಾಜನಗರ ಜಿಲ್ಲೆಯ 16…

Read More

ಶಿವಮೊಗ್ಗ : ಕೆ.ಎಫ್.ಡಿ ಲಸಿಕೆ 2026ಕ್ಕೆ ಲಭ್ಯವಾಗಲಿದ್ದು, ಅಲ್ಲಿಯವರೆಗು ಮಂಗನ ಕಾಯಿಲೆಯನ್ನು ಹತೋಟಿಯಲ್ಲಿಟ್ಟುಕೊಂಡು ಯಾವುದೇ ಸಾವುಗಳಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಮಂಗನ ಕಾಯಿಲೆ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕುರಿತು ನಿನ್ನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಪ್ರವಾಸಿ ಮಂದಿರದಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಜೊತೆ ಉನ್ನತ ಮಟ್ಟದ ಸಭೆ ನಡೆಸಿದ್ದು,ಪ್ರತಿ ವರ್ಷ ಜನವರಿ ತಿಂಗಳಿನಿಂದ ಆರಂಭವಾಗಿ ಬೇಸಿಗೆವರೆಗೂ ಈ ಭಾಗದಲ್ಲಿ ಮಂಗನ ಕಾಯಿಲೆ ಉಲ್ಬಣಗೊಳ್ಳುತ್ತಿದ್ದು, ಈ ಬಾರಿ ಆರಂಭದಲ್ಲೇ ಹೆಚ್ಚು ಮುಂಜಾಗ್ರತೆ ವಹಿಸಿ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಕೆ.ಎಫ್.ಡಿ ಲಸಿಕೆ 2026ಕ್ಕೆ ಲಭ್ಯವಾಗಲಿದ್ದು, ಅಲ್ಲಿಯವರೆಗು ಮಂಗನ ಕಾಯಿಲೆಯನ್ನು ಹತೋಟಿಯಲ್ಲಿಟ್ಟುಕೊಂಡು ಯಾವುದೇ ಸಾವುಗಳಾಗದಂತೆ ಎಚ್ಚರಿಕೆ ವಹಿಸಬೇಕು. ಮುನ್ನೆಚ್ಚರಿಕೆಯಾಗಿ ಮಂಗನ ಕಾಯಿಲೆ ಇರುವ ಪ್ರದೇಶಗಳಲ್ಲಿ ಯಾರಿಗೆ ಜ್ವರ ಬಂದರು ಕಡ್ಡಾಯವಾಗಿ ಪರೀಕ್ಷಿಸಿ ಚಿಕಿತ್ಸೆ ಆರಂಭಿಸಬೇಕು.‌ DEPA ತೈಲ ಅಗತ್ಯ ದಾಸ್ತಾನು ಇರುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಈ ವೇಳೆ ಒಂದು ಲಕ್ಷ DEPA ತೈಲ ದಾಸ್ತಾನಿದ್ದು,…

Read More

ಬುಲಂದ್‌ಶಹರ್ : ನೀವು ಚಳಿಗಾಲದಲ್ಲಿ ಹುರಿದ ಕಡಲೆಕಾಳು ತಿನ್ನಲು ಇಷ್ಟಪಡುತ್ತಿದ್ದರೆ, ಅದನ್ನು ಪರಿಶೀಲಿಸಿ ತಿನ್ನಿರಿ. ಹೆಚ್ಚು ತಿನ್ನುವುದು ನಿಮ್ಮ ಸಾವಿಗೆ ಕಾರಣವಾಗಬಹುದು. ಏಕೆಂದರೆ ಬುಲಂದ್‌ಶಹರ್‌ನಲ್ಲಿ ಹುರಿದ ಕಡಲೆಕಾಳು ತಿಂದು ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತಪಟ್ಟವರಲ್ಲಿ ಮಗುವೂ ಸೇರಿದೆ. ಬುಲಂದ್‌ಶಹರ್‌ನ ನರಸೇನಾ ಪೊಲೀಸ್ ಠಾಣೆ ವ್ಯಾಪ್ತಿಯ ಮೊಹಮ್ಮದ್‌ಪುರ ಬರ್ವಾಲಾ ಗ್ರಾಮದ ಪ್ರಕರಣ ಇದಾಗಿದೆ. ನವೆಂಬರ್ 24 ರ ಸಂಜೆ ಸಂತ್ರಸ್ತರ ಕುಟುಂಬವು ಮಾರುಕಟ್ಟೆಯಲ್ಲಿ ಬೀದಿ ಬಂಡಿಯಿಂದ ಹುರಿದ ಕಡಲೆಕಾಳು ಖರೀದಿಸಿ ಮನೆಯಲ್ಲಿ ಬೇಯಿಸಿದ ಆಹಾರವನ್ನು ಸೇವಿಸಿದ್ದರು ಎಂದು ಹೇಳಲಾಗುತ್ತಿದೆ. ಇದಾದ ನಂತರ 50 ವರ್ಷದ ಅಜ್ಜ ಕಲುವಾ ಸಿಂಗ್ ಮತ್ತು 8 ವರ್ಷದ ಅಮಾಯಕ ಮೊಮ್ಮಗ ಲವಿಶ್ ಸಾವನ್ನಪ್ಪಿದ್ದಾರೆ. ನಿನ್ನೆ ಸೊಸೆ ಜೋಗೇಂದ್ರಿ ಕೂಡ ಸಾವನ್ನಪ್ಪಿದ್ದಾರೆ. ಮಾಹಿತಿ ಮೇರೆಗೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದ್ದು, ಸಾವಿಗೆ ಕಾರಣ ಪತ್ತೆ ಹಚ್ಚುವಲ್ಲಿ ಆಡಳಿತಾಧಿಕಾರಿಗಳು ನಿರತರಾಗಿದ್ದಾರೆ. ಮೃತರ ಸಂಬಂಧಿಕರು ಮರಣೋತ್ತರ ಪರೀಕ್ಷೆ ನಡೆಸದೆ…

Read More

ಹೈದರಾಬಾದ್ : ಹೈದರಾಬಾದ್ ನ ಮಾದಾಪುರದಲ್ಲಿ ಘೋರ ಘಟನೆಯೊಂದು ನಡೆದಿದ್ದು, ಮೈ ಹೋಮ್ ಭುಜ್ ಕಟ್ಟಡದ 9ನೇ ಮಹಡಿಯಿಂದ ಮಹಿಳೆಯೊಬ್ಬರು ಆಕಸ್ಮಿಕವಾಗಿ ಕೆಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ಒರಿಸ್ಸಾ ರಾಜ್ಯದ ಅಶ್ವಿತಾ ಸಿಂಗ್ (25) ಎಂಬಾಕೆಯನ್ನು ರಾಜೇಶ್ ಬಾಬು ಎಂಬ ವ್ಯಕ್ತಿ ಬಾಡಿಗೆ ತಾಯ್ತನದ ಮೂಲಕ ಮಕ್ಕಳಿಗೆ ಜನ್ಮ ನೀಡಲು ಕರೆತಂದಿದ್ದ. ಆ ಮಹಿಳೆ ಜನ್ಮ ನೀಡಿದ್ದಕ್ಕೆ ರೂ. 10 ಲಕ್ಷಕ್ಕೆ ಒಪ್ಪಂದ ಮಾಡಿಕೊಂಡಿದ್ದರು. ಆದರೆ ಕಳೆದ ಕೆಲ ತಿಂಗಳಿನಿಂದ ರಾಜೇಶ್ ಬಾಬು ವರ್ತನೆ ಇಷ್ಟವಾಗದ ಕಾರಣ ಯುವತಿ ಅಶ್ವಿತಾ ಸಿಂಗ್ ಓಡಿ ಹೋಗಲು ಯತ್ನಿಸಿದ್ದಾಳೆ. ತಪ್ಪಿಸಿಕೊಳ್ಳುವ ಪ್ರಕ್ರಿಯೆಯಲ್ಲಿ, ಕಟ್ಟಡದಿಂದ ಆಕಸ್ಮಿಕವಾಗಿ ಒಂಬತ್ತನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾಳೆ. ಅವರಿಗೆ ಪತಿ ಮತ್ತು ನಾಲ್ಕು ವರ್ಷದ ಮಗ ಇದ್ದಾರೆ. ಮಾಹಿತಿ ಪಡೆದ ರಾಯದುರ್ಗ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ಅವಲೋಕಿಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಉಸ್ಮಾನಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ರಾಜೇಶ್ ಬಾಬು ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಏತನ್ಮಧ್ಯೆ, ಭಾರತದ…

Read More

ಬೆಂಗಳೂರು : ಕಾಲುವೆ ನೀರು ಅಕ್ರಮ ಬಳಕೆ ತಡೆಗೆ ಟಾಸ್ಕ್ ಫೋರ್ಸ್ ರಚನೆ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಈ ಕುರಿತು ಡಿಸಿಎಂ ಡಿ,ಕೆ. ಶಿವಕುಮಾರ್ ಮಾಹಿತಿ ನೀಡಿದ್ದು, ಕಾಲುವೆಗಳಿಂದ ಅಕ್ರಮವಾಗಿ ನೀರು ಎತ್ತದಂತೆ ರೈತರಲ್ಲಿ ಅರಿವು ಮೂಡಿಸುವ ಜೊತೆಗೆ ಇದರ ನಿಯಂತ್ರಣಕ್ಕಾಗಿ ನೀರಾವರಿ ಹಾಗೂ ಇಂಧನ ಇಲಾಖೆ ಅಧಿಕಾರಿಗಳನ್ನು ಒಳಗೊಂಡ ಟಾಸ್ಕ್ಫೋರ್ಸ್ ರಚಿಸಲಾಗುವುದು ಎಂದು  ತಿಳಿಸಿದ್ದಾರೆ.

Read More