Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ: ವಿವಾಹೇತರ ಅಪ್ಲಿಕೇಶನ್ ಗ್ಲೀಡೆನ್ ನಲ್ಲಿ 3 ಮಿಲಿಯನ್ ಭಾರತೀಯರು ಸಕ್ರಿಯರಾಗಿದ್ದಾರೆ. ಬೆಂಗಳೂರಲ್ಲಿ ಹೆಚ್ಚು ಬಳಕೆದಾರರು ಗ್ಲೀಡೆನ್ ಬಳಕೆ ಮಾಡುವ ಮೂಲಕ ಅಗ್ರಸ್ಥಾನದಲ್ಲಿದೆ ಎಂಬುದಾಗಿ ವರದಿಯೊಂದು ತಿಳಿಸಿದೆ. ಈ ಬಗ್ಗೆ ಕಂಪನಿಯೊಂದು ಮಾಹಿತಿ ಬಿಡುಗಡೆ ಮಾಡಿದ್ದು, ‘ಸಂತೋಷದ ನಂತರ’ ಏಕೈಕ ಮಾರ್ಗ ಎಂದು ನಾವು ಭಾವಿಸಿದಾಗ, ವಿವಾಹೇತರ ಅಪ್ಲಿಕೇಶನ್ ಗ್ಲೀಡೆನ್ ಭಾರತೀಯ ಬಳಕೆದಾರರ ಡೇಟಾದೊಂದಿಗೆ ನಮ್ಮನ್ನು ಆಶ್ಚರ್ಯಗೊಳಿಸಿತು. ಗ್ಲೀಡೆನ್ ಭಾರತದಲ್ಲಿ 3 ಮಿಲಿಯನ್ ಬಳಕೆದಾರರನ್ನು ದಾಖಲಿಸಿದೆ. ದೊಡ್ಡ ಅದ್ಧೂರಿ ಮದುವೆಗಳ ಭೂಮಿಯಾದ ಭಾರತದಲ್ಲಿ ವಿವಾಹೇತರ ಡೇಟಿಂಗ್ ಅಪ್ಲಿಕೇಶನ್ನಲ್ಲಿ ಅನೇಕ ವಿವಾಹಿತರು ಇರುವುದು ವಿಪರ್ಯಾಸವಲ್ಲವೇ? ಎಂದಿದೆ. 2024 ರಲ್ಲಿ ಅಪ್ಲಿಕೇಶನ್ ತನ್ನ ಬಳಕೆದಾರರ ಸಂಖ್ಯೆಯಲ್ಲಿ ಶೇಕಡಾ 270 ರಷ್ಟು ಏರಿಕೆ ಕಂಡಿದೆ ಎಂದು ಗ್ಲೀಡೆನ್ ಹೇಳಿಕೆಯಲ್ಲಿ ಹಂಚಿಕೊಂಡಿದೆ. ಇದು ಮಹಿಳಾ ಬಳಕೆದಾರರಲ್ಲಿ ಶೇಕಡಾ 128 ರಷ್ಟು ಹೆಚ್ಚಳವನ್ನು ಕಂಡಿದೆ. ಗ್ಲೀಡೆನ್ ಬಳಕೆದಾರರಲ್ಲಿ ಮಹಿಳೆಯರು ಈಗ ಶೇಕಡಾ 58 ರಷ್ಟಿದ್ದಾರೆ ಎಂದು ವರದಿ ಬಹಿರಂಗಪಡಿಸಿದೆ. ಅವರಲ್ಲಿ 40 ಪ್ರತಿಶತದಷ್ಟು ಜನರು ಪ್ರತಿದಿನ 45 ನಿಮಿಷಗಳವರೆಗೆ…
ಬೆಂಗಳೂರು : ರಾಜ್ಯದಲ್ಲಿ ವಿದ್ಯುತ್ ಪರಿವರ್ತಕಗಳಿಗೆ ಕೊರತೆ ಇಲ್ಲ. ವಿದ್ಯುತ್ ಪರಿವರ್ತಕಗಳ ಬ್ಯಾಂಕ್ ಸ್ಥಾಪನೆ ಮಾಡಿ ದಾಸ್ತಾನು ಮಾಡಲಾಗಿದೆ ಎಂದು ಇಂಧನ ಸಚಿವರಾದ ಕೆ.ಜೆ ಜಾರ್ಜ್ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಸಚಿವರು, ಸಮಸ್ಯೆ ಉಂಟಾದಲ್ಲಿ ಟೋಲ್ ಫ್ರೀ ನಂಬರ್ 1912ಗೆ ಕರೆ ಮಾಡಿದಲ್ಲಿ ಕರೆ ರೆಕಾರ್ಡ್ ಆಗಲಿದೆ. 72 ಗಂಟೆಗಳೊಳಗೆ ವಿದ್ಯುತ್ ಪರಿವರ್ತಕಗಳ ಅಳವಡಿಕೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು. ರಾಜ್ಯದಲ್ಲಿ ದಿನೇದಿನೆ ವಿದ್ಯುತ್ ಬೇಡಿಕೆ ಹೆಚ್ಚಾಗುತ್ತಿದೆ. ಪ್ರತಿ ದಿನ 17,500 ಮೆಗಾವ್ಯಾಟ್ ವಿದ್ಯುತ್ ಬೇಡಿಕೆ ಇದೆ. ವಿದ್ಯುತ್ ಸಮರ್ಪಕ ಪೂರೈಕೆ ಹಿನ್ನೆಲೆಯಲ್ಲಿ ಕುಸುಮ್ ಬಿ ಹಾಗೂ ಕುಸುಮ್ ಸಿ ಯೋಜನೆಯಡಿ ಸೌರ ವಿದ್ಯುತ್ ಉತ್ಪಾದಿಸಲು ಖಾಸಗಿ ಸಹಭಾಗಿತ್ವದಲ್ಲಿ ಸೌರ ವಿದ್ಯುತ್ ಉತ್ಪಾದನೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರು : ಇ.ಇ.ಡಿ.ಎಸ್. ತಂತ್ರಾಂಶದಲ್ಲಿ ಶಿಕ್ಷಕರ/ಅಧಿಕಾರಿಗಳ/ಬೋಧಕೇತರ ನೌಕರರ ಸೇವಾ ವಿವರಗಳನ್ನು ಗಣಕೀಕರಿಸಿ ಅಂತಿಮಗೊಳಿಸುವ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ವಿಷಯಕ್ಕೆ ಸಂಬಂದಿಸಿದಂತೆ ಈಗಾಗಲೇ ರಾಜ್ಯದಲ್ಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಸಹಶಿಕ್ಷಕರ ಮತ್ತು ಮುಖ್ಯ ಶಿಕ್ಷಕರ ಹಾಗೂ ತತ್ಸಮಾನ ವೃಂದದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವವರ, ಮಾಹಿತಿಯನ್ನು ಇಂದೀಕರಣಕ್ಕೆ ಸಂಬಂಧಿಸಿದಂತೆ, ಉಲ್ಲೇಖ-1ರಲ್ಲಿ ಕ್ರಸಂ 1 ರಿಂದ 19 ರವರೆಗಿನ ಅಂಶಗಳನ್ನು ಒಳಗೊಂಡಿರುವ ನಿಖರವಾದ ಸೇವಾ ವಿವರಗಳನ್ನು ಇ.ಇ.ಡಿ.ಎಸ್ ತಂತ್ರಾಂಶದಲ್ಲಿ ಗಣಕೀಕರಣ ಮಾಡಿ ಅಂತಿಮಗೊಳಿಸುವ ಬಗ್ಗೆ ಆಯಾ ಬಟವಾಡ ಅಧಿಕಾರಿಗಳಿಗೆ ಸೂಚಿಸಲಾಗಿತ್ತು. ಮುಂದುವರೆದು ಉಲ್ಲೇಖ-2ರಲ್ಲಿ ಜೂಮ್ ಸಭೆಯಲ್ಲಿ ಇ.ಇ.ಡಿ.ಎಸ್ ತಂತ್ರಾಂಶದಲ್ಲಿ ಗಣಕೀಕರಣ ಮಾಡಿ ಅಂತಿಮಗೊಳಿಸುವ ಬಗ್ಗೆ ಸಭೆ ಕೈಗೊಂಡು ಸದರಿ ಪ್ರಕ್ರಿಯೆಯನ್ನು ತುರ್ತಾಗಿ ಪೂರ್ಣಗೊಳಿಸುವಂತೆ ನಿರ್ದೇಶಿಸಲಾಗಿದೆ. ಆದರೆ, ಇದುವರೆವಿಗೂ ಉಲ್ಲೇಖಿತ ಸುತ್ತೋಲೆಯಲ್ಲಿ ಸೂಚಿಸಿರುವ 19 ಅಂಶಗಳನ್ನು ಇ.ಇ.ಡಿ.ಎಸ್ ತಂತ್ರಾಂಶದಲ್ಲಿ ಗಣಕೀಕರಣ ಮಾಡಿ ಅಂತಿಮಗೊಳಿಸಿಲ್ಲದಿರುವುದು ಕಂಡುಬಂದಿರುತ್ತದೆ. ಈ ಸಂಬಂಧ ಉಲ್ಲೇಖಿತ ಪತ್ರಗಳ ಸೂಚನೆಗಳನ್ನಯ ಇಲಾಖೆಯ ಬಟವಾಡೆ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರ/ಅಧಿಕಾರಿಗಳ/ಸಿಬ್ಬಂದಿ…
ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮತ್ತೊಮ್ಮೆ ಸರ್ಜರಿ ಮಾಡಿದ್ದು, ಇಬ್ಬರು ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಠಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ / ಸ್ಥಳ ನಿಯುಕ್ತಿಗೊಳಿಸಿ ಆದೇಶಿಸಿದೆ. ವರ್ಗಾವಣೆಗೊಂಡ `KAS’ ಅಧಿಕಾರಿಗಳು 1. ಎಸ್ ಎಂ ಶಿವಕುಮಾರ್ ಕೆ.ಎ.ಎಸ್ (ಹಿರಿಯ ಶ್ರೇಣಿ) ಅಧಿಕಾರಿ ಸ್ಥಳ ನಿರೀಕ್ಷಣೆ 2. ಡಾ. ಮಧು ಎನ್ ಎನ್. ಕೆ.ಎ.ಎಸ್ (ಹಿರಿಯ ಶ್ರೇಣಿ) ಅಧಿಕಾರಿ ಮುಖ್ಯ ಜಾಗೃತಾಧಿಕಾರಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಬೆಂಗಳೂರು
ಬೆಂಗಳೂರು : ಜಲಜೀವನ್ ಮಿಷನ್ ಯೋಜನೆಯಡಿ ಮನೆ ಮನೆಗೆ ಕಾರ್ಯಾತ್ಮಕ ಗೃಹನಳ ಸಂಪರ್ಕ ಕಲ್ಪಿಸಲಾಗುತ್ತಿದ್ದು, ಶೇ.100 ರಷ್ಟು ಯಶಸ್ವಿಯಾಗಿ ಅನುಷ್ಠಾನಗೊಂಡಿರುವ ಗ್ರಾಮ/ಗ್ರಾ.ಪಂಗಳಲ್ಲಿ ʼಹರ್ ಘರ್ ಜಲ್ʼ ಎಂದು ಘೋಷಿಸಲಾಗುತ್ತದೆ. ಹಾಗೂ ಇದಕ್ಕಾಗಿ ವಿಶೇಷ ಗ್ರಾಮ ಸಭೆ ಕರೆದು ಗ್ರಾಮಸ್ಥರ ಒಪ್ಪಿಗೆ ಪಡೆಯಲಾಗುತ್ತದೆ. ʼಹರ್ ಘರ್ ಜಲ್ʼ ಗ್ರಾಮ ಘೋಷಣೆಗೆ ಗ್ರಾಮ ಪಂಚಾಯಿತಿಯು ಈ ಕೆಳಗಿನ ಮಾನದಂಡಗಳನ್ನು ಕಡ್ಡಾಯವಾಗಿ ಅನುಸರಿಸಬೇಕು. ಈ ಮೂಲಕ ಜಲಜೀವನ್ ಮಿಷನ್ ಯೋಜನೆಯನ್ನು ಯಶಸ್ವಿವಾಗಿ ಅನುಷ್ಠಾನಗೊಳಿಸಲು ಸಾಧ್ಯ. ಅನುಸರಿಸಬೇಕಾದ ಮಾನದಂಡಗಳು: 1. ಗ್ರಾಮದ ಪ್ರತಿ ಮನೆಗೂ ಕಾರ್ಯಾತ್ಮಕ ಗೃಹನಳ ಸಂಪರ್ಕ ಒದಗಿಸುವುದು 2. ಕಾಮಗಾರಿಯ ಪ್ರಗತಿಯನ್ನು ಯೋಜನೆಯ IMIS ದಾಖಲಿಸುವುದು 3.ಗ್ರಾಮದಲ್ಲಿರುವ ಅಂಗನವಾಡಿ, ಸರ್ಕಾರಿ ಶಾಲೆ, ಸಮುದಾಯ ಭವನಗಳ ಅಗತ್ಯತೆಗೆ ತಕ್ಕಂತೆ ನಳ ಸಂಪರ್ಕ ನೀಡಿ ಶುದ್ಧ ನೀರು ಒದಗಿಸುವುದು
ಮೈಸೂರು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೆ ಮೂವರು ಬಲಿಯಾಗಿದ್ದು, ಮೈಸೂರು ಜಿಲ್ಲೆಯಲ್ಲಿ ಇಬ್ಬರು ಹಾಗೂ ಹಾವೇರಿ ಜಿಲ್ಲೆಯಲ್ಲಿ ಒಬ್ಬರು ಆತ್ಮಹತ್ಯೆಮಾಡಿಕೊಂಡಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಅಂಬಳೆ ಗ್ರಾಮದ ಜಯಶೀಲ (53) ಹಾಗೂ ಮಲ್ಕುಂಡಿ ಗ್ರಾಮದ ಕೃಷ್ಣಮೂರ್ತಿ (32) ಎಂಬುವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕು ತುಮ್ಮಿನಕಟ್ಟೆಯ ಸರ್ಕಾರಿ ಶಾಲಾ ಶಿಕ್ಷಕಿ ಪುಷ್ಪಲತಾ (46) ಎಂಬುವರು ಹೊನ್ನಾಳಿ ಸಮೀಪ ತುಂಗಭದ್ರಾ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಂಜನಗೂಡು ತಾಲೂಕಿನ ಅಂಬಳೆ ಗ್ರಾಮದ ಜಯಶೀಲ ಅವರು ಐಐಎಫ್ಎಲ್ , ಫೈವ್ ಸ್ಟಾರ್ಮೈಕ್ರೋ ಫೈನಾನ್ಗಳಲ್ಲಿ ಮನೆ ಕಟ್ಟಲು, ವ್ಯವಸಾಯ ಹಾಗೂ ಹಸು ಸಾಕಾಣಿಕೆಗಾಗಿ 5 ಲಕ್ಷ ರು. ಸಾಲ ಪಡೆದಿದ್ದರು. ಪ್ರತಿ ತಿಂಗಳು 20 ಸಾವಿರಕ್ಕೂ ಹೆಚ್ಚು ಇಎಂಐ ಕಟ್ಟಬೇಕಾಗಿತ್ತು. ಸಾಲ ಮಾಡಿ ತೆಗೆದುಕೊಂಡಿದ್ದ ಹಸು ಕೂಡ ಇತ್ತೀಚೆಗೆ ಮೃತಪಟ್ಟಿದ್ದ ಹಿನ್ನೆಲೆಯಲ್ಲಿ ಜೀವನ ನಿರ್ವಹಣೆ ಮಾಡಲು ಸಾಧ್ಯವಾಗದ ಪರಿಸ್ಥಿತಿಗೆ ತಲುಪಿದ್ದರು. ಭಾನುವಾರ ಸಮೀಪದ ಹುಲ್ಲಹಳ್ಳಿಗೆ ತೆರಳಿ…
ಬೆಂಗಳೂರು : ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ನೇರ ನೇಮಕಾತಿ ಮತ್ತು ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಪ್ರೌಢಶಾಲಾ ಸಹ ಶಿಕ್ಷಕರ ಹುದ್ದೆಗೆ ಮುಂಬಡ್ತಿ ನೀಡುವ ಸಮಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಹಿಂಬಾಕಿ (ಬ್ಯಾಕ್ ಲಾಗ್)ಹುದ್ದೆಗಳನ್ನು ಗುರುತಿಸುವ ಬಗ್ಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖ(01) ರ ಪತ್ರದಲ್ಲಿ ಬ್ಯಾಕ್ ಲಾಗ್ ಸಚಿವ ಸಂಪುಟ ಉಪ ಸಮಿತಿ ಸಭೆಯ ನಿರ್ಣಯದಂತೆ, ಸರ್ಕಾರದ ವಿವಿಧ ಇಲಾಖೆಗಳು/ನಿಯಮಗಳು/ಮಂಡಳಿಗಳು /ವಿಶ್ವವಿದ್ಯಾನಿಯಗಳು/ ಸಹಕಾರ ಸಂಸ್ಥೆಗಳು/ಅನುದಾನಿತ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ ನೇರ ನೇಮಕಾತಿ ಹಾಗೂ ಮುಂಬಡ್ತಿಯಲ್ಲಿ ಬ್ಯಾಕ್ ಲಾಗ್ ಹುದ್ದೆಗಳನ್ನು ಗುರುತಿಸಲು ತನಿಖಾ ತಂಡವನ್ನು ರಚಿಸಿರುತ್ತಾರೆ. ಶಾಲಾ ಶಿಕ್ಷಣ ಇಲಾಖೆ ಸೇರಿದಂತೆ ಇತರೆ ಇಲಾಖೆಗಳಿಗೆ ಸಂಬಂಧಿಸಿದಂತೆ ಸರ್ಕಾರದಿಂದ ಕಾಲಕಾಲಕ್ಕೆ, ಹೊರಡಿಸಿರುವ ಮೀಸಲಾತಿ ನಿಯಮಗಳನ್ನಯ ನೇರ ನೇಮಕಾತಿ ಮತ್ತು ಮುಂಬಡ್ತಿಯನ್ನು ಅನುಷ್ಠಾನಗೊಳಿಸಿರುವ ಹಾಗೂ ಬ್ಯಾಕ್ಲಾಗ್ ಹುದ್ದೆಗಳನ್ನು ಪರಿಶೀಲಿಸಲು ಸದರಿ ಆಯೋಗದ ತಂಡವನ್ನು ನೇಮಿಸಿರುತ್ತಾರೆ. ಈ ವಿಷಯಕ್ಕೆ ಸಂಬಂಧಪಟ್ಟಂತೆ ಉಲ್ಲೇಖ(2) ರಲ್ಲಿ ನಡೆದ ಸಭೆಯಲ್ಲಿ ಈ ಕುರಿತು…
2024-2025ನೇ ಸಾಲಿನಲ್ಲಿ ಎಸ್ಸಿಪಿ, ಟಿಎಸ್ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿ ನೀಡಿ ಹಾಗೂ ತರಬೇತಿ ಪಡೆದ ಅರ್ಹ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟಿನ್ ನಡೆಸಲು ರೂ.5 ಲಕ್ಷ ಸಹಾಯಧನ ನೀಡಲು ಉದ್ದೇಶಿಸಲಾಗಿದ್ದು, ಈ ಸಂಬಂಧ ಅರ್ಜಿ ಆಹ್ವಾನಿಸಲಾಗಿದೆ. ಜ.31 ಅರ್ಜಿ ಸಲ್ಲಿಸಲು ಕೊನೆಯ ದಿನ. ತರಬೇತಿ ಹಾಗೂ ಸಹಾಯಧನಕ್ಕಾಗಿ ಚಿತ್ರದುರ್ಗ ಜಿಲ್ಲೆಯ ಪರಿಶಿಷ್ಟ ಜಾತಿಯ-06 ಮತ್ತು ಪರಿಶಿಷ್ಟ ಪಂಗಡದ-05 ಅಭ್ಯರ್ಥಿಗಳು ಸೇರಿ ಒಟ್ಟು 11 ಅಭ್ಯರ್ಥಿಗಳ ಗುರಿಯನ್ನು ಪ್ರಸ್ತುತ ಸಾಲಿನಲ್ಲಿ ನಿಗದಿಪಡಿಸಲಾಗಿದೆ. ಈ ತರಬೇತಿಯನ್ನು ವಸತಿ ಸಹಿತ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳ ಮೂಲಕ ಕಾರ್ಯಕ್ರಮವನ್ನು ಜಾರಿಗೊಳಿಸಲು ಉದ್ದೇಶಿಸಿದೆ. ಈ ತರಬೇತಿ ಕಾರ್ಯಕ್ರಮಕ್ಕೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಉತ್ತೇರ್ಣರಾಗಿದ್ದು, 20 ರಿಂದ 45 ವಯೋಮಿತಿಯೊಳಗಿರಬೇಕು. ಈ ಸೌಲಭ್ಯ ಕೋರಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಚಿತ್ರದುರ್ಗ ಕಛೇರಿಯಿಂದ 10 ನೇ ತರಗತಿ ಉತ್ತೀರ್ಣರಾದ ಪ್ರಮಾಣ ಪತ್ರ…
ನವದೆಹಲಿ : ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ, ರೈತರಿಗೆ ಪ್ರತಿ ವರ್ಷ 6,000 ರೂ.ಗಳ ಆರ್ಥಿಕ ಸಹಾಯವನ್ನು ನೀಡಲಾಗುತ್ತದೆ. ಈ ಮೊತ್ತವನ್ನು ಮೂರು ಕಂತುಗಳಲ್ಲಿ ನೀಡಲಾಗುತ್ತದೆ, ಇದನ್ನು ಪ್ರತಿ ನಾಲ್ಕು ತಿಂಗಳಿಗೊಮ್ಮೆ ರೈತರ ಖಾತೆಗೆ ವರ್ಗಾಯಿಸಲಾಗುತ್ತದೆ. ಇಲ್ಲಿಯವರೆಗೆ 18 ಕಂತುಗಳನ್ನು ರೈತರ ಬ್ಯಾಂಕ್ ಖಾತೆಗಳಿಗೆ ಕಳುಹಿಸಲಾಗಿದೆ. ಪ್ರಸ್ತುತ ರೈತರು 19 ನೇ ಕಂತಿನ ಬಿಡುಗಡೆಗಾಗಿ ಕಾತುರದಿಂದ ಕಾಯುತ್ತಿದ್ದಾರೆ. ರೈತರಿಗೆ ಒಂದು ಸಿಹಿ ಸುದ್ದಿ ಇದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಫೆಬ್ರವರಿ 24, 2025 ರಂದು ಬಿಹಾರಕ್ಕೆ ಭೇಟಿ ನೀಡಲಿದ್ದಾರೆ. ಅದೇ ದಿನ, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 19 ನೇ ಕಂತನ್ನು ರೈತರ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಈ ಮಾಹಿತಿಯನ್ನು ದೃಢಪಡಿಸಿದ್ದಾರೆ. ಫೆಬ್ರವರಿ 24 ರಿಂದ ರೈತರ ಖಾತೆಗಳಿಗೆ 2,000 ರೂ.ಗಳನ್ನು ಕಳುಹಿಸಲಾಗುವುದು ಎಂದು ಅವರು ಹೇಳಿದರು. ಯೋಜನೆಯ ಉದ್ದೇಶ ಮತ್ತು ಅರ್ಹತೆ…
ಬಳ್ಳಾರಿ : ಜಿಲ್ಲೆಯಲ್ಲಿನ ಎಲ್ಲಾ ಅನಿಲ ವಿತರಕರು, ಗೃಹ ಬಳಕೆಯ ಭರ್ತಿ ಮಾಡಿದ ಅನಿಲ ಸಿಲಿಂಡರ್ಗಳನ್ನು ಗ್ರಾಹಕರಿಗೆ ಸಾಗಾಣಿಕೆ ಮಾಡುವಾಗ 5 ಕಿ.ಮೀ ಒಳಗೆ ಉಚಿತವಾಗಿ ಸರಬರಾಜು ಮಾಡಬೇಕು ಎಂದು ಆಹಾರ ನಾಗರಿಕ ಸರಬರಾಜು ಮತ್ತು ವ್ಯವಹಾರಗಳ ಇಲಾಖೆಗಳ ಉಪನಿರ್ದೇಶಕ ಸಕೀನಾ ಅವರು ತಿಳಿಸಿದ್ದಾರೆ. 5 ಕಿ.ಮೀ ನಂತರದ ಪ್ರತಿ ಕಿ.ಮೀ ರೌಂಡ್ ಟ್ರಿಪ್ ಗೆ ಪ್ರತಿ ಸಿಲಿಂಡರ್ಗೆ ರೂ.1.60 ತೆಗೆದುಕೊಳ್ಳಬೇಕು. ತಪ್ಪಿದ್ದಲ್ಲಿ ದ್ರವೀಕೃತ ಪೆಟ್ರೋಲಿಯಂ ಅನಿಲ (ಪೂರೈಕೆ ಮತ್ತು ವಿತರಣೆಯ ನಿಯಂತ್ರಣ) ಆದೇಶ 2000 ರ ರೀತ್ಯಾ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







