Subscribe to Updates
Get the latest creative news from FooBar about art, design and business.
Author: kannadanewsnow57
ಲೆಬನಾನ್ : ಲೆಬನಾನ್ ರಾಜಧಾನಿ ಬೈರುತ್ ಮೇಲೆ ಇಸ್ರೇಲಿ ದಾಳಿ ನಿಲ್ಲುತ್ತಿಲ್ಲ. ಬೈರುತ್ನ ಜನನಿಬಿಡ ಬಸ್ತಾ ನೆರೆಹೊರೆಯಲ್ಲಿ ಇಸ್ರೇಲಿ ರಕ್ಷಣಾ ಪಡೆಗಳು ಬಹುಮಹಡಿ ಕಟ್ಟಡವನ್ನು ಗುರಿಯಾಗಿಸಿ ಕನಿಷ್ಠ 29 ಜನರನ್ನು ಕೊಂದವು. ಇದಲ್ಲದೆ, ಲೆಬನಾನ್ನ ವಿವಿಧ ಸ್ಥಳಗಳಲ್ಲಿ ನಡೆಸಿದ ಕ್ಷಿಪಣಿಗಳ ಮೇಲೆ ಡ್ರೋನ್ ದಾಳಿಯಲ್ಲಿ ಡಜನ್ಗಟ್ಟಲೆ ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಇಸ್ರೇಲ್ ಡಿಫೆನ್ಸ್ ಫೋರ್ಸ್ ಐಡಿಎಫ್ ಹೇಳಿಕೆಯಲ್ಲಿ ಹೆಜ್ಬೊಲ್ಲಾದ ಗುಪ್ತಚರ ಘಟಕ, ‘ಕೋಸ್ಟ್ ಟು ಸೀ’ ಕ್ಷಿಪಣಿ ಘಟಕ ಮತ್ತು ಯುನಿಟ್ 4400 ಸೇರಿದಂತೆ ಬೈರುತ್ನ ದಹೀಹ್ನಲ್ಲಿರುವ 12 ಹೆಜ್ಬೊಲ್ಲಾ ಕಮಾಂಡ್ ಸೆಂಟರ್ಗಳನ್ನು ವಾಯುಪಡೆ ಹೊಡೆದಿದೆ ಎಂದು ಹೇಳಿದೆ. ಈ ಎಲ್ಲಾ ಸೈಟ್ಗಳು ಇರಾನ್ನಿಂದ ಸಿರಿಯಾ ಮೂಲಕ ಲೆಬನಾನ್ಗೆ ಶಸ್ತ್ರಾಸ್ತ್ರಗಳನ್ನು ಕಳ್ಳಸಾಗಣೆ ಮಾಡಲು ಕಾರಣವಾಗಿವೆ. ಇಸ್ರೇಲ್ ವಿರುದ್ಧದ ಭಯೋತ್ಪಾದಕ ದಾಳಿಗಳನ್ನು ಯೋಜಿಸಲು, ಆದೇಶಿಸಲು ಮತ್ತು ಕಾರ್ಯಗತಗೊಳಿಸಲು ಈ ಕಮಾಂಡ್ ಸೆಂಟರ್ಗಳನ್ನು ಬಳಸಲಾಗಿದೆ ಎಂದು IDF ಹೇಳಿದೆ. ಒಂದು ವಾರದಲ್ಲಿ ನಾಲ್ಕನೇ ದಾಳಿ ಇಸ್ರೇಲ್ ದಾಳಿಯಲ್ಲಿ 66 ಜನರು ಗಾಯಗೊಂಡಿದ್ದಾರೆ ಎಂದು…
ಬೆಂಗಳೂರು : ವಿಶ್ವ ಹಿಂದೂ ಪರಿಷತ್ ನ ಕರ್ನಾಟಕ ಘಟಕವು ಆಯೋಜಿಸಿದ್ದ ಸಂತ ಸಮಾವೇಶದಲ್ಲಿ ಪೇಜಾವರ ಶ್ರೀಗಳು “ನಮ್ಮನ್ನು ಗೌರವಿಸುವ ಸಂವಿಧಾನ ಬರಲಿ” 75 ವರ್ಷಗಳಾದರೂ ಕೂಡಾ ನಾವು ಸ್ವಾತಂತ್ರ್ಯ ಹೊಂದಿದ್ದೇವೆಯೇ ಎಂದು ಹೇಳಿಕೆ ನೀಡಿದ್ದರು. ಈ ಕುರಿತು ಸಚಿವ ಡಾ.ಹೆಚ್.ಸಿ. ಮಹಾದೇವಪ್ಪ ಪೇಜಾವರ ಶ್ರೀಗಳಿಗೆ ಬಹಿರಂಗ ಪತ್ರ ಬರೆದಿದ್ದು, ವಿಶ್ವ ಹಿಂದೂ ಪರಿಷತ್ ನ ಕರ್ನಾಟಕ ಘಟಕವು ಆಯೋಜಿಸಿದ್ದ ಸಂತ ಸಮಾವೇಶದಲ್ಲಿ ಪೇಜಾವರ ಶ್ರೀಗಳು “ನಮ್ಮನ್ನು ಗೌರವಿಸುವ ಸಂವಿಧಾನ ಬರಲಿ” 75 ವರ್ಷಗಳಾದರೂ ಕೂಡಾ ನಾವು ಸ್ವಾತಂತ್ರ್ಯ ಹೊಂದಿದ್ದೇವೆಯೇ ಎಂಬ ಅನುಮಾನವನ್ನು ವ್ಯಕ್ತಪಡಿಸಿದ್ದು, ಸನಾತನ ಮಂಡಳಿ ರಚಿಸಲು ಕರೆ ನೀಡಿದ್ದಾರೆ. ಶ್ರೀಗಳೇ, ಜಾತಿ ಮತ್ತು ಧರ್ಮದ ಶ್ರೇಷ್ಠತೆಯ ಕಾರಣಕ್ಕೆ ಅಸಮಾನತೆ, ಅವಮಾನ ಮತ್ತು ದೌರ್ಜನ್ಯದ ಕೂಪವಾಗಿದ್ದ ಸನಾತನ ಧರ್ಮದ ಕೆಟ್ಟ ನಡವಳಿಕೆಗಳನ್ನು ದೂರ ಮಾಡಿ ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಎತ್ತಿ ಹಿಡಿಯುವ ಮಹೋನ್ನತ ಉದ್ದೇಶದಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನವನ್ನು ಈ ದೇಶಕ್ಕೆ ನೀಡಿದ್ದಾರೆ. ಭಾರತದ ಪ್ರಜೆಗಳಾದ…
ಬೆಂಗಳೂರು: ನಗರದ ಆಸ್ತಿ ತೆರಿಗೆ ಪಾವತಿದಾರರಿಗೆ ಗುಡ್ ನ್ಯೂಸ್ ಎನ್ನುವಂತೆ ಸರ್ಕಾರದ ವತಿಯಿಂದ ಒಂದು ಬಾರಿ ಪರಿಹಾರ(OTS) ಯೋಜನೆಯನ್ನು ಬಿಬಿಎಂಪಿಯಲ್ಲಿ ದಿನಾಂಕ:30-11-2024 ರವರೆಗೆ ವಿಸ್ತರಿಸಲಾಗಿದೆ. ಬಿಬಿಎಂಪಿ ಐತಿಹಾಸಿಕ ಒಂದು ಬಾರಿ ಪರಿಹಾರ(OTS) ಯೋಜನೆಯಡಿ ಆಸ್ತಿ ತೆರಿಗೆಯ ಬಾಕಿದಾರರಿಗೆ ಬಡ್ಡಿ ಮತ್ತು ದಂಡ ಮನ್ನಾ ಮಾಡಲಾಗಿದೆ. ಆದರೆ ಆಸ್ತಿ ತೆರಿಗೆ ಬಾಕಿ ಇರುವ ನಾಗರೀಕರು ಇದರ ಲಾಭವನ್ನು ಸರಿಯಾಗಿ ಪಡೆಯುತ್ತಿಲ್ಲ. 250 ಕೋಟಿ ರೂ.ಗಿಂತ ಹೆಚ್ಚು ಬಾಕಿ ಇರುವ 1,6000ಕ್ಕೂ ಹೆಚ್ಚು ಪರಿಷ್ಕರಣೆ ಪ್ರಕರಣಗಳು ಮತ್ತು 400 ಕೋಟಿ ರೂ.ಗಿಂತ ಹೆಚ್ಚು ಬಾಕಿ ಇರುವ ಸುಮಾರು 2.4 ಲಕ್ಷ ಸುಸ್ತಿದಾರರ ಪ್ರಕರಣಗಳು ಪಾವತಿಸುವುದು ಬಾಕಿಯಿರುತ್ತದೆ.ಆದ್ದರಿಂದ OTS ಯೋಜನೆಯಡಿ ತಕ್ಷಣವೇ ಬಾಕಿ ಆಸ್ತಿ ತೆರಿಗೆ ಪಾವತಿಸುವ ಸಲುವಾಗಿ ಪಾಲಿಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಯೋಜಿಸಿದೆ ಮತ್ತು ಅಭಿಯಾನವನ್ನು ಪ್ರಾರಂಭಿಸುತ್ತಿದೆ. ಆಸ್ತಿ ತೆರಿಗೆಯನ್ನು ಸಂಪೂರ್ಣ ಬಡ್ಡಿ ಮನ್ನಾ ಹಾಗೂ ಸಂಪೂರ್ಣ ಬಡ್ಡಿ ರಹಿತವಾಗಿ ಪ್ರತಿ ವರ್ಷಕ್ಕೆ ಕೇವಲ 100 ರೂ. ಪಾವತಿಸಿ ಆಸ್ತಿ ತೆರಿಗೆ ಕಟ್ಟಬಹುದಾಗಿದೆ.…
ನವದೆಹಲಿ : ಉತ್ತರ ಪ್ರದೇಶದ ಸಂಭಾಲ್ ನ ಜಾಮಾ ಮಸೀದಿಯ ಸಮೀಕ್ಷೆ ವೇಳೆ ನಡೆದ ಘರ್ಷಣೆಯಲ್ಲಿ ನಾಲ್ವರು ಸಾವನ್ನಪ್ಪಿದ್ದು, 20 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಈ ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದು, 20 ಭದ್ರತಾ ಸಿಬ್ಬಂದಿ ಸೇರಿದಂತೆ ಹಲವರು ಗಾಯಗೊಂಡಿದ್ದಾರೆ. ಈ ಘಟನೆಯ ಹಿನ್ನೆಲೆಯಲ್ಲಿ ಸ್ಥಳೀಯ ಇಂಟರ್ನೆಟ್ ಸೇವೆಗಳನ್ನು ನಿಷೇಧಿಸಲಾಗಿದೆ. ಜತೆಗೆ 12ನೇ ತರಗತಿವರೆಗೆ ಶಾಲಾ-ಕಾಲೇಜುಗಳನ್ನು ಮುಚ್ಚುವಂತೆ ಆದೇಶ ಹೊರಡಿಸಲಾಗಿದೆ. ಸ್ಥಳೀಯ ನ್ಯಾಯಾಲಯದ ಆದೇಶದಂತೆ ಮಸೀದಿ ಸರ್ವೆ ನಡೆಸಿದ್ದರಿಂದ ಸಂಭಾಲ್ ನಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಮಸೀದಿಯನ್ನು ಹರಿಹರ ದೇವಸ್ಥಾನಕ್ಕೆ ಬದಲಾಯಿಸುವಂತೆ ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ಸಮೀಕ್ಷೆ ಕೈಗೊಳ್ಳಲಾಗಿದೆ. ಭಾನುವಾರ ಪ್ರತಿಭಟನಾಕಾರರು ಹಲವು ವಾಹನಗಳಿಗೆ ಬೆಂಕಿ ಹಚ್ಚಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದರು. ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಮತ್ತು ಲಾಠಿ ಪ್ರಹಾರ ನಡೆಸಿದರು. ಇಬ್ಬರು ಮಹಿಳೆಯರು ಸೇರಿದಂತೆ ಹಲವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಹಿಂಸಾಚಾರದ ಬಗ್ಗೆ ತನಿಖೆ ಆರಂಭಿಸಲಾಗಿದೆ. ರಸ್ತೆ ಬದಿ ನಿಲ್ಲಿಸಿದ್ದ ಬೈಕ್ಗಳಿಗೂ ಕೆಲವರು…
ಬೆಂಗಳೂರು: ನಾಡದೇವಿ ಮೈಸೂರಿನ ಚಾಮುಂಡೇಶ್ವರಿಗೆ ಚಿನ್ನದ ರಥ ನಿರ್ಮಿಸುವ ಸಂಬಂಧ ಪರಿಶೀಲಿಸಿ, ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಂದಾಯ ಇಲಾಖೆ ಧಾರ್ಮಿಕ ದತ್ತಿ ವಿಭಾಗದ ಪ್ರಧಾನ ಕಾರ್ಯದರ್ಶಿ ಅವರಿಗೆ ಆದೇಶಿಸಿದ್ದಾರೆ. ಶಾಸಕ ದಿನೇಶ್ ಗೂಳಿಗೌಡ ಅವರ ಮನವಿ ಮೇಲೆ ಈ ಆದೇಶ ಮಾಡಲಾಗಿದೆ. ನಾಡದೇವಿಗೆ ಚಿನ್ನದ ರಥ ನಿರ್ಮಿಸಬೇಕು ಎಂಬ ಭಕ್ತರ, ಬೇಡಿಕೆಯನ್ನು ಅರಿತು, ಸಂಕಲ್ಪ ಮಾಡಿಕೊಂಡು ಪ್ರಯತ್ನಿಸಲಾಗಿತ್ತು. ಸಿಎಂ ಆದೇಶದಿಂದ ಈಗ ಆ ಪ್ರಯತ್ನದಲ್ಲಿ ಮೊದಲ ಹೆಜ್ಜೆಯನ್ನು ಇಟ್ಟಂತಾಗಿದೆ. ಚಾಮುಂಡೇಶ್ವರಿ ದೇವಿ ಕನ್ನಡ ನಾಡಿನ ಅಸ್ಮಿತೆಯಾಗಿದ್ದಾಳೆ. ಕನ್ನಡಿಗರ ಧಾರ್ಮಿಕ ಪ್ರತಿನಿಧಿಯಾಗಿದ್ದಾಳೆ, ಮೈಸೂರಿನ ಚಾಮುಂಡಿ ಬೆಟ್ಟಕ್ಕೆ, ದೇವಸ್ಥಾನಕ್ಕೆ, ದೇವಿಗೆ ಪೌರಾಣಿಕ, ಐತಿಹಾಸಿಕ ಹಿನ್ನೆಲೆ ಇದೆ. ಅದಕ್ಕಾಗಿಯೇ ಮೈಸೂರಿನಲ್ಲಿ ನಡೆಯುವ ದಸರಾವನ್ನು ನಾಡ ಹಬ್ಬ ಎಂದು ಕರೆಯಲಾಗುತ್ತದೆ. ಈ ನಾಡದೇವಿಯನ್ನು ಚಿನ್ನದ ರಥದಲ್ಲಿ ಕೂರಿಸಿ ಮೆರೆಸಬೇಕು ಎಂಬುದು ಭಕ್ತ ಕೋಟಿಯ ಬೇಡಿಕೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರನ್ನು ಖುದ್ದಾಗಿ ಭೇಟಿಯಾಗಿ ಬೇಡಿಕೆ ಸಲ್ಲಿಸಿ, ಕೆಲವು ಸಲಹೆ ನೀಡಿದ್ದೆ. ಚಿನ್ನದ…
ಬೆಂಗಳೂರು : ಕೃಷಿ ಇಲಾಖೆ ವತಿಯಿಂದ ಪ್ರಸ್ತಕ ಸಾಲಿನಲ್ಲಿ ಕೃಷಿ ಯಾಂತ್ರೀಕರಣ ಹಾಗೂ ಕೃಷಿ ಸಂಸ್ಕರಣ ಘಟಕಗಳಿಗೆ ರೈತರಿಗೆ ಸಾಮಾನ್ಯ ವರ್ಗದಡಿ ಶೇ.50 ರಷ್ಟು ಮತ್ತು ಪರಿಶಿಷ್ಟ ಜಾತಿ ಮತ್ತು ವರ್ಗದ ರೈತರಿಗೆ ಶೇ.90 ರ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಪ್ರಸಕ್ತ ಸಾಲಿನ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಕಾರ್ಯಕ್ರಮದಲ್ಲಿ ಸಾಮಾನ್ಯ ವರ್ಗದ ರೈತರಿಗೆ ಶೇ.50 ರ ರಿಯಾಯಿತಿಯಲ್ಲಿ ಮತ್ತು ಪರಿಶಿಷ್ಟ ಜಾತಿ ಮತ್ತು ವರ್ಗದ ರೈತರಿಗೆ ಶೇ.90 ರ ರಿಯಾಯಿತಿಯಲ್ಲಿ ಮಿನಿ ಟ್ರ್ಯಾಕ್ಟರ್, ಪವರ್ ಟಿಲ್ಲರ್, ರೋಟೋವೇಟರ್, ಕಳೆ ಕೊಚ್ಚುವ ಯಂತ್ರಗಳು, ಪವರ್ ವೀಡರ್, ಪವರ್ ಸ್ಪ್ರೇಯರ್ಸ್, ಡೀಸೆಲ್ ಪಂಪ್ಸೆಟ್, ಪ್ಲೋರ್ಮಿಲ್, ಯಂತ್ರ ಚಾಲಿತ ಮೋಟೋಕಾರ್ಟ್, ಮೋಟಾರ್ ಚಾಲಿತ ಸಣ್ಣ ಎಣ್ಣೆಗಾಣಗಳು ಮತ್ತು ಇತರೆ ಹೈಟೆಕ್ ಕೃಷಿ ಉಪಕರಣಗಳನ್ನು ಹಾಗೂ ತುಂತುರು ನೀರಾವರಿ ಯೋಜನೆಯಡಿಯಲ್ಲಿ ಶೇ.90ರ ರಿಯಾಯ್ತಿ ದರದಲ್ಲಿ ತುಂತುರು ನೀರಾವರಿ ಘಟಕ(ಹೆಚ್ಡಿಪಿಇ ಪೈಪ್ಸ್) ವಿತರಿಸಲಾಗುತ್ತಿದೆ. ಆಸಕ್ತ ರೈತರು ಪಹಣಿ(ಆರ್ಟಿಸಿ), ಆಧಾರ್ ಕಾರ್ಡ್, ಬ್ಯಾಂಕ್ ಪಾಸ್…
ಬೆಂಗಳೂರು: ರಾಜ್ಯದಲ್ಲಿ ಬಿಪಿಎಲ್ ರೇಷನ್ ಕಾರ್ಡ್ ರದ್ದಾಗಿವೆ ಎನ್ನಲಾಗುತ್ತಿದೆ. ಇದೇ ಈಗ ತೀವ್ರ ವಿವಾದಕ್ಕೂ ಕಾರಣವಾಗಿದೆ. ಒಂದು ವೇಳೆ ನಿಮ್ಮ ಬಿಪಿಎಲ್ ರೇಷನ್ ಕಾರ್ಡ್ ರದ್ದಾಗಿದ್ದರೇ ತಹಶೀಲ್ದಾರರ ಗಮನಕ್ಕೆ ತಂದರೇ ಒಂದು ವಾರದಲ್ಲೇ ಸಮಸ್ಯೆ ಬಗೆಹರಿಸಿ, ವಾಪಾಸ್ ಸಿಗಲಿದೆ. ಒಂದು ವೇಳೆ ಬಿಪಿಎಲ್ ಕಾರ್ಡ್ ವಿಚಾರದಲ್ಲಿ ಬಡವರಿಗೆ ತೊಂದರೆಯಾದಲ್ಲಿ ತಹಶೀಲ್ದಾರ್ ಗಮನಕ್ಕೆ ತಂದರೆ ಒಂದು ವಾರದೊಳಗಾಗಿ ಸಮಸ್ಯೆ ಬಗೆಹರಿಸಲಾಗುವುದು. ಅರ್ಹರಿಗೆ ಬಿಪಿಎಲ್ ತಪ್ಪಿ ಹೋಗಬಾರದು. ಆಕಸ್ಮಾತ್ ತಪ್ಪಿ ಹೋಗಿದ್ದರೆ ವಾಪಸ್ ಕೊಡಲಾಗುವುದು. ಹಾಗೆಯೇ ಪಡಿತರ ಚೀಟಿ ಇಲ್ಲವೆಂದು ಆರೋಗ್ಯ ಸೌಲಭ್ಯ ವಿಚಾರದಲ್ಲಿ ಯಾವುದೇ ತೊಂದರೆ ಆಗುವುದಿಲ್ಲ ಎಂದು ಆಹಾರ ಸಚಿವರಾದ ಕೆ.ಎಚ್.ಮುನಿಯಪ್ಪ ಅವರು ತಿಳಿಸಿದ್ದಾರೆ. ಇನ್ನೂ ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರನ್ನು ಹೊರತುಪಡಿಸಿ ಉಳಿದ ಯಾವುದೇ ಕುಟುಂಬದವರ ಪಡಿತರ ಚೀಟಿ ರದ್ದಾಗಿದ್ದರೆ ತಕ್ಷಣವೇ ವಾಪಸ್ ನೀಡಬೇಕು. ಬಡ ಕುಟುಂಬಗಳ ಪಡಿತರ ಚೀಟಿಗಳನ್ನು ವಿನಾಕಾರಣ ರದ್ದು ಮಾಡಿದರೆ ಆಹಾರ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ…
ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇಂದಿನಿಂದ ಆಹಾರ ಇಲಾಖೆ ಅಧಿಕಾರಿಗಳು ಬಿಪಿಎಲ್ ಕಾರ್ಡುಗಳ ಪರಿಷ್ಕರಣೆ ನಡೆಯಲಿದೆ. ಆಹಾರ ಇಲಾಖೆ ಸ್ಥಳೀಯ ಕಚೇರಿಯಲ್ಲಿ ಪರಿಷ್ಕರಣೆ ಕಾರ್ಯ ನಡೆಯಲಿದ್ದು, ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ರದ್ದಾಗಿರುವ ಬಿಪಿಎಲ್ ಕಾರ್ಡ್ ಗಳ ತಿದ್ದುಪಡಿ ಕಾರ್ಯ ನಡೆಯಲಿದೆ. ಆಧಾರ್, ಪಾನ್ ಕಾರ್ಡ್, ಐಟಿ ರಶೀದಿ ಮೂಲಕ ಅರ್ಹತೆ ಹೊಂದಿದವರು ಕಾರ್ಡುಗಳನ್ನು ಸರಿಪಡಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಸರ್ಕಾರಿ ನೌಕರರೇ, ತೆರಿಗೆ ಪಾವತಿದಾರರೇ ಎಂಬುದರ ಬಗ್ಗೆ ಪರಿಶೀಲನೆ ನಡೆಸುವರು. ಕಾರ್ಡ್ ಹೊಂದಿದವರು ಬಡವರೇ, ಶ್ರೀಮಂತರೇ ಎಂದು ಮನೆ ಪರಿಶೀಲಿಸಿ ಆರ್ಡಿ ನಂಬರ್, ಜೊತೆಗೆ ದಾಖಲೆ ಪರಿಶೀಲಿಸಲಿದ್ದಾರೆ. ಕಾರ್ಡ್ ಬದಲಾಯಿಸಲು ಕನಿಷ್ಠ 10 ರಿಂದ 15 ದಿನ ಸಮಯಾವಕಾಶ ಬೇಕಾಗುತ್ತದೆ ಎನ್ನಲಾಗಿದೆ. ಅರ್ಹತೆ ಇದ್ದರೂ ಬಿಪಿಎಲ್ ಕಾರ್ಡು ರದ್ದಾದವರಿಗೆ ಪರಿಶೀಲನೆ ಬಳಿಕ ತಿದ್ದುಪಡಿ ಕಾರ್ಡ್ ನೀಡಲಾಗುವುದು. ಈಗಾಗಲೇ ಅಂತಹ ಕಾರ್ಡ್ ದಾರರು ಪಡಿತರ ಪಡೆದುಕೊಳ್ಳಬಹುದು ಎಂದು ಹೇಳಲಾಗಿದೆ.
ಕನಕಪುರ : ರಾಜ್ಯದ ಮಹಿಳೆಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಫನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಕನಕಪುರದ ರೂರಲ್ ಕಾಲೇಜು ಮೈದಾನದಲ್ಲಿ ಕನಕಾಂಬರಿ ಮಹಿಳಾ ಒಕ್ಕೂಟದ ವತಿಯಿಂದ ನಡೆದ ಮಹಿಳಾ ಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಅವರು, ದೇಶದ ಆರ್ಥಿಕ ಬೆಳವಣಿಗೆಯಲ್ಲಿ ಸ್ತ್ರೀಯರ ಹಾಗೂ ಸ್ತ್ರೀ ಶಕ್ತಿ ಸಂಘಗಳ ಪಾತ್ರ ಬಹಳ ದೊಡ್ಡದು. ಈ ಹಿನ್ನೆಲೆಯಲ್ಲಿ ಗೃಹಲಕ್ಷ್ಮಿ ಸಂಘಗಳನ್ನು ಸ್ಥಾಪಿಸುವ ಮಹತ್ವಾಕಾಂಕ್ಷೆ ಹೊಂದಿದ್ದೇನೆ ಈ ಹಿಂದೆ ಎಸ್.ಎಂ. ಕೃಷ್ಣ ಅವಧಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಮೋಟಮ್ಮ ಅವರು ಸ್ತ್ರೀ ಶಕ್ತಿ ಸ್ವಸಹಾಯ ಗುಂಪುಗಳನ್ನು ಆರಂಭಿಸಿ, ಆರ್ಥಿಕ ಶಕ್ತಿ ತುಂಬಿದರು. ಈಗ ಅದೇ ಇಲಾಖೆಯ ಮೂಲಕ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದಿರುವುದು ನನ್ನ ಪಾಲಿನ ಅದೃಷ್ಟ. ಗೃಹಲಕ್ಷ್ಮಿ ಯೋಜನೆಯ ಮೂಲಕ ಮಹಿಳೆಯರನ್ನು ಸ್ವಾವಲಂಬಿಯಾಗಿ ಸುವ ಉದ್ದೇಶ ನನ್ನದು. ಹಾಗಾಗಿ ಗೃಹಲಕ್ಷ್ಮಿ ಸಂಘಗಳ ಮೂಲಕ ಮಹಿಳೆಯರಿಗೆ ಮತ್ತಷ್ಟು ಶಕ್ತಿ ತುಂಬಲಾಗುವುದು ಎಂದು ತಿಳಿಸಿದರು. ಮಹಿಳೆಯರು…
ಚಿಕ್ಕಮಗಳೂರು : ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸೋತಿದ್ದಕ್ಕೆ ಈಗಾಗಲೇ ಅಭಿಮಾನಿ ಒಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇಂದು ನಿಖಿಲ್ ಕುಮಾರಸ್ವಾಮಿ ಆತ್ಮಹತ್ಯೆಗೆ ಯತ್ನಿಸಿದ ಅಭಿಮಾನಿ ಮಂಜುನಾಥ್ ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಇದರ ಬೆನ್ನಲ್ಲೇ ನಿಖಿಲ್ ಕುಮಾರಸ್ವಾಮಿ ಅವರ ಮತ್ತೊಬ್ಬ ಅಭಿಮಾನಿ ರಕ್ತದಲ್ಲಿ ಪತ್ರ ಬರೆದು ಧೈರ್ಯ ತುಂಬಿದ್ದಾರೆ. ಹೌದು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಹರ್ಷಿತ್ ಎಂಬವರು ಪತ್ರ ಬರೆದಿದ್ದಾರೆ. ಪತ್ರದಲ್ಲಿ, ನೀವು ಸೋತಿರಬಹುದು, ಆದರೆ ಜನರ ಮನಸ್ಸಿನಲ್ಲಿದ್ದೀರಿ ಎಂದಿದ್ದಾರೆ. ಎಷ್ಟೋ ನಮ್ಮಂತಹ ನಿಷ್ಠಾವಂತ ಕಾರ್ಯಕರ್ತರಲ್ಲಿ ನಮ್ಮ ಪಕ್ಷದ ಉಸಿರಿದೆ. ಒಂದಲ್ಲ ಒಂದು ದಿನ ಒಳ್ಳೆತನ ಗೆದ್ದೆ ಗೆಲ್ಲಲಿದೆ. ನಿಮ್ಮ ಜೊತೆಗೆ ನಾವಿದ್ದೇವೆ ಜೈ ಜೆಡಿಎಸ್ ಎಂದು ಉಲ್ಲೇಖಿಸಿದ್ದಾರೆ. ಇನ್ನು ನಿನ್ನೆ ಬಂದಂತಹ ಫಲಿತಾಂಶದಲ್ಲಿ, ಚನ್ನಪಟ್ಟಣದಲ್ಲಿ ಎನ್ಡಿಎ ಅಭ್ಯರ್ಥಿ ನಿಖಿಲ್ 87,229 ಮತ ಪಡೆದು ಸೋತಿದ್ದರೆ, ಕಾಂಗ್ರೆಸ್ನಿಂದ ಸಿ.ಪಿ ಯೋಗೇಶ್ವರ್ 1,12,642 ಮತಗಳನ್ನು ಪಡೆದು ಗೆಲವು ಪಡೆದಿದ್ದರು. ನಿಖಿಲ್ ಕುಮಾರಸ್ವಾಮಿ ಸೋಲುತ್ತಿದ್ದಂತೆ ಚನ್ನಪಟ್ಟಣದ ಶ್ರೀರಾಮಪುರದ ನಿಖಿಲ್…













